Home Blog Page 2

ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಒಂದೇ ದಿನ ಇಬ್ಬರು ಸಾವು..!

ಧಾರವಾಡ: ಹಾಸನದಲ್ಲಿ ಹೃದಯಾಘಾತದ ಮರಣ ಮೃದಂಗ ನಿಲ್ಲದಾಗಿದ್ದು ಇದು ಬೇರೆ ಜಿಲ್ಲೆಗಳಲ್ಲೂ ಆತಂಕ ಮೂಡಿಸಿದೆ. ಈ ನಡುವೆ ಧಾರವಾಡ ಜಿಲ್ಲೆಯಲ್ಲಿ ಕೂಡ ಹೃದಯಾಘಾತದ ಪ್ರಕರಣಗಳು ಆರಂಭವಾಗಿದೆ. ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ.

ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ (45) ಮೃತ ದುರ್ಧೈವಿಗಳಾಗಿದ್ದು,

ಸೋಮವಾರ ರಾತ್ರಿ ಇಬ್ಬರು ಕೂಡ ಮಲಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದ್ಯ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಐಸಿಎಂಆರ್

ನವದೆಹಲಿ: ಹಠಾತ್ಹೃದಯಾಘಾತ ಈಗಾಗಲೇ ಅನೇಕರನ್ನ ಬಲಿ ಪಡೆದಿದೆ. ರಾಜ್ಯದಲ್ಲಿ ಹೆಚ್ಚಾಗ್ತಿರುವ ಹಾರ್ಟ್ ಅರ್ಟಾಕ್ ಕೇಸ್ಗಳಿಗೆ ಕಾರಣ ಏನು ಅನ್ನೋದೇ ದೊಡ್ಡ ಪ್ರಶ್ನೆ ಆಗಿದೆ. ಕೊರೊನಾ ಬಂದ ಬಳಿಕ ಬಿಪಿ, ಶುಗರ್ ಜೊತೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಿದವು.

ಇದಕ್ಕೆಲ್ಲಾ ಕೋವಿಡ್ಲಸಿಕೆಯೇ ಕಾರಣ ಎಂಬ ಊಹಾಪೋಹದ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದರ ನಡುವೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಅನೇಕರು ಬಲಿಯಾಗಿದ್ದು. ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.

ಬಗ್ಗೆ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.

ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆ ಇಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ‌ ಎ‌ದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, “ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು, ಜವಾಬ್ದಾರಿ ವಹಿಸಲು ಸುರ್ಜೆವಾಲ ಅವರು ಬಂದಿದ್ದಾರೆ” ಎಂದರು.

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಶಿಸ್ತು ಮುಖ್ಯ. ಅವರಿಗೂ ನೋಟಿಸ್ ನೀಡುವೆ, ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಏಕೆ?” ಎಂದರು.

ನೀವು ಪಕ್ಷ‌ ಕಟ್ಟಲು ಕಷ್ಟಪಟ್ಟಿದ್ದೀರಿ ಆ ಕಾರಣಕ್ಕೆ ನಿಮ್ಮ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, “ನಾನೊಬ್ಬನೆ‌ ಪಕ್ಷ‌ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನ ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆ ಉಳಿಸಿಕೊಳ್ಳೋಣ” ಎಂದು ಹೇಳಿದರು.

ಸಚಿವ ಸಂಪುಟ ಸಭೆ ವಿಚಾರವಾಗಿ ಕೇಳಿದಾಗ, “ನಾಡಪ್ರಭು ಕೆಂಪೇಗೌಡರ ಮಾಗಡಿ ಸ್ಮಾರಕ ಅಭಿವೃದ್ಧಿ ಸೇರಿದಂತೆ ಬೆಂಗಳೂರಿಗೆ ಒಂದಷ್ಟು ಚಿಕ್ಕಪುಟ್ಟ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಈಗಾಗಲೇ ಕುಡಿಯುವ ನೀರಿನ ಯೋಜನೆಗಳನ್ನು ನೀಡಿದ್ದೇವೆ. ಬೆಂಗಳೂರು ಗ್ರಾಮಾಂತರವನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಭೆಯಲ್ಲಿ ಇದನ್ನೂ ಪ್ರಸ್ತಾವನೆ ಮಾಡಲಾಗುವುದು” ಎಂದು ಹೇಳಿದರು.

ಬೆಂಗಳೂರು ‌ಉತ್ತರ ಜಿಲ್ಲೆ ಮರುನಾಮಕರಣದ ಬಗ್ಗೆ ಕೇಳಿದಾಗ, “ಈ ಮೊದಲು ಕನಕಪುರ, ಚನ್ನಪಟ್ಟಣ, ರಾಮನಗರ ಭಾಗಗಳು ಹಾಗೂ ನಾನು ಪ್ರತಿನಿಧಿಸಿದ್ದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದಾಗ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು. ಬೆಂಗಳೂರು ದಕ್ಷಿಣ ಎಂದು ನಾಮಕರಣವಾದ ನಂತರ ಈ ಭಾಗದ ಶಾಸಕರ ಮನವಿ ಮೇರೆಗೆ ತೀರ್ಮಾನಕ್ಕೆ ಬರಲಾಗುವುದು” ಎಂದರು.

Bike Taxis: ಬೈಕ್ ಟ್ಯಾಕ್ಸಿಗೆ ಚಾಲಕರಿಗೆ ಕೇಂದ್ರದಿಂದ ಅನುಮತಿ..! ರಾಜ್ಯ ಸರ್ಕಾರ ಒಪ್ಪಿಗೆ ನೀಡುತ್ತಾ?

ನವದೆಹಲಿ: ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳಿಸಲಾಗಿತ್ತು. ಈ ವಿಷಯವಾಗಿ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಜೊತೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು,

ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.

 

ಗೋಲ್ಡ್ ಪ್ರಿಯರಿಗೆ ಆಘಾತ: ಚಿನ್ನದ ಬೆಲೆ ದಿಢೀರ್ ಏರಿಕೆ.. ಈಗ ಎಷ್ಟಿದೆ ಬೆಲೆ?

ಕಳೆದ ಕೆಲವು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇದೀಗ ಮತ್ತೆ ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರು ಆಘಾತಕ್ಕೊಳಗಾಗಿದ್ದಾರೆ.

ಚಿನ್ನದ ಬೆಲೆ ಕುಸಿದು ಬೀಳುತ್ತೆ… ಚಿನ್ನದ ಬೆಲೆ ಕುಸಿದು ಬೀಳುತ್ತೆ… ಅಂತಾ ಕಾಯುತ್ತಿದ್ದ ಜನರಿಗೆ ಈಗ ಚಿನ್ನದ ಬೆಲೆ ಭಾರಿ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿರುವುದು ಆಘಾತ ನೀಡಿದೆ. ಚಿನ್ನದ ಬೆಲೆ 11,400 ರೂಪಾಯಿ ಭಾರಿ ಏರಿಕೆ ಆಗಿರೋದು ಗೋಲ್ಡ್ ಪ್ರಿಯರನ್ನು ಕಂಗಾಲಾಗುವಂತೆ ಮಾಡಿದೆ. 24 ಕ್ಯಾರೆಟ್ ಅಂದ್ರೆ ಶುದ್ಧ ಚಿನ್ನ ಬೆಲೆ ಇದೀಗ ಪ್ರತಿ 100 ಗ್ರಾಂಗೆ 11,400 ರೂಪಾಯಿ ಏರಿಕೆ ಕಾಣುವ ಮೂಲಕ, ಬರೋಬ್ಬರಿ 9,84,000 ರೂಪಾಯಿಗೆ ತಲುಪಿದೆ. ಹಾಗೇ 10 ಗ್ರಾಂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬರೋಬ್ಬರಿ 1,140 ರೂಪಾಯಿ ಏರಿಕೆ ಕಾಣುವ ಮೂಲಕ 98,400 ರೂಪಾಯಿ ಆಗಿದೆ

ಬೆಲೆ ಏರಿಕೆ ನಂತರ ಬೆಂಗಳೂರಲ್ಲಿ ಈಗ ಪ್ರತಿ 10 ಗ್ರಾಂ 22 ಕ್ಯಾರಟ್ ಆಭರಣ ಚಿನ್ನ ಬೆಲೆ 90,200 ರೂಪಾಯಿ ಆಗಿದೆ. ಈ ಮೂಲಕ ಆಭರಣ ಚಿನ್ನ ಬೆಲೆ ಕೂಡ ಇನ್ನೇನು 1,00,000 ರೂಪಾಯಿ ತಲುಪುವುದು ಗ್ಯಾರಂಟಿ ಆಗಿದೆ. ಈ ನಡುವೆ ಚಿನ್ನದ ಬೆಲೆಯು ಇಳಿಕೆ ಕಾಣಬಹುದು, ಆಷಾಢ ಮಾಸ ಹಿನ್ನೆಲೆ ಚಿನ್ನ ಖರೀದಿಗೆ ಪ್ಲಾನ್ ಮಾಡಬಹುದು ಅಂತಾ ಆಲೋಚನೆ ಇಟ್ಟುಕೊಂಡಿದ್ದ ಚಿನ್ನ ಪ್ರಿಯರಿಗೆ ಇದೀಗ ಮತ್ತೊಂದು ಶಾಕ್ ಸಿಕ್ಕಂತೆ ಆಗಿದೆ. ಮತ್ತೊಂದು ಕಡೆ ಬೆಳ್ಳಿ ಬೆಲೆಯು ಒಂದೇ ದಿನ ಪ್ರತಿ 1 ಕೆಜಿ 2,300 ರೂಪಾಯಿ ಏರಿಕೆ ಕಾಣುವ ಮೂಲಕ 1,10,000 ರೂಪಾಯಿಗೆ ತಲುಪಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ಭಾರಿ ಏರಿಕೆ ಕಾಣುತ್ತಿದ್ದು, ಯಾವಾಗ ಬೆಲೆ ಇಳಿಕೆ ಕಾಣುತ್ತೆ ಅಂತಾ ಕಾಯಬೇಕಿದೆ.

ಅಚ್ಚರಿಯ ಘಟನೆ: ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ಮೆದುಳು ನಿಷ್ಕ್ರಿಯ – ಆಗಿದ್ದೇನು?

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಅಚ್ಚರಿಯ ಘಟನೆಯೊಂದು ಜರುಗಿದೆ. ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೇ ನಿಮಿಷಗಳಲ್ಲಿ ನಿಷ್ಕ್ರಿಯವಾಗಿದೆ.

ಕೋನಪ್ಪ (52) ಬ್ರೈನ್ ಡೆಡ್ ಆದ ವ್ಯಕ್ತಿ. ಈತ ಹೊಸಕೋಟೆಯ ನಿವಾಸಿ ಎನ್ನಲಾಗಿದೆ. ಇತ್ತ ಬ್ರೈನ್ ಡೆಡ್​​ ವಿಷಯ ತಿಳಿದ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಆಗಿದ್ದೇನು?

ಕೋನಪ್ಪ ಅವರು, ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದರು. ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಸಿಲಿಕಾನ್ ಸಿಟಿ ಆಸ್ವತ್ರೆಗೆ ಬಂದಿದ್ದಾರೆ. ಈ‌ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್​​ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ವತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ.

ಇನ್ನು ಈ ಬಗ್ಗೆ ವೈದ್ಯರು ಹೇಳಿದೆನೆಂದರೆ ಇತ್ತೀಚೆಗೆ ಕಾರ್ಡಿಯಾಕ್ ಅರೆಸ್ಟ್​ನಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎನ್ನುತಾರೆ. ಕೋನಪ್ಪ ಆಸ್ವತ್ರೆಗೆ ನಡೆದುಕೊಂಡು ಬರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಆದ ಬ್ರೈನ್ ಡೆಡ್​​ನಿಂದ ಸದ್ಯ ಕೋನಪ್ಪ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡಿಸೋರು ಓದಲೇಬೇಕಾದ ಸ್ಟೋರಿ: ಜೈಲು ಸೇರಿದ ಅಪ್ಪ!

ತುಮಕೂರು:- ಅಪ್ರಾಪ್ತರ ಕೈಯಲ್ಲಿ ವಾಹನಗಳನ್ನ ಕೊಡಬಾರದು ಎಂದು ಅದೆಷ್ಟೇ ಜಾಗೃತಿ ಮೂಡಿಸಿದರೂ ಕೂಡ ಕೆಲ ಪೋಷಕರು ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಮಕ್ಕಳ ಕೈಗೆ ಬೈಕ್, ಸ್ಕೂಟರ್ ಕೊಟ್ಟು ಕಳಿಸ್ತಾರೆ.

ಇದೀಗ ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡಿಸೋರು ಓದಲೇಬೇಕಾದ ಸ್ಟೋರಿ ಇದು. ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ ಸಿ ನ್ಯಾಯಾಲಯವು, ಅಪ್ರಾಪ್ತನಿಗೆ ಬೈಕ್ ಕೊಟ್ಟ ತಂದೆಗೆ ಒಂದು ದಿನ ಜೈಲು ಶಿಕ್ಷೆ 30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ತನ್ನ ಪುತ್ರನಿಗೆ ಬೈಕ್ ಕೊಟ್ಟು ಅಪಘಾತಕ್ಕೆ ಕಾರಣವಾಗಿದ್ದ ತಂದೆಗೆ ಆರು ತಿಂಗಳುಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ. ಕೋರ್ಟ್ ಹಾಲ್​ನಲ್ಲಿರುವ ಸೆಲ್​ನಲ್ಲೇ ಒಂದು ದಿನದ ಜೈಲು ವಾಸ ಮತ್ತು ದಂಡ ವಿಧಿಸಲಾಗಿದೆ.

ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು!

ಕೋಲಾರ:- ಭೀಕರ ಅಪಘಾತದಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ಜರುಗಿದೆ.

ಕೊರಚೂರು ಮೂಲದ 25 ವರ್ಷದ ಅರ್ಚನಾ ಸಾವನ್ನಪ್ಪಿದ ಗರ್ಭಿಣಿ. ಘಟನೆಯಲ್ಲಿ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಬಳಿಮಾವಿನ ಮರ ಇದ್ದ ಕಾರಣ ಕಾರು ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಶೇಷಚೇತನ ಮಕ್ಕಳ ಆರೈಕೆ ಸವಾಲಿನದು

ವಿಜಯಸಾಕ್ಷಿ ಸುದ್ದಿ, ಗದಗ: ವಿಕಲಚೇತನ ಮಕ್ಕಳ ಆರೈಕೆಯು ಒಂದು ಸವಾಲಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಉತ್ತಮ ಆರೈಕೆ, ಪ್ರೋತ್ಸಾಹ ಹಾಗೂ ಬೆಂಬಲದಿಂದ ಇಂತಹ ಮಕ್ಕಳು ತಮ್ಮ ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಿ ಸಾಧಕರ ಸಾಲಿನಲ್ಲಿರಬಹುದು. ಇವರ ಪೋಷಕರಿಗೆ ಸಮುದಾಯವು ಬೆಂಬಲವಾಗಿ ನಿಲ್ಲಬೇಕೆಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು.

ಅವರು ಸೋಮುವಾರ ಗದಗ ಶಹರದ ಸರ್ಕಾರಿ ಹೆಣ್ಣುಮಕ್ಕಳ ಶಾಲೆ ನಂ.4ರ ಎಸ್.ಆರ್.ಪಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳಿಗೆ ದಾನಿಗಳಾದ ನಿತ್ಯಾ ವಸ್ತ್ರದ ಅವರು ನೀಡಿದ ಫುಡ್ ಕಿಟ್ ಹಾಗೂ ವಿಶೇಷಚೇತನ ಮಕ್ಕಳ ತಾಯಂದಿರಿಗೆ ಸೀರೆ ವಿತರಿಸಿ ಮಾತನಾಡಿದರು.

ಅಂಗವಿಕಲ ಮಕ್ಕಳ ಆರೈಕೆಯಲ್ಲಿ ಸಮುದಾಯದ ಪಾತ್ರವೂ ಮಹತ್ವವಾಗಿದೆ. ಈ ಕುರಿತು ಸಮಾಜದಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.

ಅತಿಥಿಗಳಾಗಿ ಆಗಮಿಸಿದ್ದ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಪನ್ಮೂಲ ವ್ಯಕ್ತಿ ಶ್ಯಾಮ ಲಾಂಡೆ ಮಾತನಾಡಿ, ವಿಶೇಷ ಚೇತನ ಮಕ್ಕಳ ಪೋಷಕರಿಗೆ ಬೆಂಬಲ ನೀಡುವುದು ಅವಶ್ಯಕವಾಗಿದ್ದು, ಪೋಷಕರು ಇಂತಹ ಮಕ್ಕಳನ್ನು ಹೇಗೆ ಆರೈಕೆ ಮಾಡಬೇಕು, ಮಗುವಿನ ಅಗತ್ಯತೆಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕು ಎಂಬುದನ್ನು ತಿಳಿಸಿ ಹೇಳುವ ಹಾಗೂ ಸೂಕ್ತ ಮಾರ್ಗದರ್ಶನ ನೀಡುವುದು ಅವಶ್ಯ ಎಂದರು.

ಸಿ.ಆರ್.ಪಿ ಸಿದ್ಧಲಿಂಗಯ್ಯ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶೇಷ ಮಕ್ಕಳನ್ನು ಶೈಕ್ಷಣಿಕವಾಗಿ ಬಲವರ್ಧನೆಗೊಳಿಸಲು ನಾವೆಲ್ಲರೂ ಪ್ರಯತ್ನಿಸಬೇಕು. ಇದಕ್ಕೆ ಸಮುದಾಯ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇನ್ನರ್‌ವ್ಹೀಲ್ ಕ್ಲಬ್‌ನ ಸದಸ್ಯರಾದ ಸುಮಾ ಪಾಟೀಲ, ಮೀನಾಕ್ಷಿ ಕೊರವನವರ, ವೀಣಾ ಕೋಟಿ, ಶಿಲ್ಪಾ ಅಕ್ಕಿ ಮಾತನಾಡಿ, ಅಂಗವಿಕಲತೆ ಬಗೆಗೆ ಇರುವ ತಪ್ಪು ತಿಳುವಳಿಕೆ ಹೋಗಲಾಡಿಸಲು ನಾವು ಶ್ರಮಿಸಬೇಕು. ಇವರ ಆರೋಗ್ಯ ಜಾಗೃತಿಗಾಗಿ ಮೇಲಿಂದ ಮೇಲೆ ವೈದ್ಯರ ಭೇಟಿ, ಚಿಕಿತ್ಸೆ ಜೊತೆಗೆ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ನಾವೆಲ್ಲರೂ ಶ್ರಮಿಸಿ ಪ್ರೋತ್ಸಾಹ ನೀಡಬೇಕೆಂದರು.

ಕಾರ್ಯದರ್ಶಿ ಶಿವಲೀಲಾ ಅಕ್ಕಿ ಮಾತನಾಡಿ, ಸಾಧಿಸಲು ಅಸಾಧ್ಯವೆಂಬುದು ಯಾವುದೂ ಇಲ್ಲ. ಇಂತಹ ಮಕ್ಕಳ ಬೆಳವಣಿಗೆಯಲ್ಲಿ ಎಲ್ಲರೂ ಸಹಾಯ ಹಸ್ತ ಚಾಚುವ ಗುಣ ಬೆಳೆಸಿಕೊಂಡಾಗ ಇವರೂ ಸಹಿತ ಎಲ್ಲರಂತೆ ಆಗಿ ಸಾಧಕರಾಗಿ ಮಾದರಿಯಾಗಬಲ್ಲರು ಎಂದರು.

ವೇದಿಕೆಯ ಮೇಲೆ ನೀಲಮ್ಮ ಮುರಗೇಂದ್ರ ವಸ್ತ್ರದ ಉಪಸ್ಥಿತರಿದ್ದರು. ಸುನೀತಾ ತಿಮ್ಮನಗೌಡ್ರ ಸ್ವಾಗತಿಸಿದರು. ಶ್ರೀಮತಿ ಕಟಗಿ ನಿರೂಪಿಸಿದರು. ಮಾಲನ್‌ಬಿ ಹೊಸಳ್ಳಿ ವಂದಿಸಿದರು. ವಿಶೇಷಚೇತನ ಮಕ್ಕಳು, ಪಾಲಕರಾದ ಆಯೀಶಾ ಬಾನು ನದಾಫ್, ನೀಲವ್ವ ಕಳಸಿ, ಪೀತಂ ಕೊಪ್ಪಳ, ಈರವ್ವ ಪಡಸಾಲಿ, ಗಂಗಾ ಸೋನಕರ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

ಕ್ಲಬ್‌ನ ಅಧ್ಯಕ್ಷೆ ಅಶ್ವಿನಿ ಜಗತಾಪ ಮಾತನಾಡಿ, ವಿಶೇಷ ಚೇತನ ಮಕ್ಕಳ ಪಾಲಕರು ಎಂದೂ ಧೈರ್ಯಗುಂದದೇ ಇರಬೇಕು. ಈಗಾಗಲೇ ವಿಕಲಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವುದನ್ನು ಮಾದರಿಯಾಗಿಸಿಕೊಂಡು ಮಕ್ಕಳನ್ನು ಪೋಷಿಸಬೇಕು. ಅವರಲ್ಲಿರುವ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.

error: Content is protected !!