Home Blog Page 257

ವಿಜಯಪುರ| ಭೀಕರ ಅಗ್ನಿ ಅವಘಡ; ಕೃಷ್ಣಾ ಹೋಟೆಲ್ ಸುಟ್ಟು ಭಸ್ಮ!

0

ವಿಜಯಪುರ: ನಗರದ ಬಿಎಲ್‌ಡಿಇ ರಸ್ತೆಯಲ್ಲಿರುವ ಕೃಷ್ಣಾ ಹೋಟೆಲ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ನೋಡ ನೋಡುತ್ತಿದ್ದಂತೆ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಒಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದ ವೇಳೆ ಹೋಟೆಲ್‌ನ ಅಡುಗೆ ಅನಿಲ ಸಿಲಿಂಡರ್‌ಗಳು ಸ್ಪೋಟಗೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ತಕ್ಷಣ ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಈ ಅಗ್ನಿ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ. ಪ್ರಕರಣವು ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಇರೋದಿಲ್ಲ ಕರೆಂಟ್‌; ಎಲ್ಲೆಲ್ಲಿ?

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ.

66/11 ರೆಮೋ ವಿದ್ಯುತ್‌ ಕೇಂದ್ರದ ಬಾಪೂಜಿ ನಗರ, ಕವಿತಾ ಲೇಔಟ್, ರಂಗನಾಥ ಕಾಲೋನಿ, ಬ್ಯಾಟರಾಯನಪುರ ಐಯ್ಯಣ್ಣಶೆಟ್ಟಿ ಲೇಔಟ್, ಗಣಪತಿನಗರ, ಪ್ರೈಡ್ ಅಪಾರ್ಟ್‌ಮೆಂಟ್, ದೀಪಾಂಜಲಿ ನಗರ, ಪಟೇಲ್ ಪುಟ್ಟಯ್ಯ ಇಂಡಸ್ಟ್ರೀಯಲ್ ಏರಿಯಾ, ಬಿ.ಹೆಚ್.ಇ.ಎಲ್, ಮುತ್ತಾಚಾರಿ ಇಂಡಸ್ಟ್ರಿಯಲ್ ಏರಿಯಾ, ಜ್ಯೋತಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಗಂಗೊಂಡನಹಳ್ಳಿ, ವಿನಾಯಕ ಲೇಔಟ್, ಮೆಟ್ರೋ ಲೇಔಟ್, ನಾಯಂಡಹಳ್ಳಿ, ಬ್ಯಾಟರಾಯನಪುರ, ಮೈಸೂರು ರಸ್ತೆ, ಶೋಭಾ ಟೆಂಟ್ ರೋಡ್, ಗುಡ್ಡದಹಳ್ಳಿ ಎಕ್ಸ್ಟೆನ್ಶನ್, ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್, ಆರ್‌ಆರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲದೆ ಎಂದು ತಿಳಿಸಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.

ಚಿಕ್ಕಮಗಳೂರು: ಅಡಕೆ ಕಾಯುತ್ತಿದ್ದ ನಾಯಿ ಕೊಂದು ಎಳೆದೊಯ್ದ ಚಿರತೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

0

ಚಿಕ್ಕಮಗಳೂರು:- ಚಿರತೆಯೊಂದು ಮಲಗಿದ್ದ ನಾಯಿಯನ್ನ ಎಬ್ಬಿಸಿ ಹೊಡೆದು ಕೊಂದು ಬಳಿಕ ಹೊತ್ತೊಯ್ದಿರುವ ಘಟನೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ಜರುಗಿದೆ.

ಜಾತ್ರೆ ಮೈದಾನದ ಗ್ರಾಮದ ಫೋಟೋ ಬಸವರಾಜ್ ಎಂಬುವರ ಮನೆಯಲ್ಲಿ ಪಿನ್ ಡ್ರಾಪ್ ಸೈಲೆನ್ಸ್ ನಲ್ಲಿ ಬಂದು ಚಿರತೆಯೂ ನಾಯಿ ಬೇಟೆಯಾಡುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಮಲಗಿದ್ದ ನಾಯಿಯನ್ನ ಎಬ್ಬಿಸಿ ಬಳಿಕ ತನ್ನ ಹಲ್ಲಲ್ಲಿ ಸೀಳಿ ಕೊಲೆಗೈದು ಎಳೆದೊಯ್ದಿದೆ‌.

ಒಣಹಾಕಿದ್ದ ಅಡಕೆ ಕಾವಲಿಗೆ ನಾಯಿಯನ್ನು ಬಿಡಲಾಗಿತ್ತು. ಈ ವೇಳೆ ಚಿರತೆ ದಾಳಿ ಮಾಡಿದೆ. ನಾಯಿಯನ್ನು ಚಿರತೆ ಸೂಕ್ಷ್ಮವಾಗಿ ಹೆಜ್ಜೆ ಇಟ್ಟು ಬೇಟೆಯಾಡಿ ಕೊಂದು, ಬಳಿಕ ಎಳೆದೊಯ್ದಿದೆ. ಚಿರತೆಯ ಸೂಕ್ಷ್ಮ ಚಲನ-ವಲನಗಳು ಸ್ಪಷ್ಟವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯ ಸರ್ಕಾರದ ಅಧಿಕಾರದಲ್ಲಿ ಕೆ.ಸಿ.ವೇಣುಗೋಪಾಲ್ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿಕೆಶಿ

0

ಬೆಂಗಳೂರು:- ರಾಜ್ಯ ಸರ್ಕಾರದ ಅಧಿಕಾರದಲ್ಲಿ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಹಸ್ತಕ್ಷೇಪ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೋಗಿಲು ಬಳಿ ಅಕ್ರಮ ಲೇಔಟ್ ತೆರವು ವಿಚಾರದಲ್ಲಿ ವೇಣುಗೋಪಾಲ್ ಮಾಡಿದ್ದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅವರು ಸಲಹೆ ನೀಡಿದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ ಎಂದಿದ್ದಾರೆ

ನಾನು ಪರಿಶೀಲನೆ ಮಾಡಿದ್ದೇನೆ. ಅಲ್ಲಿ ಒಬ್ಬ ಹಲವರಿಂದ ಹಣ ಪಡೆದು ಶೆಡ್ ಹಾಕಿದ್ದಾನೆ. ಹೀಗಾಗಿ ನಾವು ನೋಟಿಸ್ ಕೊಟ್ಟಿದ್ದೇವೆ. ಅವರು ಲೋಕಲ್ ಜನ ಆಗಿದ್ರೆ ಬೇರೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ. ವೇಣುಗೋಪಾಲ್ ಅವರಿಗೆ ಸಲಹೆ ನೀಡಲು  ಹಕ್ಕಿದೆ. ಬಿಜೆಪಿ ನಾಯಕರು ಸಲಹೆ ನೀಡಿಲ್ವಾ? ಅನೇಕ ವಿಷಯದಲ್ಲಿ ಸಲಹೆ ನೀಡಿದ್ದಾರೆ ಅವರಿಗೆ ಹಕ್ಕಿದೆ ಎಂದು ಹೇಳಿದ್ದಾರೆ.

ಮೈಸೂರು| ಚಿನ್ನದ ಅಂಗಡಿಯಲ್ಲಿ ಭೀಕರ ದರೋಡೆ, 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ಕಳವು!

0

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನದ ಅಂಗಡಿಯಲ್ಲಿ ಹಾಡಹಗಲೇ ಭೀಕರ ದರೋಡೆ ನಡೆದಿದೆ.

ಐದಕ್ಕೂ ಹೆಚ್ಚು ಜನರ ಗುಂಪು, ಮಧ್ಯಾಹ್ನದ ವೇಳೆಗೆ ಅಂಗಡಿಗೆ ಏಕಾಏಕಿ ನುಗ್ಗಿ, ಗನ್ ತೋರಿಸುವ ಮೂಲಕ ಭಯ ಮೂಡಿಸಿದ್ದಾರೆ. ಬಳಿಕ ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.

ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬೈಪಾಸ್ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸಿಸಿಟಿವಿ ಫೂಟೇಜ್ ಹಾಗೂ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಮಹಿಳೆಯ ಕಿವಿ ಕತ್ತರಿಸಿ ಮಾಂಗಲ್ಯ ಸರ ಕಳ್ಳತನ: ಆರೋಪಿಗಳು ಅರೆಸ್ಟ್

0

ವಿಜಯಪುರ: ನಗರದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಸರಗಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಬಂಧಿತರು.ಇತ್ತೀಚಿಗಷ್ಟೇ ವಿಜಯಪುರ ನಗರದ ಮಹಿಳೆಯೊಬ್ಬರು ದಿವಟಗೇರಿ ಬಡವಾಣೆಯಲ್ಲಿನ ಅಂಗಡಿಗೆ ತೆರಳಿದ್ದರು. ಆಗ ಆರೋಪಿಗಳಿಬ್ಬರು ಏಕಾಏಕಿ ಕಲಾವತಿ ಮೇಲೆ ಹಲ್ಲೆಗೈದು, ಕಿವಿ ಕತ್ತರಿಸಿದ್ದರು. ಬಳಿಕ ಕಿವಿಯಲ್ಲಿದ್ದ ಓಲೆ ಹಾಗೂ ಕತ್ತಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೋಲೀಸರು, ಇಬ್ಬರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆ ಓಡಾಟ: ಸಿಸಿಟಿವಿಯಲ್ಲಿ ಸೆರೆ!

0

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಎಚ್ಚರಿಕೆ ಘೋಷಿಸಿದ್ದಾರೆ.

ಶುಕ್ರವಾರ ಸಂಜೆ ಮತ್ತು ಶನಿವಾರ ಬೆಳಗ್ಗೆ ಚಿರತೆಯನ್ನು ವಿಮಾನ ನಿಲ್ದಾಣದ ಆವರಣದಲ್ಲಿನ ಗಿಡಗಂಟೆಗಳ ಮಧ್ಯದಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಕಳೆದ ಐದು ದಿನಗಳಿಂದ ಕಾಣಿಸಿಕೊಂಡ ಚಿರತೆಯನ್ನು ಗಮನಿಸಿದ ಅರಣ್ಯ ಇಲಾಖೆ, ಶ್ವಾನದಳದೊಂದಿಗೆ ಕ್ಯಾಸ್ಟ್‌ಬೋನುಗಳನ್ನು ಹಾಗೂ ಗಾಮನಗಟ್ಟಿಯಲ್ಲಿ ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಿರುವುದು ತಿಳಿದುಬಂದಿದೆ.

ಆವರಣದಲ್ಲಿ ಹಂದಿ, ಮೊಲ, ನವಿಲು, ನಾಯಿಗಳು ಹೇರಳವಾಗಿರುವುದರಿಂದ ಚಿರತೆ ಕ್ಯಾಸ್ಟ್‌ಬೋನುಗಳತ್ತ ಗಮನ ಹರಿಸುತ್ತಿಲ್ಲ. ಆದಾಗ್ಯೂ, ರಾತ್ರಿ ವೇಳೆ ಚಿರತೆ ಬೋನಿನಲ್ಲಿನ ನಾಯಿಯನ್ನು ತಿನ್ನುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

56 ಕೋಟಿ ಡ್ರಗ್ಸ್ ಸುದ್ದಿ ಸುಳ್ಳು; ಮಹಾರಾಷ್ಟ್ರ ಪೊಲೀಸರ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ. ಪರಮೇಶ್ವರ್!

0

ಬೆಂಗಳೂರು:- ನಗರದಲ್ಲಿ 56–58 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಿಕ್ಕಿದೆ ಎಂಬ ಮಾಹಿತಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನೀಡಿರುವ ಮಾಹಿತಿ ತಪ್ಪಾಗಿದ್ದು, ಇತ್ತೀಚಿನ ಕಾರ್ಯಾಚರಣೆಯಲ್ಲಿ ಕೇವಲ 1.20 ಲಕ್ಷ ರೂ. ಮೌಲ್ಯದ ಸುಮಾರು 5 ಕೆ.ಜಿ ಡ್ರಗ್ಸ್ ಮಾತ್ರ ಪತ್ತೆಯಾಗಿದೆ. ಕಳೆದ ಮೂರು ತಿಂಗಳಿಂದ ಡ್ರಗ್ಸ್ ವಿರುದ್ಧ ರಾಜ್ಯದಲ್ಲಿ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಈ ಅವಧಿಯಲ್ಲಿ ಒಟ್ಟು 165 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಆರೋಪಿಯೊಬ್ಬನ ಹೇಳಿಕೆ ಆಧರಿಸಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷದ ಆಚರಣೆಗಾಗಿ ಡ್ರಗ್ಸ್ ಸಂಗ್ರಹಿಸಲಾಗಿತ್ತು ಎಂಬ ಶಂಕೆಯೂ ವ್ಯಕ್ತವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಜೈಲು ಹಾಗೂ ಇತರೆ ಸಂವೇದನಾಶೀಲ ಪ್ರದೇಶಗಳ ಚಟುವಟಿಕೆಗಳ ಮೇಲೂ ನಿಗಾ ವಹಿಸಲಾಗಿದೆ. “ಸೆಲೆಬ್ರೇಟ್ ರೆಸ್ಪಾನ್ಸಿಬಿಲಿಟಿ” ಎಂಬ ಸಂದೇಶದೊಂದಿಗೆ ಜನರು ಜವಾಬ್ದಾರಿಯಿಂದ ಹೊಸ ವರ್ಷವನ್ನು ಆಚರಿಸಬೇಕು ಎಂದು ಗೃಹ ಸಚಿವರು ಮನವಿ ಮಾಡಿದ್ದಾರೆ.

ಮಕ್ಕಳ ಚಟುವಟಿಕೆಗಳ ಮೇಲೆ ಪಾಲಕರು ಗಮನವಿಡಬೇಕು ಹಾಗೂ ಭದ್ರತೆಗಾಗಿ ಸಾರ್ವಜನಿಕರ ಸಹಕಾರ ಅಗತ್ಯ. ಡ್ರಗ್ಸ್ ವಿರುದ್ಧ ರಾಜ್ಯದಲ್ಲಿ ವಾರ್ ಡಿಕ್ಲೇರ್ ಮಾಡಲಾಗಿದ್ದು, ನಿರ್ಲಕ್ಷ್ಯ ವಹಿಸಿದ ಡಿಸಿಪಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಹೀಲಿಯಂ ಸಿಲಿಂಡರ್ ಸ್ಫೋಟ ಕೇಸ್: ಮೈಸೂರಿನ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್!

0

ಮೈಸೂರು: ನಗರದ ಅರಮನೆ ಮುಂಭಾಗ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಮೈಸೂರು ಅರಮನೆ ಒಳಗೆ ಶ್ವಾನದಳ ಹಾಗೂ ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದ್ದು, ಪ್ರತಿದಿನವೂ ಕಟ್ಟುನಿಟ್ಟಿನ ಪರಿಶೀಲನೆ ಮುಂದುವರಿದಿದೆ. ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳನ್ನು ವಿಚಾರಣೆಗೂ ಒಳಪಡಿಸಲಾಗಿದೆ.

ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮೈಸೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಪ್ರವಾಸಿಗರ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಂಡಿದ್ದಾರೆ.

ಡ್ರಗ್ ಮಾಫಿಯಾ ಹಿಡಿತದಲ್ಲಿ ಸರ್ಕಾರ: ಗದಗದಲ್ಲಿ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ!

0

ಗದಗ: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇದಿನೇ ಬೇರೂರುತ್ತಿದ್ದು, ಇಂದಿನ ಸರ್ಕಾರವೇ ಡ್ರಗ್ ಮಾಫಿಯಾ ಕಂಟ್ರೋಲ್ಡ್ ಸರ್ಕಾರದಂತೆ ವರ್ತಿಸುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಡ್ರಗ್ಸ್ ಬಳಕೆ ಅತಿ ಹೆಚ್ಚಾಗಿ ನಡೆಯುತ್ತಿದ್ದು, ಇದೇ ರೀತಿ ಮುಂದುವರೆದರೆ ರಾಜ್ಯ ಮತ್ತೊಂದು ‘ಉಡ್ತಾ ಪಂಜಾಬ್’ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಎಚ್ಚರಿಸಿದರು. ಈಗಾಗಲೇ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ ಎನ್ನಲಾಗುತ್ತಿದ್ದರೂ, ವಾಸ್ತವದಲ್ಲಿ ಡ್ರಗ್ಸ್ ದಂಧೆಗೆ ಯಾವುದೇ ಭಯ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ದಾಖಲಿಸಿದ ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಸುಲಭವಾಗಿ ಬೇಲ್ ಸಿಗುತ್ತಿರುವುದು ಕಾನೂನು ವ್ಯವಸ್ಥೆಯ ದುರ್ಬಲತೆಯನ್ನು ತೋರಿಸುತ್ತದೆ ಎಂದರು.

ಡ್ರಗ್ಸ್ ವಿರುದ್ಧ ಹೋರಾಟಕ್ಕೆ ಈಗಾಗಲೇ ಸ್ಪೆಷಲ್ ಕಾನೂನುಗಳು ಇದ್ದರೂ ಅವುಗಳನ್ನು ಸರಿಯಾಗಿ ಜಾರಿಗೆ ತರುತ್ತಿಲ್ಲ ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. 1988ರ ಕಾನೂನಿನ ಪ್ರಕಾರ ಕನಿಷ್ಠ ಒಂದು ವರ್ಷ ಬೇಲ್ ಸಿಗಬಾರದು ಎಂಬ ನಿಯಮ ಇದ್ದರೂ ಅದನ್ನೂ ಬಳಸುತ್ತಿಲ್ಲ. ಮಹಾರಾಷ್ಟ್ರದ ಪೊಲೀಸರು ಬಂದು ರಾಜ್ಯದಲ್ಲಿ ಡ್ರಗ್ಸ್ ರೇಡ್ ಮಾಡಬೇಕಾದ ಸ್ಥಿತಿ ಬಂದರೆ, ನಮ್ಮ ಪೊಲೀಸ್ ವ್ಯವಸ್ಥೆಯ ಸ್ಥಿತಿ ಏನು ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು. ರಾಜ್ಯದ ಕೆಲ ಪೊಲೀಸ್ ಅಧಿಕಾರಿಗಳು ಡ್ರಗ್ಸ್ ಪೆಡ್ಲರ್‌ಗಳ ಜೊತೆ ಶಾಮೀಲಾಗಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ ಎಂದು ಹೇಳಿದರು.

ಡ್ರಗ್ಸ್ ಮಾಫಿಯಾ ಎಲ್ಲ ಕಾಲೇಜುಗಳಲ್ಲೂ ವ್ಯಾಪಕವಾಗಿ ಹರಡಿದ್ದು, ಹಾವೇರಿ ಜಿಲ್ಲೆವರೆಗೂ ಜಾಲ ವಿಸ್ತರಿಸಿದೆ. ಜಿಲ್ಲಾ ಕೇಂದ್ರಗಳಲ್ಲಿಯೂ ಡ್ರಗ್ಸ್ ಸುಲಭವಾಗಿ ಲಭ್ಯವಾಗುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಕೂಡಲೇ ಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು, ಡ್ರಗ್ಸ್ ದಂಧೆ ನಡೆಯುವ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಹೊಸ ಅಧಿಕಾರಿಗಳನ್ನು ನೇಮಕ ಮಾಡಬೇಕು. ಸ್ಕ್ವಾಡ್ ರಚಿಸಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದ್ವೇಷ ಭಾಷಣದಂತಹ ಕಾನೂನುಗಳಿಗಿಂತ ಮೊದಲು ಡ್ರಗ್ಸ್ ಮಾಫಿಯಾ ವಿರುದ್ಧ ಉಗ್ರ ಮತ್ತು ಕಠಿಣ ಕಾನೂನು ತರಬೇಕೆಂದು ಆಗ್ರಹಿಸಿದರು.

ರೈತರ ಗೊಬ್ಬರ, ಬೀಜ ಕಳ್ಳತನಕ್ಕೂ, ಡ್ರಗ್ಸ್ ದಂಧೆಗೂ, ಕಳ್ಳಭಟ್ಟಿಗೂ ಬಿಗಿ ಕಾನೂನು ಇಲ್ಲದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದಕ್ಕೆ ಸಾಕ್ಷಿ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಸರ್ಕಾರ ತನ್ನ ಒಳಜಗಳ ಮತ್ತು ಕಚ್ಚಾಟದಲ್ಲಿ ತೊಡಗಿರುವುದರಿಂದ ಡ್ರಗ್ಸ್ ಮಾಫಿಯಾಗಳು ನಿರ್ಬಂಧವಿಲ್ಲದೆ ತಮ್ಮ ಅಕ್ರಮ ಚಟುವಟಿಕೆ ನಡೆಸುತ್ತಿವೆ. ಇದೇ ಪರಿಸ್ಥಿತಿ ಮುಂದುವರೆದರೆ ಕರ್ನಾಟಕವೇ ‘ಉಡ್ತಾ ಕರ್ನಾಟಕ’ ಆಗುತ್ತದೆ ಎಂದು ಅವರು ಗಂಭೀರ ಎಚ್ಚರಿಕೆ ನೀಡಿದರು.

error: Content is protected !!