Home Blog Page 26

11 ವರ್ಷಗಳ ಬಳಿಕ ಕರ್ನಾಟಕ ರಣಜಿ ಫೈನಲ್ ಪ್ರವೇಶ!

0

ಲಕ್ನೋ: 11 ವರ್ಷದ ಬಳಿಕ ಕರ್ನಾಟಕ ತಂಡ ರಣಜಿ ಟ್ರೋಫಿ ಫೈನಲ್‌ ಪ್ರವೇಶಿಸಿದೆ.

ಫೆ. 24 ರಿಂದ ಹುಬ್ಬಳ್ಳಿಯಲ್ಲಿ ಜಮ್ಮು ಕಾಶ್ಮೀರ ತಂಡದೊಂದಿಗೆ ಪಂದ್ಯ ನಡೆಯಲಿದೆ. ಉತ್ತರಾಖಂಡ 826 ರನ್‌ಗಳ ಬೃಹತ್ ಗುರಿಯನ್ನು ಹೊಂದಿದ್ದು, ದಿನದ ಅಂತ್ಯಕ್ಕೆ 62 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 260 ರನ್‌ ಮಾಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಮುನ್ನಡೆ ಪಡೆದಿರುವ ಕರ್ನಾಟಕ ಸುಲಭವಾಗಿ ಫೈನಲ್‌ ಪ್ರವೇಶಿಸಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್‌ ಸ್ಮರಣ್‌ 127 ರನ್‌ (149 ಎಸೆತ, 12 ಬೌಂಡರಿ, 3 ಸಿಕ್ಸ್‌) ಮತ್ತು ಕೆಎಲ್‌ ರಾಹುಲ್‌ 86 ರನ್‌ (103 ಎಸೆತ, 5 ಬೌಂಡರಿ, 5 ಸಿಕ್ಸ್‌) ಹೊಡೆದಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 232 ರನ್‌ ಹೊಡೆಯಲಿರುವ ದೇವದತ್‌ ಪಡಿಕಲ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಜಮ್ಮು ಕಾಶ್ಮೀರ ತಂಡ 6 ವಿಕೆಟ್‌ಗಳ ಜಯ ಸಾಧಿಸಿ ಮೊದಲ ಬಾರಿ ಫೈನಲ್‌ ಪ್ರವೇಶಿಸಿದೆ.

ಹುಬ್ಬಳ್ಳಿಯಲ್ಲಿ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಸುರಕ್ಷತೆ ಸಂಬಂಧಿತ ಕೆಲಸಕಾರ್ಯಗಳು ನಡೆಯುತ್ತಿರುವ ಕಾರಣ. ಕರ್ನಾಟಕ 2014-15 ರಣಜಿ ಟ್ರೋಫಿ ಚಾಂಪಿಯನ್ ಆಗಿದ್ದು, ಅಭಿನವ್‌ ಮುಕುಂದ್‌ ನೇತೃತ್ವದಲ್ಲಿ ತಮಿಳುನಾಡು ವಿರುದ್ಧ 762 ರನ್‌ ಮೊದಲ ಇನ್ನಿಂಗ್ಸ್‌ ಮತ್ತು 217 ರನ್‌ ಅಂತರದಿಂದ ಜಯ ಪಡೆದಿತ್ತು. ಆ ಪಂದ್ಯದಲ್ಲಿ ಕೆಎಲ್‌ ರಾಹುಲ್‌ 188 ರನ್‌ ಹಾಗೂ ಕರುಣ್‌ ನಾಯರ್‌ 328 ರನ್‌ ಹೊಡೆದು, ತ್ರಿಶತಕ ಹೊಡೆಯುವ ಕರುಣ್‌ ನಾಯರ್‌ ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು.

ರನ್‌ ಸ್ಕೋರ್ ವಿವರ:

ಕರ್ನಾಟಕ ಮೊದಲ ಇನ್ನಿಂಗ್ಸ್:
736/10.

ಉತ್ತರಾಖಂಡ ಮೊದಲ ಇನ್ನಿಂಗ್ಸ್: 233/10.

ಕರ್ನಾಟಕ ಎರಡನೇ ಇನ್ನಿಂಗ್ಸ್: 323/10.

ಉತ್ತರಾಖಂಡ ಎರಡನೇ ಇನ್ನಿಂಗ್ಸ್: 260/6.

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ತಿಂಡಿ ಆಸೆ ತೋರಿಸಿ ಹೇಯ ಕೃತ್ಯ; ಕಾಮುಕ ಅರೆಸ್ಟ್!

0

ಹೈದರಾಬಾದ್: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

19 ವರ್ಷದ ಯುವಕ ಬಂಧಿತ ಆರೋಪಿ. ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಯು ಮಗುವಿಗೆ ತಿಂಡಿ ಕೊಡಿಸುವ ಆಸೆ ತೋರಿಸಿ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂತರ ಬಾಲಕಿ ಅಳುವುದನ್ನು ಕಂಡು ತಾಯಿ ಕೇಳಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಸಂಬಂಧ ತಾಯಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

K. M ದೊಡ್ಡಿ ಸಮೀಪ ನಾಡಬಾಂಬ್ ಸ್ಫೋಟ: ಹಸುವಿನ ಬಾಯಿ ಛಿದ್ರ, ಸ್ಥಿತಿ ಗಂಭೀರ!

0

ಮಂಡ್ಯ:- ಜಿಲ್ಲೆಯ ಮದ್ದೂರು ತಾಲ್ಲೂಕಿನ K. M. ದೊಡ್ಡಿ ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ದುರ್ಘಟನೆ ಸಂಭವಿಸಿದೆ.

ಗ್ರಾಮದ ರೈತ ಮಹಿಳೆ ರಾಜಮ್ಮಣಿ ಅವರಿಗೆ ಸೇರಿದ ಹಸು ತೆಕ್ಕಲು ಜಮೀನಿನಲ್ಲಿ ಹುಲ್ಲು ಮೇಯುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.30ರ ಹೊತ್ತಿಗೆ ನಾಡಬಾಂಬ್ ಸ್ಫೋಟಗೊಂಡಿದೆ.

ಸ್ಫೋಟದ ಪರಿಣಾಮ ಹಸುವಿನ ಬಾಯಿ ಸಂಪೂರ್ಣ ಛಿದ್ರಗೊಂಡಿದ್ದು, ಹಸುವಿನ ಸ್ಥಿತಿ ಗಂಭೀರವಾಗಿದೆ. ಕಾಡುಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಇಡಲಾಗಿದ್ದ ನಾಡಬಾಂಬ್‌ಗೆ ಹಸು ಬಲಿಯಾಗಿರುವುದು ತಿಳಿದುಬಂದಿದೆ. ಹಸುವನ್ನೇ ಆಧಾರವಾಗಿ ಜೀವನ ಸಾಗಿಸುತ್ತಿದ್ದ ಬಡ ರೈತ ಮಹಿಳೆ ಹಸುವಿನ ಸ್ಥಿತಿ ಕಂಡು ಗೋಳಾಡುತ್ತಿರುವ ದೃಶ್ಯ ಮನಕಲುಕುವಂತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, K. M. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಲಪಟಾಯಿಸಿದ ಆರೋಪ: ಸಿಎಂಎಸ್ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ!

0

ಹಾಸನ:- ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಕೋಟಿ ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡು ಕಂಪನಿಗೆ ಸುಳ್ಳು ಲೆಕ್ಕ ನೀಡಿರುವ ಗಂಭೀರ ಆರೋಪ ಕ್ಯಾಶ್ ಮ್ಯಾನೆಜ್‍ಮೆಂಟ್ ಸರ್ವಿಸಸ್ ಕಂಪನಿ ವಿರುದ್ಧ ಕೇಳಿಬಂದಿದೆ.

ಹಾಸನ ನಗರದ ಗೌರಿಕೊಪ್ಪಲಿಯಲ್ಲಿರುವ ಸಿಎಂಎಸ್ ಕಚೇರಿಯಿಂದ ಪ್ರತಿದಿನ ಕೆನರಾ ಬ್ಯಾಂಕ್, ಎಸ್‌ಬಿಐ, ಬ್ಯಾಂಕ್ ಆಫ್ ಬರೋಡ, ಐಡಿಬಿಐ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್ ಸೇರಿ ಒಟ್ಟು 15 ಬ್ಯಾಂಕ್‌ಗಳ 28 ಎಟಿಎಂಗಳಿಗೆ ಹಣ ತುಂಬಲಾಗುತ್ತಿತ್ತು. ಫೆಬ್ರವರಿ 6ರಂದು ನಡೆದ ಆಡಿಟ್‌ನಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರಲಿಲ್ಲ. ಆದರೆ ಫೆ.18ರಂದು ನಡೆದ ಮರು ಆಡಿಟ್‌ನಲ್ಲಿ 2 ಕೋಟಿಗೂ ಅಧಿಕ ಹಣದ ಕೊರತೆ ಬೆಳಕಿಗೆ ಬಂದಿದ್ದು, ಕಂಪನಿಯ ಸಿಬ್ಬಂದಿ ನಂದೀಶ್ ಹಾಗೂ ಮಧು ಹಣ ಹಾಕದೇ ಹಾಕಿರುವುದಾಗಿ ಎಂಟ್ರಿ ಮಾಡಿ ನಗದು ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆ ಬೆಂಗಳೂರಿನಿಂದ ಸಿಎಂಎಸ್ ಮೇಲಾಧಿಕಾರಿಗಳು ಹಾಸನಕ್ಕೆ ಆಗಮಿಸಿ ವಿಶೇಷ ಆಡಿಟ್ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸಂಪೂರ್ಣ ಮೊತ್ತ ಸ್ಪಷ್ಟವಾಗಲಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲು ತೀರ್ಮಾನಿಸಲಾಗಿದೆ.

Job Vacancy| ನಿಮ್ಮದು 10th ಪಾಸಾಗಿದ್ಯಾ!? ಹಾಗಿದ್ರೆ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ!

0

ಗದಗ:- ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದ ವ್ಯಾಪ್ತಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿಗಳನ್ನು ಆಫ್‌ಲೈನ್ ಮೂಲಕ ಫೆಬ್ರವರಿ 21ರೊಳಗಾಗಿ ಸಲ್ಲಿಸಬೇಕು. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10ನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ನಿಗದಿತ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.

ಅಧಿಕೃತ ಲಿಂಕ್ ಅಥವಾ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ನಿಗದಿತ ಸರಿಯಾದ ಮಾಹಿತಿ ತುಂಬಿರಿ.

ಅಧಿಸೂಚನೆಯಲ್ಲಿ ಸೂಚಿಸಿದ್ದರೆ ಮಾತ್ರ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನೋಂದಾಯಿತ ಅಂಚೆ (Registered Post) ಅಥವಾ ಸ್ಪೀಡ್ ಪೋಸ್ಟ್ ಮೂಲಕ ಮೇಲಿನ ವಿಳಾಸಕ್ಕೆ ಫೆಬ್ರವರಿ 21 ರ ಒಳಗಾಗಿ ತಲುಪಿಸಿ.

ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:

ಸದಸ್ಯ ಕಾರ್ಯದರ್ಶಿಗಳು,

ತಾಲೂಕು ಕಾನೂನು ಸೇವೆಗಳ ಸಮಿತಿ,

ನ್ಯಾಯಾಲಯ ಸಂಕೀರ್ಣ, ಲಕ್ಷ್ಮೇಶ್ವರ,

ಗದಗ ಜಿಲ್ಲೆ – 582116.

ಬೆಂಗಳೂರು| ಏಕಾಏಕಿ ಹೊತ್ತಿ ಉರಿದ ಪೇಪರ್ ಗೋದಾಮು!

0

ಬೆಂಗಳೂರು:- ಪೇಪರ್ ಗೋದಾಮಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿರುವ ಘಟನೆ ಗೊಲ್ಲರಹಟ್ಟಿ ಸಮೀಪದಲ್ಲಿ ಜರುಗಿದೆ.

ಏಕಾಏಕಿ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ, ಪೇಪರ್, ರಟ್ಟು ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಬಂದಿದ್ದಾರೆ.

ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನಲ್ಲಿ ಆಘಾತಕಾರಿ ಘಟನೆ; ಚೆಂಡಿನ ಆಕಾರದ ವಸ್ತು ಸ್ಫೋಟ, ಸ್ವಲ್ಪದರಲ್ಲೇ ಬಾಲಕ ಬಚಾವ್!

0

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಜರುಗಿದೆ.

ಅಭೀಶ್ ಗಾಯಗೊಂಡ ಬಾಲಕನಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮನೆ ಅಂಗಳದಲ್ಲಿ ಬಾಲಕ ಅಭೀಶ್ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಮಂಗಳೂರು| ಐರ್ಲೆಂಡ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕನ್ನಡಿಗ!

0

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡ್ ನಲ್ಲಿ ಜರುಗಿದೆ.

31 ವರ್ಷದ ಸಾಂಜೋ ಸುನೀಲ್ ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್​​ ಐರ್ಲೆಂಡ್​ನ ಡಬ್ಲಿನ್​ನ ಫಿಂಗ್ಲಾಸ್​ನ ಚಾರ್ಲ್ಸ್​ಟೌನ್​ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುನೀಲ್ ಮೃತದೇಹ ಪತ್ತೆ ಆಗಿದೆ. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆತ್ಮಹತ್ಯೆ ಅಥವಾ ಬೇರೆ ಏನಾದರೂ ಆಗಿದೆಯಾ ಎಂದು ಸದ್ಯ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ.

ವರ್ಷದ ಹಿಂದೆ ಕಡಬ ಮೂಲದ ಯುವತಿಯನ್ನ ಸಾಂಜೋ ಸುನೀಲ್ ವಿವಾಹವಾಗಿದ್ದರು. ಮೊದಲು ಇಸ್ರೇಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನೀಲ್, ಪತ್ನಿ ಐರ್ಲೆಂಡ್​ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಹಿನ್ನೆಲೆ ಕೆಲವು ತಿಂಗಳ ಹಿಂದಷ್ಟೇ ಐರ್ಲೆಂಡ್​ಗೆ ತೆರಳಿ ವಾಸವಾಗಿದ್ದರು. ಸದ್ಯ ಸುನೀಲ್ ಅನುಮಾನಾಸ್ಪದ ಸಾವು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

0

ಗುವಾಹಟಿ: ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸವಿಲ್ಲ, ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರ ಪಕ್ಷ ಸೋಲಲಿದೆ. ಹೀಗಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದರು.

“ನಾನು ಮೊದಲು ಕಾಮಾಕ್ಯ ದೇವಾಲಯಕ್ಕೆ ಹೋಗಿ ಈ ರಾಜ್ಯದಲ್ಲಿ ಬದಲಾವಣೆ ತರುವಂತೆ ತಾಯಿ ಬಳಿ ಪ್ರಾರ್ಥಿಸಿದ್ದೇನೆ” ಎಂದು ತಿಳಿಸಿದರು.

ಡಿ.ಬಿ. ನಟೇಶ್ ಬಡ್ತಿ ವಿವಾದ: ನಿರಾಧಾರ ಆರೋಪ ಮಾಡಿದರೆ ಕ್ರಮ – ಸಿಎಸ್ ಶಾಲಿನಿ ರಾಜನೀಶ್ ಎಚ್ಚರಿಕೆ

0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ಕುರಿತು ಉದ್ಭವಿಸಿದ ವಿವಾದಕ್ಕೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಾಜನೀಶ್ ಸ್ಪಷ್ಟೀಕರಣ ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪಗಳು ನಿರಾಧಾರ, ಆಧಾರವಿಲ್ಲದ ಹಾಗೂ ಕ್ಷುಲ್ಲಕ ಸ್ವರೂಪದವು ಎಂದು ಅವರು ಪತ್ರದ ಮೂಲಕ ತಿಳಿಸಿದ್ದಾರೆ. ಸರ್ಕಾರದ ಉನ್ನತ ಅಧಿಕಾರಿಗಳ ವಿರುದ್ಧ ಪೂರಕ ದಾಖಲೆಗಳಿಲ್ಲದೆ ಆರೋಪ ಮಾಡುವುದು ಮಾನಹಾನಿಗೆ ಸಮಾನವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಡಿ.ಬಿ. ನಟೇಶ್ ಅವರಿಗೆ ಬಡ್ತಿ ನೀಡಲು ಕೋಟ್ಯಂತರ ರೂ. ಹಣ ಪಡೆದಿದ್ದಾರೆ ಎಂಬ ಆರೋಪ ಮಾಡಿದ್ದರು. ಆದರೆ ಈ ಸಂಬಂಧ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮುಖ್ಯಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ. “ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ, ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು,” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಆದರೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಸರ್ಕಾರದ ಉನ್ನತ ಹಂತದ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಇಂತಹ ಆಧಾರರಹಿತ ಆರೋಪಗಳಿಗೆ ವಿರುದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಸ್ ಎಚ್ಚರಿಕೆ ನೀಡಿದ್ದಾರೆ.

ಕೆಎಎಸ್ ಅಧಿಕಾರಿಯಾಗಿರುವ ಡಿ.ಬಿ. ನಟೇಶ್ ಅವರಿಗೆ ನಿಯಮಾನುಸಾರವಾಗಿಯೇ ಬಡ್ತಿ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

error: Content is protected !!