Home Blog Page 255

ಗ್ರಾಮ ಪಂಚಾಯತ್ ಚುನಾವಣೆ ತಕ್ಷಣ ಘೋಷಿಸಿ; ರಾಜ್ಯ ಸರ್ಕಾರಕ್ಕೆ ಆರ್.ಬಿ. ಪಾಟೀಲ ಆಗ್ರಹ

0

ಹಾವೇರಿ:- ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಅವಧಿ ಮುಗಿಯುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಘೋಷಿಸಬೇಕು. ಇಲ್ಲವೇ ಚುನಾವಣೆ ನಡೆಯುವವರೆಗೆ ಈಗಿರುವ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಅವಧಿಯನ್ನು ಮುಂದುವರೆಸಿ ಆದೇಶ ಹೊರಡಿಸಬೇಕು ಎಂದು ಹಾನಗಲ್ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಬಿ. ಪಾಟೀಲ ಆಗ್ರಹಿಸಿದರು.

ಬುಧವಾರ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಗಳು ಇಲ್ಲದೆ ರಾಜ್ಯದಲ್ಲಿ ಪ್ರಜಾಪ್ರತಿನಿಧಿ ವ್ಯವಸ್ಥೆ ಸಂಪೂರ್ಣ ಕುಸಿತದ ಹಾದಿಯಲ್ಲಿದೆ. ವರ್ಷಗಳ ಕಾಲ ತಾಪಂ–ಜಿಪಂ ಚುನಾವಣೆ ನಡೆಸದೆ ನಿರ್ಲಕ್ಷ್ಯ ತೋರಿರುವ ರಾಜ್ಯ ಸರ್ಕಾರ, ಇದೀಗ ಗ್ರಾಮ ಪಂಚಾಯತಿಗಳನ್ನೂ ಅದೇ ಸ್ಥಿತಿಗೆ ತಳ್ಳಲು ಹೊರಟಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಟೀಕಿಸಿದರು.

ತಾಪಂ ಹಾಗೂ ಜಿಪಂ ಆಡಳಿತ ಇಲ್ಲದ ಪರಿಣಾಮವಾಗಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ವ್ಯವಸ್ಥೆಯೇ ದುರ್ಬಲವಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಾಯವಾಗಿದೆ. ಕೇವಲ ಅಧಿಕಾರಿಗಳ ಮೂಲಕ ಜನಪರ ಆಡಳಿತ ಸಾಧ್ಯವಿಲ್ಲ. ಜನಪ್ರತಿನಿಧಿಗಳ ಮಾರ್ಗದರ್ಶನವಿಲ್ಲದೆ ನಡೆಯುವ ಆಡಳಿತವನ್ನು ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಲಾರದು ಎಂದು ಹೇಳಿದರು.

ಗ್ರಾಮ ಪಂಚಾಯತಿಗಳ ಚುನಾವಣೆ ಘೋಷಿಸದೇ, ಅಥವಾ ಈಗಿರುವ ಸದಸ್ಯರು ಹಾಗೂ ಅಧ್ಯಕ್ಷರ ಅವಧಿಯನ್ನು ಮುಂದುವರೆಸದಿದ್ದರೆ, ಜೆಡಿಎಸ್ ಪಕ್ಷ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಆರ್.ಬಿ. ಪಾಟೀಲ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

 

ಸಿಗ್ನಲ್ ತಪ್ಪಿಸಲು ಹೋಗಿ ದುರಂತ; ಶಾಲಾ ಬಸ್‌ಗೆ ಕಾರು ಡಿಕ್ಕಿ, ತಪ್ಪಿದ ದುರಂತ!

0

ಬೆಂಗಳೂರು:- ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ಗೆ ಕಾರೊಂದು ಡಿಕ್ಕಿಯಾದ ಘಟನೆ ಜರುಗಿದೆ.

ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ ನುಗ್ಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್‍ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಜಖಂ ಆಗಿದೆ. ಅಲ್ಲದೇ ಬಸ್‍ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲಂಬಿಯಾ–ವೆನೆಜುವೆಲಾ ಗಡಿ ಬಳಿ ಭೀಕರ ವಿಮಾನ ಪತನ: ಸಂಸದ ಸೇರಿ 15 ಮಂದಿ ದುರ್ಮರಣ

0

ಬೊಗೋಟಾ: ಬುಧವಾರ ಕೊಲಂಬಿಯಾ–ವೆನೆಜುವೆಲಾ ಗಡಿ ಸಮೀಪ ಭೀಕರ ವಿಮಾನ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 13 ಪ್ರಯಾಣಿಕರು ಹಾಗೂ 2 ಸಿಬ್ಬಂದಿ ಸೇರಿ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಅಧಿಕೃತವಾಗಿ ದೃಢಪಡಿಸಿದೆ.

ಸರ್ಕಾರಿ ವಿಮಾನಯಾನ ಸಂಸ್ಥೆ SATENA ನಿರ್ವಹಿಸುತ್ತಿದ್ದ Beechcraft 1900 ಟ್ವಿನ್ ಪ್ರೊಪೆಲ್ಲರ್ ವಿಮಾನವು ಗಡಿ ನಗರ ಕುಕುಟಾದಿಂದ ಹೊರಟು, ಸಮೀಪದ ಓಕಾನಾ ನಗರದಲ್ಲಿ ಲ್ಯಾಂಡ್ ಆಗುವಾಗ ನಿಯಂತ್ರಣ ತಪ್ಪಿ ಪತನಗೊಂಡಿದೆ.

ಅಪಘಾತದ ಬಳಿಕ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ಕೊಲಂಬಿಯಾ ಚೇಂಬರ್ ಆಫ್ ಡೆಪ್ಯೂಟೀಸ್‌ನ ಸದಸ್ಯರಾದ ಸಂಸದ ಡಿಯೊಜಿನೆಸ್ ಕ್ವಿಂಟೆರೊ, ಜೊತೆಗೆ ಮುಂಬರುವ ಚುನಾವಣೆಗೆ ಅಭ್ಯರ್ಥಿಯಾಗಿದ್ದ ಕಾರ್ಲೋಸ್ ಸಾಲ್ಸೆಡೋ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಸಂಭವಿಸಿದ ಪ್ರದೇಶವು ಪರ್ವತಮಯವಾಗಿದ್ದು, ಹವಾಮಾನವೂ ಅತಿಯಾಗಿ ಬದಲಾಗುವ ಸ್ವಭಾವ ಹೊಂದಿದೆ. ಅಲ್ಲದೆ, ಈ ಭಾಗವು ELN ಗೆರಿಲ್ಲಾ ಸಂಘಟನೆ ನಿಯಂತ್ರಣದಲ್ಲಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಗಳು ಎದುರಾದವು.

ವಿಮಾನ ಅವಶೇಷ ಪತ್ತೆ ಹಾಗೂ ಮೃತದೇಹಗಳ ವಾಪಸ್ಸಿಗಾಗಿ ಕೊಲಂಬಿಯಾ ಸರ್ಕಾರ ವಾಯುಪಡೆಯನ್ನು ನಿಯೋಜಿಸಿದ್ದು, ದುರಂತದ ನಿಖರ ಕಾರಣ ಪತ್ತೆ ಹಚ್ಚಲು ಉನ್ನತ ಮಟ್ಟದ ತನಿಖೆ ಆರಂಭಿಸಲಾಗಿದೆ.

ಥೈಲ್ಯಾಂಡ್‌ನಿಂದ ಡ್ರಗ್ಸ್, ಡಾರ್ಕ್‌ವೆಬ್ ಮೂಲಕ ಮಾರಾಟ: 10 ಮಂದಿ ಆರೋಪಿಗಳು ಅರೆಸ್ಟ್!

0

ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿ ಕೇರಳ ಮೂಲದ ಏಳು ಮಂದಿ ಸೇರಿ ಒಟ್ಟು ಹತ್ತು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಬಂಧಿತರು ಎನ್ನಲಾಗಿದೆ. ಇವರಲ್ಲಿ ಇಬ್ಬರು ಕರ್ನಾಟಕ, ಒಬ್ಬ ಆಂಧ್ರಪ್ರದೇಶ ಹಾಗೂ ಉಳಿದ ಏಳು ಮಂದಿ ಕೇರಳ ಮೂಲದವರಾಗಿದ್ದಾರೆ.

ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ‘ಟೀಂ ಕಲ್ಕಿ’ ಎಂಬ ಡಾರ್ಕ್‌ವೆಬ್ ವೆಬ್‌ಸೈಟ್ ಮೂಲಕ ಆರ್ಡರ್ ನೀಡಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಥೈಲ್ಯಾಂಡ್‌ನಲ್ಲಿರುವ ಕೇರಳ ಮೂಲದ ವ್ಯಕ್ತಿಯೊಬ್ಬ ಬೆಂಗಳೂರಿಗೆ ಡ್ರಗ್ಸ್ ಕಳುಹಿಸುತ್ತಿದ್ದರೆ, ಇಲ್ಲಿಗೆ ತಲುಪಿದ ಬಳಿಕ ಯಲಹಂಕ, ಹೆಬ್ಬಾಳ, ಕೋರಮಂಗಲ, ಬೆಳ್ಳಂದೂರು ಸೇರಿದಂತೆ ವಿವಿಧ ಪ್ರದೇಶಗಳನ್ನು ಹಂಚಿಕೊಂಡು ಆರೋಪಿಗಳು ಡ್ರಗ್ಸ್ ವಿತರಿಸುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐಟಿ–ಬಿಟಿ ಉದ್ಯೋಗಿಗಳು ಹಾಗೂ ಪಾರ್ಟಿಗಳಿಗೆ ಬರುವವರೇ ಇವರ ಪ್ರಮುಖ ಗುರಿಯಾಗಿದ್ದು, ಪ್ರದೇಶ ಹಂಚಿಕೆಯ ವಿಚಾರವಾಗಿ ಪೆಡ್ಲರ್‌ಗಳ ನಡುವೆ ಆಗಾಗ ಜಗಳಗಳು ನಡೆದಿದ್ದು, ಕೆಲವೊಮ್ಮೆ ಮಾರಣಾಂತಿಕ ಹಲ್ಲೆ ಹಾಗೂ ಕೊಲೆ ಹಂತದವರೆಗೂ ಸಂಘರ್ಷ ತಲುಪಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 10 ಕೆಜಿ ಗಾಂಜಾ, 500 ಎಲ್‌ಎಸ್‌ಡಿ ಸ್ಟ್ರಿಪ್ಸ್, ಎರಡು ಕಾರುಗಳು ಹಾಗೂ 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಮುಖ್ಯ ಆರೋಪಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆತನಿಗಾಗಿ ತೀವ್ರ ಶೋಧ ಮುಂದುವರಿದಿದೆ.

ಬಿಗ್ ಬಾಸ್ ಸ್ಪರ್ಧಿಗೆ ಸಿನಿಮಾದಲ್ಲಿ ಅವಕಾಶ: ‘ತಾಯಿ ಪಾತ್ರಕ್ಕೆ ಒಪ್ಪಿಕೊಂಡಿದ್ದೇನೆ’ ಎಂದ ಮಲ್ಲಮ್ಮ

ಬಿಗ್ ಬಾಸ್ ಕನ್ನಡ ಸೀಸನ್ 12 (BBK 12) ಸ್ಪರ್ಧಿಯಾಗಿದ್ದ ಮಲ್ಲಮ್ಮಗೆ ಇದೀಗ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಮಲ್ಲಮ್ಮ, ‘ವಿನಾಶಕಾಲೆ’ ಎಂಬ ಸಿನಿಮಾದಲ್ಲಿ ತಾಯಿ ಪಾತ್ರಕ್ಕೆ ಒಪ್ಪಿಕೊಂಡಿದ್ದೇನೆ. ನಟನೆಯನ್ನು ಕಲಿತುಕೊಂಡು ಉತ್ತಮವಾಗಿ ಅಭಿನಯಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸಿನಿಮಾ ಜೊತೆಗೆ ಧಾರಾವಾಹಿಗಳಲ್ಲೂ ನಟಿಸುವ ಅವಕಾಶ ದೊರೆತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದ ನಂತರ ತಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ಆಗಿದೆ ಎಂದು ಮಲ್ಲಮ್ಮ ಹೇಳಿದ್ದಾರೆ. “ಚಿಕ್ಕ ಮಕ್ಕಳು ಹಿಡಿದು ದೊಡ್ಡವರವರೆಗೆ ಎಲ್ಲರೂ ಗುರುತಿಸುತ್ತಿದ್ದಾರೆ. ಜನ ಪ್ರೀತಿಯಿಂದ ಮಾತನಾಡಿಸುತ್ತಾರೆ. ಇದು ನನಗೆ ಬಹಳ ಸಂತೋಷ ಕೊಡುತ್ತದೆ” ಎಂದು ಹೇಳಿದರು.

ಈ ನಡುವೆ ಬಿಗ್ ಬಾಸ್ ಮನೆಯಲ್ಲಿ ಮಲ್ಲಮ್ಮರನ್ನು ‘ತಾಯಿ’ ಎಂದು ಕರೆಯುತ್ತಿದ್ದ ಸ್ಪರ್ಧಿ ಧ್ರುವಂತ್ ಕುರಿತು ಕೂಡ ಅವರು ಪ್ರತಿಕ್ರಿಯಿಸಿದ್ದಾರೆ. “ಬಿಗ್ ಬಾಸ್ ಮುಗಿದು ಇಷ್ಟು ದಿನವಾದರೂ ಧ್ರುವಂತ್ ನನ್ನನ್ನು ಸಂಪರ್ಕಿಸಿಲ್ಲ. ನಂಬರ್ ಕೂಡ ಕೊಟ್ಟಿಲ್ಲ. ಇದರಿಂದ ಸ್ವಲ್ಪ ಬೇಸರವಾಗಿದೆ” ಎಂದು ಮಲ್ಲಮ್ಮ ಹೇಳಿದ್ದಾರೆ.

ಚಿತ್ರವನ್ನು ನಿರ್ದೇಶಕ ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಕರಿಬಸಪ್ಪ, ಡಾಗ್ ಸತೀಶ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಭಾಗಿಯಾಗಿದ್ದಾರೆ. ನೈಜ ಘಟನೆಯಾಧಾರಿತ ಕಥೆಯನ್ನು ‘ವಿನಾಶ ಕಾಲೆ’ ಸಿನಿಮಾ ತೆರೆ ಮೇಲೆ ತರುತ್ತಿದೆ ಎಂಬುದು ವಿಶೇಷ.

ಮೈಸೂರು| ಗುಜರಿಯಲ್ಲಿ ಮಧ್ಯರಾತ್ರಿ ಆಕಸ್ಮಿಕ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ!

0

ಮೈಸೂರು: ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿರುವ ಗುಜರಿಯಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಪದಾರ್ಥಗಳು ಸಂಪೂರ್ಣವಾಗಿ ಸುಟ್ಟು ನಾಶವಾದ ಘಟನೆ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಪ್ರಾರಂಭವಾದ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ಗುಜರಿಯನ್ನು ವ್ಯಾಪಿಸಿ ಒಳಗಿದ್ದ ವಸ್ತುಗಳನ್ನು ಭಸ್ಮಗೊಳಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶ್ರಮಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೂ ಬೆಂಕಿಯ ತೀವ್ರತೆಗೆ ಗುಜರಿಯಲ್ಲಿದ್ದ ಹೆಚ್ಚಿನ ಪದಾರ್ಥಗಳು ಸಂಪೂರ್ಣವಾಗಿ ನಾಶವಾಗಿವೆ.

ಈ ಗುಜರಿ ನಾಸಿರ್ ಎಂಬವರಿಗೆ ಸೇರಿದ್ದು, ಗುಜರಿಯ ಸಮೀಪದಲ್ಲೇ ವಾಸದ ಮನೆಗಳಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಇತರೆ ಅನಾಹುತಗಳು ಸಂಭವಿಸಿಲ್ಲ. ಘಟನೆಯ ಬಳಿಕ ಸ್ಥಳೀಯರು ಇಂತಹ ಗುಜರಿ ಘಟಕಗಳಿಗೆ ಅನುಮತಿ ನೀಡುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

ಆದಾಯಕ್ಕಿಂತ ಜನರ ಆರೋಗ್ಯ ಮುಖ್ಯ! ಬಿಎಂಟಿಸಿ–ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಂಬಾಕು ಜಾಹಿರಾತು ವಿರುದ್ಧ ಭಾರೀ ಆಕ್ರೋಶ

0

ಬೆಂಗಳೂರು: ಗುಟ್ಕಾ ಹಾಗೂ ತಂಬಾಕು ಉತ್ಪನ್ನಗಳ ಜಾಹಿರಾತುಗಳ ವಿರುದ್ಧ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹಿರಾತು ಪೋಸ್ಟರ್‌ಗಳನ್ನು ಕನ್ನಡ ಸಂಘಟನೆಗಳ ಕಾರ್ಯಕರ್ತರು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆರಂಭವಾದ ಈ ಚಳವಳಿ ಇದೀಗ ರಾಜಧಾನಿ ಬೆಂಗಳೂರುಗೂ ವಿಸ್ತರಿಸಿದೆ.

ಮೆಜೆಸ್ಟಿಕ್ ಹಾಗೂ ಕೆಆರ್ ಪುರಂ ಬಸ್ ನಿಲ್ದಾಣಗಳಲ್ಲಿ ಕಾರ್ಯಕರ್ತರು ಬಸ್‌ಗಳ ಮೇಲಿನ ವಿಮಲ್, ಆರ್‌ಎಂಡಿ ಸೇರಿದಂತೆ ವಿವಿಧ ಗುಟ್ಕಾ ಉತ್ಪನ್ನಗಳ ಜಾಹಿರಾತು ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ. ರೂಪೇಶ್ ರಾಜಣ್ಣ ನೇತೃತ್ವದ ಯುವ ಕರ್ನಾಟಕ ತಂಡದ ಸದಸ್ಯರು ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ, ಸ್ಟಿಕ್ಕರ್ ಹಾಗೂ ಪೋಸ್ಟರ್‌ಗಳನ್ನು ತೆರವುಗೊಳಿಸಿದರು. ಈ ವೇಳೆ ಸಾರ್ವಜನಿಕರಿಂದ ಸಹ ಬೆಂಬಲ ವ್ಯಕ್ತವಾಗಿದೆ.

ಕಾರ್ಯಕರ್ತರು ಮಾತನಾಡಿ, “ತಕ್ಷಣವೇ ಎಲ್ಲಾ ಬಸ್‌ಗಳಿಂದ ತಂಬಾಕು ಜಾಹಿರಾತುಗಳನ್ನು ತೆಗೆಯಬೇಕು. ಇಲ್ಲದಿದ್ದರೆ ಬಸ್‌ಗಳನ್ನು ನಿಲ್ಲಿಸಿ ಮಸಿ ಬಳಿಯುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಜಾಹಿರಾತುಗಳಿಂದ ಸುಮಾರು 60 ಕೋಟಿ ರೂ ಆದಾಯ ಬರುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು “ಕೇಂದ್ರ ಸರ್ಕಾರವೇ ತಂಬಾಕು ನಿಷೇಧ ಮಾಡಬೇಕು” ಎಂದು ಹೇಳಿಕೆ ನೀಡಿರುವುದಕ್ಕೆ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. “ಆದಾಯಕ್ಕಿಂತ ಜನರ ಆರೋಗ್ಯ ಮುಖ್ಯ. ಸರ್ಕಾರ ಮೊಂಡುತನ ತೋರಿಸಬಾರದು” ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ–ಧಾರವಾಡದಲ್ಲಿ ಆರಂಭವಾದ ಗುಟ್ಕಾ ವಿರೋಧಿ ಚಳವಳಿ ಇದೀಗ ರಾಜ್ಯಾದ್ಯಂತ ವ್ಯಾಪಿಸುತ್ತಿದ್ದು, ಸಂಘಟನೆಗಳ ಜೊತೆಗೆ ಸಾಮಾನ್ಯ ನಾಗರಿಕರೂ ಕೂಡ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಜನ ನಾಯಗನ್’ಗೆ ಸೆನ್ಸಾರ್ ಶಾಕ್: ಕೋರ್ಟ್ ಕೇಸ್ ಹಿಂಪಡೆಯಲು ನಿರ್ಧಾರ, ಬಿಡುಗಡೆ ಮತ್ತಷ್ಟು ವಿಳಂಬ?

ವಿಜಯ್ ಅಭಿಮಾನಿಗಳ ಬಹುಕಾಲದ ನಿರೀಕ್ಷೆಯಾಗಿದ್ದ ‘ಜನ ನಾಯಗನ್’ ಸಿನಿಮಾ ಇದೀಗ ಗಂಭೀರ ಸಂಕಷ್ಟದಲ್ಲಿ ಸಿಲುಕಿದೆ. ಜನವರಿ 9ಕ್ಕೆ ರಿಲೀಸ್ ಆಗಬೇಕಿದ್ದ ಸಿನಿಮಾ, ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಇನ್ನೂ ಬಿಡುಗಡೆಯಾಗಿಲ್ಲ. ಇದರೊಂದಿಗೆ, ಈಗ ಚಿತ್ರ ತಂಡವೇ ಕೋರ್ಟ್ ಕೇಸ್ ಹಿಂಪಡೆಯಲು ಮುಂದಾಗಿದೆ ಎಂಬ ವರದಿ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸೆನ್ಸಾರ್ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೆವಿಎನ್ ಸಂಸ್ಥೆ ಸ್ಥಳೀಯ ಕೋರ್ಟ್‌ನಿಂದ ಹಿಡಿದು ಸುಪ್ರೀಂಕೋರ್ಟ್‌ವರೆಗೆ ಮೊರೆ ಹೋಗಿತ್ತು. ಆದರೆ, ಯಾವುದೇ ಕೋರ್ಟ್‌ನಿಂದಲೂ ಸಕಾರಾತ್ಮಕ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ, ಇದೀಗ ಹೊಸ ಮಾರ್ಗ ಹುಡುಕಲು ತಂಡ ನಿರ್ಧರಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಚಿತ್ರವನ್ನು ಪುನರ್ವಿಮರ್ಶಾ ಸಮಿತಿಗೆ ಕಳುಹಿಸಿ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಮಾಪಕರು ಮುಂದಾಗಿದ್ದಾರೆ. ತಮಿಳುನಾಡು ಸೆನ್ಸಾರ್ ಮಂಡಳಿ ಚಿತ್ರದ ಕೆಲವು ದೃಶ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಅದೇ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

ಈ ಚಿತ್ರದ ಬಜೆಟ್ ಸುಮಾರು 500 ಕೋಟಿ ರೂಪಾಯಿ ಎಂಬುದೇ ಮತ್ತೊಂದು ಚರ್ಚೆಯ ವಿಷಯ. ಇಷ್ಟೊಂದು ದೊಡ್ಡ ಮೊತ್ತ ಹೂಡಿಕೆಯಾದ ಸಿನಿಮಾ ಇನ್ನೂ ಬಿಡುಗಡೆಯಾಗದೆ ಉಳಿದಿರುವುದು ನಿರ್ಮಾಪಕರಿಗೆ ಭಾರಿ ಹೊರೆ ತಂದಿದೆ.

ಮತ್ತೊಂದು ಮಹತ್ವದ ಅಂಶವೆಂದರೆ, ‘ಜನ ನಾಯಗನ್’ ವಿಜಯ್ ಅವರ ಕೊನೆಯ ಸಿನಿಮಾ ಆಗಲಿದೆ ಎಂಬ ಮಾಹಿತಿ. ಚಿತ್ರದ ಬಳಿಕ ಅವರು ರಾಜಕೀಯ ಪ್ರವೇಶಿಸುವುದಾಗಿ ಈಗಾಗಲೇ ಸುಳಿವು ನೀಡಿದ್ದಾರೆ. ಈ ಕಾರಣದಿಂದಲೇ ಈ ಸಿನಿಮಾಗೆ ಅಭಿಮಾನಿಗಳಲ್ಲಿ ಭಾರೀ ಹೈಪ್ ಇತ್ತು.

ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ಮತ್ತು ಪೂಜಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಎಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಇದೀಗ ಎಲ್ಲರ ಕಣ್ಣುಗಳು ಸೆನ್ಸಾರ್ ಮಂಡಳಿ ಹಾಗೂ ಪುನರ್ವಿಮರ್ಶಾ ಸಮಿತಿಯ ತೀರ್ಮಾನಕ್ಕೆ ನೆಟ್ಟಿವೆ.

ರಸ್ತೆಯಲ್ಲೇ ಸ್ಟಂಟ್! ಸನ್‌ರೂಫ್ ತೆರೆದು ಕಾರು ಓಡಿಸಿದ ಚಾಲಕನಿಗೆ ಭಾರೀ ದಂಡ!

0

ಬೆಂಗಳೂರು ಗ್ರಾಮಾಂತರ: ಹೆದ್ದಾರಿಯಲ್ಲಿ ಕಾರಿನ ಸನ್‌ರೂಫ್ ಓಪನ್ ಮಾಡಿಕೊಂಡು ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ ಹೊಸಕೋಟೆ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸಕೋಟೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಕಾರಿನ ಸನ್‌ರೂಫ್ ತೆರೆದು ಅದರೊಳಗೆ ಮಕ್ಕಳನ್ನು ನಿಲ್ಲಿಸಿಕೊಂಡು ಸಾಗುತ್ತಿದ್ದ ದೃಶ್ಯ ಸಂಚಾರಿ ಪೊಲೀಸರ ಗಮನಕ್ಕೆ ಬಂದಿದೆ. ಸಾರ್ವಜನಿಕರ ಜೀವ ಮತ್ತು ಮಕ್ಕಳ ಸುರಕ್ಷತೆಗೆ ಭಾರೀ ಅಪಾಯ ಉಂಟುಮಾಡುವ ರೀತಿಯ ಚಾಲನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣವೇ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ಸಂಚಾರಿ ಪೊಲೀಸರು, ಚಾಲಕನ ವಿರುದ್ಧ ನಿಯಮ ಉಲ್ಲಂಘನೆಯಡಿ ದಂಡ ವಿಧಿಸಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಪಾಯಕಾರಿ ಚಾಲನೆಗಳು ಗಂಭೀರ ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೊಸಕೋಟೆ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮದುವೆ ಗಾಸಿಪ್ ನಡುವೆಯೇ ಗುಡ್ ನ್ಯೂಸ್: ಮತ್ತೆ ಒಂದಾದ ರಶ್ಮಿಕಾ–ವಿಜಯ್ ಜೋಡಿ, ‘ರಣಬಾಲಿ’ ಅನೌನ್ಸ್!

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದ್ದು, ಫೆಬ್ರವರಿ 26ರಂದು ವಿವಾಹ ದಿನಾಂಕ ನಿಗದಿಯಾಗಿದೆ ಎನ್ನಲಾಗಿದೆ. ಮದುವೆ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಮಧ್ಯೆ, ಈ ಸ್ಟಾರ್ ಜೋಡಿ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಈ ಹಿಂದೆ ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಹಿಟ್ ಜೋಡಿಯಾಗಿ ಗುರುತಿಸಿಕೊಂಡಿದ್ದ ವಿಜಯ್–ರಶ್ಮಿಕಾ ಇದೀಗ ಮತ್ತೆ ಹೊಸ ಸಿನಿಮಾದಲ್ಲಿ ಒಂದಾಗುತ್ತಿದ್ದಾರೆ. ಈ ಸಿನಿಮಾಕ್ಕೆ ‘ರಣಬಾಲಿ’ (Ranabaali) ಎಂದು ಶೀರ್ಷಿಕೆ ಇಡಲಾಗಿದ್ದು, ಗಣರಾಜ್ಯೋತ್ಸವದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಇದು ವಿಜಯ್ ದೇವರಕೊಂಡ ಅವರ 14ನೇ ಸಿನಿಮಾ ಆಗಿದೆ.

‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಈ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ವಿಜಯ್ ದೇವರಕೊಂಡ ಅವರು ‘ರಣಬಾಲಿ’ ಎಂಬ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಶ್ಮಿಕಾ ಮಂದಣ್ಣ ಅವರಿಗೆ ‘ಜಯಮ್ಮ’ ಎಂಬ ಪಾತ್ರ ನೀಡಲಾಗಿದೆ.

ಐತಿಹಾಸಿಕ ಹಿನ್ನೆಲೆಯ ಈ ಸಿನಿಮಾದಲ್ಲಿ, ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬ್ರಿಟಿಷರ ಹಿಂಸಾಚಾರ ಮತ್ತು ಹತ್ಯಾಕಾಂಡದ ಕಥೆಯನ್ನು ತೆರೆ ಮೇಲೆ ತರುವ ಪ್ರಯತ್ನ ಮಾಡಲಾಗಿದೆ. ಬ್ರಿಟಿಷರ ವಿರುದ್ಧ ತಿರುಗಿಬಿದ್ದ ಯುವಕನಾಗಿ ವಿಜಯ್ ದೇವರಕೊಂಡ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಅಜಯ್–ಅತುಲ್ ಸಂಗೀತ ನೀಡುತ್ತಿದ್ದು, ರಾಹುಲ್ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬರಲಿದೆ.

error: Content is protected !!