ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: 77ನೇ ಗಣರಾಜ್ಯೋತ್ಸವವನ್ನು ಇಲ್ಲಿಯ ವಿವಿಧ ಸಂಘ-ಸಂಸ್ಥೆಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ ನೆರವೇರಿಸಿದರು. ಇದಕ್ಕೂ ಪೂರ್ವ ಮಹಾತ್ಮ ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮಕ್ಕಳು ಸಂವಿಧಾನ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ನಂತರ ವಿವಿಧ ಶಾಲೆಯ ಮಕ್ಕಳಿಂದ ದೇಶ ಭಕ್ತಿಯ ಗೀತೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಡಾ. ಬಿ.ಆರ್. ಅಂಬೇಡ್ಕರರು ಈ ದೇಶಕ್ಕೆ ನೀಡಿದ ಸಂವಿಧಾನದಿಂದ ಎಲ್ಲ ಕ್ಷೇತ್ರಗಳಲ್ಲಿ ಸಮಾನವಾದ ಅಧಿಕಾರ, ಉದ್ಯೋಗ, ಮೂಲಭೂತ ಸೌಲಭ್ಯಗಳು ದೊರೆತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದರು.
ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಗ್ರಾ.ಪಂ ಸದಸ್ಯರು, ಪಿ.ಡಿ.ಒ ಅಮೀರಾನಾಯಕ, ಕಾರ್ಯದರ್ಶಿ ಎಂ.ಎ. ಗಾಜಿ ಸಿಬ್ಬಂದಿ ಹಾಜರಿದ್ದರು.
ಸರಕಾರಿ ಬಾಲಕಿಯರ ಪ್ರೌಢಶಾಲೆ, ಸರಕಾರಿ ಮಾದರಿಯ ದ್ವಿಭಾಷಾ ಪ್ರಾಥಮಿಕ ಶಾಲೆ, ಕೆ.ಜಿ.ಎಸ್ ಸರಕಾರಿ ಉರ್ದು ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಾಪೂಜಿ ಕಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರಾಥಮಿಕ ಡಿ.ಪಿ.ಇ.ಪಿ ಶಾಲೆ, ಸ್ವಾಮಿ ವಿವೇಕಾನಂದ ಪ್ರಾಥಮಿಕ ಶಾಲೆ, ಜನತಾ ವಿದ್ಯಾವರ್ಧಕ ಸಂಸ್ಥೆ, ಬಿ.ಎಚ್. ಪಾಟೀಲ ಸಂಯುಕ್ತ ಪದವಿಪೂರ್ವ ಕಾಲೇಜು, ವಿವಿಧ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 1, 2, 3, ಲಕ್ಷ್ಮೀ ನಾರಾಯಣ ಸೌಹಾರ್ದ ಸಹಕಾರಿ ಸಂಘ ಸೇರಿದಂತೆ ವಿವಿಧ ಸಂಘಗಳಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಮಾದರಿ ದ್ವಿಭಾಷಾ (ಆಂಗ್ಲ) ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಸಾಹಿತ್ಯ ನಂದಪ್ಪನವರ ಸಂವಿಧಾನ ಪೀಠಿಕೆಯನ್ನು ನಿರರ್ಗಳವಾಗಿ ಇಂಗ್ಲೀಷ್ನಲ್ಲಿ ಹೇಳಿದ್ದು ಎಲ್ಲರ ಗಮನ ಸೆಳೆಯಿತು.

