Home Blog Page 202

ಧೂಮಪಾನ ಅಡ್ಡೆಗಳ ಮೇಲೆ ಕೋಟ್ಪಾ ದಾಳಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರೀತ್ ಖೋನಾ ನೇತೃತ್ವದಲ್ಲಿ ತಾಲೂಕಾ ತನಿಖಾ ದಳ ಹಾಗೂ ಜಿಲ್ಲಾ ತಂಬಾಕು ಕೋಶ ಗದಗ ವತಿಯಿಂದ ನಗರದ ಮುಳಗುಂದ ರಸ್ತೆಯಲ್ಲಿ ಕೋಟ್ಪಾ ದಾಳಿ ಹಮ್ಮಿಕೊಂಡು ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆ-2003 ಉಲ್ಲಂಘನೆ ಕುರಿತು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಪ್ರಕರಣ ದಾಖಲಿಸಿ, 4 ಸಾವಿರ ರೂ ದಂಡ ವಿಧಿಸಿ ಶಾಲೆಗಳ 100 ಅಡಿ ಒಳಗಡೆ ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿ ಕ್ರಮ ಕೈಗೊಳ್ಳಲಾಯಿತು.

ಕೋಟ್ಪಾ ಕಾಯ್ದೆ ಸೆಕ್ಷನ್ 6ಬಿ ಪ್ರಕಾರ ಶಾಲಾ ಕಾಲೇಜುಗಳ ಸುತ್ತ 100 ಗಜದವರೆಗೆ ತಂಬಾಕು ಉತ್ಪನ್ನಗಳನ್ನು ನಿಷೇಧಿಸಲಾಗಿದ್ದರೂ ಸಹ ಕೆಲವು ಸ್ಥಳಗಳಲ್ಲಿ ಮಾರಾಟ ಮಾಡುತ್ತಿರುವದು ಕಂಡುಬಂದಿದ್ದು, ಅಂತಹ ಅಂಗಡಿಗಳ ವಿರುದ್ಧ ದಂಡ ವಿಧಿಸಿ ಅಂಗಡಿಗಳನ್ನು ಮುಚ್ಚಿಸಿ ಕ್ರಮ ವಹಿಸಲಾಯಿತು. ಪಾನ್-ಬೀಡಾ ಅಂಗಡಿ, ಹೋಟೆಲ್‌ಗಳಲ್ಲಿ ಅನಧಿಕೃತ ಧೂಮಪಾನ ಅಡ್ಡೆಗಳನ್ನು ಮಾಡಿಕೊಂಡು ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು, ಈ ರೀತಿಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವದರಿಂದ ಅವರು ಸೇವಿಸಿ ಬಿಟ್ಟ ಹೊಗೆಯಿಂದ ಅಮಾಯಕರು ಆ ಹೊಗೆ ಸೇವಿಸಿ ಪರೋಕ್ಷ ಧೂಮಪಾನಿಗಳಾಗಿ ತಂಬಾಕು ಸೇವನೆಯಿಂದಾಗುವ ಅಪಾಯಕಾರಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಪಾರ್ಶ್ವವಾಯು ಇತ್ಯಾದಿ ಮಾರಣಾಂತಿಕ ಕಾಯಿಲೆಗಳಿಗೆ ಬಲಿಯಾಗುತ್ತಾರೆ.

ಕಾಯ್ದೆ ಉಲ್ಲಂಘನೆಯಾದಲ್ಲಿ ದಂಡದ ಮೊತ್ತ ರೂ. 1000 ಆಗಿದ್ದು ಧೂಮಪಾನದ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವದನ್ನು ನಿಷೇಧಿಸಲಾಗಿದೆ. ಸೆಕ್ಷನ್ 6ಎ ಪ್ರಕಾರ 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನ ನಿಷೇಧಿಸಲಾಗಿದ್ದು, ಈ ಸೆಕ್ಷನ್‌ನಲ್ಲಿ ರೂ. 1000ವರೆಗೆ ದಂಡ ಹೆಚ್ಚಿಸಲಾಗಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಧಿಕೃತ ಸೆಕ್ಷನ್ 4 ಹಾಗೂ ಸೆಕ್ಷನ್ 6ಎ ನಾಮಫಲಕವನ್ನು ಕಡ್ಡಾಯವಾಗಿ ಸ್ಥಳದ ಮಾಲಿಕರು ಬಿತ್ತರಿಸಬೇಕು. ಶಾಲಾ-ಕಾಲೇಜುಗಳ ಸುತ್ತಲಿನ ತಂಬಾಕು ಮಾರಾಟಗಾರರು ಮಾರಾಟ ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ತಾಲುಕಾ ಆರೋಗ್ಯ ಶಿಕ್ಷಣಾಧಿಕಾರಿ ರಾಜೇಂದ್ರ ಗಡಾದ, ಪೊಲೀಸ್ ಇಲಾಖೆಯ ಪ್ರವೀಣ ವೈ, ಸಿ.ಆರ್. ಹಾದಿಮನಿ, ಎಸ್.ಎಂ. ಬೆಳ್ಳಮ್ಮನವರ, ಸಾಮಾಜಿಕ ಕಾರ್ಯಕರ್ತೆ ಬಸಮ್ಮ ಚಿತ್ತರಗಿ, ರಮೇಶ ಚಕ್ಕಡಿ ಹಾಗೂ ಫಕೀರೇಶ ಖಾನಾಪೂರ ಉಪಸ್ಥಿತರಿದ್ದರು.

ಉತ್ತರಾಯಣದ ಈ ಕಾಲ ಬದಲಾವಣೆಯ ಪರ್ವ: ವೀಣಾ ತಿರ್ಲಾಪುರ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ಧರ್ಮದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪವಿತ್ರ ಹಬ್ಬ ಎಂದು ಪರಿಗಣಿಸಲಾಗುತ್ತದೆ. ಶಾಸ್ತ್ರದ ಪ್ರಕಾರ ಸೂರ್ಯದೇವನು ಮಕರ ಚಕ್ರವನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಎಂದು ಕರೆಯುತ್ತಾರೆ. ಉತ್ತರಾಯಣದ ಈ ಪರ್ವ ಬದಲಾವಣೆಗೆ ನಾಂದಿಯಾಗುತ್ತದೆ. ಅಂತೆಯೇ ಮಾನವನಲ್ಲಿಯೂ ಸಹ ಬದಲಾವಣೆ ಸಹಜವಾಗಿರುತ್ತದೆ. ಈ ಕಾಲದಲ್ಲಿ ಚಳಿ ತೊರೆದು ಸೂರ್ಯನ ಕಿರಣ ವ್ಯಾಪ್ತಿ ಮತ್ತು ಅದರ ಶಾಖ ಭೂಮಿಯ ಮೇಲೆ ಹೆಚ್ಚಾಗುತ್ತಾ ಹೋದಂತೆ ಅನೇಕ ಬದಲಾವಣೆ ಪ್ರಕೃತಿಯಲ್ಲಿಯೂ ಸಹ ನಾವು ನೋಡುತ್ತೇವೆ. ಬದಲಾವಣೆಗೆ ತಕ್ಕಂತೆ ನಮ್ಮ ಆಚಾರ-ವಿಚಾರ, ನಡತೆಗಳನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ವೀಣಾ ತಿರ್ಲಾಪುರ ಅಭಿಪ್ರಾಯಪಟ್ಟರು.

ಅಖಿಲ ಕರ್ನಾಟಕ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ವಿವಿಧೋದ್ದೇಶ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರೇಮಾ ಮೇಟಿ ಮಾತನಾಡಿ, ಈ ಋತುಮಾನ ಮನುಷ್ಯನನ್ನು ದೈಹಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿಯೂ ಕೂಡ ಬದಲಾವಣೆ ಮಾಡುತ್ತದೆ. ಇದು ಸುಗ್ಗಿಯ ಕಾಲ ಮತ್ತು ಹರ್ಷದ ಪರ್ವಕಾಲ ಎಂದು ನುಡಿದರು.

ಇದೇ ಸಂದರ್ಭದಲ್ಲಿ ದಿ. ಚಂದ್ರಶೇಖರಪ್ಪ ಬಸವಂತಪ್ಪ ಭೂಮರೆಡ್ಡಿ, ದಿ. ಸಂಜಯ್ ರೆಡ್ಡಿ ವೀರಪ್ಪ ಮಾಸರೆಡ್ಡಿ ಮತ್ತು ದಿ. ಕಿರಣ ಹನುಮಪ್ಪ ಮಧುರೆಡ್ಡಿಯವರಿಗೆ ಮೌನಾಚರಣೆ ಸಲ್ಲಿಸಲಾಯಿತು.

ವೇದಿಕೆಯ ಮೇಲೆ ಉಪಾಧ್ಯಕ್ಷರಾದ ಕಸ್ತೂರಿ ಹಿರೇಗೌಡರ್, ಖಜಾಂಚಿ ಸರೋಜಾ ಪೈಲ್ ಉಪಸ್ಥಿತರಿದ್ದರು. ನೀಲ ಮುದರಡ್ಡಿ, ಸುಮಂಗಲ ಪಾಟೀಲ್, ಅಕ್ಕಮ್ಮ ರೆಡ್ಡಿ, ಶಾಂತ ದೊಡ್ಡಮನಿ ಮುಂತಾದವರು ಪಾಲ್ಗೊಂಡಿದ್ದರು. ಕವಿತಾ ಕೊಣ್ಣೂರ್ ಪ್ರಾರ್ಥಿಸಿದರು. ಮಧು ಪಾಟೀಲ್ ನಿರೂಪಿಸಿದರು. ಭಾಗ್ಯ ಶಿರೋಳ ವಂದಿಸಿದರು.

ಸ್ನೇಹಿತನ ಪತ್ನಿಯ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಆರೋಪಿ ಅರೆಸ್ಟ್

0

ಬೆಂಗಳೂರು: ಸ್ನೇಹಿತನ ಪತ್ನಿಯೊಂದಿಗೆ ನಡೆದ ವೈಮನಸ್ಸಿನ ಹಿನ್ನೆಲೆಯಲ್ಲಿ ಆಕೆಯ 6 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರುಹಳ್ಳಿಯಲ್ಲಿ ನಡೆದಿದೆ.

ಹತ್ಯೆಯಾದ ಬಾಲಕಿಯನ್ನು ಶನಾದ್ (6) ಎಂದು ಗುರುತಿಸಲಾಗಿದ್ದು, ಆರೋಪಿ ಯೂಸಫ್ ನನ್ನುಪೊಲೀಸರು ಬಂಧಿಸಿದ್ದಾರೆ. ಯೂಸಫ್ ಹಾಗೂ ಬಾಲಕಿಯ ತಂದೆ ಇಜಾಮುಲ್ ಶೇಖ್ ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಉದ್ಯೋಗ ನಿಮಿತ್ತ ನಲ್ಲೂರುಹಳ್ಳಿಯ ಸಮೀಪದ ಮನೆಗಳಲ್ಲಿ ವಾಸವಾಗಿದ್ದರು. ಆರೋಪಿ ಆಗಾಗ ಸ್ನೇಹಿತನ ಮನೆಗೆ ಭೇಟಿ ನೀಡುತ್ತಿದ್ದ ವೇಳೆ ಪತ್ನಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ. ಇದೇ ದ್ವೇಷದಿಂದ ಬಾಲಕಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಚರಂಡಿಗೆ ಎಸೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಆರೋಪಿ ಬಾಲಕಿಯನ್ನು ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಗು ಕಾಣೆಯಾಗಿದ್ದ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಹುಡುಕಾಟ ನಡೆಸಿ ಶವ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಉದ್ಯೋಗ ಹಕ್ಕು ಕಿತ್ತುಕೊಳ್ಳುವ ಯತ್ನ ಸಹಿಸುವುದಿಲ್ಲ: ವಿಬಿಜಿ ರಾಮ್‌ಜಿ ಕಾಯ್ದೆಗೆ ಡಿಕೆಶಿ ವಿರೋಧ

0

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್‌ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹೋಟೆಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸಿದ್ದ ಪಕ್ಷದ ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಗೂ ಮುನ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಕಾಯ್ದೆಯು ಪಂಚಾಯಿತಿಗಳ ಅಧಿಕಾರ ಕಡಿತಗೊಳಿಸಿ ದೆಹಲಿಯಿಂದ ತೀರ್ಮಾನಗಳನ್ನು ಹೇರುವ ಪ್ರಯತ್ನವಾಗಿದೆ. ಶೇಕಡಾ 40% ಅನುದಾನ ಭರಿಸುವುದು ರಾಜ್ಯಗಳಿಗೆ ಅಸಾಧ್ಯ ಎಂದು ಅವರು ಹೇಳಿದರು.

ರಾಜ್ಯಗಳ ಅಭಿಪ್ರಾಯ ಪಡೆಯದೇ ತೀರ್ಮಾನಿಸಿರುವುದನ್ನು ಖಂಡಿಸಿ ಪ್ರತಿ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಕ್ರೆಡಲ್‌ನಿಂದ ಸಿಎಂಗೆ ₹77.17 ಕೋಟಿ ಡಿವಿಡೆಂಡ್; ಮುಖ್ಯಮಂತ್ರಿ ಪರಿಹಾರ ನಿಧಿಗೆ ₹5 ಕೋಟಿ ಕೊಡುಗೆ!

0

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಸಂಸ್ಥೆಯು 2024–25ನೇ ಸಾಲಿನ ಲಾಭಾಂಶವಾಗಿ ₹77.17 ಕೋಟಿ ಮೊತ್ತದ ಡಿವಿಡೆಂಡ್‌ನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.

2024–25ರಲ್ಲಿ ಕ್ರೆಡಲ್ ₹257.25 ಕೋಟಿ ನಿವ್ವಳ ಲಾಭ ಗಳಿಸಿದ್ದು, ಅದರ ಶೇ.30ರಷ್ಟು ಮೊತ್ತವನ್ನು ಡಿವಿಡೆಂಡ್ ರೂಪದಲ್ಲಿ ಕೆಪಿಸಿಎಲ್ ಕಚೇರಿಯಲ್ಲಿ ಮುಖ್ಯಮಂತ್ರಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹5 ಕೋಟಿ ಮೊತ್ತದ ಚೆಕ್‌ನ್ನೂ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ರೆಡಲ್ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಾವೇರಿ| ಸಾರಿಗೆ ಬಸ್ ಡಿಕ್ಕಿ..ವಿದ್ಯಾರ್ಥಿ ಗಂಭೀರ

0

ಹಾವೇರಿ:- ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.

ಹಾವೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಪರೀಕ್ಷೆ ಬರೆಯಲು ಕಾಲೇಜಿಗೆ ಹೊರಟಿದ್ದ. ಈ ವೇಳೆ ಏಕಾಏಕಿ ಸಾರಿಗೆ ಬಸ್ ವಿದ್ಯಾರ್ಥಿಗೆ ಡಿಕ್ಕಿಯಾಗಿದೆ.

ವಿದ್ಯಾರ್ಥಿ ಹಾವೇರಿ ತಾಲೂಕಿನ ಕೊಣನತಂಬಿಗಿ ಗ್ರಾಮದ ನಿವಾಸಿ ಎನ್ನಲಾಗಿದೆ. ಬೆನ್ನಿಗೆ ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಿಪೋ ಮ್ಯಾನೇಜರ್​​ ಕಿರುಕುಳ; ಕೆಎಸ್​ಆರ್​ಟಿಸಿ ಬಸ್ ಚಾಲಕ ನೇಣಿಗೆ ಶರಣು!

0

ಶಿವಮೊಗ್ಗ:- ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕನನ್ನು ನಾಗಪ್ಪ (54) ಎಂದು ಗುರುತಿಸಲಾಗಿದೆ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್​​ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಮೃತ ಕೆಎಸ್ಆರ್​​ಟಿಸಿ ಬಸ್​​ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ತ್ಯಾಗರ್ತಿ ಗ್ರಾಮದಲ್ಲಿ ವಾಸವಿದ್ದರು. ನಾಗಪ್ಪ ಅವರಿಗೆ ಕಳೆದ ಒಂದೂವರೆ ತಿಂಗಳಿಂದ ಡಿಪೋ ಮ್ಯಾನೇಜರ್ ಡ್ಯೂಟಿ ನೀಡಿರಲಿಲ್ಲ. ಮೂರ್ನಾಲ್ಕು ಬಾರಿ ಡ್ಯೂಟಿ ಸಿಗದೇ ಮನೆಗೆ ವಾಪಸ್ ಕೂಡ ಬಂದಿದ್ದರು.

ಡ್ಯೂಟಿ ಸಿಗದ ಕಾರಣ ನಾಗಪ್ಪ ಸಾಕಷ್ಟು ಮನನೊಂದಿದ್ದರು. ಹೀಗಾಗಿ ಕಳೆದ ಸೋಮವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಲ್ಕು ದಿನದ ಬಳಿಕ ಕೊನೆಯುಸಿರೆಳೆದಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗಪ್ಪ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲವ್ ಮಾಡುವಂತೆ ಪಾಗಲ್‌ ಪ್ರೇಮಿ ಕಿರುಕುಳ; ಅಪ್ರಾಪ್ತೆ ಸೂಸೈಡ್!

0

ಮೈಸೂರು:- ಜಿಲ್ಲೆಯ ನಂಜನಗೂಡು ನೀಲಕಂಠ ನಗರದಲ್ಲಿ ಪ್ರೀತಿಸುವಂತೆ ಅಪ್ರಾಪ್ತೆಗೆ ಪಾಗಲ್ ಪ್ರೇಮಿಯೊಬ್ಬ ಕಿರುಕುಳ ಕೊಟ್ಟ ಕಾರಣ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

17 ವರ್ಷದ ದಿವ್ಯಾ ನೇಣಿಗೆ ಶರಣಾದ ಅಪ್ರಾಪ್ತೆ. ದೇಬೂರು ಗ್ರಾಮದ ಆದಿತ್ಯ ಎಂಬಾತ ದಿವ್ಯಾಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿದ್ದ ಎಂಬ ಆರೋಪವಿದೆ. ನಂಜನಗೂಡಿನ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ದಿವ್ಯಾಳನ್ನು ಪ್ರೀತಿಸುವಂತೆ ಆದಿತ್ಯ ದುಂಬಾಲು ಬಿದ್ದಿದ್ದ. ಈ ಹಿನ್ನೆಲೆ ದಿವ್ಯ ಆದಿತ್ಯ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೋಷಕರಿಗೆ ತಿಳಿಸಿದ್ದಳು.

ಈ ಬಗ್ಗೆ ದಿವ್ಯಾಳ ತಂದೆ ಆದಿತ್ಯಗೆ ಕಿವಿಮಾತು ಹೇಳಿದ್ದರು. ಹೀಗಿದ್ದರೂ ಆದಿತ್ಯ ವರ್ತನೆ ಬದಲಿಸಿಕೊಂಡಿರಲಿಲ್ಲ. ಹೀಗಾಗಿ ಮನನೊಂದು ದಿವ್ಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಪ್ರಕರಣ ಸಂಬಂಧ ಆದಿತ್ಯನ ವಿರುದ್ಧ ದಿವ್ಯಾ ತಂದೆ ಗುರುಮೂರ್ತಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನು ಕೂಡ ಕ್ಲೈಮ್ಯಾಕ್ಸ್‌ನಲ್ಲಿ ಇದ್ದರೆ ಒಳ್ಳೆಯದಾಗುತ್ತಿತ್ತು: ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್ ಬಗ್ಗೆ ಗುಲ್ಶನ್ ದೇವಯ್ಯ ಅಸಮಾಧಾನ

‘ಕಾಂತಾರ: ಚಾಪ್ಟರ್ 1’ ರಿಷಬ್ ಶೆಟ್ಟಿ ನಿರ್ದೇಶನದೊಂದಿಗೆ ಬಂದಿರುವ ದೊಡ್ಡ ಹಿಟ್ ಸಿನಿಮಾದಾಗಿ ಮಿಂಚುತ್ತಿದೆ. ಸಿನಿಮಾದಲ್ಲಿನ ಪ್ರಮುಖ ವಿಲನ್ ಪಾತ್ರದಲ್ಲಿ ಗುಲ್ಶನ್ ದೇವಯ್ಯ ನಟಿಸಿದ್ದಾರೆ.

ಅರ್ಧ ಸಿನಿಮಾದಷ್ಟೇ ಕುಲಶೇಖರನ ಪಾತ್ರ ಸಾಯುತ್ತದೆ ಎಂಬುದರಿಂದ ಕೆಲವರು ಆಶ್ಚರ್ಯ ಪಟ್ಟು ವಿಚಾರಿಸುತ್ತಿದ್ದಾರೆ. ತಕ್ಷಣದ ಶೂಟಿಂಗ್ ವೇಳೆಯಲ್ಲಿ ಅವರಿಗೆ ಕ್ಲೈಮ್ಯಾಕ್ಸ್ ಬಗ್ಗೆ ಗೊತ್ತಿಲ್ಲದಿದ್ದರೂ, ನಂತರ ರಿಷಬ್ ಶೆಟ್ಟಿ ಸಂಪೂರ್ಣ ಕಥೆಯನ್ನು ವಿವರಿಸಿ ಅಸಮಾಧಾನವನ್ನು ನಿವಾರಿಸಿದ್ದಾರೆ.

ಗುಲ್ಶನ್ ದೇವಯ್ಯ ಹೇಳಿದ್ದು, “ನಾನು ಕೂಡ ಕ್ಲೈಮ್ಯಾಕ್ಸ್‌ನಲ್ಲಿ ಇದ್ದರೆ ಒಳ್ಳೆಯದಾಗುತ್ತಿತ್ತು ಎಂಬ ಸಹಜ ಆಸೆ ಇದ್ದೆ, ಆದರೆ ನನ್ನ ಪಾತ್ರ ಸಾಯುತ್ತದೆ ಎಂಬುದನ್ನು ಅರಿತು ಸಂತೋಷವಾಗಿದೆ. ನಾನು ಸಿನಿಮಾ ಕುರಿತು ಬಹಳ ಉತ್ತಮ ಅಭಿಪ್ರಾಯ ಹೊಂದಿದ್ದೇನೆ ಮತ್ತು ಕನ್ನಡ ಚಿತ್ರರಂಗದ ಅವಕಾಶಗಳು ಇದ್ದರೆ ಬೆಂಗಳೂರಿನಲ್ಲಿ ನೆಲೆಸಲು ಸಿದ್ಧನಾಗಿದ್ದೇನೆ.”

ಈ ರೀತಿಯಾಗಿ ‘ಕಾಂತಾರ: ಚಾಪ್ಟರ್ 1’ ಹಿಟ್ ಸಿನಿಮಾದಲ್ಲಿ ತಮ್ಮ ಪಾತ್ರದ ಅನುಭವವನ್ನು ಹಂಚಿಕೊಂಡು, ಗುಲ್ಶನ್ ದೇವಯ್ಯ ಅಭಿಮಾನಿಗಳಿಗೆ ಉತ್ಸಾಹ ಮತ್ತು ವಿಷಯದ ಹಿನ್ನಲೆ ತಿಳಿಸಿದ್ದಾರೆ.

ಈ ರಾಜ್ಯಕ್ಕೆ ಸಿದ್ದರಾಮಯ್ಯ ಅಗತ್ಯ, ಅವರ ಮಾರ್ಗದರ್ಶನದಲ್ಲೇ ಚುನಾವಣೆ: ಶಾಸಕ ಹೆಚ್.ಸಿ. ಬಾಲಕೃಷ್ಣ

0

ರಾಮನಗರ: ಸಿದ್ದರಾಮಯ್ಯ ಅವರ ಅಗತ್ಯ ಈ ರಾಜ್ಯಕ್ಕೆ ಇದೆ. ಮುಂದಿನ ಚುನಾವಣೆಯೂ ಅವರ ಮಾರ್ಗದರ್ಶನದಲ್ಲೇ ನಡೆಯಬೇಕು ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ಈ ಬಗ್ಗೆ ತೀರ್ಮಾನ ಕೈಗೊಳ್ಳುವುದು ಕಾಂಗ್ರೆಸ್ ಹೈಕಮಾಂಡ್‌ನ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು. ನಾನಾಗಲಿ ಅಥವಾ ಶಾಸಕರಾಗಲಿ ಮುಖ್ಯಮಂತ್ರಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಸಿದ್ದರಾಮಯ್ಯ ಮುಂದುವರೆಯಬೇಕಾ ಅಥವಾ ಡಿಕೆಶಿಗೆ ಅವಕಾಶ ನೀಡಬೇಕಾ ಎಂಬುದನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರನ್ನೂ ಒಳಗೊಂಡ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ನೀಡಿದೆ. ಪಕ್ಷಕ್ಕೆ ಬಂದ ನಂತರ ಅವರು ಮುಖ್ಯಮಂತ್ರಿ, ವಿಪಕ್ಷ ನಾಯಕರಾಗಿದ್ದಾರೆ.

ಈಗ ಅವರು ನಮ್ಮ ಮನೆ ಯಜಮಾನ ಮತ್ತು ಪ್ರಶ್ನಾತೀತ ನಾಯಕ ಎಂದು ಬಣ್ಣಿಸಿದರು. ಅವರಿಗೆ ತಕ್ಷಣವೇ ಸ್ಥಾನ ಕೊಡಬೇಕು ಅಥವಾ ದಿನಾಂಕ ನಿಗದಿಪಡಿಸಬೇಕು ಎಂದು ಕೇಳಲಾಗುವುದಿಲ್ಲ. ಆದರೆ ಒಳ್ಳೆಯ ನಾಯಕತ್ವದ ಆಧಾರದ ಮೇಲೆ ಅವರಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಈ ನಿರ್ಧಾರ ಪಕ್ಷದ ಸಂಘಟನೆಗೆ ಅನುಕೂಲಕರವಾಗಲಿದೆ ಎಂದು ಹೆಚ್.ಸಿ. ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!