Home Blog Page 288

‘ಯೋಚಿಸದೆ ಹೆಜ್ಜೆ ಇಡಬೇಡ’- ಗಿಲ್ಲಿಗೆ ಒಂದೊಳ್ಳೆ ಕಿವಿಮಾತು ಹೇಳಿದ ಕಿಚ್ಚ ಸುದೀಪ್

ಬಿಗ್ ಬಾಸ್ ಗೆಲುವಿನ ಬಳಿಕ ಗಿಲ್ಲಿ ನಟರ ಹೆಸರು ಎಲ್ಲೆಡೆ ಗರ್ಜಿಸುತ್ತಿದೆ. ಆದರೆ ಈ ಗೆಲುವಿನ ಹಿಂದೆ ಕಿಚ್ಚ ಸುದೀಪ್ ಅವರ ಮೌನ ಶ್ರಮ, ಮಾರ್ಗದರ್ಶನ ಮತ್ತು ಕಿವಿಮಾತುಗಳು ಪ್ರಮುಖ ಕಾರಣ ಎಂಬುದು ಇದೀಗ ಬಹಿರಂಗವಾಗಿದೆ.

ಬಿಗ್ ಬಾಸ್ ಮನೆಯೊಳಗೆ ಇರುವಾಗ ಆಟ, ಮಾತು, ವರ್ತನೆ ಎಲ್ಲವೂ ನಿಯಂತ್ರಣ ತಪ್ಪುವುದು ಸಹಜ. ಗಿಲ್ಲಿಯೂ ಹಲವು ಬಾರಿ ತಪ್ಪು ಹೆಜ್ಜೆ ಇಟ್ಟಿದ್ದಾರೆ. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಸುದೀಪ್ ಅವರನ್ನು ಕರೆದು ತಿದ್ದುವ ಕೆಲಸ ಮಾಡಿದ್ದಾರೆ. ಇದೇ ಕಾರಣಕ್ಕೆ ಗಿಲ್ಲಿ ಹಂತಹಂತವಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ.

ಫಿನಾಲೆ ದಿನ ಸುದೀಪ್ ಎದುರು ‘ಸಾಯೋವರೆಗೂ ನಿಮ್ಮನ್ನು ಮರೆಯಲ್ಲ’ ಎಂದು ಗಿಲ್ಲಿ ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಬಿಗ್ ಬಾಸ್ ಗೆದ್ದ ನಂತರ ಗಿಲ್ಲಿ ಸುದೀಪ್ ಅವರನ್ನು ಖಾಸಗಿಯಾಗಿ ಭೇಟಿಯಾಗಿ, ಮತ್ತಷ್ಟು ಮಾರ್ಗದರ್ಶನ ಪಡೆದಿದ್ದಾರೆ.

ಈ ವೇಳೆ ಸುದೀಪ್, ‘ಗೆಲುವು ಬಂದಾಗ ಮನುಷ್ಯನ ಮನಸ್ಸು ಕೈ ತಪ್ಪುತ್ತದೆ. ಆ ಸಂದರ್ಭದಲ್ಲಿ ಯೋಚಿಸದೇ ಹೆಜ್ಜೆ ಇಟ್ಟರೆ ಭವಿಷ್ಯ ಹಾಳಾಗಬಹುದು’ ಎಂದು ಗಿಲ್ಲಿಗೆ ಗಂಭೀರ ಸಲಹೆ ನೀಡಿದ್ದಾರೆ. ಈ ಮಾತು ಗಿಲ್ಲಿಯನ್ನು ಇನ್ನಷ್ಟು ಹೊಣೆಗಾರ ವ್ಯಕ್ತಿಯಾಗಿಸಿದೆ ಎನ್ನಲಾಗಿದೆ.

ಇದೇ ವೇಳೆ ಗಿಲ್ಲಿ ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದು, ಶಿವಣ್ಣ ಮುಂಚಿತವಾಗಿಯೇ ಗಿಲ್ಲಿ ಗೆಲುವಿನ ಬಗ್ಗೆ ಹೇಳಿದ್ದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಭೇಟಿಯ ವೇಳೆ ಸುದೀಪ್ ಅವರೊಂದಿಗೆ ವಿಡಿಯೋ ಕರೆ ಮೂಲಕ ಮಾತುಕತೆ ನಡೆಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ. ಬಸವರಾಜ ಬಳ್ಳಾರಿ ನೇಮಕ

0

ಬೆಂಗಳೂರು: ಗದಗ ಜಿಲ್ಲೆಯ ಯುವ ಸಂಘಟನಾ ಚತುರ ಹಾಗೂ ಗದಗ ಜಿಲ್ಲಾ ಶಾಖೆಯ ಅಧ್ಯಕ್ಷರಾದ‌ ಡಾ. ಬಸವರಾಜ ಬಳ್ಳಾರಿ ಅವರ ನೇಮಕ ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ  ಹೆಮ್ಮೆ ತರುವ ವಿಷಯವಾಗಿದೆ ಎಂದು ಜಿಲ್ಲೆಯ ನೌಕರ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಡಾ. ಬಸವರಾಜ ಬಳ್ಳಾರಿ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ನೌಕರರ ಹಕ್ಕುಗಳು, ಸೇವಾ ಭದ್ರತೆ, ವೇತನ, ವರ್ಗಾವಣೆ ಹಾಗೂ ಕಲ್ಯಾಣ ಯೋಜನೆಗಳಿಗಾಗಿ ರಾಜ್ಯ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಜೊತೆಗೆ ಶ್ರಮಿಸಿದ್ದಾರೆ.

ಹೀಗಾಗಿ  ರಾಜ್ಯ ಘಟಕದ ಉಪಾಧ್ಯಕ್ಷ ಸ್ಥಾನದ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತದೆ.

ಗದಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಬಸವರಾಜ್ ಬಳ್ಳಾರಿ ಅವರು, ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ,  ನೌಕರರ ಕಾರ್ಯಾಗಾರ, ರಾಜ್ಯವೇ ತಿರುಗಿ ನೋಡುವಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಹಬ್ಬ ಹಾಗೂ ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡುವಲ್ಲಿ ಸೇವಕನಂತೆ ಕಾರ್ಯನಿರ್ವಹಿಸುವ ವೈಖರಿ ಆಧರಿಸಿ ಈ ಸ್ಥಾನ ಕೊಡಲಾಗಿದೆ ಎನ್ನಲಾಗುತ್ತದೆ.

ಈ ಐತಿಹಾಸಿಕ ನೇಮಕಕ್ಕೆ ಗದಗ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಗದಗ ಜಿಲ್ಲಾ ಶಾಖೆ  ಅಭಿನಂದನೆ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷರಾದ ಸಿದ್ದಪ್ಪ ಎನ್. ಲಿಂಗದಾಳ, ಖಜಾಂಚಿ ಮಹಂತೇಶ ನಿಟ್ಟಾಲಿ, ಅಜಯಕುಮಾರ ಕಲಾಲ, ದೇವೇಂದ್ರಪ್ಪ ತಳವಾರ, ರಾಜು ಕೊಂಟಿಗೂಣ್ಣವರ, ಶ್ರೀಧರ ಚಿನಗುಂಡಿ, ಶರಣಯ್ಯ ಪಾರ್ವತಿಮಠ, ಮುತ್ತುರಾಜ ಮಲಕಶೆಟ್ಟಿ, ರಾಜಕುಮಾರ್ ಸೊಪ್ಪಡ್ಲ,   ಸುರೇಶ  ಹುಚ್ಚಣ್ಣವರ, ಶರಣು ಸಂಗಳದ, ದೇವಪ್ಪ ದುರಗಣ್ಣವರ, ವಾಯ್.ಎನ್. ಕಡೆಮನಿ, ಶ್ರೀಮತಿ ಸರೋಜಾ ಕಟ್ಟಿಮನಿ, ಬಿ.ಸಿ. ಹಿರೇಹಾಳ, ಮಂಜುನಾಥ ಲಿಂಗದಾಳ ಸೇರಿದಂತೆ ಹಲವಾರು ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ನೇಮಕದಿಂದ ರಾಜ್ಯ ಮಟ್ಟದಲ್ಲಿ ಗದಗ ಜಿಲ್ಲೆಯ ಧ್ವನಿ ಇನ್ನಷ್ಟು ಬಲಗೊಳ್ಳಲಿದ್ದು, ಜಿಲ್ಲೆಯ ನೌಕರರ ಸಮಸ್ಯೆಗಳು ಪರಿಣಾಮಕಾರಿಯಾಗಿ ಸರ್ಕಾರದ ಗಮನಕ್ಕೆ ಬರಲಿವೆ ಎಂಬ ವಿಶ್ವಾಸವನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ‌ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನ್ನ ಮೇಲೆ ಬಲವಾದ ನಂಬಿಕೆ ಇಟ್ಟುಮಹತ್ವದ ಹುದ್ದೆ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ, ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ, ಸಂಘ ಹಾಗೂ ನೌಕರರ ಹಿತಾಸಕ್ತಿಗಾಗಿ ಹೋರಾಟ ಮಾಡಲಾಗುವುದು.

-ಡಾ. ಬಸವರಾಜ ಬಳ್ಳಾರಿ, ನೂತನ ರಾಜ್ಯ ಉಪಾಧ್ಯಕ್ಷರು ‌ಹಾಗೂ ಗದಗ ಜಿಲ್ಲಾ ಅಧ್ಯಕ್ಷರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ.

ಕೆಆರ್ ಪುರ | ಅಕ್ರಮ ಫ್ಲೆಕ್ಸ್ ಬ್ಯಾನರ್ ತೆರವು ಕಾರ್ಯಾಚರಣೆ: ₹50,000 ದಂಡ ವಸೂಲಿ

0

ಬೆಂಗಳೂರು: ಕೆಆರ್ ಪುರ ಜಿಬಿಎ ವಲಯದಲ್ಲಿ ಅಕ್ರಮ ಫ್ಲೆಕ್ಸ್ ಬ್ಯಾನರ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ₹50,000 ದಂಡ ವಸೂಲಿ ಮಾಡಲಾಗಿದೆ.

ರಾತ್ರಿಯ ಸಮಯದಲ್ಲಿ ಜಂಟಿ ಆಯುಕ್ತೆ ಡಾ. ಸುಧಾ ನೇತೃತ್ವದಲ್ಲಿ 60 ಸಿಬ್ಬಂದಿಗಳೊಂದಿಗೆ ಫೀಲ್ಡ್ ಗೆ ಇಳಿದ ಜಿಬಿಎ ಅಧಿಕಾರಿಗಳು ಪಾದಚಾರಿ ಮಾರ್ಗಗಳಲ್ಲಿ ಅಕ್ರಮವಾಗಿ ನೆರೆದಿದ್ದ ಬ್ಯಾನರ್‌ಗಳು ಮತ್ತು ನೇಮ್ ಬೋರ್ಡ್‌ಗಳನ್ನು ತೆರವುಗೊಳಿಸಿದ್ದಾರೆ. ಕೆಆರ್ ಪುರ ಸಿಟಿ, ಜಿಬಿಎ ಕಛೇರಿ ಮುಂಭಾಗ, ಶ್ರೀವಿನಾಯಕ ಜ್ಯೂವೆಲ್ಲರಿ, ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್, ಜಿಆರ್ ಟಿ ಜ್ಯೂವೆಲ್ಲರಿ ಮತ್ತು ಬಾಲಾಜಿ ವೈನ್ಸ್ ಸೇರಿದಂತೆ ಅನೇಕ ವ್ಯವಹಾರಸ್ಥರ ಬ್ಯಾನರ್‌ಗಳಿಗೆ ದಂಡ ವಿಧಿಸಲಾಗಿದೆ.

ಫ್ಲೆಕ್ಸ್ ಬ್ಯಾನರ್‌ಗಳಿಗೆ ಅಳವಡಿಸಿದ ಎಲ್ಇಡಿ ಲೈಟ್‌ಗಳಿಗೆ ಕೂಡ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಜಿಬಿಎ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿಯಲಿದೆ ಮತ್ತು ವಲಯ ವ್ಯಾಪ್ತಿಯಲ್ಲಿನ ಎಲ್ಲಾ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಮತ್ತು ನೇಮ್ ಬೋರ್ಡ್‌ಗಳಿಗೆ ನಿರಂತರ ಪರಿಶೀಲನೆ ಜಾರಿಯಲ್ಲಿದೆ.

ಬಳ್ಳಾರಿ | ಪಡಿತರ ಅಕ್ಕಿ ಸಾಗಾಟದ ಮೇಲೆ ತಡರಾತ್ರಿ ದಾಳಿ; 523 ಚೀಲ ಅಕ್ಕಿ ವಶಕ್ಕೆ!

0

ಬಳ್ಳಾರಿ: ಬಳ್ಳಾರಿ ನಗರದ ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ತಡರಾತ್ರಿ ಪಡಿತರ ಅಕ್ಕಿ ಸಾಗಾಟದ ಅಡ್ಡೆ ಮೇಲೆ ಬಳ್ಳಾರಿ ಸಹಾಯಕ ಆಯುಕ್ತ ರಾಜೇಶ್ ನೇತೃತ್ವದಲ್ಲಿ ದಾಳಿ ನಡೆಸಿ 523 ಚೀಲ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಪಡಿತರ ಅಂಗಡಿಗಳಿಂದ ಪಿಕಪ್ ಆಟೋ ಮೂಲಕ ಅಕ್ರಮವಾಗಿ ಸಂಗ್ರಹಿಸಿದ ಅಕ್ಕಿಯನ್ನು ಗುಜರಾತ್ ಮೂಲದ ದೊಡ್ಡ ಲಾರಿಯಲ್ಲಿ ತುಂಬಿ ಸಾಗಿಸಲು ಯತ್ನಿಸುತ್ತಿದ್ದರು. ಸಣ್ಣ ವಾಹನದಿಂದ ದೊಡ್ಡ ಲಾರಿಗೆ ಅಕ್ಕಿ ತುಂಬುತ್ತಿರುವ ಸಮಯದಲ್ಲೇ ದಾಳಿ ನಡೆದಿದೆ. ದಾಳಿ ವೇಳೆ ಒಂದು ದೊಡ್ಡ ಲಾರಿ, ಎರಡು ಪಿಕಪ್ ಆಟೋಗಳು, ಇಬ್ಬರು ಗುಜರಾತ್ ಮೂಲದ ಚಾಲಕರು, ಬಳ್ಳಾರಿ ಮೂಲದ ಒಬ್ಬ ಚಾಲಕ ಮತ್ತು ಐವರು ಹಮಾಲಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇನ್ನೂ ಒಬ್ಬ ಚಾಲಕ ಮತ್ತು ಐವರು ಹಮಾಲಿಗಳು ಪರಾರಿಯಾಗಿದ್ದಾರೆ. ಅಕ್ಕಿಯನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ಸಾಗಿಸಲು ಯತ್ನಿಸಿದವರ ವಿರುದ್ಧ A.P.MC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ| ಬೆಳ್ಳಂ ಬೆಳಗ್ಗೆ ನಾಡಿಗೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು!

0

ಮಂಡ್ಯ:- ಬೆಳ್ಳಂ ಬೆಳಗ್ಗೆ ಕಾಡಾನೆಗಳ ಹಿಂಡು ನಾಡಿಗೆ ಲಗ್ಗೆಯಿಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಯಲ್ಲಿ ಜರುಗಿದೆ.

ಗೊರವನಹಳ್ಳಿ ಹಾಗೂ ಉಪ್ಪಿನಕೆರೆ ಗ್ರಾಮದ ಕಬ್ಬನಿಗದ್ದೆಯಲ್ಲಿ ಸುಮಾರು 5 ಕಾಡಾನೆಗಳ ಹಿಂಡು ಬೀಡು ಬಿಟ್ಟಿದೆ. ಅದರಲ್ಲಿ ಮೂರು ಗಂಡು ಆನೆ ಹಾಗೂ ಎರಡೂ ಮರಿ ಆನೆಗಳು ಬಂದಿದೆ. ಜಮೀನೋಂದರಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಕಂಡು ಜನತೆ ಆತಂಕ ಹೊರ ಹಾಕಿದ್ದಾರೆ.

ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ. ಆನೆಗಳ ಪ್ರತ್ಯಕ್ಷದಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅರಣ್ಯಾಧಿಕಾಗಳ ತಂಡ ಆಗಮಿಸಿ ಕಾರ್ಯಾಚರಣೆ ನಡೆಸಿದೆ.

Bengaluru Air Quality: ಬೆಂಗಳೂರಿಗಿಂತಲೂ ಶಿವಮೊಗ್ಗ, ಬಳ್ಳಾರಿ ಏರ್ ಕ್ವಾಲಿಟಿಯಲ್ಲಿ ಕುಸಿತ!

0

ಬೆಂಗಳೂರು: ಬೆಂಗಳೂರಿನ ಗಾಳಿಯ ಗುಣಮಟ್ಟ 162 AQI ತಲುಪಿದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲಿದೆ.

ಆದರೆ ಶಿವಮೊಗ್ಗ (175 AQI) ಮತ್ತು ಬಳ್ಳಾರಿ (178 AQI) ನಗರಗಳು ಬೆಂಗಳೂರಿಗಿಂತಲೂ ಹೆಚ್ಚು ಹಾನಿಕರ ವಾಯು ಗುಣಮಟ್ಟ ಹೊಂದಿರುವುದು ಗಮನ ಸೆಳೆಯುತ್ತಿದೆ. ಈ ಪರಿಸ್ಥಿತಿಯಿಂದ ಮಕ್ಕಳು, ಹಿರಿಯ ನಾಗರಿಕರು ಮತ್ತು ಉಸಿರಾಟದ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾನದಂಡಕ್ಕಿಂತ ಬೆಂಗಳೂರಿನಲ್ಲಿ 5 ಪಟ್ಟು ಹೆಚ್ಚು ಸೂಕ್ಷ್ಮ ಕಣಗಳ ಪ್ರಮಾಣವು ಆತಂಕಕಾರಿಯಾಗಿದೆ.

ಕಳೆದ ಕೆಲ ದಿನಗಳಿಗಿಂತ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಏರುಪೇರು ಕಂಡರೂ, ಆರೋಗ್ಯಕ್ಕೆ ಹಾನಿಕರ ಮಟ್ಟದಲ್ಲಿಯೇ ಉಳಿದಿದೆ.

ಇಂದಿನ ನಗರಗಳ ಏರ್ ಕ್ವಾಲಿಟಿ (AQI):-

ಬೆಂಗಳೂರು – 162
ಮಂಗಳೂರು – 156
ಮೈಸೂರು – 94
ಬೆಳಗಾವಿ – 138
ಕಲಬುರ್ಗಿ – 129
ಶಿವಮೊಗ್ಗ – 175
ಬಳ್ಳಾರಿ – 178
ಹುಬ್ಬಳ್ಳಿ – 156
ಉಡುಪಿ – 157
ವಿಜಯಪುರ – 111.

ರಾಜೇಶ್ವರಿ–ಡಿವೈನ್ ಅದ್ಬುತ ಆಟ: ಯುಪಿ ವಿರುದ್ಧ ಗುಜರಾತ್‌ಗೆ 45 ರನ್‌ ಜಯ!

0

ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರ ಘಾತಕ ಬೌಲಿಂಗ್‌ ಹಾಗೂ ಸೋಫಿ ಡಿವೈನ್ ಅವರ ಆಲ್‌ರೌಂಡರ್ ಪ್ರದರ್ಶನದ ನೆರವಿನಿಂದ ಗುಜರಾತ್ ಜೈಂಟ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ 45 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಗುಜರಾತ್ ಜೈಂಟ್ಸ್ 2ನೇ ಸ್ಥಾನಕ್ಕೆ ಏರಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್‌ಗಳ ಸವಾಲಿನ ಮೊತ್ತ ದಾಖಲಿಸಿತು. ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ 45 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಯುಪಿ ಪರ ಫೋಬೆ ಲಿಚ್‌ಫೀಲ್ಡ್ 32 ರನ್‌ ಹಾಗೂ ಕ್ಲೋಯ್ ಟ್ರಯಾನ್ 30 ರನ್‌ಗಳೊಂದಿಗೆ ಸ್ವಲ್ಪ ಪ್ರತಿರೋಧ ತೋರಿದರೂ, ಉಳಿದ 8 ಆಟಗಾರ್ತಿಯರು ಎರಡಂಕಿ ಅಂಕ ತಲುಪದ ಕಾರಣ ತಂಡದ ಸೋಲು ಅನಿವಾರ್ಯವಾಯಿತು. ಹ್ಯಾಟ್ರಿಕ್ ಸೋಲುಗಳಿಂದ ಸಂಕಷ್ಟದಲ್ಲಿದ್ದ ಗುಜರಾತ್‌ಗೆ ಈ ಗೆಲುವು ಪ್ಲೇಆಫ್ ಕನಸನ್ನು ಜೀವಂತವಾಗಿಟ್ಟಿದೆ.

Crime News: ಮಕ್ಕಳಿಲ್ಲವೆಂದು ಕಿರಿಕಿರಿ; ಪತ್ನಿ ಉಸಿರುಗಟ್ಟಿಸಿ ಹತ್ಯೆಗೈದ ಗಂಡ!

0

ಬೆಳಗಾವಿ:- ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಜರುಗಿದೆ.

21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಮಾಡಿದ್ದಾನೆ. ಬಳಿಕ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ ಎನ್ನಲಾಗಿದೆ. ಮದುವೆಯಾಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ ಕೊಡುತ್ತಿದ್ದಳು. ಕಿರಿಕಿರಿಗೆ ಬೇಸತ್ತಿದ್ದ ಪತಿ ಆ ದಿನ ಸಿಟ್ಟಿಗೆದ್ದು ಉಸಿರುಗಟ್ಟಿಸಿ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. ಬಳಿಕ ಸಂಬಂಧಿಕರೆಲ್ಲರಿಗೂ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಫೋನ್ ಮಾಡಿದ್ದ. ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತ ರಾಜೇಶ್ವರಿ ಕೊರಳಲ್ಲಿ ಕಾಣಿಸಿದ್ದ ಗುರುತೊಂದನ್ನು ನೋಡಿ ಅನುಮಾನ ವ್ಯಕ್ತವಾಗಿದೆ.

ತಕ್ಷಣವೇ ಪೋಷಕರು ಬೈಲಹೊಂಗಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕೊಲೆ ಎಂಬುದು ದೃಢವಾಗಿದೆ. ಕೂಡಲೇ ಪೊಲೀಸರು ಆರೋಪಿ ಫಕೀರಪ್ಪ ಗಿಲಕ್ಕನವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

ಸತತ ಪ್ರಯತ್ನವೇ ಸಾಧನೆಗೆ ದಾರಿ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳು ಸಾಧನೆಗೆ ಸತತ ಪ್ರಯತ್ನ ಬೇಕು. ಮಕ್ಕಳು ಪ್ರಾಥಮಿಕ ಹಂತದಲ್ಲಿ ಸತತ ಪ್ರಯತ್ನಶೀಲರಾಗಬೇಕು. ಅಂದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಫಾತೀಮಾ ಖವಾಸ ಹೇಳಿದರು.

ಅವರು ಪಟ್ಟಣದ ಬಿ.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಬದ್ರುನಿಸಾ ಯಳವತ್ತಿ ಗದಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ನಿಮಿತ್ತ ಗೌರವಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಮಾ ಬ್ಯಾಳಿ, ಆಸ್ಮಾ ಸೌದತ್ತಿ, ಪೂಜಾ ಮ್ಯಾಗೇರಿ, ಗೀತಾ ಕುಲಕರ್ಣಿ ಇದ್ದರು.

ಶಿಕ್ಷಣ ಎಂಬುದು ಹುಲಿಯ ಹಾಲು ಇದ್ದಂತೆ: ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕಿನಾಯ್ಕ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸಲು ಮತ್ತು ಕಲಿಕೆಯನ್ನು ಸಂತೋಷದಾಯಕ ಅನುಭವವನ್ನಾಗಿ ಮಾಡಲು ಎಫ್‌ಎಲ್‌ಎನ್ ಒಂದು ವಿಶೇಷ ಕಾರ್ಯಕ್ರಮವಾಗಿದ್ದು, ಇದರಲ್ಲಿ ಮಕ್ಕಳನ್ನು ಚಟುವಟಿಕೆಗಳ ಮೂಲಕ ಗುರುತಿಸಬಹುದು. ಕಲಿಕೆ ಎನ್ನುವುದು ಪುಸ್ತಕದಿಂದ ಕಲಿಯುವದಷ್ಟೇ ಅಲ್ಲ, ಅದು ಅನುಭವದಿಂದ ಕಲಿಯುವದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕಿನಾಯ್ಕ ಅಭಿಪ್ರಾಯಪಟ್ಟರು.

ತಾಲೂಕಿನ ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಹೆಬ್ಬಾಳ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹೆಬ್ಬಾಳ ಸಿಆರ್‌ಪಿ ತಿರಕಪ್ಪ ಪೂಜಾರ, ಈ ಕಲಿಕಾ ಹಬ್ಬದಲ್ಲಿ ಒಟ್ಟು 11 ಸ್ಪರ್ಧೆಗಳಿರುತ್ತವೆ. ಆದರೆ ನಾವು ಇಲಾಖೆಯ ವತಿಯಿಂದ 7 ಸ್ಪರ್ಧೆಗಳಿಗೆ ಅವಕಾಶ ನೀಡಿದ್ದು, ಅದರಲ್ಲಿ ಗಟ್ಟಿ ಓದು, ಕತೆ ಹೇಳುವದು, ಸಂತೋಷದಾಯಕ ಗಣಿತ, ಆರೋಗ್ಯ ಮತ್ತು ಪೌಷ್ಟಿಕಾಂಶ, ಪೋಷಕರ ಹಾಗೂ ಶಿಕ್ಷಕರ ಸಂಬಂಧ ಕುರಿತು ಚಟುವಟಿಕೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಕನ್ನಡ ಮತ್ತು ಗಣಿತ ವಿಷಯಗಳಲ್ಲಿ ಸ್ಪರ್ಧೆ ಹಾಗೂ ಚಟುವಟಿಕೆ ಮೂಲಕ ತಿಳಿಯಲು ಸಹಕಾರಿಯಾಗಿದ್ದು, ಮಕ್ಕಳು ಶಾಲೆಯನ್ನು ತಪ್ಪಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಕರದಾಗಿರುತ್ತದೆ. ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಿದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ ಎಂದರು.

ಸರಕಾರಿ ನೌಕರರ ಸಂಘದ ಶಿರಹಟ್ಟಿ ಘಟಕದ ಗೌರವಾಧ್ಯಕ್ಷ ಎಸ್.ಕೆ. ಪಾಟೀಲ ಮಾತನಾಡಿ, ಶಾಲೆಯಲ್ಲಿ ಕಲಿತರೂ ಕೂಡ ಮನೆಯಲ್ಲಿ ಪುನರಾವರ್ತನೆ ಆಗಬೇಕು. ಅಂದಾಗ ವಿದ್ಯಾರ್ಥಿ ಕಲಿಕೆಗೆ ಮನದಟ್ಟಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಉಪನಿರ್ದೇಶಕ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಫಕ್ಕಿರಪ್ಪ ನರಸಮ್ಮನವರ, ಎಸ್‌ಡಿಎಂಸಿ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲ, ಉಪಾಧ್ಯಕ್ಷರಾದ ನೀಲಮ್ಮ ನಡುವಿನಕೇರಿ, ಸಿಆರ್‌ಪಿಗಳಾದ ತಿರಕಪ್ಪ ಪೂಜಾರ, ಸತೀಶ ಪಶುಪತಿಹಾಳ, ಆರ್. ಮಾಂತೇಶ, ಸಿ.ವಿ. ವಡಕಣ್ಣನವರ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಫ್.ವಾಯ್. ಪಾಟೀಲ, ಬನಶಂಕರಿ ದೇವಿ ಕಾಲೇಜಿನ ಪ್ರಾಚಾರ್ಯ ನವೀನ ಅಳವಂಡಿ, ಶಾಲೆಯ ಪ್ರಧಾನ ಗುರುಗಳಾದ ವಿ.ಎನ್. ಪಾಟೀಲ ಸೇರಿದಂತೆ ಹೆಬ್ಬಾಳ ಕ್ಲಸ್ಟರಿನ ಎಲ್ಲಾ ಶಾಲೆಗಳ ಪ್ರಧಾನ ಗುರುಗಳು, ಸಿಬ್ಬಂದಿ ವರ್ಗ, ನಿರ್ಣಾಯಕರು, ಗ್ರಾಮದ ಗುರು-ಹಿರಿಯರು ಪಾಲ್ಗೊಂಡಿದ್ದರು. ಆರ್.ಟಿ. ಶಿವಪ್ಪಯ್ಯನಮಠ ಕಾರ್ಯಕ್ರಮ ನಿರ್ವಹಿಸಿದರು. ಕಲಿಕಾ ಹಬ್ಬದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಣ ಎನ್ನುವುದು ಹುಲಿ ಹಾಲು ಇದ್ದಂತೆ. ಅದನ್ನು ಕುಡಿದವರು ಘರ್ಜಿಸಲೇಬೇಕು. ಉತ್ತಮ ಶಿಕ್ಷಣ ಪಡೆದುಕೊಂಡವರು ಸಮಾಜದಲ್ಲಿ ತಲೆ ಎತ್ತಿ ನಡೆಯಲು ಸಾಧ್ಯ. ತಾಯಿ ಮೊದಲ ಗುರುವಾಗಿದ್ದು, ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಮಗುವಿನ ಕಡೆಗೆ ಗಮನ ನೀಡಬೇಕು. ಮಕ್ಕಳ ಕೈಗೆ ಮೊಬೈಲ್ ನೀಡದೇ ಪುಸ್ತಕ ನೀಡಿ ಮಗುವಿನ ಸರ್ವಾಂಗೀಣ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ಎಚ್. ನಾಣಕಿನಾಯ್ಕ ಕಿವಿಮಾತು ಹೇಳಿದರು.

error: Content is protected !!