Home Blog Page 2184

ಉದ್ಧವ್ ಕಾರ್ಟೂನ್ ವ್ಯಾಟ್ಸಾಪ್‌ಗೆ ವಿರೋಧ: ನೌಕಾದಳದ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಕಾರ್ಟೂನ್ ಚಿತ್ರವೊಂದನ್ನು ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾದಳದ ನಿವೃತ್ತ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಒಳಗಾದ 65 ವರ್ಷದ ಮದನ ಶರ್ಮಾ ಮುಖದ ಮೇಲೆ ಗಾಯಗಳಾಗಿದ್ದು, ಕಣ್ಣುಗಳಿಗೂ ಪೆಟ್ಟಾಗಿದೆ. ಖಂಡಾವಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಹಲ್ಲೆಕೋರರು ಶಿವಸೇನೆ ಕಾರ್ಯಕರ್ತರು ಎನ್ನಲಾಗಿದೆ.

ಪೂರ್ವ ಖಂಡಾವಲಿಯ ಅಪಾರ್ಟಮೆಂಟ್ ಒಂದರ ನಿವಾಸಿ ಮದನ ಶರ್ಮಾ, ತಮಗೆ ಬಂದಿದ್ದ ಉದ್ಧವ್ ಠಾಕ್ರೆಯವರನ್ನು ವ್ಯಂಗ್ಯ ಮಾಡಿರುವ ಕಾರ್ಟೂನ್ ಸಂದೇಶವನ್ನು ತಮ್ಮ ಅಪಾರ್ಟ್ಮೆಂಟ್ ಸದಸ್ಯರ ಗುಂಪಿಗೆ ಫಾರ್ವರ್ಡ್ ಮಾಡಿದ್ದರು. ಹಲ್ಲೆಕೋರರ ಪೈಕಿ ಒಬ್ಬರು ಅವರಿಗೆ ಕಾಲ್ ಮಾಡಿ ಅಪಾರ್ಟ್‌ಮೆಂಟ್ ಹೊರಗೆ ಬಂದು ಭೇಟಿಯಾಗಲು ಕೇಳಿದ್ದಾರೆ.

ಭೇಟಿಯಾಗಲು ಬಂದ ಅವರ ಮೇಲೆ ಗುಂಪು ಹಲ್ಲೆ ನಡೆಸಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಹಲವರು ಘಟನೆಯನ್ನು ಖಂಡಿಸಿದ್ದಾರೆ.

ಶನಿವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ: ಮುಂಬೈಗಿಂತ 2,350 ದುಬಾರಿ, ದೆಹಲಿಗಿಂತ 1,630 ರೂ. ಸಸ್ತಾ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ  54,440 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ.

ಬೆಂಗಳೂರು, ಮೈಸೂರು, ಮಂಗಳೂರು: 22 ಕ್ಯಾರಟ್: 48,410 ರೂ.,24 ಕ್ಯಾರಟ್: 52,810 ರೂ.
ಹುಬ್ಬಳ್ಳಿ: 22 ಕ್ಯಾರಟ್: 48,968 ರೂ., 24 ಕ್ಯಾರಟ್: 53,420 ರೂ.

ಅಕ್ಕಿ ಅಕ್ರಮ ತಡೆಗೆ ಅಧಿಕಾರಿಗಳ ನಿರ್ಲಕ್ಷ್ಯ; ಸಚಿವ ಬಿ.ಸಿ.ಪಾಟೀಲ ಕ್ಲಾಸ್

0

ಗಂಗಾವತಿ ಅಕ್ಕಿ ಕುಳಗಳ ಮೇಲೆ “ಕೆಂಗಣ್ಣು”

*ಕೆಡಿಪಿ ಸಭೆಯಲ್ಲಿ ವಿಜಯಸಾಕ್ಷಿ ವರದಿ ಪ್ರಸ್ತಾಪ.

*ವಾರದೊಳಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ನಡೆಯುತ್ತಿರುವುದು ಜಗಜ್ಜಾಹೀರಾಗಿದೆ. ಕಳೆದ ೫ ತಿಂಗಳ ಹಿಂದೆ ನಡೆದ ಪಡಿತರ ಅಕ್ಕಿ ಕಳ್ಳ ಸಾಗಣೆ ಬಗ್ಗೆ ಅಧಿಕಾರಿಗಳ ಉದಾಸೀನ ಧೋರಣೆ ಬಗ್ಗೆ ಸಚಿವ ಬಿ.ಸಿ.ಪಾಟೀಲ ಕೆಂಡಾಮಂಡಲರಾದ ಘಟನೆ ಕೊಪ್ಪಳದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ನಡೆಯಿತು.

ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅಕ್ರಮಗಳಿಗೆ ಬ್ರೇಕ್ ಹಾಕುವುದು ನನ್ನ ಜವಾಬ್ದಾರಿ. ಇದಕ್ಕೆ ಅಧಿಕಾರಿಗಳ ಸಹಕಾರ ಅತ್ಯಗತ್ಯ ಎಂದು ಮೇ ತಿಂಗಳಲ್ಲಿ ನಡೆದ ಕೆಡಿಪಿ ಸಭೆಯಲ್ಲೇ ಹೇಳಿದ್ದೆ. ಏಪ್ರಿಲ್-ಮೇ ನಲ್ಲಿ ಗಂಗಾವತಿಯ ಅಕ್ಕಿ ವಿವಿಧೆಡೆ ಪತ್ತೆಯಾಗಿರುವ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿವೆ. ಎಫ್ಐಆರ್ ಸಹ ಆಗಿವೆ. ಆದರೂ ಇಲಾಖೆ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.

ಸಚಿವರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾ‌ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿ, ಜಿಲ್ಲೆಗೆ ಹೊಸದಾಗಿ ಬಂದು ಎರಡು ತಿಂಗಳಷ್ಟೇ ಆಗಿದೆ. ಈ ಬಗ್ಗೆ ಗಮನ ಹರಿಸುವುದಾಗಿಯೂ, ತಪ್ಪು ಕಂಡು ಬಂದಲ್ಲಿ ಪರವಾನಗಿ ರದ್ದುಗೊಳಿಸುವುದಾಗಿಯೂ ತಿಳಿಸಿದರು.

ಅಧಿಕಾರಿಯ ಸಮಜಾಯಿಷಿಗೆ ಪ್ರತಿಕ್ರಿಯೆ ನೀಡಿದ ಸಚಿವ ಪಾಟೀಲ ರದ್ದುಗೊಳಿಸುವುದಲ್ಲ, ರದ್ದಾಗಲೇಬೇಕು. ಈ ಕುರಿತು ಒಂದು ವಾರದೊಳಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮೇ ತಿಂಗಳಲ್ಲಿ ನಡೆದ ಕೆಡಿಪಿ ಸಭೆಯ ಅನುಪಾಲನಾ ವರದಿ ಪರಿಶೀಲಿಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಜಿಲ್ಲೆಯಲ್ಲಿ ವಿಶೇಷವಾಗಿ ಗಂಗಾವತಿ ಅಕ್ಕಿಯ ಅಕ್ರಮ ಕುರಿತು ಗಂಭೀರವಾಗಿ ಚರ್ಚಿಸಿ ಅಕ್ರಮ ತಡೆಗೆ ಅಧಿಕಾರಿಗಳು ಮುಂದಾಗಲೇಬೇಕು. ಈ ವಿಷಯದಲ್ಲಿ ಉದಾಸೀನ ಧೋರಣೆ ಸಹಿಸಲ್ಲ ಎಂದು ಎಚ್ಚರಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಶಾಸಕರಾದ ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಅಮರೇಶ್ ಕರಡಿ ಇತರರು ಇದ್ದರು.


ಪ್ರತಿ ಮೀಟಿಂಗ್‌ನಲ್ಲಿ ನಡೆಯುವಂತೆ ಇಂದಿನ ಕೆಡಿಪಿ ಸಭೆಯಲ್ಲೂ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ದರು. ಸಭೆಯಲ್ಲಿ ಎತ್ತರದ ಯಾರದಾದರೂ ಧ್ವನಿ ಕಿವಿಗೆ ಬೀಳುತ್ತಲೇ ಹೌಹಾರಿ ಕಣ್ಣು ಬಿಟ್ಟು, ನಿದ್ದೆ ಮಾಡೇ ಇಲ್ಲ ಎನ್ನುವಂತೆ ನಟಿಸುತ್ತಿದ್ದರು. ಇನ್ನೂ ಕೆಲವರು ಅದೇ ಮೊಬೈಲ್ ಟಚ್‌ನಲ್ಲಿ ತಲ್ಲೀನರಾಗಿದ್ದರು.

ಗದಗ ಜಿಲ್ಲೆಗೆ ಶುಭ ಶುಕ್ರವಾರ; ಒಂದೇ ದಿನ 530 ಜನ ಬಿಡುಗಡೆ; 195 ಜನರಿಗೆ ಸೋಂಕು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯ ಮಟ್ಟಿಗೆ ಇವತ್ತು ಶುಭದಿನ. ಕಳೆದ ಹಲವು ದಿನಗಳಿಂದ ಕೇವಲ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಆದರೆ ಸೋಂಕಿನಿಂದ ಗುಣಮುಖರಾಗುತ್ತಿದ್ದವರ ಸಂಖ್ಯೆ ಕಡಿಮೆ ಇತ್ತು. ಹೀಗಾಗಿ ಇವತ್ತು ಒಂದೇ ದಿನ 530 ಜನರು ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯ ಜನತೆ ನಿಟ್ಟಿಸಿರು ಬಿಡುವಂತಾಗಿದೆ. ಇದರಿಂದಾಗಿ ಇದುವರೆಗೂ 5871 ಜನ ಬಿಡುಗಡೆಯಾದಂತಾಗಿದೆ.

ಇವತ್ತು 195 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

195 ಜನರಿಗೆ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ 7310 ಕ್ಕೇರಿದೆ. 1335 ಜನ ಸಕ್ರಿಯ ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಶುಕ್ರವಾರದ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 104 ಕ್ಕೇರಿದೆ.

ಗದಗ-105, ಮುಂಡರಗಿ-21, ನರಗುಂದ-02, ರೋಣ-35, ಶಿರಹಟ್ಟಿ-26, ಹೊರ ಜಿಲ್ಲೆಯ 06 ಪ್ರಕರಣ ಸೇರಿದಂತೆ ಒಟ್ಟು 195 ಜನರಿಗೆ ಸೋಂಕು ದೃಢಪಟ್ಟಿದೆ.

ಕೊವಿಡ್-19 ಸೋಂಕು ದೃಢಪಟ್ಟ ಪ್ರಕರಣಗಳ ಪ್ರದೇಶಗಳು ಈ ರೀತಿ ಇವೆ…

ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ, ರಾಜೀವಗಾಂಧಿ ನಗರ, ಹುಡ್ಕೋ ಕಾಲೋನಿ, ಗೌಡರ ಓಣಿ, ಮಕಾನ ಗಲ್ಲಿ, ಜಿಮ್ಸ್ ಆಸ್ಪತ್ರೆ, ಜೆ.ಟಿ.ಕಾಲೇಜ ರಸ್ತೆ, ಗಂಗಿಮಡಿ, ಕುರಟ್ಟಿಪೇಟ, ತಾಜ ನಗರ, ಶಿವಾನಂದ ನಗರ, ಎ.ಪಿ.ಎಂ.ಸಿ, ಮಾನ್ವಿ ಚಾಳ, ಚೇತನಾ ಕ್ಯಾಂಟಿನ, ಕೆ.ಸಿ.ರಾಣಿ ರಸ್ತೆ, ರಾಮ ಮಂದಿರ ಹತ್ತಿರ, ವಿಭೂತಿ ಓಣಿ,

ಜೆ.ಟಿ.ಮಠದ ಹತ್ತಿರ, ಕೇಶವ ನಗರ, ಪಿ.ಎನ್.ಟಿ. ಕ್ವಾಟರ್ಸ್, ಶಿವಾಜಿ ನಗರ, ಹೊಸಪೇಟ ಚೌಕ, ಶಿವಾನಂದ ನಗರ, ವಿ.ಎನ್.ಟಿ. ರಸ್ತೆ, ಪಲ್ಲೇದ ಓಣಿ, ಕಳಸಾಪುರ ರಸ್ತೆ, ಮಂಜುನಾಥ ಶಾಲೆಯ ಹತ್ತಿರ, ಶಹಪುರ ಪೇಟ, ಶ್ರೀನಿವಾಸ ಭವನ ಹಿಂದುಗಡೆ, ನಂದೀಶ್ವರ ನಗರ, ರಂಗಪ್ಪಜ್ಜನ ಮಠ, ಎಸ್.ಬಿ.ನಗರ, ಅಮರೇಶ್ವರ ನಗರ, ಗಂಗಾಪುರ ಪೇಟ, ಆದರ್ಶ ನಗರ,

ಗದಗ ತಲೂಕಿನ ಮುಳಗುಂದ, ಬಿಂಕದಕಟ್ಟಿ, ಬೆನಕೊಪ್ಪ, ಹಾಳಕೇರಿ, ಚಿಂಚಲಿ, ಹೊಂಬಳ, ಅಡವಿಸೋಮಾಪುರ, ಕಣಗಿನಹಾಳ, ಸೊರಟೂರ, ನಾಗಾವಿ, ಮಲ್ಲಸಮುದ್ರ, ಹುಲಕೋಟಿ, ಚಿಕ್ಕಹಂದಿಗೋಳ, ಲಕ್ಕುಂಡಿ, ಕಣವಿ, ಹೊಸೂರ, ಅಂತೂರ-ಬೆಂತೂರ,  ಬಳಗಾನೂರ, ಕುರ್ತಕೋಟಿ, ಸಂಭಾಪುರ,  

ಮುಂಡರಗಿ ತಾಲೂಕಿನ ಮುರಡಿ ತಾಂಡಾ, ಹಮ್ಮಗಿ, ಹಿರೇವಡ್ಡಟ್ಟಿ, ಚಿಕ್ಕವಡ್ಡಟ್ಟಿ,

ನರಗುಂದ ತಾಲೂಕಿನ ಚಿಕ್ಕ ನರಗುಂದ ರೋಣ ಪಟ್ಟಣದ ಕೊಪ್ಪದರ ಓಣಿ, ಮಲ್ಲಮ್ಮ ದೇವಸ್ಥಾನದ ಹತ್ತಿರ, ಶಿವಾನಂದ ನಗರ,  ತಾಲೂಕು ಆಸ್ಪತ್ರೆ ಹತ್ತಿರ,

ರೋಣ ತಾಲೂಕಿನ ಮಾರನಬಸರಿ, ಹೊಳೆಆಲೂರ, ಅಬ್ಬಿಗೇರಿ, ಜಿಗಳೂರ, ರಾಜೂರ, ಹಾಳಕೇರಿ, ಮಸೂತಿ ಹತ್ತಿರ, ಹುನಗುಂಡಿ, ಹೊನ್ನಾಪುರ,  ಭೊಮ್ಮಸಾಗರ, ಸೂಡಿ, ಸವಡಿ, ಗಜೇಂದ್ರಗಡ ಪಟ್ಟಣದ ಭೂಮರೆಡ್ಡಿ ವೃತ್ತ, ಸಂಗನಾಳ ಪ್ಲಾಟ. 

ಶಿರಹಟ್ಟಿ ಪಟ್ಟಣದ ನೆಹರು ನಗರ, ವಿಜಯನಗರ, ಮಜ್ಜಗಿ ಓಣಿ, ಹನುಮಂತ ನಗರ, ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ, ಶಿಗ್ಲಿ, ಅಡರಳ್ಳಿ, ಮ್ಯಾಕಲಝರಿ, ಬನ್ನಿಕೊಪ್ಪ, ಹೊಸಳ್ಳಿ, ಗುಲಗಂಜಿಕೊಪ್ಪ, ಲಕ್ಷ್ಮೇಶ್ವರದ ಗಂಗಾಧರ ಓಣಿ, ಸೋಮೇಶ್ವರ ನಗರ, ಇಂದಿರಾನಗರ.

 

Need a quick and reliable Bangalore airport drop? Aishwarya Taxi ensures on-time service with professional drivers and comfortable vehicles. Trust us to make your airport journey safe, convenient, and stress-free.

An airport taxi is the best way to ensure a hassle-free journey to and from the airport. Arjun Cabs provides a reliable, affordable, and comfortable airport taxi service for travelers. Whether you’re traveling for business, leisure, or in a group, we have the perfect solution for you. Book your ride today and experience the convenience of a premium airport taxi service with Arjun Cabs!

ಪೊಲೀಸರ ಕಾರ್ಯಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಐವರ ಬಂಧನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ.

ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ ಬಂಗಾರಗುಂಡಿ, ವೀರೇಶ ಪ್ರಭಾಕರ ಪುಡೂರ, ವೀರೇಶ ಗೋವಿಂದಪ್ಪ ದ್ಯಾವನಕೊಂಡಿ ಹಾಗೂ ಗದಗ ನಗರದ ನಿವಾಸಿ ಶಿವಕುಮಾರ ಕಾಶಪ್ಪ ಬೆಟಗೇರಿ ಬಂಧಿತ ಆರೋಪಿಗಳು. ಈರಪ್ಪ ರಾಠೋಡ ಎಂಬುವರು ತಮ್ಮ ಮನೆಯಲ್ಲಿ ಮಾರಾಟ ಮತ್ತು ಗಾಂಜಾ ಬೆಳೆಯುತ್ತಿದ್ದರು ಎನ್ನುವ ಖಚಿತ ಮಾಹಿತಿ ಮೇರಿಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಬಂಧಿತ ಆರೋಪಿಗಳಿಂದ 500 ಗ್ರಾಂ ಗಾಂಜಾ ಹಾಗೂ 3 ಕೆ.ಜಿ ಹಸಿ ಗಾಂಜಾ ಮತ್ತು ಎರಡು ಬೈಕ್ ಸಹಿತ 2 ಲಕ್ಷ 85 ಸಾವಿರ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ.

ದಾಳಿ ವೇಳೆ ಪಿಎಸ್ಐ ಗುರುಶಾಂತ ದಾಶ್ಯಾಳ, ಸಿಬ್ಬಂದಿಗಳಾದ ಮಹೇಶ ಬಳ್ಳಾರಿ, ಸುರೇಶ ಮಂತಾ, ಹೆಚ್.ಎಲ್. ಭಜಂತ್ರಿ, ಸಂಗಮೇಶ ಹಲಬಾಗಿಲ, ಎಂ.ಎಚ್.ಅವಾರಿ, ಶ್ರೀಕಾಂತ ಜಂಗಣ್ಣವರ, ಎಸ್.ಎಸ್.ಭಜಂತ್ರಿ, ಚಂದ್ರು ಹಾದಿಮನಿ, ಜೆ.ಬಿ.ಪೂಜಾರ, ವಿರೇಶ ಪಾಟೀಲ ಇದ್ದರು.

ಗ್ರಾಮದೇವತೆಯನ್ನೂ ಬಿಡದ ಕಳ್ಳರು; ಲಕ್ಷಾಂತರ ರೂ ಚಿನ್ನಾಭರಣ ಲೂಟಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?
ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ.

ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ ದೇವಿಯ ಮೂರ್ತಿಯ 1 ಲಕ್ಷ 14 ಸಾವಿರದ 500 ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕದಿಯಲಾಗಿದೆ.

ಬಂಗಾರದ ಗುಂಡಗಡಗಿ, ಬೋರಮಳ, ನೆಕ್‌ಲೇಸ್, ಬೆಳ್ಳಿಯ ಕಾಲುಚೈನು, ಕಿರೀಟ, ಕಾಲ್ಗೆಜ್ಜೆ ಇನ್ನೂ ಮುಂತಾದ ದೇವಿಯ ಆಭರಣಗಳನ್ನು ಕಳುವಾಗಿವೆ.

ಗ್ರಾಮದ ಗುಂಡಪ್ಪ ಜಂತ್ಲಿಯವರು ನೀಡಿದ ದೂರಿನ ಆಧಾರದಲ್ಲಿ ಮುಂಡರಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿಗೆ ನೋಟಿಸ್ ನೀಡ್ತಿವಿ; ಪ್ರಮಿಳಾ ನಾಯ್ಡು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಹೇಳಿದರು.

ಕೊಪ್ಪಳದಲ್ಲಿ ಆಯೋಗ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು.

ಬೆಂಗಳೂರಿನಲ್ಲಿ ನಟಿ ಸಂಯುಕ್ತ ಹೆಗಡೆ ಅವರು ಹೂಫ್ ಡಾನ್ಸ್ ಮಾಡುವಾಗ ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ಆಕ್ಷೇಪಿಸಿ, ಕಿರಿಕಿರಿ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಜೊತೆಗೆ ಕವಿತಾ ರೆಡ್ಡಿ ಸಂಯುಕ್ತಾ ಮತ್ತವರ ಸ್ನೇಹಿತರ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ಈ ಬಗ್ಗೆ ‌ಈಗಾಗಲೇ ಅಲ್ಲಿನ ಡಿಸಿಪಿ ಜೋಶಿ ಅವರಿಗೆ ಮಾತಾಡಿದ್ದೇನೆ. ನಟಿ ಸಂಯುಕ್ತರಿಗೂ ಕಾಲ್ ಮಾಡಿ ಮಾತನಾಡಿದ್ದೇನೆ. ಕವಿತಾ‌ ರೆಡ್ಡಿ ಅವರಿಗೆ ನೊಟೀಸ್ ನೀಡಿ, ನಮ್ಮ ಕಚೇರಿಕೆ ಕರೆಸ್ತಿವಿ ಎಂದರು.

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ ಕುಳಿತು ಬಿಟ್ಟಿದ್ದಾರೆ.
ಸಿಬ್ಬಂದಿ, ನಾಗರಿಕರಿಗೇನೋ ಇದು ಆಶ್ಚರ್ಯದ ವಿಷಯ ಇರಬಹುದು. ಆದರೆ, ಪಟ್ಟಂತ ರಾತ್ರೋರಾತ್ರಿ ಈ ‘ಅನಾಮಧೇಯ’ರನ್ನು ಕರೆಸಿ ಮುಂಜಾನೆ ಹೊತ್ತಿಗೆ ಆಯುಕ್ತರ ಕುರ್ಚಿ ಮೇಲೆ ಕೂಡಿಸಿದ ಶಕ್ತಿ ಯಾವುದು ಎಂಬುದು ಗುಟ್ಟೇನೂ ಅಲ್ಲ.

ಆ ಶಕ್ತಿಯ ನೆರಳಿನಂತಿರುವ ಒಬ್ಬ ಲೋಕಲ್ ಬಿಜೆಪಿ ನಾಯಕನಿಗೆ ಮಾತ್ರ ಇದು ‘ಸಹಜ’ ವ್ಯವಹಾರ.
ಇಲ್ಲಿ ಬಂದು ಆಯುಕ್ತರ ಕುರ್ಚಿಯಲ್ಲಿ ಕುಳಿತ ವ್ಯಕ್ತಿ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸಿದ್ದಾರೆಯೆ? ಎಂಬ ಪ್ರಶ್ನೆ ಈಗ ನಗರಸಭೆ ಸಿಬ್ಬಂದಿ ಮತ್ತು ಜನರನ್ನು ಕಾಡತೊಡಗಿದೆ. ಅದಕ್ಕೂ ಉತ್ತರವಿದೆ. ಅವರೂ ಸರ್ಕಾರದ ಆದೇಶ ಹಿಡಿದುಕೊಂಡೇ ಬಂದು ಇಲ್ಲಿ ಕುಳಿತಿದ್ದಾರೆ. ನಿನ್ನೆ ಸೆಪ್ಟೆಂಬರ್ 10 ರಂದು ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ರಮೇಶ್ ಜಾಧವರು, ಈಗ ಗದಗ ನಗರಸಭೆ ಆಯುಕ್ತರು!

ಇಲ್ಲಿವರೆಗೆ ಆಯುಕ್ತರಾಗಿದ್ದ ಮನ್ಸೂರ್ ಅಲಿಯವರಿಗೆ ಯಾವ ಹುದ್ದೆ ನೀಡಲಾಗಿದೆ? ಅವರಿಗೆ ವರ್ಗಾವಣೆಯ ಆದೇಶ ನೀಡಲಾಗಿದೆಯೆ ಎಂಬ ಪ್ರಶ್ನೆಗಳು ಎದ್ದಿದ್ದು, ಇದು ಅಂಧಾದುಂಧಿ ಟ್ರಾನ್ಸ್‌ಫರ್ ದಂಧೆಯನ್ನು ಬಯಲು ಮಾಡುತ್ತಿದೆ.

ಈ ಗುದುಮುರಗಿ ಜುಲೈನಲ್ಲೇ ಶುರುವಾಗಿತ್ತು. ಪುರಸಭೆ ಮುಖ್ಯಾಧಿಕಾರಿ ಹುದ್ದೆ ಮಟ್ಟದ ಅಧಿಕಾರಿ, ವಿಜಯಪುರ ಕಾರ್ಪೋರೇಷನ್ ನ ಕಂದಾಯ ಇಲಾಖೆ ಅಧಿಕಾರಿ ರಮೇಶ್ ಜಾಧವ್ ಅವರನ್ನು ಇಲ್ಲಿನ ನಗರಸಭೆ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆಗ ಈ ಬಗ್ಗೆ ಸಾರ್ವಜನಿಕರಿಂದ ತಕರಾರು ಬಂದ ಕೂಡಲೇ ತಾತ್ಕಾಲಿಕವಾಗಿ ಅದನ್ನು ತಡೆ ಹಿಡಿಯಲಾಗಿತ್ತು.
ಆದರೆ ಈ ವರ್ಗಾವಣೆ ಮಾಡಿಸಿ ಚೊಲೊತನ್ಯಂಗ ರೊಕ್ಕ ಮಾಡಿದ್ದ (ಬಕೆಟ್ ಹಿಡಿದಿದ್ದ ಎಂದು ಓದಿಕೊಳ್ಳಬಹುದು) ಸ್ಥಳೀಯ ಬಿಜೆಪಿ ಮುಖಂಡನೊಬ್ಬನಿಗೆ ಇದು ಕಸಿವಿಸಿ ಉಂಟು ಮಾಡಿತ್ತು.

ಆಗ ಸಾಮಾಜಿಕ ಜಾಲತಾಣದಲ್ಲಿ, ‘ವರ್ಗಾವಣೆ ರದ್ದು’ ಎಂಬ ಪೋಸ್ಟಿಗೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ‘ ತಾತ್ಕಾಲಿಕ ’ ಎಂದಿದ್ದರು. ಅಂದರೆ ವರ್ಗಾವಣೆ ತಡೆ ಆಗಿದ್ದು ಸಚಿವರಿಗೆ ಇಷ್ಟ ವಿರಲಿಲ್ಲ.

ಈಗ ರಮೇಶ ಜಾಧವ್ ಆಯುಕ್ತರಾಗಿರುವುದನ್ನು ನೋಡಿದರೆ, ಸಚಿವರು ತಮ್ಮ ಕಮಿಟ್‌ಮೆಂಟ್ ಪಾಲಿಸಿದ್ದಾರೆ. ಬಕೆಟ್ ಹಿಡಿದರು ಎನ್ನಲಾದ ಸ್ಥಳೀಯ ಬಿಜೆಪಿ ಮುಖಂಡ ಖುಷ್ ಖುಷಿಯಲ್ಲಿದ್ದಾರೆ.
ಇದೆಲ್ಲ ಹಾಳಾಗಲಿ, ಪ್ರವಾಹ, ಅತಿವೃಷ್ಟಿ ಪರಿಹಾರಕ್ಕೆ ಒಂದೂ ರೂಪಾಯಿಯನ್ನೂ ರಾಜ್ಯ ಸರ್ಕಾರದಿಂದ ತರಲಾಗದ ಸಚಿವರು ಗುರುವಾರ ಆಯುಕ್ತರ ನೇಮಕಾತಿ ಆದೇಶ ಹೊರಬೀಳಲು ತುಂಬ ‘ಬೆವರು’ ಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ ಜಿಮ್ಸ್ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರ ಗುರುವಾರ-ಶುಕ್ರವಾರ ಇಡೀ ರಾತ್ರಿ ಕತ್ತಲಲ್ಲಿ ಮುಳುಗಿತ್ತು.

ತಾಲೂಕಿನ ಮಲ್ಲಸಮುದ್ರ ಹತ್ತಿರದ ಮೊರಾರ್ಜಿ ವಸತಿ ಶಾಲೆಯಲ್ಲಿ ಸೋಂಕಿತರು ಇಡೀ ರಾತ್ರಿ ಪರದಾಡಿದ್ದಾರೆ. ವಿದ್ಯುತ್ ಇಲ್ಲದೇ ಫ್ಯಾನ್ ಬಂದ್ ಆದ ಕಾರಣ ಸೊಳ್ಳೆ ಕಾಟದಿಂದ ಸೋಂಕಿತರು ನಿದ್ದೆಗೆಟ್ಟಿದ್ದಾರೆ. ಮಹಿಳಾ ರೋಗಿಗಳು ಆತಂಕದಲ್ಲಿ ಮುದುಡಿಕೊಂಡು ಕಾಲ ತಳ್ಳಿದ್ದಾರೆ.

ನೂರಾರು ಸೋಂಕಿತರು ಇರುವ ಈ ಕೇಂದ್ರದಲ್ಲಿ ಕತ್ತಲಲ್ಲಿ ಶೌಚಾಲಯಕ್ಕೆ ಹೋಗಲೂ ಆಗದೇ, ಹೋದರೂ ಶೌಚಾಲಯ ಸರಿಯಾಗಿ ಸಿಗದೇ ಸೋಂಕಿತರು ನರಕಯಾತನೆ ಅನುಭವಿಸಿದ್ದಾರೆ. ಕತ್ತಲಲ್ಲಿ ಔಷಧಿ ತೆಗೆದುಕೊಳ್ಳಲೂ ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿಯೆಲ್ಲ ಜಾಗರಣೆಯಲ್ಲೇ ಕಳೆದ ಜನರು ಆರೋಗ್ಯ ಇಲಾಖೆ ಮೇಲೆ ಹಿಡಿಶಾಪ ಹಾಕಿದರು.

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ ಎಲ್ಲ ಅನುಭವಗಳ ಮೇಲೆ ಕೃಷಿ ಖಾತೆ ನಿಭಾಯಿಸುತ್ತಿದ್ದೇನೆ. ಚಂದ್ರಶೇಖರ ಕೋಡಿಹಳ್ಳಿ ಅವರ ಬಗ್ಗೆ ಅಪಾರ ಗೌರವ ಇತ್ತು. ಅವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರನ್ನು ಕರೆದುಕೊಂಡು ಬಂದು ಕೃಷಿ ಮಂತ್ರಿ ಮಾಡಿದರೆ ಮಾಧ್ಯಮಗಳಿಗೆ ಫೋಸ್ ಕೊಡ್ತಾರೆ ಎಂಬ ಹೇಳಿಕೆ ಹಾಗೂ ಕೃಷಿ ಪದವಿ ಸೀಟ್ ಮಾರಾಟದ ಹೇಳಿಕೆಯನ್ನು ಕೋಡಿಹಳ್ಳಿ ಚಂದ್ರಶೇಖರ ಪರಾಮರ್ಶೆ ಮಾಡಿಕೊಳ್ಳಲಿ. ಇಷ್ಟೊಂದು ಕೀಳುಮಟ್ಟದಲ್ಲಿ ಅವರು ಮಾತನಾಡಿರುವುದು ಸರಿಯಲ್ಲ ಎಂದರು.

ಡ್ರಗ್ಸ್ ಚಟುವಟಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಶತಸಿದ್ಧ. ಗಾಂಜಾ ಬೆಳೆಯುವುದು, ಅಷ್ಟೇ ಏಕೆ ತಂಬಾಕು ಬೆಳೆಯುವುದೂ ಸಹ ನನ್ನ ಪ್ರಕಾರ ತಪ್ಪು. ಚಿತ್ರರಂಗದಲ್ಲಿ ಇರುವವರು ಗಾಜಿನ ಮನೆಯಲ್ಲಿ ಇರುತ್ತೇವೆ. ನಟರು ರೋಲ್ ಮಾಡಲ್ ಆಗಿರಬೇಕು.
ಎಲ್ಲರೂ ಪವಿತ್ರರು ಎಂದು ಹೇಳಲು ಆಗೋದಿಲ್ಲ. ರಾಜಕಾರಣಿಗಳು ಇರಬಹುದು, ಚಿತ್ರನಟರು ಇರಬಹುದು ತಪ್ಪು ಮಾಡಿದ್ದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.

ಭೂ ಸುಧಾರಣೆ ಕಾಯ್ದೆಯಿಂದ ಸಾಕಷ್ಟು ಒಳ್ಳೆಯ ಉಪಯೋಗವೂ ಆಗಿದೆ. ಊ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯಬೇಕು. ವರ್ಷದಲ್ಲಿ ಸುಮಾರು ನೂರು ದಿನ ಅಧಿವೇಶನ ನಡೆದು ಚರ್ಚೆಯಾಗಬೇಕು ಎಂಬ ಆಸೆ ನಮಗೂ ಇದೆ. ಆದರೆ ಕೋವಿಡ್-19 ಕಾರಣದಿಂದ ಕರೆಯಲಾಗಿಲ್ಲ. ಎಲ್ಲವನ್ನು ವಿರೋಧಿಸುವುದೇ ವಿರೋಧ ಪಕ್ಷದ ಕೆಲಸ. ಅವರ ಕೆಲಸವನ್ನು ಅವರು ಮಾಡ್ತಿದಾರೆ ಎಂದು ಅಭಿಪ್ರಾಯಪಟ್ಟರು.

error: Content is protected !!