Home Blog Page 2076

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

0

ರಾಮನಗರ: ಸೋಲಿನ ಹೊಣೆ ನಾನೇ ಹೊರುತ್ತೇನೆ, ನೆಮ್ಮದಿಯಿಂದ ಮಲಗುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೂರು ಬಾರಿ ಸೋತಿದ್ದೇನೆ ಒಪ್ಪಿಕೊಳ್ಳುತ್ತೇನೆ. ನಾನು ಗೆಲುವನ್ನು ನೋಡಿಲ್ಲ. ಇತಿಹಾಸ ನೋಡಿದರೆ ಅಬ್ರಾಹಂ ಲಿಂಕನ್, ಅಂಬೇಡ್ಕರ್, ವಾಜಪೇಯಿ ಸೋತಿದ್ದು ಹೇಳುತ್ತಾರೆ.

ಈ ಪರಿಸ್ಥಿತಿಯಲ್ಲಿ ಕಾರ್ಯಕರ್ತರಿಗೆ ಕೊಟ್ಟು ಅವರು ಸೋತಿದ್ದರೆ ಕುಟುಂಬ, ರಾಜಕಾರಣ, ಸ್ವಾರ್ಥ ಎಂಬ ಆರೋಪ ಬರುತ್ತಿತ್ತು. ಇವಾಗ ಈ ಹೊಣೆ ನಾನೇ ಹೊರುತ್ತೇನೆ ನೆಮ್ಮದಿಯಿಂದ ಮಲಗುತ್ತೇನೆ. ಈ ಒಂದು ಸೋಲಿನಿಂದ ಜಿಲ್ಲೆಯಲ್ಲಿ ಜೆಡಿಎಸ್ ಮುಕ್ತ ಅಂದುಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಲೋಕಸಭೆಯಲ್ಲಿ ಸೋತರು ಅವರ ಬಲವಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹಾಗೆಯೇ ಈ ಗೆಲವಿನಿಂದ ಅವರ ಬಲ ಮತ್ತೆ ಹೆಚ್ಚಿದೆ ಎನ್ನಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಂತೋಷವಾಗಿದೆ ಎಂದು ತಿಳಿಸಿದರು.

ಎಲ್ಲರೂ ಬಹಳ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಆದರೆ ಚುನಾವಣೆ ಸೋಲಿಗೆ ಕೆಲವು ಕಾರಣ ಇರುತ್ತದೆ. ಒಂದು ಸಮುದಾಯದ ಮತ ಒಂದು ಕಡೆ ಕ್ರೋಢಿಕರಿಸಿದ್ದು ಕಾರಣ ಆಗಿರಬಹುದು. ನಮ್ಮ ಪಕ್ಷ ಸಾಕಷ್ಟು ಬಾರಿ ಆ ಸಮುದಾಯದ ಜೊತೆ ನಿಂತಿದ್ದೇವೆ. ಆದರೂ ಆ ಸಮುದಾಯ ನಮ್ಮ ಜೊತೆ ನಿಂತಿಲ್ಲ. ಎದೆಗುಂದಲ್ಲ ಹೋರಾಟದ ಹಿನ್ನೆಲೆಯಲ್ಲಿ ಈ ಪಕ್ಷ ಕಟ್ಟಿದ್ದೇವೆ. ವಯಸ್ಸು ಚಿಕ್ಕದಿದೆ ಎಲ್ಲವನ್ನೂ ಸಮಚಿತ್ತದಿಂದ ತಗೆದುಕೊಂಡಿದ್ದೇನೆ. ರಾಜ್ಯದ ನಿಷ್ಠಾವಂತ ಕಾರ್ಯಕರ್ತರೆಲ್ಲರಿಗೂ ಧ್ವನಿಯಾಗಿ ಇರುತ್ತೇನೆ ಎಂದರು.

ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಬೆಟಗೇರಿ ಸಿಪಿಐ ಸಿಂಧೆ ಗುಂಡೇಟು!

0

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. ಬಗರ್ ಅಲಿ ಅಮ್ಜದ್ ಅಲಿ ಇರಾನಿ(28) ಎಂಬ ಆರೋಪಿಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸಿಪಿಐ ಧೀರಜ್ ಸಿಂಧೆಯಿಂದ ಗುಂಡಿನ ದಾಳಿ ನಡೆದಿದೆ.ಆರೋಪಿ ಬಗರ್ ಅಲಿ ಮೊಣಕಾಲಿಗೆ ಗಾಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಡಾವಣೆ ಪೊಲೀಸ್ ಠಾಣೆ ಪೊಲೀಸರಾದ ಹನಮಂತ ಓಲೇಕಾರ, ಅಶೋಕ್ ಗಡದ ಮೇಲೆ ಆರೋಪಿ ಹಲ್ಲೆ ಮಾಡಿದ್ದು, ಈ‌ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಬಿ ಎಸ್ ನೇಮಗೌಡ ಮಾಹಿತಿ ನೀಡಿದ್ದು, ಪೊಲೀಸರ ಹಲ್ಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಆರೋಪಿಯು, ಗದಗ ನಗರದ ಹೆಲ್ತ್ ಕ್ಯಾಂಪ್ ಬಳಿ ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಕರೆದೊಯ್ಯುವಾಗ ಜೂನ್ 28 ರಂದು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದನು.

ಹಲ್ಲೆ ಬಳಿಕ ಸ್ಕೂಟಿಯಲ್ಲಿ ಹೊಳೆಆಲೂರ ಗ್ರಾಮಕ್ಕೆ ಆರೋಪಿ ಹೋಗಿದ್ದನು. ನಂತರ ಹೊಳೆಆಲೂರನಿಂದ ಟ್ರೈನ್ ಮೂಲಕ‌ ಮಹಾರಾಷ್ಟ್ರಕ್ಕೆ ಹೋಗಿದ್ದ. ಇಂದು ಬಡಾವಣೆ ಪೊಲೀಸರು ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ್‌ ಬರುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗುವಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಎಸ್ಪಿ ಬಿ ಎಸ್ ನೇಮಗೌಡ ಹೇಳಿದ್ದಾರೆ.

ಅಪ್ರಾಪ್ತೆ ಬಾಲಕಿ ಗರ್ಭಿಣಿ: ಸ್ವಂತ ಮಾವನಿಂದಲೇ ನೀಚ ಕೃತ್ಯ!

0

ನೆಲಮಂಗಲ:- ಸ್ವಂತ ಮಾವನಿಂದಲೇ ಅಪ್ರಾಪ್ತೆ ಬಾಲಕಿ ಗರ್ಭಿಣಿ ಆಗಿರುವ ಘಟನೆ ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಬಾಲಕಿ ತಾಯಿ ದೂರಿನ ಆಧಾರದ ಮೇಲೆ ನೆಲಮಂಗಲ ಟೌನ್ ಠಾಣೆಯಲ್ಲಿ ಬಿಎನ್​ಎಸ್ ಜೊತೆಗೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಸಮಯಕ್ಕೆ ಸರಿಯಾಗಿ ಮುಟ್ಟು ಆಗುತ್ತಿರಲಿಲ್ಲ. ಹೀಗಾಗಿ ಮಗಳನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ತಪಾಸಣೆ ಮಾಡಿಸಿದ್ದಾರೆ.

ಈ ವೇಳೆ ಬಾಲಕಿಯನ್ನ ತಪಾಸಣೆ ಮಾಡಿದ ವೈದ್ಯೆ ಡಾ.ಸೋನಿಯಾ ಅವರು ಮಗಳು ಗರ್ಭಿಣಿಯಾಗಿರುವುದು ಹೇಳಿದ್ದಾರೆ. ವಿಷಯ ತಿಳಿದ ಬಾಲಕಿಯ ತಾಯಿಗೆ ಅಘಾತವಾಗಿದೆ.ಸೆಪ್ಟೆಂಬರ್​ನಲ್ಲಿ ಆರೋಪಿ ಸೋದರ ಮಾವ ಮನೆಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನೇಣಿಗೆ ಶರಣಾದ ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ: ಕಾರಣ ನಿಗೂಢ!

0

ದಾವಣಗೆರೆ:- ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ನೇಣಿಗೆ ಶರಣಾಗಿದ್ದು, ಸೂಸೈಡ್ ಗೆ ಕಾರಣ ತಿಳಿದು ಬಂದಿಲ್ಲ. ಘಟನೆ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

34 ವರ್ಷದ ಶರತ್‌ ಜಿ.ಎನ್ ನೇಣಿಗೆ ಶರಣಾದ ವ್ಯಕ್ತಿ. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ಶುಕ್ರವಾರ ಸ್ವಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ ಶರತ್, ಇತ್ತೀಚಿಗೆ ರಾಜಕೀಯದಲ್ಲಿ ಹೆಚ್ಚಿನ ಒಲವು ವ್ಯಕ್ತ ಪಡಿಸಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು.

ಶರತ್ ಹತ್ತಾರು ಕಡೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಸಂಸ್ಥೆಗಳನ್ನ ಕೂಡ ಆರಂಭಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಯ ಕಾರಣ ನಿಗೂಢವಾಗಿದೆ.

ಸರಣಿ ಅಪಘಾತ: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿ! ತಪ್ಪಿದ ದುರಂತ!

0

ಮಂಗಳೂರು:- ಸರಣಿ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಜರುಗಿದೆ.

ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್‌ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎನ್ನಲಾಗಿದೆ.

ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆಗೆ ಉರುಳಿದೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಮಲ ಕೋಟೆ “ಕೈ” ವಶಕ್ಕೆ: ಮಾಜಿ ಸಿಎಂಗೆ ಮುಖಭಂಗ – ಯಾಸಿರ್ ಪಠಾಣ್ʼಗೆ ಜಯಭೇರಿ

0

ಹಾವೇರಿ: ಶಿಗ್ಗಾಂವಿ-ಸವಣೂರು ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ತೆರೆಬಿದ್ದಿದ್ದು, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮಗ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಸೋಲಾಗಿದೆ. ಈ ಹಿಂದೆ ಕಾಂಗ್ರೆಸ್‌ನ ಮತ್ತೋರ್ವ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್‌ ನೀಡದಿದ್ದಕ್ಕೆ ಬೇಸರಗೊಂಡಿದ್ದರು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.

ಒಟ್ಟು 18 ಸುತ್ತುಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಅಹ್ಮದ್‌ ಪಠಾಣ್‌ 10,0756 ಮತ ಪಡೆದಿದ್ದು, ಬಿಜೆಪಿಯ ಭರತ್‌ ಬೊಮ್ಮಾಯಿ 87,308 ಪಡೆದಿದ್ಧಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ವಿರುದ್ಧ 13,448 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.‌

ಅಜ್ಜಂಪೀರ್ ಖಾದ್ರಿ ಬಂಡಾಯ ಶಮನ ಆಗಿದ್ದು ಪಠಾಣ್ ಗೆ ಪ್ಲಸ್ ಆಯಿತು. ಇಷ್ಟೇ ಅಲ್ಲ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಣತಂತ್ರ ಹೆಣೆದಿದ್ದು, ವಾಲ್ಮೀಕಿ, ದಲಿತ ಮತದಾರರು ‘ಕೈ’ ಹಿಡಿದ ಲೆಕ್ಕಾಚಾರ ನಾಯಕರಿಗೆ ಇದೆ. ಸಚಿವ ಜಮೀರ್ ಮುಸ್ಲಿಂ ಮತದಾರರ ಓಲೈಕೆ ಮಾಡಿದ್ದು, ಪಠಾಣ್ ಪರ ಅಜ್ಜಂಪೀರ್ ಖಾದ್ರಿ ಪ್ರಚಾರ ಮಾಡಿದ್ದು, ಸಿಎಂ ಮುಡಾ ಸಂಕಷ್ಟದ ಅನುಕಂಪ ವರ್ಕೌಟ್ ಆಗಿದ್ದಲ್ಲದೇ, ಕುರುಬ ಸಮಾಜದ ಮತ ಕಾಂಗ್ರೆಸ್‌ಗೆ ವಾಲಿದ ನಂಬಿಕೆ ಆ ಪಕ್ಷದ ನಾಯಕರಲ್ಲಿದೆ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದರು. ಈಗ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರದಲ್ಲಿ ಅವರ ಪುತ್ರ ಭರತ್ ಅಭ್ಯರ್ಥಿಯಾಗಿದ್ದರಿಂದ ಹೆಚ್ಚು ಗಮನ ಸೆಳೆದಿತ್ತು. ಆದ್ರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯಾಸೀರ್ ಪಠಾಣ್ ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಆದ್ರಿಂದ ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಮುಖಭಂಗವಾಗಿದೆ.

Election Results: ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ʼಗೆ ಭರ್ಜರಿ ಗೆಲುವು!

0

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 25357 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತನ್ನ ರಾಜಕೀಯ ಇತಿಹಾಸದಲ್ಲೇ ದಾಖಲೆ ಮತಗಳನ್ನು ಸಿಪಿವೈ ಈ ಬಾರಿ ಪಡೆದಿದ್ದಾರೆ. ಈ ಹಿಂದೆ 5 ಬಾರಿ ಗೆದ್ದರೂ ಸಹ 85 ಸಾವಿರ ಮತಗಳನ್ನು ದಾಟಿರಲಿಲ್ಲ. ಆದರೆ ಈ ಬಾರಿ ಕಾಂಗ್ರೆಸ್‌ಗೆ ಸೇರಿದ ಬಳಿಕ ಲಕ್ಷಕ್ಕೂ ಅಧಿಕ ಮತಗಳ ಪಡೆದು ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಎಲ್ಲ ಸುತ್ತಿನ ಮತ ಎಣಿಕೆ ಮುಗಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗೆಲುವು ಪಡೆದಿದ್ದಾರೆ. 15ನೇ ಸುತ್ತಿನ ವೇಳೆ ಯೋಗೇಶ್ವರ್ ಅವರು 89,714 ಮತಗಳನ್ನು ಪಡೆದಿದ್ರೆ, ಇತ್ತ ನಿಖಿಲ್ ಅವರು ಕೇವಲ 64,688 ವೋಟ್ ಪಡೆದಿದ್ದರು. ಈ ಮೂಲಕ ಯೋಗೇಶ್ವರ್ ಅವರು 25,026 ಮತಗಳು ಮುನ್ನಡೆಯಲ್ಲಿದ್ದವರು ಕೊನೆವರೆಗೂ ಸತತ ಮುನ್ನಡೆಯಲ್ಲಿದ್ದರು. ನಿಖಿಲ್ ಮೊದಲು ಮುನ್ನಡೆ ಕಾಯ್ದುಕೊಂಡವರು ನಂತರ ಹಿನ್ನಡೆಗೆ ಬಂದರು.

 

ಸೋಲು-ಗೆಲುವು ಸಹಜ, ಆದ್ರೆ ಕಾಂಗ್ರೆಸ್ ಅಸ್ಥಿತ್ವವೇ ಇಲ್ಲದಂತಹ ಸ್ಥಿತಿ ತಲುಪಿದೆ: ಪ್ರಲ್ಹಾದ ಜೋಶಿ

0

ಹುಬ್ಬಳ್ಳಿ: ಕಾಂಗ್ರೆಸ್ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ಫಲಿತಾಂಶವೇ ಇದಕ್ಕೆ ನಿದರ್ಶನ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಇದರೊಂದಿಗೆ ಹೋದ ಪ್ರಾದೇಶಿಕ ಪಕ್ಷಗಳ ಗತಿಯೂ ಹಾಗೇ ಆಗಲಿದೆ ಎಂದು ಭವಿಷ್ಯ ನುಡಿದರು ಜೋಶಿ.ದೇಶದ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ತನ್ನೊಂದಿಗೆ ತನ್ನ ಕೈ ಹಿಡಿದು ಬಂದವರನ್ನೂ ಮುಳುಗಿಸುತ್ತಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಗೆ ಹೀನಾಯ ಸೋಲು: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಅದರೊಂದಿಗೆ ಮೈತ್ರಿ ಮಾಡಿಕೊಂಡ ಸ್ಥಳೀಯ ಪಕ್ಷಗಳೂ ಕಾಂಗ್ರೆಸ್ ಜತೆ ಮುಳುಗಿ ಹೋಗಿವೆ ಎಂದು ಮಹಾರಾಷ್ಟ್ರ ಫಲಿತಾಂಶವನ್ನು ವಿಶ್ಲೇಷಿಸಿದರು.

ಸೋಲು-ಗೆಲುವು ಸಹಜ, ಆದ್ರೆ ಕಾಂಗ್ರೆಸ್ ಅಸ್ಥಿತ್ವವೇ ಇಲ್ಲದಂತಹ ಸ್ಥಿತಿ: ಚುನಾವಣೆಯಲ್ಲಿ ಯಾವುದೇ ಪ, ಅಭ್ಯರ್ಥಿ ಸೋಲು – ಗೆಲುವು ಸಹಜ. ಆದರೆ ಕಾಂಗ್ರೆಸ್ ಅಸ್ಥಿತ್ವವೇ ಇಲ್ಲದಂತಹ ಸ್ಥಿತಿಗೆ ತಲುಪಿದೆ ಎಂದು ಟೀಕಿಸಿದರು.ಶರದ್ ಪವಾರ್ ನೇತೃತ್ವದ ಎನ್ ಸಿ, ಉದ್ದವ ಠಾಕ್ರೆ ನೇತೃತ್ವದ ಶಿವಸೇನಾವನ್ನು ಕಾಂಗ್ರೆಸ್ ನವರು ಮುಳುಗಿಸಿದ್ದರು. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದಿದ್ದರೆ ಜೆಎಂಎಂ ಅನ್ನೂ ಮುಳುಗಿಸುತ್ತಿದ್ದರು ಎಂದು ಹೇಳಿದರು.

ಜಾರ್ಖಂಡ್ ಅಲ್ಲಿ ಬಿಜೆಪಿ ಪೈಪೋಟಿ ಕೊಟ್ಟಿದೆ: ಇನ್ನು ಜಾರ್ಖಂಡ್ ಅಲ್ಲಿ ಸಹ ಬಿಜೆಪಿ ಕಾಂಗ್ರೆಸ್ ಗೆ ತುರುಸಿನ ಪೈಪೋಟಿವೊಡ್ಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡರು.

ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ, ಸೋಲಿನ‌‌‌ ಹೊಣೆ ನಾನೇ ಹೊರುವೆ: ಬಂಗಾರು ಹನುಮಂತು

0

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ. ಸೋಲಿನ‌‌‌ ಹೊಣೆ ನಾನೇ ಹೊರುವೆ ಎಂದು ಬಿಜೆಪಿ‌ ಅಭ್ಯರ್ಥಿ ಬಂಗಾರು ಹನುಮಂತು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಪಕ್ಷದ ಪರವಾಗಿ ದುಡಿದ ಕಾರ್ಯಕರ್ತರಿಗೆ ಧನ್ಯವಾದಗಳು.

ಕಾಂಗ್ರೆಸ್ ಹಣ ಹಂಚಿಕೆ‌ ಮಾಡದೆ ಇದ್ರೆ ಗೆದ್ದುತ್ತಿದ್ದೆ. ಸಿಎಂ ಅವರ ಕಾರ್ಯಕ್ರಮಕ್ಕೆ 500 ರೂಪಾಯಿ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಇದು ನಮಗೆ ಪೆಟ್ಟು ಕೊಟ್ಟಿತು. ನನ್ನ ಸೋಲನ್ನು ಯಾರ ಮೇಲೂ ಹಾಕಲ್ಲ. ನನ್ನ ಸೋಲನ್ನು ನಾನೇ ಒಪ್ಪಿಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ನಾನು ಅಥವಾ ದಿವಕರ್ ಆಗಲಿ ಮತ್ತೆ ಸ್ಪರ್ಧೆ ಮಾಡುತ್ತೇವೆ ಎಂದು ಬಂಗಾರು ಹನುಮಂತು ಹೇಳಿದ್ದಾರೆ.

Annapurna Tukaram: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಜಯಭೇರಿ!?

0

ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿರುವ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಅವರು ಇದೀಗ ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.

ಹೌದು ಅಂಚೆ ಮತ ಎಣಿಕೆಯಿಂದ ಇವಿಎಂ ಮತ ಎಣಿಕೆಯ ಮೂರು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಮಧ್ಯದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ಇದೀಗ 16 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಅವರು 83368 ಹಾಗೂ ಬಿಜೆಪಿ ಬಂಗಾರಿ ಹನುಮಂತ 74487 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ.

error: Content is protected !!