Home Blog Page 2091

ಭ್ರಷ್ಟ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡೋ ನೈತಿಕತೆ ಇಲ್ಲ: ಶಾಮನೂರು ಶಿವಶಂಕರಪ್ಪ!

0

ದಾವಣಗೆರೆ:- ಭ್ರಷ್ಟ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡೋ ನೈತಿಕತೆ ಇಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಯಂತ್ರೋಪಕರಣಗಳನ್ನು ಖರೀದಿ ಮಾಡದೇ ಹಣ ತಿಂದು ಹಾಕಿದ್ದಾರೆ. ಆಗ ಬಿಜೆಪಿ ಮಾಡಿದ ಅವ್ಯವಹಾರ ಈಗ ಬೆಳಕಿಗೆ ಬರುತ್ತಿವೆ ಎಂದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರಕ್ಕೆ ಕೋವಿಡ್ ಕಾಲದಲ್ಲಿ ಎಲ್ಲರಿಗೂ ಲಸಿಕೆ ಕೊಡಲು ಆಗಿಲ್ಲ. ನಾವು ನಮ್ಮ ಕುಟುಂಬದಿಂದ 6 ಕೋಟಿ ರೂ. ವೆಚ್ಚದಲ್ಲಿ ಕೋವಿಡ್ ಲಸಿಕೆ ವಿತರಿಸಿದ್ದೆವು. ಇದೇ ಕಾರಣಕ್ಕೆ 40% ಭ್ರಷ್ಟಚಾರ ಎಂದು ನಾವು ಬಿಜೆಪಿ ಸರ್ಕಾರವನ್ನ ಕರೆದಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿಗೆ ಯಾವ ನೈತಿಕತೆ ಇಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಲಕ್ಕುಂಡಿ ಗ್ರಾಮವು ಐತಿಹಾಸಿಕ ಪಾರಂಪರಿಕ ಪ್ರದೇಶವಾಗಿದ್ದು, ಈ ಪಾರಂಪರಿಕ ಗ್ರಾಮದಲ್ಲಿ ಸಾಕಷ್ಟು ಶಿಲೆಗಳು, ಶಾಸನಗಳು ಮತ್ತು ಪ್ರಾಚ್ಯಾವಶೇಷಗಳು ಗ್ರಾಮದಲ್ಲಿ ಹಾಗೂ ಗ್ರಾಮಸ್ಥರ ಮನೆಗಳಲ್ಲಿ ಲಭ್ಯವಿರುತ್ತವೆ.

ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಬೇಕಿದ್ದು, ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವ ಸಲುವಾಗಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಂತಹ ಅವಶೇಷಗಳನ್ನು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಜೊತೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಲಕ್ಕುಂಡಿ ಗ್ರಾಮದಲ್ಲಿ 10 ತಂಡಗಳನ್ನು ಅಭಿಯಾನದ ರೂಪದಲ್ಲಿ ಗ್ರಾಮದ ಮನೆ, ಕಟ್ಟೆ, ತಿಪ್ಪಿ, ಒಳಗಟ್ಟಿ ಇತರೆಡೆಗಳಲ್ಲಿರುವ ಪ್ರಾಚ್ಯಾವಶೇಷಗಳನ್ನು ಸಂಗ್ರಹಿಸಲು ನಿರ್ದೇಶಿಸಲಾಗಿದೆ.

ಈ ನಿಟ್ಟಿನಲ್ಲಿ ನವೆಂಬರ್ 22ರಿಂದ 24ರವರೆಗೆ ಮೂರು ದಿನಗಳ ಕಾಲ ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ (ಸಂಗ್ರಹಣಾ ಅಭಿಯಾನವನ್ನು) ಅನ್ವೇಷಣೆಯನ್ನು ಹಮ್ಮಿಕೊಳ್ಳಲಾಗಿದೆ.

ತಂಡಗಳ ವಿವರ: ವಾರ್ಡ್ ಸಂಖ್ಯೆ ೫-ಕರಿಯವರ ಓಣಿ, ತಹಸೀಲ್ದಾರರ ಓಣಿ ವ್ಯಾಪ್ತಿಯಲ್ಲಿ ರಾಜ್ಯದ  ಕಾನೂನು, ನ್ಯಾಯ ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರು ತಂಡದ  ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿಯ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ.ಶರಣು ಗೋಗೇರಿ, ಗದಗ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ. ನಡುವಿನಮನಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳಾದ ಪೀರಸಾಬ ನದಾಫ್, ರಜಿಯಾಬೇಗಂ ತಹಸೀಲ್ದಾರ, ಅನ್ನಪುರ್ಣ ರಿತ್ತಿ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 9, ಕುಂಬಾರ ಓಣಿ ಕಮತರ ಓಣಿ ಮತ್ತು ಗೌರಿ ಓಣಿ ವ್ಯಾಪ್ತಿಯಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ ಅವರು ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಎಸ್. ನೀಲಗುಂದ, ಗ್ರಾ.ಪಂ ಸದಸ್ಯರಾದ ಮಂಜುಳಾ ಮೆಣಸಿನಕಾಯಿ, ಲಲಿತಾ ಗದಗಿನ, ವೀರಣ್ಣ ಮಲ್ಲಪ್ಪ ಚಕ್ರಸಾಲಿ, ಮಹಾಂತೇಶ ಕಮತರ, ಶಿವಪ್ಪ ಬಳಿಗೇರ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 2ರ ಅಂಬಕ್ಕಿಯವರ ಓಣಿ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹೀನ್ ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್ ಹಾಗೂ ಗ್ರಾ.ಪಂ ಸದಸ್ಯರಾದ ರಮೇಶ ಸಿ.ಭಾವಿ, ಅನಸವ್ವ ಅಂಬಕ್ಕಿ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ 8ರ ಅನ್ನದಾನೇಶ್ವರ ನಗರ, ಕುರುಬರ ಓಣಿ ಮತ್ತು ಬಜಾರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಕೆ.ವಿ. ರಾಜೇಂದ್ರ ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಹಾಗೂ ಗ್ರಾ.ಪಂ ಸದಸ್ಯರಾದ ವಿರುಪಾಕ್ಷಪ್ಪ ಬೆಟಗೇರಿ, ನೀಲವ್ವ ಬಂಡಿ, ಶಾಂತವ್ವ ಮಣಕವಾಡ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 3ರ ಗೊಲ್ಲರ ಓಣಿ ಕಲ್ಮೇಶ್ವರ ನಗರ, ಕೊರವರ ಓಣಿ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಉಪವಿಭಾಗಾಧಿಕಾರಿ ಎಂ.ಗAಗಪ್ಪ, ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ ಹಾಗೂ ಗ್ರಾ.ಪಂ ಸದಸ್ಯರಾದ ರೋಷನಬಿ ನದಾಫ್, ಬಸವರಾಜ ಹಟ್ಟಿ, ಕುಬೇರಪ್ಪ ಬೆಂತೂರ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 6ರ ಮಲ್ಲಿಕಾರ್ಜುನ ಗುಡಿ ಓಣಿ, ಯರಗುಡಿಯವರ ಓಣಿ ಮತ್ತು ಬಜಾರ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್ ತಂಡದ ಮುಖ್ಯಸ್ಥರಾಗಿದ್ದು, ಸಂಚಾಲಕರಾಗಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ರಾ.ಪಂ ಸದಸ್ಯರಾದ ಅಮೀನಾ ಹುಬ್ಬಳ್ಳಿ ಹಾಗೂ ಬಸವರಾಜ ಯಲಿಶಿರುಂದ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ ಗೌಡ ಓಣಿ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಂಡದ ಮುಖ್ಯಸ್ಥರಾಗಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಹಾಗೂ ಗ್ರಾ.ಪಂ. ಸದಸ್ಯರಾದ ಪುಷ್ಪಲತಾ ಪಾಟೀಲ, ಸುಮಿತ್ರವ್ವ ರೋಣದ, ರೇವಣಸಿದ್ಧಪ್ಪ ಮುಳಗುಂದ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 7ರ ಕುರುಬರ ಓಣಿ ವ್ಯಾಪ್ತಿಯಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜು ಅವರು ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಶಾಲಾ  ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಪುರಾತತ್ವ ಮತ್ತು ಸಂಗ್ರಹಾಲಯ ಪರಂಪರೆ ಇಲಾಖೆಯ ಕ್ಯೂರೇಟರ್ ರಾಜಾರಾಮ್ ಹಾಗೂ ಗ್ರಾ.ಪಂ. ಸದಸ್ಯರಾದ ಶ್ರೇಯಾ ಕಟಿಗಾರ, ಹನುಮಂತಪ್ಪ ಬಂಗಾರಿಯವರ, ಲಕ್ಷö್ಮಣ  ಗುಡಸಲವಾಸಿ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ್ ಸಂಖ್ಯೆ 4ರ ನದಾಫ್ ಗಲ್ಲಿ, ಬಿನ್ನಾಳ ಬಸವೇಶ್ವರ ಓಣಿ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಕುಲಪತಿಗಳು ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಗ್ರಾ.ಪಂ.ರಾ. ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಉಮೆಶ ಬಾರಕೇರ ಹಾಗೂ ಗ್ರಾ.ಪಂ ಸದಸ್ಯರಾದ ಫಕೀರವ್ವ ಬೇಲೇರಿ, ಚಂದ್ರವ್ವ ರಿತ್ತಿ ಅವರನ್ನು ತಂಡವು ಒಳಗೊಂಡಿದೆ.

ವಾರ್ಡ ಸಂಖ್ಯೆ 10ರ ಕಟಗಿಯವರ ಓಣಿ ಹಿರೇಹಾಳರವರ ಓಣಿ, ಅನ್ನದಾನೇಶ್ವರ ನಗರ ವ್ಯಾಪ್ತಿಯಲ್ಲಿ ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷರು ತಂಡದ ಮುಖ್ಯಸ್ಥರಾಗಿರುತ್ತಾರೆ. ಸಂಚಾಲಕರಾಗಿ ಲಕ್ಕುಂಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಜಂತ್ರಿ, ಹಾಗೂ ಗ್ರಾ.ಪಂ ಸದಸ್ಯರಾದ ಗಂಗವ್ವ ಪೂಜಾರ, ಈರವ್ವ ಛಬ್ಬರಭಾವಿ, ರುದ್ರಪ್ಪ ಮುಸ್ಕಿನಭಾವಿ ಅವರನ್ನು ತಂಡವು ಒಳಗೊಂಡಿದೆ.

ಪ್ರತಿ ತಂಡಗಳಿಗೆ ಪ್ರತ್ಯೇಕವಾಗಿ ಇತಿಹಾಸ ಉಪನ್ಯಾಸಕರುಗಳನ್ನು ಹಾಗೂ ಪ್ರವಾಸಿ ಮಿತ್ರರನ್ನು ನಿಯೋಜಿಸಲಾಗಿದೆ.

ಅಭಿಯಾನದ ವೇಳಾಪಟ್ಟಿ

* ನವೆಂಬರ್ 22ರಂದು ಬೆ 9.30 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪ್ರಾಚ್ಯಾವಶೇಷಗಳನ್ನು ಸಂಗ್ರಹಿಸುವ ಕುರಿತು ವಿದ್ಯಾರ್ಥಿ, ಸ್ವಯಂ ಸೇವಕರುಗಳಿಗೆ ಹಾಗೂ ತಂಡದ ಸದಸ್ಯರುಗಳು ತರಬೇತಿಯಲ್ಲಿ ಭಾಗವಹಿಸುವುದು.

* ನವೆಂಬರ್ 22ರಂದು ಮಧ್ಯಾಹ್ನ 3 ಗಂಟೆಗೆ ಲಕ್ಕುಂಡಿ ಗ್ರಾಮದ ಕ್ಷೇತ್ರ ಕಾರ್ಯಕ್ಕೆ ತೆರಳಿ ತಮಗೆ ವಹಿಸಿರುವ ಸ್ಥಳ ಹಾಗೂ ಲಭ್ಯವಿರಬಹುದಾದ ಪ್ರಾಚ್ಯಾವಶೇಷಗಳನ್ನು ಗುರುತಿಸುವುದು.

* ನವೆಂಬರ್ ೨೩ರಂದು ಲಕ್ಕುಂಡಿ ಗ್ರಾಮದಲ್ಲಿ ಪ್ರಾಚ್ಯವಸ್ತುಗಳ ಸಂಗ್ರಹಣೆ ಮತ್ತು ಶೇಖರಣೆ ಕುರಿತು ಮನೆ-ಮನೆ ಸಮೀಕ್ಷೆ ಕೈಗೊಳ್ಳುವುದು ಹಾಗೂ ಸಮೀಕ್ಷೆಯ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ  ಕ್ರೋಢೀಕರಿಸುವುದು.

* ನವೆಂಬರ್ 23ರಂದು ಲಕ್ಕುಂಡಿ ಗ್ರಾಮದಲ್ಲಿ ಅಭಿಯಾನದ ತಂಡದವರೊಂದಿಗೆ ಹಿಂದಿನ ದಿನ ಸಮೀಕ್ಷೆಯಲ್ಲಿ ಗುರುತಿಸಲಾದ ಪ್ರಾಚ್ಯಾವಶೇಷಗಳನ್ನು ಸಂಗ್ರಹಿಸುವುದು.

* ನವೆಂಬರ್ 22ರಿಂದ ೨24ರವರೆಗೆ ಜರುಗುವ ಪ್ರಾಚ್ಯಾವಶೇಷಗಳ ಅನ್ವೇಷಣೆ ಅಭಿಯಾನವನ್ನು ತಂಡದವರು ಪರಸ್ಪರ ಸಮನ್ವಯತೆ ಸಾಧಿಸಿ ಸಂಪೂರ್ಣ ಯಶಸ್ವಿಗೊಳಿಸಲು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ದಿನಗಳಲ್ಲಿ ಕೇವಲ ಶಾಲಾ ವಿದ್ಯೆ ಸಾಲದು ವ್ಯಕ್ತಿತ್ವ ಬೆಳೆಸಿಕೊಳ್ಳಲು ಗೀತ ಗಾಯನ ಕಲಿಕೆ ಅವಶ್ಯ: ಶ್ರೀಶೈಲ ಕರಿಕಟ್ಟಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ನಮ್ಮ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕು. ಸ್ಪರ್ಧಾತ್ಮಕ ದಿನಗಳಲ್ಲಿ ಕೇವಲ ಶಾಲಾ ವಿದ್ಯೆ ಸಾಲದು. ಜೊತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಲು ಇಂತಹ ಗೀತ ಗಾಯನ ಕಲಿಕೆ ಅವಶ್ಯ ಎಂದು ಧಾರವಾಡ ಜಿಲ್ಲಾ ಸ್ಕೌಟ್ ಗೈಡ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀಶೈಲ ಕರಿಕಟ್ಟಿ ಹೇಳಿದರು.

ಧಾರವಾಡ ಜಿಲ್ಲಾ ಸ್ಕೌಟ್ ಗೈಡ್ಸ್ ಸಂಸ್ಥೆಯ ಆವರಣದಲ್ಲಿ ಜರುಗಿದ ಗೀತ ಗಾಯನ ಸ್ಪರ್ಧೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗಾವಿ ಶೈಕ್ಷಣಿಕ ವಿಭಾಗಗಳ ಎಂಟು ಜಿಲ್ಲೆಗಳ ವಿವಿಧ ಊರುಗಳಿಂದ ಸುಮಾರು ೫೦೦ ಮಕ್ಕಳು ಸ್ಕೌಟ್ ಗೈಡ್ಸ್ ಕಬ್ಸ್, ಬುಲ್‌ಬುಲ್, ರೋವರ್ಸ್, ರೇಂಜರ್ಸ್ ವಿಭಾಗಗಳಿಂದ ಪಾಲ್ಗೊಂಡಿದ್ದರು. ಸ್ಕೌಟ್ ಗೈಡ್ಸ್ ರೋವರ್ಸ್-ರೇಂಜರ್ಸ್ ವಿಭಾಗಗಳಲ್ಲಿ ವಿಜೇತ ಶಾಲೆಗಳಿಗೆ ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ವಿ.ವಿ. ಕಟ್ಟಿಯವರ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್. ಕೆಳದಿಮಠ, ಬೆಳಗಾವಿ ವಿಭಾಗದ ಸ್ಕೌಟ್ ಗೈಡ್ಸ್ ಮುಖ್ಯಸ್ಥ ಜೆ.ಬಿ. ಮನ್ನಿಕೇರಿ, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳಾದ ಎಸ್.ಎಂ. ಹುಡೇದಮನಿ ಹಾಗೂ ಗಿರೀಶ್ ಕಾಂಬಳೆ, ಕೋಶಾಧಿಕಾರಿ ಬಸವರಾಜ ಕಡಕೋಳ, ಸಂಸ್ಥೆಯ ಪದಾಧಿಕಾರಿಗಳಾದ ಡಿ.ಡಿ. ಮಾಳಗಿ, ಎಸ್.ಐ. ನೇಕಾರ, ಭಾಗಿರಥಿ ಕಲಕಾಂಬರ, ಎಸ್.ವಿ. ಮೊರಬ, ತರಬೇತುದಾರರಾದ ಸಿ.ಎಂ. ಕೆಂಗಾರ, ಶಮಶಾದ ಬೇಗಂಮನಿಯಾರ, ಡಿಓಸಿ ಸಿದ್ದಪ್ಪ ಪೂಜಾರ, ಕಾರ್ಯದರ್ಶಿಗಳಾದ ಎಸ್.ಎನ್. ಸಾವಳಗಿ, ಜಿ.ಎ. ಬೆಳಹಾರ, ಜೆ.ಆರ್. ಜವಳಿ ಉಪಸ್ಥಿತರಿದ್ದರು.

ಕರವೇ ವತಿಯಿಂದ 274ನೇ ಟಿಪ್ಪು ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡಿದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್‌ರವರ 274ನೇ ಜಯಂತಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ವತಿಯಿಂದ ಗದಗ ನಗರದ ಟಿಪ್ಪುಸುಲ್ತಾನ್ ವೃತದಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ವಿನಾಯಕ್ ಬದಿ, ವಿರೂಪಾಕ್ಷ ಹಿತ್ತಲಮನಿ,  ದಾವಲಸಾಬ್ ತಹಸೀಲ್ದಾರ್, ಹುಸೇನ್ ಅಕ್ಕಿ, ಸಲೀಂ ಬೋದ್ಲೆಖಾನ್, ಇಸಾಕ್ ನದಾಫ್, ಗೌಸ್ ಶಿರಹಟ್ಟಿ, ರವಿ ಮಲ್ಲಾಡದ, ಸಾಧಿಕ್ ಟಕ್ಕೆದ, ಆಜಾದ್ ನಾಗನೂರು, ಮುಸ್ತಾಕ್ ದಾವಣಗೆರೆ, ಶಬ್ಬೀರ್, ಜುಮೇದ್ ಉಮಚಗಿ ಸಲ್ಮಾನ್ ಬನ್ನೂರ್, ನವಾಜ್ ಡಾಲಾಯತ, ಮೃತ್ಯುಂಜಯ ಕುರ್ತಕೋಟಿ ಮುಂತಾದವರು ಉಪಸ್ಥಿತರಿದ್ದರು.

ಅನಾಥ ಮಕ್ಕಳ ದತ್ತು ಸ್ವೀಕಾರ ಕುರಿತು ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಅನಾಥ ಮಕ್ಕಳನ್ನು ದತ್ತು ಸ್ವೀಕಾರ ಮಾಡಲು ಇಚ್ಛಿಸುವರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಅನಾಥ ಮಕ್ಕಳನ್ನು ದತ್ತು ಪಡೆಯುವ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು.

ದತ್ತು ಮಾಸಾಚರಣೆಯನ್ನು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಆಚರಿಸುತ್ತಾರೆ. ಮಕ್ಕಳಿಲ್ಲದ ಪೋಷಕರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಅನಾಥ ಮಕ್ಕಳನ್ನು ಪಡೆಯಬಹುದು ಎಂಬ ಮಾಹಿತಿ ಇನ್ನೂ ಸಾಕಷ್ಟು ಜನಕ್ಕೆ ಗೊತ್ತಾಗಬೇಕು. ಆ ನಿಟ್ಟಿನಲ್ಲಿ ಈ ಜಾಥದ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಮಕ್ಕಳನ್ನು ಹೊಂದಿಲ್ಲದವರು ದತ್ತು ಸ್ವೀಕಾರ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಈ ಅನಾಥ ಮಕ್ಕಳನ್ನು ಲಾಲನೆ ಪೋಷಣೆ ಮಾಡಬಹುದಾಗಿದೆ. ಇನ್ನೂ ಕೇಲವು ಸಂದರ್ಭಗಳಲ್ಲಿ ಕೆಲವು ಮಕ್ಕಳ ಪೋಷಕರು ಅನಾರೋಗ್ಯದಿಂದ ಅಥವಾ ನಾನಾ ಕಾರಣಗಳಿಂದಾಗಿ ಮಕ್ಕಳನ್ನು ಸಾಕುವುದಕ್ಕೆ ಆಗುತ್ತಿರುವುದಿಲ್ಲ. ಅಂತಹ ಪ್ರಸಂಗಗಳಲ್ಲಿ ತಾತ್ಕಾಲಿಕವಾಗಿ ಮಗುವನ್ನು ಪೋಷಕತ್ವದಲ್ಲಿ ಇಟ್ಟುಕೊಂಡು ಮೂಲ ಕುಟುಂಬದ ಪರಿಸ್ಥಿತಿ ಸುಧಾರಿಸಿದ ಮೇಲೆ ಮರಳಿ ಮಕ್ಕಳನ್ನು ಅಲ್ಲಿಗೆ ಕಳುಹಿಸುವ ವ್ಯವಸ್ಥೆ ಇರುತ್ತದೆ. ಎಷ್ಟೋ ಸಂದರ್ಭದಲ್ಲಿ ಮಗುವಿಗೆ ಕುಟುಂಬದ ಅವಶ್ಯಕತೆ ಇರುತ್ತದೆ ಹಾಗೂ ಪೋಷಕರಿಗೆ ಮಗು ಬೇಕಾಗಿರುತ್ತದೆ. ಹಾಗಾಗಿ ಈ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದಾಗ ಅನಾಥ ಮಕ್ಕಳು ಹಾಗೂ ಮಕ್ಕಳಿಲ್ಲದವರಿಗೆ ಸಹಾಯಕವಾಗುತ್ತದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಟಿಪ್ಪು ಸುಲ್ತಾನ್ ವೃತ್ತದವರೆಗೆ ಸಂಚರಿಸಿ, ವಿವಿಧ ಪೋಷಣೆಗಳನ್ನು ಕೂಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ನಿರೂಪಣಾಧಿಕಾರಿ ರಾಧ ಮನ್ನೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಯದೇವಿ ಕವಲೂರು, ಸದಸ್ಯರಾದ ಬಸವರಾಜ ಸಂಶಿ, ಡಿ.ಐ ಈರಗಾರ, ಎಸ್.ಆರ್. ಬ್ಯಾಹಟ್ಟಿ, ಬಾಲಕರ ಬಾಲಮಂದಿರ ಅಧೀಕ್ಷಕರಾದ ಗಿರಿಜಾ  ದೊಡ್ಡಮನಿ ಹಾಜರಿದ್ದರು.

ಬಿಗ್ ಶಾಕಿಂಗ್ ಸುದ್ದಿ: 22 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗುತ್ತಾ!? ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್​ ಇಲಾಖೆ!

0

ಬೆಂಗಳೂರು:- ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದ್ದು, ಸಾಕಷ್ಟು ಕಾರ್ಡ್‌ಗಳ ರದ್ದತಿ ಬೆನ್ನಲ್ಲೇ ಜನತೆಯಲ್ಲಿ ಆತಂಕವೂ ಹೆಚ್ಚಾಗಿದೆ.

ಇದರ ಜೊತೆಯಲ್ಲೇ ಇದೀಗ ಕರ್ನಾಟಕ ಜನತೆಗೆ ಬಿಗ್ ಶಾಕಿಂಗ್ ಸುದ್ದಿ ಹೊರ ಬಿದ್ದಿದ್ದು, ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್​ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ.

ಕಳೆದ ಆಗಸ್ಟ್​ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.

ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್​ ಕಾರ್ಡ್​ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್​ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್​ ಇದೆ.

ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.

ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್​ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.

ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ವಿಕ್ರಂಗೌಡ ಹತ್ಯೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ!

0

ಬೆಂಗಳೂರು: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ  ಅವರು ಎನ್ ಕೌಂಟರ್ ನಲ್ಲಿ  ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು, ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,

ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ  ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ:-

ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು,  ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ.

ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್: ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಯುವತಿಯ ಕೈಗಳು ಕಟ್!

0

ಬಾಗಲಕೋಟೆ:- ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ ಗಳು ಜೋರಾಗಿದೆ. ಕಡಿಮೆ ಹಣ ಹಾಗೂ ಸಮಯ ಉಳಿತಾಯ ಮಾಡಲು ಇಂದಿನ ಯುವ ಪೀಳಿಗೆ ಹೆಚ್ಚು ಆನ್ಲೈನ್ ಮೊರೆ ಹೋಗುತ್ತಿದ್ದಾರೆ.

ಆದರೆ ಇದರಿಂದಾಗುವ ಎಫೆಕ್ಟ್ ಒಂದೆರಡಲ್ಲ. ಇದೀಗ ಯುವತಿಯೋರ್ವಳು ಇದೇ ಆನ್ಲೈನ್ ನಿಂದ ಆರ್ಡರ್ ಮಾಡಿದ್ದ ಹೇರ್ ಡ್ರೈಯರ್ ನಿಂದ ಸಾವನ್ನಪ್ಪಿದ್ದಾಳೆ.

ಎಸ್, ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಎರಡು ಕೈಗಳು ತುಂಡಾಗಿರುವ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಜಿ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪಾಪಣ್ಣ ಮೃತಪಟ್ಟಿದ್ದರು.

ಶಶಿಕಲಾ ಎಂಬುವರ ಹೆಸರು, ನಂಬರ್ ಹೊಂದಿದ್ದ ಪಾರ್ಸಲ್ ಕೊರಿಯರ್‌ಯೊಂದು ಬಂದಿತ್ತು. ಶಶಿಕಲಾ ಅವರು ಕೂಡ ಮೃತ ಯೋಧನ ಪತ್ನಿಯಾಗಿದ್ದರು. ಕೊರಿಯರ್‌ನವರು ಶಶಿಕಲಾ ಅವರಿಗೆ ಕರೆ ಮಾಡಿದ್ದರು. ಆದರೆ ಅವರು ಊರಲ್ಲಿ ಇರದ ಕಾರಣ ಬಸಮ್ಮನಿಗೆ ಕೊರಿಯರ್ ಅನ್ನು ಪಡೆದು ತೆಗೆದು ನೋಡಲು ತಿಳಿಸಿದ್ದರು.

ತೆಗೆದು ನೋಡಿದಾಗ ಹೇರ್ ಡ್ರೈಯರ್ ಇತ್ತು. ಈ ವೇಳೆ ಪಕ್ಕದ ಮನೆಯವರು ಹೇರ್ ಡ್ರೈಯರ್ ಆನ್ ಮಾಡಲು ತಿಳಿಸಿದ್ದಾರೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಬ್ಲಾಸ್ಟ್ ಆಗಿ ಜೋರಾಗಿ ಸದ್ದಾಯಿತು.

ಬ್ಲಾಸ್ಟ್ ಆದ ಹಿನ್ನೆಲೆ ಎರಡೂ ಕೈಗಳು ತುಂಡಾಗಿದ್ದು, ಬೆರಳುಗಳು ಛಿದ್ರ ಛಿದ್ರವಾಗಿ ತುಂಡಾಗಿದೆ. ಮನೆಯಲ್ಲಿ ರಕ್ತ ಚಿಮ್ಮಿದ್ದು, ಬಸಮ್ಮನನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಅವರನ್ನು ವಿಚಾರಿಸಿದಾಗ ನಾನು ಹೇರ್ ಡ್ರೈಯರ್ ಆರ್ಡರ್ ಮಾಡೇ ಇಲ್ಲ. ಆದರೆ ನನ್ನ ಹೆಸರಲ್ಲಿ ಹೇರ್ ಡ್ರೈಯರ್ ಬಂದಿದೆ. ಆರ್ಡರ್ ಮಾಡಿದವರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂದು ಪೊಲೀಸರಿಂದ ತನಿಖೆ ನಡೆದಿದೆ.

ಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಚೇದನ: ಕೊನೆಗೂ ಬಯಲಾಯ್ತು ಕಾರಣ

ಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಏಕಾಏಕಿ ಡಿವೋರ್ಸ್ ಘೋಷಿಸಿ ಪ್ರತಿಯೊಬ್ಬರಿಗೂ ಶಾಕ್ ನೀಡಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನಕ್ಕೆ ಜೋಡಿ ಕೊನೆ ಹಾಡಿದ್ದಾರೆ. ಬೇರೆ ಬೇರೆಯಾಗುತ್ತಿರುವ ಬಗ್ಗೆ ಆಗುವ ರೆಹಮಾನ್ ಹಾಗೂ ಸೈರಾ ತಿಳಿಸಿದ್ದಾರೆ. ಇದೀಗ ವಿಚ್ಛೇದನಕ್ಕೆ ಕಾರಣ ಏನು ಎಂಬುದು ಬಯಲಾಗಿದೆ.

ಕೈತುಂಬ ಕೆಲಸ ಇರುವ ರೆಹಮಾನ್ ವರ್ಷದ ಎಲ್ಲಾ ದಿನಗಳಲ್ಲೂ ಸಖತ್ ಬ್ಯುಸಿಯಾಗಿರ್ತಾರೆ ಅವರು ತಂಡದ ಜೊತೆ ಕಾನ್ಸರ್ಟ್ ನಡೆಸುತ್ತಾರೆ. ಒಂದೊಮ್ಮೆ ಕಾನ್ಸರ್ಟ್ ಇಲ್ಲ ಎಂದಾದರೆ ಹಾಡಿನ ಕಂಪೋಸ್​ನಲ್ಲಿ ಬ್ಯುಸಿ ಆಗುತ್ತಾರೆ. ಈ ಕಾರಣಕ್ಕೆ ಅವರು ನಿದ್ರಿಸೋದು ಮುಂಜಾನೆ ವೇಳೆಗೆ. ಅವರು ನಿದ್ದೆಯಿಂದ ಎದ್ದೇಳುವಾಗ ಮಧ್ಯಾಹ್ನ ಆಗುತ್ತದೆ. ಇದು ಅವರ ದಿನಚರಿ. ಈ ಕಾರಣಕ್ಕೆ ಕುಟುಂಬಕ್ಕೆ ಅವರು ಹೆಚ್ಚು ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಇದು ವಿಚ್ಛೇದನಕ್ಕೆ ಕಾರಣ ಆಗಿರಬಹುದು ಎಂಬುದು ಕೆಲವರ ವಾದ.

ಸೈರಾ ಬಾನು ಅವರು ವಿಚ್ಛೇದನಕ್ಕೆ ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆ. ‘ಸಂಬಂಧದಲ್ಲಿನ ಭಾವನಾತ್ಮಕ ಒತ್ತಡದಿಂದಾಗಿ ವಿಚ್ಛೇದನ ಪಡೆದಿರುವುದಾಗಿ’ ಸೈರಾ ಹೇಳಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಸ್ಪಷ್ಟ ಹೇಳಿಕೆ ಬಂದಿಲ್ಲ.

ರೆಹಮಾನ್ ಅವರಿಗೆ ಈಗಲೂ ಮಾಜಿ ಪತ್ನಿ ಮೇಲೆ ಗೌರವ ಹಾಗೆಯೇ ಇದೆ ಎನ್ನಲಾಗಿದೆ. ಇವರು ಬರೋಬ್ಬರಿ 29 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದರು. ಕಳೆದ ವರ್ಷ ಕಸ್ತೂರಿ ಶಂಕರ್ ಅವರು ಸೈರಾ ಬಾನು ಬಗ್ಗೆ ಟೀಕೆ ಮಾಡಿದ್ದರು. ಅವರಿಗೆ ತಮಿಳು ಬರುವುದಿಲ್ಲ ಎಂದಿದ್ದರು. ಈ ಸಂದರ್ಭದಲ್ಲಿ ಅವರು ಸೈರಾ ಪರ ಮಾತನಾಡಿದ್ದರು.

ಲೋಕಾಯುಕ್ತ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್: ಠಾಣೆ ಮೆಟ್ಟಿಲೇರಿದ ವಾರ್ತಾ ಇಲಾಖೆ ಉಪ ನಿರ್ದೇಶಕ!

0

ಕಲಬುರ್ಗಿ:- ಲೋಕಾಯುಕ್ತ ಹೆಸರಲ್ಲಿ ವಾರ್ತಾ ಇಲಾಖೆಯ ಉಪ ನಿರ್ದೇಶಕರಿಗೆ ಹಣದ ಬೇಡಿಕೆ ಇಟ್ಟ ಘಟನೆ ಕಲಬುರಗಿಯಲ್ಲಿ ಜರುಗಿದೆ.

ಕಲಬುರಗಿ ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ ಬಿ ಅವರಿಗೆ ವಾಟ್ಸ್ ಆಪ್ ಕಾಲ್‌ ಮಾಡಿದ ಆರೋಪಿಗಳು, ಮೊದಲು ದಯಾನಂದ ಸಿ ಐ ಅಂತ ಪರಿಚಯ ಮಾಡಿಕೊಂಡು ಬಳಿಕ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ.

ನಿಮ್ಮ‌ ವಿರುದ್ಧ ದೂರು ಬಂದಿದೆ , ನಮ್ಮ ಹಂತದಲ್ಲೆ ಬಿ ರಿಪೋರ್ಟ್ ಹಾಕ್ತೇವೆ ಅಂತಾ ದಯಾನಂದ ಹೇಳಿದ್ದಾನೆ. ಕೊನೆಗೆ ಎಸ್ ಪಿ , ಎಡಿಜಿಪಿ ಜೊತೆ ಮಾತಾನಾಡುವಂತೆ ಬೇರೆಯವರಿಗೆ ಕರೆ ಟ್ರಾನ್ಸಫರ್ ಮಾಡಿದ್ದಾನೆ.

ಒಂದು ಲಕ್ಷ ಹಣ ಕೊಡಬೇಕು ಇಲ್ಲದೆ ಹೋದರೆ ಕಲಬುರಗಿ ವಾರ್ತಾ ಇಲಾಖೆಯ ಕಚೇರಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹೀಗಾಗಿ ಲೋಕಾಯುಕ್ತರ ಹೆಸರಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ವಿರುದ್ಧ ವಾರ್ತಾ ಇಲಾಖೆ ಉಪ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿಬಿ ಅವರು, ಸ್ಡೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದು, ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!