ವಿಜಯಸಾಕ್ಷಿ ಸುದ್ದಿ, ಗದಗ: ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸರ್ಕಾರಿ ಪ್ರೌಢಶಾಲೆ ಸಿದ್ದಲಿಂಗ ನಗರದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಗುರುಮಾತೆಯರಿಗೆ ಡಿ. 30ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ಕಟವಟೆ ಹಾಗೂ ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಗೆ ಶಾಲಾ ಸಭಾಂಗಣದಲ್ಲಿ ಆಯೋಜಿಸಿರುವ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಂಜುಳಾ ಸಾಮ್ರಾಣಿ, ಸಬೀಯಾ ಕುಷ್ಟಗಿ ಅವರನ್ನು ಹೃತ್ಪೂರ್ವಕವಾಗಿ ಗೌರವಿಸಿ ಬೀಳ್ಕೊಡಲಾಗುವುದು. ಮಂಜುಳಾ ಅವರು 20 ವರ್ಷಗಳಿಂದ ಹಾಗೂ ಕುಷ್ಟಗಿ ಗುರುಮಾತೆಯರು 5 ವರ್ಷಗಳಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಈ ಹೃದಯಸ್ಪರ್ಶಿ ಬೀಳ್ಕೊಡುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾ.ಶಿ. ಇಲಾಖೆಯ ಉಪನಿರ್ದೇಶಕರಾದ ಆರ್.ಎಸ್. ಬುರುಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ದತ್ತು ಉಸ್ತುವಾರಿಗಳಾದ ಡಾ. ಬಸವರಾಜ ಧಾರವಾಡ, ನಗರಸಭೆ ಸದಸ್ಯರಾದ ವಿದ್ಯಾವತಿ ಗಡಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವೀಂದ್ರ ಶೆಟ್ಟಪ್ಪನವರ, ಗದಗ ತಾಲೂಕಾ ಅಕ್ಷರ ದಾಸೋಹ ಅಧಿಕಾರಿಗಳಾದ ಶಂಕರ್ ಹಡಗಲಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಗದಗ ತಾಲೂಕಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಪ್ಪ ನಾರಹಳ್ಳಿ ಮುಂತಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವ್ವ ಸೇವಾ ಟ್ರಸ್ಟ್ನವರು ಕೊಡಮಾಡಿದ 2026ನೇ ಸಾಲಿನ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

