Home Blog Page 2

ದುಡಿದು ತಿನ್ನುವ ರೂಢಿಯನ್ನು ಬೆಳೆಸಿಕೊಳ್ಳಿ: ಅಕ್ಕಿಮಠದ ಗುರುಲಿಂಗ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರು ಮತ್ತು ಅವಿದ್ಯಾವಂತರಿಗಿಂತ ವಿದ್ಯಾವಂತರಲ್ಲಿಯೇ ಕೌಟುಂಬಿಕ ಕಲಹಗಳು, ವಿವಾಹ ವಿಚ್ಛೇದನಗಳು ಹೆಚ್ಚುತ್ತಿವೆ. ಬೆಲೆಬಾಳುವ ನಾಯಿಯನ್ನು ಸಾಕುವ ಜನ, ತಂದೆ-ತಾಯಿಯನ್ನು ಸಾಕದಿರುವುದು ನೋವಿನ ಸಂಗತಿ ಎಂದು ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹೇಳಿದರು.

ಭಾನುವಾರ ತಾಲೂಕಿನ ಬಳಗಾನೂರ ಗ್ರಾಮದ ಚಿಕೇನಕೊಪ್ಪದ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ, ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ, ಶರಣಶ್ರೀ ಪ್ರಶಸ್ತಿ ಪ್ರದಾನ, ಭಕ್ತಿ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಂಡು ಗುರು-ಹಿರಿಯರನ್ನು ಗೌರವ, ಶ್ರದ್ಧೆಯಿಂದ ಕಾಣುವುದು ಇಂದಿನ ಅಗತ್ಯವಾಗಿದೆ. ಇಂದು ಅತಿಯಾದ ಮೊಬೈಲ್ ಬಳಕೆಯು ನಮಗೆ ಹೆಚ್ಚು ತೊಂದರೆದಾಯಕವಾಗಿದ್ದು, ದುಡಿದು ತಿನ್ನುವ ರೂಢಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಶಿವಶಾಂತವೀರ ಶರಣರು ಮಾತನಾಡಿ, ಶ್ರೀಮಠದ ಜಾತ್ರೆ ಮನುಷ್ಯನ ಬದುಕನ್ನು ಖಾತ್ರಿಪಡಿಸುವ ಜಾತ್ರೆಯಾಗಿದೆ. ಇಲ್ಲಿ ಭಕ್ತ ಹಿತಚಿಂತನೆ ಮೂಲಕ ಜನರಲ್ಲಿ ಸದ್ಭಾವನೆ, ಸದ್ವಿಚಾರ ಬೆಳೆಸುವುದಾಗಿದೆ. ಸಮಾಜಮುಖಿಯಾಗಿ ಕಾರ್ಯಚಟುವಟಿಕೆ ಆಯೋಜಿಸುವುದು ಅವುಗಳ ಸದುಪಯೋಗ ಪಡೆದುಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳುವುದಾಗಿದೆ ಎಂದರು.

ಶರಣಶ್ರೀ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಮಾತನಾಡಿ, ರೈತ ಬೆಳೆಗಳನ್ನು ಬೆಳೆಯಲು ಕೇವಲ ಬೆವರು ಸುರಿಸುವುದಷ್ಟೇ ಅಲ್ಲ, ರಕ್ತವನ್ನೂ ಸುರಿಸುತ್ತಾನೆ ಎಂಬುದನ್ನು ಮನಗಾಣಬೇಕಾಗಿದೆ. ಬಿಸಿಲು-ಚಳಿ-ಮಳೆ ಎನ್ನದೇ ನಿರಂತರವಾಗಿ ದುಡಿದು ಬೆಳೆದ ಬೆಳೆಗೆ ಬೆಲೆ ನಿಗದಿ ಮಾಡುವ ಅವಕಾಶ ಸಮಾಜ, ಸರ್ಕಾರ ನೀಡಿಲ್ಲ. ರೈತರು ಋತುಮಾನಾಧಾರಿತ ಬೆಳೆ ಪದ್ಧತಿಯನ್ನು ರೂಢಿಸಿಕೊಂಡು ಸಮಾಜದಲ್ಲಿ ಯಾರಿಗೂ ಕಡಿಮೆ ಇರದ ರೀತಿಯಲ್ಲಿ ಜೀವನ ಮಟ್ಟವನ್ನು ರೂಪಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ನೂತನವಾಗಿ ಶ್ರೀಮಠದಲ್ಲಿ ಹರಕೆಯ ತೇರನ್ನು ಲೋಕಾರ್ಪಣೆಗೊಳಿಸಲಾಯಿತು. 36 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬಳೂಟಗಿಯ ಹಿರೇಮಠದ ಶಿವಕುಮಾರ ಸ್ವಾಮೀಜಿ, ರಬಕವಿಯ ಗುರುಸಿದ್ಧ ಸ್ವಾಮೀಜಿ, ಕಂಪಸಾಗರ ಅಭಿನವ ನಾಗಭೂಷಣ ಸ್ವಾಮೀಜಿ, ಹೆಬ್ಬಾಳದ ಪ್ರಕಾಶ ಶರಣರು, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ ಇದ್ದರು.

ಬೆಂಗಳೂರಿನ ಗಾಯಕ ಕಡುಬಗೆರೆಯ ಮುನಿರಾಜು ಹಾಗೂ ತಂಡದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು. ಹನುಮಂತ ಅಲ್ಕೋಡ ಹಾಗೂ ತಂಡದಿಂದ ಭಕ್ತಿ ಸಂಗೀತ ಜರುಗಿತು. ಬಿ.ವೈ. ಡೊಳ್ಳಿನ ಶರಣಶ್ರೀ ಪ್ರಶಸ್ತಿ ವಾಚನ ಮಾಡಿದರು. ಸವಿತಾ ಶಿವಕುಮಾರ ಸ್ವಾಗತಿಸಿ, ನಿರೂಪಿಸಿದರು. ಶಿವಲಿಂಗ ಶಾಸ್ತ್ರಿಗಳು ಸಿದ್ದಾಪುರ ನಿರೂಪಿಸಿದರು.

ಶರಣರ ಮಠ ಹಾಗೂ ನವಲಗುಂದದ ಸಿದ್ಧಲಿಂಗನಗೌಡ ಜಂಗ್ಲೆಪ್ಪಗೌಡ್ರ ಮೆಮೋರಿಯಲ್ ಉಮಾ ವಿದ್ಯಾಶ್ರೀ ಟ್ರಸ್ಟ್ ಸಹಯೋಗದಲ್ಲಿ ಕೃಷಿ ಸಾಧಕಿ ರಾಯಚೂರಿನ ಕವಿತಾ ಮಿಶ್ರಾ, ಜಾನಪದ ಕಲಾವಿದ ಕಡುಬಗೆರೆ ಮುನಿರಾಜ, ಐಐಟಿ ಸಂಶೋಧನಾರ್ಥಿ ಅನ್ನಪೂರ್ಣ ಬಸಯ್ಯ ಬಳೂಲಮಠರಿಗೆ ಅವರಿಗೆ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಉಡಚಮ್ಮದೇವಿ ಗುಡಿ ಓಣಿಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ದೇವಸ್ಥಾನದ ಆವರಣದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ವಾಸುದೇವ ಎಸ್. ಲಕ್ಷ್ಮೇಶ್ವರ, ಮಂಜುನಾಥ ಸುಣಗಾರ, ಪ್ರಕಾಶ ಪೂಜಾರ, ರವಿಕುಮಾರ ಸವಣೂರ, ಕುಮಾರ ಪೂಜಾರ, ಅರ್ಜುನ ಪೂಜಾರ, ಶ್ರೀಧರ ಸುಣಗಾರ, ನೀಲಕಂಠ ಗುಡಿಸಾಗರ, ಚಾಮರಾಜ ಪೂಜಾರ, ಶ್ರೀಕಾಂತ ಪೂಜಾರ, ಪರಶುರಾಮ ಹಿತ್ತಲಮನಿ, ಉಮಣ್ಣ ಪೂಜಾರ, ರಾಮಣ್ಣ ಲಕ್ಷ್ಮೇಶ್ವರ, ಪ್ರವೀಣ ಲಕ್ಕಣ್ಣವರ, ಸಂಜು ಪೂಜಾರ, ಮಂಜುನಾಥ ಪೂಜಾರ, ಪ್ರಶಾಂತ ಲಕ್ಕಣ್ಣವರ, ಪ್ರಸನ್ನ ಲಕ್ಕಣ್ಣವರ, ಮಹೇಶ ಪೂಜಾರ, ಮಂಜುನಾಥ ಪೂಜಾರ, ಶ್ರೀಕಾಂತ ಪೂಜಾರ, ಗೋಪಾಲ ಲಕ್ಷ್ಮೇಶ್ವರ, ಮಲ್ಲೇಶ ಲಕ್ಷ್ಮೇಶ್ವರ, ಶಿವಾನಂದ ಲಕ್ಷ್ಮೇಶ್ವರ, ಬಸವರಾಜ ಜಿಗಳೂರ, ಮಧುಸೂದನ ಪೂಜಾರ, ಪುಷ್ಪಾ ಪೂಜಾರ, ಲಕ್ಷ್ಮಿ ಪೂಜಾರ, ನಾಗವ್ವ ಜಿಗಳೂರ, ಪ್ರೇಮಾ ಲಕ್ಷ್ಮೇಶ್ವರ, ಪಾರವ್ವ ಪೂಜಾರ, ಅನ್ನಪೂರ್ಣ ಸವಣೂರ, ರತ್ನಾ ಲಕ್ಷ್ಮೇಶ್ವರ, ಲಕ್ಷ್ಮಿ ಲಕ್ಷ್ಮೇಶ್ವರ, ಲಕ್ಷ್ಮಿ ಪೂಜಾರ, ಚನ್ನಮ್ಮ ಪೂಜಾರ, ಮಹಾದೇವಿ ಹಿರೇಮಠ, ಶೋಭಾ ಬಾರಕೇರ, ಲಲಿತಾ ಲಕ್ಷ್ಮೇಶ್ವರ, ಸುಜಾತಾ ಸುಣಗಾರ, ರೇಣುಕಾ ಪೂಜಾರ, ಗೌರಮ್ಮ ಮರಿನಾಯಕರ, ಮಂಗಳಾ ಲಕ್ಕಣ್ಣವರ, ಲಕ್ಷ್ಮಿ ಪಾ.ಪೂಜಾರ, ಗೀತಾ ಶಿ.ಪೂಜಾರ, ಲಲಿತಾ ಪೂಜಾರ, ಸುವರ್ಣ ಪೂಜಾರ, ಕಮಲವ್ವ ಪೂಜಾರ, ಗಿರಿಜಾ ಪೂಜಾರ, ಶೋಭಾ ಹಿತ್ತಲಮನಿ, ಶರಣಮ್ಮ ಪೂಜಾರ, ಶಶಿಕಲಾ ಉ.ಪೂಜಾರ ಉಪಸ್ಥಿತರಿದ್ದರು.

ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌ ಅವರಿಗೆ ರಾಜ್ಯಪಾಲರಿಂದ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಳಗಾವಿ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇವರನ್ನು ಆಯ್ಕೆ ಮಾಡಲಾಗಿದ್ದು, ರವಿವಾರ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಸಭಾಂಗಣದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಡಾ. ದುರಗೇಶ್ ಕೆ.ಆರ್ ಅವರು ತಮ್ಮ ಸೇವಾವಧಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ, ಶಿಸ್ತಿನಿಂದ ಹಾಗೂ ಯಶಸ್ವಿಯಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮತದಾರರ ಜಾಗೃತಿ, ಶಾಂತಿಯುತ ಚುನಾವಣೆ ಹಾಗೂ ಸುಸೂತ್ರ ನಿರ್ವಹಣೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಚುನಾವಣಾ ಆಯೋಗವು ಈ ಗೌರವ ನೀಡಿದೆ. ಗದಗ ಜಿಲ್ಲೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಆಡಳಿತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.

ಕ್ರೀಡೆ ಉತ್ತಮ ಆರೋಗ್ಯಕ್ಕೆ ದಾರಿ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮೀಣ ಭಾಗದ ಕ್ರೀಡಾಪಟುಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರೀಡಾ ಇಲಾಖೆಯಿಂದ ಬರುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಕ್ರೀಡಾಪಟುಗಳಾಗಬೇಕು ಎಂದು ಬಿಜೆಪಿ ಮುಖಂಡ ಆನಂದಗೌಡ ಎಚ್.ಪಾಟೀಲ್ ಹೇಳಿದರು.

ಡಂಬಳ ಗ್ರಾಮದ ಎಪಿಎಮ್‌ಸಿ ಆವರಣದಲ್ಲಿ ಶ್ರೀ ಜಗದ್ಗುರು ತೋಂಟದಾರ್ಯ 286ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳಿ ಮತ್ತು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮುಕ್ತ ಹಾರ್ಡ್ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ವಿರೋಧ ಪಕ್ಷದ ಮುಖಂಡ ಹೇಮಗೀರಶ ಹಾವಿನಾಳ ಮಾತನಾಡಿ, ಜೀವನದಲ್ಲಿ ಯುವಕರು ದೈಹಿಕವಾಗಿ, ಮಾನಸಿಕವಾಗಿ ಗಟ್ಟಿಯಾಗಿರಬೇಕಾದರೆ ಕ್ರೀಡೆಗೆ ಆದ್ಯತೆ ನೀಡಿ. ಕ್ರಿಕೆಟ್ ದೇಶದ ಮತ್ತು ವಿಶ್ವದ ಪ್ರಸಿದ್ಧ ಆಟವಾಗಿದೆ. ಗ್ರಾಮೀಣ ಹಳೆ ಕ್ರೀಡಾಪಟುಗಳು ಪ್ರಾಥಮಿಕ, ಹೈಸ್ಕೂಲ್, ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪ್ರಾವೀಣ್ಯತೆ ಹೊಂದಿದವರಿಗೆ ಪ್ರೋತ್ಸಾಹ ನೀಡಿದರೆ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ ಎಂದು ಹೇಳಿದರು.

ಡಂಬಳ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಮಾತನಾಡಿ, ನಮ್ಮ ಸ್ಥಳೀಯ ಆಟಗಳಿಗೆ ಆದ್ಯತೆ ನೀಡಬೇಕು. ಮೊಬೈಲ್‌ನಿಂದಾಗಿ ದೈಹಿಕ ಆರೋಗ್ಯ ಹಾಳಾಗುತ್ತಿದೆ. ಇದರಿಂದ ಹೊರಬರಬೇಕು ಎಂದು ಹೇಳಿದರು.

ಗೋಣಿಬಸಪ್ಪ ಕೊರ್ಲಹಳ್ಳಿ, ಡಿಎಸ್‌ಎಸ್ ಸಂಚಾಲಕ ಸೋಮಣ್ಣ ಹೈತಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಡಿಎಸ್‌ಎಸ್ ಸಂಚಾಲಕ ದುರಗಪ್ಪ ಹರಿಜನ, ಮಲ್ಲಪ್ಪ ಮಠದ, ಕುಬೇರಪ್ಪ ಕೆ.ಬಂಡಿ, ಮಹೇಶ ಗುಡ್ಡದ, ಬಂದುಸಾಬ ಜಲಾಲನವರ, ಕೆ.ಎನ್. ದೊಡ್ಡಮನಿ, ಪ್ರಕಾಶ ಕೋತಂಬ್ರಿ, ನಿಂಗಪ್ಪ ಮಾದರ, ದುರಗಪ್ಪ ಮಾದರ, ಹಾಲಪ್ಪ ತಾಮ್ರಗುಂಡಿ, ಮರಿಯಪ್ಪ ಸಿದ್ದಣ್ಣವರ, ಯಮನೂರ ದೊಡ್ಡಮನಿ, ದೇವಪ್ಪ ತಳಗೇರಿ, ಮುತ್ತಪ್ಪ ತಳಗೇರಿ, ದೇವಪ್ಪ ತಳಗೇರಿ, ಮುತ್ತಪ್ಪ ದೊಡ್ಡಮನಿ, ವೆಂಕಪ್ಪ ತಳಗೇರಿ, ದುರಗಪ್ಪ ಹರಿಜನ ಪಾಲ್ಗೊಂಡಿದ್ದರು. ಲಕ್ಷ್ಮಣ ದೊಡ್ಡಮನಿ ನಿರೂಪಿಸಿ ವಂದಿಸಿದರು.

ಪುನೀತ್‌ರೆಡ್ಡಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೊಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಪುನೀತ್‌ರೆಡ್ಡಿ ಎನ್.ಎ ಜ.23ರಂದು ಹೈದ್ರಾಬಾದ್‌ನಲ್ಲಿ ನಡೆದ ಸೌತ್ ಇಂಡಿಯಾ ಸೈನ್ಸ್ ಫೆಸ್ಟ್ (ಎಸ್‌ಐಎಸ್‌ಎಫ್) ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಇಸ್ರೋ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಭಾರತ ಸ್ಕೌಟ್ ಮತ್ತು ಗೈಡ್ಸ್, ಆರ್ಯಭಟ, ಡ್ರೋಮ್, ಇಂಟರ್ನ್ಯಾಷನಲ್ ಲಯನ್ಸ್, ಭಾರತ ಸೇವಾದಳ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನಾ ಮತ್ತು ಕಲೆಗಳ ಪ್ರಗತಿ ಸಂಸ್ಥೆ ಸಹಯೋಗದಲ್ಲಿ ಕಳೆದ ವರ್ಷ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲಿಸಿದ್ದಾನೆ.

ರಾಜ್ಯಪಾಲರಾದ ಥಾವರಚಂದ ಗೆಹಲೋಟ್ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದರು. ಗದಗ ಜಿಲ್ಲಾಡಳಿತದಿಂದಲೂ ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಲಾಗಿದೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನಿಂದ ಗದಗನಲ್ಲಿ ನಡೆದ ಗದಗ ಜಿಲ್ಲಾ ಪ್ರಥಮ ಮಕ್ಕಳ ಶರಣ ಸಾಹಿತ್ಯ ಸಮ್ಮೇಳನದಲ್ಲಿ `ಬಾಲ ಶರಣಸಿರಿ’ ಪ್ರಶಸ್ತಿ ನೀಡಲಾಗಿದೆ. ವಿದ್ಯಾರ್ಥಿಯ ಸಾಧನೆಗೆ ಪ್ರಾಚಾರ್ಯ ಎನ್.ಕೆ. ಹತ್ತಿಕಾಳ, ವಿಜ್ಞಾನ ಶಿಕ್ಷಕಿ ಎಸ್.ಡಿ. ಕರೆಗೌಡ್ರ ಮತ್ತು ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.

ನಿಮ್ಮ ಆರೋಗ್ಯಕ್ಕೆ ನಮ್ಮ ಆದ್ಯತೆ: ಸಚಿವ ಎಚ್.ಕೆ. ಪಾಟೀಲ್‌

0

ವಿಜಯಸಾಕ್ಷಿ ಸುದ್ದಿ, ಗದಗ: ಒಂದು ವರ್ಷದ ಅವಧಿಯಲ್ಲಿ ಇಲ್ಲಿನ ಕುಟುಂಬಗಳ ಆರೋಗ್ಯದಲ್ಲಿ ಸ್ಪಷ್ಟ ಸುಧಾರಣೆ ಆಗಬೇಕು ಎಂಬುದು ನಮ್ಮ ಗುರಿ. ಜನರ ಆರೋಗ್ಯದ ಕಾಳಜಿ ಈ ‘ನಮ್ಮ ಕ್ಲೀನಿಕ್’ಗಳ ಮೂಲಕ ಸಾಧ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಡೋರಗಲ್ಲಿ, ಕುರಹಟ್ಟಿ ಪೇಟೆ, ಹಮಾಲರ ಕಾಲೋನಿ ಹಾಗೂ ಆಶ್ರಯ ಕಾಲೊನಿಯಲ್ಲಿ ಸ್ಥಾಪಿಸಲಾದ ನೂತನ ‘ನಮ್ಮ ಕ್ಲೀನಿಕ್’ಗಳನ್ನು ರವಿವಾರ ಉದ್ಘಾಟಿಸಿ ಸಚಿವರು ಮಾತನಾಡಿದರು.

ಗದಗ ನಗರದ ಆರೋಗ್ಯ ಜಾಲವನ್ನು ಗಣನೀಯವಾಗಿ ವಿಸ್ತರಿಸಲಾಗುತ್ತಿದೆ. ಪ್ರತಿ ಕ್ಲಿನಿಕ್ ಮೂಲಕ ಸುಮಾರು 3 ಸಾವಿರ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ಬಡ ಜನರ ಆರೋಗ್ಯ ಸುಧಾರಣೆಯಲ್ಲಿ ‘ನಮ್ಮ ಕ್ಲೀನಿಕ್’ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಸ್ಥಳೀಯ ನಾಗರಿಕರು ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದ ಸಚಿವರು, ಸಾರ್ವಜನಿಕ ಆರೋಗ್ಯ ಸುಧಾರಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ನಿಮ್ಮ ಆರೋಗ್ಯ, ನಮ್ಮ ಆದ್ಯತೆ ಎಂಬ ಧ್ಯೇಯವಾಕ್ಯದೊಂದಿಗೆ ಗದಗ ನಗರದಲ್ಲಿ ಸರ್ಕಾರದ ‘ನಮ್ಮ ಕ್ಲೀನಿಕ್’ ಯೋಜನೆ ಯಶಸ್ವಿಯಾಗಿ ಜನಸಾಮಾನ್ಯರ ಆರೋಗ್ಯ ಸೇವೆಗೆ ಹೊಸ ಆಯಾಮ ನೀಡಲಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21 ‘ನಮ್ಮ ಕ್ಲಿನಿಕ್’ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಗದಗ ನಗರದಲ್ಲೇ 7 ಕ್ಲಿನಿಕ್‌ಗಳು ಸೇವೆ ನೀಡುತ್ತಿವೆ. ಪ್ರತಿ 15 ಸಾವಿರ ಜನರಿಗೆ ಒಂದು ಕ್ಲಿನಿಕ್ ಸ್ಥಾಪಿಸುವ ಗುರಿಯೊಂದಿಗೆ ಈ ಯೋಜನೆ ಜಾರಿಯಲ್ಲಿದೆ ಎಂದು ತಿಳಿಸಿದರು.

ಪ್ರತಿ ಕ್ಲಿನಿಕ್‌ನಲ್ಲಿ ನಾಲ್ವರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ, ಉಚಿತ ಔಷಧಿ ವಿತರಣೆ, ಮೂಲಭೂತ ಆರೋಗ್ಯ ಪರೀಕ್ಷೆಗಳು ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ನಡೆಯುತ್ತಿದೆ. ವಾರಕ್ಕೊಮ್ಮೆ ಸಾರ್ವಜನಿಕರಿಗೆ ಯೋಗಾಭ್ಯಾಸವನ್ನು ಆಯೋಜಿಸಲಾಗುತ್ತಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ. ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗದಗ–ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಕೃಷ್ಣ ಪರಾಪುರ, ಯುವರಾಜ ಬಳ್ಳಾರಿ, ಮರ್ಕಾಂಡಪ್ಪ ಹಾದಿಮನಿ, ದುರಗೇಶ್ ವಿಭೂತಿ, ಪೌರಾಯುಕ್ತ ರಾಜಾರಾಮ್ ಪವಾರ, ಡಾ. ವೆಂಕಟೇಶ ರಾಠೋಡ್, ಡಾ. ಗಡಾದ, ಡಾ. ಪ್ರೀತಂ ಖೋತ್, ಎಲ್.ಕೆ. ಜೂಲಕಟ್ಟಿ, ಡಾ. ಗಿರಡ್ಡಿ, ಅ. ಮಹಮ್ಮದ್ ಮುಸ್ತಾಪ, ಶಾಕೀರ್ ಕಾತರಕಿ, ಉಸ್ಮಾನ್ ಮಾಳೊಕೊಪ್ಪ, ವಿತೇಂದ್ರಸಿಂಗ್ ರಜಪೂತ್ ಇದ್ದರು.

“ಸರ್ಕಾರದ ಉದ್ದೇಶ ಜನಸಾಮಾನ್ಯರಿಗೆ ಮನೆಬಾಗಿಲಿನಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದಾಗಿದೆ. ‘ನಮ್ಮ ಕ್ಲೀನಿಕ್’ ಯೋಜನೆಯ ಮೂಲಕ ನಗರದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ತಕ್ಷಣದ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಲಾದ ಈ ಕ್ಲೀನಿಕ್‌ಗಳಿಂದ ಸಣ್ಣಪುಟ್ಟ ರೋಗಗಳಿಗೆ ಚಿಕಿತ್ಸೆ, ಉಚಿತ ಔಷಧಿ ವಿತರಣೆ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಮೂಲಭೂತ ಆರೋಗ್ಯ ಪರೀಕ್ಷೆಗಳು ಸುಲಭವಾಗಿ ಲಭ್ಯವಾಗಲಿವೆ”

  • ಎಚ್.ಕೆ. ಪಾಟೀಲ.
    ಜಿಲ್ಲಾ ಉಸ್ತುವಾರಿ ಸಚಿವರು.

ಗ್ರಾಹಕರ ಗಮನಕ್ಕೆ; ನಾಳೆ ಬ್ಯಾಂಕ್ ಓಪನ್ ಇರಲ್ಲ! ಯಾಕೆ ಗೊತ್ತಾ?

0

ಬೆಂಗಳೂರು: ಬ್ಯಾಂಕ್ ಗ್ರಾಹಕರು ನೋಡಲೇಬೇಕಾದ ಸ್ಟೋರಿ. ನಾಳೆ ದೇಶಾದ್ಯಂತ ಬ್ಯಾಂಕ್‌ಗಳಲ್ಲಿ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ.

ಬ್ಯಾಂಕ್ ಸಿಬ್ಬಂದಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಮುಷ್ಕರಕ್ಕೆ ಕರೆ ನೀಡಿದ್ದು, ವಾರಕ್ಕೆ 6 ದಿನದ ಬದಲಿಗೆ 5 ದಿನಗಳ ಕೆಲಸದ ಅವಧಿಯನ್ನು ಖಾಯಂಗೊಳಿಸಲು ಒತ್ತಾಯಿಸಿದ್ದಾರೆ. ಕಳೆದ ಮೂರು ದಿನಗಳಿಂದ ಸರಣಿ ರಜೆಗಳ ಕಾರಣದಿಂದ ಹೀಗಾಗಲೇ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿಲ್ಲ, ಮತ್ತು ನಾಳೆ ಮುಷ್ಕರದಿಂದ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಳ್ಳುತ್ತವೆ.

ಹೀಗಾಗಿ, ಹಣ ವಿತ್‌ಡ್ರಾ, ಚೆಕ್ ಕ್ಲಿಯರೆನ್ಸ್, ಡಿಮ್ಯಾಂಡ್ ಡ್ರಾಫ್ಟ್ ಸಿದ್ಧಪಡಿಸುವುದು, ಹೊಸ ಖಾತೆ ತೆರೆಯುವುದು ಅಥವಾ KYC ಅಪ್‌ಡೇಟ್ ಮೊದಲಾದ ಸೇವೆಗಳಲ್ಲಿ ವ್ಯತ್ಯಯ ಸಂಭವಿಸುತ್ತದೆ. ಆದರೆ ಡಿಜಿಟಲ್ ಬ್ಯಾಂಕಿಂಗ್, ಮೊಬೈಲ್/ಇಂಟರ್ನೆಟ್ ಬ್ಯಾಂಕಿಂಗ್, UPI ಪಾವತಿಗಳು ಮತ್ತು ಎಟಿಎಂ ಸೇವೆಗಳು ಲಭ್ಯವಾಗುತ್ತವೆ.

ಆದರೂ, ಎಟಿಎಂನಲ್ಲಿ ಹಣದ ಕೊರತೆ ಉಂಟಾಗುವ ಸಾಧ್ಯತೆ ಇದೆ. ಗ್ರಾಹಕರು ಶಾಖೆಗಳಿಗೆ ಭೇಟಿ ನೀಡುವುದಕ್ಕಿಂತ ಮೊದಲು ಈ ಮಾಹಿತಿಯನ್ನು ಗಮನಿಸಿ ತುರ್ತು ಹಣಕಾಸಿನ ವರ್ಗಾವಣೆಗಳಿಗಾಗಿ ಡಿಜಿಟಲ್ ಮಾಧ್ಯಮಗಳನ್ನು ಬಳಸುವುದೇ ಸೂಕ್ತ.

ರಜೆ ಮುಗಿಸಿ ಬೆಂಗಳೂರಿನತ್ತ ಸಿಟಿ ಮಂದಿ| ನೆಲಮಂಗಲ – ಕುಣಿಗಲ್‌ ರಸ್ತೆಯಲ್ಲಿ 4 ಕಿ.ಮೀ ಟ್ರಾಫಿಕ್‌ ಜಾಮ್

0

ನೆಲಮಂಗಲ:- ಸಾಲು ಸಾಲು ರಜೆ ಮುಗಿಸಿಕೊಂಡು ಜನರು ಬೆಂಗಳೂರಿನತ್ತ ಮರಳುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ–ಕುಣಿಗಲ್ ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಮೂರು ದಿನಗಳ ರಜೆ ಕಾರಣದಿಂದ ಊರಿಗೆ ತೆರಳಿದ್ದವರು ಒಂದೇ ವೇಳೆ ವಾಪಸ್ಸಾಗುತ್ತಿರುವುದರಿಂದ ಹಾಸನ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಾಮ್ ಆಗಿದ್ದು, ಸುಮಾರು ನಾಲ್ಕು ಕಿಲೋಮೀಟರ್ ದೂರದವರೆಗೆ ವಾಹನಗಳು ನಿಂತುಹೋಗಿವೆ.

ಇದರಿಂದ ವಾಹನ ಸವಾರರು ತೀವ್ರ ಪರದಾಟ ಅನುಭವಿಸುತ್ತಿದ್ದು, ಟ್ರಾಫಿಕ್ ನಿಯಂತ್ರಣಕ್ಕಾಗಿ ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ‘ಧಮ್ಕಿ’ ರಾಜೀವ್ ಗೌಡ; ತಲೆಮರೆಸಿಕೊಂಡಿದ್ದವ ಸಿಕ್ಕಿದ್ದೆಲ್ಲಿ?

0

ಮಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಪುಢಾರಿ ನಾಯಕ ರಾಜೀವ್‌ ಗೌಡ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ನಿನ್ನೆ ಮಂಗಳೂರಿನಿಂದ ರೈಲಿನಲ್ಲಿ ಕೇರಳಕ್ಕೆ ಪರಾರಿಯಾಗಿದ್ದ ರಾಜೀವ್‌ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿ ಪೌರಾಯುಕ್ತೆ ಅಮೃತಾ ಗೌಡಗೆ ರಾಜೀವ್‌ ಗೌಡ ಫೋನ್ ಮೂಲಕ ಧಮ್ಕಿ ಹಾಕಿದ್ದನು. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ನೀಡಿದ್ದ ಆಡಿಯೋ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಚಿಕ್ಕಬಳ್ಳಾಪುರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ದೂರು ದಾಖಲಾಗುತ್ತಿದ್ದಂತೆಯೇ ರಾಜೀವ್‌ ಗೌಡ ತಲೆಮರೆಸಿಕೊಂಡು ಪರಾರಿಯಾಗಿದ್ದ.

ಬಂಧನದಿಂದ ತಪ್ಪಿಸಿಕೊಳ್ಳಲು ಕಾನೂನು ಹೋರಾಟಕ್ಕೂ ಮುಂದಾಗಿದ್ದ ಆತ, ಜಾಮೀನು ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಆರೋಪಿಯ ಬಂಧನ ಯಾವಾಗ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೇ ನಡುವೆ, ರಾಜೀವ್‌ ಗೌಡನ ಕಾರು ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಈ ಮಹತ್ವದ ಸುಳಿವಿನ ಆಧಾರದಲ್ಲಿ ಶಿಡ್ಲಘಟ್ಟ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ಆರೋಪಿಯ ಚಲನವಲನಗಳ ಮೇಲೆ ನಿಗಾ ವಹಿಸಿ ಕೇರಳಕ್ಕೆ ತೆರಳಿದ ಪೊಲೀಸರು, ರಾಜೀವ್‌ ಗೌಡನನ್ನು ಅಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಕೇರಳದಿಂದ ಆರೋಪಿಯನ್ನು ನೇರವಾಗಿ ಶಿಡ್ಲಘಟ್ಟಕ್ಕೆ ಕರೆತರುತ್ತಿರುವ ಪೊಲೀಸರು, ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ಬಳಿಕ ರಾಜೀವ್‌ ಗೌಡನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಉಡುಪಿ| ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮುಳುಗಿ ಇಬ್ಬರ ಸ್ಥಿತಿ ಗಂಭೀರ!

0

ಉಡುಪಿ: ಲೈಫ್ ಜಾಕೆಟ್ ಧರಿಸದೇ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಅಕಸ್ಮಿಕವಾಗಿ ಮುಳುಗಿದ ಪರಿಣಾಮ ಇಬ್ಬರು ಗಂಭೀರ ಸ್ಥಿತಿಗೆ ತಲುಪಿದ್ದು, ಇನ್ನೂ ಹಲವರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ರೆಸಾರ್ಟ್‌ನಲ್ಲಿ ಉಳಿದಿದ್ದ ಸುಮಾರು 10–15 ಮಂದಿ ಪ್ರವಾಸಿಗರನ್ನು ವಿಹಾರಕ್ಕಾಗಿ ದೋಣಿಯಲ್ಲಿ ಸಮುದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ ದೋಣಿಯಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಸಮುದ್ರದಲ್ಲಿ ದೋಣಿ ಮುಳುಗುತ್ತಿದ್ದಂತೆ ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡದವರು ಹಲವರನ್ನು ರಕ್ಷಿಸಿದ್ದಾರೆ.

ಘಟನೆಯಲ್ಲಿ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!