Home Blog Page 2

‘ಎಕ್ಕ’ ಚಿತ್ರದ ಟ್ರೈಲರ್ ರಿಲೀಸ್: ರಗಡ್ ಅವತಾರದಲ್ಲಿ ಯುವ ರಾಜ್‌ಕುಮಾರ್

ದೊಡ್ಮನೆ ಕುಟುಂಬದ ಕುಡಿ ಯುವರಾಜ್‌ ಕುಮಾರ್‌ ನಟನೆಯ ಬಹುನಿರೀಕ್ಷಿತ ‘ಎಕ್ಕ’ ಸಿನಿಮಾದ ಟ್ರೈಲರ್‌ ಬಿಡುಗಡೆ ಆಗಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸಿನಿಮಾ ಸದ್ಯ ಬಿಡುಗಡೆ ಆಗಿರುವ ಟ್ರೈಲರ್‌ ಮೂಲಕ ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಎಕ್ಕ ಯುವ ರಾಜ್​ಕುಮಾರ್ ನಟನೆಯ ಎರಡನೇ ಸಿನಿಮಾವಾಗಿದ್ದು ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಸಖತ್‌ ಸೌಂಡ್‌ ಮಾಡುತ್ತಿದ್ದು ಸದ್ಯ ರಿಲೀಸ್‌ ಮಾಡಿರುವ ಟ್ರೈಲರ್‌ ಸಖತ್‌ ನಿರೀಕ್ಷೆ ಮೂಡಿಸಿದೆ. ಹಳ್ಳಿಯಲ್ಲಿ ಆರಾಮಾಗಿ ಇದ್ದ ಮುತ್ತು ಪಟ್ಟಣ ಸೇರೋದು ಯಾಕೆ? ಏನೋ ಮಾಡಲು ಹೋಗಿ ಮತ್ತೇನೋ ಆಗಿ ಮುಂದೇನು? ಸಾಮಾನ್ಯ ಹುಡುಗನೊಬ್ಬ ಭೂತಕ ಲೋಕಕ್ಕೆ ಹೇಗೆ ಕಾಲಿಡುತ್ತಾನೆ ಎಂಬುದನ್ನು ತೋರಿಸಲು ಹೊರಟಿದ್ದಾರೆ ನಿರ್ದೇಶಕ ರೋಹಿತ್ ಪದಕಿ. ಎಕ್ಕ ಸಿನಿಮಾ ಸಿನಿಮಾದಲ್ಲಿ ಸಂಜನಾ ಆನಂದ್ ಮತ್ತು ಸಂಪದಾ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಕೈಜೋಡಿಸಿ ‘ಎಕ್ಕ’ ಸಿನಿಮಾವನ್ನು ನಿರ್ಮಾಣ ಮಾಡಿವೆ. ಜುಲೈ 18ರಂದು ‘ಎಕ್ಕ’ ಸಿನಿಮಾ ತೆರೆಕಾಣಲಿದ್ದು ಸದ್ಯ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ನಿರ್ದೇಶಕ ಲೋಕೇಶ್‌ ಕನಗರಾಜ್ ನನ್ನನ್ನು ವೇಸ್ಟ್ ಮಾಡಿ ಬಿಟ್ಟರು: ನಟ ಸಂಜಯ್‌ ದತ್‌ ಬೇಸರ

ನಟ ಸಂಜಯ್ ದತ್ ಸಖತ್‌ ಬ್ಯುಸಿಯಾಗಿದ್ದಾರೆ. ಕೆಜಿಎಫ್‌ ಸಿನಿಮಾದ ಬಳಿಕ ಸಂಜಯ್‌ ದತ್‌ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಿಂದ ದಕ್ಷಿಣ ಭಾರತದ ಸಿನಿಮಾಗಳತ್ತ ಮುಖ ಮಾಡಿರುವ ಸಂಜಯ್‌ ದತ್‌ ಇದೀಗ್‌ ತಾವು ನಟಿಸಿದ ಸಿನಿಮಾವೊಂದರ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

2023ರಲ್ಲಿ ತೆರೆಕಂಡ ಲೋಕೇಶ್‌ ಕನಗರಾಜ್‌ ನಿರ್ದೇಶನದ ದಳಪತಿ ವಿಜಯ್‌ ನಟನೆಯ ಲಿಯೋ ಸಿನಿಮಾದಲ್ಲಿ ಸಂಜಯ್‌ ದತ್‌ ಆ್ಯಂಟನಿ ದಾಸ್ ಹೆಸರಿನ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರದ ಟ್ರೇಲರ್ ನೋಡಿದವರಿಗೆ ಈ ಪಾತ್ರದಲ್ಲಿ ಏನೋ ಇದೆ ಎಂದೇ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಈ ಪಾತ್ರ ಕಮಾಲ್ ಮಾಡುವಲ್ಲಿ ವಿಫಲವಾಯಿತು. ಎಲ್ಲರೂ ಲೋಕೇಶ್​ನ ಬೈದರು. ಈಗ ಸಂಜಯ್ ದತ್ ಕೂಡ ಇದೇ ಕೆಲಸ ಮಾಡಿದ್ದಾರೆ.

ಚೆನ್ನೈನಲ್ಲಿ ನಡೆದ ಈವೆಂಟ್ ಒಂದರಲ್ಲಿ ಮಾತನಾಡಿದ ಸಂಜಯ್ ದಯ್, ‘ನನಗೆ ಲೋಕೇಶ್ ಮೇಲೆ ಸಿಟ್ಟಿದೆ. ನನಗೆ ದೊಡ್ಡ ಆಫರ್ ನೀಡಿಲ್ಲ. ಅವರು ನನ್ನನ್ನು ವೇಸ್ಟ್ ಮಾಡಿ ಬಿಟ್ಟರು’ ಎಂದು ಬೇಸರ ಹೊರ ಹಾಕಿದ್ದಾರೆ. ಇದನ್ನು ಹಲವರು ಒಪ್ಪಿಕೊಂಡಿದ್ದು ಸಂಜಯ್‌ ದತ್‌ ರಂತಹ ನಟನಿಗೆ ಆಂಟನಿ ದಾಸ್‌ ಪಾತ್ರ ನೀಡಿದ್ದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಸಂಜಯ್‌ ದತ್‌ ಸದ್ಯ ‘ಕೆಡಿ: ದಿ ಡೆವಿಲ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ ಸೇರಿದಂತೆ ಹಲವರು ನಟಿಸುತ್ತಿದ್ದು ಸದ್ಯ ಚಿತ್ರತಂಡ ಪ್ರಮೋಷನ್‌ ಕೆಲಸದಲ್ಲಿ ತೊಡಗಿಕೊಂಡಿದೆ. ಇದರ ಜೊತೆಗೆ ಸಂಜಯ್‌ ದತ್‌ ‘ದಿ ರಾಜಾ ಸಾಬ್’ ಸಿನಿಮಾ ಹಾಗೂ ರಣವೀರ್ ಸಿಂಗ್ ನಟನೆಯ ‘ಧುರಂದರ್’ ಚಿತ್ರದಲ್ಲಿಯೂ ತೊಡಗಿಕೊಂಡಿದ್ದಾರೆ.

ನಿಸ್ವಾರ್ಥ ಸಂಘಟನೆಯಿಂದ ಹಿಂದವೀ ಸ್ವರಾಜ್ಯ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ಈ ಸಂಘಟನೆಯು ಧರ್ಮಕ್ಕಾಗಿ ತ್ಯಾಗ ಮಾಡುವ ಪ್ರೇರಣಾದಾಯಿ ವಿಚಾರದ ಮೇಲೆ ಆಗಿತ್ತು. ಇಂತಹ ನಿಸ್ವಾರ್ಥ ಸಂಘಟನೆ ನಿರ್ಮಾಣವಾದಾಗಲೇ ನಿಜವಾದ ಅರ್ಥದಲ್ಲಿ ರಾಮರಾಜ್ಯ ಮತ್ತು ಹಿಂದವೀ ಸ್ವರಾಜ್ಯ ಸಾಕಾರಗೊಳ್ಳುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಯಮನಪ್ಪ ಭಜಂತ್ರಿ ಹೇಳಿದರು.

ಅವರು ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ನಡೆದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು.

ಪ್ರಸ್ತುತ ಹಿಂದೂ ಸಮಾಜದ ಮೇಲೆ ಅನೇಕ ರೀತಿ ಆಘಾತಗಳಾಗುತ್ತಿವೆ. ಹಿಂದೆ ಪ್ರಭು ಶ್ರೀರಾಮರ ಕಾಲದಲ್ಲಿ, ಶಿವಾಜಿ ಮಹಾರಾಜರ ಕಾಲದಲ್ಲಿ, ಹಕ್ಕ ಬುಕ್ಕರ ಕಾಲದಲ್ಲಿ ಇದೇ ರೀತಿ ಧರ್ಮಸಂಕಟಗಳು ಎದುರಾಗಿದ್ದವು. ಈ ಎಲ್ಲ ಸಂದರ್ಭಗಳಲ್ಲಿಯೂ ಅವರು ಗುರುಗಳ ಮಾರ್ಗದರ್ಶನ ಪಡೆದು ಧರ್ಮಸಂಸ್ಥಾಪನೆಯ ಕಾರ್ಯ ಮಾಡಿದ್ದಾರೆ. ಹಾಗಾಗಿ ಗುರು-ಶಿಷ್ಯ ಪರಂಪರೆಗೆ ಹಿಂದಿನಿಂದಲೂ ಅಷ್ಟೇ ಮಹತ್ವವಿದೆ. ಈಗ ನಾವೂ ಸಹ ಇಂದಿನ ಗುರುಪೂರ್ಣಿಮೆಯ ದಿನ ಧರ್ಮಸಂಸ್ಥಾಪನೆಗಾಗಿ ಸಂಘಟಿತರಾಗಲು ಸಂಕಲ್ಪ ಮಾಡಬೇಕಿದೆ ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯರಾದ ಶ್ರೀಪತಿ ಭಟ್ ಮಾತನಾಡಿ, ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದನ್ನು ಮುಂದಿನ ಪೀಳಿಗೆಯವರು ಪಾಲಿಸಬೇಕಾದರೆ ಈಗಿನಿಂದಲೇ ಒಗ್ಗಟ್ಟಾಗಿ ಕಾರ್ಯ ಮಾಡಬೇಕಿದೆ ಎಂದರು.

ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ಜಿಲ್ಲಾ ಅಧ್ಯಕ್ಷರಾಗಿ ವಸಂತ ಸಿದ್ದಮ್ಮನಹಳ್ಳಿ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಆದಪ್ಪ ಮಾರೆಪ್ಪ ಮಾರೆಪ್ಪನವರ ಗದಗ, ಅಧ್ಯಕ್ಷರಾಗಿ ವಸಂತ ಪರಸಪ್ಪ ಸಿದ್ದಮ್ಮನಹಳ್ಳಿ ಗದಗ, ಉಪಾಧ್ಯಕ್ಷರಾಗಿ ರಮೇಶ ಚನ್ನಮಲ್ಲಪ್ಪ ಭಾವಿ ಲಕ್ಕುಂಡಿ, ಉಪಾಧ್ಯಕ್ಷರಾಗಿ ಸೋಮಪ್ಪ ಧರ್ಮಪ್ಪ ಮೇಲ್ಮನಿ ಹಾತಗೇರಿ, ಕಾರ್ಯದರ್ಶಿಯಾಗಿ ಬಾಲೆಸಾಬ ಮಾಬುಸಾಬ ನದಾಫ್ ಹಾರೋಗೇರಿ, ಸಹ ಕಾರ್ಯದರ್ಶಿಯಾಗಿ ಅನಿಕುಮಾರ ಪರಸಪ್ಪ ಸಿದ್ದಮ್ಮನಹಳ್ಳಿ ಗದಗ, ಸಂಘಟನಾ ಕಾರ್ಯದರ್ಶಿಯಾಗಿ ಈಶಪ್ಪ ಜಗ್ಗಲ ರೋಣ, ಖಜಾಂಚಿಯಾಗಿ ಮಹಾಂತೇಶ ಗುಂಜಳ ಮುಳಗುಂದ, ಸದಸ್ಯರಾಗಿ ಬಸವರಾಜ ಹ.ಕರಿಮೇರಿ ಹುಯಿಲಗೋಳ, ಅಬ್ದುಲಖಾದರ ಜೈಲಾನಿ ಅಣ್ಣಿಗೇರಿ ಶಿರಹಟ್ಟಿ, ರವಿಕುಮಾರ ದ್ಯಾಮಣ್ಣ ವಾಲ್ಮೀಕಿ ಬಸಾಪೂರ ಮುಂತಾದವರು ಆಯ್ಕೆಯಾಗಿದ್ದಾರೆ.

ಭಕ್ತರಿಗೆ ಸನ್ಮಾರ್ಗ ತೋರುವವನೇ ನಿಜವಾದ ಗುರು

0

ವಿಜಯಸಾಕ್ಷಿ ಸುದ್ದಿ, ಗದಗ: ಮನುಷ್ಯ ಸಹಜ ಜೀವಿ. ತನ್ನ ಬದುಕಿನ ಹಲವಾರು ಜಂಜಾಟಗಳಿಂದ ತಲ್ಲಣಗೊಂಡ ಅವನಿಗೆ ಜೀವನದ ಸರಿಯಾದ ಮಾರ್ಗ ಹಾಗೂ ಗುರಿ ಬೇಕು. ಇದಕ್ಕಾಗಿ ಗುರುವನ್ನು ಆತ ನಂಬುತ್ತಾನೆ. ಭಕ್ತರ ಮನದ ಗೊಂದಲಗಳಿಗೆ ಉತ್ತಮ ಸನ್ಮಾರ್ಗ ತೋರುವವನೇ ಗುರು ಎಂದು ಗದುಗಿನ ಅಡವೀಂದ್ರ ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮೀಜಿ ಹೊಸಳ್ಳಿಮಠ ಹೇಳಿದರು.

ಅವರು ಶ್ರೀ ಮಠದಲ್ಲಿ ಜರುಗಿದ 336ನೇ ಮಾಸಿಕ ಶಿವಾನುಭವ ಗೋಷ್ಠಿಯ ಸಮ್ಮುಖ ವಹಿಸಿ ಮಾತನಾಡುತ್ತಿದ್ದರು.

ಮನುಷ್ಯ ತನ್ನ ಜೀವನದಲ್ಲಿ ದಾನ-ಧರ್ಮದಂತಹ ಪರೋಪಕಾರಿ ಗುಣಗಳೊಂದಿಗೆ ಮಾನವೀಯತೆ, ಸಹಕಾರಗಳನ್ನು ಬೆಳೆಸಿಕೊಳ್ಳಬೇಕು. ಗುರು ಹಿರಿಯರ, ಪೂಜ್ಯರ ನುಡಿಗಳು ಬದುಕನ್ನು ಬದಲಿಸಬಲ್ಲವು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗದಗ ಜಿಲ್ಲಾ ಸಂಸ್ಕಾರ ಭಾರತಿ ಅಧ್ಯಕ್ಷ ಪಿ.ಎ. ಕುಲಕರ್ಣಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಂಸ್ಕಾರಗಳು ಹಾಗೂ ಸಂಸ್ಕೃತಿಗಳು ಮರೆಯಾಗುತ್ತಿವೆ. ಬಾಲ್ಯದಲ್ಲಿಯೇ ಮಕ್ಕಳಿಗೆ ಸಂಸ್ಕಾರವನ್ನು ಹೇಳಿಕೊಡಬೇಕು. ಗುರುವಿನ ಮಹತ್ವದ ಕುರಿತು ಯುವ ಪೀಳಿಗೆ ತಿಳಿಯಬೇಕು. ಅಂದಾಗ ಸುಂದರ ಸಮಾಜ ನಿರ್ಮಾಣವಾಗಬಲ್ಲದು ಎಂದರು.

ಇನ್ನೋರ್ವ ಅತಿಥಿಗ ವಿದ್ವಾನ ಸಂಜಯ ಶಾನಭೋಗರ ಮಾತನಾಡಿ, ಕಲೆ ಮನುಷ್ಯನಿಗೆ ಸಂತೋಷ ಉಂಟುಮಾಡಬಲ್ಲದು. ಕಲೆಯಿಂದಾಗಿ ಅನೇಕ ಕುಟುಂಬಗಳು ಅರ್ಥಿಕ ಸದೃಢತೆ ಕಂಡಿವೆ. ಅದಕ್ಕಾಗಿ ಕಲೆ ಹಾಗೂ ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಬಸವರಾಜ ಗಿಡ್ನಂದಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಕ್ಷರಿ ಅಣ್ಣಿಗೇರಿ, ನಿವೃತ್ತ ಪ್ರಾಚಾರ್ಯ ಸಿ.ಅಂಗಾರಡ್ಡಿ, ಶಾಂತಾ ಗೌಡರ, ವಿದ್ಯಾ ಆನಂದ ಪಾಟೀಲ, ಜಯಶ್ರೀ ಮಾಳಗಿ, ಬಿ.ಎಮ್. ಬಿಳೇಯಲಿ, ಎಲ್.ಎಸ್. ನೀಲಗುಂದ, ನಿಂಗಪ್ಪ ಬಳಿಗಾರ, ಬಿ.ಎಂ. ಯಾಮನಶೆಟ್ಟಿ, ಪ್ರಾಚಾರ್ಯ ಬಿ.ಬಿ. ಪಾಟೀಲ ಉಪಸ್ಥಿತರಿದ್ದರು. ಸಿದ್ಧಣ್ಣ ಜವಳಿ ಪ್ರಾರ್ಥಿಸಿದರು, ಪಿ.ಸಿ. ಪಾಟೀಲ ಸ್ವಾಗತಿಸಿದರು. ಪ್ರಕಾಶ ಬಂಡಿ ನಿರೂಪಿಸಿ ವಂದಿಸಿದರು.

ಗುರುಪೂರ್ಣಿಮೆ ಕುರಿತು ಉಪನ್ಯಾಸ ನೀಡಿದ ಗದಗ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ದತ್ತಾತ್ರೇಯ ಜೋಶಿ, ಗುರುವಿನ ಶಕ್ತಿ ಅತ್ಯದ್ಭುತವಾದುದು. ಬದುಕಿನ ಪರಿಪೂರ್ಣತೆಗೆ ಬೆಳಕಿನ ರೂಪದಲ್ಲಿ ಸುಜ್ಞಾನವನ್ನು ಕೊಡುತ್ತಾನೆ. ಹರ ಮುನಿದರೂ ಗುರು ಕಾಯುವನು ಎಂಬ ಮಾತು ಇದೆ. ಅದಕ್ಕಾಗಿ ನಾವು ಗುರುವಿನ ಅಣತಿಯನ್ನು ಪಾಲಿಸಬೇಕು ಎಂದರು.

ರಸ್ತೆ ಡಾಂಬರೀಕರಣಕ್ಕೆ ಡಾ. ಚಂದ್ರು ಲಮಾಣಿ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ತಾರೀಕೊಪ್ಪ ಗ್ರಾಮದಲ್ಲಿ 80.50ಲಕ್ಷ ವೆಚ್ಚದಲ್ಲಿ ಹೆಬ್ಬಾಳ-ತಾರೀಕೊಪ್ಪ ಜಿಲ್ಲಾ ಮುಖ್ಯ ರಸ್ತೆಯ ಕಿಮೀ 7ರವರೆಗೆ ಆಯ್ದ ಭಾಗಗಳಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ತಾಲೂಕಿನ ತಾರೀಕೊಪ್ಪ ಮತ್ತು ಹೆಬ್ಬಾಳ ಗ್ರಾಮದ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಯಾಗದೇ ಇರುವುದರಿಂದ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಬಗ್ಗೆ ಎರಡೂ ಊರುಗಳ ಗ್ರಾಮಸ್ಥರು ಅನೇಕ ಬಾರಿ ರಸ್ತೆ ಸರಿಪಡಿಸುವಂತೆ ವಿನಂತಿಸಿದ್ದರು. ಇದೀಗ ಮರು ಡಾಂಬರೀಕರಣಕ್ಕೆ 80.50 ಲಕ್ಷ ರೂ ಮಂಜೂರಾಗಿದ್ದು, ಶೀಘ್ರವೇ ರಸ್ತೆ ಸುಧಾರಣೆ ಮಾಡಲಾಗುವುದು. ಕಾಮಗಾರಿಯನ್ನು ನಿರ್ವಹಿಸುವ ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಸುರೇಶಗೌಡ ಪಾಟೀಲ, ಹನುಮರೆಡ್ಡಿ ಬುಳ್ಳಪ್ಪನವರ, ಪುರಪ್ಪ ಲಮಾಣಿ, ಶಂಕರ ಭಾವಿ, ಪ್ರವೀಣ ಪಾಟೀಲ, ರಾಜೀವರೆಡ್ಡಿ ಬಮ್ಮನಕಟ್ಟಿ, ಚನ್ನವೀರಗೌಡ ತೆಗ್ಗಿನಮನಿ, ಎಚ್.ಎಚ್. ತಳವಾರ, ಅಣ್ಣಪ್ಪ ರಣತೂರ, ಶಿವನಗೌಡ ಕಂಠಿಗೌಡ್ರ, ಸಿ.ಆರ್. ಪಾಟೀಲ, ಪ್ರಶಾಂತ ರೆಡ್ಡಿ, ಶ್ರೀನಿವಾಸ್ ಸೌದತ್ತಿ, ಮಲ್ಲೇಶ ಲಮಾಣಿ, ದೇವರಾಜ ಮೇಟಿ, ಮಹೇಶ ಲಮಾಣಿ, ಶಿವಾನಂದ ಪೂಜಾರ, ಈರಣ್ಣ ಬಡಿಗೇರ, ಬಾಬು ತಿರುಮಲರೆಡ್ಡಿ, ಗುಡದಪ್ಪ ಸುರಣಗಿ, ಮಲ್ಲು ನಾವಿ, ಮಂಜುನಾಥ ಕರಿಯತ್ತಿನ ಮುಂತಾದವರು ಉಪಸ್ಥಿತರಿದ್ದರು.

ಶಕ್ತಿ ಯೋಜನೆ ಸಂಭ್ರಮಾಚರಣೆ: ಬಸ್ ನಿಲ್ದಾಣಗಳಲ್ಲಿ ಬಸ್ ಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯೂ ಸಹ ಒಂದಾಗಿದೆ. ಶಕ್ತಿ ಯೋಜನೆಯನ್ನು 11-6-2023ರಿಂದ ಜಾರಿಗೊಳಿಸಿದ್ದು, ಅಂದಿನಿಂದ ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ರಾಜ್ಯ ಸರ್ಕಾರ ಒದಗಿಸಿದೆ.

ಇದುವರೆಗೆ `ಶಕ್ತಿ’ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದೆ. ಶಕ್ತಿ ಯೋಜನೆಯಡಿಯಲ್ಲಿ ನಮ್ಮ ನಾಡಿನ 500 ಕೋಟಿ ಹೆಣ್ಣು ಮಕ್ಕಳು ರಾಜ್ಯದ ಎಲ್ಲಾ ಸರ್ಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮದಿಂದ ಆಚರಿಸುವುದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸದಸ್ಯರ ಹಕ್ಕುಭಾದ್ಯವಾಗಿದೆ.

ಶಕ್ತಿ ಯೋಜನೆ ಅಡಿಯಲ್ಲಿ 500 ಕೋಟಿ ಫಲಾನುಭವಿಗಳು ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಜುಲೈ 14ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಹಾಗೂ ತಾಲೂಕುಗಳ ಬಸ್ ಡಿಪೊ/ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರುಗಳು ಒಂದು ಬಸ್ಸಿಗೆ ಪೂಜೆಯನ್ನು ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಗದಗನ ಪಂ. ಪುಟ್ಟರಾಜ ಬಸ್ ನಿಲ್ದಾಣದಲ್ಲಿ ಜುಲೈ 14ರಂದು ಬೆಳಿಗ್ಗೆ 11 ಗಂಟೆಗೆ ಗದಗ ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಬಸ್ಸಿಗೆ ಪೂಜೆ ನೆರವೇರಿಸಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಗದಗ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ಗಣ್ಯರು, ಅಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ತಿಮ್ಮಾಪೂರ ಗ್ರಾಮದಲ್ಲಿ 5 ಸಾವಿರ ಜನಸಂಖ್ಯೆಯಿದ್ದು, ಡಿಬಿಓಟಿ ನೀರು ಕುಡಿಯಲು ಬಳಸಲಾಗುತ್ತಿದೆ. ಸದರಿ ಗ್ರಾಮಕ್ಕೆ ಹರ್ಲಾಪುರ ಗ್ರಾಮದ ಮಹಡಿ ಗುಡ್ಡದ ಹತ್ತಿರ ಒಂದು ಬೋರ್‌ವೆಲ್ ಇದ್ದು, ಬೋರವೆಲ್‌ನಿಂದ ಈ ಹಿಂದೆ ಗ್ರಾಮಕ್ಕೆ ನೀರು ಪೂರೈಕೆಯಾಗುತ್ತಿತ್ತು. ಸದ್ಯ ಪೈಪ್‌ಲೈನ್ ದುರಸ್ತಿಯಿಂದ ಅದೂ ಸಹ ನಿಂತು ಹೋಗಿದೆ.

ಜುಲೈ ಮೊದಲನೇ ವಾರದಲ್ಲಿ ಡಿಬಿಓಟಿ ನೀರು ಪೂರೈಸುವ ಕೇಂದ್ರ ಸ್ಥಳದಲ್ಲಿ ವಿದ್ಯುತ್ ಪೂರೈಕೆಯ ಸಮಸ್ಯೆಯಿಂದ ಗ್ರಾಮಕ್ಕೆ ನೀರು ಪೂರೈಕೆಯಾಗುವಲ್ಲಿ ಸಮಸ್ಯೆಯಾಗಿದೆ. ಈ ಕುರಿತು ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ಸಮಾಲೋಚಿಸಿ ಜುಲೈ 6ರಿಂದ ಸರಾಸರಿ 2.40 ಲಕ್ಷ ಲೀಟರ್ ನೀರು ಪೂರೈಕೆ ಆಗುವಂತೆ ಕ್ರಮಕೈಗೊಳ್ಳಲಾಗಿದೆ.

ತಿಮ್ಮಾಪೂರ ಗ್ರಾಮದಲ್ಲಿ ಕುಡಿಯುವ ನೀರಿನ ವಿತರಣೆ ಮಾಡುವಾಗ ಕೆಲವೊಂದು ಕುಟುಂಬದವರು ನಳಕ್ಕೆ ನೇರವಾಗಿ ಮೋಟರ್ ಮೂಲಕ ನೀರನ್ನು ಪಂಪ್ ಮಾಡುವುದರಿಂದ ಎತ್ತರದ ಭಾಗದ ಮನೆಗಳಿಗೆ ನೀರು ಪೂರೈಕೆಯಲ್ಲಿ ಸಮಸ್ಯೆ ಆಗುತ್ತಿದ್ದು, ಸದರಿ ಕುಟುಂಬಗಳಿಗೆ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮನವೋಲಿಸಿ ಮೋಟಾರ್ ಹಚ್ಚದಂತೆ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲಾ ಕುಡಿಯುವ ನೀರಿನ ಅನುದಾನದಲ್ಲಿ ಹರ್ಲಾಪೂರ ಗ್ರಾಮದ ಹತ್ತಿರ ಇರುವ ಮಹಡಿ ಗುಡ್ಡದ ಬೋರ್‌ವೆಲ್‌ನ ಪೈಪ್‌ಲೈನನ್ನು ದುರಸ್ತಿಪಡಿಸಿ ಕುಡಿಯವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲಾಗುವುದೆಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನಗಳ ತಪಾಸಣೆ; 75 ಸವಾರರಿಗೆ ದಂಡ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಗದಗ ಉಪವಿಭಾಗದ ಡಿಎಸ್‌ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ, ಬೆಟಗೇರಿ ಸಿಪಿಐ ಧೀರಜ್ ಶಿಂಧೆ ಮಾರ್ಗದರ್ಶನದಲ್ಲಿ, ಗದಗ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣಕುಮಾರ ಹಾಗೂ ಸಂಚಾರ ಠಾಣೆಯ ಸಿಬ್ಬಂದಿ ವರ್ಗದವರು ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ ಕೈಗೊಂಡು ಅವಳಿ ನಗರದಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆಗಳನ್ನು ಉಲ್ಲಂಘನೆ ಮಾಡಿ ಸಂಚರಿಸುವ ವಾಹನಗಳ ತಪಾಸಣೆ ನಡೆಸಿದರು.

ತಪಾಸಣೆಯ ಕಾಲಕ್ಕೆ ನೋಂದಣಿ ಸಂಖ್ಯೆ ಅಳವಡಿಸದೆ, ದೋಷಪೂರಿತ ನೋಂದಣಿ ಸಂಖ್ಯೆ ಅಳವಡಿಸಿಕೊಂಡು ವಾಹನ ಚಲಾವಣೆ, ನೋಂದಣಿ ಸಂಖ್ಯೆ ಮೇಲೆ ಸ್ಟಿಕ್ಕರ್ ಅಂಟಿಸಿ ಸಂಚರಿಸಿದ ಒಟ್ಟು 130 ದ್ವಿಚಕ್ರ ವಾಹನಗಳನ್ನು ತಡೆ ಹಿಡಿದಿದ್ದು, ನೋಂದಣಿ ಸಂಖ್ಯೆ ಅಳವಡಿಸದೆ ವಾಹನ ಚಾಲನೆ ಮಾಡಿದ ಒಟ್ಟು 53 ವಾಹನಗಳನ್ನು, ದೋಷಪೂರಿತ ನೋಂದಣಿ ಸಂಖ್ಯೆ ಇರುವ ಒಟ್ಟು 65 ಮತ್ತು ಸ್ಟಿಕ್ಕರ್ ಅಂಟಿಸಿ ವಾಹನ ಚಾಲನೆ ಮಾಡಿದ ಒಟ್ಟು 12 ವಾಹನಗಳ ಮೇಲೆ ಥರ್ಡ್ ಐ ಪ್ರಕರಣಗಳು ಇರುವ ಬಗ್ಗೆ ಪರೀಶೀಲನೆ ಮಾಡಿ ಒಟ್ಟು 75 ಪ್ರಕರಣಗಳನ್ನು ಪತ್ತೆ ಹಚ್ಚಿ ದಂಡ ವಿಧಿಸಿದರು.

ಈ ಎಲ್ಲ ಸವಾರರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು, ಸವಾರರಿಗೆ ತಿಳಿವಳಿಕೆ ನೀಡಲಾಯಿತು.

ಕಾಂಗ್ರೆಸ್‌ನಿಂದ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪ್ರಭುತ್ವವನ್ನು ಬಲಪಡಿಸಲು, ಕಾಂಗ್ರೆಸ್‌ನ ನಿಜವಾದ ಡಿಎನ್‌ಎಯನ್ನು ಜನರಿಗೆ ತಿಳಿಸಲು ಬಿಜೆಪಿ ತುರ್ತು ಪರಿಸ್ಥಿತಿ ಕರಾಳ ದಿನ ನೆನಪು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವವನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಹಿಂದಿನಿಂದಲೂ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ನಗರದ ವಿಠಲಾರೂಢ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ `ತುರ್ತು ಪರಿಸ್ಥಿತಿ ಕರಾಳ ದಿನ’ ನೆನಪು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್ ಡಿಎನ್‌ಎಯಲ್ಲಿ ಪ್ರಜಾಪ್ರಭುತ್ವದ ಕೊರತೆ ಮೊದಲ ಬಾರಿಗೆ ಬೆಳಕಿಗೆ ಬಂದಿದ್ದು 1971ರಲ್ಲಿ. ಅಲಹಾಬಾದ್ ಹೈಕೋರ್ಟ್ ಇಂದಿರಾ ಗಾಂಧಿಯವರ ಗೆಲುವನ್ನು ಅನೂರ್ಜಿತಗೊಳಿಸಿ, ಆರು ವರ್ಷಗಳ ಕಾಲ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಆದೇಶಿಸಿತು. ನಂತರ, ಇಂದಿರಾ ಗಾಂಧಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಇಂದಿರಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸಬಹುದಾದರೂ ಮತ ಚಲಾಯಿಸುವಂತಿಲ್ಲ ಎಂದು ಹೇಳಿತು. ಇಂದಿರಾ ಗಾಂಧಿ ಇದರಿಂದ ವಿಚಲಿತರಾಗಿ, ಸಂವಿಧಾನದ 38, 40, 41ನೇ ಕಲಂಗಳಿಗೆ ತಿದ್ದುಪಡಿ ತಂದು, ತಮ್ಮ ಆಯ್ಕೆಯನ್ನು ಪ್ರಶ್ನಿಸಲು ಸಾಧ್ಯವಾಗದಂತೆ ಚಕ್ರವ್ಯೂಹ ರಚಿಸಿದರು ಎಂದು ಹೇಳಿದರು.

1975ರ ಜೂನ್ 25ರಂದು ತುರ್ತು ಪರಿಸ್ಥಿತಿ ಹೇರಲಾಯಿತು. ಇಂದಿರಾ ಗಾಂಧಿ ಹಿಟ್ಲರ್‌ನಂತೆ ವರ್ತಿಸಿದರು. 2.23 ಲಕ್ಷ ಜನರನ್ನು ಬಂಧಿಸಲಾಯಿತು. ಜನರನ್ನು ಬೌದ್ಧಿಕ ಆಘಾತಕ್ಕೆ ಒಳಪಡಿಸಲಾಯಿತು ಎಂದು ಜೋಶಿ ನೆನಪಿಸಿಕೊಂಡರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಇಂದಿರಾ ಗಾಂಧಿಯವರ ಗೆಲುವು ಅಸಂವಿಧಾನಿಕ ಎಂದು ಅಲಹಾಬಾದ್ ಕೋರ್ಟ್ ತೀರ್ಪು ನೀಡಿತ್ತು. ಆದರೆ, ಇಂದಿರಾ ಗಾಂಧಿ ದಬ್ಬಾಳಿಕೆ ಮೂಲಕ ತುರ್ತು ಪರಿಸ್ಥಿತಿ ಹೇರಿದ್ದರು. ಅವರ ನಂತರ ಅವರ ಪುತ್ರರು ಸಂತಾನ ಹರಣ ಯೋಜನೆ ಜಾರಿ ಮಾಡುವ ಮೂಲಕ ಭಾರತದ ಜನಸಂಖ್ಯೆಯನ್ನು ಕಡಿಮೆ ಮಾಡುವಂತೆ ಮಾಡಿದರು. ಸಂವಿಧಾನ ಹತ್ಯೆ ಮಾಡಿದವರು ಕಾಂಗ್ರೆಸ್ ಪಕ್ಷದ ಮುಖಂಡರು. ಈಗ ಸಂವಿಧಾನ ರಕ್ಷಿಸಿ ಎಂದು ಡಾಂಭಿಕತನ ಪ್ರದರ್ಶಿಸುತ್ತಿದ್ದಾರೆ ಎಂದು ಟೀಕಿಸಿದರು.

ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸ ಅನುಭವಿಸಿದ್ದ ಕೃಷ್ಣ ಹೊಂಬಾಳಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಪ್ರಮುಖರಾದ ಲಿಂಗರಾಜ ಪಾಟೀಲ, ಎಂ.ಎಸ್. ಕರಿಗೌಡ್ರ, ಮಹೇಂದ್ರ ಕೌತಾಳ, ಮಂಜುನಾಥ ಮುಳಗುಂದ, ಮೋಹನ ಮಾಳಶೆಟ್ಟಿ, ಎಂ.ಎಂ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಕೇಂದ್ರದ ವಿರೋಧ ಪಕ್ಷಗಳಿಂದ ದೇಶಕ್ಕೆ ಆತಂಕವಿದೆ. ಆದರೆ, ನರೇಂದ್ರ ಮೋದಿ ಅವರ ಅಧಿಕಾರದಲ್ಲಿ ದೇಶದ ಭದ್ರತೆ ಮತ್ತು ಅಖಂಡತೆಯೊಂದಿಗೆ ಯಾವುದೇ ರಾಜಿಯಿಲ್ಲ. ಕಾಂಗ್ರೆಸ್‌ನ ನಕಲಿ ಗಾಂಧಿಗಳು ಭಾರತೀಯರನ್ನು ಆಳುತ್ತಾ ಬಂದರೇ ಹೊರತು, ಜನರ ಅಭಿವೃದ್ಧಿಯ ಬಗ್ಗೆ ಚಿಂತಿಸಲಿಲ್ಲ ಎಂದು ಆರೋಪಿಸಿದರಲ್ಲದೆ, ಎಚ್.ಕೆ. ಪಾಟೀಲ ಅವರು ಕಾನೂನು ಮಂತ್ರಿಯಾಗಿ ತುರ್ತು ಪರಿಸ್ಥಿತಿಯನ್ನು ಸ್ವಾಗತಿಸುತ್ತಾರಾ? ಹಾಗೆ ತುರ್ತು ಪರಿಸ್ಥಿತಿಯನ್ನು ಒಪ್ಪಿಕೊಂಡಿದ್ದೇ ಆದರೆ, ಸಂವಿಧಾನ ಹಿಡಿಯುವುದನ್ನು ಕೈಬಿಡಬೇಕು ಎಂದು ಸವಾಲು ಹಾಕಿದರು.

error: Content is protected !!