Home Blog Page 211

ವಿರಾಟ್ ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ಕಿಂಗ್ ಕೊಹ್ಲಿ!

0

ಭಾರತ–ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ಮುನ್ನ, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕೊಹ್ಲಿ ಬರುವ ಸುದ್ದಿ ತಿಳಿದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದರು. ಹೊರಬಂದ ಕ್ಷಣದಲ್ಲೇ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳ ನಡುವೆ ಅಭಿಮಾನಿಗಳು ಅವರನ್ನು ಸುತ್ತುವರೆದರು. ವಿಮಾನ ನಿಲ್ದಾಣದಿಂದ ಕಾರಿನತ್ತ ಸಾಗುವ ವೇಳೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದು, ಭದ್ರತಾ ಸಿಬ್ಬಂದಿಗೆ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟವಾಯಿತು.

ಕೆಲ ಹೊತ್ತು ಅಸ್ತವ್ಯಸ್ತತೆ ಉಂಟಾದರೂ, ವಿರಾಟ್ ತಾಳ್ಮೆಯಿಂದ ನಡೆದುಕೊಂಡು ಕೆಲವು ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್ ನೀಡಿ ಬಳಿಕ ಕಾರಿನಲ್ಲಿ ಹೊರಟರು. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನನ್ನ ಆಡಳಿತ ಜನತೆಗೆ ತೃಪ್ತಿ ತಂದಿದೆ; ಮುಖ್ಯಮಂತ್ರಿ ಸಿದ್ದರಾಮಯ್ಯ

0

ಹಾವೇರಿ:- ರಾಜಕಾರಣದಲ್ಲಿ ಮುಂದುವರಿಯಲು ಜನರ ಆಶೀರ್ವಾದವೇ ಮುಖ್ಯ. ಜನರ ಆಶೀರ್ವಾದದಿಂದಲೇ ಇಲ್ಲಿಯವರೆಗೆ ಬಂದಿದ್ದೇನೆ. ನನ್ನ ಆಡಳಿತ ಜನತೆಗೆ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಹಾವೇರಿಯ ಕೊಳ್ಳಿ ಪಾಲಿಟೆಕ್ನಿಕ್ ಆವರಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು ₹500 ಕೋಟಿ ವೆಚ್ಚವಾಗಿದೆ. ಈ ಕಾಲೇಜಿನ ಘೋಷಣೆಯನ್ನೂ ನಾನೇ ಮಾಡಿದ್ದೆ, ಉದ್ಘಾಟನೆಯನ್ನೂ ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ಆರಂಭವಾಗಿದೆ ಎಂದು ತಿಳಿಸಿದರು. ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂಬ ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಟೀಕಿಸಿದರು.

ಜಿಎಸ್‌ಟಿ ಜಾರಿಯಿಂದ ರಾಜ್ಯಕ್ಕೆ ಭಾರೀ ನಷ್ಟ:-

ಜಿಎಸ್‌ಟಿ ಜಾರಿಗೆ ತಂದ ನಂತರ ಕಳೆದ ಎಂಟು ವರ್ಷಗಳಲ್ಲಿ 24% ತೆರಿಗೆ ಸಂಗ್ರಹಿಸಿ ಈಗ ತೆರಿಗೆ ಕಡಿಮೆ ಮಾಡಿದ್ದೇವೆ ಎನ್ನಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ ₹10–12 ಸಾವಿರ ಕೋಟಿ ನಷ್ಟವಾಗುತ್ತಿದೆ. ಈ ವರ್ಷ ಮಾತ್ರವೇ ₹5–6 ಸಾವಿರ ಕೋಟಿ ನಷ್ಟವಾಗಲಿದೆ.

ನಾವು ಕೇಂದ್ರಕ್ಕೆ ₹4.5 ಲಕ್ಷ ಕೋಟಿ ತೆರಿಗೆ ಕೊಡುತ್ತೇವೆ. ಪ್ರತಿಯಾಗಿ ನಮಗೆ ₹60–70 ಸಾವಿರ ಕೋಟಿ ಮಾತ್ರ ಬರುತ್ತದೆ. ಒಂದು ರೂ ಕೊಟ್ಟರೆ 14 ಪೈಸೆ ಮಾತ್ರ ವಾಪಸ್ಸು ಸಿಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ನಾವು ಅಧಿಕಾರಕ್ಕೆ ಬಂದ ಬಳಿಕವೇ ಅದನ್ನು ಪೂರ್ಣಗೊಳಿಸಿದ್ದೇವೆ ಎಂದು ಹೇಳಿದರು.

ಬಳ್ಳಾರಿ ಪ್ರಕರಣ: ಬ್ಯಾನರ್ ಬಿಚ್ಚಿದ್ದು ಪ್ರಚೋದನೆ:-

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಬ್ಯಾನರ್ ಬಿಚ್ಚಿ ಹಾಕಿದ ಪ್ರಚೋದನೆಯೇ ಕಾರಣ. ಬಿಜೆಪಿಯವರಿಗೆ ಅಸೂಯೆ ತಡೆಯಲು ಆಗುತ್ತಿಲ್ಲ ಎಂದರು.

ಕಾನೂನು ಕೈಗೆತ್ತಿಕೊಂಡರೆ ಕ್ರಮ ಅನಿವಾರ್ಯ:-

ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣದ ಕುರಿತು ಮಾತನಾಡಿದ ಅವರು, ಪೊಲೀಸರು ಕರ್ತವ್ಯ ನಿರ್ವಹಿಸುವ ವೇಳೆ ಮಹಿಳೆಯೇ ಸ್ವಯಂ ವಿವಸ್ತ್ರಗೊಂಡು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

108 ಕೆಜಿ ವೇಟ್ ಲಿಫ್ಟಿಂಗ್‌ನಲ್ಲಿ ಜಿಲ್ಲೆಗೆ ಪ್ರಥಮ: ರಾಜ್ಯಮಟ್ಟಕ್ಕೆ ಜಗದೀಶಚಂದ್ರ ಆಯ್ಕೆ

0

ಗದಗ: ಇತ್ತೀಚೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರೋಣ ತಾಲೂಕು ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಜಗದೀಶಚಂದ್ರ ಆಲದಕಟ್ಟಿ ಅವರು 108 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಬಕಾರಿ ಇಲಾಖೆಯ ಅಬಕಾರಿ ಉಪ ಆಯುಕ್ತರು, ಅಧೀಕ್ಷಕರು ಹಾಗೂ ಉಪಾಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದವರು ಜಗದೀಶಚಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ಖರೀದಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ (ಪಿಡಿಪಿಎಸ್) ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಲ್‌ಗೆ 2150ರಂತೆ ಸರ್ಕಾರ ಜನವರಿ 4ರಿಂದ ಆದೇಶ ಹೊರಡಿಸಿದೆ. ಮೆಕ್ಕೆಜೋಳವನ್ನು ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಯಮಿತ ಇವರ ಮುಖಾಂತರ ಖರೀದಿಸಲು ತಿಳಿಸಿದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಪ್ರತಿ ಕ್ವಿಂಟಲ್‌ಗೆ 1,900ರಲ್ಲಿ ವಹಿವಾಟಾಗುತ್ತಿದ್ದು, ವ್ಯತ್ಯಾಸದ ಮೊತ್ತ ರೂ. 250ನ್ನು ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ತಲುಪಿಸುವ ಕ್ರಮ ಸಮರ್ಪಕವಾಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮೆಕ್ಕೆಜೋಳ ಉತ್ಪನ್ನವನ್ನು ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕೃಷಿ ಉತ್ಪನ್ನ ಮಾರುಕಟ್ಟೆ /ಉಪ ಮಾರುಕಟ್ಟೆಗಳಲ್ಲಿ ಯುಎಂಪಿ ವೇದಿಕೆ ಮೂಲಕ 3.86 ಲಕ್ಷ ಕ್ವಿಂಟಲ್ ಪ್ರಮಾಣದಲ್ಲಿ ಸರ್ಕಾರದ ಆದೇಶದನ್ವಯ ವಹಿವಾಟು ಮಾಡಲು ತೀರ್ಮಾನಿಸಲಾಗಿದ್ದು, ಅದರಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಈ ಯೋಜನೆಯಿಂದ ಪ್ರತಿ ಎಕರೆಗೆ 12 ಕ್ವಿಂಟಲ್‌ನತೆ, ಫ್ರುಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಬೇಕು. ಮೆಕ್ಕೆಜೋಳದ ಎಫ್.ಎ.ಕ್ಯೂ ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಿ ದೃಢೀಕರಿಸಲು ತಾಂತ್ರಿಕ ಅಧಿಕಾರಿಗಳನ್ನು ನೇಮಿಸಬೇಕು. ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಎಥೆನಾಲ್ ಉತ್ಪಾದನೆಗಾಗಿ, ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕೆಎಂಎಫ್‌ಗಳಿಗೆ ಅವಶ್ಯವಿರುವ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಸದರಿ ಯೋಜನೆಯು ಅನ್ವಯಿಸದಂತೆ ತಂತ್ರಾಂಶದಲ್ಲಿ ಇಂದೀಕರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸರ್ಕಾರದಿಂದ ಮೆಕ್ಕೆಜೋಳದ ಬೆಲೆ ವ್ಯತ್ಯಾಸ ಮೊತ್ತ ಪಾವತಿಯನ್ನು ಡಿಬಿಟಿ ಮೂಲಕ ರೈತರಿಗೆ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸದರಿ ಯೋಜನೆಯಡಿ ರೈತರ ನೋಂದಣಿ ಕಾರ್ಯವನ್ನು ಯೋಜನಾ ಅನುಷ್ಟಾನದ ಏಜೆನ್ಸಿ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯುವ ಕೇಂದ್ರಗಳಲ್ಲಿ ಮಾತ್ರ ನೋಂದಾಯಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಸದರಿ ಯೋಜನೆಯ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ, ನರಗುಂದ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಹಕಾರ ಸಂಘಗಳ ಇಲಾಖೆ ಅಧಿಕಾರಿಗಳು, ಮಾರ್ಕೆಟಿಂಗ್ ಫೆಡರೇಷನ್ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇತರರು ಹಾಜರಿದ್ದರು.

ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ರಾಜ್ಯಾದ್ಯಂತ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಸಹಕಾರ ಮಾರಾಟ ಮಂಡಳ ಮತ್ತು ಎಪಿಎಂಸಿ ಸಮಿತಿಯ ಕಾರ್ಯದರ್ಶಿಗಳು ದಿನಂಪ್ರತಿ ಆವಕವಾಗುವ ಮೆಕ್ಕೆಜೋಳದ ಉತ್ಪನ್ನದ ಪ್ರಮಾಣ, ವಹಿವಾಟಾದ ಪ್ರಮಾಣ ಮತ್ತು ರೈತರ ಸಂಖ್ಯೆ ಇತ್ಯಾದಿ ವಿವರಗಳನ್ನು ಅಂದಿನ ದಿನವೇ ಯುಎಂಪಿ ವೇದಿಕೆಯಲ್ಲಿ ತಪ್ಪದೇ ಇಂದೀಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ಪಾಲಿನ ಹಣ ಬಿಡುಗಡೆ ಮಾಡಿಸಿ: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೈಪಾಸ್ ಮೂಲಕ ಸಂಚರಿಸುವ ವಿಶೇಷ ರೈಲುಗಳು ಗದಗ ಮೇನ್ ಜಂಕ್ಷನ್ ಮೂಲಕ ಸಂಚಾರ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪುರ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ನೂತನ ರೈಲು ಮಾರ್ಗದ ಗದಗ-ಯಲವಗಿ, ಗದಗ ಬಿಂಕದಕಟ್ಟಿ, ಹರ್ತಿ-ಮಾಗಡಿ-ಶಿರಹಟ್ಟಿ ಮಾರ್ಗದ ಮೂಲಕ ಲಕ್ಷ್ಮೇಶ್ವರ ಮೂಲಕ ಯಲವಗಿ ತಲುಪುವ ಈ ಮಾರ್ಗ 58 ಕಿಲೋಮೀಟರ್ ದೂರದಲ್ಲಿದೆ. ಈ ಮಾರ್ಗದಲ್ಲಿ ಭೂಸ್ವಾಧೀನದ ಜಮೀನುಗಳಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುತ್ತಿಲ್ಲ. ಭೂಮಿ ಸ್ವಾಧೀನಪಡಿಸಲು ಉಳಿದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲು ವಿನಂತಿಸಿಕೊಂಡರು.

ಈ ಮಾರ್ಗ ಪೂರ್ಣ ಆದರೆ ಶಿರಹಟ್ಟಿ, ಲಕ್ಷೇಶ್ವರ ಭಾಗದ ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲ ಆಗಲಿದೆ. ಮುಂಬರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮುಂಗಡ ಪತ್ರದಲ್ಲಿ ಈ ಯೋಜನೆಗಳ ಸಲುವಾಗಿ ಹಣವನ್ನು ಮೀಸಲು ಇಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ: ಅರುಣ ಕಟ್ಟಿಮನಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯನ ಜೀವ ಅತ್ಯಮೂಲ್ಯವಾಗಿದ್ದು, ವಾಹನ ಚಲಾಯಿಸುವ ಪ್ರತಿಯೊಬ್ಬರೂ ತಪ್ಪದೇ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಅಪಘಾತ, ಸಾವು-ನೋವು ತಡೆಯುವ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಅರುಣ ಕಟ್ಟಿಮನಿ ಹೇಳಿದರು.

ಅವರು ಬುಧವಾರ ಲಕ್ಷ್ಮೇಶ್ವರದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಹೆ ಕಾರ್ಯಕ್ರಮದಲ್ಲಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಷ್ಕಾಳಜಿ ಮತ್ತು ಬೇಜಾವಾಬ್ದಾರಿಯಿಂದ ಅಪಘಾತಗಳು ಹೆಚ್ಚುತ್ತಿವೆ. ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಿ, ಏಕಚಿತ್ತದಿಂದ ವಾಹನ ಚಲಾಯಿಸಬೇಕು. ಹೆಲ್ಮೆಟ್, ಸೀಟ್‌ಬೆಲ್ಟ್ ತಪ್ಪದೇ ಧರಿಸಬೇಕು. ರಸ್ತೆ ನಿಯಮ, ಸಂಜ್ಞೆ/ಸನ್ನೆಗಳನ್ನು ಪಾಲಿಸಬೇಕು. ವಾಹನ ಚಲಾಯಿಸುವಾಗ ಮದ್ಯಪಾನ ಮಾಡಲೇಬಾರದು. ಫೋನ್, ಸೌಂಡ್ ಸಿಸ್ಟಂ ಬಳಸಬೇಡಿ, ವಾಹನದ ಹಿಂದುಗಡೆ ರೇಡಿಯಂ ಸ್ಟಿಕ್ಕರ್ ಹಚ್ಚಿ. ಅಲಂಕಾರಿಕ ವಸ್ತುಗಳನ್ನು ಬಳಸಬೇಡಿ. ಪರಿಪೂರ್ಣ ದಾಖಲಾತಿಗಳು ಇರಲಿ. ಓವರ್ ಸ್ಪೀಡ್, ಓವರ್ ಕಾನ್ಫಿಡೆನ್ಸ್ ಅಪಘಾತಕ್ಕೆ ಪ್ರಮುಖ ಕಾರಣವಾಗಿದ್ದು, ವಾಹನ ಸವಾರರು ಇದನ್ನು ಪಾಲಿಸಬೇಕು.

ರಸ್ತೆ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್, ಶಿಕ್ಷಣ ಇತರೇ ಇಲಾಖೆಗಳ ಸಹಯೋಗದಲ್ಲಿ ಈ ತಿಂಗಳು ಶಾಲಾ-ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ಮತ್ತು ಸ್ವಯಂ ಪಾಲನೆ ಮಾಡಬೇಕು ಎಂದರು.

ಈ ವೇಳೆ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಗುರುರಾಜ ಪಾಟೀಲ ಕುಲಕರ್ಣಿ, ಹಿರಿಯ ಪತ್ರಕರ್ತರಾದ ರಮೇಶ ನಾಡಗೇರ, ದಿಗಂಬರ ಪೂಜಾರ, ರೈತರು, ವಾಹನ ಚಾಲಕರು, ಸಿಬ್ಬಂದಿ ಇದ್ದರು.

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮೂವರು ಕಾರ್ಮಿಕರು ಸಾವು, ಐವರು ಗಂಭೀರ!

0

ಬೆಳಗಾವಿ:- ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜರುಗಿದೆ.

ಘಟನೆಯಲ್ಲಿ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಎಂದು ಗುರುತಿಸಲಾಗಿದೆ.

ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್‌ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಐವರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರ್ಖಾನೆಯ ನಂಬರ್ 1 ಕಂಪಾರ್ಟಮೆಂಟ್ ನಲ್ಲಿ ವಾಲ್ ರಿಪೇರಿ ಮಾಡೋ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಸದ್ಯ ಆಸ್ಪತ್ರೆಗೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್, ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಮಂಡ್ಯ| ಕರ್ತವ್ಯನಿರತ ನಿರತ ಪೊಲೀಸ್ ಪೇದೆ ನೇಣಿಗೆ ಶರಣು!

0

ಮಂಡ್ಯ: ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ರಮೇಶ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ನಗರದ ಪೊಲೀಸ್ ಠಾಣೆಯ ಹಿಂದಿರುವ ವಿಶ್ರಾಂತಿ ಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ಬೆಳಕಿಗೆ ಬಂದಿದೆ. ಮತ್ತೊಬ್ಬ ಪೊಲೀಸ್ ಪೇದೆ ವಿಶ್ರಾಂತಿ ಗೃಹಕ್ಕೆ ತೆರಳಿದಾಗ ಘಟನೆ ಪತ್ತೆಯಾಗಿದೆ.

ಈ ಸಂಬಂಧ ಮೃತರ ಪತ್ನಿ ಪುಷ್ಪಲತಾ ಅವರು ಮದ್ದೂರು ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೇದೆ ಮಹೇಶ್ ಎಂಬುವರು ನನ್ನ ಪತಿ ರಮೇಶ್ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಹಲವಾರು ಬಾರಿ ಗಲಾಟೆ ನಡೆದಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಮೃತ ರಮೇಶ್ ಹಾಗೂ ದೂರು ದಾಖಲಾದ ಮಹೇಶ್ ಇಬ್ಬರೂ ಮದ್ದೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪೊಲೀಸ್ ವಸತಿಗೃಹದಲ್ಲೇ ವಾಸವಾಗಿದ್ದರು ಎನ್ನಲಾಗಿದೆ. ಘಟನೆ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ನವೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಚಿಕ್ಕಬಳ್ಳಾಪುರಕ್ಕೆ ರವಾನಿಸಲಾಗಿದೆ.

Breaking News; ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಸೂಸೈಡ್!

0

ಬೆಂಗಳೂರು:- ಬೆಂಗಳೂರಿನ ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ನಿಕ್ಷೇಪ್ (26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾನಿಯಾ ಚಾಂದೋಕ್ ಜೊತೆ ಹಸೆಮಣೆ ಏರಲು ಸಜ್ಜಾದ ಅರ್ಜುನ್ ತೆಂಡೂಲ್ಕರ್!

0

ಮುಂಬೈ: ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶೀಘ್ರದಲ್ಲೇ ತಮ್ಮ ದೀರ್ಘಕಾಲದ ಸಂಗಾತಿ ಸಾನಿಯಾ ಚಾಂದೋಕ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಜೋಡಿ ಮಾರ್ಚ್ 5, 2026 ರಲ್ಲಿ ವಿವಾಹವನ್ನು ಮಾಡಲಿದ್ದಾರೆ. ಮಾರ್ಚ್ 3 ರಿಂದ ವಿವಾಹಪೂರ್ವ ಸಮಾರಂಭಗಳು ಪ್ರಾರಂಭವಾಗಲಿವೆ.

ಅರ್ಜುನ್ ಮತ್ತು ಸಾನಿಯಾ ನಿಶ್ಚಿತಾರ್ಥ ಹಿಂದಿನ ಆಗಸ್ಟ್ನಲ್ಲಿ ಬಹಳ ಖಾಸಗಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು ಮತ್ತು ಕೆಲ ಆಪ್ತರೇ ಪಾಲ್ಗೊಂಡಿದ್ದರು. ನಂತರ ಸಚಿನ್ ತೆಂಡೂಲ್ಕರ್ ನಿಶ್ಚಿತಾರ್ಥದ ವಿಚಾರವನ್ನು ಸಾರ್ವಜನಿಕಗೊಳಿಸಿದ್ದರು.

ಸಾನಿಯಾ ಮುಂಬೈ ಮೂಲದ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳಾಗಿದ್ದು, ತೆಂಡೂಲ್ಕರ್ ಕುಟುಂಬದೊಂದಿಗೆ ಹತ್ತಿರ ಸಂಬಂಧ ಹೊಂದಿದ್ದಾರೆ. ವಿವಾಹ ಆಚರಣೆಗಳು ಮುಂಬೈನಲ್ಲಿ ಖಾಸಗಿ ವಾತಾವರಣದಲ್ಲಿ ನಡೆಯಲಿದ್ದು, ಕುಟುಂಬ, ಆಪ್ತ ಸ್ನೇಹಿತರು ಹಾಗೂ ಕ್ರಿಕೆಟ್ ಜಗತ್ತಿನ ಆಯ್ದ ಕೆಲವು ವ್ಯಕ್ತಿಗಳು ಭಾಗವಹಿಸಲಿದ್ದಾರೆ.

ಇತ್ತೀಚೆಗೆ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ನಿಂದ ಲಕ್ನೋ ಸೂಪರ್ ಜೈಂಟ್ಸ್ಗೆ ವರ್ಗಾಯಿಸಲಾದ ಅರ್ಜುನ್, ವೃತ್ತಿಜೀವನದ ಜೊತೆಗೆ ವೈಯಕ್ತಿಕ ಜೀವನದಲ್ಲಿಯೂ ಎರಡನೇ ಇನಿಂಗ್ಸ್ ಆರಂಭಿಸಲಿದ್ದಾರೆ. ಪ್ರಸ್ತುತ, ಗೋವಾ ತಂಡದ ಪರ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರು ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಬ್ಯಾಟಿಂಗ್ನಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ. 2026 ವರ್ಷ ಅರ್ಜುನ್ಗೆ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನ ಎರಡರಲ್ಲೂ ಸ್ಮರಣೀಯವಾಗಲಿರುವುದು ನಿರೀಕ್ಷಿಸಲಾಗಿದೆ.

error: Content is protected !!