Home Blog Page 2180

ಹ್ಯಾಪಿ ಬರ್ತಡೇ ಮೋದಿಜಿ: ರಾಹುಲ್ ಗಾಂಧಿ ಹಾರೈಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು ಸರಳ ಸಂದೇಶವನ್ನು ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಸಲ 69ನೇ ಜನ್ಮದಿನದಂದು ರಾಹುಲ್ ಮುಖತಃ ವಿಶ್ ಮಾಡಿದ್ದರು. ಈಗ ಅವರು ಸೋನಿಯಾರ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಪ್ರತಿದಿನವೂ ಸರಣಿ ಟ್ವೀಟ್‌ಗಳ ಮೂಲಕ ಮೋದಿಯವರ ಕೊರೋನಾ ನಿರ್ವಹಣೆಯ ವಿಫಲತೆ, ಆರ್ಥಿಕತೆ ಹಿನ್ನಡೆ ವಿಷಯಗಳ ಕುರಿತು ರಾಹುಲ್ ಟೀಕೆ ಮಾಡುತ್ತಲೇ ಬಂದಿದ್ದಾರೆ.

ಮೋದಿ ಜನ್ಮದಿನ: ನಿರುದ್ಯೋಗ ದಿನ ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ಇಂದು ನರೇಂದ್ರ ಮೋದಿಯವರ ಜನ್ಮದಿನ. ಈ ನಿಮಿತ್ತ ಬಿಜೆಪಿ ದೇಶಾದ್ಯಂತ ಇಂದಿನಿಂದ ಒಂದು ವಾರ ಕಾಲ ‘ಸೇವಾ ಸಪ್ತಾಹ’ದ ಮೂಲಕ ರಕ್ತದಾನದಂತಹ ಕಾರ್ಯಕ್ರಮ ಆಯೋಜಿಸಿದೆ.
ಆದರೆ ಇಂದು #ರಾಷ್ಟ್ರಿಯ ಬೆರೋಜಗಾರ್ ದಿವಸ್ ಎಂಬ ಹ್ಯಾಷ್‌ಟ್ಯಾಗ್ ಟ್ವಿಟರಿನಲ್ಲಿ ಟ್ರೆಂಡ್ ಆಗುತ್ತಿದೆ.

ಮೋದಿ ಜನ್ಮದಿನವನ್ನು ಟಾರ್ಗೆಟ್ ಮಾಡಿಯೇ ಕಳೆದ ವಾರದಿಂದ ನಡೆಯುತ್ತಿರುವ ಈ ಟ್ವಿಟರ್ ಅಭಿಯಾನ ಇಂದು ಮುಕ್ತಾಯಗೊಳ್ಳಲಿದೆ.

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣವನ್ನು ಉಲ್ಲೇಖಿಸಿ ಲಕ್ಷಾಂತರ ಯುವಕರು ಟ್ವೀಟ್‌ಗಳನ್ನು ಮಾಡಿದ್ದಾರೆ. ಸರ್ಕಾರಿ ಮಟ್ಟದಲ್ಲೇ ಇರುವ ಖಾಲಿ ಹುದ್ದೆಗಳನ್ನು ತುಂಬಲು, ಖಾಸಗಿ ವಲಯದಲ್ಲಿ ಉದ್ಯೋಗ ಸೃಷ್ಟಿಗೆ ಯೋಜನೆ ರೂಪಿಸಲು ಈ ಆನ್‌ಲೈನ್ ಅಭಿಯಾನ ಆಗ್ರಹಿಸಿದೆ.
ಮೋದಿಯವರ ಉದ್ಯೋಗ ಭರವಸೆಗಳ ಬಗ್ಗೆ ಸಾಕಷ್ಟು ಯುವಕರು ಲೇವಡಿಯನ್ನೂ ಮಾಡಿದ್ದಾರೆ.

ಕಳಪೆ ಬೀಜ ಪತ್ತೆ; ಕ್ರಮಕ್ಕೆ ಶಿಫಾರಸು: ಬಿ.ಸಿ‌ ಪಾಟೀಲ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳದಲ್ಲಿ ಇತ್ತಿಚೆಗೆ ರೈತರಿಗೆ ಕಳಪೆ ಬೀಜ, ಗೊಬ್ಬರ‌ ವಿತರಿಸಿದ ಪ್ರಕರಣ ಗಮನಕ್ಕೆ ಬಂದಿದ್ದು, ಪೂರೈಕೆಯಾದ ಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದ ವರದಿ ಬಂದಿದ್ದು ಕಳಪೆ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಿರುವುದು ಸಾಬೀತಾಗಿದೆ. ಮಾರಾಟವಾದ ಗೊಬ್ಬರ ಕಂಪನಿ ಹಾಗೂ ಮಾರಾಟ ಮಾಡಿದ ಅಂಗಡಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಕಳಪೆ ಗೊಬ್ಬರ ಪತ್ತೆಯಾಗಿದ್ದು, ಪೆರಿಗ್ರಿನ್ ಕಂಪನಿಯ ಗೊಬ್ಬರ ಕಳಪೆ ಎಂಬುದು ಗೊತ್ತಾಗಿದೆ. ಪ್ರಯೋಗಾಲಯದ ವರದಿ ಬಂದಿದ್ದು, ಕ್ರಮ ಕೈಗೊಳ್ಳಲಾಗುವುದು. ಈ ಕಂಪನಿ ಕಲಬುರಗಿಯಲ್ಲಿ ಇದ್ದು, ಸೀಜ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೊಪ್ಪಳದ ಶಾಂತಿ ಆಗ್ರೋದಲ್ಲಿ ಈರುಳ್ಳಿ ಬೀಜ ಕಳಪೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ‌ ನೀಡಿದ ಅವರು, ಈ ಬಗ್ಗೆ ತೋಟಗಾರಿಕೆ ಇಲಾಖೆಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಪರಿಶೀಲಿಸಿ ವರದಿ ನೀಡಲಿದೆ ಎಂದು ವಿವರಿಸಿದರು.

ಪೊಲೀಸ್ ಇಲಾಖೆಯ ಆಂತರಿಕ ಕಲಹ ಕುರಿತು ಸಾಕಷ್ಟು ಪರಸ್ಪರ ಪರ-ವಿರೋಧ ದೂರುಗಳು ಬಂದಿದ್ದು, ಅವುಗಳನ್ನು ಗೃಹಮಂತ್ರಿಗಳ ಗಮನಕ್ಕೆ ತರಲಾಗಿದೆ. ಪೊಲೀಸ್ ಇಲಾಖೆಯ ವರ್ಗಾವಣೆ ತಮಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥರಡ್ಡಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಕೊಪ್ಪಳ ಜಿಪಂ ಸಿಇಒ ರಘುನಂದನ್ ಮೂರ್ತಿ ಸೇರಿದಂತೆ ಇತರರು ಇದ್ದರು.

ಶಾಸಕ ದಢೇಸೂಗೂರು ಅವರಿಂದ ಧ್ವಜಾರೋಹಣ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಅವರು ತಾಲೂಕು ಆಡಳಿತ ಮತ್ತು ಕಾರಟಗಿ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ತಹಸೀಲ್ದಾರ್ ಕವಿತಾ, ಮುಖ್ಯಾಧಿಕಾರಿ ಶಿವಲಿಂಗಪ್ಪ, ತಾ. ಪಂ.ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸೋಮಶೇಖರಗೌಡ ಎಪಿಎಂಸಿ ಅಧ್ಯಕ್ಷರು, ಸದಸ್ಯರಾದ ನಾಗರಾಜ್ ಅರಳಿ, ಜೆ ತಿಮ್ಮನಗೌಡ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ, ಪಿಎಸ್ಐ ಅವಿನಾಶ್ ಕಾಂಬ್ಳೆ, ಅರೋಗ್ಯ ರಕ್ಷಾ ಸಮಿತಿಯ ಶರಣಪ್ಪ ಗದ್ದಿ,ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಶೇಖರ ಮುಸಾಲಿ, ನಾಗರಾಜ ಬಿಲ್ಗಾರ್, ರಮೇಶ್ ನಾಡಿಗೇರ್, ಶಾಂತಾ ಪವಾರ್, ರತ್ನಕುಮಾರಿ, ಪ್ರಭುರಾಜ್ ಬೂದಿ, ಮರಿಯಪ್ಪ ಸಾಲೋಣಿ, ಮಂಜುನಾಥ್ ಮಾಲಿಪಾಟೀಲ್, LVT ಸೂಗಪ್ಪ, ಮಲ್ಲಮ್ಮ ಕನಕರೆಡ್ಡಿ, ಮತ್ತಿತರ ಮುಖಂಡರು ಇದ್ದರು.

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಮಾಡಿದ್ದೇನು? ಹೆಸರಷ್ಟೇ ಕಲ್ಯಾಣ, ಕೊಟ್ಟಿದ್ದು ಕಡಿಮೆ ಹಣ: ಖಂಡ್ರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಲಬುರಗಿ: ಇಂದು ಗುರುವಾರ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.
ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ಕರ್ನಾಟಕ ಎಂಬ ಹೊಸ ಹೆಸರು ಪಡೆದ ಹೈದರಾಬಾದ್ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಗಮನಾರ್ಹ ನೆರವು ನೀಡಿಯೇ ಇಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ರಾಜ್ಯ  ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣವನ್ನೂ ಕಡಿತ ಮಾಡಿರುವುದು ಇದಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಡಲಾಗಿತ್ತು. ಇದೇ ವಿಚಾರದ ಮೇಲೆ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯನ್ನೂ ಎದುರಿಸಿತ್ತು. ಆದರೆ ಅದಾದ ಬಳಿಕ ಆರ್ಟಿಕಲ್ 371(ಜೆ)ಗೆ ತಿದ್ದುಪಡಿ ತಂದಿದ್ದರೂ ಪ್ರಯೋಜವಾಗಿಲ್ಲ ಎಂದು ಜನರೇ ಆರೋಪಿಸುತ್ತಿದ್ದಾರೆ ಎಂದು ಖಂಡ್ರೆ ಹೇಳಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹೆಸರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಿದ ಮಾತ್ರಕ್ಕೆ ತೀವ್ರ ಹಿಂದುಳಿದಿರುವ ಪ್ರದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಮನಗಾಣಬೇಕು, ಜನರನ್ನು ಮರುಳು ಮಾಡುವ ಪ್ರಯತ್ನ ಕೈಬಿಟ್ಟು ಪ್ರಾದೇಶಿಕ ಅಸಮತೋಲನದಿಂದ ಬಳಲುತ್ತಿರುವ ವಲಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಈಶ್ವರ್ ಖಂಡ್ರೆ ಸಲಹೆ ನೀಡಿದ್ದಾರೆ.

ಮಂಜೂರಾಗಿರುವ ಯೋಜನೆಗಳು, ಟೆಂಡರ್ ಆಗಿರುವ ಕಾಮಗಾರಿಗಳೂ ಇನ್ನೂ ಆರಂಭವಾಗಿಲ್ಲ. ವಿಶೇಷ ಸ್ಥಾನಮಾನ ಪಡೆದಿರುವ ಭಾಗಕ್ಕೆ ವಿಶೇಷ ಅನುದಾನ ನೀಡುವುದಿರಲಿ, ಹಂಚಿಕೆ ಮಾಡಿದ ಹಣವನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ. ಒಂದೂ ಕಾಲು ವರ್ಷದಿಂದ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ಸ್ಥಗಿತವಾಗಿದೆ. 2019-20 ರ ಸಾಲಿನ ಬಜೆಟ್‌ನಲ್ಲಿ ಘೋಷಣೆಯಾಗಿದ್ದ 1500 ಕೋಟಿ ಅನುದಾನದಲ್ಲಿ ರೂ 1125 ಕೋಟಿ ಬಿಡುಗಡೆಯಾಗಿದ್ದು ಉಳಿದ ಹಣ 375 ಕೋಟಿ ರೂ. ಇನ್ನೂ ಬಿಡುಗಡೆ ಆಗಿಲ್ಲ ಎಂದಿದ್ದಾರೆ.

ಇನ್ನು 2020-21ರ ಸಾಲಿನಲ್ಲಿ 2000 ಕೋಟಿ ರೂ. ನೀಡುವಂತೆ ಕೇಳಿದ್ದರೂ, 1500 ಕೋಟಿ ಮೀಸಲಿಟ್ಟರು, ಈಗ ಅದರಲ್ಲಿ 1136.86 ಕೋಟಿ ರೂ. ಕ್ರಿಯಾ ಯೋಜನೆ ಮಾಡಿದ್ದಾರೆ. ಇದರಲ್ಲೂ ಹಣ ಕಡಿತ ಆಗಿದೆ.

2020-21 ರಲ್ಲಿ ಇಲ್ಲಿಯವರೆಗೆ ಆರು ತಿಂಗಳುಗಳಲ್ಲಿ ಒಂದೇ ಒಂದು ಕ್ರಿಯಾ ಯೋಜನೆಗೆ ಅನುಮೋದನೆ ನೀಡಿಲ್ಲ. ಇದು ಕಲ್ಯಾಣ ಕರ್ನಾಟಕಕ್ಕೆ ಮಾಡಿದ ಘನ ಘೋರ ಅನ್ಯಾಯ ಎಂದು ಖಂಡ್ರೆ ಹೇಳಿದ್ದಾರೆ.

ಉಪ ಚುನಾವಣೆ ನಡೆದ ಒಂದೊಂದು ಕ್ಷೇತ್ರಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾವಿರಾರು ಕೋಟಿ ರೂಪಾಯಿ ಯೋಜನೆ, ಪ್ಯಾಕೇಜ್ ಪ್ರಕಟಿಸಿದರು. ಆದರೆ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಏಕೆ ಇಂತಹ ಪ್ಯಾಕೇಜ್ ನೀಡುತ್ತಿಲ್ಲ?. ಈ ಭಾಗದ ಜನರು ಕರ್ನಾಟಕದವರಲ್ಲವೇ? ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

14 ತಿಂಗಳಲ್ಲಿ ಹೊಸ ರಸ್ತೆಯಾಗಲಿ, ನೀರಾವರಿ ಕಾಮಗಾರಿಯಾಗಲಿ, ಹೊಸ ಕಾಲೇಜುಗಳಾಗಲಿ, ವಿವಿಧ ಹುದ್ದೆಗಳ ಭರ್ತಿ ಆಗಲಿ- ಯಾವುದೂ ನಡೆಯುತ್ತಿಲ್ಲ. ಹಿಂದುಳಿದ ಕಲ್ಯಾಣ ಕರ್ನಾಟಕದ ಬಗ್ಗೆ ಸರ್ಕಾರಕ್ಕೆ ವಿಶೇಷ ಕಳಕಳಿ ಇರಲಿ ಕನಿಷ್ಠ ಕಾಳಜಿಯೂ ಇಲ್ಲ ಎಂದು ಆರೋಪಿಸಿದ್ದಾರೆ.

ಸರ್ಕಾರ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ 500 ಕೋಟಿ ರೂ. ಆಯವ್ಯಯದಲ್ಲಿ ಹಂಚಿಕೆ ಮಾಡಿದ್ದು ಅದರ ಉದ್ಘಾಟನೆಯೂ ಆಗಿದೆ. ಆದರೆ ಕ್ರಿಯಾ ಯೋಜನೆಯಾಗಿಲ್ಲ, ಅ ಸಂಘಕ್ಕೆ ಯಾವುದೇ ರೂಪುರೇಷೆಯೂ ಇಲ್ಲ. ಹೀಗೆ ಕಾಗದದ ಮೇಲೆ ಯೋಜನೆ ರೂಪಿಸುವುದರಿಂದ ಏನು ಪ್ರಯೋಜನ ಎಂದು ಈಶ್ವರ ಖಂಡ್ರೆ ಅವರು ಪ್ರಶ್ನೆ ಎತ್ತಿದ್ದಾರೆ.

ಗಾಂಜಾ ಕೃಷಿ, ಸಂಗ್ರಹಣೆ: ಆರೋಪಿ ಬಂಧನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಹೊಲದಲ್ಲಿ ಗಾಂಜಾ ಬೆಳೆದು, ನಂತರ ಅದನ್ನು ಸಂಗ್ರಹಿಸಿದ್ದ ಆರೋಪದ ಮೇಲೆ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸರು ವ್ಯಕಿಯೋರ್ವನನ್ನು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಕರೆಗೋರಿ ನಿವಾಸಿ ಶರಣಪ್ಪ ದೇವಿ ಬಂಧಿತನಾಗಿದ್ದು, ಆತನಿಂದ 39 ಸಾವಿರ ರೂ. ಮೌಲ್ಯದ 3 ಕೆಜಿ 905 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ತಾನು ಬೆಳೆದಿದ್ದ  ಗಾಂಜಾ ಒಣಗಿಸುವಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಪರಣ್ಣ ಮುನವಳ್ಳಿ ಅವರಿಂದ ಧ್ವಜಾರೋಹಣ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಂಗಾವತಿ: ಶಾಸಕರ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಧ್ವಜಾರೋಹಣ ಮಾಡಿ ಮಾತನಾಡಿದ ಶಾಸಕರ ಪರಣ್ಣ ಮುನವಳ್ಳಿ ಹೈದರಾಬಾದ್ ನಿಜಾಮರ ಆಡಳಿತದಿಂದ ಮುಕ್ತಗೊಂಡ ಪ್ರದೇಶಗಳನ್ನು ಒಗ್ಗೂಡಿಸಲು ಹೋರಾಡಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಸ್ಮರಿಸುತ್ತಾ ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಕಾಶಿನಾಥ ಚಿತ್ರಗಾರ, ನಗರಸಭೆ ಸದಸ್ಯರಾದ ಉಮೇಶ ಸಿಂಗನಾಳ, ವಾಸುದೇವ ನವಲಿ, ನವೀನ್ ಮಾಲಿಪಾಟೀಲ್, ಜಿಲ್ಲಾ ಎಸ್.ಟಿ ಮೋರ್ಚ ಪ್ರಧಾನ ಕಾರ್ಯದರ್ಶಿ ರಮೇಶ ನಾಯಕ ಹೊಸಮಲ್ಲಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪುಷ್ಪಾಂಜಲಿ ಗುನ್ನಾಳ, ಹಿರಿಯರಾದ ವೀರೇಶ ಬಲಕುಂದಿ, ಟಿ.ಆರ್.ರಾಯಬಾಗಿ ಹಾಗೂ ಎಲ್ಲಾ ಮೋರ್ಚಗಳ ಪದಾಧಿಕಾರಿಗಳು ಮತ್ತು ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂಗಯ್ಯ ಸ್ವಾಮಿ ಸಂಶಿಮಠ, ಶ್ರೀನಿವಾಸ ಧೂಳ ಸೇರಿದಂತೆ ಇತರರು ಇದ್ದರು.

ಕೊಪ್ಪಳ; ಕಲ್ಯಾಣ ಕರ್ನಾಟಕ ಉತ್ಸವ-ಸಚಿವ ಬಿ.ಸಿ.ಪಾಟೀಲರಿಂದ ಧ್ವಜಾರೋಹಣ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಪೋಲಿಸ್ , ಡಿಆರ್, ಎನ್ ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ , ಸೇವಾದಳದ ತುಕಡಿಗಳು ಭಾಗಿಯಾಗಿ ನಡೆಸಿಕೊಟ್ಟ ಪಥ ಸಂಚಲನ ಆಕರ್ಷಕವಾಗಿತ್ತು.

ಆಸನಗಳು ಖಾಲಿ ಖಾಲಿ….

ಕೊವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ವಿದ್ಯಾರ್ಥಿಗಳು ಪಾಲ್ಗೊಂಡಿರಲಿಲ್ಲ. ಹಾಗಾಗಿ ಮೈದಾನದ ಸುತ್ತ ಮುತ್ತಲಿನ ಗ್ಯಾಲರಿ ಮತ್ತು ಮುಂಭಾಗದ ಆಸನಗಳು ಬಹುತೇಕ ಖಾಲಿ ಖಾಲಿಯಾಗಿದ್ದವು.

ಈ ವೇಳೆ ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಜಿ.ಸಂಗೀತಾ ಸೇರಿದಂತೆ ಇತರ ಗಣ್ಯರು ಭಾಗಿಯಾಗಿದ್ದರು.

ಗುರುವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಮುಂಬೈಗಿಂತ 1,980 ದುಬಾರಿ, ದೆಹಲಿಗಿಂತ 1,420 ರೂ ಸಸ್ತಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,980 ರೂ. ಇದೆ. ಮುಂಬೈನಲ್ಲಿ ಕನಿಷ್ಠ 51,580 ರೂ. ಇದೆ.

ಬೆಂಗಳೂರು, ಮೈಸೂರು, ಮಂಗಳೂರು: 22 ಕ್ಯಾರಟ್: 49,100 ರೂ., 24 ಕ್ಯಾರಟ್: 53,560 ರೂ.
ಹುಬ್ಬಳ್ಳಿ: 22 ಕ್ಯಾರಟ್: 48,886 ರೂ., 24 ಕ್ಯಾರಟ್: 53,330 ರೂ.

ಠಾಣೆಯಲ್ಲಿ ಗಲಾಟೆ ಮಾಡಿ ಗಾಯ ಮಾಡಿಕೊಂಡ: ಠಾಣೆ ಎದುರೇ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ತಿಕ್ಕಲ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಒಂಗೊಳೆ (ಆಂಧ್ರ): ಪೊಲೀಸ್ ಠಾಣೆಯ ಎದುರೇ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿ ಸುಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪ್ರಕಾಶಂ ಜಿಲ್ಲೆಯ ಒಂಗೊಳೆ ಪಟ್ಟಣದಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.

ಕ್ರಿಮಿನಲ್ ಹಿನ್ನೆಲೆಯ ಈ ವ್ಯಕ್ತಿ ಬುಧವಾರ ತಾಲೂಕು ಠಾಣೆಗೆ ಬಂದವನೇ, ಅಲ್ಲಿರುವ ಗಾಜುಗಳನ್ನು ಒಡೆದು ಗಾಯ ಮಾಡಿಕೊಂಡ. ಆತನನ್ನು ಆಸ್ಪತ್ರೆಗೆ ಸೇರಿಸಲು ಕರೆಸಿದ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿ ತಿಕ್ಕಲುತನ ಮೆರೆದು ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಅಂಬ್ಯುಲೆನ್ಸ್ ಏರಿದ ನಂತರ ಅಲ್ಲಿದ್ದ ಹತ್ತಿಗೆ ಬೆಂಕಿ ಹಾಕಿದ. ಧಗ್ಗನೆ ಅಂಬ್ಯುಲೆನ್ಸ್ ಹೊತ್ತಿ ಉರಿಯತೊಡಗಿತು. ‘ನಾನು ಇಲ್ಲೇ ಸಂತೋಷದಿಂದ ಸಾಯುವೆ, ಕೆಳಗೆ ಬರಲ್ಲ’ ಎಂದು ಕಿರುಚತೊಡಗಿದ. ಪೊಲೀಸರು ಹರಸಾಹಸ ಮಾಡಿ ಹೊರಗೆ ಎಳೆ ತಂದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜೈಲಿಗೆ ಅಟ್ಟಲಾಗಿದೆ.
ಅಂಬ್ಯುಲೆನ್ಸ್ ಚಾಲಕ ಮತ್ತು ಆರೋಗ್ಯ ಸಿಬ್ಬಂದಿಯೋರ್ವ ತಕ್ಷಣಕ್ಕೆ ಜಿಗಿದು ಅಪಾಯದಿಂದ ಪಾರಾದರು.

error: Content is protected !!