Home Blog Page 2

ಮುಖ್ಯಮಂತ್ರಿ ಸ್ಥಾನಕ್ಕೆ ಡಜನ್ ನಾಯಕರ ಕ್ಯೂ: ಛಲವಾದಿ ನಾರಾಯಣಸ್ವಾಮಿ

0

ಬಾಗಲಕೋಟೆ: ರಾಜ್ಯ ಸರಕಾರದ ಆಡಳಿತದ ಎರಡೂವರೆ ವರ್ಷ ಮುಗಿದಿದೆ. ಇಲ್ಲಿನವರೆಗೆ ಆಗಿದ್ದೇನು? ಮುಂದೆ ಆಗಬೇಕಾದುದೇನು ಎಂಬ ರೋಡ್‍ಮ್ಯಾಪ್ ಈ ಸರಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಬ್ಬರದು ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಮುಗಿದಿದೆ; ಈಗ ಅಧಿಕಾರ ಹಸ್ತಾಂತರ ಮಾಡಿ ನಮಗೆ ಕೊಡಿ ಎಂಬುದೇ ಅವರ ಪ್ರಯತ್ನ. ಆ ರೀತಿ ಕೊಡುವ ಸಂದರ್ಭದಲ್ಲಿ ಒಂದು ಡಜನ್ ಲೀಡರ್‍ಗಳು ಈಗ ಕ್ಯೂನಲ್ಲಿ ನಿಂತಿದ್ದಾರೆ ಎಂದು ಕಾಣಿಸುವುದಾಗಿ ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಬಹಳ ಹಿಂದೆ ಬಿದ್ದಿದೆ, ಅಂದರೆ ಅದು ಅಭಿವೃದ್ಧಿಶೂನ್ಯವಾಗಿದೆ ಎಂದು ಆರೋಪಿಸಿದರು. ಕೇವಲ ಕೆಲವು ಗ್ಯಾರಂಟಿ ಕೊಟ್ಟಿದ್ದೇವೆ, ಇದರಲ್ಲೇ 5 ವರ್ಷ ಕಾಲಹರಣ ಮಾಡಬಹುದೆಂಬ ಭಾವನೆಯಲ್ಲಿ ಈ ಸರಕಾರ ಇದ್ದ ಹಾಗಿದೆ ಎಂದು ಆಕ್ಷೇಪಿಸಿದರು.

ಅವರು ಮಾಡುವ ದುಂಡಾವರ್ತಿ, ಭ್ರಷ್ಟಾಚಾರ, ಕಾನೂನಾತ್ಮಕವಾಗಿ ಅನೇಕ ವಿಚಾರಗಳನ್ನು ಅವರು ತಿರುಚಿ ಕೆಲಸ ಮಾಡುತ್ತಿರುವುದನ್ನು ನೋಡಿದ್ದೇವೆ. ಅವರ ಸರಕಾರದಲ್ಲಿ ಭಾಗಿಯಾದವರೇ ಈ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುತ್ತಾರೆ ಎಂದು ವಿವರಿಸಿದರು.

ಅನುಮಾನಾಸ್ಪದ ಸ್ಥಿತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಪತ್ತೆ!

0

ಮಂಡ್ಯ: ತೆರದ ಬಾವಿಯಲ್ಲಿ ವಿದ್ಯಾರ್ಥಿ ಮೃತ ದೇಹ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕ‌ಮಗಳೂರಿನ ಕಡೂರು ತಾಲೂಕಿನ ಹಳೇ‌ಸಿದ್ದರಹಳ್ಳಿ ನಿವಾಸಿ ಕರಣ್ ಎಸ್ (22) ಮೃತ ವಿದ್ಯಾರ್ಥಿಯಾಗಿದ್ದು,

ಶ್ರವಣ ಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ ಬೈಕ್ ಮತ್ತು ಮೊಬೈಲ್ ಸಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಘಟನೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ನಂತರ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಇದು ಆತ್ಮ೧ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಇಳಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಚಿನ್ನಾಭರಣ ದರ ಹೀಗಿದೆ

0

ಹೆಂಗಳೆಯರನ್ನು ಬಲು ಆಕರ್ಷಿಸುವ ಫಳ ಫಳ ಹೊಳೆಯುವ ಚಿನ್ನವನ್ನು ಕೊಳ್ಳಬೇಕೆಂದರೆ ಜೇಬು ಸಹ ಫಳ ಫಳ ಹೊಳೆಯಬೇಕು ಎನ್ನುವಂತಾಗಿದೆ. ಹೌದು, ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿರುವ ಅಪರೂಪದ ಹಳದಿ ಲೋಹ ದಿನಗಳೆದಂತೆ ತುಟ್ಟಿಯಾಗುತ್ತಲೇ ಹೋಗುತ್ತಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 125 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 3 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 11,410 ರೂನಿಂದ 11,535 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,584 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 164 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 172 ರೂ ಆಗಿದೆ.

 ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,840 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,438 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,584 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,535 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 164 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,535 ರೂ
  • ಚೆನ್ನೈ: 11,630 ರೂ
  • ಮುಂಬೈ: 11,535 ರೂ
  • ದೆಹಲಿ: 11,550 ರೂ
  • ಕೋಲ್ಕತಾ: 11,535 ರೂ
  • ಕೇರಳ: 11,535 ರೂ
  • ಅಹ್ಮದಾಬಾದ್: 11,540 ರೂ
  • ಜೈಪುರ್: 11,550 ರೂ
  • ಲಕ್ನೋ: 11,550 ರೂ
  • ಭುವನೇಶ್ವರ್: 11,535 ರೂ

ಮಂಡ್ಯದಲ್ಲಿ ಚಿನ್ನಾಭರಣ ದರೋಡೆ ಪ್ರಕರಣ: ಮಾಜಿ ಪುರಸಭಾ ಅಧ್ಯಕ್ಷ ಅರೆಸ್ಟ್!

0

ಮಂಡ್ಯ: ಮದ್ದೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ಮಾಜಿ  ಪುರಸಭಾ ಅಧ್ಯಕ್ಷನನ್ನು ಅರೆಸ್ಟ್‌ ಮಾಡಲಾಗಿದೆ. ಮಾಜಿ ಪುರಸಭಾ ಅಧ್ಯಕ್ಷ ಎಂ.ಕೆ.ಮರೀಗೌಡ ಬಂಧಿತ ಆರೋಪಿಯಾಗಿದ್ದು,

ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ಅರೆಸ್ಟ್‌ ಮಾಡಲಾಗಿದೆ. ಕಳೆದ ತಿಂಗಳ ಆಗಸ್ಟ್‌ 26 ರಂದು ನಡೆದಿದ್ದ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಮದ್ದೂರಿನ ದೊಡ್ಡಿ ಬೀದಿಯ  ಗ್ಯಾಸ್ ಚಂದ್ರು ಮನೆಗೆ ಮುಸುಕುಧಾರಿಯಾಗಿ ಬಂದು ಕೃತ್ಯ ಎಸಗಿದ್ದು, ಮನೆಯಲ್ಲಿದ್ದ ಚಂದ್ರು ಪತ್ನಿ ಸುಶೀಲಮ್ಮರನ್ನು ಬೆದರಿಸಿ ಚಿನ್ನಾಭರಣ ದರೋಡೆ ಮಾಡಲಾಗಿದೆ.

ಆ ದಿನ‌ ಪ್ರಕರಣ ಕೈಗೊತ್ತಿಕೊಂಡ್ರು ಗಣೇಶನ ಗಲಭೆಯಿಂದ ವಿಳಂಬವಾಗಿತ್ತು. ಗಣೇಶನ ಗಲಭೆ ಬಳಿಕ ಈ ಕಳ್ಳತನ ದ ಬಗ್ಗೆ ಎಸ್ಪಿಯಿಂದ ವಿಶೇಷ ತಂಡ ರಚನೆ ಮಾಡಲಾಗಿತ್ತು. ಅಂದಿನ ದಿನ ಅಲ್ಲಿನ ಸಿಸಿಟಿವಿಗಳ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಕಳ್ಳತನ ಮಾಡಿದ್ದ 15 ಲಕ್ಷದ ಮೌಲ್ಯದ  ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ಇನ್ನೂ ಈ ಪ್ರಕರಣ ಸಂಬಂಧ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕರ್ನಾಟಕದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ: ಹವಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣದಿಂದ ಲಘು ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದ್ದು,

ಉತ್ತರ ಒಳನಾಡಿನಲ್ಲಿ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ವರದಿ ಮಾಡಿದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು—ಈ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಪ್ರಕಟಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಈ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ಕೆ.ಜಿ. ಹಳ್ಳಿ ಕುಟುಂಬಗಳು ಬೀದಿಪಾಲು: ವೆಲ್ಫೇರ್ ಪಾರ್ಟಿ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನ. 3ರಂದು ನಗರದ ಮಧ್ಯ ಭಾಗದ ಕೆ.ಜಿ. ಹಳ್ಳಿಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಜೆಸಿಬಿಗಳ ಮೂಲಕ 30ಕ್ಕಿಂತ ಹೆಚ್ಚು ಮನೆಗಳನ್ನು ನೆಲಸಮ ಮಾಡಿ ನೂರಕಕ್ಕೂ ಹೆಚ್ಚು ಕುಟುಂಬಗಳನ್ನು ಬೀದಿಗೆ ತಳ್ಳಲಾಗಿದೆ. ಈ ಬಗ್ಗೆ ಕ್ಷೇತ್ರದ ಶಾಸಕರು ಮೌನವಾಗಿದ್ದು, ಯಾವುದೇ ಸಹಾಯ ನೀಡುತ್ತಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲ್ಲಿನ ನಿವಾಸಿಗಳ ಪ್ರಕಾರ, ಸರ್ಕಾರವೇ ಸ್ಲಮ್ ಬೋರ್ಡ್ ಅಡಿಯಲ್ಲಿ ಮನೆಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ನಿವಾಸಿಗಳು ಮಾನ್ಯವಾದ ದಾಖಲೆಗಳನ್ನು ಹೊಂದಿದ್ದಾರೆ. ಸರಿಯಾದ ಸೂಚನೆ ಅಥವಾ ಪುನರ್ವಸತಿ ಕ್ರಮಗಳಿಲ್ಲದೆ ಧ್ವಂಸ ಕಾರ್ಯಾಚರಣೆಗಳು ನಡೆದಿದ್ದು, ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ನಿಯೋಗ ಈ ಪ್ರದೇಶಕ್ಕೆ ಭೇಟಿ ನೀಡಿ ಪೀಡಿತ ಜನರ ಅಹವಾಲು ಕೇಳಿ ಒಗ್ಗಟ್ಟನ್ನು ವ್ಯಕ್ತಪಡಿಸಿದೆ. ಇದು ದಶಕಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಾರ್ಮಿಕ ವರ್ಗದ ಕುಟುಂಬಗಳ ಮೇಲಿನ ಕ್ರೂರ ದಾಳಿ ಎಂದು ಹೇಳಿದ್ದು, ಸರ್ಕಾರ ತಕ್ಷಣ ಈ ಕುಟುಂಬಗಳಿಗೆ ಪುನರ್ವಸತಿ ಮತ್ತು ನ್ಯಾಯಯುತ ಪರಿಹಾರವನ್ನು ನೀಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್, ಮುಖಂಡರಾದ ಸೈಯದ್ ಇರ್ಫಾನ್ ಇತರರು ಇದ್ದರು.

ಕನ್ನಡ ಕಟ್ಟಲು ಸಂಘಟಿತರಾಗಿ ಹೋರಾಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಿಗೆ ನಮ್ಮ ಕನ್ನಡದ ಕವಿಗಳೇ ಆದರ್ಶ. ಡಿ.ಎಸ್. ಕರ್ಕಿ, ಹುಯಿಲಗೋಳ ನಾರಾಯಣರಾವ, ಸಿದ್ದಯ್ಯ ಪುರಾಣಿಕ, ಕುವೆಂಪು, ಚೆನ್ನವೀರ ಕಣವಿಯಂತಹ ಕನ್ನಡದ ಮಹಾನ್ ಕವಿಗಳು ಸ್ವತಃ ಕನ್ನಡಾಭಿಮಾನದ ಹಾಡು ರಚಿಸಿ, ಹಾಡಿ ಕನ್ನಡಿಗರಲ್ಲಿ ಜಾಗೃತಿ ಮೂಡಿಸಿದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕವಿವ ಸಂಘವು ಆಯೋಜಿಸಿದ್ದ `ಕನ್ನಡ–ಕನ್ನಡಿಗ–ಕರ್ನಾಟಕ’ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಕ್ಕರಿ ಬಾಳಾಚಾರ್ಯರು ಧಾರವಾಡದಲ್ಲಿ ಜರುಗಿದ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಣಕಾಸಿನ ಮುಗ್ಗಟ್ಟಿನಿಂದ ಸ್ಥಗಿತಗೊಳ್ಳುವ ಸಂದರ್ಭ ಬಂದಾಗ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಕನ್ನಡದ ದಾಸಯ್ಯ ಬಂದಿದ್ದಾನೆಂದು ಜೋಳಿಗೆ ಹಾಕಿ ಹಣ ಸಂಗ್ರಹಿಸಿದರು. ಕವಿವ ಸಂಘವು 136 ವರ್ಷಗಳಿಂದ ಒಡೆದ ಕನ್ನಡಿಗರ ಮನಸ್ಸು ಕಟ್ಟುವ ಕಾರ್ಯ ಮಾಡುತ್ತಿದೆ. ಜಾತಿ–ಧರ್ಮದ ಹೆಸರಿನಲ್ಲಿ ಕನ್ನಡ ಭಾಷೆ ಆಪತ್ತಿನಲ್ಲಿದ್ದು, ಯುವಕರು ಕನ್ನಡ ಕಟ್ಟಲು ಸಂಘಟನೆ ಮೂಲಕ ಹೋರಾಡಬೇಕು ಎಂದರು.

ಪ್ರಾಚಾರ್ಯ ಡಾ. ಎಸ್.ಎಂ. ಕುರಿ ಉಪನ್ಯಾಸ ನೀಡಿ, ಕವಿವ ಸಂಘಕ್ಕೆ 136 ವರ್ಷಗಳ ಇತಿಹಾಸವಿದೆ. ನಾಡೋಜ ಡಾ. ಪಾಟೀಲ ಪುಟ್ಟಪ್ಪನವರು ಅಧ್ಯಕ್ಷರಾಗಿ 53 ವರ್ಷ ಸುದೀರ್ಘವಾಗಿ ಸಂಘವನ್ನು ಮುನ್ನಡೆಸಿದರು. ಕನ್ನಡ ನಾಡಿನಷ್ಟು ಸಮೃದ್ಧ, ಶ್ರೀಮಂತ ರಾಜ್ಯ ಬೇರೊಂದಿಲ್ಲ. ಕನ್ನಡದ ಅನೇಕ ಶಾಸನಗಳು ಕನ್ನಡ ನಾಡಿನ ಜನರ ಗುಣಸ್ವಭಾವ, ಸಮೃದ್ಧತೆ, ಉದಾರತೆಯ ಬಗ್ಗೆ ಮುಕ್ತ ಕಂಠದಿಂದ ಹೊಗಳಿವೆ ಎಂದರು.

ಅಧ್ಯಕ್ಷತೆ ವಹಿದ್ದ ಪ್ರಾಚಾರ್ಯೆ ಡಾ. ಸುಧಾ ಜಗೇರಿ ಮಾತನಾಡಿದರು. ಡಾ. ಮಹಾನಂದ ಹಿರೇಮಠ ಸ್ವಾಗತಿಸಿದರು. ಕವಿವ ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಭೀಮಸಿ ನಿರೂಪಿಸಿದರು, ಡಾ. ಮಂಜುನಾಥ್ ತ್ಯಾಲಗಡಿ ವಂದಿಸಿದರು. ಡಾ. ರಮೇಶ ಹುಲಕುಂದ ಕಾರ್ಯಕ್ರಮ ಸಂಯೋಜಿಸಿದ್ದರು.

ಡಾ. ಲಕ್ಷ್ಮಣ ಮುಳುಗುಂದ, ಡಾ. ಅಣ್ಣಪ್ಪ ಹಂಜೆ, ಡಾ. ಉಲ್ಲಾಸ ಶೆಟ್ಟಿ, ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳಿದ್ದರು. ಕೊತಬಾಳದ ಶಂಕರಣ್ಣ ಸಂಕಣ್ಣವರ್ ತಂಡದಿಂದ ನಾಡು–ನುಡಿ ಜಾಗೃತಿಯ ಹಾಡುಗಳು ಪ್ರಸ್ತುತವಾದವು.

ನಾರಾಯಣಗೌಡರ ಹೋರಾಟಕ್ಕೆ ಮೆಚ್ಚುಗೆ: ಹಲವು ಮಂದಿ ರಕ್ಷಣಾ ವೇದಿಕೆಗೆ ಸೇರ್ಪಡೆ

0

ಗದಗ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಹೋರಾಟಗಳನ್ನು ಮೆಚ್ಚಿ, ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ನೇತೃತ್ವದಲ್ಲಿ ರವಿ ಮಲ್ಲಾಡದ, ವಿನಾಯಕ, ಮಹೇಶ್, ಅಮನ್, ಸಂತೋಷ, ರಾಘು, ದರ್ಶನ್, ಜಾಕಿರ್, ಮುಸ್ತಾಕ್, ಅಲ್ಲಾಭಕ್ಷಿ ಸೇರಿದಂತೆ ಇನ್ನಿತರರು ಶನಿವಾರ ವೇದಿಕೆಗೆ ಸೇರ್ಪಡೆಗೊಂಡರು.

ಗದಗ ಸ್ಪೋರ್ಟ್ಸ್ ಅಕಾಡೆಮಿ ತಂಡಕ್ಕೆ ಜಯ

0

ವಿಜಯಸಾಕ್ಷಿ ಸುದ್ದಿ, ಗದಗ: ಕೆ.ಎಸ್.ಸಿ.ಎ. ಆಶ್ರಯದಲ್ಲಿ ನಡೆಯುತ್ತಿರುವ 14 ವರ್ಷ ವಯೋಮಿತಿಯ ಕ್ರಿಕೆಟ್ ಪಂದ್ಯದಲ್ಲಿ ಗದಗ ತಂಡ ಭರ್ಜರಿ ಜಯ ಗಳಿಸಿದೆ.

ಹುಬ್ಬಳ್ಳಿಯ ಟ್ಯಾಲೆಂಟ್ ಸ್ಪೋರ್ಟ್ಸ್ ಕ್ಲಬ್ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು, ಗದಗ ತಂಡ 31 ಓವರ್‌ನಲ್ಲಿ 150 ರನ್ ಗಳಿಸಿತು. ಗದಗ ಪರ ಪೃಥ್ವಿ ಚಪ್ಪರಮನಿ 48, ವೇದಾಂತ 20 ರನ್ ಮಾಡಿದರು. 2ನೇ ಇನ್ನಿಂಗ್ಸ್ ಆರಂಭಿಸಿದ ಹುಬ್ಬಳ್ಳಿ ಟ್ಯಾಲೆಂಟ್ ತಂಡ ಕೇವಲ 10 ರನ್‌ಗೆ ಆಲ್‌ಔಟ್ ಆಯಿತು. ಗದಗ ತಂಡದ ಬೌಲರ್‌ಗಳಾದ ಪ್ರೀತಮ್ ಮುಂಡರಗಿ 5, ರೋಹಿತ್ ಪಾಲ್ 3 ವಿಕೆಟ್ ಪಡೆದು ಮಿಂಚಿದರು.

ಡಿ. 13ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ: ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಡಿ. 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನಾಗವೇಣಿ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್.ಎಮ್.ಆರ್.ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೇಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ.

ವಿಶೇಷವಾಗಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶದನ್ವಯ ಪೊಲೀಸ್ ಇಲಾಖೆ ಸಂಚಾರಿ ಇ-ಚಲನ್‌ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ಹಾಗೂ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ 21-11-2025ರಿಂದ 12-12-2025ರವರೆಗೆ ಕಾಲವಕಾಶವನ್ನು ನೀಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿ. 13ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್’ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು.

error: Content is protected !!