Home Blog Page 275

ಕ್ಯಾನ್ಸರ್ ಮಕ್ಕಳಿಗಾಗಿ ತನ್ನ ನೀಳ ಜಡೆಯನ್ನೇ ಕೊಟ್ಟ ನಟಿ ಸಂಗೀತ ಭಟ್

ಉದ್ದ ತಲೆಕೂದಲಿನ ಸುಂದರಿ ಎಂದೇ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿದ್ದ ನಟಿ ಸಂಗೀತ ಭಟ್ ತಮ್ಮ ಗುರುತನ್ನೇ ತ್ಯಾಗ ಮಾಡಿದ್ದಾರೆ. ಹೇರ್‌ಸ್ಟೈಲ್ ಬದಲಾವಣೆಗಾಗಿ ಅಲ್ಲ, ಬದಲಿಗೆ ಮಾನವೀಯ ಕಾರಣಕ್ಕಾಗಿ ಅವರು ತಮ್ಮ ನೀಳ ಜಡೆಯನ್ನೇ ಕಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಗರ್ಭಕೋಶ ಸಂಬಂಧಿತ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ಸಂಗೀತ ಭಟ್, ನಂತರ ಕೂದಲು ಉದುರುವ ಸಮಸ್ಯೆಯನ್ನು ಎದುರಿಸಿದ್ದರು. ಈ ಹಿನ್ನೆಲೆ ಕೂದಲನ್ನು ಕಟ್ ಮಾಡುವ ನಿರ್ಧಾರ ಕೈಗೊಂಡ ಅವರು, ಕಟ್ ಮಾಡಿದ ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ತಲೆಕೂದಲು ರೀಪ್ಲಾಂಟೇಷನ್‌ಗೆ ನೀಡಲು ಮುಂದಾಗಿದ್ದಾರೆ.

ವೈಯಕ್ತಿಕ ಸಂಕಷ್ಟದ ನಡುವೆಯೂ ಮತ್ತೊಬ್ಬರ ಬದುಕಿಗೆ ನಗು ತರಬೇಕೆಂಬ ಸಂಕಲ್ಪ ಸಂಗೀತ ಭಟ್ ಅವರ ಈ ನಡೆಗೆ ವಿಶೇಷ ಮೆರಗು ತಂದಿದೆ. ಸಿನೆಮಾ ಪರದೆ ಹೊರಗೂ ಮಾನವೀಯತೆಯ ನಾಯಕಿಯಾಗಿರುವ ನಟಿಯ ನಡೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಕಾಂತಾರ’ ಯಶಸ್ಸಿನ ಬಳಿಕ ಅಂಜನಾದ್ರಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ

ಕಾಂತಾರ ಚಿತ್ರದ ಅಪಾರ ಯಶಸ್ಸಿನ ನಂತರ ನಟ ರಿಷಬ್ ಶೆಟ್ಟಿ ದಂಪತಿ ರಾಮಾಯಣ ಕಾಲದ ಪೌರಾಣಿಕ ಮಹತ್ವ ಹೊಂದಿರುವ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಹನುಮನ ದೇವರಿಗೆ ಭಕ್ತಿ ನಮನ ಸಲ್ಲಿಸಿದರು. ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು ಏರಿ ಅವರು ಮೂಲದೇವರ ದರ್ಶನ ಪಡೆದರು.

ಹನುಮನ ದೇವರಿಗೆ ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದ ರಿಷಬ್ ಶೆಟ್ಟಿ, ಧಾರ್ಮಿಕ ಶ್ರದ್ಧೆಯೊಂದಿಗೆ ದೇವಾಲಯದಲ್ಲಿ ಕಾಲ ಕಳೆದರು. ಈ ವೇಳೆ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ಅವರು ಅವರನ್ನು ಸನ್ಮಾನಿಸಿ ಗೌರವಿಸಿದರು.

ಬಳಿಕ ಅಂಜನಾದ್ರಿ ಬೆಟ್ಟದ ಮೇಲಿಂದ ತುಂಗಭದ್ರಾ ನದಿ, ಹಂಪಿ ಹಾಗೂ ಕಿಷ್ಕಿಂದ ಪ್ರದೇಶದ ಬೆಟ್ಟದ ಸಾಲುಗಳ ಮನಮೋಹಕ ದೃಶ್ಯಾವಳಿಯನ್ನು ರಿಷಬ್ ಶೆಟ್ಟಿ ವೀಕ್ಷಿಸಿದರು. ನಟನ ಭೇಟಿ ಭಕ್ತರು ಮತ್ತು ಅಭಿಮಾನಿಗಳ ಗಮನ ಸೆಳೆಯಿತು.

ಬೆಂಕಿ ಜ್ವಾಲೆಗೆ ಖಾಸಗಿ ಬಸ್ ಸುಟ್ಟು ಕರಕಲು: ಘಟನೆ ನಡೆದಿದ್ದು ಹೇಗೆ? ಸತ್ತವರೆಷ್ಟು, ಉಳಿದವರೆಸ್ಟು? ಬಸ್ ಮಾಲೀಕ, ಕ್ಲೀನರ್ ಹೇಳಿದ್ದೇನು?

0

ಚಿತ್ರದುರ್ಗ:– ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ದುರಂತ ಎಂಥವರನ್ನೂ ಬೆಚ್ಚಿ ಬೀಳುವಂತೆ ಮಾಡಿದೆ.

ಘಟನೆ ವಿವರ:-

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್‌ ದುರಂತದಲ್ಲಿ ಸಾಕಷ್ಟು ಮಂದಿ ಸಾವಿಗೀಡಾಗಿದ್ದಾರೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್ಸಿಗೆ ಗುದ್ದಿದೆ.

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು ಸುಮಾರು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಹಲವು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೀಬರ್ಡ್ ಮಾಲೀಕ ಹೇಳಿದ್ದೇನು?

ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್‌ ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸ್ಲೀಪರ್‌ ಬಸ್ಸಿನಲ್ಲಿ 29 ಜನ ಪ್ರಯಾಣಿಸುತ್ತಿದ್ದರು. ಟ್ರಕ್‌ ವಿರುದ್ಧ ದಿಕ್ಕಿನಿಂದ ಬಂದು ಡೀಸೆಲ್‌ ಟ್ಯಾಂಕ್‌ ಬಳಿ ಗುದ್ದಿದೆ. ಗುದ್ದಿದ ರಭಸಕ್ಕೆ ಮೊದಲು ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿತು. ನಂತರ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿವರಿಸಿದರು.

ಪ್ರಯಾಣಿಕರ ಸುರಕ್ಷೆಗೆ ಸಂಬಂಧಿಸಿದ ಎಲ್ಲಾ ಮಾನದಂಡಗಳನ್ನು ಬಸ್ಸು ಹೊಂದಿತ್ತು. ಎರಡೂ ತುರ್ತು ನಿರ್ಗಮನ ದ್ವಾರವೂ ಇತ್ತು. 29 ಪ್ರಯಾಣಿಕರ ಪೈಕಿ 25 ಮಂದಿ ಗೋಕರ್ಣಕ್ಕೆ ಬುಕ್‌ ಮಾಡಿದರೆ 2 ಮಂದಿ ಶಿವಮೊಗ್ಗ, 2 ಮಂದಿ ಕುಮಟಾಕ್ಕೆ ಸೀಟ್‌ ಬುಕ್‌ ಮಾಡಿದ್ದರು ಎಂದು ಮಾಹಿತಿ ನೀಡಿದರು.

ಬಸ್ಸಿನ ಕ್ಲೀನರ್ ಹೇಳಿದ್ದೇನು?

ರಾತ್ರಿ 1:30 ರಿಂದ 2 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಲಗಿದ್ದ ಬಸ್ಸಿನಿಂದ ನಾನು ಹೊರ ಬಿದ್ದಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿಯತೊಡಗಿತು. ಡ್ರೈವರ್ ಹೊರ ಬಿದ್ದಿದ್ದು ಅವರ ಕಾಲು ಕೈಗಳಿಗೆ ಗಂಭೀರ ಗಾಯವಾಗಿದೆ. ಕೂಡಲೇ ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ ಏನು ಆಗಿದೆ ಎನ್ನುವುದು ಗೊತ್ತಾಗದೆ ಶಾಕ್‌ನಲ್ಲಿ ಇದ್ದೆವು ಎಂದು ತಿಳಿಸಿದರು.

ಐಜಿಪಿ ರವಿಕಾಂತೇಗೌಡ ಹೇಳಿದ್ದೇನು?

ಸೀಬರ್ಡ್‌ ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್‌ ಸೇರಿ 9 ಮಂದಿ ಸಾವು ಮೃತಪಟ್ಟಿದ್ದಾರೆ. ಸದ್ಯ ಬಸ್ಸಿನಿಂದ ಎಂಟು ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಓರ್ವ ಲಾರಿ ಚಾಲಕ ಸೇರಿ ಸದ್ಯದ ಮಾಹಿತಿ ಪ್ರಕಾರ 9 ಜನ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಶಿರಾ ಹಾಗೂ ಹಿರಿಯೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್‌ ಮೂಲಕ ಕಳುಹಿಸಿಕೊಡಲಾಗಿದೆ. ಬೆಂಗಳೂರಿನಿಂದ ಡಿಎನ್‌ಎ ಅಂಡ್ ಸುಕೋ ಟೀಂ ಬಂದಿದೆ ಎಂದು ಹೇಳಿದರು.

ಎಸ್‌ಪಿ ರಂಜಿತ್ ಹೇಳಿದ್ದೇನು?

ಸೀಬರ್ಡ್‌ ಬಸ್ಸಿನಲ್ಲಿದ್ದ 21 ಜನರು ಪತ್ತೆಯಾಗಿದ್ದು 11 ಜನರು ಪತ್ತೆಯಾಗಿಲ್ಲ ಎಂದು ಚಿತ್ರದುರ್ಗ ಎಸ್‌ಪಿ ರಂಜಿತ್ ಹೇಳಿದ್ದಾರೆ. ಸೀಬರ್ಡ್‌ ಬಸ್ಸಿನಲ್ಲಿದ್ದ 21 ಜನರು ಪತ್ತೆ ಆಗಿದ್ದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದೇವೆ. ಈ ಪೈಕಿ ಆರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಗಾಳಿಯ ಮಟ್ಟ ಕಳಪೆ; ಬಳ್ಳಾರಿ ಜನರಿಗೆ ಹೈ ಅಲರ್ಟ್, ಎಚ್ಚರಿಕೆ ನೀಡಿದ ತಜ್ಞರು!

0

ಬೆಂಗಳೂರು:- ಬೆಂಗಳೂರು ಮತ್ತು ಕರ್ನಾಟಕದ ವಿವಿಧ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.

ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 184–221 ರ ನಡುವೆ ವರದಿಯಾಗಿದ್ದು, ಅನಾರೋಗ್ಯಕರದಿಂದ ತುಂಬಾ ಅನಾರೋಗ್ಯಕರ ಮಟ್ಟವಿರುವುದಾಗಿ ತೋರಿಸುತ್ತದೆ. ವಿಶೇಷವಾಗಿ ಭೋಗನಹಳ್ಳಿ, ಪಾಮ್ ಮೆಡೋಸ್, ಬೆಳತ್ತೂರು, ಅರೆಕೆರೆ, ಬೊಮ್ಮನಹಳ್ಳಿ ಪ್ರದೇಶಗಳಲ್ಲಿ ಗಾಳಿಯ ದಟ್ಟತೆ ಹೆಚ್ಚಾಗಿದೆ, ಇದರಿಂದ ಉಸಿರಾಟದ ತೊಂದರೆ, ಗಂಟಲು ಕಿರಿಕಿರಿ ಮತ್ತು ಆರೋಗ್ಯದ ಇತರ ಸಮಸ್ಯೆಗಳ ಸಂಭವನೀಯತೆ ಹೆಚ್ಚಾಗುತ್ತದೆ.

PM2.5 ಪ್ರಮಾಣ 96 µg/m³ ಮತ್ತು PM10 ಪ್ರಮಾಣ 132 µg/m³ ರಷ್ಟು ದಾಖಲಾಗಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರು ಮತ್ತು ಮಕ್ಕಳಿಗೆ ಹೆಚ್ಚಿನ ಅಪಾಯ ಉಂಟುಮಾಡಬಹುದು. ರಾಜ್ಯದ ಇತರ ಪ್ರಮುಖ ನಗರಗಳಾದ ಮಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ ಮತ್ತು ಹುಬ್ಬಳ್ಳಿ ಮುಂತಾದ ಸ್ಥಳಗಳಲ್ಲೂ ಗಾಳಿಯ ಗುಣಮಟ್ಟ ಕಳಪೆ ಅಥವಾ ಅನಾರೋಗ್ಯಕರ ಮಟ್ಟದಲ್ಲಿದೆ. ತಜ್ಞರು ಬಹುಮಟ್ಟದ ಮಾಲಿನ್ಯ ಪ್ರದೇಶಗಳಲ್ಲಿ ಹೊರಗೆ ಹೋಗುವ ಮುನ್ನ N95 ಮಾಸ್ಕ್ ಧರಿಸುವಂತೆ ಹಾಗೂ ವೃದ್ಧರು, ಮಕ್ಕಳು ಮತ್ತು ಉಸಿರಾಟದ ಸಮಸ್ಯೆ ಇರುವವರು ಮನೆಯಲ್ಲಿ ಇರಲು ಸಲಹೆ ನೀಡಿದ್ದಾರೆ.

ಮುಂದಿನ 7 ದಿನಗಳಲ್ಲಿ ಚಳಿ ಮತ್ತು ಮಂಜು ವಾತಾವರಣದಿಂದ ಗಾಳಿಯ ಗುಣಮಟ್ಟದಲ್ಲಿ ಹೆಚ್ಚುವರಿ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ, ಆದ್ದರಿಂದ ನಾಗರಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದೆ.

ರಾಜ್ಯದೆಲ್ಲೆಡೆ ಚಳಿ ಆರ್ಭಟ: ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು; ಗದಗ, ಧಾರವಾಡ ಸೇರಿ ಹಲವೆಡೆ ಒಣ ಹವೆ

0

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಚಳಿಯ ವಾತಾವರಣ ಆವರಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ತಂಪಾದ ವಾತಾವರಣವಿದ್ದು, ಕನಿಷ್ಠ ತಾಪಮಾನ ಸುಮಾರು 17°C ಇರಲಿದೆ. ರಾತ್ರಿ ವೇಳೆಗೆ ಗರಿಷ್ಠ ತಾಪಮಾನ 26°C, ಕನಿಷ್ಠ ತಾಪಮಾನ 15°C ತಲುಪುವ ನಿರೀಕ್ಷೆಯಿದೆ. ಮುಂದಿನ 7 ದಿನಗಳ ಕಾಲ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ ತಿಂಗಳ ಸರಾಸರಿ ತಾಪಮಾನ 16°C ರಿಂದ 28°C ನಡುವೆಯೇ ಇರುತ್ತಿದ್ದು, ಪ್ರಸ್ತುತ ಹವಾಮಾನವೂ ಅದೇ ವ್ಯಾಪ್ತಿಯಲ್ಲಿ ಸಾಗುತ್ತಿದೆ. ದಿನದ ವೇಳೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ. ಹೀಗಾಗಿ ಮಧ್ಯಾಹ್ನ ವೇಳೆಗೆ ಸಾಕಷ್ಟು ಬಿಸಿಲು ಕಾಣಿಸಿಕೊಳ್ಳಲಿದೆ. ಇನ್ನೂ ಉತ್ತರ, ಮಧ್ಯ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳು ಮತ್ತು ಬೆಂಗಳೂರು ನಗರದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಇಂದು ಹಾಗೂ ನಾಳೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಚಳಿ ತೀವ್ರಗೊಂಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಮುಂದುವರೆಯಲಿದೆ. ಒಟ್ಟಿನಲ್ಲಿ ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿತ್ರದುರ್ಗ| ಖಾಸಗಿ ಬಸ್ ಬೆಂಕಿಗಾಹುತಿ; 8 ಪ್ರಯಾಣಿಕರು, ಲಾರಿ ಡ್ರೈವರ್‌ ಸೇರಿ 9 ಮಂದಿ ಸಾವು: ಐಜಿಪಿ ರವಿಕಾಂತೇಗೌಡ ಸ್ಪಷ್ಟನೆ!

0

ಚಿತ್ರದುರ್ಗ:- ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೀಬರ್ಡ್‌ ಖಾಸಗಿ ಬಸ್ಸಿನಲ್ಲಿದ್ದ 8 ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬಸ್ಸಿನೊಳಗಿನಿಂದ ಸದ್ಯಕ್ಕೆ 8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಿದರು. ಗಾಯಗೊಂಡವರನ್ನು ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.

ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಡಿಎನ್‌ಎ ಹಾಗೂ ಸುಕೋ ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಐಜಿಪಿ ಮಾಹಿತಿ ನೀಡಿದರು. ಇನ್ನೊಂದೆಡೆ, ಚಿತ್ರದುರ್ಗ ಎಸ್‌ಪಿ ರಂಜಿತ್ ಮಾತನಾಡಿ, ಸೀಬರ್ಡ್‌ ಬಸ್ಸಿನಲ್ಲಿ ಒಟ್ಟು 32 ಮಂದಿ (ಚಾಲಕ ಹಾಗೂ ನಿರ್ವಾಹಕ ಸೇರಿ) ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದರು.

ಇದುವರೆಗೆ 21 ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ 6 ಮಂದಿ ಗಾಯಗೊಂಡಿದ್ದಾರೆ. ಉಳಿದ 11 ಜನರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಪ್ರಾಥಮಿಕ ತನಿಖೆಯ ಪ್ರಕಾರ, ಲಾರಿ ಚಾಲಕನ ನಿದ್ದೆ ಮಂಪರಿನಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಎನ್ ರಾಜಣ್ಣರೇ ಕಾಂಗ್ರೆಸ್‌ಗೆ ಕೊಳ್ಳಿ ಇಡುತ್ತಿದ್ದಾರೆ: ಆರ್ ಅಶೋಕ್ ವ್ಯಂಗ್ಯ

0

ಬೆಂಗಳೂರು:- ಕಾಂಗ್ರೆಸ್ ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಅವರೇ ಕೊಳ್ಳಿ ಇಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದರು.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೆಎನ್ ರಾಜಣ್ಣರೇ ಕಾಂಗ್ರೆಸ್‌ಗೆ ಕೊಳ್ಳಿ ಇಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಿಕೆಶಿ ಫೇಲ್ಯೂರ್ ಅಂತಾ ಪತ್ರ ಬರೆದಿದ್ದಾರೆ. ಕೇಂದ್ರದವರು ಕೂಡ ನಿಮ್ಮ ಸಹವಾಸ ಬೇಡ ಎಂದಿದ್ದಾರೆ. ತೀರ್ಮಾನ ತೆಗೆದುಕೊಳ್ಳದ ವೀಕ್ ನಾಯಕತ್ವ ಅಂದರೆ ಕಾಂಗ್ರೆಸ್ ನಾಯಕತ್ವ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ ದೇವಸ್ಥಾನ ಬಿಡಲ್ಲ. ಕರ್ನಾಟಕದಲ್ಲಿ ಇಷ್ಟೇ ನಡೆಯುತ್ತಿರೋದು. ಸಿದ್ದರಾಮಯ್ಯ ಗ್ಯಾಂಗ್ ಡಿನ್ನರ್ ಪಾಲಿಟಿಕ್ಸ್ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಅಧಿವೇಶನಕ್ಕೆ ಡಿ.ಕೆ.ಶಿವಕುಮಾರ್ ಬರುತ್ತಿರಲಿಲ್ಲ. ಅಧಿವೇಶನ ನಡೆಯುತ್ತಿರುವಾಗ ಜನಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತು. ಅದು ಬಿಟ್ಟು ಜನರ ತೆರಿಗೆ ಹಣದಲ್ಲಿ ದೇವಸ್ಥಾನ ರೌಂಡ್ ಹಾಕುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

ನ್ಯೂಜಿಲೆಂಡ್ ಯುವಕ, ಕರ್ನಾಟಕ ವಧು: ದಾವಣಗೆರೆಯಲ್ಲಿ ಸಪ್ತಪದಿ ತುಳಿದ ಹೊಸ ಜೋಡಿ

0

ದಾವಣಗೆರೆ: ನ್ಯೂಜಿಲೆಂಡ್ ನಿವಾಸಿ ಕ್ಯಾಂಬೆಲ್ ವಿಲ್ ವರ್ಥ್ ಹಾಗೂ ದಾವಣಗೆರೆಯ ದಂತವೈದ್ಯೆ ಪೂಜಾ ನಾಗರಾಜ್ ಇಂದು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರು.

ಇಬ್ಬರೂ ಪರಸ್ಪರ ಪ್ರೀತಿಸಿ, ಕುಟುಂಬಗಳ ಒಪ್ಪಿಗೆ ಪಡೆದ ಬಳಿಕ ದಾವಣಗೆರೆಯ ಖಾಸಗಿ ರೆಸಾರ್ಟ್‌ನಲ್ಲಿ ಕಲ್ಯಾಣ ನೆರವೇರಿತು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿ ಜನ್ಮಗೊಂಡ ಪೂಜಾ ನಾಗರಾಜ್ ವೃತ್ತಿಯಲ್ಲಿ ದಂತವೈದ್ಯೆ. ಅವರ ತಂದೆ ನಾಗರಾಜ್ ಸಿವಿಲ್ ಇಂಜಿನಿಯರ್ ಆಗಿದ್ದು, 2005 ರಲ್ಲಿ ನ್ಯೂಜಿಲೆಂಡ್‌ಗೆ ಹೋಗಿ ನೆಲೆಸಿದ್ದರು. ಆದರೆ, ಪೂಜಾ ತನ್ನ ವಿದ್ಯಾಭ್ಯಾಸವನ್ನು ದಾವಣಗೆರೆಯಲ್ಲಿ ಮುಗಿಸಿಕೊಂಡು, ನಂತರ ನ್ಯೂಜಿಲೆಂಡ್‌ಗೆ ಭೇಟಿ ನೀಡಿದಾಗ ಕ್ಯಾಂಬೆಲ್ ವಿಲ್ ವರ್ಥ್ ಅವರ ಪರಿಚಯ ಆಗಿ ಅದು ಪ್ರೀತಿಗೆ ತಿರುಗಿದೆ.

ಕ್ಯಾಂಬೆಲ್ ವಿಲ್ ವರ್ಥ್ ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿದ್ದು, ನ್ಯೂಜಿಲೆಂಡ್‌ನಲ್ಲಿ ನೆಲೆಸಿದ್ದಾರೆ. ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ.  ವಿವಾಹ ಸಮಾರಂಭವು ಕುಟುಂಬ ಮತ್ತು ಸ್ನೇಹಿತರೊಂದಿಗೆ ಭವ್ಯವಾಗಿ ನಡೆಯಿತು. ಪೂಜಾ ಮತ್ತು ಕ್ಯಾಂಬೆಲ್ ವಿಲ್ ವರ್ಥ್ ಇಬ್ಬರೂ ತಮ್ಮ ಹೊಸ ಜೀವನವನ್ನು ಸಂತೋಷದಿಂದ ಆರಂಭಿಸಿದ್ದಾರೆ. ಕುಟುಂಬಗಳು, ಸ್ನೇಹಿತರು ಮತ್ತು ಹತ್ತಿರದ ಬಂಧುಗಳು ವಿವಾಹದಲ್ಲಿ ಪಾಲ್ಗೊಂಡು ಹೊಸ ಜೋಡಿಗೆ ಶುಭಕೋರಿದರು.

ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ; ಕಾಂತಾರ ಯಶಸ್ಸಿನ ಬಳಿಕ ವಿಶೇಷ ಪೂಜೆ

0

ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಮಹತ್ವ ಹೊಂದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಇಂದು ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿದರು.

ಕಾಂತಾರ ಚಿತ್ರದ ಭರ್ಜರಿ ಯಶಸ್ಸಿನ ಹಿನ್ನೆಲೆ ಹನುಮಂತನಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ದಂಪತಿ ಸಮೇತರಾಗಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ನಟ ರಿಷಬ್ ಶೆಟ್ಟಿ ಅವರು ಸುಮಾರು 575 ಮೆಟ್ಟಿಲುಗಳನ್ನು ಏರಿ ಮೂಲ ದೇವರ ದರ್ಶನ ಪಡೆದುಕೊಂಡರು. ಈ ವೇಳೆ ಹನುಮಂತನಿಗೆ ಮಹಾಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ನಂತರ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ಅವರು ರಿಷಬ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಬೆಟ್ಟದ ಮೇಲಿಂದ ತುಂಗಭದ್ರಾ ನದಿ, ವಿಜಯನಗರದ ಹಂಪಿ ಹಾಗೂ ಕಿಷ್ಕಿಂದ ಪ್ರದೇಶದ ಸುತ್ತಲಿನ ಬೆಟ್ಟಗಳ ಮನಮೋಹಕ ನೋಟವನ್ನು ರಿಷಬ್ ಶೆಟ್ಟಿ ವೀಕ್ಷಿಸಿದರು.

ಬಿಎಂಐಸಿ ಪ್ರಕರಣ: ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿದ್ದಕ್ಕೆ HD ದೇವೇಗೌಡರು ಅಸಮಾಧಾನ!

0

ಬೆಂಗಳೂರು:- ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆ (ಬಿಎಂಐಸಿ) ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಸೇರಿಸಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಒಪ್ಪಂದವಾಗುವ ವೇಳೆ ತಾವು ಮುಖ್ಯಮಂತ್ರಿ ಆಗಿದ್ದೆ, ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಯೋಜನೆಗೆ ಹಣಕಾಸು ಇಲಾಖೆಯ ಅನುಮತಿಯೂ ಇದ್ದು, ಎಲ್ಲಾ ದಾಖಲೆಗಳ ಮಾಹಿತಿಯೂ ಸಿದ್ದರಾಮಯ್ಯ ಅವರಿಗೆ ತಿಳಿದಿದೆ. ಆದರೂ ಕೆಲ ರೈತರು ತಮ್ಮನ್ನೂ ಪಾರ್ಟಿ ಮಾಡಿರುವುದು ಬೇಸರ ತಂದಿದೆ ಎಂದು ಹೇಳಿದರು.

ಈ ಇಳಿ ವಯಸ್ಸಿನಲ್ಲೂ ವಕೀಲರಿಗೆ ಶುಲ್ಕ ನೀಡಿ ಕೋರ್ಟ್‌ನಲ್ಲಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

error: Content is protected !!