Home Blog Page 2169

ಇಪಿಎಫ್‌ಒ ಚಂದಾದಾರರಿಗೆ ದೀಪಾವಳಿ ಬಂಫರ್ ಗಿಫ್ಟ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ
ಉದ್ಯೋಗಿಗಳ ಭವಿ? ನಿಧಿ ಸಂಘಟನೆ (ಇಪಿಎಫ್‌ಒ) ತನ್ನ ಚಂದಾದಾರರಿಗೆ ದೀಪಾವಳಿ ಬಂಫರ್ ಗಿಫ್ಟ್ ಎನ್ನುವಂತೆ, ಶೇ.8.5ರ ಬಡ್ಡಿಯ ಮೊದಲ ಕಂತು ಜಮೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ವ?ಕ್ಕೆ ಶೇ.8.5ಬಡ್ಡಿ ಯನ್ನು ತನ್ನ ಚಂದಾದಾರರಿಗೆ ಪಾವತಿಸುವುದಾಗಿ ಇಪಿಎಫ್ ಒ ಕೇಂದ್ರೀಯ ಮಂಡಳಿ ಸೆಪ್ಟೆಂಬರ್ ನಲ್ಲಿ ತಿಳಿಸಿದೆ.
ದೀಪಾವಳಿವೇಳೆಗೆ ಸರ್ಕಾರ ವಿಧಿಸಿರುವಂತ ಶೇ.8.5ರ ಬಡ್ಡಿಯನ್ನು ವರ್ಗಾಯಿಸಬಹುದು, ಉಳಿದ ಶೇ.0.35ರ? ಹಣವನ್ನು ಡಿಸೆಂಬರ್ ವೇಳೆಗೆ ಜಮಾ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್ ನಲ್ಲಿ ನಿವೃತ್ತಿ ನಿಧಿ ಸಂಸ್ಥೆಯ ಗಳಿಕೆಯು ತೀವ್ರವಾಗಿ ಹೊಡೆತ ಉಂಟಾಗಿತ್ತು.
ಇಪಿಎಫ್ ಒ ಆಡಳಿತ ಮಂಡಳಿ 2018-19ನೇ ಸಾಲಿಗೆ ಶೇ.8.65ಬಡ್ಡಿ ಯನ್ನು ನಿಗದಿಪಡಿಸಿತ್ತು. ಈ ಹಿಂದೆ 2016-17 ನೇ ಸಾಲಿಗೆ ಶೇ.8.65ಮತ್ತು 2017-18ರಲ್ಲಿ ಶೇ.8.55ರ? ಬಡ್ಡಿ ದರವನ್ನು ಮಂಡಳಿ ನೀಡಿತ್ತು. 2015-16ರಲ್ಲಿ ಬಡ್ಡಿ ದರ ಶೇ.8.8ಕ್ಕೆ ಏರಿಕೆಯಾಗಿತ್ತು. 2013-14,  2014-15ರಲ್ಲಿ ಶೇ.8.74ಬಡ್ಡಿ ದರ ನೀಡಿತ್ತು. ಏಪ್ರಿಲ್ ನಿಂದ ಆಗಸ್ಟ್ ವರೆಗೆ ಇಪಿಎಫ್ ಒ94.41  ಲಕ್ಷ ಕ್ಲೇಮುಗಳನ್ನು ಇತ್ಯರ್ಥಪಡಿಸಿದ್ದು, ಸುಮಾರು ? 35445 ಕೋಟಿಯನ್ನು ತನ್ನ ಸದಸ್ಯರಿಗೆ ನೀಡಿದೆ.
ಈ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಸದಸ್ಯರಿಗೆ ಹಣದ ಅವಶ್ಯಕತೆಗಳನ್ನು ಪೂರೈಸಲು ನೆರವಾಗಲು, ತ್ವರಿತವಾಗಿ ಮುಂಗಡಗಳನ್ನು ಮತ್ತು ಅನಾರೋಗ್ಯಸಂಬಂಧಿತ ಕ್ಲೇಮುಗಳನ್ನು ಹೊಂದಿಸಲು ಪ್ರಯತ್ನಿಸುತ್ತದೆ. ಈ ಎರಡು ವರ್ಗಗಳ ಮುಂಗಡಗಳಿಗೆ ಆಟೊ ಮೋಡ್ ಅನ್ನು ಪರಿಚಯಿಸಿದೆ. ಸ್ವಯಂ ಪರಿಹಾರವು ಕ್ಲೇಮ್ ಸೆಟಲ್ ಮೆಂಟ್ ಆವರ್ತವನ್ನು ಕೇವಲ 3 ದಿನಗಳವರೆಗೆ ಇಳಿಸಿತು,20ದಿನಗಳೊಳಗೆ ಕ್ಲೇಮುಗಳನ್ನು ಇತ್ಯರ್ಥಪಡಿಸಬೇಕಾದ ಕಾನೂನುಬದ್ಧ ಅವಶ್ಯಕತೆಗೆ ವಿರುದ್ಧವಾಗಿ ಈ ಎರಡು ವಿಭಾಗಗಳಲ್ಲಿ ಹೆಚ್ಚಿನ ಕ್ಲೇಮುಗಳಿಗೆ ಕೇವಲ 3 ದಿನಗಳಿಗೆ ಮಾತ್ರ ಸೀಮಿತವಾಯಿತು.

ಶಿರಹಟ್ಟಿ ತಾಲೂಕಿನಲ್ಲಿ ದೊರೆಯುತ್ತಿಲ್ಲ ಮಾಸಾಶನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ
ಸತತ ಬರಗಾಲ, ಅತಿವೃಷ್ಟಿ ಹಾಗೂ ಕೊವಿಡ್-19 ನಿಂದ ತತ್ತರಿಸಿರುವಂತಹ ಬಡತನ ರೇಖೆಗಿಂತ ಕೆಳಗಿರುವಂತಹ ಜನತೆಗೆ ಸರಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ನೀಡುತ್ತಿದೆ. ಇತ್ತೀಚೆಗೆ ಜಿಲ್ಲಾಢಳಿತ ಫಲಾನುಭವಿಗಳ ಮನೆಗಳ ಬಾಗಿಲಿಗೆ ಮಂಜೂರಾತಿ ಪತ್ರವನ್ನು ನೀಡುತ್ತಿರುವುದು ಶ್ಲಾಘನೀಯ ಕಾರ‍್ಯ. ಆದರೆ ಶಿರಹಟ್ಟಿ ತಾಲೂಕಿನಲ್ಲಿ ಮಾತ್ರ ವಿವಿಧ ಮಾಸಾಶನಗಳ 562 ಅರ್ಜಿ ಇನ್ನೂ ಸಸ್ಪೆಂಡ್‌ನಲ್ಲಿಯೇ ಇವೆ. ಇವರ‍್ಯಾರಿಗೂ ಮಾಸಾಶನ ದೊರೆಯುತ್ತಿಲ್ಲ.
562ಅರ್ಜಿ ಸಸ್ಪೆಂಡ್…!
ಕಂದಾಯ ಇಲಾಖೆಯ ಅಂಕಿಅಂಶದ ಪ್ರಕಾರ ಇಂದಿರಾಗಾಂಧಿ ಓಎಪಿ-1ರಲ್ಲಿ 32, ಓಎಪಿ-2ರಲ್ಲಿ 48, ಓಎಪಿ-3ರಲ್ಲಿ 1, ಸಂಧ್ಯಾಸುರಕ್ಷಾ ಯೋಜನೆಯಡಿ 200, ವಿಧವಾ ವೇತನ 165, ಅಂಗವಿಕಲ ಮಾಸಾಶನ ಪಿಎಚ್‌ಪಿ-1 66, ಪಿಎಚ್‌ಪಿ-37, ಮನಸ್ವಿನಿ 13 ಹೀಗೆ ಶಿರಹಟ್ಟಿ ತಾಲೂಕಿನಾದ್ಯಂತ ಒಟ್ಟು 562 ಅರ್ಜಿಗಳು ವಿವಿಧ ಕಾರಣಗಳಿಂದ ಸಸ್ಪೆಂಡ್‌ನಲ್ಲಿದ್ದು, ಇವರಲ್ಲಿ ಅರ್ಜಿ ಹಾಕಿದವರು ತಮಗೆ ಮಾಸಾಶನ ಬರದೇ ಇರುವುದರಿಂದ ಕಚೇರಿಗೆ ಅಲೆದಾಡುವುದು ತಪ್ಪುತ್ತಿಲ್ಲ.

ತಾಂತ್ರಿಕ ಕಾರಣಗಳಿಂದ ಸಾಮಾಜಿಕ ಭದ್ರತೆ ಯೋಜನೆಯಡಿ ಅರ್ಜಿಗಳು ಸಸ್ಪೆಂಡ್‌ನಲ್ಲಿದ್ದು, ಇವುಗಳನ್ನು ಸರಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಸರಕಾರದ ಸೌಲಭ್ಯ ತಲುಪಿಸುವುದಕ್ಕೆ ಕ್ರಮ ಕೈಕೊಳ್ಳಲಾಗುವುದು.
ಯಲ್ಲಪ್ಪ ಗೋಣೆಣ್ಣನವರ, ತಹಸೀಲ್ದಾರ, ಶಿರಹಟ್ಟಿ.
 

ಸಿಬ್ಬಂದಿಗಳ ಸಮನ್ವಯತೆ ಕೊರತೆ :
ಶಿರಹಟ್ಟಿಯ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿಯ ಸಿಬ್ಬಂದಿ ಹಾಗೂ ಕಂದಾಯ ನಿರೀಕ್ಷಕ ಕಚೇರಿಯಲ್ಲಿಯ ಸಿಬ್ಬಂದಿ, ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು ಸರಿಯಾದ ಸಮಯಕ್ಕೆ ಅರ್ಜಿಗಳನ್ನು ಪರಿಶೀಲಿಸಿ ಕಳುಹಿಸುವಲ್ಲಿ ವಿಳಂಬ ಸೇರಿದಂತೆ ಸಿಬ್ಬಂದಿಗಳ ಮಧ್ಯೆ ಸಮನ್ವಯದ ಕೊರತೆ ಇರುವುದರಿಂದ ಸರಕಾರ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲು ಮುಂದಿದ್ದರೂ ಸಹ ಇಲ್ಲಿಯ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಅದೆಷ್ಟೋ ಅರ್ಹ ಫಲಾನುಭವಿಗಳು ಸರಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ತಹಸೀಲ್ದಾರ ಕ್ರಮ ವಹಿಸುವುದು ಅವಶ್ಯ :
ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಮಾಸಾಶನಗಳನ್ನು ಪಡೆಯುತ್ತಿರುವಂತಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಹಣ ಸಂದಾಯವಾಗದೇ ಇರುವುದಕ್ಕೆ ಹಲವಾರು ತಾಂತ್ರಿಕ ಕಾರಣಗಳನ್ನು ಕಚೇರಿಗಳ ಸಿಬ್ಬಂದಿಗಳು ಹೇಳುತ್ತಿದ್ದು, ಇದಕ್ಕೆ ತಹಶೀಲ್ದಾರ ಶಾಶ್ವತ ಪರಿಹಾರವನ್ನು ಕಲ್ಪಿಸಿ ಸರಕಾರದ ಸೌಲಭ್ಯದಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದಂತಹ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವುದು ಅವಶ್ಯವಿದೆ.

ಶಿಕ್ಷಣದ ಜೊತೆಗೆ ಜೀವನ ಕೌಶಲ್ಯ ಅಳವಡಿಸಿಕೊಳ್ಳಿ:  ಯತೀಶ್ ಎನ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಪ್ರತಿಯೊಬ್ಬರ ಜೀವನದಲ್ಲೂ ಮುಂದೆ ಒಂದು ಗುರಿ, ಹಿಂದೆ ಒಬ್ಬ ಗುರು ಇರಬೇಕು. ಅಂದಾಗ ಯಶಸ್ಸು ಸಾಧಿಸಬಹುದು. ಶಿಕ್ಷಣದ ಜೊತೆಗೆ ಜೀವನ ಕೌಶಲ್ಯಗಳನ್ನು ಬದುಕಿನುದ್ದಕ್ಕೂ ಅಳವಡಿಕೊಳ್ಳಬೇಕು. ಅಲ್ಲದೇ, ತರಬೇತಿಯ ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್ಪಿ ಯತೀಶ್ ಎನ್ ಹೇಳಿದರು.
ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಛೇರಿ ಗದಗ ಇವರ ಸಹಯೋಗದಲ್ಲಿ ಗದಗ-ಬೆಟಗೇರಿಯ ಅನನ್ಯ ನಗರ ಹಗೂ ಗ್ರಾಮೀಣಾಭಿವೃದ್ಧಿ ವಿವಿದೋದ್ದೇಶಗಳ ಸಂಸ್ಥೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಮಾತನಾಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಮಾತನಾಡಿ, ಉತ್ತಮ ತರಬೇತಿ ಪಡೆದುಕೊಳ್ಳುವ ಮೂಲಕ ಸ್ವಯಂ ಉದ್ಯೋಗ ಮಾಡಬೇಕು ಎಂದ ಅವರು ಕೌಶಲ್ಯಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಿಡಾಕ್ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಅಂಗಡಿ ಮಾತನಾಡಿ, ನೂತನ ಉದ್ಯಮಗಳ ಆಯ್ಕೆ ಮಾಡಿಕೊಳ್ಳಬೇಕು. ಉದ್ಯಮಿಗಳಾಗಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು ಎಂದರು.
ಉದ್ಯಮಿದಾರ ರಮೇಶ ಹತ್ತಿಕಾಳ, ಜಿಲ್ಲಾ ಖಾದಿ ಗ್ರಾಮೋದ್ಯೊಗ ಅಧಿಕಾರಿ ಎಸ್.ಎಮ್. ಹಂಚಿನಮನಿ ಸೇರಿದಂತೆ ಇತರರು ಇದ್ದರು. ಮಂಜುನಾಥ ಮುಳಗುಂದ ಕಾರ್ಯಕ್ರಮ ವಂದಿಸಿದರು. ದ ವಂದನಾರ್ಪಣೆಯನ್ನು ಕು. ವಿಜಯಲಕ್ಷ್ಮಿ ನೆಲ್ಲೂರ ವಂದಿಸಿದರು.

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ಎಲ್ಲ ಪ್ರಮುಖ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಗೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ, ಗದಗ ಜಿಲ್ಲೆ ರಚನೆಯಾಗಿ ೨೦ ವರ್ಷಗಳಾದರೂ ಇನ್ನೂ ಅನೇಕ ರಸ್ತೆಗಳನ್ನು ಅಭಿವೃದ್ದಿ ಮಾಡುವಲ್ಲಿ ಅನೇಕ ಸರಕಾರಗಳು ಮುಂದಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು, ಅಧಿಕಾರಿಗಳು ರಸ್ತೆಗಳ ಬಗ್ಗೆ ಯಾರೊಬ್ಬರೂ ಮಾತಾಡುತ್ತಿಲ್ಲ. ಈ ವಿಷಯವಾಗಿ ಕರ್ನಾಟಕ ರಕ್ಷಣಾ ವೇದಿಕೆ ಅನೇಕ ಬಾರಿ ಆಯಾ ತಾಲೂಕಿನಲ್ಲಿ ಮತ್ತು ಗದಗ ಜಿಲ್ಲೆಯಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಶಾಶ್ವತ ರಸ್ತೆ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಅನೇಕ ಬಾರಿ ರಾಜ್ಯ ಸರ್ಕಾರಕ್ಕೂ ಕೂಡಾ ಮನವಿ ಮಾಡಿಕೊಂಡು ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯ ಗದಗ- ಗಜೇಂದ್ರಗಡ, ರೋಣ-ಹೊಳೆಆಲೂರ, ಲಕ್ಷ್ಮೇಶ್ವರ-ಗದಗ, ನರಗುಂದ-ಗದಗ, ಮುಂಡರಗಿ-ಹೆಬ್ಬಾಳ, ಶಿರಹಟ್ಟಿ-ಗದಗ ರಸ್ತೆಗಳು ಸೇರಿದಂತೆ ಇನ್ನೂ ಅನೇಕ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಈ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಸರಕಾರ ವಿಶೇಷ ಪ್ಯಾಕೇಜ್ ನೀಡಿ ರಸ್ತೆ ದುರಸ್ತಿಗೆ ಆಗ್ರಹಿಸಬೇಕು ಎಂದು ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆಗಳು ಎಷ್ಟೊಂದು ಹದಗೆಟ್ಟಿವೆ ಎಂದರು ಕೆಲವೊಂದು ಕಡೆ ಅಪಘಾತಕ್ಕೀಡಾಗಿ ಚಿಕ್ಕ ವಾಹನಗಳು ಉರುಳಿ ಬಿದ್ದವೆ. ಬೈಕ ಸವಾರರು ಬಿದ್ದು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬಸ್‌ಗಳ ಸಂಚಾರಕ್ಕೆ ಬಸ್ ಮತ್ತು ಇತರೆ ವಾಹನ ಚಾಲಕರು ಜೀವವನ್ನು ಕೈಯಲ್ಲಿ ಇಟ್ಟುಕೊಂಡು ವಾಹನ ಚಲಾವಣೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಮುಳಗುಂದ ನಾಕಾದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿ ವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ಶರಣಪ್ಪ ಪುರ್ತಗೇರಿ, ನಿಂಗನಗೌಡ ಮಾಲಿಪಾಟೀಲ, ನೀಲನಗೌಡ ಪಾಟೀಲ, ಉಮೇಶ ಮೇಟಿ, ರಜಾಕ ಢಾಲಾಯತ, ಬಸವರಾಜ ಮೇಟಿ, ಬಸವರಾಜ ಹೊಗೆಸೊಪ್ಪಿನ, ನಿಂಗಪ್ಪ ಹೊನ್ನಾಪೂರ, ವಿರುಪಾಕ್ಷಿ ಹಿತ್ತಲಮನಿ, ಹನಮಂತ ಪೂಜಾರ, ಆಶು ಜೂಲಗುಡ್ಡ ಇತರರು ಉಪಸ್ಥಿತರಿದ್ದರು.

ಈಶಾನ್ಯ ಶಿಕ್ಷಕರ ವಿಪ ಕ್ಷೇತ್ರಕ್ಕೆ ಮೂವರ ನಡುವೆ ಪೈಪೋಟಿ

0

ಬಿಯಸ್ಕೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಅ. ೮ರಂದು ನಾಮಪತ್ರ ಸಲ್ಲಿಕೆ ದಿನ ಅಂತ್ಯವಾಗಿದ್ದು, ಒಟ್ಟು ೮ ಜನರಿಂದ ನಾಮಪತ್ರ ಸಲ್ಲಿಕೆಯಾಗಿವೆ. ಚುನಾವಣಾ ಕಣ ರಂಗೇರಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಲಕ್ಷಣಗಳಿವೆ.
ಕಳೆದ ಬಾರಿ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ ಮತ್ತೊಮ್ಮೆ ಅದೃಷ್ಟ ಪರೀಕ್ಷಗೆ ಇಳಿದಿದ್ದಾರೆ. ಈ ಹಿಂದೆ ಸತತ ಎರಡು ಬಾರಿ ಗೆಲುವು ಸಾಧಿಸಿದ್ದ ಶಶೀಲ್ ನಮೋಶಿ 2014 ರಲ್ಲಿ ಹ್ಯಾಟ್ರಿಕ್ ಗೆಲುವು ಪಡೆಯದೆ ಸೋತಿದ್ದರು. ಇದೀಗ ಮತ್ತೆ ಗೆಲುವಿನ ಹಳಿಗೆ ಮರಳಲು ಸ್ಪರ್ಧಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅವರಿಗೆ ಟಿಕೆಟ್ ನೀಡಿದ್ದು, ರಾಜ್ಯದಲ್ಲಿ ತನ್ನದೇ ಪಕ್ಷ ಅಧಿಕಾರದಲ್ಲಿರುವ ಕಾರಣ ಗೆಲುವಿನ ವಿಶ್ವಾಸದಲ್ಲಿ ಆ ಪಕ್ಷದ ಮುಖಂಡರು ಹಾಗೂ ಅಭ್ಯರ್ಥಿ ನಮೋಶಿ ಇದ್ದಾರೆ. ಇನ್ನು ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ ನಾಮಪತ್ರ ಸಲ್ಲಿಸಿದ್ದು, ದೇವೇಗೌಡರು ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ.
ಆಡಳಿತ ಪಕ್ಷದ ಪರ ಒಲವು?
ಕಲ್ಯಾಣ ಕರ್ನಾಟಕ ಭಾಗದ ಒಟ್ಟು ೬ ಜಿಲ್ಲೆಗಳ ಶಿಕ್ಷಕ ಮತದಾರರು ಈ ಕ್ಷೇತ್ರ ವ್ಯಾಪ್ತಿಗೆ ಬರಲಿದ್ದಾರೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಸಾಮಾನ್ಯ ಮತದಾರರ ಯೋಚನೆಯಂತೆ ಶಿಕ್ಷಕರ ಮತದಾರರ ಯೋಚನೆಯ ದಿಕ್ಕೆ ಬದಲಿರುತ್ತದೆ. ರಾಜ್ಯ ಸರ್ಕಾರ ಯಾವ ಪಕ್ಷದ್ದು ಇರುತ್ತದೆಯೋ ಅದೇ ಪಕ್ಷಕ್ಕೆ ಮಣೆ ಹಾಕುವುದು ವಾಡಿಕೆ. ಕಳೆದ 2014ರ ಚುನಾವಣೆಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಹೈಕೋರ್ಟ್‌ನ ವಕೀಲ, ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ 9022 ಮತ ಪಡೆದು ಗೆಲುವಿನ ನಗೆ ಬೀರಿದ್ದರು. ಈ ಬಾರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಬಿಜೆಪಿ ಗೆಲ್ಲುವುದು ಸುಲಭ ಎನ್ನುವ ಲೆಕ್ಕಾಚಾರ ಶಿಕ್ಷಕರ ವಲಯದಲ್ಲಿ ಕೇಳಿಬರುತ್ತಿದೆ.
ಕ್ಷೇತ್ರದಲ್ಲಿ ನಾಯಕರ ರೌಂಡ್ ಮತ್ತು ಸೌಂಡ್:
ಚುನಾವಣಾ ನಾಮಪತ್ರ ಸಲ್ಲಿಕೆ ಮುಗಿದಿದ್ದು, ಚುನಾವಣಾ ರಣಕಣ ರಂಗೇರಿದೆ. ಬಿಜೆಪಿಯಿಂದ ಉಸ್ತುವಾರಿ ವಹಿಸಿಕೊಂಡ ಸಚಿವ ಈಶ್ವರಪ್ಪ ಒಂದು ಸುತ್ತಿನ ಪ್ರಚಾರ ಸಭೆ ನಡೆಸಿದ್ದಾರೆ. ಶತಾಯಗತಾಯ ಗೆಲ್ಲಲೇಬೇಕು ಎನ್ನುವ ಹಂಬಲದಲ್ಲಿರುವ ಬಿಜೆಪಿ ಪ್ರಚಾರದಲ್ಲಿ ಮುಂದೆ ಇದೆ. ಒಂದು ಸುತ್ತಿನ ೬ ಜಿಲ್ಲೆಗಳ ಪ್ರವಾಸ ಮುಗಿಸಿ ಎರಡನೇ ಸುತ್ತಿಗೆ ಅಣಿಯಾಗಿದೆ. ೬ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ಸಂಸದರು ಹೆಚ್ಚಿದ್ದು ಬಿಜೆಪಿ ಸಹಜವಾಗಿ ಗೆಲುವಿನ ಉತ್ಸಾಹದಲ್ಲಿದೆ.
ಇನ್ನು ಕಳೆದ ಬಾರಿ ಗೆದ್ದ ಕಾರಣ ಈ ಬಾರಿಯೂ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಜೆಡಿಎಸ್‌ನ ಅಭ್ಯರ್ಥಿ ಪರ ಸ್ವತಃ ದೇವೇಗೌಡರೇ ಅಖಾಡಕ್ಕೆ ಇಳಿದು ಪ್ರಚಾರಕ್ಕೆ ಮುಂದಾಗಿ ತನ್ನ ಅಭ್ಯರ್ಥಿ ಗೆಲ್ಲಿಸಲು ಮುಂದಾಗಿದ್ದಾರೆ.

ಇವರೆಲ್ಲ ಅಭ್ಯರ್ಥಿಗಳು
ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿತ್ತು. ಅದರಂತೆ ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶಿಲ್ ನಮೋಶಿ, ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ, ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್, ಪಕ್ಷೇತರ ಅಭ್ಯರ್ಥಿಗಳಾಗಿ ನಿಂಗಯ್ಯ ಮಠ, ತುಳಸಪ್ಪ ದಾಸರ, ಡಾ. ಚಂದ್ರಕಾಂತ ಶಿಂಗೆ, ಪ್ರಭುಲಿಂಗಯ್ಯ ನಾಮಪತ್ರ ಸಲ್ಲಿಸಿದ್ದಾರೆ. ಶಶಿಲ್ ನಮೋಶಿ 4 ಸೆಟ್ ಸಲ್ಲಿಸಿದ್ದರೆ, ಶರಣಪ್ಪ ಮಟ್ಟೂರ 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

6 ಜಿಲ್ಲೆ, 31 ಸಾವಿರ ಮತದಾರರು
ಈಶಾನ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಆರು ಜಿಲ್ಲೆಗಳು ಬರಲಿವೆ. ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಗಳ ಶಿಕ್ಷಕರು ಮತದಾರರಾಗಿದ್ದಾರೆ. ಇನ್ನೂ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಲಭ್ಯ ಮಾಹಿತಿ ಪ್ರಕಾರ ಒಟ್ಟು 31 ಸಾವಿರ ಮತದಾರರಿದ್ದಾರೆ. ಅ. 8ರ ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಕೊನೆಯ ದಿನವಾಗಿತ್ತು. ಮೊದಲಿದ್ದ ಮತದಾರರ ಜೊತೆಗೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಇದರಲ್ಲಿ ಯಾರು ಹೆಚ್ಚಾಗಿ ಶಿಕ್ಷಕರ ಮನ ಗೆಲ್ಲುತ್ತಾರೋ ಅವರು ಗೆದ್ದು ಬರಲಿದ್ದಾರೆ.
ಕಳೆದ ಬಾರಿ ಮತದಾರರು, ಫಲಿತಾಂಶ..
ಕಳೆದ ಬಾರಿ ಕ್ಷೇತ್ರದಲ್ಲಿ ಒಟ್ಟು 31,809 ಮತದಾರರಿದ್ದರು. ಇದರಲ್ಲಿ 19,183 ಮತಗಳು ಚಲಾವಣೆಯಾಗಿದ್ದವು. ಇವುಗಳಲ್ಲಿ ಒಟ್ಟು ೧೭,೭೪೮ ಮತ ಕ್ರಮಬದ್ದವಾಗಿದ್ದವು, 1,403 ಮತ ತಿರಸ್ಕೃತವಾಗಿದ್ದು, 32 ನೋಟಾ ಚಲಾವಣೆಯಾಗಿತ್ತು. ಚಲಾಯಿತ ಮತಗಳಲ್ಲಿ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ 9022 ಮತ ಪಡೆದು ಜಯಗಳಿಸಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದರು. ಇನ್ನು ಬಿಜೆಪಿಯ ಶಶೀಲ್ ನಮೋಶಿ 6933 ಮತ ಸೋಲುಂಡಿದ್ದರು. ಹ್ಯಾಟ್ರಿಕ್ ಜಯ ಸಾಧಿಸಬೇಕೆಂದಿದ್ದ ನಮೋಶಿ ಕನಸು 2014 ರಲ್ಲಿ ಭಗ್ನಗೊಂಡಿತ್ತು.

ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಮನವಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ
ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಬದಲಾಗಿ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಗೊಲ್ಲ ಸಮಾಜದಿಂದ ಇಲ್ಲಿನ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ನೀಡಲಾಯಿತು.
ಸಮಾಜದ ಅಧ್ಯಕ್ಷ ಪಿ.ಎಫ್.ಗೌಡರ ಮಾತನಾಡಿ, ಕಾಡುಗೊಲ್ಲ ಎನ್ನುವುದು ಗೊಲ್ಲ ಸಮಾಜದ ಒಂದು ಉಪ ಪಂಗಡವಾಗಿದೆ. ಕಾಡುಗೊಲ್ಲ ಪಂಗಡಕ್ಕೆ ಮಾತ್ರ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸರಿಯಾದ ಕ್ರಮವಲ್ಲ. ಆದರೆ ಸರ್ಕಾರವು ಇತ್ತೀಚೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಸ್ಥಾಪನೆಯಿಂದ ಕೇವಲ ರಾಜ್ಯದ ಕೇವಲ 2 ಜಿಲ್ಲೆಗಳಿಗೆ ಹೆಚ್ವು ಉಪಯುಕ್ತ ಹಾಗೂ ಲಾಭ ಆಗಲಿದೆ. ಪರಿಣಾಮ ಅಂದಾಜು 35 ರಿಂದ 40 ಲಕ್ಷ ಜನಸಂಖ್ಯೆ ಹಾಗೂ 24 ಉಪ ಪಂಗಡಗಳಿಗೆ ಅನ್ಯಾಯವಾಗಲಿದೆ ಎಂದು ದೂರಿದರು.
ರಾಜ್ಯದ ಸಮಗ್ರ ಗೊಲ್ಲ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುವ ಮೂಲಕ ಬಡ ಹಾಗೂ ಹಿಂದುಳಿದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರವಾದ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಎಚ್ಚರಿಸಿದರು.
ಈ ವೇಳೆ ತಾಲೂಕಿನ ಕಾಲಕಾಲೇಶ್ವರ, ಮ್ಯಾಕಲ್‌ಝರಿ, ಜಕ್ಕಲಿ, ಯರೆಬೇಲೆರಿ, ಡಸ ಹಡಗಲಿ ಹಾಗೂ ಕುರಹಟ್ಟಿ ಗ್ರಾಮಗಳಿಂದ ಗ್ರಾಮಸ್ಥರು ಭಾಗವಹಿಸಿದ್ದರು.
ಪುರಸಭೆ ಮಾಜಿ ಸದಸ್ಯ ಕಳಕಪ್ಪ ಗುಳೇದ, ಎಚ್.ವೈ.ಬೊನೇರ, ಪಿ.ವೈ.ಮ್ಯಾಗೇರಿ, ಶರಣಪ್ಪ ದಿವಾಣದ, ನಾಗಪ್ಪ ಮ್ಯಾಗೇರಿ, ದೇವಪ್ಪ ವರಗಾ, ಮುತ್ತು ಗೌಡರ, ಮುದಕಪ್ಪ ಬೊನೇರ, ಮಲ್ಲನಗೌಡ ಗೌಡರ, ಬಾಲಪ್ಪ ಗೌಡರ, ಯಲ್ಪಪ್ಪ ಮ್ಯಾಗೇರಿ, ಮುತ್ತು ದಿವಾಣದ, ದೇವಪ್ಪ ಗುಳೇದ, ಶ್ರೀಧರ ದಿವಾಣದ, ಕಳಕಪ್ಪ ದಿವಾಣದ, ಮುತ್ತಣ್ಣ ವರಗಾ, ಕಳಕಪ್ಪ ಕುರಿ, ಸಂತೋಷ ದಿವಾಣದ, ಮಂಜುನಾಥ ವರಗಾ ಸೇರಿ ಇತರರು ಇದ್ದರು.

ಸಾಮರ್ಥ್ಯ ಅರಿತು ಒತ್ತಡ ನಿಭಾಯಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ವ್ಯಕ್ತಿಯು ತನ್ನ ಸಾಮರ್ಥ್ಯಗಳನ್ನು ಅರಿತುಕೊಂಡು ಜೀವನದ ಸಾಮಾನ್ಯ ಒತ್ತಡಗಳನ್ನು ನಿಭಾಯಿಸಬೇಕು. ಪ್ರತಿಯೊಬ್ಬರೂ ಮಾನಸಿಕ ಸಮತೋಲನ ಕಾಯ್ದುಕೊಳ್ಳುವ ಮೂಲಕ ಆರೋಗ್ಯವಂತ ಜೀವನ ನಡೆಸಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ವಿ.ಪಾಟೀಲ ಹೇಳಿದರು.
ನಗರದ ಜಿಲ್ಲಾ ಸತ್ರ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವನ ಕೌಶಲ್ಯಗಳನ್ನು ಹೊಂದುವುದರ ಜೊತೆಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು. ಮಾನಸಿಕ ಅಸ್ವಸ್ಥತೆಯಿಂದ ಬಳಲುವವವರು ಸಾಮಾಜಿಕ, ಆರ್ಥಿಕ ಹಾಗೂ ಔಧ್ಯೋಗಿಕವಾಗಿ ಹಿನ್ನಡೆ ಅನುಭವಿಸುತ್ತಾರೆ. ಹೀಗಾಗಿ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಗಳು ಸಕಾಲಕ್ಕೆ ಚಿಕಿತ್ಸೆ ಪಡೆದರೆ ಖಾಯಿಲೆ ಗುಣಪಡಿಸಬಹುದಾಗಿದ್ದು, ಮೊದಲಿನಂತೆ ಸಹಜ ಜೀವನ ನಡೆಸಬಹುದು ಎಂದರು.
ಸರ್ಕಾರ ಮಾನಸಿಕವಾಗಿ ಅಸ್ವಸ್ಥಗೊಂಡಿರುವವರ ಬಗ್ಗೆ ನಿಗಾವಹಿಸಿದ್ದು, ಚಿಕಿತ್ಸೆಗಾಗಿ ಸಾಕಷ್ಟು ಹಣ ವ್ಯಯಿಸುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೇ, ಮಾನಸಿಕ ಅಸ್ವಸ್ಥರನ್ನು ಕಡೆಗಣಿಸದೇ ಅವರನ್ನೂ ನಮ್ಮವರೆಂದು ಭಾವಿಸಬೇಕು ಎಂದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ವಿ.ನರಸಿಂಹಸಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ, ಜೆಎಂಎಫ್‌ಸಿ ಮಹಾದೇವಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ ಬಸರೀಗಿಡದ, ಮಾನಸಿಕ ಆರೋಗ್ಯಾಧಿಕಾರಿ ಸೋಮಶೇಖರ ಬಿಜ್ಜಳ, ಮನೋರೋಗ ತಜ್ಞ ಡಾ.ತಾರಾಚಂದ ನಾಯ್ಕ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೈ.ಕೆ. ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ನೀಲಗುಂದ, ವಕೀಲ ಸಂಘದ ಪದಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚೌಹಾಣ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ ಕಾರ್ಯಕ್ರಮ ವಂದಿಸಿದರು.
 

ಪೊಲೀಸರ ಕಾರ್ಯಚರಣೆ: ಗದಗನ ಐವರು ದರೋಡೆಕೋರರ ಬಂಧನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:
ವಾಹನಗಳನ್ನು ಅಡ್ಡಗಟ್ಟಿ ಹೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡುತ್ತಿದ್ದ ಐವರ ಗ್ಯಾಂಗ್ ವೊಂದನ್ನ ಗದಗ ಪೊಲೀಸರು ಬಂಧಿಸಿದ್ದಾರೆ.
ನಗರದ ದೋಭಿಘಾಟ್ ನ ಬಳಿ ರಿಂಗ್ ರೋಡ್ ನಲ್ಲಿ ರಸ್ತೆಗೆ ಅಡ್ಡಲಾಗಿ ಹಗ್ಗ ಹಿಡಿದು ಅಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ನಿಲ್ಲಿಸಿ, ಸವಾರರನ್ನು ಬೆದರಿಸಿ, ಹಣ, ಮೊಬೈಲ್, ಬಂಗಾರದ ಆಬರಣ ದೋಚಿಕೊಂಡು ಪರಾರಿಯಾಗುತ್ತಿದ್ದರು.
ವಿಷಯ ತಿಳಿದ ಪೊಲೀಸರು ಗ್ಯಾಂಗ್ ಅನ್ನು ಹೆಡೆ ಮುರಿಕಟ್ಟಿದ್ದಾರೆ. ಎಲ್ಲಾ ಆರೋಪಿಗಳು ಗದಗ ನಗರದವರಾಗಿದ್ದು. ಆರೋಪಿತರು ರೋಹಿತ್ ಕಟ್ಟಿಮನಿ, ಹನಮಂತ ಹಂದಿಗುಂದ, ಸುನಿಲ್, ಸಾಹಿಲ್, ಗಣೇಶ್ ಇವರನ್ನು ಬಂಧಿಸಿದ್ದಾರೆ. ಅಲ್ಲದೇ ದರೊಡೆಗೆ ಬಳಸುತ್ತಿದ್ದ ರಾಡು, ಬಡಿಗೆ, ಚಾಕು, ಹಗ್ಗ ಸೇರಿದಂತೆ ಮತ್ತು 500 ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಗದಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಪಿಐ ಪಿ.ವಿ. ಸಾಲಿಮಠ, ಪಿಎಸ್ ಐ ಜಿ.ಟಿ. ಜಕ್ಕಲಿ, ಎಎಸ್ಐ ವಿ.ಎಸ್. ಬಿಕ್ಷಾವತಿಮಠ, ಸಿಬ್ಬಂದಿಗಳಾದ ರಮೇಶ ಬೇವಿನಕಟ್ಟಿ, ಆರ್.ಎಸ್. ಹಾದಿ, ಬಿ.ಜಿ. ಹೊರಕೇರಿ, ವಿ.ಎಸ್. ಶೆಟ್ಟೆಣ್ಣವರ, ಎಚ್.ಐ. ಯಡಿಯಾಪುರ, ಪಿ.ಎಸ್. ಕಲ್ಲೂರ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬುಲೆಟ್ ಪವ್ಯನಿಂದ ಚಾಕು ಇರಿತ; ನಕ್ಷತ್ರ ಹೋಟೆಲ್ ನಲ್ಲಿ ಘಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕುಡಿದ ನಶೆಯಲ್ಲಿ ಇಬ್ಬರು ಯುವಕರು ಸೇರಿ ಒಬ್ಬ ಯುವಕನಿಗೆ ಚಾಕು ಇರಿದ ಘಟನೆ ನಗರದ ನಕ್ಷತ್ರ ಹೋಟೆಲ್ ನಲ್ಲಿ ನಡೆದಿದೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಿವಾಸಿ ನಿಖಿಲ್ ಮುದಗಲ್ ಇರಿತಕ್ಕೊಳಗಾಗಿದ್ದು, ಪವನ್ ಕುಮಾರ ಅಲಿಯಾಸ್ ಬುಲೆಟ್ ಪವ್ಯ ಹಾಗೂ ಪವನ್ ಸಕ್ರಿ ಅವರಿಬ್ಬರೂ ಸೇರಿ ಈ ಕೃತ್ಯವೆಸಗಿದ್ದಾರೆ.

ಚೂರಿ ಇರಿತಕ್ಕೊಳಗಾದ ನಿಖಿಲ್ ಶೌಚಾಲಯಕ್ಕೆ ಹೋಗುವಾಗ ಎದುರುಗಡೆಯಿಂದ ಬಂದ ಬುಲೆಟ್ ಪವ್ಯನಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕುಪಿತಗೊಂಡ ಬುಲೆಟ್ ಪವ್ಯ ಹಾಗೂ ಪವನ್ ಸಕ್ರಿ ನಿಖಿಲ್ ನಿಗೆ ಚೂರಿ ಇರಿದು ಹಲ್ಲೆ ಮಾಡಿದ್ದಾರೆ.

ಚೂರಿ ಇರಿತಕ್ಕೊಳಗಾದ ನಿಖಿಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ. ಈ ಪ್ರಕರಣದಿಂದಾಗಿ ಗದಗ ನಗರದಲ್ಲಿ ಮತ್ತೆ ಮರಿ ಪುಡಾರಿಗಳು ಗರಿ ಬಿಚ್ಚಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಮುಳಗುಂದ ರಸ್ತೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆದರೆ ಆಗ ಪೊಲೀಸರು ರಾಜಿ ಮಾಡಿಸಿ ಕಳಿಸಿದ್ದರು ಎಂದು ತಿಳಿದು ಬಂದಿದೆ. ನಿನ್ನೆ ನಡೆದ ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಸ್ತೆ ಗುಂಡಿಗೆ ಬಿದ್ದು ಟಾಟಾ ಏಸ್ ಪಲ್ಟಿ; 13 ಕಾರ್ಮಿಕರಿಗೆ ಗಾಯ

0

ವಿಜಯಸಾಕ್ಷಿ ಸುದ್ದಿ ಗದಗ
ಗುಂಡಿ ಬಿದ್ದಿರುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾಏಸ್ ಪಲ್ಟಿಯಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಮತ್ತು ಉಣಚಗೇರಿ ಗ್ರಾಮದ ಬಳಿ ನಡೆದಿದೆ.
ಗೋಗೇರಿ ಗ್ರಾಮದ ಟಾಟಾ ಏಸ್ ಇಂದು ಸುಮಾರು 13 ಜನ ಕಾರ್ಮಿಕರನ್ನು ಕರೆದುಕೊಂಡು ಹೋಗ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಗುಂಡಿ ಬಿದ್ದಿದ್ದರಿಂದ ರಸ್ತೆಯ ಪಕ್ಕಕ್ಕೆ ಚಕ್ರ ಸರೆದಿದೆ. ಪರಿಣಾಮ ವಾಹನ ರಸ್ತೆಯ ಮಧ್ಯದಲ್ಲಿ ಪಲ್ಟಿಯಾಗಿದೆ. ಅದರಲ್ಲಿ ಇದ್ದ ಎಲ್ಲಾ ಕಾರ್ಮಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲಾ.
ಗಾಯಾಳುಗಳನ್ನು ಗಜೇಂದ್ರಗಡ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಲ್ಲಾ ಕಾರ್ಮಿಕರು ಕಟ್ಟಡ ಕಾರ್ಮಿಕರಾಗಿದ್ದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕಡೆ ಹೊರಟಿದ್ದರು. ಈ ಬಗ್ಗೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!