Home Blog Page 2103

ಬಿಜೆಪಿ 100 ಕೋಟಿ ರೂ. ಆಫರ್ ವಿಚಾರ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು!?

0

ಬೀದರ್:- ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು.

ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.

ಬಿಜೆಪಿ ಕಾರ್ಡ್ ರದ್ದು ವಿಚಾರವಾಗಿ ಬಹಳಷ್ಟು ದೂರುಗಳಿವೆ. ಸಾಹುಕಾರರು, ಮನೆ ಇದ್ದವರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ತೆಗೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಜೆಪಿ ಕೊಡಬೇಕು ಎಂಬ ನಿಯಮವಿದೆ.

ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದರು.

ಐಪಿಲ್ ಮಾದರಿಯಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

0

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿ ಐಪಿಎಲ್ ಮಾದರಿಯಲ್ಲಿ ರಾಜ್ಯಮಟ್ಟದ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ಜಿಲ್ಲೆಯ ಗದಗ ಪಾವರ್ಸ್ ತಂಡ ನ. 24ರಂದು ಮೊದಲ ಲೀಗ್ ಪಂದ್ಯ ಆಡಲಿದೆ ಎಂದು ತಂಡದ ಒಡತಿ ಶ್ವೇತಾ ಗೌಡ ತಿಳಿಸಿದರು.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಈ ಟೂರ್ನಮೆಂಟ್ ಆಯೋಜಿಸಿದೆ. ಗಂಗಾಧರ ರಾಜು ಅವರ ಕನಸಿನ ಟೂರ್ನಮೆಂಟ್ ಇದಾಗಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಫ್ಟ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲು ಅಸೋಸಿಯೇಶನ್ ಮುಂದಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ತಂಡ ಸೇರಿದಂತೆ ಒಟ್ಟು ೩೨ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಟೂರ್ನಿಯ ವಿಜೇತ ತಂಡಕ್ಕೆ ಗರಿಷ್ಠ 25 ಲಕ್ಷ ರೂ. ಬಹುಮಾನ ಘೋಷಣೆಯಾಗಿದೆ. ಆದ್ದರಿಂದ, ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಭಾವಂತರನ್ನೊಳಗೊಂಡ ತಂಡವನ್ನು ಆಯ್ಕೆ ಮಾಡಿಕೊಂಡಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೆ.ಎಂ. ಸಯ್ಯದ, ಶಿವು ಕರಡಿ, ಕಾವೇರಿ ಬಡಿಗೇರ, ಮಹೇಶ್ವರಾನಂದ ಗುರುಜಿ, ಸಯ್ಯದ ಕೊಪ್ಪಳ, ಶ್ರೀಧರ ವಜ್ರಬಂಡಿ, ಶ್ರೀಕಾಂತ ಪೆರೂರ, ರವಿ, ಸರ್ಫರಾಜ ಕೌತಾಳ, ಶಂಕರ ಗೌಡಕಿ, ರಮೇಶ ಬೆನಹಾಳ, ವೀರೇಶ ವಡ್ಡರ್, ವಿಜಯ ಮುಳಗುಂದ ಮುಂತಾದವರು ಉಪಸ್ಥಿತರಿದ್ದರು.

`ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ  ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದಲ್ಲಿ ತೆರೆದ ವಾಹನದ ಮುಖಾಂತರ ಸ್ತಬ್ಧ ಚಿತ್ರದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹಾಗೂ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಧಾ ಮಣ್ಣೂರ   ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ನೂತನ ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನ್ಯಾ.ಮೂ ವಿ.ಶ್ರೀಶಾನಂದ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಶ್ರೇಷ್ಠ ಹಾಗೂ ನೈಜ ನ್ಯಾಯವು ನೊಂದವರ ಕಣ್ಣೀರು ಒರೆಸುವ ಕಾರ್ಯ ಮಾಡುವಂತಾಗಲಿ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಗದಗ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಅಭಿಪ್ರಾಯಪಟ್ಟರು.

ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಶಾಲೆಯ ಹಿಂಭಾಗದಲ್ಲಿ  ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಲ್ಲಿರುವ ಆತ್ಮಸಾಕ್ಷಿಯು ನ್ಯಾಯಾಧೀಶರಾಗಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಆತ್ಮಸಾಕ್ಷಿಗೆ ಸರಿ ಎನಿಸಿದ್ದನ್ನು ಮಾತ್ರವೇ ಮಾಡಬೇಕು. ಆಸೆಯು ದುರಾಸೆಯಾದಾಗ ಮನುಷ್ಯರು ಕೆಟ್ಟ ದಾರಿ ಹಿಡಿಯುವಂತೆ ಆಗುತ್ತದೆ ಎಂದರು.

ಸ್ವಾತಂತ್ರö್ಯ ಬಂದ ನಂತರ ದೇಶಕ್ಕೆ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲ್ಪಟ್ಟ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ನಮ್ಮೆಲ್ಲರಿಗೂ ಸಂವಿಧಾನವೇ ಶ್ರೇಷ್ಠ ಗ್ರಂಥ. ಸಂವಿಧಾನಕ್ಕೆ ತನ್ನದೇ ಆದ ಘನತೆ, ಗೌರವ ಇದ್ದು ಸರ್ವರೂ ಸಂವಿಧಾನ ಹಾಗೂ ದೇಶದ ಕಾನೂನುಗಳನ್ನು ಗೌರವಿಸಬೇಕು ಎಂದರು.

ನಾವು ಜೀವಿಸುವ ಪ್ರದೇಶದಲ್ಲಿ ಆಸ್ಪತ್ರೆ ಹಾಗೂ ನ್ಯಾಯಾಲಯ ಕಟ್ಟಡಗಳು ಇರಬೇಕು. ಅವುಗಳು ಅನಿವಾರ್ಯ ಸಂದರ್ಭದಲ್ಲಿ ಮಾತ್ರವೇ ಬಳಕೆಯಾಗಬೇಕು. ಅಂದರೆ ಆರೋಗ್ಯ ಹದಗೆಟ್ಟಾಗ ಮಾತ್ರ ಆಸ್ಪತ್ರೆಗಳಿಗೆ ತೆರಳುತ್ತೇವೆ, ಅದರಂತೆ ಅನ್ಯಾಯವಾದಾಗ ಮಾತ್ರವೇ ನ್ಯಾಯದ ಮೊರೆ ಹೋಗುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಾಜ್ಯಮುಕ್ತ ಗ್ರಾಮ ಪ್ರತಿಯೊಬ್ಬರ ಆಶಯವಾಗಬೇಕು. ಗದಗ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ತರಹದ ಪೊಲೀಸ್ ಪ್ರಕರಣ ದಾಖಲಾತಿಗಳಾಗದ ೫೮ ಗ್ರಾಮಗಳಿದ್ದು, ವ್ಯಾಜ್ಯಮುಕ್ತ ಗ್ರಾಮದ ಪರಿಕಲ್ಪನೆಗೆ ಮಾದರಿಯಾಗಿವೆ. ೧೦೦ ಗ್ರಾಮಗಳನ್ನಾದರೂ ವ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿ ಘೋಷಿಸುವ ಯೋಜನೆ ಸಾಕಾರವಾಗಲು ಸಾರ್ವಜನಿಕರು ಸಹಕಾರ ನೀಡಬೇಕೆಂದರು.

ಬಡವರ ಪ್ರಕರಣಗಳಿಗೆ ಆರು ತಿಂಗಳೊಳಗಾಗಿ ನ್ಯಾಯಾಲಯಗಳಲ್ಲಿ ಬಗೆಹರಿದರೆ ಅದೊಂದು ದೊಡ್ಡ ಸಾಧನೆಯಾಗಲಿದೆ. ಸರ್ಕಾರ ಜನಪರ ಕಾರ್ಯಕ್ಕೆ ಹಾಗೂ ಜನಪರ ಕಾನೂನು ಜಾರಿಗೊಳಿಸಲು ಸದಾ ಸಿದ್ಧ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ವೇದಿಕೆಯಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್. ಪಾಟೀಲ, ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಎಸ್. ಮಿಟ್ಟಲಕೋಡ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲಾ ್ಲ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ರೋಣ ವಕೀಲರ ಸಂಘದ ಅಧ್ಯಕ್ಷ ವಿ.ಎಸ್. ಬಂಗಾರಿ, ರೋಣ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಐ.ಎ. ಫಾರೂಕಿ, ಗದಗ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವಿ.ಎನ್. ಪಾಟೀಲ ಉಪಸ್ಥಿತರಿದ್ದರು.

ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ಎಂ.ವೈ. ಗೋಣೇಕರ್ ಪ್ರಾರ್ಥಿಸಿದರು. ರಾಘವೇಂದ್ರ ಅಂಬೋಡೇಕರ್ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ವಕೀಲರಾದ ಬಿ.ಎ. ಸಜ್ಜನರ ಪ್ರಾಸ್ತಾವಿಕ ಮಾತನಾಡಿದರು.

ಸಮಾರಂಭದಲ್ಲಿ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ  ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು, ಸಾರ್ವಜನಿಕರು ಹಾಜರಿದ್ದರು.

ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ: ಡಾ.ಜಿ‌.ಪರಮೇಶ್ವರ್ ಟೀಕೆ

0

ಮೈಸೂರು: ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರ ಖರೀದಿಗೆ ಬಿಜೆಪಿ ಈಗಲೂ ಪ್ರಯತ್ನ ಮಾಡುತ್ತಿದೆ. ಆದರೆ ಎಷ್ಟು ಕೋಟಿ ಎಂಬುದು ಗೊತ್ತಿಲ್ಲ. ಪ್ರಯತ್ನವನ್ನಂತೂ ಮಾಡುತ್ತಲೇ ಇರುತ್ತಾರೆ.

ಮುಖ್ಯಮಂತ್ರಿಗಳೇ ಕೋಟಿ ವಿಚಾರ ಹೇಳಿದ ಮೇಲೆ ಅದು ಸತ್ಯ ಇರಬಹುದು. ಈ ವಿಚಾರವಾಗಿ ಸರಿಯಾದ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ಎತ್ತಿದ ಕೈ ಎಂದು ಟೀಕಿಸಿದ್ದಾರೆ.

ಇನ್ನೂ 40% ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಿದ್ದೆವು. ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎನ್ನುತ್ತಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯಬಿದ್ದರೆ ಮರುತನಿಖೆಗೆ ಒಳಪಡಿಸಲು ನಾವು ಸಿದ್ಧ ಎಂದರು.

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

0

ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.

ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.

ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ .ಕುಮಾರಸ್ವಾಮಿ ಯವರಿಗೆ ಯಾವ ನೈತಿಕ ಹಕ್ಕಿದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ

ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.

ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ?

ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ. 15 ಲಕ್ಷದವರೆಗೆ ಶೇಕಡಾ 3% ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಬರುವುದು ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.‌

2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ. ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು. ಇದನ್ನು ನೀವು ಕೇಳುವುದಿಲ್ಲ ಎಂದರು. 56000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಗಳಲ್ಲಿ ಏಕೆ ಕೊಡುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ

ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ಹಸೆಮಣೆ ಏರಲು ರೆಡಿಯಾದ್ರಾ ಕೀರ್ತಿ ಸುರೇಶ್‌..? ಹುಡುಗ ಯಾರು ಗೊತ್ತಾ..?

0

ನಟ-ನಟಿಯರು ಯಾರದ್ದಾದರೂ ಜೊತೆ ಸುತ್ತಾಟ ನಡೆಸಿದರೆ ಸಾಕು, ಡೇಟಿಂಗ್ ವಿಚಾರ ಹುಟ್ಟಿಕೊಳ್ಳುತ್ತದೆ. ಪ್ರೀತಿ-ಪ್ರೇಮದ ರೆಕ್ಕೆ ಪಡೆದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ಪೈಕಿ ಕೆಲವು ನಿಜವಾದರೆ ಇನ್ನೂ ಕೆಲವು ಸುಳ್ಳಾಗಿದೆ. ಇದೀಗ ಕೀರ್ತಿ ಸುರೇಶ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಯ ಮದುವೆ ಮ್ಯಾಟರ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಮೂಲಗಳ ಪ್ರಕಾರ, ಕುಟುಂಬಸ್ಥರು ನೋಡಿದ ಹುಡುಗನ ಜೊತೆ ಕೀರ್ತಿ ಮದುವೆಯಾಗಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಡಿಸೆಂಬರ್‌ನಲ್ಲಿ ಗೋವಾದಲ್ಲಿ ಕೀರ್ತಿ ಸುರೇಶ್ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ವರ ಕೂಡ ನಟಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಇದು ವಿಚಾರ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಕಾದುನೋಡಬೇಕಿದೆ.

ಕೀರ್ತಿ ಸುರೇಶ್ ಅವರ ಹೆಸರು ಅನೇಕರೊಂದಿಗೆ ತಳುಕು ಹಾಕಿಕೊಂಡಿದೆ. ಈ ಹಿಂದೆ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಜೊತೆ ಕೂಡ ತಳುಕು ಹಾಕಿಕೊಂಡಿತ್ತು. ಆ ನಂತರ ನಟಿ ಇದು ಸುಳ್ಳು ಸುದ್ದಿ. ನಾವಿಬ್ಬರೂ ಫ್ರೆಂಡ್ಸ್ ಎಂದು ಪ್ರತಿಕ್ರಿಯೆ ನೀಡಿದರು. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಮದುವೆ ವಿಚಾರಕ್ಕೆ ನಟಿ ಏನು ಹೇಳ್ತಾರೋ? ಕಾಯಬೇಕಿದೆ. ಇನ್ನೂ `ಬೇಬಿ ಜಾನ್’ ಸಿನಿಮಾ ಮೂಲಕ ನಟಿ ಕೀರ್ತಿ ಸುರೇಶ್ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.

 

ಕನಕದಾಸರು ವಿಶ್ವ ಮಾನವ, ಸಮಾಜ ಸುಧಾರಕರು: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಯಾದಗಿರಿ: ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಬಾಲಕರು.! ಓರ್ವನ ಶವ ಪತ್ತೆ – ಇನ್ನೋರ್ವನಿಗಾಗಿ ಶೋಧ

0

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ದನ ಮೇಯಿಸಲು ಹೋಗಿ ಇಬ್ಬರು ಬಾಲಕರು ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಓರ್ವನ ಶವ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮೃತ ಬಾಲಕನನ್ನು ಶಂಕರ ಮೇಟಿ (10) ಎಂದು ಗುರುತಿಸಲಾಗಿದ್ದು, ಶ್ರೀಯಣ್ಣ ಚಂದ್ರಕಾಂತ್‌ಗಾಗಿ (8) ಹುಡುಕಾಟ ನಡೆಸುತ್ತಿದ್ದಾರೆ.

ಭಾನುವಾರ ಸ್ಕೂಲ್‌ಗೆ ರಜೆಯಿದ್ದ ಹಿನ್ನೆಲೆ ಇಬ್ಬರು ಬಾಲಕರು ದನ ಮೇಯಿಸಲು ತೆರಳಿದ್ದರು. ಆ ವೇಳೆ ಕಾಲು ಜಾರಿ ಹಿರೇಹಳ್ಳಕ್ಕೆ ಬಿದ್ದಿದ್ದಾರೆ. ನಿನ್ನೆ (ನ.18) ತಡರಾತ್ರಿಯಿಂದ ಸ್ಥಳದಲ್ಲಿ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಬಿಡುಬಿಟ್ಟಿದೆ. ಸದ್ಯ ಶಂಕರನ ಶವ ಪತ್ತೆಯಾಗಿದ್ದು, ಶ್ರೀಯಣ್ಣಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಾಸಕರ ಖರೀದಿಗೆ 50 ಕೋಟಿ ಅಲ್ಲ 100 ಕೋಟಿ ಆಫರ್: ಸ್ಪೋಟಕ ಹೇಳಿಕೆ ಕೊಟ್ಟ ಮಂಡ್ಯ ಶಾಸಕ!

0

ಮಂಡ್ಯ: ಬಿಜೆಪಿಯಿಂದ 50 ಕೋಟಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,  ನಮ್ಮತ್ರ ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ಮಾಧ್ಯಮಗಳ ಮುಂದೆ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.  ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ.

ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಣ್ಣರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದರು.

ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಬಿಜೆಪಿಯವರಿಗೆ ಹಿಂದಿನ ಸರ್ಕಾರದಲ್ಲಿ ಮಾಡಿದ್ದ ಹಗರಣಗಳ ಕಂಟಕ ಸುತ್ತಿಕೊಂಡಿದೆ. ಅದರಿಂದ ಬಚಾವಾಗಲು, ಆ ಅಕ್ರಮದ ದುಡ್ಡನ್ನೇ ಮುಂದಿಟ್ಟುಕೊಂಡು ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಬೆಂಬಲ ಇದೆ. ಇದೀಗ ಜೆಡಿಎಸ್​​ ಕೂಡ ಜತೆಗೂಡಿದೆ ಎಂದು ಗಣಿಗ ಟೀಕಿಸಿದ್ದಾರೆ.

error: Content is protected !!