Home Blog Page 2

9ನೇ ವಾರ್ಷಿಕೋತ್ಸವ ಇಂದು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಇಲ್ಲಿನ ಈರ‍್ವ ನಗರದಲ್ಲಿನ ಶ್ರೀ ಸಾಯಿ ಬಾಬಾ ದೇವಸ್ಥಾನದ 9ನೇ ವಾರ್ಷಿಕೋತ್ಸವ ಮಾ.28ರಂದು ಜರುಗಲಿದೆ. ಬೆಳಿಗ್ಗೆ 6 ಗಂಟೆಗೆ ಶ್ರೀ ಸಾಯಿ ಬಾಬಾ ಮೂರ್ತಿಗೆ ರುದ್ರಾಭಿಷೇಕ ನಂತರ 8 ಗಂಟೆಗೆ ಸತ್ಯನಾರಾಯಣ ಪೂಜೆ ಜರುಗಲಿದ್ದು, ಮದ್ಯಾಹ್ನ 1 ಗಂಟೆಗೆ ಅನ್ನ ಪ್ರಸಾದ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ವರ್ಧಂತಿ ಮಹೋತ್ಸವ

0

ವಿಜಯಸಾಕ್ಷಿ ಸುದ್ದಿ, ಹೊನ್ನಾವರ : ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿಶ್ವ ವೀರಾಂಜನೇಯ ಮಹಾ ಸಂಸ್ಥಾನ, ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ.29 ಮತ್ತು 30ರಂದು ಶ್ರೀ ವೀರಾಂಜನೇಯ ದೇವರ, ಶ್ರೀ ಗೋಪಾಲಕೃಷ್ಣ ದೇವರ, ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಶ್ರೀ ಚೌಡೇಶ್ವರಿ ದೇವಿಯ ವರ್ಧಂತಿ ಉತ್ಸವ ಆಯೋಜನೆಗೊಂಡಿದೆ.

ಇದರಂಗವಾಗಿ ಮಾ.29ರಂದು ಗಣಪತಿ ಪೂಜೆ, ಪುಣ್ಯಾಹ, ಶ್ರೀ ದೇವರ ಕಲಾವೃದ್ಧಿ ಹವನ, 28 ನಾಳಿಕೇರ ಗಣಹವನ ಆಯೋಜಿಸಲಾಗಿದೆ. ಸಂಜೆ ರಾಕ್ಷೋಘ್ನ ಪಾರಾಯಣ, ತಾರಕ ಮಂತ್ರ ಜಪ, ಆಂಜನೇಯ ಮೂಲಮಂತ್ರ ಜಪ, ಕಲಶ ಸ್ಥಾಪನೆ, ಮಾ.30ರಂದು ಶತರುದ್ರ ಪಾರಾಯಣ, ರುದ್ರಾಭಿಷೇಕ-ರುದ್ರಹವನ, ಆಂಜನೇಯ ಮೂಲಮಂತ್ರ ಹವನ, ರಾಜೋಪಚಾರ ಸೇವೆ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 9:30ರಿಂದ ಯಕ್ಷಗಾನ ಸೇವೆ ನಡೆಯಲಿದೆ. ಮಾ.30ರಂದು ಸಂಜೆ ಪಲ್ಲಕ್ಕಿ ಉತ್ಸವ, ರಾಜೋಪಚಾರ ಸೇವೆ, ರಂಗಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಸಂತರ್ಪಣೆ ನಡೆಯಲಿದ್ದು, ಸೇವೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸೇವಾರ್ಥಿಗಳು ದೇವಾಲಯದ ಸೇವಾ ಕಚೇರಿ, ಮೊ-6361011288, 7019342699ರಲ್ಲಿ ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮಂಡಳದ ನೂತನ ಪದಾಧಿಕಾರಿಗಳ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಹಳೇ ಸರಾಫ್ ಬಜಾರದಲ್ಲಿರುವ ಶ್ರೀ ಜಗದಂಬಾ ದೇವಸ್ಥಾನದ ಶ್ರೀ ಸಹಸ್ರಾರ್ಜುನ ಸಮುದಾಯ ಭವನದ ಲಕ್ಷ್ಮಣಸಾ ಹಬೀಬ ಸಭಾಗೃಹದಲ್ಲಿ ಎಸ್‌ಎಸ್‌ಕೆ ಸಮಾಜದ ನೂತನ ಮಹಿಳಾ ಮಂಡಳವನ್ನು ರಚಿಸಲಾಯಿತು.

ಎಸ್‌ಎಸ್‌ಕೆ ಮಹಿಳಾ ಮಂಡಳದ ನೂತನ ಅಧ್ಯಕ್ಷರಾಗಿ ಉಮಾಬಾಯಿ ಬೇವಿನಕಟ್ಟಿ, ಉಪಾಧ್ಯಕ್ಷರಾಗಿ ಸ್ನೇಹಲತಾ ಕಬಾಡಿ, ಗೌರವ ಕಾರ್ಯದರ್ಶಿಯಾಗಿ ರೇಖಾ ಬೇವಿನಕಟ್ಟಿ, ಸಹ ಕಾರ್ಯದರ್ಶಿಯಾಗಿ ಗೀತಾ ಹಬೀಬ, ಖಜಾಂಚಿಯಾಗಿ ಕಸ್ತೂರಿಬಾಯಿ ಬಾಂಡಗೆ ಅವರನ್ನು ಆಯ್ಕೆ ಮಾಡಲಾಯಿತು.

sskmahila                                    mandali  mahila

ಈ ಸಂದರ್ಭದಲ್ಲಿ ಎಸ್‌ಎಸ್‌ಕೆ ಸಮಾಜದ ಮಹಿಳಾ ಮಂಡಳದ ಮಾಜಿ ಅಧ್ಯಕ್ಷೆ ರೇಖಾಬಾಯಿ ಖಟವಟೆ ಅವರು ನೂತನ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ ಅವರಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿ ನೂತನ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ ಮಾತನಾಡಿ, ಎಸ್‌ಎಸ್‌ಕೆ ಸಮಾಜವನ್ನು ಸಂಘಟಿಸಲು ಮಹಿಳೆಯರು ಮುಂದೆ ಬರಬೇಕು. ಸಮಾಜದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೇಣುಕಾಬಾಯಿ ಕಲಬುರ್ಗಿ, ಸರೋಜಾಬಾಯಿ ಟಿಕಣದಾರ, ಸುನಂದಾ ಹಬೀಬ, ರತ್ನಾ ಹಬೀಬ, ಅನ್ನಪೂರ್ಣ ಶಿದ್ಲಿಂಗ, ವಂದನಾ ವಿನೋದ ಶಿದ್ಲಿಂಗ, ಸುನಂದಾ ಹಬೀಬ, ಲಕ್ಷ್ಮಿಬಾಯಿ ಖಟವಟೆ, ಅಂಬುಬಾಯಿ ಬೇವಿನಕಟ್ಟಿ, ಗೀತಾ ಬಾಂಡಗೆ, ಲಲಿತಾಬಾಯಿ ಬಾಕಳೆ, ಪದ್ಮಾ ಕಬಾಡಿ, ಅನ್ನಪೂರ್ಣ ಬಾಂಡಗೆ, ಭಾವನಾ ಬಾಂಡಗೆ, ಸುಶೀಲಾ ದಲಬಂಜನ ಸೇರಿದಂತೆ ಸಮಾಜ ಬಾಂಧವರು ಉಪಸ್ಥಿತರಿದ್ದರು.

 

ಶ್ರೀ ರಂಭಾಪುರಿ ಪೀಠದಲ್ಲಿ ಯುಗಮಾನೋತ್ಸವಕ್ಕೆ ತೆರೆ

0

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾ ಸಂಸ್ಥಾನ ಪೀಠದಲ್ಲಿ ಮಾರ್ಚ್ 20ರಿಂದ ನಡೆದುಕೊಂಡು ಬಂದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಎಲ್ಲಾ ಕಾರ್ಯಕ್ರಮಗಳು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನಾ ಪೂಜೆಯೊಂದಿಗೆ ಜಯಂತಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಇದೇ ಸಂದರ್ಭದಲ್ಲಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿದ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡಿ, ಮನುಷ್ಯನ ಬುದ್ಧಿ ಶಕ್ತಿ ಬೆಳೆದಂತೆ ಭಾವನೆಗಳು ಬೆಳೆದುಕೊಂಡು ಬರಬೇಕಾಗಿದೆ. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಬೇಕಾಗಿದೆ. ಶಿಕ್ಷಣದಿಂದ ಬುದ್ಧಿ ಶಕ್ತಿ ಬೆಳೆದರೆ, ಧರ್ಮಾಚರಣೆಯಿಂದ ಭಾವನೆಗಳು ಬೆಳೆಯಲು ಸಾಧ್ಯ. ಬದುಕಿ ಬಾಳುವ ಮನುಷ್ಯನಿಗೆ ಬುದ್ಧಿ-ಭಾವನೆಗಳೆರಡೂ ಬೇಕು. ಜ್ಞಾನ ಕ್ರಿಯಾತ್ಮಕ ಬದುಕಿನೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ಲೋಕೋದ್ಧಾರ ಚಿಂತನೆಗಳನ್ನು ಅರಿತು ಬಾಳಿದರೆ ಜೀವನ ಸಾರ್ಥಕಗೊಳ್ಳುವುದು.

ಈ ಅಪೂರ್ವ ಸುರಗಿ ಪೂಜಾರಾಧನಾ ಸಂದರ್ಭದಲ್ಲಿ ಎಡೆಯೂರು, ಮುಕ್ತಿಮಂದಿರ, ಸುಳ್ಳ, ಮಳಲಿಮಠ, ಕವಲೇದುರ್ಗ, ಮೈಸೂರು, ಸಂಗೊಳ್ಳಿ, ಸಿದ್ಧರಬೆಟ್ಟ, ಹಾರನಹಳ್ಳಿ ಶ್ರೀಗಳು ಮೊದಲ್ಗೊಂಡು ಸುಮಾರು 20ಕ್ಕೂ ಮಿಕ್ಕಿ ಮಠಾಧೀಶರು ಪಾಲ್ಗೊಂಡರು. ಆಗಮಿಸಿದ ಸಹಸ್ರಾರು ಭಕ್ತರು ಭದ್ರಾ ನದಿಯಲ್ಲಿ ಮಂಗಳ ಸ್ನಾನ ಮಾಡಿ ಇಷ್ಟಲಿಂಗಾರ್ಚನೆ ಪೂಜಾ ನೆರವೇರಿಸಿದರು.

ಮಹಿಳೆಯರಿಗೆ ಸಮಾನತೆ ನೀಡಿದ್ದು ಬಸವಣ್ಣನವರು

0
ವಿಜಯಸಾಕ್ಷಿ ಸುದ್ದಿ, ಗದಗ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿ ಸಂಭ್ರಮಿಸುತ್ತಿರುವುದು ಸಂತೋಷ. ಆದರೆ, ಸ್ವಾತಂತ್ರ್ಯ, ಹಕ್ಕು, ಸಮಾನತೆಯನ್ನು ವಿಶ್ವಗುರು ಬಸವಣ್ಣವರು ನಮಗೆ ಅಂದೇ ಕೊಟ್ಟಾಗಿದೆ. ಅಂದಿನಿಂದ ಈ ಸಮಾನತೆಯನ್ನು ನಾವು ಹೆಮ್ಮೆಯಿಂದ ಅನುಭವಿಸುತ್ತಿದ್ದೇವೆ ಎಂದು ನಗರದ ಪ್ರಖ್ಯಾತ ಪ್ರವಚನಕಾರರಾದ ಗಿರಿಜಕ್ಕ ಧರ್ಮರಡ್ಡಿ ನುಡಿದರು.
ಗದಗ ಜಿಲ್ಲಾ ಮಹಿಳಾ ಪತಂಜಲಿ ಯೋಗ ಸಮಿತಿ ಆಶ್ರ‍್ರಯದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಗದಗ ಜಿಲ್ಲಾ ಪತಂಜಲಿ ಯೋಗ ಸಮಿತಿ ಜಿಲ್ಲಾ ಪ್ರಭಾರಿಗಳಾದ ಆಂಜನೇಶ ಮಾನೆ, ಪತಂಜಲಿ ಯೋಗ ಸಮಿತಿ ಖಜಾಂಚಿ ಕೆ.ಎಸ್. ಗುಗ್ಗರಿ, ಹಿರಿಯ ಯೋಗ ಶಿಕ್ಷಕಿ ಬಸಮ್ಮ ಹಡಗಲಿ, ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಮಹಿಳಾ ಪತಂಜಲಿ ಯೋಗ ಸಮಿತಿ ಜಿಲ್ಲಾ ಪ್ರಭಾರಿ ಶೋಭಾ ಗುಗ್ಗರಿ ಮಾತನಾಡಿದರು.ಮಹಿಳಾ ಪತಂಜಲಿ ಯೋಗ ಸಮಿತಿಯಿಂದ ವರದಾನೇಶ್ವರಿ ಮಹಿಳಾ ಸಮಿತಿಯ ಶೈಲಾ ಖೋಡೆಕಲ್ ಹಾಗೂ ಸುರೇಖಾ ಪಿಳ್ಳಿಯವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುನಸಿಪಲ್ ಮೈದಾನದ ಕಕ್ಷೆಯವರು ಯೋಗಾಸನಗಳನ್ನೊಳಗೊಂಡ ನೃತ್ಯ ಪ್ರದರ್ಶನ ಮಾಡಿದರು. ನಾಗರತ್ನಾ ಬಡಿಗಣ್ಣವರ ಹಾಗೂ ಮಧು ಕೋಟಿಯವರು ಬವಿಕೆ ಹಾಡಿಗೆ ಪ್ರಾತ್ಯಕ್ಷಿಕೆಯೊಂದಿಗೆ ಅತ್ಯುತ್ತಮ ನೃತ್ಯ ಪ್ರದರ್ಶನ ಮಾಡಿ ಎಲ್ಲರ ಮನಸೆಳೆದರು. ಬಿ.ಪಿ ಹಾಗೂ ಮಧುಮೇಹಕ್ಕೆ ಸಂಬಂಧಿಸಿದಂತೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಕ್ಷೆಯವರು ನೃತ್ಯ ಪ್ರದರ್ಶನ ಮಾಡಿದರು. ಸ.ಹಿ.ಪ್ರಾ. ಶಾಲೆ ನಂ.4 ಕಕ್ಷೆಯವರು ಅತ್ಯುತ್ತಮ ನೃತ್ಯ ಪ್ರದರ್ಶನದೊಂದಿಗೆ ಜಾನಪದ ಹಾಡನ್ನು ಹಾಡಿದರು. ಸುಧಾ ಕೆರೂರ ತಂಡದವರು ಅತ್ಯುತ್ತದ ನೃತ್ಯ ಪ್ರದರ್ಶನ ಮಾಡಿದರು.
ಅತ್ಯುತ್ತಮ ಯೋಗ ಗೀತೆಯನ್ನು ರಚಿಸಿದ ಸದಾನಂದ ಕಾಮತರನ್ನು ಗೌರವಿಸಲಾಯಿತು. ಸುರೇಖಾ ಪಿಳ್ಳಿ ಪ್ರಾರ್ಥಿಸಿ ಸರ್ವರನ್ನು ಸ್ವಾಗತಿಸಿ ಪರಿಚಯಿಸಿದರು. ರತ್ನಾ ಬಡಿಗಣ್ಣವರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಗದಗದಲ್ಲಿಯ ವಿವಿಧ ಯೋಗ ಕಕ್ಷೆಗಳಿಂದ ಎಲ್ಲ ಯೋಗ ಸಾಧಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಶಾರದಾ ಹಚಡದ ಮಾತನಾಡಿ, ಮಕ್ಕಳಿಗೆ ಮನೆಯಲ್ಲಿಯ ಸಂಸ್ಕೃತಿ ಮುಖ್ಯವಾಗುತ್ತೆ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ದೊರೆತರೆ ಒಳ್ಳೆಯ ಪ್ರಜೆಗಳಾಗುತ್ತಾರೆ. ಮಕ್ಕಳನ್ನು ತಿದ್ದಿ ಮೂರ್ತಿ ಮಾಡುವ ಕೆಲಸ ಶಿಕ್ಷಕರದ್ದಾಗಿರುತ್ತದೆ ಎಂದರು.

ಲಕ್ಷ್ಮೇಶ್ವರದಲ್ಲಿ ರಂಗಪಂಚಮಿ ಗೊಂದಲ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಗೊಜನೂರ, ಪು.ಬಡ್ನಿ, ಸೂರಣಗಿ ಮತ್ತು ಸೋಗಿವಾಳ ಗ್ರಾಮದಲ್ಲಿ ಮಂಗಳವಾರ ರಂಗಿನೋಕುಳಿ ಹಬ್ಬ ಆಚರಿಸಲಾಯಿತು. ಗೊಜನೂರ ಗ್ರಾಮದಲ್ಲಿ ಎತ್ತಿನ ಬಂಡಿಯಲ್ಲಿ ಕಾಮರತಿ ಮೂರ್ತಿ ಮೆರವಣಿಗೆಯನ್ನು ಹಲಗೆ ಬಡಿಯುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. ಸುಡು ಬಿಸಿಲನ್ನೂ ಲೆಕ್ಕಿಸದೇ ಚಿಣ್ಣರು ಬಣ್ಣದಾಟದಲ್ಲಿ ಮಿಂದೆದ್ದರು.

ಲಕ್ಷ್ಮೇಶ್ವರದಲ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆ ನೀಡಿದ್ದರು. ಆದರೆ ಪಟ್ಟಣದಲ್ಲಿ ಕಾಮರತಿ ಮೂರ್ತಿ ಪ್ರತಿಷ್ಠಾಪನೆಯ ಸಂಘಟಕರು, ಯುವಕರು, ಹಿರಿಯರು ಶುಕ್ರವಾರವೇ ರಂಗಪಂಚಮಿ ಆಚಣೆಯಾಗಬೇಕು, ಸೋಮವಾರ ಪಟ್ಟಣದಲ್ಲಿ ಕಾಮರತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಶುಕ್ರವಾರ 5ನೇ ದಿನ ರಂಗಪಂಚಮಿ ಆಚರಿಸಲೇಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿಗಳ ಪ್ರಕಟಣೆಗೆ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಾಧಿಕಾರಿ ಮಹೇಶ ಹಡಪದ, ಶುಕ್ರವಾರ ವಾರದ ಸಂತೆ ಇರುವುದರಿಂದ ಗ್ರಾಮೀಣ ಜನರಿಗೆ, ವ್ಯಾಪಾರ-ವಹಿವಾಟಿಗೆ ತೊಂದರೆಯಾಗಬಾರದೆಂಬ ಸದುದ್ದೇಶದಿಂದ ಪ್ರಮುಖರೊಂದಿಗೆ ಚರ್ಚಿಸಿ ಶನಿವಾರ ಆಚರಣೆ ಮಾಡುವುದಾಗಿ ತಿಳಿಸಲಾಗಿತ್ತು. ಶುಕ್ರವಾರವೇ ರಂಗಪAಚಮಿ ಆಚರಿಸುವ ಬಗ್ಗೆ ತಹಸೀಲ್ದಾರ, ಪೊಲೀಸ್ ಮತ್ತು ಪಟ್ಟಣದ ಹಿರಿಯರು, ಜನಪ್ರತಿನಿದಿಗಳು, ಸಂಘಟಕರೊAದಿಗೆ ಚರ್ಚಿಸಿ ಸೂಕ್ತ ಒಮ್ಮತದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದರು.

ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ರೋಣ ತಾಲೂಕಿನ ಜೆಡಿಎಸ್ ಅಧ್ಯಕ್ಷರಾಗಿ ಶಿವಕುಮಾರ ಶಿರಹಟ್ಟಿ ನೇಮಕಗೊಂಡಿದ್ದಾರೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವೈ. ಮುಧೋಳ ಈ ನೇಮಕಾತಿಯನ್ನು ಮಾಡಿದ್ದು, ಸೋಮವಾರ ಕೋಡಿಕೊಪ್ಪದ ಜೆಡಿಎಸ್ ಕಚೇರಿಯಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಧೋಳ, ಜೆಡಿಎಸ್ ಪಕ್ಷದ ರಾಷ್ಟಾçಧ್ಯಕ್ಷ ಎಚ್.ಡಿ. ದೇವೇಗೌಡರ ಬಡವರ ಹಿತವನ್ನು ಕಾಯುತ್ತ ಬಂದಿದ್ದಾರೆ. ಈ ಪಕ್ಷದಲ್ಲಿ ಯುವಕರಿಗೆ ಒಳ್ಳೆಯ ಭವಿಷ್ಯವಿದೆ. ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಎಂದಿಗೂ ಯುವಕರನ್ನು ಪ್ರೋತ್ಸಾಹಿಸುತ್ತ ಬಂದಿದ್ದಾರೆ. ರೋಣ ತಾಲೂಕಿಗೆ ನೇಮಕಗೊಂಡಿರುವ ಎಲ್ಲ ಪದಾಧಿಕಾರಿಗಳು ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡಿ ಪಕ್ಷವನ್ನು ಬಲಪಡಿಸಬೇಕೆಂದು ತಿಳಿಸಿದರು.

ವರಿಷ್ಠ ಮಂಡಳಿಯ ಆದೇಶದ ಮೇರೆಗೆ ನಾವು ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿಯವರನ್ನು ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಪಿ.ಸಿ. ಗದ್ದಿಗೌಡರ ಅವರನ್ನು ಗೆಲ್ಲಿಸಲೇ ಬೇಕಾದ ಕಾರ್ಯ ವಹಿಸಿದ್ದಾರೆ. ಈ ಮೂಲಕ ಈ ಸಾರೆಯೂ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಲು ಅನುವು ಮಾಡಿಕೊಡಬೇಕೆಂದು ತಿಳಿಸಿದ್ದಾರೆ. ಈ ದಿಶೆಯಲ್ಲಿಯೂ ನಿಮ್ಮ ಕಾರ್ಯ ಚುರುಕಿನಿಂದ ಸಾಗಬೇಕಿದ್ದು, ಬಿಜೆಪಿ ಕಾರ್ಯಕರ್ತರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಈರ್ವರೂ ಅಭ್ಯರ್ಥಿಗಳ ಜಯಕ್ಕೆ ಕಾರಣರಾಗಬೇಕೆಂದು ಮುಧೋಳ ನೂತನ ಪದಾಧಿಕಾರಿಗಳಿಗೆ ತಿಳಿಸಿದರು.

ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಎಸ್.ಸಿ. ಘಟಕದ ಅಧ್ಯಕ್ಷ ರಘು ಕಟ್ಟಿಮನಿ, ಸಂಘಟನಾ ಕಾರ್ಯದರ್ಶಿ ಪರಶುರಾಮ ವಾಲ್ಮೀಕಿ, ತಾಲೂಕಾ ಯುವ ಘಟಕದ ಅಧ್ಯಕ್ಷ ವೀರೇಶ ಆರಾಧ್ಯಮಠ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ವೀರಪ್ಪ ಜಿರ್ಲ, ಗಜೇಂದ್ರಗಡ ತಾಲೂಕಾ ಉಪಾಧ್ಯಕ್ಷ ರಕ್ಷಿತಗೌಡ ಪಾಟೀಲ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಬಾದಶಹಾ ಬಾಗವಾನ, ಕೊಚಲಾಪುರ ಗ್ರಾಮ ಅಧ್ಯಕ್ಷ ಬುಡ್ಡಾಸಾಹೇಬ ಚಕೇರಿ, ನರೇಗಲ್ಲ ಹೋಬಳಿ ಅಧ್ಯಕ್ಷ ಯಲ್ಲಪ್ಪ ಹೊಸಮನಿ, ಕಾರ್ಯಾಧ್ಯಕ್ಷ ಅಶೋಕ ಬೆಟಗೇರಿ, ರೋಣ ತಾಲೂಕಾ ಸಂಘಟನಾ ಕಾರ್ಯದರ್ಶಿ ಹಾಲಪ್ಪ ಮರಲಿಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.

ತಾಲೂಕಾ ಅಧ್ಯಕ್ಷ ಶಿವಕುಮಾರ ಶಿರಹಟ್ಟಿ ಮಾತನಾಡಿ, ನಿಮ್ಮ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಯುವಕರನ್ನು ಕರೆ ತಂದು ಪಕ್ಷಕ್ಕೆ ಬಲ ತುಂಬುತ್ತೇವೆ ಎಂದರು.

ಕನ್ನಡ ವಿಧೇಯಕ ಕಟ್ಟುನಿಟ್ಟಾಗಿ ಜಾರಿಗೊಳಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಜಾರಿಗೊಳಿಸಿ ಎಲ್ಲಾ ವರ್ತಕರು ತಮ್ಮ ತಮ್ಮ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60ರಷ್ಟು ಕನ್ನಡವನ್ನು ಬಳಸಬೇಕು ಎಂದು ವಿಧೇಯಕವನ್ನು ಜಾರಿಗೊಳಿಸಿದೆ. ಗದಗ ತಾಲೂಕಿನಲ್ಲಿ ಸದರಿ ವಿಧೇಯಕ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗದಗ ತಾಲೂಕು ಘಟಕದ ವತಿಯಿಂದ ಗದಗ ತಹಸೀಲ್ದಾರರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗದಗ ತಾಲೂಕು ಘಟಕದ ಅಧ್ಯಕ್ಷ ದಾವಲಸಾಬ ಎಂ.ತಹಸೀಲ್ದಾರ, ಪ್ರಧಾನ ಕಾರ್ಯದರ್ಶಿ ಮಹಾಂತೇಶ ನಡಗೇರಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಮೇಟಿ, ಮುಖಂಡರಾದ ವಿನಾಯಕ ಬದಿ, ತೌಸಿಫ ಢಾಲಾಯತ, ಹುಸೇನ ಅಕ್ಕಿ, ಸಲೀಮ ಶಿರವಾರ, ಇಸಾಕ ನದಾಫ, ಮುಬಾರಕ ಮುಲ್ಲಾ, ಆಝಾದ ನಾಗನೂರ, ಯಲ್ಲೇಶ ಬಳ್ಳಾರಿ, ಸದ್ದಾಂ ಹುಸೇನ ತಹಸೀಲ್ದಾರ, ಶಬ್ಬೀರ ಹಂಜಗಿ, ಗೌಸುಸಾಬ ಶಿರಹಟ್ಟಿ, ರವಿ ಮಲ್ಲಾಡ, ಇಮ್ರಾನ್ ಮುಂತಾದವರು ಉಪಸ್ಥಿತರಿದ್ದರು.

ಶರಣರ ಬದುಕು ಜೀವಜಲವಾಗಲಿ

0

ವಿಜಯಸಾಕ್ಷಿ ಸುದ್ದಿ, ಗದಗ : ಮಂದಿರ, ಮಸೀದಿ, ಚರ್ಚ್ಗಳನ್ನು ಕಟ್ಟಿದರೆ ನಾಳೆ ಅವು ಬೀಳುತ್ತವೆ. ಬಿದ್ದ ಮೇಲೆ ಅವುಗಳನ್ನು ಮೊದಲಿಗಿಂತ ಚೆನ್ನಾಗಿ ಮರು ನಿರ್ಮಿಸಬಹುದು. ಆದರೆ, ಮಾನವನಲ್ಲಿರುವ ಮಾನವೀಯತೆಯ ಮಂದಿರ ಬಿದ್ದರೆ ಅದನ್ನು ಮತ್ತೆ ಕಟ್ಟಲು ಸಾಧ್ಯವಿಲ್ಲ ಎಂದು ಓಂಕಾರೇಶ್ವರ ಶ್ರೀಮಠದ ಪೂಜ್ಯಶ್ರೀ ಫಕ್ಕೀರೇಶ್ವರ ಶಿವಾಚಾರ್ಯರ ಮಹಾಸ್ವಾಮೀಜಿ ಹೇಳಿದರು.

ಅವರು ಗದಗ ತಾಲೂಕಿನ ಕಳಸಾಪುರ ಗ್ರಾಮದ ಈಶ್ವರ ದೇವರ ಹಾಗೂ ಬಸವಣ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಶಿವಶರಣೆ ಗುಡ್ಡಾಪುರ ದಾನಮ್ಮದೇವಿ ಪುರಾಣ ಪ್ರವಚನ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾನವೀಯತೆ ಅನ್ನುವ ಮಂದಿರವೇ ಶ್ರೇಷ್ಠ ಮಂದಿರವಾಗಬೇಕು. ಜಾತಿಯಿಂದ ದೂರ ಇದ್ದು ನೀತಿಯಿಂದ ಬಾಳಬೇಕು. ಅಂತೆಯೇ ಶರಣ-ಶರಣೆಯರು ಹಾಗೆಯೇ ಬದುಕಿದರು. ಅಂತವರ ಜೀವನ, ಅವರ ಬದುಕು ನಮ್ಮ ಜೀವನಕ್ಕೆ ಜೀವಜಲವಾದಾಗ ಅಂತರಂಗದ ದೀಪ ಬೆಳಗುತ್ತದೆ. ದಾನಮ್ಮ ದೇವಿಯ ಜೀವನ ದರ್ಶನ ಪ್ರವಚನ ಕೇಳಿ ಎಲ್ಲರೂ ಕೂಡ ಶರಣರಾಗಲು ಸಾಧ್ಯವೆಂದು ಹೇಳಿದರು.

ಪ್ರವಚನಕಾರ ಶಿವಲಿಂಗಯ್ಯಶಾಸ್ತ್ರೀ ಸಿದ್ದಾಪುರವರು ಮಾತನಾಡಿ, ಗುಡ್ಡಾಪುರದ ದಾನಮ್ಮ ದೇವಿಯ ಪ್ರವಚನದಲ್ಲಿ ಮನುಷ್ಯ ಜೀವನದಲ್ಲಿ ಬದುಕಿಗೆ ಬೆಳಕಾಗುವಂತಹ ಎರಡು ಒಳ್ಳೆಯ ಮಾತನ್ನು ಕೇಳಬೇಕು.

ರಾಮಕೃಷ್ಣ ಪರಮಹಂಸರ ಸಂಘದಿಂದ, ಅವರ ಒಳ್ಳೆಯ ಮಾತಿನಿಂದ ನರೇಂದ್ರಸ್ವಾಮಿ ವಿವೇಕಾನಂದರಾದರು. ಅಂತೆಯೇ ಗುರುಗೋವಿಂದರ ಮಾತಿನಿಂದ ಷರೀಫ್ ಸಾಹೇಬರು ಶಿವಯೋಗಿಯಾದರು. ಹಾನಗಲ್ ಕುಮಾರ ಶಿವಯೋಗಿಯವರ ಮಾತಿನಿಂದ ಪಂ.ಪಂಚಾಕ್ಷರಿ ಗವಾಯಿಗಳು ಪ್ರಪಂಚದ ಅಂಧ-ಅನಾಥ, ದೀನ-ದಲಿತರ ಮಕ್ಕಳಿಗೆ ಸಂಗೀತ ವಿದ್ಯೆಯನ್ನು ಧಾರೆ ಎರೆದು ಅವರ ಬಾಳ ಬೆಳಗಿ ಸಂಗೀತ ಲೋಕದ ಋಷಿಯಾದರು. ಹಾಗೆ ದಾನಮ್ಮದೇವಿ, ಗುರು ಶಾಂತವೀರ ಮಹಾಸ್ವಾಮಿಗಳ ಸೇವೆ ಮಾಡಿ ಅವರ ಎರಡು ಮಾತಿನಿಂದ ಶರಣೆ ಆದರು ಎಂದರು.

ಕಲಬುರಗಿಯ ಸಂಗಮೇಶ್ವರ ಗವಾಯಿ ಪಾಟೀಲ ಅವರಿಂದ ಸಂಗೀತ ಸೇವೆ ಜರುಗಿತು. ತೋಂಟದಾರ್ಯ ಕರಡಿಕಲ್ ತಬಲಾ ಸಾಥ್ ನೀಡಿದರು. ವೇದಿಕೆ ಮೇಲೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು, ಗುರು-ಹಿರಿಯರು ಉಪಸ್ಥಿತರಿದ್ದರು.

ದಾನಮ್ಮನ ಬದುಕಿನ ಧ್ಯಾನದ ಬೆಳಕು ನಮ್ಮೆಲ್ಲರ ಹೃದಯಗಳನ್ನು ಬೆಳಗುವಂತಾಗಲಿ. ನಿತ್ಯ ನಡೆಯುವ ಪ್ರವಚನ ಕೇಳಿ ನಮ್ಮ ಮನಸ್ಸಿನ ಪಾಪಗಳು ಸುಟ್ಟು ಹೋಗುತ್ತವೆ. ಅಕ್ಕಮಹಾದೇವಿ ಒಳ್ಳೆಯ ಮಾತುಗಳು ಹೇಳುವಂತವರ ಸಂಗವನ್ನೇ ಕರುಣಿಸು ಚೆನ್ನಮಲ್ಲಿಕಾರ್ಜುನ ಎಂದು ಪ್ರಾರ್ಥನೆ ಮಾಡಿದ್ದಾಳೆ. ಅಕ್ಕಮಹಾದೇವಿಯಂತೆ ನಮ್ಮೆಲ್ಲರ ಜೀವನ ಆಗಲಿ ಎಂದು ಪ್ರವಚನಕಾರ ಶಿವಲಿಂಗಯ್ಯಶಾಸ್ತಿç ಸಿದ್ದಾಪುರ ಆಶಯ ವ್ಯಕ್ತಪಡಿಸಿದರು.

ಸಂಭ್ರಮದ ಹೋಳಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದಲ್ಲಿ ಸೋಮವಾರ ಕಾಮಣ್ಣ ಹಾಗೂ ರತಿದೇವಿಯ ಮೂರ್ತಿಗಳನ್ನು ವಿಶೇಷ ಪೂಜಾ ಕೈಂಕರ್ಯ ನಂತರ ಮಂಗಳವಾರ ಬೆಳಗಿನ ಜಾವ 5 ಗಂಟೆಗೆ ಕಾಮ ದಹನದ ಜರುಗಿತು.

ಪಟ್ಟಣದ ನಾಗರಿಕರು ಬೆಳಿಗ್ಗೆಯಿಂದ ಬಣ್ಣದಾಟದಲ್ಲಿ ತೊಡಗಿದ್ದರು. ಮಹಿಳೆಯರು, ಹಿರಿಯ ನಾಗರಿಕರು ತಮ್ಮ ತಮ್ಮ ಓಣಿಯಲ್ಲಿ ಒಬ್ಬರಿಗೊಬ್ಬರು ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಿದರು.

ಪಟ್ಟಣದ ಚಿಂದಿಪೇಟಿ ಓಣಿಯಲ್ಲಿ ವಾಹನದಲ್ಲಿ ಕಾಮನ ಪ್ರತಿಕೃತಿ ನಿರ್ಮಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಗ್ಗಹಲಗಿ ಬಾರಿಸುತ್ತಾ ಪರಸ್ಪರ ಬಣ್ಣವನ್ನು ಹಚ್ಚುತ್ತಾ, ಮೇರವಣಿಗೆ ಉದ್ದಕ್ಕೂ ಮಕ್ಕಳು ರಗ್ಗಹಲಗಿ ನಾದಕ್ಕೆ ಹೆಜ್ಜೆ ಹಾಕಿದರು.

error: Content is protected !!