Home Blog Page 2

ಅಂತರಘಟ್ಟಮ್ಮನ ಜಾತ್ರೆ ವೇಳೆ ಅವಘಡ; ರಥಕ್ಕೆ ಡಿಕ್ಕಿ ಹೊಡೆದ ಎತ್ತಿನಗಾಡಿ- ಇಬ್ಬರು ಗಂಭೀರ

0

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಡೆದ ಅಂತರಘಟ್ಟಮ್ಮನ ಜಾತ್ರೆ ವೇಳೆ ಅವಘಡ ಸಂಭವಿಸಿವೆ.

ರಥೋತ್ಸವದ ನಂತರ ಸಂಪ್ರದಾಯದಂತೆ ನಡೆಯುವ ಪಾನಕದ ಎತ್ತಿನಗಾಡಿಗಳ ಓಟದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಎತ್ತಿನಗಾಡಿಗಳು ಜನಸಂದಣಿಯೊಳಗೆ ನುಗ್ಗಿದವು. ಈ ವೇಳೆ ಒಂದು ಎತ್ತಿನಗಾಡಿ ರಥಕ್ಕೆ ಡಿಕ್ಕಿ ಹೊಡೆದಿದ್ದು, ಅಡ್ಡ ಬಂದ ವ್ಯಕ್ತಿಗೂ ಡಿಕ್ಕಿ ಸಂಭವಿಸಿದೆ. ಅಲ್ಲದೇ ವ್ಯಕ್ತಿಯೊಬ್ಬರು ಎತ್ತಿನಗಾಡಿಯ ಚಕ್ರಕ್ಕೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೀರೂರು ನಿವಾಸಿ ಚಂದ್ರಶೇಖರ್ (50) ಅವರಿಗೆ ಕಾಲು ಹಾಗೂ ಸೊಂಟ ಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಜಾತ್ರೆ ವೇಳೆ ಉಂಟಾದ ಈ ಅವಘಡಗಳು ಜನರಲ್ಲಿ ಆತಂಕ ಮೂಡಿಸಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ನಟಿ ಕಾವ್ಯ ಗೌಡ ಪ್ರಕರಣದಲ್ಲಿ ಹೊಸ ತಿರುವು: ಪತಿ ಸೋಮಶೇಖರ್‌ಗೆ ಎದುರಾಗುತ್ತಾ ಸಂಕಷ್ಟ?

ನಟಿ ಕಾವ್ಯ ಗೌಡ ಹಾಗೂ ಪ್ರೇಮಾ ಕುಟುಂಬದ ನಡುವಿನ ಕೌಟುಂಬಿಕ ಕಲಹ ಇದೀಗ ಕಾನೂನು ಹಾದಿಯಲ್ಲಿ ತೀವ್ರ ಸ್ವರೂಪ ಪಡೆದಿದೆ. ರಾಮಮೂರ್ತಿನಗರ ಪೊಲೀಸರು ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಸತ್ಯಾಸತ್ಯತೆ ತಿಳಿಯಲು ಸಾಕ್ಷ್ಯಗಳ ಬೆನ್ನತ್ತಿದ್ದಾರೆ.

ಪೊಲೀಸರಿಗೆ ದೊರಕಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ನಟಿ ಕಾವ್ಯ ಗೌಡ ಹಾಗೂ ಅವರ ಪತಿ ಸೋಮಶೇಖರ್ ವಿರುದ್ಧವೇ ಹೆಚ್ಚು ಪುರಾವೆಗಳು ಲಭ್ಯವಾಗುತ್ತಿರುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.

ಕಾವ್ಯ ಗೌಡ ತಮ್ಮ ಮೇಲೆ ಚಾಕು ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದರೂ, ಇದಕ್ಕೆ ಸಂಬಂಧಿಸಿದ ಯಾವುದೇ ದೃಢ ಸಾಕ್ಷ್ಯಗಳು ಸದ್ಯ ಪತ್ತೆಯಾಗಿಲ್ಲ. ಚಾಕುವೂ ವಶಕ್ಕೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ, ಆರೋಪಗಳನ್ನು ಸಮರ್ಥಿಸಲು ಪುರಾವೆ ನೀಡುವಂತೆ ಪೊಲೀಸರು ಸೂಚಿಸಿದ್ದಾರೆ.

ಇತ್ತ, ಪ್ರೇಮಾ ಅವರು ಪೊಲೀಸರಿಗೆ ಸಲ್ಲಿಸಿರುವ ವಿಡಿಯೋ ಮತ್ತು ಫೋಟೋ ಪುರಾವೆಗಳು ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.  ನಟಿಯ ಮನೆಗೆ ಭೇಟಿ ನೀಡಿ ಸ್ಥಳ ಮಹಜರು, ಸಿಸಿಟಿವಿ ದೃಶ್ಯಗಳ ವಶಪಡಿಕೆ ಮತ್ತು ಪರಿಶೀಲನೆ, ಮನೆ ಸಿಬ್ಬಂದಿಗಳ ವಿಚಾರಣೆ, ಸೋಮಶೇಖರ್ ಆರೋಗ್ಯ ಸುಧಾರಿಸಿದ ನಂತರ ವಿಚಾರಣೆ ನಡೆಸಲಿದ್ದಾರೆ.

ಒಟ್ಟಿನಲ್ಲಿ, ಈ ಪ್ರಕರಣ ಇದೀಗ ಕೇವಲ ಕುಟುಂಬ ಕಲಹವಾಗಿಲ್ಲ; ಇದು ಕಾನೂನು ಮತ್ತು ಪುರಾವೆಗಳ ಆಧಾರದ ಮೇಲೆ ನಿರ್ಣಯಗೊಳ್ಳುವ ಗಂಭೀರ ಪ್ರಕರಣವಾಗಿ ಮಾರ್ಪಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಫೋಟಕ ಸಂಗತಿಗಳು ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.

6 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ಇಬ್ಬರು ಅಪ್ರಾಪ್ತರು ಅರೆಸ್ಟ್, ಮತ್ತೊಬ್ಬನಿಗಾಗಿ ಶೋಧ

0

ನವದೆಹಲಿ: ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಜನವರಿ 18ರಂದು ಈ ಘಟನೆ ನಡೆದಿದ್ದು, ಬಳಿಕ ಬಾಲಕಿಯ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಿದೆ. ಪೊಲೀಸರ ಮಾಹಿತಿ ಪ್ರಕಾರ, ಮೂವರು ಬಾಲಕರು ಬಾಲಕಿಯನ್ನು ಆಮಿಷವೊಡ್ಡಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೂರನೇ ಆರೋಪಿ ಪರಾರಿಯಾಗಿದ್ದಾನೆ. ಪರಾರಿಯಾದ ಆರೋಪಿಯ ಕುಟುಂಬವೂ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಬಂಧಿತ ಇಬ್ಬರನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅಗತ್ಯ ಚಿಕಿತ್ಸೆಯ ಜೊತೆಗೆ ಸಮಾಲೋಚನೆ ವ್ಯವಸ್ಥೆ ಮಾಡಲಾಗಿದೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ. ಮೂರನೇ ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ಶೋಧ ತಂಡ ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಪರಾರಿಯಾದ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ವಿರುದ್ಧ ಕಠಿಣ ಕಾನೂನುಗಳಿದ್ದರೂ, ಇಂತಹ ಘಟನೆಗಳು ಮರುಮರು ನಡೆಯುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ.

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ನಟನ ಹೆಸರು

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟ ಇಂದು ಕೇವಲ ಮನರಂಜನಾ ಲೋಕದ ವ್ಯಕ್ತಿಯಾಗಿಲ್ಲ. ಅವರ ಹೆಸರು ಈಗ ರಾಜಕೀಯ ಚರ್ಚೆಗಳಲ್ಲೂ ಕೇಳಿಬರುತ್ತಿದೆ. ರಾಜ್ಯದ ವಿಶೇಷ ಅಧಿವೇಶನದಲ್ಲಿ ಗಿಲ್ಲಿ ಹೆಸರು ಪ್ರಸ್ತಾಪವಾಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಶಾಸಕ ಪ್ರದೀಪ್ ಈಶ್ವರ್, ಗಿಲ್ಲಿ ಪಡೆದ ಬಹುಮಾನವನ್ನು ಉದಾಹರಣೆಯಾಗಿ ತೆಗೆದುಕೊಂಡು ಕೇಂದ್ರ ಸರ್ಕಾರದ ತೆರಿಗೆ ವ್ಯವಸ್ಥೆಯನ್ನು ಟೀಕಿಸಿದರು.
“50 ಲಕ್ಷ ಗೆದ್ದ ಗಿಲ್ಲಿಗೆ ಸಿಗುವ ಹಣ ಕಡಿಮೆ. ಬಹುತೇಕ ಹಣ ತೆರಿಗೆಯಾಗಿ ಹೋಗುತ್ತದೆ. ನಿಜವಾದ ವಿನ್ನರ್ ನಿರ್ಮಲಾ ಸೀತಾರಾಮನ್” ಎಂಬ ಅವರ ಹೇಳಿಕೆ ಸದನದಲ್ಲಿ ಚರ್ಚೆಗೆ ಕಾರಣವಾಯಿತು.

ಗಿಲ್ಲಿಗೆ ದೊರೆತ ಬಹುಮಾನಗಳ ವಿವರ ನೋಡಿದರೆ, ಬಿಗ್ ಬಾಸ್ ಶೋದಿಂದ 50 ಲಕ್ಷ ರೂ. ಸುದೀಪ್ ಅವರಿಂದ 10 ಲಕ್ಷ ರೂ. ಮಾರುತಿ ಸುಜುಕಿಯಿಂದ ವಿಕ್ಟೋರಿಸ್ ಕಾರು ಇವೆಲ್ಲವೂ ಅವರ ಗೆಲುವಿನ ಮಹತ್ವವನ್ನು ತೋರಿಸುತ್ತದೆ.

ತೆರಿಗೆಯ ಲೆಕ್ಕಾಚಾರದಲ್ಲಿ ಪ್ರದೀಪ್ ಈಶ್ವರ್ 52% ತೆರಿಗೆ ಎಂದು ಹೇಳಿದ್ದರೆ, ಕೆಲವರು ಇದನ್ನು ಅತಿಶಯೋಕ್ತಿ ಎಂದು ಟೀಕಿಸುತ್ತಿದ್ದಾರೆ. ವಾಸ್ತವದಲ್ಲಿ ತೆರಿಗೆ ಶೇಕಡಾ 40–50ರೊಳಗೆ ಇರಬಹುದು ಎಂಬ ವಾದವೂ ಕೇಳಿಬರುತ್ತಿದೆ.

ಗಿಲ್ಲಿ ನಟ ತಮ್ಮ ಹಾಸ್ಯ, ಸರಳ ವ್ಯಕ್ತಿತ್ವ ಮತ್ತು ಪ್ರಾಮಾಣಿಕತೆಯಿಂದ ಜನರ ಮನ ಗೆದ್ದಿದ್ದಾರೆ. ಬಿಗ್ ಬಾಸ್ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಅಭಿಮಾನಿಗಳ ಭಾರೀ ಬೆಂಬಲ ಅವರಿಗೆ ದೊರೆಯುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ, ಗಿಲ್ಲಿ ನಟ ಇಂದು ಕೇವಲ ಬಿಗ್ ಬಾಸ್ ವಿನ್ನರ್ ಅಲ್ಲ — ಅವರು ರಾಜ್ಯಮಟ್ಟದ ಚರ್ಚೆಯ ವಿಷಯವಾಗಿದ್ದಾರೆ. ಮನರಂಜನೆಯಿಂದ ಆರಂಭವಾದ ಅವರ ಪಯಣ ಇದೀಗ ರಾಜಕೀಯ ವೇದಿಕೆಯವರೆಗೂ ತಲುಪಿದೆ.

ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್: ಕೋಟ್ಯಂತರ ಅಭಿಮಾನಿಗಳಿಗೆ ಬಿಗ್ ಶಾಕ್

ಸಂಗೀತ ಲೋಕದ ಸೂಪರ್‌ಸ್ಟಾರ್ ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ ಮೂಲಕ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. ಅನೇಕ ಸೂಪರ್ ಹಿಟ್ ಹಾಡುಗಳ ಮೂಲಕ ಸಂಗೀತ ಲೋಕದಲ್ಲಿ ಅಚ್ಚಳಿಯದ ಗುರುತು ಮೂಡಿಸಿರುವ ಅರಿಜಿತ್, ಈಗ ಹಿನ್ನೆಲೆ ಗಾಯನದಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದ್ದಾರೆ.

ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ಈ ಪ್ರಯಾಣ ಅದ್ಭುತವಾಗಿತ್ತು. ಕೇಳುಗರಾಗಿ ನನಗೆ ನೀಡಿದ ಪ್ರೀತಿಗೆ ನಾನು ಸದಾ ಋಣಿಯಾಗಿದ್ದೇನೆ. ಇನ್ನು ಮುಂದೆ ಹೊಸ ಹಿನ್ನೆಲೆ ಗಾಯನ ಕೆಲಸಗಳನ್ನು ಸ್ವೀಕರಿಸುವುದಿಲ್ಲ”
ಎಂದು ಹೇಳಿದ್ದಾರೆ.

ಆದರೆ ಸಂಗೀತವನ್ನು ಸಂಪೂರ್ಣವಾಗಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇನ್ನಷ್ಟು ಕಲಿಯಬೇಕು, ಚಿಕ್ಕ ಕಲಾವಿದನಾಗಿ ಹೊಸ ಪ್ರಯತ್ನಗಳನ್ನು ಮುಂದುವರಿಸಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಒಪ್ಪಿಕೊಂಡಿರುವ ಹಾಡುಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

ಕನ್ನಡದ ‘ಮೌನ ತಾಳಿತೆ..’ ಸೇರಿದಂತೆ ಹಲವು ಭಾಷೆಗಳ ಹಾಡುಗಳ ಮೂಲಕ ಬಹುಭಾಷಾ ಅಭಿಮಾನಿಗಳನ್ನು ಸಂಪಾದಿಸಿರುವ ಅರಿಜಿತ್, ಈ ನಿರ್ಧಾರಕ್ಕೆ ಕಾರಣವೇನು ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಭಾವುಕರಾಗಿ ಪ್ರತಿಕ್ರಿಯಿಸುತ್ತಿದ್ದು, “ಈ ನಿರ್ಧಾರ ಹಿಂತೆಗೆದುಕೊಳ್ಳಲಿ” ಎಂಬ ಆಶಯ ವ್ಯಕ್ತಪಡಿಸುತ್ತಿದ್ದಾರೆ.

ಲ್ಯಾಂಡಿಂಗ್ ವೇಳೆ ವಿಮಾನ ಪತನ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು!

0

ಮುಂಬೈ:- ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಭೀಕರವಾಗಿ ಪತನಗೊಂಡಿದೆ.

ಈ ದುರ್ಘಟನೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಮಂದಿ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮೂಲಗಳು ದೃಢಪಡಿಸಿವೆ. ಘಟನೆ ನಡೆದ ತಕ್ಷಣವೇ ರಕ್ಷಣಾ ಹಾಗೂ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ (ಎಮರ್ಜೆನ್ಸಿ ಲ್ಯಾಂಡಿಂಗ್) ಮಾಡಲು ಪ್ರಯತ್ನಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ವಿಮಾನ ಪತನಕ್ಕೆ ತಾಂತ್ರಿಕ ದೋಷ ಅಥವಾ ಇಳಿಯುವ ವೇಳೆ ಉಂಟಾದ ಅಡಚಣೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸುದ್ದಿಯಿಂದ ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ತೀವ್ರ ಆಘಾತ ಉಂಟಾಗಿದ್ದು, ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ವ್ಯಾಪಕ ಸಂತಾಪ ವ್ಯಕ್ತವಾಗುತ್ತಿದೆ.

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಶುರು; ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ!

0

ನವದೆಹಲಿ: 2026-27ರ ಆರ್ಥಿಕ ವರ್ಷದ ಕೇಂದ್ರ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ.

ಇಂದಿನಿಂದ ಸಂಸತ್ತಿನಲ್ಲಿ ಕೇಂದ್ರ ಬಜೆಟ್‌ ಅಧಿವೇಶನವು ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಅಧಿವೇಶನವು ಎರಡು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡಿಸಲಿದ್ದಾರೆ. ಅವರ ಬಜೆಟ್‌ ಮಂಡನೆಯೊಂದಿಗೆ ಫೆಬ್ರವರಿ 13 ರವರೆಗೆ ಮೊದಲ ಹಂತದ ಅಧಿವೇಶನ ನಡೆಯಲಿದೆ.

ಬಳಿಕ ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ಎರಡನೇ ಹಂತದ ಅಧಿವೇಶನ ನಡೆಯಲಿದೆ. ಎರಡನೇ ಹಂತದ ವೇಳೆ ಬಜೆಟ್‌ ಕುರಿತು ಗಂಭೀರ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಅಧಿವೇಶನದ ಸಮಯದಲ್ಲಿ ಮನರೇಗಾ ಮತ್ತು ಎಸ್‌ಐಆರ್‌ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ವಿರೋಧ ಪಕ್ಷಗಳು ಸಜ್ಜಾಗಿವೆ ಎಂದು ವರದಿಯಾಗಿದೆ.

ದೇಶಾದ್ಯಂತ ಮನರೇಗಾ ಬದಲಾವಣೆಗೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ಸಂಸದರು, ‘ಕಾಂಗ್ರೆಸ್ ಸಂಸದೀಯ ಸಮಿತಿ’ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ.

“ಗಿಲ್ಲಿ ವಿಚಾರದಲ್ಲಿ ಮತ್ತೆ ಸತೀಶ್ ವಿವಾದ: ‘ನಶೆಯಲ್ಲಿ ಹೇಳಿದ್ದೆ’ ಎಂದು ಕೈ ತೊಳೆದುಕೊಂಡ ಡಾಗ್ ಬ್ರೀಡರ್”

ಡಾಗ್ ಬ್ರೀಡರ್ ಸತೀಶ್ ಕ್ಯಾಡಬಾಮ್ ಎಲ್ಲೆಂದರಲ್ಲಿ ಮಾತನಾಡುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಟಿವಿ ಡಿಬೇಟ್‌ಗಳಿಂದ ಹಿಡಿದು ಯೂಟ್ಯೂಬ್ ಸಂದರ್ಶನಗಳವರೆಗೆ, ಪ್ರತಿಯೊಂದು ವೇದಿಕೆಯಲ್ಲೂ ತಮ್ಮ ಹೇಳಿಕೆಗಳಿಂದಲೇ ಸುದ್ದಿ ಆಗುತ್ತಿದ್ದಾರೆ. ಇದೀಗ ‘ಗಿಲ್ಲಿ ಗೆಲ್ಲಲ್ಲ’ ಹೇಳಿಕೆ ಕುರಿತು ಹೊಸ ಸ್ಪಷ್ಟನೆ ನೀಡಿದ್ದಾರೆ.

ಗಿಲ್ಲಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದ ಸತೀಶ್, ‘ನನಗೆ ಬಿಗ್ ಬಾಸ್ ಮನೆಯಲ್ಲಿ ಹಿಂಸೆ ಕೊಟ್ಟ’, ‘ಗಿಲ್ಲಿ ಹೊರಗೆ ಹೋಗಲು ನಾನೇ ಕಾರಣ’ ಎಂದು ಹಲವು ಬಾರಿ ಹೇಳಿಕೆ ನೀಡಿ ವಿವಾದ ಎಬ್ಬಿಸಿದ್ದರು. ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು.

ಈಗ ಮಾಧ್ಯಮಗಳ ಎದುರು ಮಾತನಾಡಿದ ಸತೀಶ್, “ನಾನು ಹೇಳಿದ ಮಾತು ನಿಜವಾಗಿಲ್ಲ. ನಾನು ಜ್ಯೋತಿಷಿ ಅಲ್ಲ. ಕುಡಿದ ನಶೆಯಲ್ಲಿ ಹೇಳಿದ್ದ ಮಾತು ಅದು” ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ.

ಈ ವಿಚಾರದಿಂದ ಬೇಸರಗೊಂಡಿರುವ ಸತೀಶ್, ಗಿಲ್ಲಿ ಅಭಿಮಾನಿಗಳು ತಮಗೆ ಹಾಗೂ ತಮ್ಮ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿ ಕೆಲವರನ್ನು ಬಂಧಿಸುವಂತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಆದರೆ ಸಾರ್ವಜನಿಕ ವಲಯದಲ್ಲಿ ಸತೀಶ್ ಹೇಳಿಕೆಗಳ ಮೇಲೆ ನಂಬಿಕೆ ಕಡಿಮೆಯಾಗಿದೆ. ಅವರ ಬಹುತೇಕ ಮಾತುಗಳು ಟ್ರೋಲ್ ಆಗುತ್ತಿದ್ದು, ಈಗ ಅವರ ಪ್ರತಿಯೊಂದು ಹೇಳಿಕೆಯನ್ನೂ ಜನರು ಸಂಶಯದಿಂದಲೇ ನೋಡುತ್ತಿದ್ದಾರೆ.

ಉತ್ತರ ಕನ್ನಡ| ಮನೆಗೆ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿದ್ದ 18ರ ಯುವಕ ಅರೆಸ್ಟ್!

0

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲ್ಲೂಕಿನ ದೇವರ ಹಕ್ಕಲದಲ್ಲಿ ದುಷ್ಕರ್ಮಿಯೊಬ್ಬ ಮನೆಯೊಂದಕ್ಕೆ ಬೆಂಕಿ ಇಟ್ಟಿರುವ ಘಟನೆ ಜರುಗಿದೆ.

ಅದೃಷ್ಟವಶಾತ್ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದೆ. 18ರ ಹುಡುಗ ಈ ಕೃತ್ಯ ಎಸಗಿದ್ದಾನೆ. ದಿನಕರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಕುಮಟಾದ ವೆಂಕಟರಮಣ ದೇವರ ಜಾತ್ರೆಗೆ ದಿನಕರ್ ಕುಟುಂಬ ತೆರಳಿತ್ತು. ಈ ವೇಳೆ ಬೆಂಕಿ ಇಡಲಾಗಿದೆ.

ಮನೆಗೆ ಬೆಂಕಿ ಹಚ್ಚುತ್ತಿದ್ದಂತೆ ನೆರೆಯವರು ಬೆಂಕಿ ನಂದಿಸಿದ್ದಾರೆ. ಆರೋಪಿಯನ್ನು ಕುಮಟಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಎಸ್‌ಪಿ ದೀಪನ್ , ಎಎಸ್‌ಪಿ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ| ಹೃದಯಾಘಾತದಿಂದ 18ರ ಪಿಯುಸಿ ವಿದ್ಯಾರ್ಥಿನಿ ಸಾವು

0

ಕೊಪ್ಪಳ:- ಜಿಲ್ಲೆ ಕೂಕನೂರ ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ಹೃದಯಾಘಾತಕ್ಕೆ 18ರ ಯುವತಿ ಸಾವನ್ನಪ್ಪಿರುವ ಘಟನೆ ಜರುಗಿದೆ.

18 ವರ್ಷದ ಕಾವ್ಯಾ ಚಲವಾದಿ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಯುವತಿ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

error: Content is protected !!