Home Blog Page 23

ಪ್ರವಾಸಕ್ಕೆ ಹೋಗಲು ಗಂಡ ಅನುಮತಿ ಕೊಟ್ಟಿಲ್ಲ ಎಂದು ಗೃಹಿಣಿ ಆತ್ಮಹತ್ಯೆ

0

ಮೈಸೂರು: ಪ್ರವಾಸಕ್ಕೆ ಹೋಗುವ ವಿಚಾರವಾಗಿ ಗಂಡನೊಂದಿಗೆ ನಡೆದ ಜಗಳದಿಂದ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.

25 ವರ್ಷಗಳ ಹಿಂದೆ ರಂಗನಾಥ್ ಅವರನ್ನು ವಿವಾಹವಾದ ಸಂಧ್ಯಾ, ಇಬ್ಬರು ಮಕ್ಕಳ ತಾಯಿ. ಸದ್ಯ ಪುತ್ರಿ ವಿದೇಶದಲ್ಲಿ ವ್ಯಾಸಂಗ  ಮಾಡುತ್ತಿದ್ದು ಪತಿ ಹಾಗೂ ಮಗನೊಂದಿಗೆ ಸಂಧ್ಯಾ ವಾಸವಾಗಿದ್ದರು. ಕುಟುಂಬಸ್ಥರ ಪ್ರಕಾರ ನಿನ್ನೆ ರಾತ್ರಿ ಜಗಳವಾದ ನಂತರ ಗಂಡ ಹೊರಗೆ ಹೋದಾಗ, ಸಂಧ್ಯಾ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.

ಆದರೆ ಸಹೋದರ ಗುರುಮೂರ್ತಿ, ಇದು ಆತ್ಮಹತ್ಯೆ ಅಲ್ಲವೆಂದು ಅನುಮಾನ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ್ದಾರೆ. ಪ್ರಕರಣವನ್ನು ಸರಸ್ವತಿಪುರಂ ಪೊಲೀಸ್ ಠಾಣೆದಲ್ಲಿ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

 

ಬೆಂಗಳೂರಿನಲ್ಲಿ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ: ಎರಡು ದಿನಗಳ ಕ್ರೀಡಾ ಸಂಭ್ರಮಕ್ಕೆ ಸಜ್ಜು

0

ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಫೆಬ್ರವರಿ 21 ಮತ್ತು 22ರಂದು ನಗರದ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಲಿವೆ.

“ಲೀಡರ್ಸ್ ಪ್ಲೇ.. ಫ್ರೆಂಡ್ಶಿಫ್ ವಿನ್” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಮೊದಲ ಆವೃತ್ತಿಯ ಟೂರ್ನಿಯ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅನಾವರಣಗೊಳಿಸಿದ್ದಾರೆ. ಟೂರ್ನಿಯಲ್ಲಿ ಜನಪ್ರತಿನಿಧಿಗಳು,

ಐಎಎಸ್-ಐಪಿಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ವೈದ್ಯರು, ಸ್ಯಾಂಡಲ್ವುಡ್ ತಾರೆಯರು ಹಾಗೂ ಪತ್ರಕರ್ತರು ಕ್ರೀಡಾ ಮನೋಭಾವದಿಂದ ಭಾಗವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಪವರ್ ಪ್ಲೇ ವಿಭಾಗದಲ್ಲಿ ಕಣಕ್ಕಿಳಿಯಲಿದ್ದಾರೆ.

ಟೂರ್ನಿಯಲ್ಲಿ ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್, ಇನ್ಸ್ಪೈರ್ ಚಾಲೆಂಜರ್ಸ್, ದಿ ಕೆಫೆ ದಿವ್ಯಂ, ಎಟಿಎಸ್ ಅಟ್ಯಾಕರ್ಸ್, ಪ್ರೋ ವಿನ್ ಪ್ಯಾಂಥರ್ಸ್, ಎಸ್ಥೆಟಿಕ್ ಅಟ್ಯಾಕರ್ಸ್, ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ಹಾಗೂ ಕೆಜಿಎಫ್ ಸ್ಮಾಷರ್ಸ್ ತಂಡಗಳು ಸ್ಪರ್ಧಿಸಲಿವೆ.

ಲೀಗ್ ಮಾದರಿಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಎ ಮತ್ತು ಬಿ ಗುಂಪುಗಳಾಗಿ ತಂಡಗಳನ್ನು ವಿಭಜಿಸಲಾಗಿದೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ.

ಒಟ್ಟು 128 ಆಟಗಾರರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಕಳೆದ ಒಂದು ತಿಂಗಳಿನಿಂದ ಎಲ್ಲಾ ತಂಡಗಳು ಕಠಿಣ ಅಭ್ಯಾಸದಲ್ಲಿ ನಿರತರಾಗಿವೆ. ವಿನೂತನ ಮಾದರಿಯ ಈ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಬೆಂಗಳೂರು ಸಾಕ್ಷಿಯಾಗಲಿದೆ.

“ಇದು ದೇಶದ್ರೋಹಿ ಕೆಲಸ”: ಶಿವಾಜಿ ಜಯಂತಿ ಕಲ್ಲುತೂರಾಟ ಪ್ರಕರಣಕ್ಕೆ ಪ್ರಮೋದ್ ಮುತಾಲಿಕ್ ಆಕ್ರೋಶ

0

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,

ಮಸೀದಿ ಎದುರಿಗೆ ಬಂದ ಮೆರವಣಿಗೆಯ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆಯಲಾಗಿದೆ ಎಂದು ಆರೋಪಿಸಿದರು. ಇದು ಇಡೀ ಹಿಂದುಗಳ ಮೇಲೆ ನಡೆದ ದೌರ್ಜನ್ಯ. ಇಂತಹ ಕೃತ್ಯವನ್ನು ನಾನು ಖಂಡಿಸುತ್ತೇನೆ. ಇದು ದೇಶದ್ರೋಹಿ ಕೆಲಸ ಎಂದು ಹೇಳಿದರು.

ಈ ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದ ಮುತಾಲಿಕ್, ಜಲದಲು ಎಸ್‌ಪಿ ಅವರ ಮೇಲೂ ಕಲ್ಲು ಬಿದ್ದಿದೆ. ಬೇರೆ ಯಾರ ಮೇಲಾದರೂ ಬಿದ್ದಿದ್ದರೆ ಘಟನೆ ನಡೆದೇ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದೀತು ಎಂದು ಟೀಕಿಸಿದರು.

ಇಂತಹ ಘಟನೆಗಳಿಗೆ ಕಾರಣವಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮಾಜದಲ್ಲಿ ಅಶಾಂತಿ ಉಂಟುಮಾಡುವವರನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಎಂದರು.

ನಾವು ಭಾರತ ತಂಡವನ್ನು ಸೋಲಿಸಿದ್ದೇವೆ: ಮಾಜಿ ಆಟಗಾರರಿಗೆ ಪಾಕ್ ಆಟಗಾರನ ತಿರುಗೇಟು!

0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಸೋಲು ಮುಂದುವರೆದ ಹಿನ್ನೆಲೆ, ಪಾಕ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿವೆ. ಮಾಜಿ ಕ್ರಿಕೆಟಿಗರಾದ ಬಾಸಿತ್ ಅಲಿ, ಶಾಹಿದ್ ಅಫ್ರಿದಿ ಮತ್ತು ಮೊಹಮ್ಮದ್ ಯೂಸುಫ್ ಸೇರಿದಂತೆ ಹಲವರು ಹಿರಿಯ ಆಟಗಾರರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳಿಗೆ ಇದೀಗ ಪಾಕಿಸ್ತಾನ್ ಆಲ್‌ರೌಂಡರ್ ಶಾದಾಬ್ ಖಾನ್ ತಿರುಗೇಟು ನೀಡಿದ್ದಾರೆ.

ನಮೀಬಿಯಾ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾದಾಬ್ ಖಾನ್, “ನೀವು ಶ್ರೇಷ್ಠ ಆಟಗಾರರಾಗಿರಬಹುದು. ಆದರೆ ನಿಮ್ಮ ಕಾಲದಲ್ಲಿ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ ಎಂಬುದು ನೆನಪಿರಲಿ. ನಾವು ಭಾರತ ತಂಡವನ್ನು ಸೋಲಿಸಿದ್ದೇವೆ. ಈ ವಿಷಯವೂ ಗಮನದಲ್ಲಿರಬೇಕು,” ಎಂದು ಹೇಳಿದ್ದಾರೆ.

2021ರ ICC Men’s T20 World Cup ಟೂರ್ನಿಯಲ್ಲಿ ಪಾಕಿಸ್ತಾನ್ ತಂಡವು ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕ ಏಕೈಕ ಜಯವೂ ಇದಾಗಿದೆ. ಆ ಪಂದ್ಯದಲ್ಲಿ ಶಾದಾಬ್ ಖಾನ್ ಕೂಡ ತಂಡದ ಭಾಗವಾಗಿದ್ದರು. ಈ ಹಿನ್ನೆಲೆಯಲ್ಲೇ ಟೀಕಿಸಿದ ಮಾಜಿ ಆಟಗಾರರಿಗೆ ಶಾದಾಬ್ ಖಾನ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಮಂದಿ ಬಂಧನ

0

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸ್ ಇಲಾಖೆ 8 ಮಂದಿಯನ್ನು ಬಂಧಿಸಿದೆ.

ಜಿಲ್ಲಾ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾತನಾಡಿ, ವಿಡಿಯೋ ಆಧಾರದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾತ್ರಿ 10:06ಕ್ಕೆ ಕಲ್ಲು ಎಸೆಯಲ್ಪಟ್ಟಿದ್ದು, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 7 ಮಂದಿ ವಿರುದ್ಧ ಕೇಸ್ ದಾಖಲಾಗಿದೆ.

ರಾತ್ರಿ 9:30ಕ್ಕೆ ಮಸೀದಿಯಲ್ಲಿ ಪ್ರಾರ್ಥನೆ ಮುಗಿದ ಬಳಿಕ ಕೆಲವರು ಅಲ್ಲೇ ಉಳಿದಿದ್ದರು. ಅವರಲ್ಲಿ ತನ್ವೀರ್ ಎಂಬಾತ ಉದ್ದೇಶಪೂರ್ವಕವಾಗಿ ಕಲ್ಲು ಎಸೆದಿದ್ದಾನೆ. ಕಲ್ಲು ಎಸ್‌ಪಿ ಹಾಗೂ ಇಬ್ಬರು ಕಾನ್‌ಸ್ಟೇಬಲ್‌ ಮೇಲೆ ಬಿದ್ದರೂ ಹೆಲ್ಮೆಟ್ ಧರಿಸಿದ್ದರಿಂದ ಗಾಯ ತಪ್ಪಿದೆ ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಎರಡೂ ಗುಂಪಿನ ಹಿರಿಯರು ಸಹಕಾರ ನೀಡಿದ್ದಾರೆ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ಶಂಕಿತ ಉಗ್ರ ಜುನೈದ್ ಅಹ್ಮದ್ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ: NIA ಘೋಷಣೆ

0

ಬೆಂಗಳೂರು: ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ (LET) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಘೋಷಿಸಿದೆ.

ಎನ್ಐಎ ಕಳೆದ ಮೂರು ವರ್ಷಗಳಿಂದ ದೇಶ-ವಿದೇಶಗಳಲ್ಲಿ ಜುನೈದ್ ಅಹ್ಮದ್ ಹುಡುಕಾಟ ನಡೆಸುತ್ತಿದೆ. 2023 ರಲ್ಲಿ ಸಿಸಿಬಿ ಪೊಲೀಸರು ಭೇದಿಸಿದ ಉಗ್ರ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಜುನೈದ್ ಅಹ್ಮದ್, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದನು.

ಜೈಲಿನಲ್ಲಿ ಬಂಧಿತನಾಗಿದ್ದ ಜುನೈದ್, ಟಿ. ನಾಸೀರ್ ಪ್ರೇರಣೆಯಿಂದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿ, ಜೈಲಿನಿಂದ ಬಿಡುಗಡೆಯಾದ ಬಳಿಕ ದುಬೈ ಮೂಲಕ ತನ್ನ ಸಹಚರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ ಆರೋಪ ಇದೆ.

ನಗರದ ಮೆಜೆಸ್ಟಿಕ್ ಪ್ರತಿ ಕಂಬಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಉಗ್ರನ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿ ಪೋಸ್ಟರ್‌ಗಳು ಹಾಕಲಾಗಿದೆ. ಸಿಟಿ ಮತ್ತು ತಾಲ್ಲೂಕು ಮಟ್ಟದಲ್ಲಿ ಎನ್ಐಎ ಅಧಿಕಾರಿಗಳು ವಾಂಟೆಡ್ ಪೋಸ್ಟರ್ ಅಂಟಿಸಿ ಸಾರ್ವಜನಿಕ ಸಹಕಾರ ಕೋರುತ್ತಿದ್ದಾರೆ.

ಎನ್ಐಎ ಸೂಚಿಸಿದ್ದು, ಉಗ್ರನ ಬಗ್ಗೆ ಯಾವುದೇ ಉಪಯುಕ್ತ ಮಾಹಿತಿ ದೊರೆತರೆ ತಕ್ಷಣ ಸಂಪರ್ಕಿಸಬೇಕು, ಮತ್ತು ನೀಡಲಾದ ಮಾಹಿತಿ ಚೌಕಟ್ಟಿನಲ್ಲಿ ಅಪರಾಧ ತಡೆಗೆ ಸಹಾಯ ಮಾಡಲಿದೆ.

ನೀಟ್ ಆಕಾಂಕ್ಷಿಗೆ ಮಾದಕದ್ರವ್ಯ ನೀಡಿ ಅತ್ಯಾಚಾರ: ಮಗು ಹುಟ್ಟುತ್ತಿದ್ದಂತೆ ಪತಿ ಪರಾರಿ

0

ಲಕ್ನೋ: 2023ರಲ್ಲಿ ನೀಟ್ ಆಕಾಂಕ್ಷಿಯ ಮೇಲೆ ಮಾದಕದ್ರವ್ಯ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಇದೀಗ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಗರ್ಭಿಣಿಯಾಗಿರುವುದು ತಿಳಿದ ಬಳಿಕ ಆರೋಪಿಯು ದೇವಸ್ಥಾನದಲ್ಲಿ ಮದುವೆಯಾಗಿದ್ದರೂ, ಮಗಳು ಜನಿಸಿದ ತಕ್ಷಣ ಪತ್ನಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ನೀಟ್ ಪರೀಕ್ಷೆಗಾಗಿ ಲಕ್ನೋಗೆ ಬಂದಿದ್ದ ಯುವತಿ ಗೋಮತಿ ನಗರದಲ್ಲಿ ವಾಸವಿದ್ದು, ತರಬೇತಿ ಕೇಂದ್ರಕ್ಕೆ ಹಾಜರಾಗುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕ ಆದಿತ್ಯ ಯಾದವ್ ಪರಿಚಯವಾಗಿ, ಅದು ಪ್ರೀತಿಗೆ ತಿರುಗಿತು. ಒಂದು ದಿನ ಆತ ಹೋಟೆಲ್ ಕೋಣೆಗೆ ಕರೆದೊಯ್ದು ಚಹಾದಲ್ಲಿ ಮಾದಕದ್ರವ್ಯ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿದ್ದರು.

ಗರ್ಭದ ವಿಚಾರ ತಿಳಿದ ಬಳಿಕ ಆದಿತ್ಯ ಯಾದವ್ ಮದುವೆಯಾಗುವುದಾಗಿ ಹೇಳಿ, ಚಂದ್ರಿಕಾ ದೇವಿ ದೇವಸ್ಥಾನದಲ್ಲಿ ತನ್ನ ಇಬ್ಬರು ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗಿದ್ದಾನೆ. ಆದರೆ ಪತ್ನಿಯನ್ನು ತನ್ನ ಕುಟುಂಬಕ್ಕೆ ಪರಿಚಯಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ಜನಿಸಿದ ನಂತರ ಆರೋಪಿಯು ಪತ್ನಿಯನ್ನು ಬಾಡಿಗೆ ಮನೆಯಲ್ಲಿ ಇರಿಸಿ ಮೂರು ದಿನ ಗಂಡನಂತೆ ಇದ್ದು, ಔಷಧಿ ತರಲು ಹೋಗುತ್ತೇನೆಂದು ಹೇಳಿ ಮನೆ ಬಿಟ್ಟಿದ್ದಾನೆ. ನಂತರ ಫೋನ್ ನಂಬರ್ ಬದಲಾಯಿಸಿ ಸಂಪರ್ಕ ಕಡಿತಗೊಳಿಸಿದ್ದಾನೆ. ಸ್ನೇಹಿತರ ಮೂಲಕ ಸಂಪರ್ಕಿಸಿದಾಗ “ನೀನು ಮತ್ತು ನಿನ್ನ ಮಗಳು ಬದುಕಲು ಅರ್ಹರಲ್ಲ” ಎಂದು ಹೇಳಿದ್ದಾನೆಂದು ಮಹಿಳೆ ಆರೋಪಿಸಿದ್ದಾರೆ.

ಈ ಕುರಿತು ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Gadag Breaking: ಆಕಸ್ಮಿಕವಾಗಿ ಜೋಡೆತ್ತುಗಳ ಸಾವು, ರೈತನ ಆಕ್ರಂದನ

0

ಗದಗ: ಆಕಸ್ಮಿಕವಾಗಿ ಜೋಡೆತ್ತುಗಳು ಸಾವನ್ನಪ್ಪಿದ ದುರ್ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಮೇನಹಳ್ಳಿ ಗ್ರಾಮದ ವೆಂಕಟೇಶ ಬಾಗಲಿ ಅವರಿಗೆ ಸೇರಿದ ಎರಡು ಎತ್ತುಗಳನ್ನು ಮನೆಯ ಪಕ್ಕದಲ್ಲೇ ಕಟ್ಟಲಾಗಿತ್ತು. ಸುಮಾರು ₹1 ಲಕ್ಷ 20 ಸಾವಿರ ಖರ್ಚು ಮಾಡಿ ಇತ್ತೀಚೆಗೆ ಎತ್ತುಗಳನ್ನು ಖರೀದಿಸಿದ್ದರು.

ಏಕಾಏಕಿ ಎರಡು ಎತ್ತುಗಳು ಸಾವನ್ನಪ್ಪಿರುವುದು ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮನೆಯ ಮಕ್ಕಳಂತೆ ಸಾಕಿದ್ದ ಎತ್ತುಗಳ ಸಾವು ಕಂಡು ವೆಂಕಟೇಶ ಹಾಗೂ ಕುಟುಂಬದವರು ಗೋಳಾಡುತ್ತಿದ್ದಾರೆ. ಜೀವನೋಪಾಯಕ್ಕೆ ಅವಲಂಬನೆಯಾಗಿದ್ದ ಜೋಡೆತ್ತುಗಳ ಸಾವು ರೈತನಿಗೆ ಭಾರೀ ಆರ್ಥಿಕ ನಷ್ಟ ಉಂಟುಮಾಡಿದೆ.

ಸರ್ಕಾರ ತಕ್ಷಣ ಪರಿಹಾರ ನೀಡಿ ನೆರವಿಗೆ ಬರಬೇಕು ಎಂದು ರೈತ ವೆಂಕಟೇಶ ಒತ್ತಾಯಿಸಿದ್ದಾರೆ. ಘಟನೆಯ ಕುರಿತು ಸ್ಥಳೀಯ ಅಧಿಕಾರಿಗಳು ಪರಿಶೀಲನೆ ನಡೆಸುವ ನಿರೀಕ್ಷೆಯಿದೆ.

ಲಿಂಗಾಯತ–ಗಾಣಿಗ ಪರಸ್ಪರ ಪ್ರತ್ಯೇಕವಲ್ಲ, ಗಾಣಿಗವು ಲಿಂಗಾಯತ ಒಳಗಿನ ವಿಶಿಷ್ಟ ವೃತ್ತಿಜಾತಿ: ಹೈಕೋರ್ಟ್

0

ಬೆಂಗಳೂರು: ಲಿಂಗಾಯತ ಮತ್ತು ಗಾಣಿಗ ಎಂಬುದು ಕಾನೂನಿನಲ್ಲಿ ಪರಸ್ಪರ ಪ್ರತ್ಯೇಕ ಗುರುತಾಗಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದರೆ ವಿಶಾಲವಾದ ಲಿಂಗಾಯತ ಗುಂಪಿನೊಳಗೆ ಗಾಣಿಗವು ಒಂದು ವಿಭಿನ್ನ ವೃತ್ತಿಪರ ಜಾತಿಯಾಗಿ ಅಸ್ತಿತ್ವದಲ್ಲಿರಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಅಭಿಪ್ರಾಯವನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೀಡಿದ್ದ ಜಾತಿ ಪ್ರಮಾಣ ಪತ್ರದ ಅರ್ಜಿಯನ್ನು ಪೊಲೀಸ್ ಕಾನ್ಸ್ಟೇಬಲ್ ಟಿ.ಎನ್. ಜಗದೀಶ್ ವಜಾಗೊಳಿಸುವಾಗ ಪ್ರಕಟಿಸಿದೆ.

ನ್ಯಾಯಾಲಯವು ಹೇಳಿರುವಂತೆ, ಪೂರ್ವಜರ ದಾಖಲೆಗಳಲ್ಲಿಲಿಂಗಾಯತಎಂದು ವಿವರಿಸಲಾದ ವ್ಯಕ್ತಿಯು, ಪುರಾವೆಗಳ ಆಧಾರದ ಮೇಲೆ, ಅದರೊಳಗೆ ಗಾಣಿಗ ಗುರುತನ್ನು ಸ್ಥಾಪಿಸಬಹುದು. ಲಿಂಗಾಯತ ಮತ್ತು ಗಾಣಿಗರು ಪರಸ್ಪರ ಪ್ರತ್ಯೇಕತೆ ಹೊಂದಿಲ್ಲ, ಆದರೆ ಗಾಣಿಗವು ಲಿಂಗಾಯತ ಸಮುದಾಯದೊಳಗಿನ ವಿಶಿಷ್ಟ ವೃತ್ತಿಪರ ಜಾತಿಯಾಗಿದೆ.

ಒಬ್ಬ ವ್ಯಕ್ತಿ ಧಾರ್ಮಿಕ ಸಂಬಂಧದಿಂದ ಲಿಂಗಾಯತವಾಗುತ್ತಾನೆ ಹಾಗೂ ಜಾತಿ ವರ್ಗೀಕರಣದಿಂದ ಗಾಣಿಗರಾಗಬಹುದು. ಆದರೆ ಗಾಣಿಗರು ಎಲ್ಲ ಲಿಂಗಾಯತರಿಗೆ ಅನಿವಾರ್ಯವಾಗಿ ಅನ್ವಯಿಸುವುದಿಲ್ಲ. ಗುರುತುಗಳ ಸಹಬಾಳ್ವೆ ಕಾನೂನಿನ ಅನುಮತಿಗಳ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯವು, ಪ್ರತಿವಾದಿ ರಾಜಕುಮಾರ್ ವೈ. ಬಿಳಗಿ ಜಾತಿ ಪ್ರಮಾಣಪತ್ರದ ಆಧಾರದ ಮೇಲೆ ಪಿಎಸ್ಐ ಆಗಿ ಸಾರ್ವಜನಿಕ ಉದ್ಯೋಗದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ, ಅವರ ನೇಮಕಾತಿಯ ಸಿಂಧುತ್ವವನ್ನು ಒಪ್ಪಿಕೊಂಡಿದೆ.

ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ: ಕಾರಣವೇನು?

0

ತುಮಕೂರು: ತುರುವೇಕೆರೆ ಬಿಇಒ ಕಚೇರಿಯ ಎಫ್ಡಿಎ ಜಯಲಕ್ಷ್ಮೀ ಅವರ ಹತ್ಯೆ ಪ್ರಕರಣ ತುಮಕೂರು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಸಹೋದರಿ ಅನುಸೂಯಾ ಮತ್ತು ಸಾಕು ಮಗ ಚಂದ್ರಶೇಖರ್ ಬಂಧಿತರಾಗಿದ್ದಾರೆ.

ಮೊದಲಿಗೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತಿಳಿಸಲಾಗಿತ್ತು. ಆದರೆ ಶ್ರೀನಿವಾಸ್ ಎಂಬಾತ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ತಿರುವು ಪಡೆದುಕೊಂಡಿತು. ಮರಣೋತ್ತರ ಪರೀಕ್ಷೆಯ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ.

ಜಯಲಕ್ಷ್ಮೀ ಗಂಡನನ್ನು ಕಳೆದುಕೊಂಡ ಬಳಿಕ ಶ್ರೀನಿವಾಸ್ ಜೊತೆ ಕಳೆದ 20 ವರ್ಷಗಳಿಂದ ವಾಸಿಸುತ್ತಿದ್ದರು. ಮಕ್ಕಳಿಲ್ಲದ ಕಾರಣ ಸಹೋದರಿಯ ಮಗನನ್ನು ದತ್ತು ಪಡೆದಿದ್ದರು. ಇತ್ತೀಚೆಗೆ ತುರುವೇಕೆರೆಯಲ್ಲಿ ಹೊಸ ಮನೆಗೆ ಹೋಗುವ ನಿರ್ಧಾರ ಮಾಡಿದ್ದು, ಬಾಡಿಗೆ ಮನೆಗೆ ಮುಂಗಡ ಹಣ ನೀಡಿದ್ದರು. ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರೋಪಿಗಳು ಕೊಲೆಗೈದಿರಬಹುದೆಂದು ಶಂಕಿಸಲಾಗಿದೆ.

ಕೊಲೆ ಹಿಂದೆ ಆರ್ಥಿಕ ಲಾಭ ಮತ್ತು ಅನುಕಂಪದ ಆಧಾರಿತ ಸರ್ಕಾರಿ ನೌಕರಿ ಪಡೆಯುವ ಉದ್ದೇಶ ಇರಬಹುದೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!