Home Blog Page 210

ಸಹನಾ ಕಾರ್ಕಳರದ್ದು ದಾಖಲೆಯ ಸಾಧನೆ: ಡಾ. ಬಸವರಾಜ ಬಳ್ಳಾರಿ 

0

ವಿಜಯಸಾಕ್ಷಿ ಸುದ್ದಿ, ಗದಗ: ಐಐ.ಒ ಸ್ನಾತಕೋತ್ತರ ಪದವಿಯಲ್ಲಿ ಗೋಲ್ಡ್ ಮೆಡಲ್‌ನೊಂದಿಗೆ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದು ಗದಗಿನ ಶಿಕ್ಷಣ ಕ್ಷೇತ್ರದ ಗರಿಮೆಯನ್ನು ಹೆಚ್ಚಿಸಿರುವ ಸಹನಾ ಅನಂತ ಕಾರ್ಕಳವರ ದಾಖಲೆಯ ಸಾಧನೆ ನಮಗೆಲ್ಲ ಹೆಮ್ಮೆ ತಂದಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪ್ರಶಂಸೆ ವ್ಯಕ್ತಪಡಿಸಿದರು.

ಐಐ.ಒದಲ್ಲಿ ಗೋಲ್ಡ್ ಮೆಡಲ್‌ನೊಂದಿಗೆ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿರುವ ಸಹನಾ ಅನಂತ ಕಾರ್ಕಳ ಅವರನ್ನು ರಾಜ್ಯ ಸರಕಾರಿ ನೌಕರರ ಸಂಘದ ಪರವಾಗಿ ಸಂಘದ ಕಚೇರಿಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಉಪಾಧ್ಯಕ್ಷ ಡಾ. ರವಿ ಎಲ್. ಗುಂಜೀಕರ ಮಾತನಾಡಿ, ಸಹನಾ ಅನಂತ ಕಾರ್ಕಳ ಕಾನೂನು ಪದವೀಧರ ಕಲಿಕಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು.

ವೇದಿಕೆಯ ಮೇಲಿದ್ದ ಜಿಲ್ಲಾ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಡಿ.ಎಸ್. ದುರ್ಗಣ್ಣವರ, ರಾಜು ಕಂಟೆಗಣ್ಣನವರ, ಹಿರಿಯ ಪತ್ರಕರ್ತ ಜಗದೀಶ ಕುಲಕರ್ಣಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಆನಂದಯ್ಯ ವಿರಕ್ತಮಠ, ನ್ಯಾಯವಾದಿ ಟಿ.ಎನ್. ಭಾಂಡಗೆ, ಪತ್ರಕರ್ತ ಆನಂದ ಸಾಲಿಗ್ರಾಮ, ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ, ಏಪಿಎಂಸಿ ಡೆಪ್ಯೂಟಿ ಮ್ಯಾನೇಜರ್ ಮಂಗಳಾ ಅನಂತ ಕಾರ್ಕಳ, ನಿವೃತ್ತ ನೌಕರರಾದ ಮಕಾನಾದರ ಮುಂತಾದವರು ಶುಭ ಹಾರೈಸಿದರು.

ಸಮಾರಂಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ಅರುಣಕುಮಾರ ಹಿರೇಮಠ, ಆನಂದಯ್ಯ ವಿರಕ್ತಮಠ, ಆನಂದ ಸಾಲಿಗ್ರಾಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಸಂಜೀವಕುಮಾರ ಕುಂದಗೋಳ ಸ್ವಾಗತಿಸಿದರು. ಕಾರ್ಯದರ್ಶಿ ಮುತ್ತು ಮಲಕಶೆಟ್ಟಿ ನಿರೂಪಿಸಿದರು. ಕಚೇರಿ ವ್ಯವಸ್ಥಾಪಕ ಕರೀಮಸಾಬ ಸುಣಗಾರ ವಂದಿಸಿದರು.

ಸಹನಾ ಅನಂತ ಕಾರ್ಕಳ ರಾಜ್ಯ ಸರಕಾರಿ ನೌಕರರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಷ್ಟಪಟ್ಟು ಕಲಿತರೆ ಯಾವುದೂ ಕಷ್ಟವಾಗಲಾರದು. ಸಾಧನೆ ಯಾರ ಸ್ವತ್ತಲ್ಲ. ಸಾಧಿಸುವ ಛಲ ಇರಬೇಕೆಂದರಲ್ಲದೆ, ಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ತಮ್ಮ ಸಾಧನೆಯನ್ನು ಗುರುತಿಸಿದ ರಾಜ್ಯ ಸರಕಾರಿ ನೌಕರರ ಸಂಘ ತಮಗೆ ಸನ್ಮಾನಿಸಿ ಗೌರವಿಸಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದರು.

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ನಡೆದ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಭಾಗವಹಿಸಿ ವಿಜೇತರಾಗಿದ್ದು, ಸಿಬ್ಬಂದಿಗಳಿಗೆ ಇಲಾಖೆಯ ಉಪನಿರ್ದೇಶಕರಾದ ಡಾ. ನಂದಾ ಹಣಬರಟ್ಟಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಡಾ. ನಂದಾ ಹಣಬರಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಇವರ ಸ್ವರಚಿತ ನಾಟಕ ಗೌಡನ ಮಗಳು-ಪಾತ್ರದಾರಿಗಳು ನಂದಾ ಹಣಬರಟ್ಟಿ, ಸಿಬ್ಬಂದಿಗಳಾದ ಬಿ.ಎಸ್. ಗುಡಿ, ದೀಪಾ ಶೆಟ್ಟರ್, ಶ್ರೀಕಾಂತ, ವಸಂತಾ, ವಿದ್ಯಾ, ಸುಜಾತಾ, ರೋಹನ, ಪಾಪಣ್ಣವರ, ಧರ್ಮರಾಜ, ಪ್ರವೀಣ ಗಾಯಕರ, ಕಸ್ತೂರಿ ನರ್ತಿ ಇವರುಗಳು ಕಿರುನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಡಾ. ನಂದಾ ಹಣಬರಟ್ಟಿ ಮತ್ತು ಇಲಾಖೆಯ ಸಿಬ್ಬಂದಿಗಳಾದ ಸುಜಾತಾ ಪಾಟೀಲ, ದೀಪಾ ಶೆಟ್ಟರ್, ಕಸ್ತೂರಿ ನರ್ತಿ, ಶ್ರೀಕಾಂತ ಅರಹುಣಸಿ, ಬಿ.ಎಸ್. ಗುಡಿ, ಮುತ್ತಣ್ಣ ಸಂಕನೂರ, ಎಂ.ಎಂ. ಪಾಪಣ್ಣವರ ಇವರುಗಳು ಜಾನಪದ ಸಮೂಹ ಗೀತೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶ್ರೀಕಾಂತ ಅರಹುಣಸಿ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ, ಸಿದ್ದಲಿಂಗೇಶ ಯಚ್ಚಲಗಾರ ಪುರುಷರ 800 ಮೀ ಓಟದಲ್ಲಿ ದ್ವಿತೀಯ, ಸಿದ್ಧಲಿಂಗೇಶ ಯಚ್ಚಲಗಾರ ಪುರುಷರ 100 ಮೀ ಓಟದಲ್ಲಿ ತೃತೀಯ, ಪ್ರಶಾಂತ ಸಂಗ್ರೇಶಿ ಪುರುಷರ 110 ಮೀ ಅಡೆತಡೆ ಓಟದಲ್ಲಿ ಪ್ರಥಮ, ಸಿದ್ದಪ್ಪ ಮಾದರ ಪುರುಷರ 64 ಕೆಜಿ ವೇಟ್ ಲಿಫ್ಟಿಂಗ್‌ದಲ್ಲಿ ದ್ವಿತೀಯ, ಮಂಜುನಾಥ ಮಾದರ ಪುರುಷರ 67 ಕೆಜಿ ಕುಸ್ತಿಯಲ್ಲಿ ದ್ವಿತೀಯ, ಶಿವಗಂಗವ್ವ ಕಬ್ಬೇರಹಳ್ಳಿ ಮಹಿಳೆಯರ 800 ಮೀ ಓಟದಲ್ಲಿ ತೃತೀಯ, ಮಾಬುಸಾಬ ಕರಣಿ ಪುರುಷರ 83 ಕೆಜಿ ವೇಟ್ ಲಿಫ್ಟಿಂಗ್‌ನಲ್ಲಿ ದ್ವಿತೀಯ, ಸದಾಶಿಬ ಬುದ್ನಿ ಪುರುಷರ 87 ಕೆಜಿ ಕುಸ್ತಿಯಲ್ಲಿ ಪ್ರಥಮ, ವಿಶಾಲ ಹಾದಿಮನಿ, ಬಿ.ವಿ. ಬಸವರೆಡ್ಡಿಯವರ, ನವೀನ ಕುಮಾರ ಹರಿಜನ, ಪ್ರಶಾಂತ ಸಂಗ್ರೇಶಿ, ನೀಲಕಂಠಯ್ಯ ಎಸ್, ಮಹಮ್ಮದರಫಿ ನದಾಫ್ ಅವರು ಪುರುಷರ ಫುಟ್ಬಾಲ್‌ನಲ್ಲಿ ಪ್ರಥಮ, ಬಿ.ವಿ. ಬಸವರೆಡ್ಡಿಯವರ ಪುರುಷರ ಬಾಸ್ಕೆಟ್ ಬಾಲ್‌ನಲ್ಲಿ ಪ್ರಥಮ, ಮಂಜುಳಾ ಅರಳಿಗಿಡದ ಮಹಿಳೆಯರ ಥ್ರೋಬಾಲ್‌ನಲ್ಲಿ ಪ್ರಥಮ, ರಾಘವೇಂದ್ರ ಗೋಕಾಕ್ ಪುರುಷರ ಹಾಕಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಶೈಕ್ಷಣಿಕ ಕ್ರಾಂತಿಗೆ ಸಾವಿತ್ರಿಬಾಯಿ ಮುನ್ನುಡಿ: ಡಾ. ಚೈತ್ರಾ

0

ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾಜಿಕ ಸಮಸ್ಯೆಗಳಿಗೆ ಶಿಕ್ಷಣವೊಂದೇ ಪರಿಹಾರ ಎಂಬುದನ್ನು ಅರಿತು ಜ್ಯೋತಿಬಾ ಫುಲೆ ಅವರ ಸಹಕಾರದೊಂದಿಗೆ ಶಾಲೆಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರಿಗೆ ಮತ್ತು ಕೆಳವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಶೈಕ್ಷಣಿಕ ಕ್ರಾಂತಿಗೆ ಸಾವಿತ್ರಿಬಾಯಿ ಫುಲೆ ಮುನ್ನುಡಿ ಬರೆದರು ಎಂದು ಎಂ.ಜಿ.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಉಪನ್ಯಾಸಕಿ ಡಾ. ಚೈತ್ರಾ ತಿಳಿಸಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನದಲ್ಲಿ ಮೈಲಾರಪ್ಪ ಮೆಣಸಗಿ ಸ್ಮರಣಾರ್ಥ ಜರುಗಿದ ಕುಮಾರವ್ಯಾಸ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಸ್ಪೃಶ್ಯತೆ, ಬಾಲ್ಯವಿವಾಹ, ಸತಿ ಸಹಗಮನ, ಕೇಶಮುಂಡನದಂತಹ ಅನಿಷ್ಠ ಆಚರಣೆಗಳ ವಿರುದ್ಧ ಹೋರಾಟವನ್ನು ಮಾಡಿದರು. ಮಹಿಳಾ ಸಬಲೀಕರಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರವಾದುದು ಎಂದು ತಿಳಿಸಿದರು.

ಮೈಲಾರಪ್ಪ ಮೆಣಸಗಿಅವರ ಸಂಸ್ಮರಣೆ ಮಾಡಿದ ಕಾರ್ಯದರ್ಶಿ ಡಾ. ದತ್ತಪ್ರಸನ್ನ ಪಾಟೀಲ, ಶ್ರಮ ಸಂಸ್ಕೃತಿಯ ಮೂಲಕ ಪ್ರಕಾಶನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಯನ್ನು ಮಾಡಿ ಕಾನೂನು ಹಾಗೂ ಶೈಕ್ಷಣಿಕ ಪುಸ್ತಕಗಳನ್ನು ಪ್ರಕಟಿಸಿ ನಾಡಿನ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸಿ ಕೀರ್ತಿ ವಿದ್ಯಾನಿಧಿ ಪ್ರಕಾಶನದ ಮೈಲಾರಪ್ಪ ಮೆಣಸಗಿ ಅವರಿಗೆ ಸಲ್ಲುತ್ತದೆ ಎಂದರು.

ದತ್ತಿದಾನಿ ಜಯದೇವ ಮೆಣಸಗಿ ಮಾತನಾಡಿ, ಗದಗ ಜಿಲ್ಲಾ ಕಸಾಪ ರಾಜ್ಯದಲ್ಲಿಯೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈಗಿರುವ ದತ್ತಿ ನಿಧಿಯನ್ನು ಹೆಚ್ಚಿಸಿ ತಮ್ಮ ತಂದೆಯವರ ಹೆಸರಿನಲ್ಲಿ ಮುಂದಿನ ವರ್ಷದಿಂದ ನಾಡಿನ ಪ್ರಕಾಶಕರೊಬ್ಬರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡುವ ದಿಸೆಯಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಕುಮಾರವ್ಯಾಸ ಜಯಂತಿ ಅಂಗವಾಗಿ ಹೆಸರಾಂತ ಗಮಕಿಗಳಾದ ವಾಸುದೇವಾಚಾರ್ಯ ಹೂಲಿ ಹಾಗೂ ಐಶ್ವರ್ಯ ಹೂಲಿ ಕುಮಾರವ್ಯಾಸ ಭಾರತದ ಪ್ರಸಂಗಗಳ ವಾಚನ ಮತ್ತು ವ್ಯಾಖ್ಯಾನ ನಡೆಸಿಕೊಟ್ಟರು. ಮಂಜುಳಾ ವೆಂಕಟೇಶಯ್ಯ ಸಾವಿತ್ರಿಬಾಯಿ ಫುಲೆ ಕುರಿತು ಕವನ ವಾಚಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ವಿ.ಎಸ್. ದಲಾಲಿ ಅವರನ್ನು ಸನ್ಮಾನಿಸಲಾಯಿತು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ಅಮರೇಶರಾಂಪೂರ ವಂದಿಸಿದರು.

ಕಾರ್ಯಕ್ರಮದಲ್ಲಿ ಸಿ.ಕೆ.ಎಚ್. ಶಾಸ್ತ್ರಿ, ಅರ್ಜುನ ಗೊಳಸಂಗಿ, ದೇವೇಂದ್ರ ನಾಯಕ, ಬಿ.ಬಿ. ಹೊಳಗುಂದಿ, ಜೆ.ಎ. ಪಾಟೀಲ, ಎ.ಎಂ. ಅಂಗಡಿ, ರತ್ನಕ್ಕ ಪಾಟೀಲ, ಸಿ.ಎಂ. ಮಾರನಬಸರಿ, ಜಿ.ಎ. ಪಾಟೀಲ, ಕೆ.ಎಸ್. ಪಲ್ಲೇದ, ಬಸವರಾಜ ನೆಲಜೇರಿ, ಉಮಾ ಕಣವಿ, ನೀಲಮ್ಮ ಅಂಗಡಿ, ರಾಜಶೇಖರ ಕರಡಿ, ಎಂ.ಎಫ್. ಡೋಣಿ, ಎಸ್.ಎಂ. ಗುಳಗುಳಿ, ಎಸ್.ಡಿ. ಗಾಂಜಿ, ಅಶೋಕ ಸತ್ಯರಡ್ಡಿ, ರಾಹುಲ ಗಿಡ್ನಂದಿ, ಎಂ.ಎಚ್. ಕಾಮನಹಳ್ಳಿ, ಸಂತೋಷಕುಮಾರ, ಎಸ್.ಎಂ. ಗುಳಗುಳಿ, ಡಿ.ಜಿ. ಕುಲಕರ್ಣಿ, ಬಸವರಾಜ ಗಣಪ್ಪನವರ, ರವೀಂದ್ರ ಜೋಶಿ, ಶ್ರೀಕಾಂತ ಹೂಲಿ, ಶರಣಪ್ಪ ಹೊಸಂಗಡಿ, ರಾಜಶೇಖರ ದಾನರಡ್ಡಿ, ಎಂ.ಎನ್. ಕಾಗದಗಾರ, ಬಿ.ಬಿ. ಪಾಟೀಲ, ರವಿ ದೇವರಡ್ಡಿ, ಗೋವಿಂದಜಿ, ಸುರೇಶ, ಜಾನ್ ಥಾಮಸ್, ಗಿರೀಶ ಪಂತರ, ಎ.ಸಿ. ಹಿರೇಮಠ, ಅಪ್ಪಣ್ಣ ಮುರಗೋಡ, ಸಿದ್ಧರಾಮ ಪಟ್ಟೇದ, ವಿ.ಕೆ. ದ್ಯಾಮನಗೌಡರ, ಆನಂದ ಹಡಪದ, ಜಗನ್ನಾಥ, ಕೆ.ಎಸ್. ಬಾಳಿಕಾಯಿ, ರತ್ನಾ ಪುರಂತರ, ಪದ್ಮಾ ಮೆಣಸಗಿ, ಹೇಮಾವತಿ ಹೂಲಿ, ರಾಧಿಕಾ ಜೋಶಿ, ಸುಧಾ ಬಳ್ಳಿ, ಅನಸೂಯಾ ಮಿಟ್ಟಿ, ನಾಗಪ್ಪ ಸುರಳಿಕೇರಿ, ಸುಧೀರ ಘೋರ್ಪಡೆ, ಯಶೋಧಾ ಗಿಡ್ನಂದಿ, ಬಸವರಾಜ ನೆಲಜೇರಿ, ಸುಮನ ಪಾಟೀಲ, ರತ್ನಾ ಘಾರ್ಗಿ, ಮಹಾಂತೇಶ ಬಾತಾಖಾನಿ, ರವಿ ಪೂಜಾರ, ಪಿ.ಆರ್. ಇನಾಮದಾರ, ಸತೀಶ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶ್ರೇಣೀಕೃತ ಸಾಮಾಜಿಕ ಸನ್ನಿವೇಶದಲ್ಲಿ ಮಹಿಳೆಯರಿಗೆ ಮತ್ತು ನಿಮ್ನ ವರ್ಗದವರಿಗೆ ಶಿಕ್ಷಣವನ್ನು ನಿರಾಕರಿಸಲಾಗಿತ್ತು. ಶೋಷಣೆಯಿಂದ ಜನ ನಲುಗುತ್ತಿದ್ದ ಸಂದರ್ಭದಲ್ಲಿ ಶಿಕ್ಷಣವನ್ನು ಮಂತ್ರದಂಡವಾಗಿಸಿಕೊಂಡು ಸಮಾನ ಸಮಾಜ ನಿರ್ಮಾಣಕ್ಕೆ ಫುಲೆ ದಂಪತಿಗಳು ಪ್ರಯತ್ನಿಸಿದರು. ಶಾಲೆ ಮತ್ತು ಆಶ್ರಮಗಳನ್ನು ಸ್ಥಾಪಿಸಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮಾಡಿದರು ಎಂದು ತಿಳಿಸಿದರು.

ಪಿಎಸ್‌ಐ ರಿತ್ತಿಯವರನ್ನು ಕೂಡಲೇ ಅಮಾನತುಗೊಳಿಸಿ: ರಾಜು ಖಾನಪ್ಪನವರ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಬಳ್ಳಾರಿ ಪೊಲೀಸರಿಗೊಂದು ನ್ಯಾಯ, ಗದಗ ಜಿಲ್ಲೆಯ ಪೊಲೀಸರಿಗೊಂದು ನ್ಯಾಯ ಮಾಡುತ್ತಿದೆಯೆಂದು ಹಿಂದೂ ಸಂಘಟನೆಗಳ ಮುಖಂಡ ರಾಜು ಖಾನಪ್ಪನವರ ಆರೋಪಿಸಿದರು.

ಗದಗ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಇಬ್ಬಂದಿ ನೀತಿಯನ್ನು ಖಂಡಿಸಿ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲಿಯೂ ವಿಫಲವಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಕೆಲವೆಡೆ ಸರ್ಕಾರ ನಾಮಕಾವಾಸ್ತೆ → ನಾಮಕಾವಸ್ತೆ ಅಧಿಕಾರಿಯ ಮೇಲೆ ಕ್ರಮ ಕೈಗೊಂಡಂತೆ ನಾಟಕವಾಡಿ ತನ್ನ ವೈಫಲ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದರು.

ಗಣಿನಾಡು ಬಳ್ಳಾರಿಯಲ್ಲಿ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕ ನಾ.ರಾ. ಭರತ್‌ರೆಡ್ಡಿ ಅಂಗರಕ್ಷಕರಿಂದಲೇ ಹತ್ಯೆಗೀಡಾದ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಅಂದೇ ಕರ್ತವ್ಯಕ್ಕೆ ಹಾಜರಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ ನೆಜ್ಜೂರರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಬಳ್ಳಾರಿ ಶಾಸಕ ನಾ.ರಾ. ಭರತ್‌ರೆಡ್ಡಿಯನ್ನು ಸಂತುಷ್ಟಗೊಳಿಸಲು ಸರ್ಕಾರ ಪ್ರಯತ್ನಿಸಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಓಂ ಶಕ್ತಿ ಮಾಲಾಧಾರಿಗಳು ನಡೆಸುತ್ತಿದ್ದ ಮೆರವಣಿಗೆಯ ಮೇಲೆ ದುಷ್ಟ ಮುಸ್ಲಿಂ ಮತಾಂಧರು ಕಲ್ಲೆಸೆದು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ ಪ್ರಕರಣದಲ್ಲಿಯೂ ಸಹ ಇದುವರೆಗೆ ಯಾವುದೇ ವ್ಯಕ್ತಿ, ಸಂಘಟನೆಯ ಮೇಲೆ ಪ್ರಕರಣ ದಾಖಲಿಸುವುದಾಗಲಿ, ಗಲಭೆಗೆ ಪ್ರಯತ್ನಿಸಿದವರನ್ನು ಬಂಧಿಸುವುದಾಗಲಿ ನಡೆದಿಲ್ಲ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತ, ಮುಸ್ಲಿಮರ ತುಷ್ಟೀಕರಣವನ್ನು ತೋರುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಹೇಶ್ ರೋಖಡೆ, ಹುಲಿಗೆಪ್ಪ ವಾಲ್ಮೀಕಿ, ಬಸವರಾಜ್ ಕುರ್ತಕೊಟ್ಟಿ, ಈಶ್ವರ್ ಕಾಟವಾ, ಕುಮಾರ್ ನಡಗೇರಿ, ವೆಂಕಟೇಶ್ ದೊಡ್ಮನಿ, ಭರತ ಲದ್ದಿ, ಈರಣ್ಣ ಪೂಜಾರ, ಎಸ್.ಪಿ. ಕಾಳೆ, ಕಿರಣ್ ಹಿರೇಮಠ, ಸತೀಶ್ ಕುಂಬಾರ್, ಮುದುಕಪ್ಪ ದೊಡ್ಮನಿ, ಬಸವರಾಜ್ ಬನ್ನಿಮರದ, ಅಭಿಲಾಷ್ ಗುಜ್ಮಾಗಡಿ, ಸಂಜು ಚಟ್ಟಿ, ಕೃಷ್ಣ ಹುಯಿಲಗೋಳ, ಮಹಾಬಲೇಶ್ವರ ಶೆಟ್ಟರ್, ಮೌನೇಶ್ ದಾಸರ್, ಈರಪ್ಪ ವಾಲ್ಮೀಕಿ, ರಾಜು ಗದ್ದಿ, ಮಂಜು ಗುಡಿಮನಿ, ಈರಣ್ಣ ಗಾಣಿಗೇರ್ ಮುಂತಾದವರಿದ್ದರು.

ಈ ಹಿನ್ನೆಲೆಯಲ್ಲಿ, ಜಮೀನಿನಲ್ಲಿ ಕೃಷಿ ಚಟುವಟಿಕೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಗ್ಧ ರೈತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 32 ಸಾವಿರ ರೂಪಾಯಿಗಳನ್ನು ಲೂಟಿ ಮಾಡಿದ ಶಿರಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಈರಪ್ಪ ರಿತ್ತಿ ಮೇಲೆ ಇದುವರೆಗೂ ಯಾವುದೇ ಕ್ರಮ ಜರುಗಿಸದಿರುವುದು ಅತ್ಯಂತ ವಿಷಾದನೀಯ. ಪಿಎಸ್‌ಐ ಈರಣ್ಣ ರಿತ್ತಿಯನ್ನು ಸರ್ಕಾರ ಕೂಡಲೇ ಅಮಾನತುಗೊಳಿಸಬೇಕು. ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಯ ಮೇಲೆ ಕಲ್ಲೆಸೆದ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಿಸಿ ದುಷ್ಕರ್ಮಿಗಳನ್ನು ಜೈಲಿಗೆ ಅಟ್ಟಬೇಕೆಂದು ರಾಜು ಖಾನಪ್ಪನವರ ಆಗ್ರಹಿಸಿದರು.

ಜ. 8ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರಿಗೆ ಬೆಳೆ ಪರಿಹಾರ ಸಮರ್ಪಕವಾಗಿ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕಿಸಾನ್ ಮೋರ್ಚಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜ. 8ರಿಂದ ರೋಣ ಪಟ್ಟಣದ ತಹಸೀಲ್ದಾರ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೌಡರಡ್ಡಿ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಮಹಾದೇವಗೌಡ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿಭಟನಾ ಧರಣಿ ಆರಂಭಕ್ಕೂ ಮುನ್ನ ರೋಣ ಕೃಷಿ ಮಾರುಕಟ್ಟೆಯಿಂದ ರೈತರ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 11.30ಕ್ಕೆ ರೋಣ ತಾಲೂಕು ತಹಸೀಲ್ದಾರರ ಕಚೇರಿಗೆ ತೆರಳಲಾಗುತ್ತದೆ ಎಂದರು. ತಹಸೀಲ್ದಾರರ ಕಚೇರಿ ಎದುರು ನಡೆಯುವ ಹೋರಾಟದಲ್ಲಿ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳ ರೈತರು ಮತ್ತು ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಬೆಳೆ ಬೆಲೆ ನಿರ್ಧಾರ ಮಾಡುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಬೆಳೆ ನಾಶವಾದ ಸಂದರ್ಭದಲ್ಲಿಯೂ ಖಾಸಗಿ ವಿಮಾ ಕಂಪನಿಗಳ ಭ್ರಷ್ಟಾಚಾರದ ಪರಿಣಾಮವಾಗಿ ಬೆಳೆ ವಿಮೆ ಮಾಡಿಸಿಕೊಂಡ ರೈತರಿಗೆ ಪರಿಹಾರ ದೊರೆಯುತ್ತಿಲ್ಲ. ಆದ್ದರಿಂದ ರೈತರ ಬೆಳೆ ಪರಿಹಾರವನ್ನು ಸಮರ್ಪಕವಾಗಿ ವಿತರಿಸಬೇಕು. ಕಡಲೆ ಬೆಳೆಗೆ ಸಂಬಂಧಿಸಿದಂತೆ ಬೆಳೆ ಬರುವ ಪೂರ್ವದಲ್ಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ಎಲ್ಲ ಬೆಳೆಗಳಿಗೆ ವಿಮಾ ಪರಿಹಾರ ಮೊತ್ತವನ್ನು ಶೀಘ್ರವಾಗಿ ನೀಡಬೇಕು ಎಂದು ಅವರು ಆಗ್ರಹಿಸಿದರು.

ರೋಣ ತಾಲೂಕು ರೈತ ಸಂಘದ ತಾಲೂಕು ಅಧ್ಯಕ್ಷ ಸಂಗಣ್ಣ ದಂಡಿನ, ರೈತ ಮುಖಂಡರಾದ ಮೇಘರಾಜ ಬಾವಿ, ಎಸ್.ಎಸ್. ಕಂಠಿ, ಸಂಗಮೇಶ ಪವಾಡಶೆಟ್ಟರ, ರಾಮಣ್ಣ ಸೂಡಿ, ದೇವಪ್ಪ ಹುನಗುಂದ, ಬಸನಗೌಡ ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ರೈತರು ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸಿ: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಂಗನವಾಡಿಗಳು ಮಗುವಿನ ಶಿಕ್ಷಣದ ಮೊದಲ ಮೆಟ್ಟಿಲುಗಳಾಗಿದ್ದು, ಶಿಕ್ಷಣದ ಜೊತೆಗೆ ಆರೋಗ್ಯ ಸೇವೆ ನೀಡುವ ಮೈಲಿಗಲ್ಲುಗಳಾಗಿವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಸಮೀಪದ ಗೊಜನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರ ಸಂಖ್ಯೆ-43ರ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆನ್ನುವದು ಪಾಲಕರ ಇಚ್ಛೆಯಾಗಿರುತ್ತದೆ. ಅದಕ್ಕಾಗಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಎಲ್ಲ ಕಡೆಗಳಲ್ಲಿ ಸ್ಥಾಪಿಸಿದ್ದು, ಸಾವಿರಾರು ಮಕ್ಕಳು ಇದರಲ್ಲಿ ಕಲಿಯುತ್ತಿದ್ದಾರೆ. ಇಲ್ಲಿ ಊಟ, ಉಪಹಾರ ಉಚಿತವಾಗಿ ನೀಡುವದರ ಜೊತೆಗೆ ಸಾಮಾನ್ಯವಾಗಿ ಮುಂದೆ ಅವರ ಶಿಕ್ಷಣಕ್ಕೆ ಅನುಕೂಲವಾಗುವ ವಿದ್ಯೆಯನ್ನು ನೀಡಲಾಗುತ್ತದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಅಂಗನವಾಡಿ ಶಿಕ್ಷಕಿಯರು, ಸಹಾಯಕರು ನಿರಂತರ ಸೇವೆ ಸಲ್ಲಿಸುತ್ತಿದ್ದು, ಮಕ್ಕಳ ಆರೋಗ್ಯ, ಉತ್ತಮ ಆಹಾರ ಒದಗಿಸುವತ್ತ ಅಂಗನವಾಡಿ ಶಿಕ್ಷಕರು, ಸಹಾಯಕರು ವಿಶೇಷ ಆದ್ಯತೆ ನೀಡಬೇಕು.

ಪಾಲಕರು ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಗೊಜನೂರು ಗ್ರಾಮದಲ್ಲಿ ಬಹುದಿನಗಳಿಂದ ಬೇಡಿಕೆಯಲ್ಲಿದ್ದ ಅಂಗನವಾಡಿ ಕೇಂದ್ರ ಸಂಖ್ಯೆ 43ರ ನೂತನ ಕಟ್ಟಡ ಇದೀಗ ಪ್ರಾರಂಭವಾಗಿದ್ದು, ಕಟ್ಟಡದಲ್ಲಿ ಸ್ವಚ್ಛತೆ ಮಕ್ಕಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ಕರೆನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಂಜುನಾಥ ಕಾಳೆ, ಉಪಾಧ್ಯಕ್ಷ ಮಹಾಂತಗೌಡ ಪಾಟೀಲ, ಸಿಡಿಪಿಓ ಮೃತ್ಯುಂಜಯ ಗುಡ್ಡದನ್ವೇರಿ, ಶಿರಹಟ್ಟಿ ಬಿಜೆಪಿ ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ರಮೇಶ ದನದಮನಿ, ಚಂದ್ರಗೌಡ ಪಾಟೀಲ, ನಿಂಗನಗೌಡ ಪಾಟೀಲ, ಮಂಜುನಾಥ ಕಣವಿ, ವೀರಭದ್ರಪ್ಪ ವಡಕಣ್ಣವರ, ಗಂಗಾಧರ ಮೆಣಸಿನಕಾಯಿ, ಶಕ್ತಿ ಕತ್ತಿ, ಭೀಮಣ್ಣ ಯಂಗಾಡಿ, ಅಂಗನವಾಡಿ ಮೇಲ್ವಿಚಾರಕಿ ಗೀತಾ ಮುಳುಗುಂದ, ಎನ್‌ಪಿಎಸ್ ನೌಕರ ಸಂಘದ ತಾಲೂಕಾಧ್ಯಕ್ಷ ಎಫ್.ಎಸ್. ತಳವಾರ, ಅಂಗನವಾಡಿ ಕಾರ್ಯಕರ್ತೆಯರಾದ ಬಸವಣೆವ್ವ ಪಾಟೀಲ, ಸುಧಾ ಗುಂಡೆನಹಳ್ಳಿ, ಗಿರಿಜಾ ಪೂಜಾರ, ನಾಗಮ್ಮ ಮುದಗಲ್, ಮಕ್ಕಳ ಜಾಗೃತಿ ಸಂಸ್ಥೆ ಸಿಬ್ಬಂದಿಗಳಾದ ಸಂಜೀವ ರೆಡ್ಡಿ, ಕಾತುನಬಿ ಮಸೂದಿ, ಸಂಜೀವ, ಸಾವಿತ್ರಿ ಕಾಮತ ಮುಂತಾದವರಿದ್ದರು.

ಶಾಲೆ ಬಿಟ್ಟ ಮಕ್ಕಳ ಬಗ್ಗೆ ಗಮನವಿರಲಿ: ಶೇಖರಗೌಡ ರಾಮತ್ನಾಳ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಕ್ಕಳು ನಿಯಮಿತವಾಗಿ ಶಾಲೆಗೆ ಬರುವುದನ್ನು ರೂಢಿಸಬೇಕು. ಶಾಲೆ ಬಿಟ್ಟ ಮಕ್ಕಳ ಬಗ್ಗೆ ಎಲ್ಲರೂ ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

6ರಿಂದ 14 ವರ್ಷದೊಳಗಿನ ಯಾವುದೇ ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಅದರಲ್ಲೂ ತಾಲೂಕಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ನೀಡಬೇಕು. ಶಾಲೆ ಬಿಟ್ಟ ಮಕ್ಕಳ ಹಾಜರಾತಿ ಹಾಕುತ್ತ ನಡೆದರೆ ವರ್ಗ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರೇ ಹೊಣೆಯಾಗುತ್ತಾರೆ. ಭಾರತ ದೇಶದಲ್ಲಿ ಬಾಲ್ಯ ವಿವಾಹಗಳಿಲ್ಲದಂತೆ ಮಾಡುವುದಕ್ಕಾಗಿ ಈ ಅರಿವು ಜಾಗೃತಿಯನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಮಕ್ಕಳು ತಮ್ಮ ಅನಿಸಿಕೆಗಳನ್ನು ಹೇಳಿಕೊಳ್ಳಲು ಕಡ್ಡಾಯವಾಗಿ ಸಲಹಾ ಪೆಟ್ಟಿಗೆಯನ್ನು ಇಡಬೇಕೆಂದರು.

ವಸತಿ ನಿಲಯಗಳಲ್ಲಿ, ಅದರಲ್ಲೂ ಬಾಲಿಕೆಯರ ವಸತಿ ನಿಲಯಗಳಲ್ಲಿ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಜಾರಿಗೆ ತರಬೇಕು. ಏನಾದರೂ ಅಹಿತಕರ ಘಟನೆ ನಡೆದರೆ ಅಲ್ಲಿನ ಮೇಲ್ವಿಚಾರಕರೇ ಜವಾಬ್ದಾರರಾಗುತ್ತಾರೆ ಎಂದರು.

ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ ಮಾತನಾಡಿ, ಮಕ್ಕಳ ಆಯೋಗವು ಮಕ್ಕಳ ಹಿತದೃಷ್ಟಿಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ನಿಮಗೆ ಏನೇ ತೊಂದರೆಯಾದರೂ ಅವರ ಗಮನಕ್ಕೆ ತನ್ನಿ. ಇಲ್ಲವಾದರೆ ತಾಲೂಕಾಡಳಿತದ ಗಮನಕ್ಕೂ ತರಬಹುದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಸುಪರ್ಣಾ ಬ್ಯಾಹಟ್ಟಿ ವೇದಿಕೆಯ ಮೇಲಿದ್ದರು. ಮುಖ್ಯ ಶಿಕ್ಷಕ ಎಸ್.ಬಿ. ನಿಡಗುಂದಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಆರ್.ಎಸ್. ನರೇಗಲ್ಲ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕ ಡಿ.ಎಸ್. ಬಡಿಗೇರ ನಿರೂಪಿಸಿದರೆ, ಶಿಕ್ಷಕ ಬಿ.ಟಿ. ತಾಳಿ ವಂದಿಸಿದರು.

ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಕಂದಕೂರ ಮಾತನಾಡಿ, ಸರ್ಕಾರಿ ಪ್ರೌಢಶಾಲೆಗಳಲ್ಲಿನ ಮೂಲಭೂತ ಸೌಲಭ್ಯಗಳ ತೊಂದರೆ ನಿವಾರಿಸಲು ಬಿಇಒ ಅವರಿಂದ ಮಾಹಿತಿ ಪಡೆದು ಕ್ರಮ ಜರುಗಿಸಲಾಗುವುದು. ಮನೆಗೊಂದು ಶೌಚಾಲಯ ಇರುವಂತೆ, ಶೌಚಾಲಯ ಇರುವ ಮನೆಯ ವರನನ್ನೇ ನೀವು ಮದುವೆಯಾಗಬೇಕೆಂದು ಬಾಲಿಕೆಯರಿಗೆ ಸಲಹೆ ನೀಡಿದರಲ್ಲದೆ, ಮನೆಯಲ್ಲಿ ಪಾಲಕರು ಗಂಡು-ಹೆಣ್ಣು ಮಕ್ಕಳನ್ನು ಒಂದೇ ರೀತಿ ಬೆಳೆಸಬೇಕೆಂದರು.

ಸಿಎಂ ಸಿದ್ದರಾಮಯ್ಯರ ದೀರ್ಘಾವಧಿ ಆಡಳಿತ: ಅಭಿಮಾನಿಗಳಿಂದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದಲ್ಲಿ ಪ್ರಸಾದ ಸೇವೆ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ರಾಜಕೀಯದ ಏಳು-ಬೀಳಿನ ಮೇಲಾಟದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಏಳೂವರೆ ವರ್ಷಗಳಷ್ಟು ದೀರ್ಘಾವಧಿಗೆ ಕೇವಲ ಇಬ್ಬರು ಪೂರ್ಣಾವಧಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಅವಕಾಶ ನೀಡಿದೆ. ಅವರಲ್ಲಿ ಒಬ್ಬರು ಹಿಂದುಳಿದ ಸಮುದಾಯದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯ ಡಿ.ದೇವರಾಜ ಅರಸುರವರಾದರೆ, ಇನ್ನೊಬ್ಬರು ಪ್ರಸ್ತುತ ಮುಖ್ಯಮಂತ್ರಿಗಳಾಗಿ 2792 ದಿನಗಳನ್ನು ದಾಟಿ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ದಾಖಲಾರ್ಹ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯನವರಾಗಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ ಕೆ.ಬಿ. ಕಂಬಳಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ದೀರ್ಘಾವಧಿ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ನಗರದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡ 1755ನೇ ದಿನದ ಪ್ರಸಾದ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ನೇಹ-ಸಂಬಂಧಗಳಿಗೆ, ಪ್ರೀತಿ ವಾತ್ಸಲ್ಯಗಳಿಗೆ ಸೋಲುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲವರ ದೃಷ್ಟಿಯಲ್ಲಿ ಹಠಮಾರಿ, ಒರಟರಂತೆ ಕಂಡರೂ ಕೂಡ ಅವರನ್ನು ಹತ್ತಿರದಿಂದ ಬಲ್ಲವರು ಅವರ ನಿಷ್ಕಲ್ಮಷ, ನಿಷ್ಕಪಟ ನುಡಿಗಳನ್ನು ಮೆಚ್ಚಿಕೊಳ್ಳುತ್ತಾರೆ. ಇದರಿಂದಾಗಿ ಅವರ ಸ್ನೇಹ ಬಳಗ ಮತ್ತು ಅಭಿಮಾನಿ ಸಂಘಟನೆಗಳು ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿವೆ. ರಾಜಕೀಯವಾಗಿ ಅವರನ್ನು ಟೀಕಿಸುವ ವಿರೋಧಿಗಳು ಕೂಡ ವ್ಯಕ್ತಿಗತವಾಗಿ ಅವರನ್ನು ಗೌರವಿಸುತ್ತಾರೆ ಎಂದು ಹೇಳಿದರು.

ಪ್ರೊ. ಮಾರುತಿ ಮಡ್ಡಿ ಮಾತನಾಡಿ, ಸಿದ್ದರಾಮಯ್ಯನವರು ಆರ್ಥಿಕವಾಗಿಯೂ ಸದೃಢವಿಲ್ಲದ, ಸಾಂಪ್ರದಾಯಿಕ ಶಿಕ್ಷಣವನ್ನು ಪ್ರಾರಂಭದಲ್ಲಿ ಸರಿಯಾಗಿ ಪಡೆಯಲಾಗದ, ಹಿಂದುಳಿದ ಸಮುದಾಯದ, ಸೌಲಭ್ಯಗಳಿಲ್ಲದ ಕುಗ್ರಾಮದಲ್ಲಿ ಜನಿಸಿ ಇಂದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ರಾಜಕೀಯದಲ್ಲಿ ಬೆಳೆದುಬಂದ ರೀತಿ ಅತ್ಯಂತ ರೋಚಕ ಮತ್ತು ರೋಮಾಂಚನಕಾರಿಯಾಗಿದೆ. ಅಂದಿನ ರಾಮಕೃಷ್ಣ ಹೆಗಡೆಯವರ ಸರಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ, ನಂತರ ರೇಷ್ಮೆ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದರು. ಮತ್ತೆ 1985ರಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಗೆದ್ದು ಎಸ್.ಆರ್. ಬೊಮ್ಮಾಯಿ ಸರಕಾರದಲ್ಲಿ ಸಾರಿಗೆ ಮಂತ್ರಿಗಳಾದರು ಎಂದರು.

ಈ ಸಂದರ್ಭದಲ್ಲಿ ಎಸ್.ಆರ್. ರೊಳ್ಳಿ, ನಿವೃತ್ತ ಶಿಕ್ಷಕ ಎಸ್.ಎಸ್. ಕರಡಿ, ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ಗೌರವಾಧ್ಯಕ್ಷರಾದ ಎಸ್.ಎಸ್. ಕಳಸಾಪೂರಶೆಟ್ಟರ್, ಉಪಾಧ್ಯಕ್ಷರಾದ ಉಮೇಶ ಪೂಜಾರ, ಸದಸ್ಯರಾದ ರಾಜಣ್ಣ ಮಲ್ಲಾಡದ, ಮುತ್ತು ಜಡಿ, ಹಿರಿಯರಾದ ಗುರುಮೂರ್ತಿ ಮರಿಗುದ್ದಿ, ಸಿದ್ದರಾಮಯ್ಯ ಅಭಿಮಾನಿ ಬಳಗದವರಾದ ವಿ.ವೈ. ಮಕ್ಕಣ್ಣವರ, ನಾಗಪ್ಪ ಗುಗ್ಗರಿ, ಡಾ. ಎಸ್.ಎ. ಜಕಬಾಳ, ಡಾ. ಶರಣಬಸವ ವೆಂಕಟಾಪೂರ, ಪ್ರೊ. ಬಿ.ಎಸ್. ಕಂಠಿ, ಪ್ರೊ. ಎಂ.ಸಿ. ವಗ್ಗಿ, ಚೆನ್ನಮ್ಮ ಹುಳಕಣ್ಣವರ, ಹುಚ್ಚಣ್ಣ ಶಹಪೂರ, ಬಿ.ಬಿ. ಭಾವಿಕಟ್ಟಿ, ಎಸ್.ಎಸ್. ಕರಡಿ, ಉಮೇಶ ಹಡಪದ, ಸುಭಾಷ ಪರಸನಾಯ್ಕರ್, ಶಿವಣ್ಣ ಶಿಂಗಟಾಲಕೇರಿ, ಯಲ್ಲಪ್ಪ ಗುರಿಕಾರ, ಬಸವರಾಜ ಮಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಕ ಸಚಿವ ಸಂಪುಟ ನಡೆಸಿ ಅನ್ನಭಾಗ್ಯ, ಕ್ಷೀರಭಾಗ್ಯ, ವಸತಿ ಭಾಗ್ಯದಂತಹ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಮುಖ್ಯವಾಗಿ ಹಿಂದುಳಿದವರ, ಅಲ್ಪಸಂಖ್ಯಾತರ, ರೈತರ ಸಾಲ ಮನ್ನಾ ಮಾಡಿದರು. ರಾಜ್ಯದ 22ನೇ ಮುಖ್ಯಮಂತ್ರಿಯಾದ ನಂತರ ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶ್ವದಾದ್ಯಂತ ಪ್ರಸಿದ್ಧಿಯಾದರು. ಬಡವರ ಪರ ಯೋಚಿಸುವ ಅವರೊಬ್ಬ ಮಾದರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಪ್ರೊ. ಮಾರುತಿ ಮಡ್ಡಿ ಮಾತನಾಡಿ ಹೇಳಿದರು.

ರಾಜಕಾರಣ ಬದಿಗಿಟ್ಟು ನೀರಾವರಿ ಯೋಜನೆಗಳಿಗೆ ಒಗ್ಗಟ್ಟು ಅಗತ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

0

ಹಾವೇರಿ: ರಾಜ್ಯದ ಜನರು ಹಾಗೂ ರೈತರ ಹಿತಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಾಗಿ ಒತ್ತಡ ಹೇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಹಾವೇರಿಯಲ್ಲಿ ಬುಧವಾರ ನಡೆದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ, ಮಹದಾಯಿ, ಕಾವೇರಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳು ರಾಜ್ಯದ ಭವಿಷ್ಯಕ್ಕೆ ಅತ್ಯಂತ ಮಹತ್ವದ್ದಾಗಿವೆ ಎಂದರು.

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ತಿಳಿಸಿದ ಡಿಸಿಎಂ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಅಗತ್ಯವಿದೆ ಎಂದರು. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪಿನಂತೆ ಕೇಂದ್ರ ಅರಣ್ಯ ಇಲಾಖೆಯಿಂದ ಅನುಮೋದನೆ ದೊರೆತರೆ ರೈತರ ಹೋರಾಟಕ್ಕೆ ಅಂತ್ಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ಲಾಭಕ್ಕಾಗಿ ರಾಜ್ಯದ ಹಿತಾಸಕ್ತಿಯನ್ನು ಮರೆತರೆ ಸರಿಯಲ್ಲ ಎಂದು ಹೇಳಿದ ಅವರು, ಗೋವಾ ಸೇರಿದಂತೆ ಪಕ್ಕದ ರಾಜ್ಯಗಳ ರಾಜಕಾರಣವನ್ನು ಬದಿಗಿಟ್ಟು ಕರ್ನಾಟಕದ ರೈತರ ಬದುಕಿನ ಬಗ್ಗೆ ಆಲೋಚಿಸಬೇಕಾದ ಸಮಯ ಇದು ಎಂದರು. ಮುಂದಿನ ಎರಡು-ಮೂರು ವರ್ಷ ರಾಜಕಾರಣ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಒಂದಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು.

ವಿರಾಟ್ ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ಕಿಂಗ್ ಕೊಹ್ಲಿ!

0

ಭಾರತ–ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ಮುನ್ನ, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕೊಹ್ಲಿ ಬರುವ ಸುದ್ದಿ ತಿಳಿದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದರು. ಹೊರಬಂದ ಕ್ಷಣದಲ್ಲೇ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳ ನಡುವೆ ಅಭಿಮಾನಿಗಳು ಅವರನ್ನು ಸುತ್ತುವರೆದರು. ವಿಮಾನ ನಿಲ್ದಾಣದಿಂದ ಕಾರಿನತ್ತ ಸಾಗುವ ವೇಳೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದು, ಭದ್ರತಾ ಸಿಬ್ಬಂದಿಗೆ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟವಾಯಿತು.

ಕೆಲ ಹೊತ್ತು ಅಸ್ತವ್ಯಸ್ತತೆ ಉಂಟಾದರೂ, ವಿರಾಟ್ ತಾಳ್ಮೆಯಿಂದ ನಡೆದುಕೊಂಡು ಕೆಲವು ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್ ನೀಡಿ ಬಳಿಕ ಕಾರಿನಲ್ಲಿ ಹೊರಟರು. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

error: Content is protected !!