Home Blog Page 2760

ಚಾಳುಕ್ಯ-ಹೊಯ್ಸಳರ ಗುಡಿಗಳ ಮೇಲೆ ಕುಳ್ಳು, ಗುಡಿಯೇ ಸ್ಟೋರ್‌ರೂಂ!  ಲಕ್ಕುಂಡಿಯ ಭವ್ಯ ಪರಂಪರೆಯ ದೇವಾಲಯಗಳ ದಿವ್ಯ ನಿರ್ಲಕ್ಷ್ಯ

0

ವಿಜಯಸಾಕ್ಷಿ ಕನ್ನಡ‌‌ದಿನಪತ್ರಿಕೆ, ಗದಗ: ಮೊನ್ನೆ ಮೊನ್ನೆ ತಾನೇ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ೩ ಕೋಟಿ ರೂ. ಬಿಡುಗಡೆ ಮಾಡಿದೆ. ಆಗಿಂದ ಮತ್ತೆ ಸುದ್ದಿಯಲ್ಲಿದೆ ಲಕ್ಕುಂಡಿ. ಆದರೆ ಹತ್ತಿರದಿಂದ ನೋಡಿದವರಿಗೆ ಲಕ್ಕುಂಡಿ ಕಸದ ಗುಂಡಿಯೇ ಆಗಿದೆ.

101 ದೇವಾಲಯಗಳು, 101 ಬಾವಿಗಳು ಎಂಬ ಕೀರ್ತಿಯ ಜೊತೆಗೆ ಉತ್ತರ ಕರ್ನಾಟಕದ ದೇವಾಲಯಗಳ ತೊಟ್ಟಿಲು ಎನಿಸಿರುವ ಲಕ್ಕುಂಡಿಯಲ್ಲಿ ಇಲ್ಲಿವರೆಗೆ ಪ್ರವಾಸಿಗರ ಕಣ್ಣಿಗೆ ಕಾಣ ಸಿಗುವುದು ಹತ್ತೋ, ಹನ್ನೆರಡೋ ದೇವಾಲಯಗಳು ಮಾತ್ರ. ಉಳಿದವು ಮಾಯವಾದವೇ ಅನ್ನಬೇಡಿ. ಇವೆ, ಆದರೆ ಅವು ಸ್ಥಳೀಯ ಕುಟುಂಬಗಳ ಸ್ಟೋರ್ ರೂಂ ಆಗಿ ಪರಿವರ್ತನೆಯಾಗಿವೆ ಅಷ್ಟೇ.

ಹಾಗಂತ ‘ಚರಿತ್ರೆಯ ಅರಿವಿಲ್ಲದವರು’ ಅಂತಾ ಅವರನ್ನು ತೆಗಳುತ್ತ ಕೂಡಬೇಡಿ. ಪ್ರಾಚ್ಯ ವಸ್ತು ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಈ ದೇವಾಲಯಗಳು ಅವಕೃಪೆಗೆ ಒಳಗಾಗಿವೆ. ರಣ ರಣ ಹೊಡೆಯುವ ದೇವಾಲಯಗಳನ್ನು ಸ್ಥಳೀಯ ಕುಟುಂಬಗಳು ತಮ್ಮ ನಿತ್ಯದ ಬದುಕಿಗೆ ಹೊಂದುವಂತೆ ಮಾರ್ಪಡಿಸಿಕೊಂಡಿವೆ.

ಕೆಲವರಿಗೆ ದೇವಾಲಯದ ಗೋಡೆಗಳು ಕುಳ್ಳು ಉತ್ಪಾದನೆಯ ಕೇಂದ್ರಗಳು. ಗುಡಿಯ ಗೋಡೆಗೆ ರಪ್ಪಂತ ಪೆಂಡಿ ಸೆಗಣಿ ಒಗೆದರೆ ಫಟ್ಟಂತ ಗೋಡೆಯನ್ನು ಅಪ್ಪಿಕೊಳ್ಳುತ್ತದೆ. ಎರಡು ದಿನ ಬಿಸಲಿಗೆ ಬಿದ್ದರೆ ಕುಳ್ಳು ರೆಡಿ. ಆ ಮೂಲಕ ಅವರ ಒಲೆಯಲ್ಲಿ ಬೆಂಕಿ ಬಿದ್ದು ಪಟ್‌ಪಟ್ ಸಪ್ಪಳದೊಂದಿಗೆ ರೊಟ್ಟಿಯೂ ಸಿದ್ಧ.

ಇನ್ನು ಕೆಲವರು, ಮಳೆ-ಗಾಳಿಯಿಂದ ರಕ್ಷಿಸಲು ಕಟ್ಟಿಗೆ ತುಂಡುಗಳು, ಕಬ್ಬಿಣದ ಸಾಮಾನು ಇತ್ಯಾದಿ ವಸ್ತುಗಳನ್ನು ದೇವಾಲಯದ ಮಂಟಪದಲ್ಲಿ ಸಂಗ್ರಹಿಸುವ ‘ಹಾಬಿ’ ಹೊಂದಿದ್ದಾರೆ. ಇವೆಲ್ಲವನ್ನೂ ಟೀಕಿಸುವ ಅಥವಾ ಹೀಗಳೆಯುವ ಉದ್ದೇಶಕ್ಕೆ ಇದನ್ನು ಬರೆಯುತ್ತಿಲ್ಲ. ‘ಉಜ್ವಲ’ದಂತಹ ಸಾವಿರಾರು ಕೋಟಿ ರೂ. ಗಳ ಯೋಜನೆ ಬಂದರೂ ಒಲೆಗೆ ಕುಳ್ಳು ಹಾಕಿದರಷ್ಟೇ ಇವರ ರೊಟ್ಟಿ ಬೇಯುತ್ತಿದೆ ಎಂದರೆ, ‘ಉಜ್ವಲ’ಗಳ ಯಶಸ್ಸು ಅರ್ಥವಾಗುತ್ತದೆ. ಜನ ಅನಿವಾರ್ಯಕ್ಕೆ ಈ ದೇವಾಲಯ ಬಳಸುತ್ತಿದ್ದಾರೆಯೇ ಹೊರತು, ಅವರಿಗೇನೂ ಗುಡಿ ಒಳಗಿನ ದೇವರ ಭಕುತಿ ಕಡಿಮೆಯೇನಾಗಿಲ್ಲ.

ಆದರೆ, ಈ ದೇವಾಲಯಗಳನ್ನು ಸಂರಕ್ಷಿಸಬೇಕಾದ ಪ್ರಾಚ್ಯ ವಸ್ತು ಸಂರಕ್ಷಣಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಒಟ್ಟಾರೆ ಜಿಲ್ಲಾಡಳಿತ ಏನು ಮಾಡುತ್ತಿವೆ ಎಂಬ ಪ್ರಶ್ನೆ ಕಾಡುತ್ತದೆ.  ಲಕ್ಕುಂಡಿಯನ್ನು ಮಾದರಿ ಪ್ರವಾಸಿ ತಾಣ ಮಾಡಲೆಂದೇ 2017 ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿತ್ತು. ವಾರ್ಷಿಕ 3 ಕೋಟಿ ರೂ. ಬಜೆಟ್ ನೀಡುವ ಭರವಸೆ ನೀಡಲಾಗಿತ್ತು. ಆರಂಭದಲ್ಲಿ ೫೦ ಲಕ್ಷ ರೂ. ಬಿಡುಗಡೆಯೂ ಆಗಿತ್ತು. ಆದರೆ ಕಚೇರಿ, ಸಿಬ್ಬಂದಿ ನೇಮಕದ ಕೊರತೆಯಿಂದ ಆ ರೊಕ್ಕ ವಾಪಾಸ್ ಸರ್ಕಾರಕ್ಕೆ ಹೋಗಿತ್ತು. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರ 3 ಕೋಟಿ ರೂ. ಬಿಡುಗಡೆ ಮಾಡಿದೆ. ಈಗಲಾದರೂ ಲಕ್ಕುಂಡಿ ಒಂದು ಪರಿಪೂರ್ಣ ಪ್ರವಾಸಿ ತಾಣವಾಗಿ, ಐತಿಹಾಸಿಕ ವಾಸ್ತುಶಿಲ್ಪದ ಭವ್ಯ ಇತಿಹಾಸವನ್ನು ತೋರಿಸುವ ಜೀವಂತ ಮ್ಯೂಸಿಯಂ ಆಗಿ ಬದಲಾಗುವುದೇ?

      ಚಾಲುಕ್ಯ ವಾಸ್ತುಶಿಲ್ಪದ ತಾಣ

ಲಕ್ಕುಂಡಿಯನ್ನು ಜೈನ ದೇವಾಲಯಗಳ ತವರೆಂದೇ ಗುರುತಿಸಲಾಗುತ್ತದೆ. ಇಲ್ಲಿ 11 ನೇ ಶತಮಾನದ ಶೈವ ಪರಂಪರೆ ಸಾರುವ ದೇವಾಲಯಗಳು ಸಾಕಷ್ಟಿವೆ. ಚಾಲುಕ್ಯ ಶೈಲಿಯೆಂದೇ ಹೆಸರಾದ ಚಾಲುಕ್ಯ ವಾಸ್ತುಶಿಲ್ಪ ಇಲ್ಲಿ ಮೈದಾಳಿದೆ. ವಿಶಾಲ ದೇವಸ್ಥಾನ, ಮಂಟಪ, ದೇವಾಲಯದ ಎದುರು ನಂದಿ ವಿಗ್ರಹ, ಒಳಗೆ ಶಿವಲಿಂಗ- ಈ ಮಾದರಿಯ ದೇವಾಲಯಗಳೂ ಇವೆ, ಜೈನ ಪರಂಪರೆ ಸಾರುವ ದೇವಾಲಯಗಳೂ ಇವೆ. ಚಾಲುಕ್ಯರ ನಂತರ ಬಂದ ಹೊಯ್ಸಳರೂ ಈ ದೇವಾಲಯಗಳನ್ನು ಸಂರಕ್ಷಿಸಿದ್ದಾರೆ. ದಾನಚಿಂತಾಮಣಿ ಅತ್ತಿಮಬ್ಬೆ ಲಕ್ಕುಂಡಿಯ ಸೊಸೆ ಎನ್ನುವುದಕ್ಕಿಂತ ಮನೆ ಮಗಳು ಇದ್ದಂತೆ. ಶಿಲ್ಪಕಲೆ ಜೊತೆಗೆ ಸಾಹಿತ್ಯವನ್ನೂ ಪೋಷಿಸಿದ ಅತ್ತಿಮಬ್ಬೆ ನಾಡಿನ ಅನನ್ಯ ಮಹಿಳೆಯರಲ್ಲಿ ಒಬ್ಬರು.

ಅತಿಯಾದ ಮಳೆಗೆ ಕೊಚ್ಚಿ ಹೋದ ಸೇತುವೆ

0

ವಿಜಯಸಾಕ್ಷಿ ಸುದ್ದಿ ಗದಗ
ಜಿಲ್ಲೆಯ ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿ ಹೋಗಿದೆ.
ನರಗುಂದ ತಾಲೂಕಿನ ಹಿರೇಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ನರಗುಂದ ಹಾಗೂ ಗುರ್ಲಕಟ್ಟಿ ಸಂಪರ್ಕ ಕಲ್ಪಿಸುವ ಸೇತುವೆ ಹಿರೇಹಳ್ಳದ ರಭಸಕ್ಕೆ ಕೊಚ್ಚಿ ಹೋಗಿದೆ. ಗುರ್ಲಕಟ್ಟಿ ಹಾಗೂ ಕಣಿಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಈಗಾಗಲೇ ಐದಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಕಟಾವಿಗೆ ಬಂದ ಪೈರು ನೀರುಪಾಲಾಗಿದ್ದು, ರೈತರ ಚಿಂತಾಕ್ರಾಂತರಾಗಿದ್ದಾರೆ.

ಪೊಲೀಸರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ: ಅನುಶ್ರೀ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಮಂಗಳೂರು
ಡ್ರಗ್ಸ್ ದಂಧೆ ವಿಚಾರವಾಗಿ ವಿಚಾರಣೆಗೆ ಇಂದು ಅನುಶ್ರೀ ಹಾಜರಾಗಿ, ಪೊಲೀಸರ ಎಲ್ಲಾ ಪ್ರಶ್ನೆಗಳಿಗೆ ಸಮಾಧಾನಕರ ಉತ್ತರ ನೀಡಿದ್ದಾರೆ.
ವಿಚಾರಣೆ ನಂತರ ಈ ವಿಚಾರವನ್ನು ಸ್ವತಃ ಅನುಶ್ರೀ ಅವರೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಕಿಶೋರ್ ಮತ್ತು ತರುಣ್ ಎಂಬ ಕೊರಿಯೋಗ್ರಾಫರ್ ಗಳ ಪರಿಚಯ ಇತ್ತು. ಅದು ಕೊರಿಯೋಗ್ರಾಫಿ ವಿಚಾರವಾಗಿ ಅಷ್ಟೇ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದಿದ್ದಾರೆ.
ಮಂಗಳೂರಿನ ಪಣಂಬೂರು ಎಸಿಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿದರೆ ಖಂಡಿತ ಬರುತ್ತೇನೆ. ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ನಮ್ಮನ್ನು ಕಾಡುತ್ತಿರುವ ಡ್ರಗ್ ಎಂಬ, ಈ ರೋಗವನ್ನು ಹೊಡೆದೋಡಿಸಲು ಎಲ್ಲರೂ ಪೊಲೀಸರಿಗೆ ಕೈಜೋಡಿಸಬೇಕು ಎಂದರು.

ರಬ್ ರಬ್ ಹೊಡೆಯುವ ರಾಹುಲ್; ಶೋ ಕೊಡುತ್ತಿರುವ ಕೊಹ್ಲಿ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಆಟವೆಂದರೆ ಆಟಾನೇ. ಇಲ್ಲಿ ಯಶಸ್ಸು ನೂರಾರು ಪ್ರಶಂಸೆ ಗಳಿಸಿದರೆ, ಸೋಲು ಸಾವಿರ ಸಾವಿರ ಟೀಕೆಗಳನ್ನು ಎದುರಿಸಬೇಕಾಗುತ್ತದೆ.
ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (ಇದು ಕರ್ನಾಟಕದ ತಂಡ ಎಂದು ಪರಿಭಾವಿಸಿದವರೇ ಹೆಚ್ಚು. ಆದರೆ ಐಪಿಎಲ್ ಇತಿಹಾಸ ಬೇರೆ ಕತೆ ಹೇಳುತ್ತದೆ.

ತಂಡದ ನಾಯಕ ವಿರಾಟ್ ಕೊಹ್ಲಿ ಎರಡು ಮ್ಯಾಚುಗಳಲ್ಲಿ ವಿಫಲವಾದ ನಂತರ, ಹಿರಿಯ ನಿವೃತ್ತ ಆಟಗಾರ ಸುನೀಲ್ ಗಾವಸ್ಕರ್ ಮಾಡಿದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವಿಪರೀತ ಸುದ್ದಿ ಮಾಡುತ್ತಿದೆ. ಗಾವಸ್ಕರ್ ವಿರಾಟ್ ಪತ್ನಿ ಅನುಷ್ಕಾರಿಗೆ ಅವಮಾನಿಸಿದ್ದಾರೆ, ಇದು ಥರ್ಡ್ ರೇಟ್ ಹೇಳಿಕೆ ಎಂದು ಕೆಲವರು ಅಪಾದಿಸುತ್ತಾರೆ.

ಲಾಕ್‌ಡೌನ್ ಸಮದರ್ಭದಲ್ಲಿ ಅನುಷ್ಕಾ ಎಸೆದ ಟೆನ್ನಿಸ್ ಬಾಲ್ ಎದುರಿಸುತ್ತ ‘ಪ್ರಾಕ್ಟೀಸ್’ ಮಾಡುತ್ತ ಕುಳಿತ ವಿರಾಟ್ ಈಗ ಫೇಲ್ ಆಗುತ್ತಿದ್ದಾರೆ ಎಂಬ ಅರ್ಥದಲ್ಲಿ ಗಾವಸ್ಕರ್ ಟ್ವೀಟ್ ಮಾಡಿದ್ದರು. ಇದೆಲ್ಲ ಹಾಳಾಗಿ ಹೋಗಲಿ, ಅವತ್ತು ವಿರಾಟ್ ಪಂಜಾಬ್ ತಂಡದ ನಾಯಕ, ಕನ್ನಡಿಗ ರಾಹುಲ್ ಅವರ 2 ಕ್ಯಾಚ್ ಮಿಸ್ ಮಾಡಿದ್ದರು.

ಆಮೇಲೆ ಶುರುವಾತು ನೋಡಿ ರಾಹುಲ್ ಆರ್ಭಟ. ರಬ್ ರಬ್ ಸಿಕ್ಸರ್, ಬೌಂಡರಿಗಳ ಸುರಿಮಳೆ. 19 ಮತ್ತು 20 ನೇ ಓವರ್‌ಗಳಿಂದ ರಾಹುಲ್  49 ರನ್ ಹೆಕ್ಕಿಬಿಟ್ಟರು. 69 ಎಸೆತಗಳಲ್ಲಿ 132 ರನ್ ಚಚ್ಚುವ ಮೂಲ ಕೊಹ್ಲಿ ಬಳಗಕ್ಕೆ ಶಾಕ್ ಕೊಟ್ಟರು. 14 ಬಾಂಡರಿ, 6 ಸಿಕ್ಸ್ರ್‌ಗಳು ಮೋಹಕವಾಗಿದ್ದವು.

ಮೊದಲ ಪಂದ್ಯದಲ್ಲಿ ಸುಪರ್ ಓವರ್‌ನಲ್ಲಿ ಎಡವಿದ್ದ ನಾಯಕ ರಾಹುಲ್, 2 ನೇ ಪಂದ್ಯದಲ್ಲಿ ತನ್ನೂರಿನ ಹೆಸರು ಹೊಂದಿರುವ ರಾಯಲ್ಸ್ ಚಾಲೆಂಜರ್ಸ್ ಗೆ ಮಣ್ಣು ಮುಕ್ಕಿಸಿದರು.
ಇರ್ಫಾನ್ ಪಠಾಣ್ ಹೇಳಿದಂತೆ, ಟ್ವೆಂಟಿ-20 ಪಂದ್ಯಗಳಲ್ಲಿ ವಿರಾಟ್‌ಗಿಂತ ರಾಹುಲ್ ಗ್ರೇಟ್.         

ಸತತ ಮಳೆಗೆ ಮಣ್ಣಿನ‌ ಮನೆ ಕುಸಿತ; ವ್ಯಕ್ತಿಗೆ ಗಾಯ, ಕರು ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗ್ಗೆಯೂ ಜಿಟಿಜಿಟಿ ಮಳೆ ಮುಂದುವರೆದಿದೆ. ಉತ್ತರಿ ಮಳೆಗೆ ರೈತರು ಮತ್ತು ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕು ಬೆಣಕಲ್ ಗ್ರಾಮದಲ್ಲಿ ಚನ್ನಪ್ಪ ಬಳಗೇರಿ ಎಂಬುವರ ಮಣ್ಣಿನ ಮನೆಯ ಮೇಲ್ಚಾವಣಿ ಸಂಪೂರ್ಣ ಕುಸಿದು ಬಿದ್ದಿದ್ದು, ಮಲಗಿದಲ್ಲೇ ಆಕಳು ಮೃತಪಟ್ಟಿದೆ. ಮನೆಯಲ್ಲಿ ಮಲಗಿದ್ದ ಚನ್ನಪ್ಪ ಬಳಗೇರಿ ಅವರ ಮಗ ಮಂಜುನಾಥ ಬಳಗೇರಿ(28) ಗಂಭೀರ ಗಾಯಗೊಂಡಿದ್ದಾನೆ.

ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಮಣ್ಣಿನಲ್ಲಿ ಮುಚ್ಚಿ ಹೋಗಿರುವ ಮೃತ ಆಕಳ ಕಳೆಬರ ಹೊರ ತೆಗೆಯಲು ಗ್ರಾಮಸ್ಥರ ಹರಸಾಹಸ ಮಾಡುತ್ತಿದ್ದಾರೆ.

ಇನ್ನು ಈ ಜಿಟಿಜಿಟಿ ಮಳೆ ಕೊಪ್ಪಳ ಜಿಲ್ಲಾದ್ಯಂತ ಇದ್ದು, ಜಿಲ್ಲೆಯ ಬಹುತೇಕ ಕಡೆ ಹಳ್ಳ- ಕೊಳ್ಳ ತುಂಬಿ ಹರಿಯುತ್ತಿವೆ. ಅಪಾರ ಬೆಳೆ ಮತ್ತು ಆಸ್ತಿ ಹಾನಿಯಾಗಿದ್ದು, ಮಳೆ ಮುಂದುವರೆದ ಹಿನ್ನೆಲೆ ಇನ್ನೂ ಪಕ್ಕಾ ಮಾಹಿತಿ ಲಭ್ಯವಾಗಿಲ್ಲ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗ ಶುರುವಾಯ್ತು ದೀಪಿಕಾ ವಿಚಾರಣೆ; ಡ್ರಗ್ಸ್-ಬಾಲಿವುಡ್ ಪ್ರಕರಣಕ್ಕೆ ಹೊಸ ತಿರುವು?

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಬಾಲಿವುಡ್ ತಾರೆ, ಮೋಹಕ ನಗುವಿನ ಮಾದಕ ತಾರೆ, ಪುಟ್ಟಾಪೂರಾ ಕನ್ನಡತಿ ದೀಪಿಕಾ ಪಡುಕೋಣೆ ಇದೀಗ ಮಾದಕದ್ರವ್ಯ ನಿಯಂತ್ರಣ ಕಚೇರಿಗೆ ಆಗಮಿಸಿ, ವಿಚಾರಣೆ ಎದುರಿಸುತ್ತಿದ್ದಾರೆ. ಇವತ್ತು ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್‌ರವರ ವಿಚಾರಣೆಯೂ ನಡೆಯಲಿದೆ.


ಈ ವಿಚಾರಣೆಯಿಂದ ಬಾಲಿವುಡ್ ಮತ್ತು ಡ್ರಗ್ಸ್ ಮಾಫಿಯಾದ ಜೊತೆಗಿನ ನಂಟಿನ ಕುರಿತು ಸ್ಫೋಟಕ ವಿಷಯಗಳು ಬಯಲಾಗಬಹುದು ಎನ್ನಲಾಗುತ್ತಿದೆ. ದೀಪಿಕಾರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರನ್ನು ಶುಕ್ರವಾರ ಸುದೀರ್ಘವಾಗಿ ವಿಚಾರಣಗೆ ಒಳಪಡಿಸಲಾಗಿತ್ತು.

ಜೂನ್ 14 ರಂದು ನಿಧನರಾದ ನಟ ಸುಶಾಂತ್ ಸಿಂಗ್ ಅವರ ಸಾವಿನ ತನಿಖೆ ಈಗ ಬಾಲಿವುಡ್ ಮತ್ತು ಡ್ರಗ್ಸ್ ಸಂಪರ್ಕದ ಕಡೆ ತಿರುಗಿದೆ. ರಾಜ್ಯದಲ್ಲೂ ಡ್ರಗ್ಸ್ ಮತ್ತು ಸ್ಯಾಂಡಲ್‌ವುಡ್ ಕುರಿತು ಸಿಸಿಬಿ ತೀವ್ರ ತನಿಖೆ ನಡೆಸುತ್ತಿದೆ. ಸಂಜನಾ, ರಾಗಿಣಿ ಜೈಲು ಪಾಲಾಗಿದ್ದಾರೆ. ಐಂದ್ರಿತಾ, ದಿಗಂತ್, ಲೂಸ್ ಮಾದ ಖ್ಯಾತಿಯ ಯೋಗೇಶ್ ಮುಂತಾದವರು ವಿಚಾರಣೆಗೆ ಒಳಪಟ್ಟಿದ್ದಾರೆ. 

ಲಾಲೂ ಪುತ್ರ ಸಿಎಂ ಅಭ್ಯರ್ಥಿ: ಮಿತ್ರಪಕ್ಷಗಳ ವಿರೋಧ? ದೇಶದ ಗಮನ ಸೆಳೆದಿರುವ ಬಿಹಾರ್ ಚುನಾವಣೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಪಾಟ್ನಾ: ಬಿಹಾರ್ ವಿಧಾನಸಭೆಯ ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ ನಂತರ, ಬಿಹಾರ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಅಲ್ಲೀಗ ಎನ್‌ಡಿಎ ಭಾಗವಾಗಿರುವ ಸಮಾಜವಾದಿ ಪಾರ್ಟಿಯ ನಿತೀಶ್‌ಕುಮಾರ್ ಅವರೇ ಈ ಸಲವೂ ಮುಖ್ಯಮಂತ್ರಿ ಅಭ್ಯರ್ಥಿ.  

ಅಲ್ಲಿನ ಪ್ರಮುಖ ವಿರೋಧ ಪಕ್ಷವಾಗಿರುವ ಆರ್‌ಜೆಡಿ, ಲಾಲ್ಲೂ ಪ್ರಸಾದ್ ಯಾದವ್‌ರ ಪುತ್ರ ತೇಜಸ್ವಿ ಯಾದವ್ ತನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸಿದೆ. ಆದರೆ, ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ/ಮಾಡಿಕೊಳ್ಳಲಿರುವ ಪಕ್ಷಗಳಿಗೆ ಇದು ಅಸಮಾಧಾನ ಮೂಡಿಸಿದೆ.
ರಾಷ್ಟ್ರೀಯ ಲೋಕ್ ಸಮತಾ ಪಾರ್ಟಿಯ ಉಪೇಂದ್ರ ಕುಶ್ವಾಹಾ, ತೇಜಸ್ವಿಯನ್ನು ನಾಯಕನೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತ ಮೈತ್ರಿಯ ಭಾಗವಾಗಿರುವ ಕಾಂಗ್ರೆಸ್ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದೆ. ‘ತನ್ನ ನಾಯಕನನ್ನು ಆರ್‌ಜೆಡಿ ಆಯ್ದುಕೊಂಡಿದೆ. ಅದು ಆ ಪಕ್ಷದ ವಿಷಯ. ಸಿಎಂ ಅಭ್ಯರ್ಥಿ ವಿಷಯ ಈಗ ಚರ್ಚೆಯಲ್ಲಿ ಇಲ್ಲ’ ಎಂದಿದೆ. ಈ ಕಡೆ ಎನ್‌ಡಿಎ ಮೈತ್ರಿಕೂಟ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರನ್ನೇ ಪ್ರಾಜೆಕ್ಟ್ ಮಾಡಿ ರಭಸದ ಪ್ರಚಾರ ಆರಂಭಿಸಿದೆ.


ಕೊರೋನಾ-ಲಾಕ್‌ಡೌನ್ ನಂತರ ನಡೆಯುತ್ತಿರುವ ಮಹತ್ವದ ಚುನಾವಣೆ ಇದಾಗಿದ್ದು, ಇದರ ಫಲಿತಾಂಶ ದೇಶದ ಮುಂದಿನ ರಾಜಕೀಯ ಆಗು-ಹೋಗುಗಳಿಗೆ ದಿಕ್ಸೂಚಿ ಆಗಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಅಕ್ಟೋಬರ್ 28 ರಿಂದ ಚುನಾವಣೆ ಆರಂಭವಾಗಲಿದ್ದು 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಶ್ವಾದಾದ್ಯಂತ ಹರಡಿರುವ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯು ನಡೆಯುತ್ತಿರುವ ಬಹುದೊಡ್ಡ  ಚುನಾವಣೆ ಇದಾಗಿದೆ. ಹಾಗಾಗಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಹಲವು ನಿಬಂಧನೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಪಾಸಿಟಿವ್ ಇರುವವರು ಸಹ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.


ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿಯೂ ಸಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿವೆ. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿವೆ.


ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ. ನಿತೀಶ್ ಕುಮಾರ್‌ರವರು ಕೊರೋನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿರುವ ಅವರು ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಜೆಡಿಯುನ ನಿತೀಶ್ ಕುಮಾರ್ ನಾಲ್ಕನೇ ಬಾರಿಗೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2015 ರಲ್ಲಿ ಆರ್‌ಜೆಡಿ, ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಜಯಿಸಿ ಸಿಎಂ ಆಗಿದ್ದ ಅವರು 2017 ರಲ್ಲಿ ಮೈತ್ರಿ ಮುರಿದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕಾರಣಕ್ಕೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚುನಾವಣಾ ಚತುರ ಎಂದೇ ಖ್ಯಾತಿಯಾದ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಯುವಜನರನ್ನು ಸಂಘಟಿಸುತ್ತಿದ್ದಾರೆ. ಅದೇ ರೀತಿಯಾಗಿ ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿ ಗಮನಸೆಳೆದಿದ್ದ ಸಿಪಿಐ ಪಕ್ಷದ ಯುವ ಮುಖಂಡ ಕನ್ಹಯ್ಯ ಕುಮಾರ್ ಸಹ ಈ ಚುನಾವಣೆಯಲ್ಲ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ಅದೇ ರೀತಿಯಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಯುವ ದಲಿತ ಹೋರಾಟಗಾರ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಕೂಡ ‘ಅಜಾದ್ ಸಮಾಜ ಪಕ್ಷ’ ಸ್ಥಾಪಿಸಿದ್ದು, ಬಿಹಾರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಚೀನಾ, ಪಾಕಿಸ್ತಾನಕ್ಕೆ ಪಾಠ ಮಾಡಲಿರುವ ಪ್ರಧಾನಿ? ಇವತ್ತು ಸಂಜೆ ವಿಶ್ವಸಂಸ್ಥೆ ಮೀಟಿಂಗ್‌ನಲ್ಲಿ ಮೋದಿ ಭಾಷಣ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇವತ್ತು ಸಂಜೆ ಭಾರತೀಯ ಕಾಲಮಾನ 6.30ಕ್ಕೆ (ನ್ಯೂಯಾರ್ಕ್ ಕಾಲಮಾನ 9.00 ಎ.ಎಂ) ವಿಡಿಯೊ ಕಾನ್ಫರೆನ್ಸ್ ಮೂಲಕ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೀಟಿಂಗ್‌ನಲ್ಲಿ ಪ್ರಧಾನಿ ನರೆಂದ್ರ ಮೋದಿ ಮಾತನಾಡಲಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಹೆಕ್ಕಿರುವ ಮಾಹಿತಿ ಪ್ರಕಾರ, ಪ್ರಧಾನಿ ಚೀನಾ ಮತ್ತು ಪಾಕಿಸ್ತಾನಗಳ ಧೋರಣೆಗಳ ಮೇಲೆ ದಾಳಿ ಮಾಡಲಿದ್ದಾರೆ. ಇದು ಒಂದು ಸೂಕ್ಷ್ಮ ನಡೆಯಾಗಿದ್ದು, ವಿಶ್ವ ಶಾಂತಿಗೆ ಚೀನಾದ ಪಾತ್ರವನ್ನು ಒತ್ತಿ ಹೇಳುತ್ತಲೇ, ಅದು ಗಡಿ ವಿಷಯದಲ್ಲಿ ಮಾಡುತ್ತಿರುವ ತಂಟೆಯನ್ನು ಬಿಚ್ಚಿಡಲಿದ್ದಾರೆ.

ಆದರೆ ಪಾಕಿಸ್ತಾನದ ಸಂಗತಿ ಮಾತನಾಡುವಾಗ, ಆ ದೇಶ ಭಯೋತ್ಪಾದಕತೆಯನ್ನು ಪೋಷಿಸುತ್ತಿರುವ ಬಗ್ಗೆ ಕಟುವಾಗಿ ಮಾತನಾಡಲಿದ್ದಾರೆ ಎಂದು ಎಕ್ಸ್ ಪ್ರೆಸ್ ವರದಿ ಮಾಡಿದೆ. 

ಶನಿವಾರ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರ

0

ವಿಜಯಸಾಕ್ಷಿ ಕನ್ನಡ ದಿಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ  53190 ರೂ. ಇದೆ.

ಬೆಂಗಳೂರು, ಮೈಸೂರು, ಮಂಗಳೂರು :22 ಕ್ಯಾರಟ್: 47,300 ರೂ., 24 ಕ್ಯಾರಟ್: 51,570 ರೂ.
ಹುಬ್ಬಳ್ಳಿ: 22 ಕ್ಯಾರಟ್:  46,704 ರೂ., 24 ಕ್ಯಾರಟ್: 50,950 ರೂ.

ಕಪ್ಪತಗುಡ್ಡದ ಮೇಲೆ ಚಿನ್ನದ ಕರಿನೆರಳು: ರಾಮಘಡ್ ಕಂಪನಿಯಿಂದ ಅರ್ಜಿ, ಸರ್ಕಾರದ ಮಟ್ಟದಲ್ಲಿ ಲಾಬಿ! 

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಪ್ಪತಗುಡ್ಡದಲ್ಲಿರುವ ಚಿನ್ನದ ನಿಕ್ಷೇಪಗಳ ಮೇಲೆ ಮತ್ತೊಮ್ಮೆ ಗಣಿ ಮಾಫಿಯಾದ ಕಣ್ಣು ಬಿದ್ದಿದೆ. ಜನರ ಪ್ರತಿರೋಧವಿದ್ದರೂ, ಪರಿಸರಪ್ರಿಯರ ಆಕ್ಷೇಪಗಳಿದ್ದರೂ ಗಣಿ ಲಾಬಿ ಮಾತ್ರ ಮರಳಿ ಯತ್ನ ಮಾಡುವುದನ್ನು ಬಿಟ್ಟಿಲ್ಲ. ಸದ್ಯಕ್ಕೆ ಮತ್ತೊಮ್ಮೆ ಚಿನ್ನದ ಗಣಿಗಾರಿಕೆಯ ಕರಿನೆರಳು ಕಪ್ಪತಗುಡ್ಡವನ್ನು ಆವರಿಸಿದೆ. ರಾಮಘಡ್ ಮಿನರಲ್ಸ್ ಆ್ಯಡ್ ಮೈನಿಂಗ್ ಲಿಮಿಟೆಡ್ (ಆರ್‌ಎಂಎಂಎಲ್) ಈಗ ಚಿನ್ನ ಹೆಕ್ಕಲು ಅನುಮತಿಗಾಗಿ ಕಾದು ಕುಳಿತಿದ್ದು, ಅನುಮತಿಗೆ ಅಗತ್ಯವಾದ ಎಲ್ಲ ತೆರೆಮರೆಯ ‘ಕ್ರಿಯೆ’ಗಳಲ್ಲಿ ಅದು ನಿರತವಾಗಿದೆ ಎನ್ನಲಾಗಿದೆ.

ವನ್ಯಜೀವಿಧಾಮವಾಗಿರುವ ಕಪ್ಪತಗುಡ್ಡ ಪ್ರದೇಶದಲ್ಲಿ ಯಾವುದೇ ಬೃಹತ್ ಕಾಮಗಾರಿಗಳನ್ನೇ ನಡೆಸುವಮತಿಲ್ಲ. ಅಂತದ್ದರಲ್ಲಿ ಗುಡ್ಡವನ್ನೇ ಆಳಕ್ಕೆ ಬಗೆಯುವ ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲಂತೂ ಬರುವುದಿಲ್ಲ. ಆದರೂ ಕಂಪನಿಯೊಂದು ಬಿಟ್ಟೂ ಬಿಡದೇ ಇದರ ಹಿಂದೆ ಬಿದ್ದಿರುವುದನ್ನು ನೋಡಿ, ಚಿನ್ನದ ಗಣಿಗಾರಿಕೆಗೆ ಎಲ್ಲಿ ಅನುಮತಿ ಸಿಕ್ಕೇ ಬಿಡುತ್ತದೆಯೋ ಎಂದು ಪರಿಸರವಾದಿಗಳು ಆತಂಕಗೊಂಡಿದ್ದಾರೆ. ಕೆಲವರು ಪ್ರತಿಭಟನೆಗೂ ತಯಾರಾಗುತ್ತಿದ್ದಾರೆ.

ಈಗಾಗಲೇ ಜಿಲ್ಲೆಯ ಅರಣ್ಯ ಇಲಾಖೆಗೆ ಈ ಅರ್ಜಿಯ ಕುರಿತಂತೆ ಪರಿಶೀಲನೆ ನಡೆಸಿ ವರದಿ ಕಳಿಸಲು ರಾಜ್ಯ ಅರಣ್ಯ ಇಲಾಖೆಯ ಕೇಂದ್ರ ಕಚೇರಿ ಸೂಚಿಸಿದೆ ಎಂದು ಡಿಎಫ್‌ಒ ಸೂರ್ಯಸೇನ್ ತಿಳಿಸಿದ್ದಾರೆ.

              ಪದೇ ಪದೇ ಅರ್ಜಿ!
ಬಳ್ಳಾರಿ ಮೂಲದ ಆರ್‌ಎಂಎಂಎಲ್ ಕಪ್ಪತಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ನಡೆಸಲು ಅವಕಾಶ ಕೋರಿ 2019 ಅಕ್ಟೋಬರ್ 10 ರಂದು ಅರ್ಜಿ ಸಲ್ಲಿಸಿತ್ತು. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ಗ್ರಾಮದ ಸರ್ವೆ ನಂ. 45, 49 ಮತ್ತು 50ರಲ್ಲಿ ಒಟ್ಟು 39.9 ಹೆಕ್ಟೇರ್ ಅರಣ್ಯ ಭೂಮಿಯನ್ನು ಚಿನ್ನದ ಗಣಿಗಾರಿಕೆ ನಡೆಸಲು ಅವಕಾಶ ಕೋರಿ ಅರಣ್ಯ ಇಲಾಖೆ, ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿತ್ತು. ಆರ್‌ಎಂಎಂಎಲ್ ಅರ್ಜಿ ಪರಿಶೀಲಿಸಿದ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿಗಳು, ಕೆಲವು ಮಹತ್ವದ ಮಾಹಿತಿ ಒದಗಿಸಿಲ್ಲ. ಹೀಗಾಗಿ ಈ ಅರ್ಜಿ ಅಪೂರ್ಣವಾಗಿದೆ.

ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿ ಎಂದು ನಾಲ್ಕು ಪುಟದ ವಿವರಣೆ ನೀಡಿತ್ತು. ಹೀಗಾಗಿ ಆರ್‌ಎಂಎಂಎಲ್ ಕಂಪನಿ, ಈಗ ಅಗತ್ಯ ದಾಖಲೆ, ಮಾಹಿತಿಯನ್ನು ಜೋಡಿಸಿಕೊಂಡು ಮತ್ತೆ ಚಿನ್ನದ ಗಣಿಗಾರಿಕೆಗೆ ಅರ್ಜಿ ಹಾಕಿದೆ. ಅರಣ್ಯ ಇಲಾಖೆ ಅರ್ಜಿ ತಿರಸ್ಕರಿಸುವ ಬದಲು, ಪರಿಒಶೀಲನೆ ನಡೆಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.
ಜಿಲ್ಲೆಯ ಜನಪ್ರತಿನಿಧಿಗಳು ಈ ಕುರಿತಂತೆ ಇನ್ನೂ ಎಚ್ಚರ ವಹಿಸಿಲ್ಲ. ಪರಿಸರವಾದಿಗಳು ಮತ್ತು ಸಂಘಟನೆಗಳು ಈ ಬಗ್ಗೆ ಗಮನ ಹರಿಸಿ ಕಪ್ಪತಗುಡ್ಡವನ್ನು ಉಳಿಸಿಕೊಳ್ಳ ಬೇಕಾಗಿದೆ.

ಕ್ವಾರಿಗಳ ಸಂಚು

ಇನ್ನೊಂದು ಕಡೆ ಶಿರಹಟ್ಟಿ ತಾಲೂಕಿನ ವ್ಯಾಪ್ತಿಗೆ ಬರುವ ವನ್ಯಜೀವಿಧಾಮ ಬ್ಲಾಕ್-4 ಅನ್ನು ಅಧಿಸೂಚನೆಯಿಂದ ಹೊರಗಿಡಲು ಜಲ್ಲಿಕಲ್ಲು ಮತ್ತು ಎಂ-ಸ್ಯಾಂಡ್ ಮಾಫಿಯಾ ಜನಪ್ರತಿನಿಧಿಗಳ ಮೂಲಕ ಒತ್ತಡ ಹೇರುತ್ತಿದೆ. ಒಂದು ಕಡೆ ಚಿನ್ನದ ಗಣಿಗಾರಿಕೆ, ಇನ್ನೊಂದು ಕಡೆ ಕಲ್ಲು ಗಣಿಗಾರಿಕೆ ಕಪ್ಪತಗುಡ್ಡಕ್ಕೆ ಕರಿನೆರಳಿನಂತೆ ಕಾಡುತ್ತಿವೆ.


   ಅರ್ಜಿ ಸ್ವೀಕರಿಸುವುದೇ ತಪ್ಪು!

2019 ಜನವರಿ 10 ರಂದು ಕಪ್ಪತಗುಡ್ಡವನ್ನು ವನ್ಯಜೀವಿ ಧಾಮ ಎಂದು ಸರಕಾರ ಘೋಷಣೆ ಮಾಡಿದ ನಂತರವೂ ಗಣಿ ಕಂಪನಿ ಚಿನ್ನದ ಗಣಿಗಾರಿಕೆ ನಡೆಸಲು ಅವಕಾಶ ಕೋರಿದೆ. ವನ್ಯಜೀವಿ ಧಾಮ ಘೋಷಣೆ ಮಾಡಿದ ನಂತರ ಗಣಿಗಾರಿಕೆ ನಡೆಸಲು ಅವಕಾಶವಿಲ್ಲ ಎಂದು ನೇರವಾಗಿ ಗಣಿ ಕಂಪನಿಗೆ ಉತ್ತರಿಸುವ ಬದಲು, ಇನ್ನಷ್ಟು ದಾಖಲೆಯೊಂದಿಗೆ ಪುನಃ ಅರ್ಜಿ ಹಾಕಿ ಎಂದು ಇಲಾಖೆಯವರೇ ‘ಬೆಂಬಲ’ ಕೊಡುತ್ತಿರುವುದನ್ನು ನೋಡಿದರೆ, ಆರ್‌ಎಂಎಂಎಲ್ ಕಂಪನಿಯ ಬಾಹುಗಳು ಇಲಾಖೆಯ ಒಳಕ್ಕೂ ಚಾಚಿವೆ ಎಂಬುದು ಸ್ಪಷ್ಟ ಎನ್ನುತ್ತಾರೆ ಪರಿಸರವಾದಿಗಳು.

error: Content is protected !!