Home Blog Page 2071

ಶಿರಹಟ್ಟಿ ಘಟಕಕ್ಕೆ 4 ನೂತನ ಬಸ್ ಸಂಚಾರಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಜನತೆಯ, ವಿವಿಧ ಸಂಘಟನೆಗಳ ಬಹುದಿನಗಳ ಒತ್ತಾಯದ ಪ್ರಯತ್ನವಾಗಿ ಶುಕ್ರವಾರ ಶಿರಹಟ್ಟಿ ಸಾರಿಗೆ ಘಟಕಕ್ಕೆ ಮಂಜೂರಾದ 4 ಹೊಸ ಬಸ್‌ಗಳ ಸಂಚಾರಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಬಸ್‌ಗಳು ಸಹಕಾರಿಯಾಗಲಿದ್ದು, ಶಿರಹಟ್ಟಿಯಿಂದ ರಾಣೆಬೆನ್ನೂರ, ಬೆಳ್ಳಟ್ಟಿ ಮಾರ್ಗವಾಗಿ ಶ್ರೀ ಕ್ಷೇತ್ರ ಸಿಂಗಟಾಲೂರ ಸೇರಿದಂತೆ ರಾತ್ರಿ ಸಮಯದಲ್ಲಿ ಗದಗ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು.

¸ಶಿರಹಟ್ಟಿ ಪಟ್ಟಣದ ಸ್ಮಶಾನದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಡಿಪೋದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿ ಹಾಗೂ ಬೀದಿ ದೀಪ ಅಳವಡಿಸುವ ಕುರಿತು ಸ್ಥಳೀಯ ಕುಂದುಕೊರತೆ ನಿವಾರಣಾ ಸಮಿತಿ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಿತಿ ಅಧ್ಯಕ್ಷ ಅಕ್ಬರಸಾಬ ಯಾದಗಿರಿ, ಪ.ಪಂ ಸದಸ್ಯ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಅಶೋಕ ವರವಿ, ಶ್ರೀನಿವಾಸ ಬಾರಬರ, ರಾಮಣ್ಣ ಕಂಬಳಿ, ಪರಶುರಾಮ ಡೊಂಕಬಳ್ಳಿ, ಬಸವರಾಜ ವಡವಿ, ಮುನ್ನಾ ಢಾಲಾಯತ, ರಫೀಕ ಕೆರಿಮನಿ, ಶ್ರೀನಿವಾಸ ಕಪಟಕರ, ಜಾಕೀರ ಕೋಳಿವಾಡ, ಇಂತಿಯಾಜ ಶಿಗ್ಲಿ, ಸಂಜೀವರೆಡ್ಡಿ ಹಸರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಗೋಡಂಬಿ ತಿಂದ್ರೆ ತೂಕ ಹೆಚ್ಚಾಗುತ್ತಾ!? ನಿಮಗೆ ತಿಳಿಯದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ!

0

ಡ್ರೈ ಫ್ರೂಟ್ಸ್ ಗಳಲ್ಲಿ ಒಂದಾದ ಗೋಡಂಬಿ ತಿಂದರೆ ತೂಕ ಹೆಚ್ಚಾಗುತ್ತದೆ ಎಂದು ಹಲವರು ಭಾವಿಸಿದ್ದಾರೆ. ಆದರೆ ಈ ಮಾತು ಸತ್ಯವಲ್ಲ. ಗೋಡಂಬಿ ಅದರ ವಿಶಿಷ್ಟ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಬಹಳ ಜನಪ್ರಿಯವಾಗಿದೆ.

ಗೋಡಂಬಿಯನ್ನು ಪ್ರತಿನಿತ್ಯ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಗೋಡಂಬಿಯಲ್ಲಿ ಪ್ರೋಟೀನ್, ಖನಿಜಗಳು ಮತ್ತು ಆರೋಗ್ಯಕರ ಕೊಬ್ಬುಗಳಿವೆ ಎಂದು ತಜ್ಞರು ಹೇಳುತ್ತಾರೆ. ಇದನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಮತ್ತು ಜೀರ್ಣಕ್ರಿಯೆಯು ಆರೋಗ್ಯಕರವಾಗಿರುತ್ತದೆ.

ಗೋಡಂಬಿ ತಿಂದರೆ ತೂಕ ಹೆಚ್ಚುತ್ತದೆ ಎಂದು ಹೇಳುವುದು ಸಂಪೂರ್ಣ ತಪ್ಪು. ಗೋಡಂಬಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ, ಅದು ತೂಕವನ್ನು ಹೆಚ್ಚಿಸುವುದಿಲ್ಲ ಆದರೆ ಅದನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದಾಗ್ಯೂ, ಹೆಚ್ಚು ಗೋಡಂಬಿ ತಿನ್ನುವುದು ತೂಕ ಹೆಚ್ಚಾಗಲು ಕಾರಣವಾಗಬಹುದು.

ಗೋಡಂಬಿಯಲ್ಲಿ ವಿಟಮಿನ್‌ಗಳು ಮತ್ತು ಮೆಗ್ನೀಸಿಯಮ್‌ನಂತಹ ಅನೇಕ ರೀತಿಯ ಪೋಷಕಾಂಶಗಳಿವೆ, ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಅವರು ಗ್ಲೂಕೋಸ್ ಚಯಾಪಚಯ ಕ್ರಿಯೆಯಲ್ಲಿ ಸಹ ಸಹಾಯ ಮಾಡುತ್ತಾರೆ.

ಇದರಲ್ಲಿರುವ ಮೆಗ್ನೀಸಿಯಮ್ ತೂಕವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಗೋಡಂಬಿಯನ್ನು ತಿನ್ನುವುದು ದೀರ್ಘಕಾಲದವರೆಗೆ ಹಸಿವನ್ನು ಅನುಭವಿಸದಂತೆ ಮಾಡುತ್ತದೆ ಮತ್ತು ಹಸಿವನ್ನು ನಿಯಂತ್ರಣದಲ್ಲಿಡುತ್ತದೆ, ತನ್ಮೂಲಕ ತೂಕವನ್ನು ಕಾಪಾಡಿಕೊಳ್ಳುತ್ತದೆ. ಗೋಡಂಬಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಇದರಲ್ಲಿ ಕಂಡುಬರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ತೂಕವನ್ನು ಹೆಚ್ಚಿಸಲು ಅನುಮತಿಸುವುದಿಲ್ಲ ಎನ್ನಲಾಗಿದೆ.

ಅವಳಿ ಬಾಳೆಹಣ್ಣಿಗೂ, ಟ್ವಿನ್ಸ್ ಮಕ್ಕಳಾಗೋದಕ್ಕೂ ಏನು ಸಂಬಂಧ! ಈ ಇಂಟ್ರೆಸ್ಟಿಂಗ್ ವಿಚಾರ ನೀವು ತಿಳಿಯಲೇಬೇಕು!

0

ಸಹಜವಾಗಿ ಎಲ್ಲರೂ ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಈ ಬಾಳೆಹಣ್ಣು ವರ್ಷವಿಡೀ ನಮಗೆ ಲಭ್ಯ. ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲದೆ ಆಧ್ಯಾತ್ಮಿಕವಾಗಿಯೂ ಅನೇಕ ಪ್ರಯೋಜನಗಳಿವೆ. ನಾವು ಬಾಳೆಹಣ್ಣು ಖರೀದಿಸಿದಾಗ, ಕೆಲವೊಮ್ಮೆ ಅವಳಿ ಬಾಳೆಹಣ್ಣುಗಳು ಸಿಗುತ್ತವೆ. ಅಂದರೆ ಒಂದು ಬಾಳೆಹಣ್ಣು ಮತ್ತೊಂದು ಬಾಳೆಗೆ ಅಂಟಿಕೊಂಡಿರುತ್ತದೆ. ಇದನ್ನು ಅವಳಿ ಬಾಳೆಹಣ್ಣು ಎಂದೂ ಕರೆಯುತ್ತಾರೆ..

ಕೆಲವು ದಂಪತಿಗಳಿಗೆ ಅವಳಿ ಮಕ್ಕಳಾಗಬೇಕು ಎಂಬ ಆಸೆಯಿರುತ್ತದೆ. ಆದಕ್ಕಾಗಿ ಔಷಧಿಗಳ ಮೊರೆ ಹೋಗುವವರು ಇದ್ದಾರೆ. ಇನ್ನು ಕೆಲವರು ಜಂಟಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತೆ ಎಂಬ ನಂಬಿಕೆ ಮೇಲೆ ಸೇವಿಸುತ್ತಾರೆ. ಆದರೆ ಇದು ಸತ್ಯವೇ? ಇದರ ಅಸಲಿಯತ್ತೇನು? ಇಲ್ಲಿದೆ ಉತ್ತರ.

ಅವಳಿ ಬಾಳಿಹಣ್ಣುಗಳನ್ನು ತಿನ್ನುವುದರಿಂದ ಅವಳಿ ಮಕ್ಕಳು ಜನಿಸುತ್ತಾರೆ ಎಂದು ಹಲವು ಜನರು ಅಂದುಕೊಂಡಿದ್ದಾರೆ. ಹಾಗಾದರೆ ಇದು ನಿಜಾನ ಎಂಬ ಪ್ರಶ್ನೆಗೆ, ಇಲ್ಲ ಎಂಬ ಉತ್ತರ ಬರುತ್ತದೆ. ಬಾಳೆಹಣ್ಣು ತಿನ್ನುವುದಕ್ಕೂ ಅವಳಿ ಮಕ್ಕಳಾಗುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತದೆ

ಇದು ಕೇವಲ ವದಂತಿ ಮತ್ತು ಮೂಢನಂಬಿಕೆ ಬಿಟ್ಟರೆ ಬೇರೇನೂ ಇಲ್ಲ. ಆದರೆ, ಈ ಕಥೆಯು ಪೂರ್ವಜರ ಪುರಾಣಗಳಾಗಿದೆ. ಪೂರ್ವಜರೊಂದಿಗೆ, ಶಿಕ್ಷಕರು ಸಹ ಅವಳಿ ಬಾಳೆಹಣ್ಣುಗಳನ್ನು ತಿನ್ನಲು ಕೇಳಿಕೊಳ್ಳುವುದರಿಂದ ಹುಟ್ಟಿಕೊಂಡ ಪುರಾಣವಾಗಿದೆ.

ಅದರೊಂದಿಗೆ ದೇವರಿಗೆ ಅವಳಿ ಬಾಳೆ ಹಣ್ಣನ್ನು ಕೊಡಬಾರದು ಎಂಬ ನಂಬಿಕೆಗಳಿವೆ. ಅದಕ್ಕಾಗಿಯೇ ನಾವು ಅವಳಿ ಬಾಳೆಹಣ್ಣುಗಳನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ಎಷ್ಟೋ ಸಲ ನಾವು ಖರೀದಿಸಿದ ಬಾಳೆಹಣ್ಣಿನಲ್ಲಿ ನಮಗೆ ತಿಳಿಯದೆ ಅವಳಿ ಬಾಳೆಹಣ್ಣುಗಳಿರುತ್ತವೆ. ಅವುಗಳನ್ನು ಮಕ್ಕಳು ಮತ್ತು ದೇವರ ಬದಲಿಗೆ ದೊಡ್ಡವರು ತಿನ್ನುತ್ತಾರೆ. ಹಾಗಾಗಿ ಅವಳಿ ಬಾಳೆಹಣ್ಣನ್ನು ಮಕ್ಕಳಿಗೆ ಕೊಟ್ಟರೆ ಅದರಲ್ಲೂ ಅವಿವಾಹಿತರು ತಿಂದರೆ ಅವಳಿ ಮಕ್ಕಳು ಹುಟ್ಟುತ್ತಾರೆ ಎಂಬುದು ಭಾರತೀಯರ ನಂಬಿಕೆಯಾದರೂ ವೈಜ್ಞಾನಿಕವಾಗಿ ಎಲ್ಲಿಯೂ ಸಾಬೀತಾಗಿಲ್ಲ.

ಭಾರತೀಯರಷ್ಟೇ ಅಲ್ಲ ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ದೇಶದವರೂ ಕೂಡ ಜೋಡಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತದೆ ಎಂಬ ನಂಬಿಕೆ ಹೊಂದಿದ್ದಾರೆ. ಈ ದೇಶಗಳಲ್ಲಿ ದಂಪತಿಗಳಿಬ್ಬರು ಅವಳಿ ಬಾಳೆಹಣ್ಣು ತಿಂದರೆ ಖಚಿತವಾಗಿ ಅವಳಿ ಮಕ್ಕಳಾಗುತ್ತದೆ ಎಂಬ ನಂಬಿಕೆ ಹೊಂದಿದ್ದಾರೆ.

ಆದರೆ ನಿಜಕ್ಕೂ ಅವಳಿ ಬಾಳೆಹಣ್ಣು ತಿಂದರೆ ಅವಳಿ ಮಕ್ಕಳಾಗುತ್ತದೆ ಎಂಬ ವಿಚಾರ ವೈಜ್ಞಾನಿಕವಾಗಿ ಎಲ್ಲೂ ಸಾಬೀತಾಗಿಲ್ಲ. ಬಾಳೆಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದೇ ವಿನಃ, ಯಾವದೇ ರೀತಿಯ ತೊಂದರೆ ಇಲ್ಲ. ಇದರಿಂದ ದೇಹಕ್ಕೆ ನಾನಾ ಪ್ರಯೋಜನಗಳು ಸಿಗುತ್ತದೆ. ಬಾಳೆ ಹಣ್ಣಿನಲ್ಲಿ ಸಾಕಷ್ಟು ಪೊಟ್ಯಾಸಿಯಂ ಲಭ್ಯವಿದೆ. ಇದು ಗರ್ಭಿಣಿ ಮಹಿಳೆಯರೆಗೆ ಪೊಟ್ಯಾಸಿಯಂ ಅತ್ಯ ಅಗತ್ಯ. ಅಂದ ಮಾತ್ರಕ್ಕೆ ಬಾಳೆಹಣ್ಣನ್ನು ಹೆಚ್ಚು ತಿನ್ನಬಾರದು.

ಸಾಮಾನ್ಯವಾಗಿ ಒಂದು ಬಾಳೆಹಣ್ಣಿನಲ್ಲಿ 450 ಮಿಗ್ರಾಂ ಪೊಟ್ಯಾಷಿಯಂ ಇರುತ್ತದೆ. ಅಂದರೆ ಅವಳಿ ಬಾಳೆ ಹಣ್ಣಿನಲ್ಲಿ ಬರೋಬ್ಬರಿ 900 ಎಂಜಿ ಪೊಟ್ಯಾಷಿಯಂ ಇರುತ್ತದೆ. ಆದ್ದರಿಂದ ಇದನ್ನು ತಿಂದರೆ ಒಳ್ಳೆಯದು. ಯಾಕೆಂದರೆ ಒಂದು ದಿನಕ್ಕೆ ಮನುಷ್ಯನ ದೇಹಕ್ಕೆ ಶೇ40ರಷ್ಟು ಪೊಟ್ಯಾಷಿಯಂ ಅವಶ್ಯವಿರುತ್ತದೆ. ಆದ್ದರಿಂದ ಗರ್ಭಿಣಿಯರು ಹೆಚ್ಚು ಬಾಳೆಹಣ್ಣು, ಅದರಲ್ಲಿಯೂ ಅವಳಿ ಬಾಳೆ ಹಣ್ಣು ತಿನ್ನಬಾರದು ಎನ್ನಲಾಗುತ್ತದೆ.

ಸಾರಿಗೆ ಬಸ್ ನಲ್ಲಿ ನೂಕುನುಗ್ಗಲು: ಟ್ರ್ಯಾಕ್ಟರ್ ಏರಿ ಮನೆ ಸೇರಿದ ವಿದ್ಯಾರ್ಥಿಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಬಸ್ ಸೌಲಭ್ಯದ ಕೊರತೆ ಬಹುತೇಕ ಎಲ್ಲ ಗ್ರಾಮಗಳಲ್ಲಿ ಕಂಡು ಬರುತ್ತಿದ್ದು, ನಿತ್ಯ ಮುಂಜಾನೆ ಶಾಲಾ-ಕಾಲೇಜುಗಳಿಗೆ, ನೌಕರಿಗೆ ತೆರಳುವವರಿಗೆ ಬಸ್ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಸಂಜೆ ವಾಪಸ್ಸು ಮನೆ ತಲುಪಲು ಸಹ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಶಿಗ್ಲಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಶಾಲಾ ಮಕ್ಕಳು ಬಸ್ ಗದ್ದಲವಿದ್ದದ್ದರಿಂದ ನಿಲ್ದಾಣದ ಹತ್ತಿರ ನಿಂತ ಟ್ರ್ಯಾಕ್ಟರ್ ಹತ್ತಿ ಮನೆ ಸೇರಿದ ಘಟನೆ ನಡೆದಿದೆ.

ಶಿಗ್ಲಿ ಗ್ರಾಮಕ್ಕೆ ಶಿಕ್ಷಣಕ್ಕಾಗಿ ಸುತ್ತಮುತ್ತಲಿನ ಸೂರಣಗಿ, ದೊಡ್ಡೂರು, ಶ್ಯಾಬಳ, ದೊಡ್ಡೂರು ತಾಂಡಾ, ಉಂಡೆನಹಳ್ಳಿ, ಉಳ್ಳಟ್ಟಿ ಸೇರಿದಂತೆ ಅನೇಕ ಗ್ರಾಮಗಳಿಂದ ನಿತ್ಯ ಶಾಲೆಗಳಿಗೆ ಬರುತ್ತಿದ್ದು, ಮುಂಜಾನೆ ಶಾಲೆಗೆ ಬರುವಾಗ ಹಾಗೂ ಸಂಜೆ ಶಾಲೆ ಬಿಟ್ಟ ವೇಳೆ ಬಸ್‌ಗಳ ಕೊರತೆ ಇದ್ದುದರಿಂದ ನಿತ್ಯ ಮಕ್ಕಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಳ್ಳಿಗಳಿಗೆ ಸಂಜೆಯ ವೇಳೆಗೆ ಕೇವಲ ಒಂದೊAದೇ ಬಸ್ ಸೌಲಭ್ಯವಿರುವದರಿಂದ ಬಸ್‌ಗಳಲ್ಲಿ ನೂಕುನುಗ್ಗಲು ಉಂಟಾಗುತ್ತಿದೆ.

ಇದರಿಂದ ಶುಕ್ರವಾರ ಮಕ್ಕಳು ಬಸ್ ನೂಕುನುಗ್ಗಲು ನೋಡಿಕೊಂಡು ಸಮೀಪದಲ್ಲಿ ನಿಂತಿದ್ದ ಅದೇ ಗ್ರಾಮಗಳ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ನವರಿಗೆ ವಿನಂತಿಸಿ ಅದನ್ನು ಏರಿ ಪ್ರಯಾಣ ಬೆಳೆಸಿದ್ದಾರೆ. ಟ್ರ್ಯಾಕ್ಟರ್‌ನಲ್ಲಿಯೂ ಸಹ ಸಾಕಷ್ಟು ಮಕ್ಕಳು ಏರಿ ಕುಳಿತಿದ್ದು ಕಂಡು ಬಂದಿತು.

ದಿನನಿತ್ಯ ಮಕ್ಕಳಿಗೆ ಈ ತೊಂದರೆ ತಪ್ಪುತ್ತಿಲ್ಲ. ಅವರ ಶಾಲಾ-ಕಾಲೇಜುಗಳ ವೇಳೆಯಲ್ಲಿಯಾದರೂ ಹೆಚ್ಚಿನ ಬಸ್‌ಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳು ಬಸ್ ಗದ್ದಲದಲ್ಲಿ ಸಿಲುಕಿ ಸಮಸ್ಯೆ ಎದುರಿಸಿದ ಘಟನೆಗಳೂ ನಡೆದಿವೆ. ಆದ್ದರಿಂದ, ಶಾಲಾ ಮಕ್ಕಳಿಗೆ ಅನುಕೂಲವಾಗುವಚಿತೆ ಹೆಚ್ಚುವರಿ ಬಸ್‌ಗಳನ್ನು ಒದಗಿಸಲು ಸಾರಿಗೆ ಇಲಾಖೆ ಮುಂದಾಗಬೇಕೆAದು ಗ್ರಾ.ಪಂ ಸದಸ್ಯ ಸಂತೋಷ ತಾಂದಳೆ ಮನವಿ ಮಾಡಿದ್ದಾರೆ.

ಹೇರ್ ಡ್ರೈಯರ್ ಬ್ಲಾಸ್ಟ್ ಪ್ರಕರಣಕ್ಕೆ ಸ್ಪೋಟಕ ತಿರುವು! ಅಸಲಿ ಕಥೆಯೇ ಬೇರೆ!

0

ಬಾಗಲಕೋಟೆ:- ಇತ್ತೀಚೆಗೆ ನಡೆದಿದ್ದ ಹೇರ್ ಡ್ರೈಯರ್ ಬ್ಲಾಸ್ಟ್ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆಗಾಗಿ ಸಂಚು ರೂಪಿಸಿರೋದು ತಿಳಿದು ಬಂದಿದೆ.

ಘಟನೆ ಸಂಬಂಧ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತನನ್ನು ಸಿದ್ದಪ್ಪ ಶೀಲವಂತ ಎಂದು ಗುರುತಿಸಲಾಗಿದೆ.

ಜಿಲ್ಲೆಯ ಇಳಕಲ್ ನಗರದಲ್ಲಿ ನವೆಂಬರ್ 15 ರಂದು ಹೇರ್​ ಡ್ರೈಯರ್​​ ಬ್ಲಾಸ್ಟ್ ಆಗಿ, ಮೃತ ಯೋಧನ ಪತ್ನಿ ಬಸವರಾಜೇಶ್ವರಿ ಯರನಾಳ ಎರಡು ಮುಂಗೈ ಕಟ್ ಆಗಿದ್ದವು. ಕೇವಲ ಹೇರ್ ಡ್ರೈಯರ್ ಬ್ಲಾಸ್ಟ್​ನಿಂದ ಇಷ್ಟೊಂದು ಭೀಕರ ಸ್ಫೋಟ ಹೇಗೆ ಎಂದು ಅಚ್ಚರಿಯಾಗಿತ್ತು. ಜೊತೆಗೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು‌. ತನಿಖೆಯ ಗಂಭೀರತೆ ಅರಿತ ಇಳಕಲ್ ನಗರ ಠಾಣೆ ಪೊಲೀಸರು ಎರಡೇ ದಿನದಲ್ಲಿ ಪ್ರಕರಣ ಭೇದಿಸಿದ್ದಾರೆ. ಆ ಮೂಲಕ ಬ್ಲಾಸ್ಟ್ ಹಿಂದೆ ಲವ್ ಸ್ಟೋರಿ ಇರುವುದು ಬಹಿರಂಗವಾಗಿದೆ.

ಬಸವರಾಜೇಶ್ವರಿ ಹಾಗೂ ಸಿದ್ದಪ್ಪ ಶೀಲವಂತರ ಮಧ್ಯೆ ಪ್ರೀತಿ ಇತ್ತು‌. ಇದಕ್ಕೆ ಬಸವರಾಜೇಶ್ವರಿ ಸ್ನೇಹಿತೆ ಶಶಿಕಲಾ ಅಡ್ಡಿಯಾಗಿದ್ದಳು‌. ಇದು ಸರಿಯಲ್ಲ ಎಂದು ಹೇಳಿದ್ದಳು. ನಂತರ ಬಸವರಾಜೇಶ್ವರಿ ಸಿದ್ದಪ್ಪ ಜೊತೆ ಮಾತಾಡೋದನ್ನು ಬಿಟ್ಟಿದ್ದಳು. ಇದಕ್ಕೆಲ್ಲ ಕಾರಣ ಶಶಿಕಲಾ, ಆಕೆಯನ್ನೇ ಮುಗಿಸೋಣ ಎಂದ ಸಿದ್ದಪ್ಪ ಗ್ರಾನೈಟ್ ಡೆಟೊನೇಟರ್ ಡ್ರೈಯರ್​ನಲ್ಲಿ ಅಳವಡಿಸಿ ಶಶಿಕಲಾ ಅವರಿಗೆ ಕೊರಿಯರ್ ಮಾಡಿದ್ದ. ಆದರೆ ಅದನ್ನು ರಿಸೀವ್ ಮಾಡಿದ ಪ್ರೇಯಸಿ ಬಸವರಾಜೇಶ್ವರಿ ಕೈ ಕಳೆದುಕೊಳ್ಳುವಂತಾಗಿದೆ‌.

ಈ ಸಂಬಂಧ ಮಾತನಾಡಿದ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಅಮರನಾಥ ರೆಡ್ಡಿ, ‘ಕೊಲೆಗೆ ಯತ್ನಿಸಿದ ಸಿದ್ದಪ್ಪ ಶೀಲವಂತ ಎಂಬುವವರನ್ನು ಪೊಲೀಸರು ಬಂಧಿಸಿದ್ದೇವೆ’ ಎಂದರು.

ಹೇರ್ ಡ್ರೈಯರ್ ಸ್ಫೋಟಗೊಂಡು ಗಾಯಗೊಂಡಿರುವ ಬಸವರಾಜೇಶ್ವರಿ ಯರನಾಳ, ಕೊಲೆಗೆ ಸಂಚು ರೂಪಿಸಿದ್ದ ಸಿದ್ದಪ್ಪ ಶೀಲವಂತ ಕುಷ್ಟಗಿ ತಾಲ್ಲೂಕಿನ ಪುರತಗೇರಿಯವರು. ಅವರಿಬ್ಬರಿಗೆ ಮದುವೆಗೆ ಮೊದಲೇ ಪರಿಚಯವಿತ್ತು. ಅವರ ಪತಿ ನಿಧನದ ನಂತರ ಮತ್ತೆ ಸಂಪರ್ಕಕ್ಕೆ ಬಂದಿದ್ದರು. ಇಳಕಲ್‌ನಲ್ಲಿದ್ದ ಅವರ ಮನೆಗೆ ಹೋಗುತ್ತಿದ್ದನ್ನು, ತಮ್ಮಿಬ್ಬರ ನಡುವೆ ಸಂಬಂಧವಿತ್ತು ಎಂಬುದನ್ನು ಸಿದ್ದಪ್ಪ ಒಪ್ಪಿಕೊಂಡಿದ್ದಾನೆ’ ಎಂದು ತಿಳಿಸಿದರು.

‘ಬಸವರಾಜೇಶ್ವರಿ, ಶಶಿಕಲಾ ಇಬ್ಬರ ಪತಿ ಸೇನೆಯಲ್ಲಿದ್ದರು. ಇಬ್ಬರ ಪತಿಯೂ ಮೃತರಾಗಿದ್ದಾರೆ. ಸೈನಿಕ ಕಲ್ಯಾಣ ಮಂಡಳಿಗೆ ಹೋದಾಗ ಇಬ್ಬರಿಗೆ ಪರಿಚಯವಾಗಿ, ಸ್ನೇಹಿತೆಯರಾಗಿದ್ದರು. ಸಿದ್ದಪ್ಪ ಅವರನ್ನು ಅಲ್ಲಿಯೇ ಬಸವರಾಜೇಶ್ವರಿ, ಶಶಿಕಲಾಗೆ ಪರಿಚಯಿಸಿದ್ದರು’ ಎಂದರು.

ಸಿದ್ದಪ್ಪನೊಂದಿಗೆ ಸಂಬಂಧ ಒಳ್ಳೆಯದಲ್ಲ. ಅದನ್ನು ಬಿಟ್ಟು ಬಿಡುವಂತೆ ಶಶಿಕಲಾ, ಬಸವರಾಜೇಶ್ವರಿಗೆ ಸಲಹೆ ನೀಡಿದ್ದರು. ಅದರಂತೆ ಸಿದಪ್ಪ ಅವರನ್ನು ದೂರ ಇಡಲಾರಂಭಿಸಿದರು. ಇದರಿಂದ ಸಿಟ್ಟಿಗೆದ್ದು ಶಶಿಕಲಾ ಅವರನ್ನು ಕೊಲೆ ಮಾಡಲು ಸಿದ್ದಪ್ಪ ಸಂಚು ರೂಪಿಸಿದ್ದ’ ಎಂದು ವಿವರಿಸಿದರು.

‘ದಾಲ್ಫಿನ್‌ ಗ್ರಾನೈಟ್ಸ್ ಕಂಪನಿಯಲ್ಲಿ ಸೂಪರ್‌ವೈಸರ್ ಆಗಿದ್ದ ಸಿದ್ದಪ್ಪ, ಅಲ್ಲಿ ಕಲ್ಲು ಸ್ಫೋಟಿಸಲು ಇಟ್ಟಿದ್ದ ಡಿಟೊನೇಟರ್‌ ತಂದಿದ್ದ. ಅದನ್ನು ಹೇರ್‌ ಡ್ರೈಯರ್‌ಗೆ ಜೋಡಿಸಿ, ಅದನ್ನು ಬಾಗಲಕೋಟೆಯ ಡಿಟಿಡಿಸಿ ಕೋರಿಯರ್‌ನಿಂದ ಶಶಿಕಲಾಗೆ ಕಳುಹಿಸಿದ್ದರು. ಊರಿನಲ್ಲಿಲ್ಲದ್ದರಿಂದ ಬಸವರಾಜೇಶ್ವರಿಗೆ ತರಲು ಶಶಿಕಲಾ ತಿಳಿಸಿದ್ದಳು’ ಎಂದರು.

‘ಕೊರಿಯರ್‌ ತಂದಿದ್ದ ಬಸವರಾಜೇಶ್ವರಿ ಮನೆಯಲ್ಲಿರಿಸಿದ್ದರು. ಶಾಲೆಯಿಂದ ಮಕ್ಕಳು, ಕೊರಿಯರ್ ಓಪನ್‌ ಮಾಡಿ ಏನು ಬಂದಿದೆ ನೋಡುವಂತೆ ಕೇಳಿದಾಗ ಅದನ್ನು ಓಪನ್‌ ಮಾಡಲಾಗಿತ್ತು. ಹೇರ್‌ ಡ್ರಯರ್ ಇದ್ದದ್ದರಿಂದ ಆನ್‌ ಮಾಡಲು ಪ್ಲಗ್‌ ಹಾಕಿ, ಸ್ವಿಚ್‌ ಆನ್‌ ಮಾಡುತ್ತಿದ್ದಂತೆಯೇ ಸ್ಫೋಟಗೊಂಡು ಎರಡೂ ಕೈ ಬೆರಳುಗಳು ಛಿದ್ರಗೊಂಡಿವೆ’ ಎಂದು ತಿಳಿಸಿದರು.

ಪುರಾತನ ಕಾಲದ ಸ್ಮಾರಕಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ: ಡಾ. ದೇವರಾಜು ಎಸ್.ಎಂ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ನಮ್ಮ ಪುರಾತನ ಕಾಲದ ಮೌಲ್ಯಯುತ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದು ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ಅಧೀಕ್ಷಕ ಡಾ. ದೇವರಾಜು ಎಸ್.ಎಂ ಹೇಳಿದರು.

ಇಲ್ಲಿಯ ಪ್ರಾಚ್ಯ ವಸ್ತು ಸಂಗ್ರಾಲಯದ ಕೇಂದ್ರ ಸಂರಕ್ಷಿತ ಸ್ಮಾರಕವಾದ ಬ್ರಹ್ಮ ಜಿನಾಲಯದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಧಾರವಾಡ ವಲಯದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಂಪರಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುರಾತನ ಕಾಲದ ವಾಸ್ತು ಶಿಲ್ಪ ಕಲೆಯು ಬೆಲೆಯುಳ್ಳದಾಗಿದ್ದು, ಸುಂದರ ಕೆತ್ತನೆಯಿಂದ ಕೂಡಿವೆ. ಅವುಗಳನ್ನು ಸಂರಕ್ಷಿಸಲು ವಿದ್ಯಾರ್ಥಿಗಳು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ತಮ್ಮೂರಿನ ಇತಿಹಾಸ, ಶಿಲ್ಪಕಲೆ, ದೇವಾಲಯಗಳ ಕುರಿತು ಅಧ್ಯಯನ ಮಾಡಬೇಕು. ಅಂದಾಗ ಮಾತ್ರ ಪ್ರವಾಸಿಗರು ತಮ್ಮ ಗ್ರಾಮಕ್ಕೆ ಬಂದಾಗ ತಾವು ಅವರಿಗೆ ಮಾಹಿತಿ ನೀಡಬಹುದು. ನ.೧೯ ರಿಂದ ೨೫ರವರೆಗೂ ವಿಶ್ವ ಪರಂಪರಾ ಸಪ್ತಾಹವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದ್ದು, ಇದರ ಮುಖ್ಯ ಉದ್ದೇಶವೆಂದರೆ, ದೇಶದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಸ್ಮಾರಕಗಳ ಸಂರಕ್ಷಣೆ ಮತ್ತು ಮಹತ್ವ ಕುರಿತಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಹೆಚ್ಚಿಸುವುದಾಗಿದೆ ಎಂದು ವಿವರಿಸಿದರು.

ದೈಹಿಕ ಶಿಕ್ಷಕಿ ಜ್ಯೋತಿ ಜೈಶೀಲಾ ಉಪಸ್ಥಿತರಿದ್ದರು. ಹಿರಿಯ ಸಂರಕ್ಷಣಾ ಅಧಿಕಾರಿ ಉಮೇಶ ಸ್ವಾಗತಿಸಿದರು. ಸ್ಮಾರಕ ಪ್ರಚಾರಕ ಸುರೇಶ ಪಾಪಳೆ ವಂದಿಸಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿಯವರು ಭಾಗವಹಿಸಿದ್ದರು.

ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ವಾ.ಕ.ರ.ಸಾ ಸಂಸ್ಥೆಯ ಗದಗ ವಿಭಾಗದ ಚಾಲನಾ ಸಿಬ್ಬಂದಿಗಳ ಮೇಲೆ ಆಗುತ್ತಿರುವ ಹಲ್ಲೆಗಳಿಂದ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಸಂಸ್ಥೆಯ ವಿವಿಧ ಕಾರ್ಮಿಕ ಸಂಘಟನೆಗಳಿಂದ ಗದಗ ಪೊಲೀಸ್ ಇಲಾಖೆಯ ಡಿಎಸ್ಪಿ ಮೂಲಕ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಗದಗ ಮುಳಗುಂದ ನಾಕಾ ಬಳಿ ಇರುವ ಸಂಸ್ಥೆಯ ವಿಭಾಗೀಯ ಕಚೇರಿಯ ಮುಂದೆ ಸೇರಿದ ಕಾರ್ಮಿಕ ಸಂಘಟನೆಯ ಮುಖಂಡರು ಘೋಷಣೆಯೊಂದಿಗೆ ಡಿಎಸ್ಪಿ ಕಾರ್ಯಾಲಯದವರೆಗೆ ಪಾದಯಾತ್ರೆ ಕೈಗೊಂಡು ಮನವಿ ಸಲ್ಲಿಸಿದರು.

ವಾ.ಕ.ರ.ಸಾ ಸಂಸ್ಥೆಯ ಗದಗ ವಿಭಾಗದ ಸಿಬ್ಬಂದಿಗಳು ಕರ್ನಾಟಕ ಸರಕಾರ ಅಗತ್ಯ ಸೇವಾ ಕಾಯ್ದೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು, ಅದರಲ್ಲೂ ವಿಶೇಷವಾಗಿ ಬಸ್ ಡ್ರೈವರ್ ಹಾಗೂ ಕಂಡಕ್ಟರ್, ಡಿ ಕಮ್ ಸಿ ಹಗಲು-ರಾತ್ರಿ ಎನ್ನದೇ ದಿನದ 24 ಗಂಟೆಯೂ ಸಾರ್ವಜನಿಕರಿಗೆ ಪ್ರಯಾಣದ ಸೇವೆ ಒದಗಿಸುತ್ತಿದ್ದಾರೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಡ್ರೈವರ್, ಕಂಡಕ್ಟರ್‌ಗಳು ಶ್ರಮಿಸುತ್ತಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ದಟ್ಟಣೆ, ಗದ್ದಲ ಹೆಚ್ಚಾಗುತ್ತಿದೆ. ಸ್ಟೇಜ್ ದಾಟುವುದರೊಳಗೆ ದಾರಿ ಚೀಟಿ ನೀಡಬೇಕಾದ ನಿಯಮ ಇರುವುದರಿಂದ ದಾರಿ ಚೀಟಿ ನೀಡಲು ಬಸ್ ನಿಲ್ಲಿಸುತ್ತಿದ್ದಂತೆಯೆ ಪ್ರಯಾಣಿಕರು ಡ್ರೈವರ್ -ಕಂಡಕ್ಟರ್ ಮೇಲೆ ಸಿಟ್ಟಾಗುವದು, ಬೈದಾಡುವದು ಅಷ್ಟೇ ಅಲ್ಲದೆ ವಾಗ್ವಾದಕ್ಕಿಳಿದು ಹಲ್ಲೆ ನಡೆಸುವಂತಹ ಕೃತ್ಯ ನಡೆಸುತ್ತಿರುವುದು ಕಳವಳಕಾರಿ ಘಟನೆಯಾಗಿದೆ.

ಒಂದು ವೇಳೆ ಸ್ಟೇಜ್ ದಾಟಿದರೆ ತನಿಖೆಯ ಅಧಿಕಾರಿಗಳು ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಸ್ಪೆಂಡ್ ಮಾಡುವ ಸಂಭವ ಇರುವುದರಿಂದ ನೌಕರಿ ಮಾಡುವುದೇ ಕಷ್ಟವಾಗಿದೆ. ಕಾರಣ ಈ ಕುರಿತು ಸಂಸ್ಥೆಯ ನೌಕರರ, ಸಿಬ್ಬಂದಿಯ ಮೇಲೆ ಆಗುತ್ತಿರುವ, ಆಗಬಹುದಾದ ಹಲ್ಲೆಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಂಡು ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ವಿವರಿಸಿದರು.

ಮನವಿ ಸ್ವೀಕರಿಸಿದ ಪ್ರಭಾರ ಡಿಎಸ್ಪಿ ಮಹಾಂತೇಶ ಸಜ್ಜನ, ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗಳಿಗೆ ತಲುಪಿಸುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಶಾಂತಣ್ಣ ಮುಳವಾಡ, ನಾಗರಾಜ ಬಳ್ಳಾರಿ, ಎಸ್.ಎಫ್. ಸಂಗಣ್ಣವರ, ಸಂತೋಷ ಕುಲಕರ್ಣಿ, ಗೋಪಾಲ ರಾಯರು, ಎಂ.ಎಚ್. ಪೂಜಾರ, ಎಫ್.ಎಚ್. ಗೌಡರ, ಎ.ಜಿ. ಸುಂಕದ, ಬಿ.ಎಚ್. ರಾಮೇನಹಳ್ಳಿ, ಎಚ್.ಸಿ. ಕೊಪ್ಪಳ, ಎಂ.ಆAಜನೇಯ, ಎಸ್.ಕೆ. ಭಜಂತ್ರಿ, ಎಸ್.ಕೆ. ಅಯ್ಯನಗೌಡರ, ಎ.ಕೆ. ಕರ್ನಾಚಿ, ಜಿ.ಆರ್. ಆದಿ, ಆಂಜನೇಯ ಕುಂಬಾರ, ಲಕ್ಮೀ ಸಾಲಮನಿ, ವಿದ್ಯಾ ಮೇಘರಾಜ, ವೀಣಾ ಚವ್ಹಾಣ, ಜೆ.ಜೆ. ಪಠಾಣ, ಸಿದ್ಧಪ್ಪ ಗದಗಿನ, ಮಲ್ಲಪ್ಪ ಅವ್ವಣ್ಣವರ, ಅಶೋಕ ಸಂಗಟಿ, ಕೆಂಚಪ್ಪ ಡೊಳ್ಳಿನ, ಈರಣ್ಣ ಜವಳಿ, ಬಸವರಡ್ಡಿ, ವ್ಹಿ.ವ್ಹಿ. ಗೋದಿ ಮುಂತಾದವರು ಪಾಲ್ಗೊಂಡಿದ್ದರು.

ಡಾ. ಹೆಚ್.ಕೆ. ಪಾಟೀಲ ಸೇವಾ ತಂಡದ ಸಹಯೋಗದಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ

0

ವಿಜಯಸಾಕ್ಷಿ ಸುದ್ದಿ, ಗದಗ: ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ವತಿಯಿಂದ ಡಾ. ಹೆಚ್.ಕೆ. ಪಾಟೀಲ ಸೇವಾ ತಂಡದ ಸಹಯೋಗದಲ್ಲಿ ಗದಗ-ಬೆಟಗೇರಿಯ ವಾರ್ಡ್ ನಂ.5ರ ನರಸಾಪೂರ ಆಶ್ರಯ ಕಾಲೋನಿಯಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಹೆಚ್.ಕೆ. ಪಾಟೀಲ ಸೇವಾ ತಂಡದ ಕ್ಯಾಪ್ಟನ್ ಶಾಕೀರ ಕಾತರಕಿ, ಕಾಂಗ್ರೆಸ್ ಮೀನುಗಾರಿಕೆ ವಿಭಾಗ ಮುಂಚೂಣಿ ಘಟಕದ ಅಧ್ಯಕ್ಷ ಸಂಗಮೇಶ ಹಾದಿಮನಿ, ನಾಗರಾಜ ಮುಳ್ಳಾಳ, ಕಾಂಗ್ರೆಸ್ ಮುಖಂಡರಾದ ವಾಸು ಜೋಗಿಯವರ ಸಹಕಾರದೊಂದಿಗೆ ೧೫೦ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ಮಾಡಲಾಯಿತು.

ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ವೈದ್ಯರ ತಂಡ ಹಾಗೂ ಸಿಬ್ಬಂದಿ ವರ್ಗದವರು ತಪಾಸಣೆ ನಡೆಸಿದರು. ಸಚಿವ ಎಚ್.ಕೆ. ಪಾಟೀಲರರ ಜನಪರ ಕಾರ್ಯಗಳಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು.

ಇತಿಹಾಸ ಬಲ್ಲವರು ಮಾತ್ರ ಇತಿಹಾಸ ಸೃಷ್ಟಿಸುತ್ತಾರೆ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಇತಿಹಾಸ ಬಲ್ಲವರು ಮಾತ್ರ ಇತಿಹಾಸ ಸೃಷ್ಟಿಸುತ್ತಾರೆ. ಪಾರಂಪರಿಕ ಲಕ್ಕುಂಡಿ ಕ್ಷೇತ್ರದ ಅನ್ವೇಷಣೆ ಮೂಲಕ ಇತಿಹಾಸ ತಿಳಿದು, ಲಭ್ಯವಿರುವ ಪ್ರಾಚ್ಯ ವಸ್ತುಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆ ಬೆಂಗಳೂರು, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯತ ಲಕ್ಕುಂಡಿ ಇವರುಗಳ ಸಹಯೋಗದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ನಿಮಿತ್ತ ಅಧಿಕಾರಿಗಳಿಗೆ ಹಾಗೂ ಸ್ವಯಂ ಸೇವಕರಿಗೆ ಹಮ್ಮಿಕೊಂಡಿದ್ದ ತರಬೇತಿ  ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಚಿವರು, ಅಧಿಕಾರಿಗಳು, ಸ್ವಯಂ ಸೇವಕರನ್ನು ಒಳಗೊಂಡ ತಂಡದ ಜೊತೆಗೆ ಈಗಾಗಲೇ ಗುರುತು ಮಾಡಿರುವ ಮನೆಗಳಿಗೆ ಹೋಗಿ ಪ್ರಾಚ್ಯ ವಸ್ತುಗಳನ್ನು ನೀಡುವ ಬಗ್ಗೆ ರಶೀದಿ ನೀಡಿ ಪುರಾತನ ವಸ್ತಗಳ  ಭಾರದ ಆಧಾರದ ಮೇಲೆ ವಸ್ತುಗಳನ್ನು ಪಾಲಕಿಯಲ್ಲಿ, ಟ್ಯಾಕ್ಟರ್‌ಗಳಲ್ಲಿ ಸಂಗ್ರಹಿಸುವ ಕಾರ್ಯವಾಗಬೇಕು ಎಂದು ನುಡಿದರು.

ಈ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯವು ವಿದ್ಯಾರ್ಥಿ ಜೀವನದಲ್ಲಿಯೇ ಅತ್ಯುತ್ತಮ ಪ್ರಯೋಗಿಕ ಮತ್ತು ಉತ್ತಮ ಅನುಭವ ನೀಡುವ ಕೆಲಸವಾಗಲಿದೆ. ವಿದ್ಯಾರ್ಥಿಗಳು ಈ ಸಮಯವನ್ನು ಸದ್ಬಳಕೆ ಮಾಡಿಕೊಂಡು ಎಲ್ಲರಿಗೂ ಸಹಕಾರ ನೀಡಿ ಪ್ರಾಚ್ಯಾವಶೇಷಗಳ ಅನ್ವೇಷಣೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಕರಾದ ಸ್ಮಿತಾ ಅವರು ಮಾತನಾಡಿ, ರಾಜರ ಕಾಲದಲ್ಲಿ ಲಕ್ಕುಂಡಿಯಲ್ಲಿ ಠಂಕಸಾಲೆ ಇತ್ತು ಎಂದು ಶಾಸನಗಳಲ್ಲಿ ಉಲ್ಲೇಖವಿದೆ. ಹಾಗಾಗಿ ಲಕ್ಕುಂಡಿಯಲ್ಲಿ ಮಹತ್ವ ಹಾಗೂ ಮೌಲ್ಯಯುತವಾದ ಶಾಸನ, ನಾಣ್ಯ, ಸ್ಮಾರಕದ ಸಂಪತ್ತಿದೆ. ಮಣ್ಣಿನಲ್ಲಿ ಹುದುಗಿಹೋದ ಸ್ಮಾರಕಗಳನ್ನು ಮರಳಿ ತೆಗೆಯುವ ಕಾರ್ಯ ಆಗಬೇಕು. ಪ್ರಾಚ್ಯಾವಶೇಷಗಳ ಅನ್ವೇಷಣೆಯಲ್ಲಿ ಕಣ್ಣಿಗೆ ಕಾಣುವ ಶಾಸನ, ಶಿಲ್ಪಕಲೆ, ದೇವಾಲಯ ಕುರಿತು ಸ್ಥಳೀಯರಿಗೆ ಇರುವ ಮಾಹಿತಿ ಅವರ ಆಚರಣೆಯನ್ನು ದಾಖಲಿಸಿ, ಪ್ರತಿಯೊಬ್ಬರ ಸಹಕಾರದಿಂದ ಲಕ್ಕುಂಡಿಯಲ್ಲಿ ಲಭ್ಯವಾಗುವ ಪ್ರಾಚ್ಯವಸ್ತುಗಳನ್ನು ಸಂಗ್ರಹಿಸಿ ವಸ್ತು ಸಂಗ್ರಹಾಲಯ ಮಾಡಿ, ಜಾಗತಿಕವಾಗಿ ಲಕ್ಕುಂಡಿಯ ಬಗ್ಗೆ ಗಮನ ಸೆಳೆದು ವಿಶ್ವದ ಪ್ರಸಿದ್ಧ ತಾಣವಾಗಿ ಮಾಡವ ಕಾರ್ಯವಾಗಬೇಕು ಎಂದು ಹೇಳಿದರು.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ಶರಣು ಗೋಗೇರಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ, ಶಾಸಕ ಸಿ.ಸಿ. ಪಾಟೀಲ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರುಗಳ ನೇತೃತ್ವದಲ್ಲಿ ಜರುಗುವ ಪ್ರಾಚ್ಯಾವಶೇಷಗಳ ಅನ್ವೇಷಣೆ ತಂಡಗಳ ವಿವರ ನೀಡಿ, ತಂಡದ ಕಾರ್ಯ ಹಾಗೂ ರೂಪುರೇಷೆ ತಿಳಿಸಿ ಸಂಪೂರ್ಣ ಪ್ರಾಚ್ಯಾವಶೇಷಗಳ ಅನ್ವೇಷಣೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಎಸ್, ಎನ್‌ಸಿಸಿ, ಸ್ವಯಂ ಸೇವಕರು, ಪ್ರವಾಸಿ ಗೈಡ್, ಇತಿಹಾಸ ಉಪನ್ಯಾಸಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ನಮ್ಮದು ತ್ಯಾಗ ಮಾಡುವ ಕುಟುಂಬ ವರೆತೂ ಆಸೆ ಪಡುವವರಲ್ಲ: ಸುಮಲತಾ!

0

ಮಂಡ್ಯ:-ಉಚಿತ, ಖಚಿತ, ನಿಶ್ಚಿತ ಅಂದು ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ.

ಈ ಸಂಬಂಧ ಮಂಡ್ಯದಲ್ಲಿ ಮಾತನಾಡಿದ ಅವರು, ʻಸ್ಥಾನಮಾನಕ್ಕಾಗಿ ಸುಮಲತಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿ ಸೇರಿದವಳು ನಾನು. ನಮ್ಮದು ತ್ಯಾಗ ಮಾಡಿರುವ ಕುಟುಂಬ, ಯಾವುದಕ್ಕೂ ಆಸೆ ಪಡುವ ಕುಟುಂಬವಲ್ಲ. ಕ್ಷೇತ್ರವನ್ನ ಬಿಟ್ಟು ಕೊಟ್ಟು ಬಿಜೆಪಿ ಸೇರಿದವಳು ನಾನು, ನಮ್ಮದು ತ್ಯಾಗ ಮಾಡಿರುವ ಕುಟುಂಬ. ಯಾವುದಕ್ಕೂ ಆಸೆ ಪಡುವ ಕುಟುಂಬವಲ್ಲ. ಮೋದಿ ಸರ್ಕಾರದ ಯೋಜನೆಯನ್ನ ಜನರಿಗೆ ತಲುಪಿಸುವ ಆಸೆ ಇದೆ. ಯಾವುದೇ ವೈಯಕ್ತಿಕ ಆಸೆ ನಮಗಿಲ್ಲ. ವೈಯಕ್ತಿಕ ಆಸೆಗಾಗಿ ರಾಜಕಾರಣ ಮಾಡುವವರ ಲೀಸ್ಟ್ ನಮ್ಮ ಮುಂದೆ ಇದೆ ಎಂದು ಕುಟುಕಿದ್ದಾರೆ.

ಬಿಜೆಪಿ ಪಕ್ಷ ಸೇರಿರುವುದೇ ನನಗೆ ಸ್ಥಾನಮಾನ. ಮೋದಿ ಹಿಂದೆ ನಾವು ಇದ್ದೇವೆ, ಅವರ ಕೆಳಗೆ ಕೆಲಸ ಮಾಡ್ತಿರುವುದೇ ನಮಗೆ ಗೌರವ. ನಾನು ಮಂಡ್ಯದಿಂದ ಎಂಪಿ ಆಗಿದ್ದೆ. ಅಂಬರೀಶ್ ಕ್ಯಾಬಿನೆಟ್ ಮಿನಿಸ್ಟರ್ ಆಗಿದ್ದರು. ಕೇಂದ್ರದಲ್ಲಿಯೂ ಮಂತ್ರಿಯಾಗಿದ್ದರು, ಎಲ್ಲವನ್ನೂ ನೋಡಿದ್ದೇವೆ, ಇದಕ್ಕಿಂತ ಇನ್ನೇನು ಸ್ಥಾನಮಾನ ಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

error: Content is protected !!