ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು 2–3 ಪಟ್ಟು ಹೆಚ್ಚಿಸಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ.
ಹಬ್ಬದ ಸಮಯವನ್ನು ಸದುಪಯೋಗ ಮಾಡಿಕೊಂಡು, ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೊರಡುವ ಬಸ್ಗಳಲ್ಲಿ ದರ ಏರಿಕೆ ತೀವ್ರವಾಗಿದೆ.
ಈಗ ದರ ಎಷ್ಟಿದೆ?
ಬೆಂಗಳೂರು – ಮಂಗಳೂರು:
600 ರೂ. – 2,999 ರೂ.
ಬೆಂಗಳೂರು – ಧಾರವಾಡ/ಹುಬ್ಬಳ್ಳಿ:
400-1,300 ರೂ. – 4,500 ರೂ.
ಬೆಂಗಳೂರು – ಶಿವಮೊಗ್ಗ:
400 ರೂ. – 2,799 ರೂ.
ಬೆಂಗಳೂರು – ಧರ್ಮಸ್ಥಳ:
500 ರೂ. – 3,600 ರೂ
ಬೆಂಗಳೂರು-ಮೈಸೂರು:
350 ರೂ. – 2,500 ರೂ.
ಹಬ್ಬಗಳು ಬಂದಾಗಲೆಲ್ಲ ಖಾಸಗಿ ಬಸ್ ಮಾಲೀಕರು ಬೇಕಾಬಿಟ್ಟಿಯಾಗಿ ಪ್ರಯಾಣ ದರ ನಿಗದಿ ಮಾಡುತ್ತಿದ್ದರೂ ಸಾರಿಗೆ ಇಲಾಖೆ ಅಧಿಕಾರಿಗಳು ಮಾತ್ರ ಖಾಸಗಿ ಬಸ್ಗಳನ್ನು ನಿಯಂತ್ರಿಸಲು ಮುಂದಾಗದೆ ಕಣ್ಮುಚ್ಚಿ ಕೂತಿದ್ದಾರೆ. ಆರಂಭದಲ್ಲಿ ಕೆಲ ಕಡೆ ದಾಳಿ ನಡೆಸಿ ನಂತರ ಸುಮ್ಮನಾಗುತ್ತದೆ. ಇದೀಗ ಯುಗಾದಿ ಸಂದರ್ಭದಲ್ಲೂ ಖಾಸಗಿ ಬಸ್ಗಳು ದುಬಾರಿ ಪ್ರಯಾಣ ದರ ನಿಗದಿ ಮಾಡಿದ್ದರೂ, ಅದರ ನಿಯಂತ್ರಣಕ್ಕೆ ಸಾರಿಗೆ ಇಲಾಖೆ ಮುಂದಾಗಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

