Home Blog Page 2075

ಗುರು-ವಿರಕ್ತರು ಬೇರೆ ಬೇರೆಯಲ್ಲ. ಅವರು ಎಂದಿಗೂ ಒಂದಾಗಿರಬೇಕು: ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗುರು-ವಿರಕ್ತರು ಬೇರೆ ಬೇರೆಯಲ್ಲ. ಅವರು ಎಂದಿಗೂ ಒಂದಾಗಿರಬೇಕು. ಇಬ್ಬರೂ ಮಾಡುತ್ತಿರುವುದು ಒಂದೇ ಕಾರ್ಯ. ಇದರಲ್ಲಿ ಯಾವುದೇ ಭೇದ-ಭಾವ ಬೇಡ. ಇದು ಶ್ರೀ ಹಾನಗಲ್ಲ ಗುರು ಕುಮಾರೇಶ್ವರರ ಆಶಯವೂ ಆಗಿತ್ತು ಎಂದು ಹಾಲಕೆರೆ ಸಂಸ್ಥಾನದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರು ಹೇಳಿದರು.

ನರೇಗಲ್ಲ ಹಿರೇಮಠದ ಜಾತ್ರಾಮಹೋತ್ಸವದ ಅಂಗವಾಗಿ ನಡೆದಿರುವ ಶ್ರೀ ಗುರು ಹಾನಗಲ್ಲ ಗುರು ಕುಮಾರೇಶ್ವರರ ಪುರಾಣ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ನಮ್ಮ ಗುರುಗಳಾಗಿದ್ದ ಲಿಂ. ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳವರ ಕನಸೂ ಸಹ ಅದೇ ಆಗಿತ್ತು. ಅದಕ್ಕಾಗಿಯೆ ನಮ್ಮ ಪಟ್ಟಾಧಿಕಾರದ ಸಮಯದಲ್ಲಿ ಧರ್ಮ ಧ್ವಜಾರೋಹಣವನ್ನು ಅವರು ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶ್ರೀಗಳವರಿಂದಲೆ ಮಾಡಿಸಿದ್ದರು. ಹಾನಗಲ್ಲ ಶ್ರೀಗಳವರ ಪುರಾಣವು ಎಲ್ಲ ಸ್ವಾಮಿಗಳು ತಮ್ಮ ಆತ್ಮಾವಲೋಕನ ಮಾಡಿಕೊಳ್ಳುವಂತಿದೆ. ಅವರು ತಮಗಾಗಿ ಎಂದಿಗೂ ಬದುಕದೆ ಸಮಾಜಕ್ಕಾಗಿ, ಸಮಾಜೋದ್ಧಾರಕ್ಕಾಗಿ ಬದುಕಿದರು. ಇವರು ಜನಿಸಿ ಬರುತ್ತಾರೆ ಎಂಬ ಭವಿಷ್ಯವನ್ನು ಗಟ್ಟಿವಾಳಯ್ಯ ಎಂಬ ಶರಣರು ಒಂಬೈನೂರು ವರ್ಷಗಳ ಹಿಂದೆಯೆ ಹೇಳಿದ್ದರು. ಅದು ನಿಜವಾಯಿತಲ್ಲದೆ ಒಡೆದು ಛಿದ್ರವಾಗಿ ಹೋದ ವೀರಶೈವ ಸಮಾಜವನ್ನು ಮತ್ತೆ ಒಂದುಗೂಡಿಸುವಲ್ಲಿ ಅವರ ಪಾತ್ರ ದೊಡ್ಡದು ಎಂದು ಶ್ರೀಗಳು ಹೇಳಿದರು.

ಶ್ರೀ ಅನ್ನದಾನ ಸಂಸ್ಥೆಯಿAದ ಶೈಕ್ಷಣಿಕ ಸಂಸ್ಥೆಗಳು ಪ್ರಾರಂಭವಾಗಲು ಹಾನಗಲ್ಲ ಕುಮಾರೇಶ್ವರರೆ ಮೂಲ ಕಾರಣ. ಅವರ ಪ್ರೇರಣೆಯಿಂದ ಬೆತ್ತದ ಅಜ್ಜನವರು ಅನುಷ್ಠಾನಕ್ಕೆ ಕುಳಿತದ್ದು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದು. ಕನ್ನಡ ನಾಡಿನ ಮಠಗಳನ್ನು ಉಳಿಸಿ, ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ತಮ್ಮ ಜೀವನದ ಪ್ರತಿ ಕ್ಷಣವನ್ನು ಸಮಾಜದ ಉದ್ಧಾರಕ್ಕಾಗಿಯೆ ತೇಯ್ದವರು ಕುಮಾರೇಶ್ವರರು. ಭೌತಿಕ ವಸ್ತುಗಳಿಂದ ಯಾವ ಸುಖವೂ ಇಲ್ಲ. ಅಂತರಂಗದಲ್ಲಿ ಪರಿವರ್ತನೆಯಾದಾಗ ಮಾತ್ರ ಮನುಷ್ಯನಲ್ಲಿ ಏನಾದರೂ ಬದಲಾವಣೆಯಾಗಲು ಸಾಧ್ಯ. ಇಂತಹ ಬದಲಾವಣೆಯನ್ನು ನಿಮ್ಮಲ್ಲಿ ತರಲು ಶ್ರೀ ಮಲ್ಲಿಕಾರ್ಜುನ ಶ್ರೀಗಳವರು ಈ ಜಾತ್ರಾ ಮಹೋತ್ಸವವನ್ನು ಏರ್ಪಡಿಸಿ, ಪುರಾಣವನ್ನು ಹಚ್ಚಿ ನಿಮ್ಮೆಲ್ಲರಿಗೂ ಸಂಸ್ಕಾರದ ರಸದೌತಣವನ್ನೇ ಉಣಬಡಿಸುತ್ತಿದ್ದಾರೆ. ಇದು ಶ್ಲಾಘನೀಯ ಎಂದರು.

ಪA. ಅನ್ನದಾನ ಶಾಸ್ತಿçಗಳು ಮಾತನಾಡಿ, ಶಿವಯೋಗ ಮಂದಿರ ಸ್ಥಾಪನೆಯಲ್ಲಿ ಕುಮಾರೇಶ್ವರರ ಪಾತ್ರ ಬಹಳಷ್ಟು ದೊಡ್ಡದಿದೆ. ನೀವು ಶಿವಯೋಗ ಮಂದಿರದ ಸೇವೆಯನ್ನು ಎಂದಿಗೂ ಮಾಡಿ ಪುಣ್ಯ ಸಂಪಾದಿಸಿಕೊಳ್ಳಿ. ಹಾನಗಲ್ಲ ಕುಮಾರೇಶ್ವರರ ಕ್ರಿಯಾಶೀಲತೆಗೆ ಶಿವಯೋಗ ಮಂದಿರವೇ ಸಾಕ್ಷಿಯಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ: ಅಮರೀಶ ತೆಂಬದಮನಿ

0

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಕಾಂಗ್ರೆಸ್ ಪಕ್ಷದ ಜನಪರ ಆಡಳಿತವನ್ನು ಮೆಚ್ಚಿ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನತೆ ಪಕ್ಷದ ಗೆಲುವಿಗೆ ಮತ ನೀಡಿದ್ದಾರೆ ಎಂದು ಲಕ್ಮೇಶ್ವರ ನಗರ ಘಟಕದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರೀಶ ತೆಂಬದಮನಿ ಹೇಳಿದರು.

ಅವರು ಶನಿವಾರ ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದ ಬಳಿಕ ಪಟ್ಟಣದ ಶಿಗ್ಲಿ ಕ್ರಾಸ್‌ನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದರು.

ವಿರೋಧ ಪಕ್ಷದವರು ಕಾಂಗ್ರೆಸ್ ಪಕ್ಷದ ಮೇಲೆ ವಿನಾಕಾರಣ ಆರೋಪ ಮಾಡಿ ಪ್ರಚಾರ ಮಾಡಿದರೂ ಮತದಾರರು ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಪಕ್ಷದ ಗ್ಯಾರಂಟಿ ಯೋಜನೆಗಳ ಜತೆಗೆ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಜನ ಮನ್ನಣೆ ನೀಡಿದಂತಾಗಿದ್ದು, ಇನ್ನಾದರೂ ಬಿಜೆಪಿ ಸುಳ್ಳು ಆರೋಪ, ಅಪಪ್ರಚಾರ ಕೈಬಿಡಬೇಕು ಎಂದರು.

ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಕಾಂಗ್ರೆಸ್ ಪರ ಘೋಷಣೆ ಕೂಗಿದರು. ಈ ವೇಳೆ ಪಕ್ಷದ ಮುಖಂಡರಾದ ಪದ್ಮರಾಜ ಪಾಟೀಲ, ಸೋಮಣ್ಣ ಬೆಟಗೇರಿ, ಪುರಸಭೆ ಸದಸ್ಯ ಬಸವರಾಜ ಓದುನವರ, ನೀಲಪ್ಪ ಶರಸೂರಿ, ಯಲಪ್ಪ ಸೂರಣಗಿ, ಬಾಬಣ್ಣ ಅಳವಂಡಿ, ನಾಗರಾಜ ದೊಡ್ಡಮನಿ, ಇಸ್ಮಾಯಿಲ್ ಆಡೂರ, ನೀಲಪ್ಪ ಪಡಗೇರಿ, ಕಿರಣ ನವಲೆ, ಪ್ರಕಾಶ ಕೊಂಚಿಗೇರಿಮಠ, ಅಣ್ಣಪ್ಪ ರಾಮಗೇರಿ, ಶಿದ್ದಲಿಂಗಯ್ಯ ಪಶುಪತಿಮಠ, ಅಪ್ಜಲ್ ರಿತ್ತಿ, ಮಂಜಪ್ಪ ಶರಸೂರಿ, ಸೋಮಣ್ಣ ಲಮಾಣಿ, ನಂದೀಶ ಚಕ್ರಸಾಲಿ, ಹನುಮಂತ ಶರಸೂರಿ, ಎಂ.ಎA. ಗಾಡಗೊಳಿ, ರಿಯಾಜ ಡಾಲಾಯತ್ ಸೇರಿ ಕಾಂಗ್ರೆಸ್ ಕಾರ್ಯಕರ್ತರಿದ್ದರು.

ಮಹಿಳೆಯರು ಹೈನುಗಾರಿಕೆಯನ್ನು ಉದ್ಯೋಗವನ್ನಾಗಿಸಿಕೊಂಡು ಆರ್ಥಿಕವಾಗಿ ಮುನ್ನಡೆ ಸಾಧಿಸಬಹುದು: ಡೀನ್ ರಾಮಚಂದ್ರ ಬಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳೆಯರು ಹೈನುಗಾರಿಕೆಯನ್ನು ಉದ್ಯೋಗವನ್ನಾಗಿ ಮಾಡಿಕೊಂಡು ಆ ಮೂಲಕ ಆರ್ಥಿಕವಾಗಿ ಮುನ್ನಡೆ ಸಾಧಿಸಬಹುದಾಗಿದೆ ಎಂದು ಗದುಗಿನ ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ರಾಮಚಂದ್ರ ಬಿ ಅಭಿಪ್ರಾಯಪಟ್ಟರು.

ಗದುಗಿನ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಗದಗ ಪಶುವೈದ್ಯಕೀಯ ಮಹಾವಿದ್ಯಾಲಯ ಹಾಗೂ ಔಟ್‌ರಿಚ್ ಸಂಸ್ಥೆಯ ಆಶ್ರಯದಲ್ಲಿ ಏರ್ಪಡಿಸಿದ್ದ ಔಟ್‌ರಿಚ್ ಸಂಸ್ಥೆಯ ವಿಸ್ತರಣಾ ಕಾರ್ಯಕರ್ತರಿಗೆ ‘ವೈಜ್ಞಾನಿಕ ಹೈನುಗಾರಿಕೆ’ 2 ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ, ಕೃಷಿ ಅಧಾರಿತ ಉಪಕಸಬುಗಳು ಕೈಗೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಸರ್ಕಾರ ಮಹಿಳಾ ಅಭಿವೃದ್ಧಿಗಾಗಿ ಹತ್ತು ಹಲವೆಂಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಆಧುನಿಕತೆಯ ಇಂದಿನ ದಿನಗಳಲ್ಲಿ ಹೈನುಗಾರಿಕೆಗೆ ಉತ್ತಮ ಅವಕಾಶಗಳಿವೆ ಸ್ವಲ್ಪು ಕಷ್ಟಪಟ್ಟರೆ ಹೆಚ್ಚಿನ ಲಾಭವನ್ನು ಪಡೆಯಬಹುದು ಎಂದರು.

ಡಾ.ಸಿದ್ಧಲಿಂಗಯ್ಯಸ್ವಾಮಿ ಹಿರೇಮಠ ಅವರು ಆಕಳು ಮತ್ತು ಎಮ್ಮೆ ತಳಿಯ ಮಹತ್ವ, ಡಾ.ಮೋಹನ ಪಿ ‘ಪಶು ಕೃತಕ ಗರ್ಭಧಾರಣೆ, ಡಾ.ಶಿವಾನಂದ ಗೌಡರ ‘ಮೇವು ಉತ್ಪಾದನೆ ಮತ್ತು ನಿರ್ವಹಣೆ,  ಡಾ.ಅರುಣ ಸೋಮಗಂಧ ‘ಆಕಳು ಮತ್ತು ಎಮ್ಮೆಗಳ ರೋಗಗಳು ಹಾಗೂ ಹತೋಟಿ, ಡಾ.ಜಗನ್ನಾಥರಾವ್ ‘ಹಾಲು ಮತ್ತು ಹಾಲು ಉತ್ಪನ್ನಗಳು’ ವಿಷಯವಾಗಿ ಪರಿಣಾಮಕಾರಿ ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಔಟ್‌ರಿಚ್ ಸಂಸ್ಥೆಯ ಹಿರಿಯ ಕಾರ್ಯಕ್ರಮ ಸಂಯೋಜಕ ಗೋವಿಂದಯ್ಯ ಬಿ, ಕಾರ್ಯಕ್ರಮ ಸಂಯೋಜಕ ಲೋಹಿತ್ ಕಾಸರ ಮತ್ತು ರಿಲಾಯನ್ಸ್ ಪೌಂಡೇಶನ್‌ನ ಜೀರೋಂಪಿಯೋ ಉಪಸ್ಥಿತರಿದ್ದರು.

ಎರಡು ದಿನಗಳವರೆಗೆ ನಡೆದ ತರಬೇತಿ ಶಿಬಿರದಲ್ಲಿ ಔಟ್‌ರಿಚ್ ಸಂಸ್ಥೆಯ ವಿಸ್ತರಣಾ ಮಹಿಳಾ ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೋಂಡು ಹಲವಾರು ವಿಷಯಗಳನ್ನು ತಿಳಿದುಕೊಂಡರು ಹಾಗೂ ತಜ್ಞರೊಂದಿಗೆ ಸಂವಾದ ನಡೆಸಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡರು.

ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ನವರು ಗೆಲುವು ಸಾಧಿಸಿದ್ದಾರೆ: ಬಸವರಾಜ್ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ- ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ ಅಂತ ಆಶಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ  ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಬಂದ ನಂತರ  ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷ ಅಂತ ಕಾಂಗ್ರೆಸ್  ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ ಎಂದರು.

ನಾವು ಶಿಗ್ಗಾವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ರ‍್ವ ಹಾಗೆಯೇ ಮುಂದುವರೆಯಲಿ ಅಂತ ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಅಂತ ಬಯಸುತ್ತೇನೆ. ಚುನಾವಣೆಯಲ್ಲಿ 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು, ಮಾಜಿ ಶಾಸಕರು ಬಂದು ಇಲ್ಲಿಯೇ ಕುಳಿತು ಪ್ರಚಾರ ಮಾಡಿದರು. ಸರ್ಕಾರ ವರ್ಸಸ್ ಬೊಮ್ಮಾಯಿ ಎಂದೇ ಬಿಂಬಿತವಾಯಿತು. ಅವರು ಸರ್ಕಾರದ ಯಂತ್ರ, ಹಣದಿಂದ ಚುನಾವಣೆ ಗೆದ್ದಿದ್ದಾರೆ ಎಂದು ಆರೋಪಿಸಿದರು.

ಶಿಗ್ಗಾವಿಯಲ್ಲಿ ಎಂಪಿ ಚುನಾವಣೆ ನಂತರ ನಾವು ಚನ್ನಾಗಿ ಕೆಲಸ ಮಾಡಿದ್ದೇವು. ಆದರೆ ಇಡೀ ರ‍್ಕಾರನೇ ಬಂತು. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಅನುಕೂಲ ಇರುತ್ತದೆ‌. ನಾವು ಕೂಡ ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 13 ಕ್ಷೇತ್ರ ಗೆದ್ದಿದ್ದೇವು. ಈ ಸರ್ಕಾರದ  ಕೆಲಸದ  ಮೇಲೆ ಮತ ಬಂದಿದೆ ಅಂತೇನಿಲ್ಲ. ನಾವು ಉಪ ಚುನಾವಣೆಯಲ್ಲಿ ಅಷ್ಟು ಸ್ಥಾನ ಗೆದ್ದು ಅದಾದ ಮೇಲೆ ರ‍್ಕಾರ ಕಳೆದುಕೊಂಡಿದ್ದೇವು. ಹೀಗಾಗಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ತಾಳ್ಮೆಯ ಪ್ರತಿರೂಪ: ಡಾ. ಕಲ್ಲಯ್ಯಜ್ಜ

ವಿಜಯಸಾಕ್ಷಿ ಸುದ್ದಿ, ಗದಗ: ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಾಕಷ್ಟು ಕಷ್ಟ ಬಂದರೂ ಧೃತಿಗೆಡದೇ ಕಠೋರ ತಪಸ್ಸು ಮಾಡುವ ಮೂಲಕ ಶಿವನೊಲುಮೆಯನ್ನು ಪಡೆದು ಸಮಾಜದ ಉದ್ಧಾರಕ್ಕಾಗಿ ಬಾಳಿ ಬದುಕಿ ಇಡೀ ಮಾನವ ಕುಲಕ್ಕೆ ಮತ್ತು ಸರ್ವ ಸಮಾಜದ ಮಹಿಳೆಯರಿಗೆ ಮಾದರಿಯಾಗಿದ್ದಾಳೆ ಎಂದು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಡಾ. ಕಲ್ಲಯ್ಯಜ್ಜನವರು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ವೀರೇಶ್ವರ ಪುಣ್ಯಾಶ್ರಮದಲ್ಲಿ ಗದಗ ಜಿಲ್ಲಾ ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ರಡ್ಡಿ ಸಮಾಜ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ತಿಕ ಮಾಸದ ದೀಪೋತ್ಸವವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ದಯಪಾಲಿಸಿದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ಅಗಾಧವಾದ ಕೊಡುಗೆ ನೀಡಿದ್ದಾರೆ. ಅದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಲ್ಲಮ್ಮನ ಕಾಯಕನಿಷ್ಠೆ, ದೈವಭಕ್ತಿ ಮತ್ತು ಆದರ್ಶಮಯ ಜೀವನದ ಬಲದಿಂದ ಇಂದು ನಾವು ನೀವೆಲ್ಲರೂ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ ಎಂದರು.

ಮಹಾಯೋಗಿ ವೇಮನ ಅವರು ತ್ಯಾಗ ಜೀವನ ನಡೆಸುವ ಮೂಲಕ ಹಾಗೂ ವಚನ ಸಾಹಿತ್ಯಕ್ಕೆ ಬಹು ದೊಡ್ಡ ಆದರ್ಶದ ಕೊಡುಗೆಯನ್ನು ನೀಡುವ ಮೂಲಕ ಸಮಾಜದ ಸನ್ಮಾರ್ಗಕ್ಕೆ ಕಾರಣರಾಗಿದ್ದಾರೆ ಎಂದು ಬಣ್ಣಿಸಿದರು.

ಗದಗ ಜಿಲ್ಲಾ ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಶ್ರೀ ಮಹಾಯೋಗಿ ವೇಮನ ರಡ್ಡಿ ಸಂಘ ಸಮಾಜಮುಖಿ, ಜನಮುಖಿಯಾಗಿ ಒಳ್ಳೆಯ ಕಾರ್ಯ ಮಾಡುತ್ತಿದೆ ಎಂದರಲ್ಲದೆ, ಸಮಾಜದ ಮುಂಚೂಣಿಯಲ್ಲಿರುವ ಹಿರಿಯರು, ಮಹಿಳೆಯರು, ಯುವಕರು ಸಮಾಜದ ಬಲವರ್ಧನೆಗೆ ಶ್ರಮಿಸುತ್ತಿರುವದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಎರಡೂ ಸಂಘಟನೆಯ ಪದಾಧಿಕಾರಿಗಳು, ಹಿರಿಯರು, ಮಹಿಳೆಯರು ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು: BJPಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ – ಹೆಚ್ ಕೆ ಪಾಟೀಲ್

0

ಗದಗ: ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ. ರಾಜ್ಯದ ಉಪಚುನಾವಣೆ ಬಹಳ ಮಹತ್ವದ್ದಾಗಿತ್ತು. ರಾಜ್ಯದ ಹಲವಾರು ಬೆಳೆವಣಿಗೆಗಳಿಗೆ ಸಮರ್ಪಕ ಉತ್ತರ ನೀಡಿ ಮಂಗಳಾರತಿ ಮಾಡಿದ್ದಾರೆ ಎಂದಿದ್ದಾರೆ.

ವಕ್ಫ್ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡಿದ್ದರು. ಸಮಾಜ ಒಡೆಯುವ ದೊಡ್ಡ ಹುನ್ನಾರ ಮಾಡಿದ್ದರು. ಗ್ಯಾರಂಟಿ ನಿಲ್ಲಿಸುತ್ತೇವೆ ಅಂತ ಪ್ರಧಾನಿವರಿಗೂ ಸುಳ್ಳು ಹೇಳಿ ಗೊಂದಲ ಸೃಷ್ಟಿಸಿದ್ದರು. ಮುಖ್ಯಮಂತ್ರಿ ತೇಜೋವಧೆ ಮಾಡಿ ಸರ್ಕಾರ ಉಳಿಯೋದಿಲ್ಲ ಅಂತ ಹೇಳಿದ್ರು. ಆದರೆ ಜಾಗೃತ ಮತದಾರ ಬಿಜೆಪಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವ್ಯಂಗವಾಡಿದ್ದಾರೆ.

ಚುನಾವಣೆ ಸೋಲಿನಿಂದ ಬಿಜೆಪಿ ಸುಳ್ಳು ನಡೆಯಲ್ಲ ಅಂತ ಅರಿತುಕೊಳ್ಳಬೇಕು. ಸಮಾಜ ಒಡೆಯುವ ಕೆಟ್ಟ ಮನಸ್ಥಿತಿಗಳಿಗೆ ತಕ್ಕ ಶಾಸ್ತಿ ಆಗಿದೆ. ವೈ ನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಿಯಾಂಕಾ ಗಾಂಧಿ ಆಯ್ಕೆ ಆಗಿದ್ದಾರೆ. ಈ ಚುನಾವಣೆ ಪರಿಣಾಮಗಳು ಬಿಜೆಪಿಯನ್ನ ಅಷ್ಟೇ ಸೋಲಿಸಿಲ್ಲ, ಸುಳ್ಳು ಹೇಳುವ ಪ್ರವೃತ್ತಿಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾ ಅವರನ್ನ ಸೋಲಿಸಿದೆ ಎಂದು ಹೇಳಿದರು.

ಇನ್ನೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಆಗಿರೋ ಪರಿಣಾಮ ಎಲ್ಲರಿಗೂ ಆಶ್ಚರ್ಯ ತಂದಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಜೊತೆಗೆ ಎಣಿಕೆ ಕಾರ್ಯದಲ್ಲಿ ಅನುಮಾನ ಬಂದಿದೆ. ಈ ಬಗ್ಗೆ ರಾಜಕೀಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ನನಗೆ ಸಂಪೂರ್ಣ ಮಾಹಿತಿ ಇಲ್ಲ ಈ ಬಗ್ಗೆ ಆದ್ದರಿಂದ ಈ ಬಗ್ಗೆ ಕಾಯ್ದು ನೋಡಿ ಅವಲೋಕನ ಮಾಡ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ಮುಖಂಡರಾದ ಬಿ‌ ಬಿ ಅಸೂಟಿ, ಪ್ರಭು ಬುರಬುರೆ ಹಾಗೂ ಅಶೋಕ ಮಂದಾಲಿ ಸೇರಿದಂತೆ ಇತರರು ಇದ್ದರು.

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

0

ರಾಮನಗರ: ಸೋಲಿನ ಹೊಣೆ ನಾನೇ ಹೊರುತ್ತೇನೆ, ನೆಮ್ಮದಿಯಿಂದ ಮಲಗುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೂರು ಬಾರಿ ಸೋತಿದ್ದೇನೆ ಒಪ್ಪಿಕೊಳ್ಳುತ್ತೇನೆ. ನಾನು ಗೆಲುವನ್ನು ನೋಡಿಲ್ಲ. ಇತಿಹಾಸ ನೋಡಿದರೆ ಅಬ್ರಾಹಂ ಲಿಂಕನ್, ಅಂಬೇಡ್ಕರ್, ವಾಜಪೇಯಿ ಸೋತಿದ್ದು ಹೇಳುತ್ತಾರೆ.

ಈ ಪರಿಸ್ಥಿತಿಯಲ್ಲಿ ಕಾರ್ಯಕರ್ತರಿಗೆ ಕೊಟ್ಟು ಅವರು ಸೋತಿದ್ದರೆ ಕುಟುಂಬ, ರಾಜಕಾರಣ, ಸ್ವಾರ್ಥ ಎಂಬ ಆರೋಪ ಬರುತ್ತಿತ್ತು. ಇವಾಗ ಈ ಹೊಣೆ ನಾನೇ ಹೊರುತ್ತೇನೆ ನೆಮ್ಮದಿಯಿಂದ ಮಲಗುತ್ತೇನೆ. ಈ ಒಂದು ಸೋಲಿನಿಂದ ಜಿಲ್ಲೆಯಲ್ಲಿ ಜೆಡಿಎಸ್ ಮುಕ್ತ ಅಂದುಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಲೋಕಸಭೆಯಲ್ಲಿ ಸೋತರು ಅವರ ಬಲವಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹಾಗೆಯೇ ಈ ಗೆಲವಿನಿಂದ ಅವರ ಬಲ ಮತ್ತೆ ಹೆಚ್ಚಿದೆ ಎನ್ನಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಂತೋಷವಾಗಿದೆ ಎಂದು ತಿಳಿಸಿದರು.

ಎಲ್ಲರೂ ಬಹಳ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಆದರೆ ಚುನಾವಣೆ ಸೋಲಿಗೆ ಕೆಲವು ಕಾರಣ ಇರುತ್ತದೆ. ಒಂದು ಸಮುದಾಯದ ಮತ ಒಂದು ಕಡೆ ಕ್ರೋಢಿಕರಿಸಿದ್ದು ಕಾರಣ ಆಗಿರಬಹುದು. ನಮ್ಮ ಪಕ್ಷ ಸಾಕಷ್ಟು ಬಾರಿ ಆ ಸಮುದಾಯದ ಜೊತೆ ನಿಂತಿದ್ದೇವೆ. ಆದರೂ ಆ ಸಮುದಾಯ ನಮ್ಮ ಜೊತೆ ನಿಂತಿಲ್ಲ. ಎದೆಗುಂದಲ್ಲ ಹೋರಾಟದ ಹಿನ್ನೆಲೆಯಲ್ಲಿ ಈ ಪಕ್ಷ ಕಟ್ಟಿದ್ದೇವೆ. ವಯಸ್ಸು ಚಿಕ್ಕದಿದೆ ಎಲ್ಲವನ್ನೂ ಸಮಚಿತ್ತದಿಂದ ತಗೆದುಕೊಂಡಿದ್ದೇನೆ. ರಾಜ್ಯದ ನಿಷ್ಠಾವಂತ ಕಾರ್ಯಕರ್ತರೆಲ್ಲರಿಗೂ ಧ್ವನಿಯಾಗಿ ಇರುತ್ತೇನೆ ಎಂದರು.

ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಬೆಟಗೇರಿ ಸಿಪಿಐ ಸಿಂಧೆ ಗುಂಡೇಟು!

0

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. ಬಗರ್ ಅಲಿ ಅಮ್ಜದ್ ಅಲಿ ಇರಾನಿ(28) ಎಂಬ ಆರೋಪಿಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸಿಪಿಐ ಧೀರಜ್ ಸಿಂಧೆಯಿಂದ ಗುಂಡಿನ ದಾಳಿ ನಡೆದಿದೆ.ಆರೋಪಿ ಬಗರ್ ಅಲಿ ಮೊಣಕಾಲಿಗೆ ಗಾಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಡಾವಣೆ ಪೊಲೀಸ್ ಠಾಣೆ ಪೊಲೀಸರಾದ ಹನಮಂತ ಓಲೇಕಾರ, ಅಶೋಕ್ ಗಡದ ಮೇಲೆ ಆರೋಪಿ ಹಲ್ಲೆ ಮಾಡಿದ್ದು, ಈ‌ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಬಿ ಎಸ್ ನೇಮಗೌಡ ಮಾಹಿತಿ ನೀಡಿದ್ದು, ಪೊಲೀಸರ ಹಲ್ಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಆರೋಪಿಯು, ಗದಗ ನಗರದ ಹೆಲ್ತ್ ಕ್ಯಾಂಪ್ ಬಳಿ ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಕರೆದೊಯ್ಯುವಾಗ ಜೂನ್ 28 ರಂದು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದನು.

ಹಲ್ಲೆ ಬಳಿಕ ಸ್ಕೂಟಿಯಲ್ಲಿ ಹೊಳೆಆಲೂರ ಗ್ರಾಮಕ್ಕೆ ಆರೋಪಿ ಹೋಗಿದ್ದನು. ನಂತರ ಹೊಳೆಆಲೂರನಿಂದ ಟ್ರೈನ್ ಮೂಲಕ‌ ಮಹಾರಾಷ್ಟ್ರಕ್ಕೆ ಹೋಗಿದ್ದ. ಇಂದು ಬಡಾವಣೆ ಪೊಲೀಸರು ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ್‌ ಬರುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗುವಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಎಸ್ಪಿ ಬಿ ಎಸ್ ನೇಮಗೌಡ ಹೇಳಿದ್ದಾರೆ.

ಅಪ್ರಾಪ್ತೆ ಬಾಲಕಿ ಗರ್ಭಿಣಿ: ಸ್ವಂತ ಮಾವನಿಂದಲೇ ನೀಚ ಕೃತ್ಯ!

0

ನೆಲಮಂಗಲ:- ಸ್ವಂತ ಮಾವನಿಂದಲೇ ಅಪ್ರಾಪ್ತೆ ಬಾಲಕಿ ಗರ್ಭಿಣಿ ಆಗಿರುವ ಘಟನೆ ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಬಾಲಕಿ ತಾಯಿ ದೂರಿನ ಆಧಾರದ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಬಿಎನ್​ಎಸ್ ಜೊತೆಗೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಸಮಯಕ್ಕೆ ಸರಿಯಾಗಿ ಮುಟ್ಟು ಆಗುತ್ತಿರಲಿಲ್ಲ. ಹೀಗಾಗಿ ಮಗಳನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ತಪಾಸಣೆ ಮಾಡಿಸಿದ್ದಾರೆ.

ಈ ವೇಳೆ ಬಾಲಕಿಯನ್ನ ತಪಾಸಣೆ ಮಾಡಿದ ವೈದ್ಯೆ ಡಾ.ಸೋನಿಯಾ ಅವರು ಮಗಳು ಗರ್ಭಿಣಿಯಾಗಿರುವುದು ಹೇಳಿದ್ದಾರೆ. ವಿಷಯ ತಿಳಿದ ಬಾಲಕಿಯ ತಾಯಿಗೆ ಅಘಾತವಾಗಿದೆ.ಸೆಪ್ಟೆಂಬರ್​ನಲ್ಲಿ ಆರೋಪಿ ಸೋದರ ಮಾವ ಮನೆಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನೇಣಿಗೆ ಶರಣಾದ ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ: ಕಾರಣ ನಿಗೂಢ!

0

ದಾವಣಗೆರೆ:- ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ನೇಣಿಗೆ ಶರಣಾಗಿದ್ದು, ಸೂಸೈಡ್ ಗೆ ಕಾರಣ ತಿಳಿದು ಬಂದಿಲ್ಲ. ಘಟನೆ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

34 ವರ್ಷದ ಶರತ್‌ ಜಿ.ಎನ್ ನೇಣಿಗೆ ಶರಣಾದ ವ್ಯಕ್ತಿ. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ಶುಕ್ರವಾರ ಸ್ವಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ ಶರತ್, ಇತ್ತೀಚಿಗೆ ರಾಜಕೀಯದಲ್ಲಿ ಹೆಚ್ಚಿನ ಒಲವು ವ್ಯಕ್ತ ಪಡಿಸಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು.

ಶರತ್ ಹತ್ತಾರು ಕಡೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಸಂಸ್ಥೆಗಳನ್ನ ಕೂಡ ಆರಂಭಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಯ ಕಾರಣ ನಿಗೂಢವಾಗಿದೆ.

error: Content is protected !!