Home Blog Page 2088

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ!

0

ಹಾವೇರಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ 80 ವರ್ಷದ ಮನೋಹರ್ ತಹಶೀಲ್ದಾರ್ ಅವರು ಇಂದು ವಿಧಿವಶರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್​ನ ಎನ್​​ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಇತ್ತಿಚಿಗೆ ಸಂಸದ ಬಸವರಾಜ್ ಬೊಮ್ಮಾಯಿ ಅವರು ಮನೋಹರ್ ಅವರು ಆಸ್ಪತ್ರೆಗೆ ಬೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಆದರೆ ದುರಾದೃಷ್ಟವಶಾತ್ ಮಧ್ಯ ರಾತ್ರಿ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಬೆಳ್ಳಂಬೆಳಗ್ಗೆ 25 ಕಡೆ ಲೋಕಾಯುಕ್ತ ದಾಳಿ!

0

ಬೆಂಗಳೂರು:- ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿರುವ ಲೋಕಾಯುಕ್ತ ಅಧಿಕಾರಿಗಳು, ಬೆಳ್ಳಂಬೆಳಗ್ಗೆ ಸುಮಾರು 25 ಕಡೆ ದಾಳಿ ಮಾಡಿದೆ.

ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ನಡೆದಿದ್ದು, ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರ ಮೇಲೂ ದಾಳಿ ನಡೆದಿದೆ. ಅದರಂತೆ ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಸೇರಿ ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್​​ಪಿ ಮಹೇಶ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದ್ದು, ಹಲವು ದಾಖಲೆ ಪರಿಶೀಲಿಸಿದ್ದಾರೆ.

ಎ.ಆರ್. ರೆಹಮಾನ್ ತಂಡದ ಸದಸ್ಯೆ ಮೋಹಿನಿ ಡೇ ಡಿವೋರ್ಸ್ ಘೋಷಣೆ

ಖ್ಯಾತ ಸಂಗೀತ ಮಾಂತ್ರಿಕ ಎಆರ್‌‌ ರೆಹಮಾನ್ಪತ್ನಿ ಸೈರಾ ಬಾನು ಅವರಿಂದ ದೂರವಾಗಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನವನ್ನು ರೆಹಮಾನ್ ಹಾಗೂ ಸೈರಾ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರು ಅಧಿಕೃತ ಹೇಳಿಕೆ ನೀಡಿದ್ದಾರೆ. ರೆಹಮಾನ್ ಡಿವೋರ್ಸ್ ಘೋಷಿಸಿದ ಬೆನ್ನಲೇ ರೆಹಮಾನ್ ತಂಡದ ಸದಸ್ಯರಾದ ಬಾಸಿಸ್ಟ್ ವಾದಕಿ ಮೋಹಿನಿ ಡೇ ತಮ್ಮ ಪತಿ, ಸಂಯೋಜಕ ಮಾರ್ಕ್ ಹಾರ್ಟ್ಸುಚ್ನಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ.

ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಸುದ್ದಿಯನ್ನು ಮೋಹಿನಿ ಡೇ ಸ್ಪಷ್ಟಪಡಿಸಿದ್ದಾರೆ. ರೆಹಮಾನ್ ತಮ್ಮದೇ ಟ್ರೂಫ್ ಹೊಂದಿದ್ದು, ಈ ಟ್ರೂಫ್ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬರೆದುಕೊಂಡಿರುವ ಮೋಹಿನಿ, “ಭಾರವಾದ ಹೃದಯದಿಂದ, ಮಾರ್ಕ್ ಮತ್ತು ನಾನು ಬೇರ್ಪಟ್ಟಿದ್ದೇವೆ ಎಂದು ಘೋಷಿಸುತ್ತೇವೆ. ಮೊದಲನೆಯದಾಗಿ, ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ, ಇದು ನಮ್ಮ ನಡುವಿನ ಪರಸ್ಪರ ನಿರ್ಧಾರ. ನಾವು ಉತ್ತಮ ಸ್ನೇಹಿತರಾಗಿದ್ದರೂ, ನಮ್ಮ ಜೀವನದಲ್ಲಿ ಇಬ್ಬರಿಗೂ ಬೇರೆ ಬೇರೆ ಅಂಶಗಳು ಬೇಕಾಗಿವೆ. ಪರಸ್ಪರ ಒಪ್ಪಂದ ಪಡೆದು ಬೇರೆ ಆಗುತ್ತಿದ್ದೇವೆ. ಖಾಸಗಿತನಕ್ಕೆ ಆದ್ಯತೆ ನೀಡಿ ಎಂದಿದ್ದಾರೆ.

ಡಿವೋರ್ಸ್‌ ಜತೆಗೆ ಮುಂದೆ ಅನೇಕ ಹೊಸ ಯೋಜನೆಗಳ ಮೂಲಕ ಕನ್‌ಬ್ಯಾಕ್‌ ಆಗುವುದಾಗಿ ಹೇಳಿಕೊಂಡಿದ್ದಾರೆ ಮೋಹಿನಿ.   ಮೋಹಿನಿ ಮತ್ತು ಮಾರ್ಕ್ ತಮ್ಮ ಅಭಿಮಾನಿಗಳಿಗೆ  ಹಲವು ಯೋಜನೆಗಳ ಭರವಸೆ ನೀಡಿದ್ದಾರೆ.

ಕೋಲ್ಕತ್ತಾ ಮೂಲಕ 29 ವರ್ಷದ ಮೋಹಿನಿ ಬಾಸಿಸ್ಟ್ ಪ್ಲೇಯರ್ ಆಗಿದ್ದು, ಗಾನ್ ಬಾಂಗ್ಲಾ ಅವರ ವಿಂಡ್ ಆಫ್ ಚೇಂಜ್‌ನಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ. ವಿಶ್ವಾದ್ಯಂತ 40 ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ರೆಹಮಾನ್ ಅವರೊಂದಿಗೆ ಮೋಹಿನಿ ನೀಡಿದ್ದಾರೆ.   ಆಗಸ್ಟ್ 2023 ರಲ್ಲಿ ಅವರ ಚೊಚ್ಚಲ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಕಳೆದ ಐದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಹಲವು ಭಾರೀ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಇಂದು ಮತ್ತೆ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಇಂದಾದ್ರು ಹೊರ ಬರ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್​ ಸಿಗುವ ಭರವಸೆಯಲ್ಲಿದ್ದಾರೆ ಪವಿತ್ರಾ ಗೌಡ.

ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಈವರೆಗೂ ಸರ್ಜರಿ ಮಾಡಿಸಿಲ್ಲ. ಆ ಬಗ್ಗೆ ಅವರು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ.

ಇನ್ನೂ ಯಾಕೆ ಸರ್ಜರಿ ಮಾಡಿಸಿಲ್ಲ, ಬೆನ್ನು ನೋವಿಗೆ ಚಿಕಿತ್ಸೆ ಯಾವ ಹಂತದಲ್ಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಇಂದು ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್​ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಜಾಮೀನು ಪಡೆದು ಅವರು ಬೆಂಗಳೂರಿಗೆ ಬಂದಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದರ್ಶನ್ ಗೆ ಆರು ವಾರಗಳ ಮಧ್ಯಂತರ ಜಾಮೀನು ಅರ್ಜಿ ಮಂಜೂರು ಮಾಡಲಾಗಿದ್ದು ಅದರಲ್ಲಿ ನಾಲ್ಕು ವಾರಗಳು ಮುಗಿದೇ ಹೋಗಿದೆ. ಹೀಗಾಗಿ ದರ್ಶನ್ ಮುಂದಿನ ನಡೆ ಏನು ಎಂಬ ಕುತೂಹಲ ಶುರುವಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳಲ್ಲಿ ಕೆಲವರೀಗೆ ಮಾತ್ರ ಜಾಮೀನು ಸಿಕ್ಕಿದೆ. ಪವನ್, ನಂದೀಶ್​ ಅವರ ಜಾಮೀನು ಅರ್ಜಿ ನ.20ರಂದು ವಜಾ ಆಗಿದೆ. ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಸಿಸಿಹೆಚ್ 57ರ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಧನರಾಜ್ ಜಾಮೀನು ಅರ್ಜಿ ಬಗ್ಗೆ ಇಂದು ಆದೇಶ ಪ್ರಕಟ ಆಗಲಿದೆ.

 

ಜನಾಕ್ರೋಶಕ್ಕೆ ಎಚ್ಚೆತ್ತ ಸರ್ಕಾರ: ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧ ಕ್ರಮ ಎಂದ ಸಿದ್ದರಾಮಯ್ಯ!

0

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

Crime News: ಮದುವೆಗೆ ವಲ್ಲೆ ಎಂದ ಶಿಕ್ಷಕಿ: ಶಾಲೆಯಲ್ಲೇ ಚಾಕು ಇರಿದ ದುಷ್ಕರ್ಮಿ!

0

ಚೆನ್ನೈ:- ಮದುವೆಗೆ ವಲ್ಲೆ ಎಂದ ಶಿಕ್ಷಕಿಗೆ ದುಷ್ಕರ್ಮಿಯೋರ್ವ ಶಾಲೆಯಲ್ಲೇ ಚಾಕು ಇರಿದ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜರುಗಿದೆ.

ರಮಣಿ ಎಂಬ ಶಿಕ್ಷಕಿಗೆ ಮದನ್ ಎಂಬ ವ್ಯಕ್ತಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲೇ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ಮದನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ರಮಣಿ ಮತ್ತು ಮದನ್ ಪ್ರೇಮಿಗಳಾಗಿದ್ದರು. ಇದಕ್ಕೆ ರಮಣಿ ಅವರ ಕುಟುಂಬ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಇತ್ತೀಚೆಗೆ ಮದನ್‌ನ ಮದುವೆಯ ಪ್ರಸ್ತಾಪವನ್ನು ರಮಣಿ ತಿರಸ್ಕರಿಸಿದ ನಂತರ ಇಬ್ಬರ ನಡುವೆ ಜಗಳ ಹೆಚ್ಚಾಯಿತು. ಇದು ಮಾರಣಾಂತಿಕ ಹಲ್ಲೆಗೆ ಕಾರಣವಾಗಿದ್ದು, ಕೋಪದ ಭರದಲ್ಲಿ ಮದನ್ ರಮಣಿಗೆ ಇರಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ರಮಣಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಆಕೆಯನ್ನು ಹೊತ್ತೊಯ್ದ ವಿಡಿಯೋ ಶಾಲೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಶಿಕ್ಷಕಿ ಮೃತಪಟ್ಟಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಮದನ್‌ನನ್ನು ಹಿಡಿದು ತನಿಖೆ ಆರಂಭಿಸಿದ್ದಾರೆ.

ವಸ್ತು ಪ್ರದರ್ಶನದಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆದರ್ಶ ಶಿಕ್ಷಣ ಸಮಿತಿ ಕಾಮರ್ಸ್ ಕಾಲೇಜಿನಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಕಾಮರ್ಸ್ ಎಕ್ಸಪೋ-2024 ನಿಮಿತ್ತ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಪ್ರಥಮ ಸ್ಥಾನ ಪಡೆದ ಜಿಎಸ್‌ಟಿ ಮಾದರಿ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳಾದ ಸಂಜನಾಕ್ಷಯ ಕುರಾ, ಮಧು ಹಾದಿಮನಿ, ಸುನೈನಾ ಕಡಕೋಳ, ಶ್ರಾವಣಿ ಖಾನಾಪೂರ ಪ್ರಥಮ ಸ್ಥಾನ ಪಡೆದರೆ, ಭಾರತದ ಆರ್ಥಿಕತೆ ವಿಷಯದ ಕುರಿತ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳಾದ ಪ್ರಗತಿ ಕಾಟಿಗಾರ, ಗಗನ ಬದಿ, ಕೋಮಲ ಬಾಂಡಗೆ, ಶಬನಮ್ ಹೊಂಬಳ ದ್ವಿತೀಯ ಸ್ಥಾನ ಪಡೆದರು.

ಕಾಲೇಜಿಗೆ ಕೀರ್ತೀ ತಂದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಉಪನ್ಯಾಸಕರಿಗೆ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಕಾಲೇಜಿನ ಸಂಯೋಜಕರುಗಳಾದ ಅಲ್ವಿನಾ ಡಿ, ಸವಿತಾ ಪೂಜಾರ, ಚೈತ್ರಾ ಡಿ, ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಪದವಿ ಕಾಲೇಜುಗಳಿಗೆ ಆಯ್ಕೆಯಾದ 18 ಸಹಾಯಕ ಪ್ರಾಧ್ಯಾಪಕರಿಗೆ ವಿ.ಪ ಸದಸ್ಯ ಎಸ್.ವಿ. ಸಂಕನೂರರಿಂದ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ 3  ವರ್ಷಗಳ ಹಿಂದೆ ರಾಜ್ಯದ ಪದವಿ ಕಾಲೇಜುಗಳಿಗೆ 1200 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಗದಗ ಜಿಲ್ಲೆಯಿಂದ 18 ಅಭ್ಯರ್ಥಿಗಳು ಸರ್ಕಾರದಿಂದ ನೇಮಕಾತಿ ಆದೇಶ ಪತ್ರ ಪಡೆದದ್ದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಂಕನೂರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಳೆದ ಬಾರಿ ಬಿಜೆಪಿ ಸರ್ಕಾರ ಇದ್ದಾಗ ಪದವಿ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ತುಂಬಿಕೊಳ್ಳಲು ಆದೇಶ ಮಾಡಿ ಪರೀಕ್ಷೆ ನಡೆಸಿದ್ದರು. ಪರೀಕ್ಷೆಗೆ ಒಟ್ಟು 33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದು, ಅದರಲ್ಲಿ ೧೨೦೦ ಅಭ್ಯರ್ಥಿಗಳ ಆಯ್ಕೆಯಾಗಿತ್ತು. ಕಾರಣಾಂತರಗಳಿಂದ ವಿಳಂಬವಾಗಿಯಾದರೂ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದ್ದು ಅಭಿನಂದನಾರ್ಹ. ಅದರಲ್ಲಿ ಗದಗ ಜಿಲ್ಲೆಯಿಂದ18 ಜನ ಸಹಾಯಕ ಪ್ರಾಧ್ಯಾಪಕರಾಗಿದ್ದು ಗದಗ ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ನಿವೃತ್ತ ಪ್ರಾಚಾರ್ಯರಾದ ಎಸ್.ಎಫ್. ಸಿದ್ನೆಕೊಪ್ಪ, ಉಮೇಶ ಅರಹುಣಸಿ, ಹಾಗೂ ಎಸ್.ಎಲ್. ಗುಳೇದಗುಡ್ಡ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೂತನವಾಗಿ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕರಿಗೆ ಶುಭ ಹಾರೈಸಿ ಅನುಭವದ ನುಡಿಗಳ ಮೂಲಕ ಸಲಹೆ-ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಎಸ್. ಸೋಮಣ್ಣವರ, ಪ್ರಾಚಾರ್ಯರಾದ ಕೆ.ಆರ್. ಬೆಲ್ಲದ, ವಾಯ್.ಆರ್. ಬೇಲೇರಿ, ರವಿ ಕುಲಕರ್ಣಿ, ಉಪನ್ಯಾಸಕರಾದ ವಿ.ಎಸ್. ದಲಾಲಿ, ಶಶಿಧರ ಕುರಿ ಉಪಸ್ಥಿತರಿದ್ದರು. ಪ್ರಾಚಾರ್ಯರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಮ್.ಸಿ. ಕಟ್ಟಿಮನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಎನ್.ವಿ. ಜೋಷಿ ವಂದಿಸಿದರು.

ನ.25ರಂದು ಸರ್ವಧರ್ಮ ಸಮನ್ವಯ ಪೀಠದ ಕಟ್ಟಡ ಉದ್ಘಾಟಿಸಲಿರುವ ಚನ್ನಬಸವ ಶ್ರೀಗಳ

0

ವಿಜಯಸಾಕ್ಷಿ ಸುದ್ದಿ, ರೋಣ: ಇಲ್ಲಿನ ಮಾರನಬಸರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಘರಾಜೇಂದ್ರ ಶ್ರೀಮಠದ ಸರ್ವಧರ್ಮ ಸಮನ್ವಯ ಪೀಠದ ಕಟ್ಟಡವು ನಿಡಗುಂದಿಕೊಪ್ಪ ಶ್ರೀಮಠದ ಪೂಜ್ಯರಾದ ಚನ್ನಬಸವ ಶ್ರೀಗಳ ನೇತ್ರತ್ವದಲ್ಲಿ ನ.25ರಂದು ಉದ್ಘಾಟನೆಯಾಗಲಿದೆ ಎಂದು ಶಿವಮೊಗ್ಗ ಜಿಲ್ಲೆಯ ಹಿರೇಮಾಗಡಿ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ಹೇಳಿದರು.

ಅವರು ಬುಧವಾರ ಮಾರನಬಸರಿ ಗ್ರಾಮದ ಶ್ರೀಮಠದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ವಿಷಯ ಪ್ರಸ್ತಾಪಿಸಿದರು.

ಶ್ರೀ ಮಠದ ಉಧ್ಘಾಟನೆಯ ನಿಮಿತ್ತ ನ.21ರಿಂದ 25ರವರೆಗೆ ಐದು ದಿನಗಳ ಕಾಲ ಸಂಜೆ 7ರಿಂದ 9ರವರೆಗೆ ಶ್ರೀ ಗದಿಗೆಯ್ಯ ದೇವರ ವಿರಕ್ತಮಠ, ಬಟಕುರ್ಕಿ ಇವರಿಂದ ಧಾರ್ಮಿಕ ಪ್ರವಚನ ಕಾರ್ಯ ನಡೆಯಲಿದ್ದು, ಭಾವೈಕ್ಯತೆ, ಕೃಷಿ, ಹಾನಗಲ್ಲ ಕುಮಾರೇಶ್ವರ ಶ್ರೀಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ನ.21ರಂದು ಧಾರ್ಮಿಕ ಕಾರ್ಯದ ಸಾನ್ನಿಧ್ಯವನ್ನು ಚನ್ನಬಸವ ಶ್ರೀಗಳು, ಸಮ್ಮುಖವನ್ನು ಶಿವಯೋಗಿ ದೇವರು ವಹಿಸುವರು. ಉಧ್ಘಾಟನೆಯನ್ನು ಮಾಜಿ ಶಾಸಕ ಕಳಕಪ್ಪ ಬಂಡಿ ನೆರವೇರಿಸುವರು. ಅಧ್ಯಕ್ಷತೆಯನ್ನು ವೀರಣ್ಣ ಮರಡಿ ವಹಿಸಲಿದ್ದು, ಶಿಕ್ಷಣದ ಕುರಿತು ಪ್ರೊ. ದೊಡ್ಡನಗೌಡ ಉಪನ್ಯಾಸ ನೀಡುವರು. ಸಂಯುಕ್ತ ಬಂಡಿ, ಉಮ್ಮಯ್ಯಜ್ಜ ಕಂಬಾಳಿಹಿರೇಮಠ, ಶಿವಕುಮಾರ ದಿಂಡೂರ, ಶಿವಪ್ಪ ಜಾಲಿಹಾಳ, ಈರಣ್ಣ ನಿಡಗುಂದಿ, ಕಾಶೀಮಸಾಬ ದೋಟಿಹಾಳ, ಭರತಕುಮಾರ ಹಾದಿಮನಿ ಉಪಸ್ಥಿತರಿರುವರು.

ನ.22ರ ಕೃಷಿ ಗೋಷ್ಠಿಯ ಸಾನ್ನಿಧ್ಯವನ್ನು ಚನ್ನಬಸವ ಶ್ರೀಗಳು, ಸಮ್ಮುಖವನ್ನು ಷಣ್ಮುಖಪ್ಪಜ್ಜನವರು ವಹಿಸುವರು. ಅಧ್ಯಕ್ಷತೆಯನ್ನು ಚಂದ್ರು ಮಾರನಬಸರಿ ವಹಿಸುವರು. ಕೃಷಿ ಕುರಿತು ಪ್ರೊ. ವಸಂತರಾವ ಗಾರ್ಗಿ ಉಪನ್ಯಾಸ ನೀಡುವರು. ಚನ್ನಯ್ಯಜ್ಜನವರು ಹಿರೇಮಠ, ಸಂಗಪ್ಪ ಹಾದಿಮನಿ, ಮರ್ತುಜಸಾಬ ಮೋತೆಖಾನ್, ಹನಮಂತಪ್ಪ ಹುಯಿಲಗೋಳ, ಅಲ್ಲಾಸಾಬ ಮೋತೆಖಾನ್ ಉಪಸ್ಥಿತರಿರುವರು.

ನ.23ರ ಭಾವೈಕ್ಯತಾ ಸಮಾರಂಭದ ಸಾನ್ನಿಧ್ಯವನ್ನು ಚನ್ನಬಸವ ಶ್ರೀಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ವಿಶ್ವನಾಥ ಗುರುಭಟ್ಟ ವೈದ್ಯ ವಹಿಸುವರು. ಭಾವೈಕ್ಯತೆ ಕುರಿತು ಪ್ರೊ. ಆರ್.ಕೆ. ಭಗವಾನ್ ಉಪನ್ಯಾಸ ನೀಡುವರು. ಶೇಖರಗೌಡ ಪಾಟೀಲ, ಮುತ್ತಪ್ಪ ಭಜಂತ್ರಿ, ಫಾತೀಮಾ ಸವಡಿ, ಉಮಾ ಚಿಗರಿ, ಚಂದ್ರವ್ವ ಬೆನಹಾಳ, ಯಲ್ಲಪ್ಪ ಡೊಳ್ಳಿನ ಉಪಸ್ಥಿತರಿರುವರು.

ನ.25ರಂದು ಬೆಳಿಗ್ಗೆ ಹೋಮ, ಹವನ, ವಾಸ್ತು ಶಾಂತಿ ನೆರವೇರುವುದು. ಧಾರ್ಮಿಕ ಕಾರ್ಯದಲ್ಲಿ ಶಾಸಕ ಜಿ.ಎಸ್. ಪಾಟೀಲ ದಂಪತಿ ಭಾಗಿಯಾಗುವರು. ಸಂಜೆ 7ಕ್ಕೆ ನಡೆಯುವ ಧರ್ಮಸಭೆಗೆ ಶಿರಹಟ್ಟಿ ಶ್ರೀಮಠದ ಫಕೀರ ದಿಂಗಾಲೇಶ್ವರ ಶ್ರೀಗಳು, ಹಾಲಕೆರೆ ಶ್ರೀಮಠದ ಮುಪ್ಪಿನ ಬಸವಲಿಂಗ ಶ್ರೀಗಳು, ಬಳಗಾನೂ ಶ್ರೀಮಠದ ಶಿವಶಾಂತವೀರ ಶರಣರು, ನಿಡಗುಂದಿಕೊಪ್ಪ ಶ್ರೀಮಠದ ಚನ್ನಬಸವ ಶ್ರೀಗಳು, ನರೆಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಸಿದ್ದನಕೊಳ್ಳದ ಡಾ.ಶಿವಕುಮಾರ ಶ್ರೀಗಳು ಆಗಮಿಸಲಿದ್ದು, ಅದ್ಯಕ್ಷತೆಯನ್ನು ಶಾಸಕ ಜಿ.ಎಸ್. ಪಾಟೀಲ ವಹಿಸುವರು. ಶಂಕರಗೌಡ ಪಾಟೀಲ, ಸುರೇಶ ಪಲ್ಲೇದ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದ ಶ್ರೀಗಳು, ಇದೇ ಸಂಧರ್ಭದಲ್ಲಿ ಭೂ ದಾನಿಗಳಿಗೆ ಹಾಗೂ ದಾಸೋಹ ಸೇವೆ ಮಾಡಿದ ಭಕ್ತರಿಗೆ ಸನ್ಮಾನಿಸಲಾಗುವುದು ಎಂದರು.

ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತ ಬಾಂಧವರ ನೇತೃತ್ವದಲ್ಲಿ ಬೃಹತ್ ಹೋರಾಟ

0

ವಿಜಯಸಾಕ್ಷಿ ಸುದ್ದಿ, ಗದಗ: ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ. ೨೨ರ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನಗರದ ಗಾಂಧಿ ವೃತ್ತದಲ್ಲಿ ಮಾಜಿ ಸಚಿವರು, ಹಾಲಿ ಶಾಸಕ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಕಳಕಪ್ಪ ಬಂಡಿ, ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ ಸ್ಭೆರಿದಂತೆ ಪಕ್ಷದ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗದಗ ಜಿಲ್ಲೆಯ ಸಮಸ್ತ ರೈತ ಬಾಂಧವರ ನೇತೃತ್ವದಲ್ಲಿ ಹೋರಾಟ ನಡೆಸಿ, ಅಹವಾಲು ಸ್ವೀಕರಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ತಿಳಿಸಿದ್ದಾರೆ.

ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಶೋಷಣೆಗೊಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠ-ಮಂದಿರಗಳು, ಶಾಲೆಗಳ ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಅಹವಾಲು ಸ್ವೀಕರಿಸಲಾಗುವುದು. ಸಮಸ್ಯೆಯ ಗಂಭೀರತೆಯನ್ನು ಜಿಲ್ಲೆಯ ಎಲ್ಲ ತಾಲೂಕುವಾರು ಪರಾಮರ್ಶೆ ಮಾಡುತ್ತೇವೆ. 3 ತಂಡಗಳನ್ನು ರಾಜ್ಯಾಧ್ಯಕ್ಷರು ಈಗಾಗಲೇ ಪ್ರಕಟಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ಒಂದು ತಂಡ, ವಿಪಕ್ಷ ನಾಯಕರಾದ ಆರ್.ಅಶೋಕ್, ಚಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ. ಈ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದರು.

ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದೆ. ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿಗಳು ಹೇಳಿದ್ದು ಕೇವಲ ಮಹಾರಾಷ್ಟ ಮತ್ತು ಜಾರ್ಖಂಡ್ ಚುನಾವಣೆಯ ಕಣ್ಣೋರೆಸುವ ತಂತ್ರವೇ?  ರೈತರ ಕುರಿತು ಕಾಂಗ್ರೇಸ್ಸಿನದು ಮೊಸಳೆ ಕಣ್ಣೀರಲ್ಲವೇ? 1974 ವಕ್ಫ್ ಆಸ್ತಿ ಕುರಿತು ಗಜೇಟ್ ಅನ್ನು ಹಿಂಪಡೆಯಲು ರಾಜ್ಯದ ಕಾಂಗ್ರೇಸ್ ಸರ್ಕಾರ ಬದ್ಧತೆಯನ್ನು ಪ್ರದರ್ಶಿಸುವುದೇ? ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ತೋಟಪ್ಪ(ರಾಜು) ಕುರುಡಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಫಕ್ಕೀರೇಶ ರಟ್ಟಿಹಳ್ಳಿ, ಪ್ರಮುಖರಾದ ಅಶೋಕ ಸಂಕಣ್ಣವರ, ರಮೇಶ ಸಜ್ಜಗಾರ, ಸುರೇಶ ಮರಳಪ್ಪನವರ ಉಪಸ್ಥಿತರಿದ್ದರು.

error: Content is protected !!