Home Blog Page 289

ಪರಿಸರ ಉಳಿಸಲು ಸಾರ್ವಜನಿಕರ ಸಹಕಾರ ಮುಖ್ಯ: ಶಿವಕುಮಾರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಡಂಬಳ: ಜನತೆಯ ಸಹಕಾರ ಇದ್ದಾಗ ಪರಿಸರವನ್ನು ಉಳಿಸಿ-ಬೆಳೆಸಿ, ಅರಣ್ಯ ಅಪಾರವಾಗಿ ಬೆಳೆಯಲು ಸಾಧ್ಯ ಎಂದು ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು ನುಡಿದರು.

ಡಂಬಳ ಹೋಬಳಿಯ ಡೋಣಿ ಗ್ರಾಮದ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗದಗ ಪ್ರಾದೇಶಿಕ ವಿಭಾಗ, ಕಪ್ಪತ್ತಗುಡ್ಡ ವನ್ಯಜೀವಿ ಧಾಮದಲ್ಲಿ ವಾಲಿಬಾಲ್ ಪಂದ್ಯಾವಳಿ, ಕಾಡ್ಗಿಚ್ಚು ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿದರು.

ರಾಜ್ಯದ 7 ಕೋಟಿ ಕನ್ನಡಿಗರು ಕಪ್ಪತ್ತಗುಡ್ಡದತ್ತ ನೋಡುತ್ತಿದ್ದಾರೆ. ಕಪ್ಪತ್ತಗುಡ್ಡದ ಸಸ್ಯ ಸಂಪತ್ತನ್ನು ಸುತ್ತಮುತ್ತಲಿನ ಗ್ರಾಮಸ್ಥರು ರಕ್ಷಕರಂತೆ ಕಾಪಾಡುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ರೈತ ಸಂಘದ ಅಧ್ಯಕ್ಷ ಶಂಕರಗೌಡ ಜಾಯನಗೌಡರ, ಎಸ್.ಸಿ ಘಟಕದ ಅಧ್ಯಕ್ಷ ಸೋಮಣ್ಣ ಹೈತಾಪುರ, ಕಪ್ಪತ್ತಗುಡ್ಡ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಭರಮಪ್ಪ ಕಿಲಾರಿ ಮಾತನಾಡಿ, ಗಿಡಗಳ, ಪ್ರಾಣಿ-ಪಕ್ಷಿಗಳ ಉಳಿವಿಗಾಗಿ ವಾಲಿಬಾಲ್ ಕ್ರೀಡಾಕೂಟದ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸುತ್ತಿರುವ ಹಿರಿಯ ಅರಣ್ಯ ಅಧಿಕಾರಿಗಳ, ಈ ಭಾಗದ ಆರ್‌ಎಫ್‌ಒ ಮಂಜುನಾಥ ಮೇಗಲಮನಿ ಮತ್ತು ಸಿಬ್ಬಂದಿ ವರ್ಗದವರ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.

ಯುವ ಕವಿ, ಲೇಖಕ ಸಿದ್ದು ಸತ್ಯಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಂಬಳ ಹೋಬಳಿಯ ಗ್ರಾಮಗಳ 485 ಕುರಿ ಕಾಯುವವರಿಗೆ ಹೊಟ್ಟೆ ಚೀಲ, ಬ್ಯಾಟರಿ, ಸ್ಟೀಲ್ ನೀರಿನ ಬಾಟಲ್ ವಿತರಿಸಲಾಯಿತು. ಕೃಷಿಯಲ್ಲಿ ಅರಣ್ಯ ಸಾಧಕರಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 35ಕ್ಕೂ ಅಧಿಕ ಸಾಧಕರಿಗೆ, ಯೋಗಸನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮುಂಡರಗಿ ತಾಲೂಕಿನ 23 ಗ್ರಾಮ ಪಂಚಾಯಿತಿಗಳಿಗೆ ಕಪ್ಪತ್ತಗುಡ್ಡದಿಂದ ಆಗುವ ಪರಿಸರದ ಲಾಭಗಳ ಕುರಿತಾದ ಮಾಹಿತಿ ಬೋರ್ಡ್ ವಿತರಿಸಲಾಯಿತು. ಬೈಕ್, ಕಾರ್‌ಗಳಿಗೆ ಕಪ್ಪತ್ತಗುಡ್ಡದ ಹೆಸರಿನಲ್ಲಿ ಪ್ರಾಣಿಗಳ ಭಾವಚಿತ್ರವುಳ್ಳ ಸ್ಟಿಕ್ಕರ್, ಭಿತ್ತಿಪತ್ರ ವಿತರಣೆ ಮಾಡಲಾಯಿತು. ಖ್ಯಾತ ಕಲಾವಿದ ನಿಂಗಪ್ಪ ಗುಡ್ಡದ ಸಂಗಡಿಗರು ಕಪ್ಪತ್ತಗುಡ್ಡದ ಕುರಿತು ಜಾನಪದ ಹಾಡುಗಳನ್ನು ಹಾಡಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ವೇ.ಮೂ. ಕುಮಾರಸ್ವಾಮಿ ಮಠದ, ಗ್ಯಾರಂಟಿ ಸಮಿತಿ ಸದಸ್ಯರಾದ ರಾಮಣ್ಣ ಮೇಗಲಮನಿ, ಗ್ರಾ.ಪಂ ಅಧ್ಯಕ್ಷೆ ನೀಲಮ್ಮ ಅಳವಂಡಿ, ಲಕ್ಷ್ಮೀ ಸೊಗಟಿ, ಕಾಶಪ್ಪ ಅಳವಂಡಿ, ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಪವಾರ, ಗೌಸಿದ್ಧಯ್ಯ ಹಳ್ಳಿಕೇರಿಮಠ, ನಿಂಗನಗೌಡ ಹರ್ತಿ, ಹನಮಪ್ಪ ಗೋಡಿ, ಕಾಶಪ್ಪ ಹೊನ್ನೂರ, ಸಿದ್ಧನಗೌಡ ಪಾಟೀಲ, ಸತ್ಯಪ್ಪ ಚಲವಾದಿ, ಮಹಾದೇವಪ್ಪ ಗುಂಜಿ, ಭರಮಗೌಡ ಪಾಟೀಲ, ಈಶಪ್ಪ ಓಲಿ, ಮಳ್ಳಪ್ಪ ಜೋಂಡಿ ಸೇರಿದಂತೆ ಯುವಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು. ಅರಣ್ಯಾಧಿಕಾರಿ ಮೈಲಾರಪ್ಪ ಮಡಿವಾಳರ ವಂದಿಸಿದರು.

ಮುಂಡರಗಿ ಆರ್‌ಎಫ್‌ಒ ಮಂಜುನಾಥ ಆರ್.ಮೇಗಲಮನಿ ಮಾತನಾಡಿ, ಮೌಢ್ಯ, ಕಂದಾಚಾರಕ್ಕೆ ಒಳಗಾಗಿ ಬೆಂಕಿ ಹಚ್ಚಬೇಡಿ. ಕಪ್ಪತ್ತಗುಡ್ಡ ಸರಕಾರಿ ಆಸ್ತಿ ಎಂದು ಭಾವಿಸದೆ ನಮ್ಮೆಲ್ಲರ ಆಸ್ತಿ ಎಂದು ಭಾವಿಸಿ ಕಾಪಾಡಬೇಕು. 400ಕ್ಕೂ ಹೆಚ್ಚು ಔಷಧೀಯ ಸಸ್ಯ ಸಂಪತ್ತು, 23ಕ್ಕೂ ಹೆಚ್ಚು ವನ್ಯಪ್ರಾಣಿಗಳ ಸಂಪತ್ತನ್ನು ಕಪ್ಪತ್ತಗುಡ್ಡ ಹೊಂದಿದ್ದು, ಇವುಗಳೆಲ್ಲವೂ ನಮ್ಮ ಸಂಪತ್ತು ಎಂದು ಉಳಿಸಿ ಬೆಳೆಸಬೇಕಾಗಿದೆ. ಇದನ್ನು ಉಳಿಸಿದರೆ ನಮ್ಮ ನಿಮ್ಮೆಲ್ಲರ ಮುಂದಿನ ಪೀಳಿಗೆ ಉಳಿಯಲು ಸಾಧ್ಯ. ಅತ್ಯಮೂಲ್ಯ ಸಂಪತ್ತನ್ನು ಉಳಿಸಲು ಅರಣ್ಯ ಇಲಾಖೆಯ ಜೊತೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಹೇಳಿದರು.

ವಚನಗಳು ಮಾನವ ಹಕ್ಕುಗಳನ್ನು ಪ್ರತಿಪಾದಿಸುತ್ತವೆ: ಶಾಂತಲಿಂಗ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ವಚನಗಳು ಕೇವಲ ಧಾರ್ಮಿಕ ಕಾವ್ಯವಲ್ಲ. ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಮಾನವೀಯತೆ ಈ ನಾಲ್ಕು ಮಾನವ ಹಕ್ಕುಗಳ ಮೂಲತತ್ವಗಳನ್ನು ವಚನಗಳು 12ನೇ ಶತಮಾನದಲ್ಲಿಯೇ ಘೋಷಿಸಿತ್ತು. ಆದ್ದರಿಂದ ವಚನಗಳು ಭಾರತದ ಮೊದಲ ಮಾನವ ಹಕ್ಕುಗಳ ಸಂವಿಧಾನ ಎಂದು ಭೈರನಹಟ್ಟಿಯ ಪೂಜ್ಯ ಶ್ರೀ ಮ.ನಿ.ಪ್ರ ಶಾಂತಲಿಂಗ ಮಹಾಸ್ವಾಮಿಗಳು ನುಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ 2776ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ವರ್ಗ, ವರ್ಣ, ಲಿಂಗ ಭೇದ-ಭಾವ ಮಾಡದೇ ಮಾನವ ಹಕ್ಕುಗಳನ್ನು ಕೊಟ್ಟವರು ಶರಣರು. ತಮ್ಮ ವಚನಗಳ ಮೂಲಕ ಸಮಾನತೆಯ ಪರಿಕಲ್ಪನೆಯೇ ಅದ್ಭುತ. ಬಲಗೈ ಶ್ರೇಷ್ಠ, ಎಡಗೈ ಕೂಡ ಶ್ರೇಷ್ಠ ಎಂಬ ತತ್ವ ಸಾರಿ ದೇಶದಲ್ಲಿ ಮಾನವ ಹಕ್ಕು ಉಲ್ಲಂಘನೆ ಆಗುವುದನ್ನು ತಪ್ಪಿಸಿದರು. 26ಕ್ಕಿಂತಲೂ ಹೆಚ್ಚು ದೇಶಗಳು ಮಾನವ ಹಕ್ಕುಗಳನ್ನು ಒಪ್ಪಿಕೊಂಡಿವೆ. ಪ್ರತಿ ವಚನದ ಒಂದಾದರೂ ಸಾಲು ಮಾನವ ಹಕ್ಕುಗಳನ್ನು ಪ್ರತಿಪಾದಿಸುತ್ತವೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಹಿರಿಯ ನಾಗರಿಕರಿಗೆ ಕೊಡುವ ಗೌರವ ಡಾಕ್ಟರೇಟ್ ಮತ್ತು ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಭೀಮರೆಡ್ಡಿ ದೇವರಡ್ಡಿ ಕಿಲಬನವರ ಅವರನ್ನು ಸನ್ಮಾನಿಸಲಾಯಿತು. ಆರಾದ್ಯ ಕುನಾಲ್ ಅಳ್ಳೊಳ್ಳಿ ಇವರಿಂದ ಸಂಗೀತ ಸೇವೆ ನಡೆಯಿತು. ವಚನ ಸಂಗೀತ ಸೇವೆಯನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ನಡೆಸಿಕೊಟ್ಟರು. ಧರ್ಮಗ್ರಂಥ ಪಠಣವನ್ನು ಸೂರಜಗೌಡ ಜಿ.ಮರಿಗೌಡ್ರ ಹಾಗೂ ವಚನ ಚಿಂತನವನ್ನು ಕೃತಿಕಾ ಜಿ.ಮರಿಗೌಡ್ರ ನಿರ್ವಹಿಸಿದರು. ದಾಸೋಹ ಸೇವೆಯನ್ನು ರವೀಂದ್ರ ಸಂಗನಬಸಪ್ಪ ಗದಗ ಹಾಗೂ ಶರಣು ವಿರೂಪಾಕ್ಷಪ್ಪ ಗದಗ ಮತ್ತು ವೈಭವ ಗದಗ ವಹಿಸಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ, ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹ ಕಾರ್ಯದರ್ಶಿ ಸೋಮಶೇಖರ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.

ಶಿವಾನುಭವ ಸಮಿತಿಯ ಚೇರಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸಕರಾಗಿ ಆಗಮಿಸಿದ ಗದುಗಿನ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ವಚನಗಳಲ್ಲಿ ಮಾನವ ಹಕ್ಕುಗಳು ವಿಷಯ ಕುರಿತು ಮಾತನಾಡುತ್ತಾ, ಇದರ ಪರಿಕಲ್ಪನೆ ಆಕಾಶದಷ್ಟು ಅಗಲ, ಸಮುದ್ರದಷ್ಟು ಆಳ. ಶರಣರು 12ನೇ ಶತಮಾನದಲ್ಲಿಯೇ ಮಾನವ ಹಕ್ಕುಗಳ ಬಗ್ಗೆ ಧ್ವನಿ ಎತ್ತಿದರು. ಮಾನವನಿಗೆ ಗೌರವ ಇರಬೇಕು ಎಂದರು. ಸಮಾಜಕ್ಕೆ ಅದ್ಭುತವಾದ ಆಲೋಚನೆಗಳನ್ನು ಬಸವಣ್ಣನವರು ಕೊಟ್ಟರು. ಅನುಭವ ಲೌಕಿಕ, ಅನುಭಾವ ಅಧ್ಯಾತ್ಮಿಕ. ಮನಸ್ಥಿತಿ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ. ದಿನನಿತ್ಯದ ವ್ಯವಹಾರವೇ ಅನುಭಾವ. ಶರಣರ ಅನುಭಾವವನ್ನು ಪಡೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪೋಲಿಯೋ ಲಸಿಕೆ ತಪ್ಪದೇ ಹಾಕಿಸಿ: ಡಾ. ಶ್ರೀಕಾಂತ ಕಾಟೇವಾಲೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಿ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಶ್ರೀಕಾಂತ ಕಾಟೇವಾಲೆ ಹೇಳಿದರು.

ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಕರು ಯಾವುದೇ ವದಂತಿಗಳಿಗೆ ಕಿವಿಕೊಡದೇ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಸಮಾಜಕ್ಕಾಗಿ ಕೈಜೋಡಿಸಬೇಕು. ಡಿ.24ರೊಳಗೆ 5 ವರ್ಷದ ಮಕ್ಕಳಿಗೆ ಹತ್ತಿರದ ಪೋಲಿಯೋ ಕೇಂದ್ರಗಳಿಗೆ ಭೇಟಿ ಕೊಟ್ಟು ಪೋಲಿಯೋ ಹಾಕಿಸಿ. ತಾಲೂಕಿನಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ತಾಲೂಕಿನಲ್ಲಿ ಒಟ್ಟು 12050 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ. ಪೋಲಿಯೋ ರೋಗ ಬರದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಈ ವೇಳೆ ಡಾ. ಪ್ರವೀಣ ಸಜ್ಜನ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ, ಎಫ್.ಸಿ. ಹೊಸಮಠ, ಗಂಗಾಧರ ಮೆಣಸಿನಕಾಯಿ, ಪ್ರವೀಣ ಬೋಮಲೆ, ನವೀನ ಹಿರೇಮಠ, ಬಸವರಾಜ ಕಲ್ಲೂರ, ವಿಜಯ ಕುಂಬಾರ, ದುಂಡೇಶ ಕೋಟಗಿ, ಜಾಹೀರ ಮೊಮೀನ್, ಮಂಜುನಾಥ ಬಸಾಪುರ, ರಮೇಶ ಹಾಳದೋಟದ, ಭೀಮಣ್ಣ ಯಂಗಾಡಿ, ರವಿ ಕೋರಿ, ರುದ್ರಪ್ಪ ಉಮಚಗಿ, ಸಿಬ್ಬಂದಿಗಳಾದ ಶ್ವೇತಾ ಶಿರೋಳ, ಆಶಾ ಭಂಡಾರಿ, ರೇಣುಕಾ ಡೊಂಬರ, ಸುಧಾ ಕಂತ್ರೋಜಿ, ಬಿ.ಎಸ್. ನಾಗಣ್ಣವರ, ರೇಖಾ ಶಿರಹಟ್ಟಿ, ಸೀತಾ ಅಮ್ಮಿನಬಾವಿ ಮುಂತಾದವರು ಇದ್ದರು. ಪಟ್ಟಣದ ಬಸ್ ನಿಲ್ದಾಣ, ಮಾರ್ಕೆಟ್-ಶಾಲೆ, ಅಂಗನವಾಡಿ, ದೇವಸ್ಥಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಪೋಲಿಯೋ ಹನಿ ಹಾಕುವ ಕಾರ್ಯ ಮಾಡಿದರು.

ನುಡಿಸಿರಿ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಇಲ್ಲಿನ ಕುಕನೂರಿನ ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಜನವರಿ 4ರಂದು ಮೈಸೂರಿನ ವಿಜಯನಗರ ಮೊದಲ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 13ನೇ ಕನ್ನಡ ನುಡಿಸಿರಿ ಸಮ್ಮೇಳನಾಧ್ಯಕ್ಷರನ್ನಾಗಿ ಚುಟುಕು ಸಿರಿ ರತ್ನ ಹಾಲಪ್ಪ ಗೌಡರನ್ನು ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನದ ಸಂಚಾಲಕ ರುದ್ರಪ್ಪ ಭಂಡಾರಿ ತಿಳಿಸಿದ್ದಾರೆ.

ಮೂಲತಃ ಮೈಸೂರಿನವರಾದ ಇವರು ಅನಿವಾಸಿ ಭಾರತೀಯರಾಗಿ ಕಳೆದ 25 ವರ್ಷಗಳಿಂದ ಕೆನಡಾ ದೇಶದಲ್ಲಿ ವಾಸವಾಗಿದ್ದಾರೆ. ಇವರ ಸರ್ವಾಧ್ಯಕ್ಷತೆಯಲ್ಲಿ ನಾಡಿನ ಸಂಸ್ಕೃತಿ ಪರಂಪರೆ, ನೆಲ, ಜಲ, ಶಿಕ್ಷಣ ಕುರಿತಾಗಿ ವಿಚಾರ ಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ರುದ್ರಪ್ಪ ಭಂಡಾರಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷ ಡಾ. ತ್ಯಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಂಚ ಕಸುಬುಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸುಜ್ಞಾನಮೂರ್ತಿ ಪಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾಜಿಕ ಜೀವನಕ್ಕೆ ಪೂರಕವಾಗಿರುವ ವಿಶ್ವಕರ್ಮ ಸಮಾಜದ ಪಂಚ ಕಸುಬುಗಳು ಪಾರಂಪರಿಕತೆಯಿಂದ ಕೂಡಿವೆ. ಇಂದಿನ ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನ, ಕಂಪ್ಯೂಟರ್ ಡಿಸೈನ್‌ಗಳನ್ನು ಅಳವಡಿಸಿಕೊಂಡು ಕಸಬುಗಳಲ್ಲಿ ತಂತ್ರಜ್ಞಾನ ಬಳಸಿ ಸಮಾಜಬಾಂಧವರು ಆರ್ಥಿಕ ಪ್ರಗತಿ ಸಾಧಿಸುವತ್ತ ಮುಂದಡಿ ಇಡಬೇಕು ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಪಿ ಹೇಳಿದರು.

ಅವರು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗಸಂಸ್ಥೆಗಳ ವತಿಯಿಂದ ರವಿವಾರ ನಗರದ ವಿಜಯನಗರ ಬಡಾವಣೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2026ರ ದಿನದರ್ಶಿಕೆ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಿಂದುಳಿದವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶ್ವಕರ್ಮ ಅಭಿವೃದ್ಧಿ ನಿಗಮವೂ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಮಾಹಿತಿ ಪಡೆದು ಸಮಾಜಬಾಂಧವರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ ಮಾತನಾಡಿ, ಇತ್ತೀಚೆಗೆ ವಿಶ್ವಕರ್ಮ ಸಮುದಾಯ ಸಮರ್ಥವಾಗಿ ಸಂಘಟಿತವಾಗುತ್ತಿದೆ. ಇದರೊಂದಿಗೆ ರಾಜಕೀಯ ಕ್ಷೇತ್ರದಲ್ಲಿಯೂ ಛಾಪು ಮೂಡಿಸುವಂತೆ ಮುಂದಾಗಬೇಕು. ಎಲ್ಲ ರಂಗಗಳಲ್ಲಿಯೂ ನಾವು ಮುಂದೆ ಬರಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ ಮಾತನಾಡಿ, ಮುಂಬರುವ ಸಂಘದ ದಶಮಾನೋತ್ಸವ ಆಚರಣೆಗೆ ಸರ್ವರೂ ಸಹಕಾರ ನೀಡಬೇಕು. ಜಿಲ್ಲೆಯ ಪ್ರತಿಯೊಂದು ವಿಶ್ವಕರ್ಮ ಸಮಾಜದ ಮನೆ–ಮನೆಗಳಿಗೆ 2026ರ ದಿನದರ್ಶಿಕೆಯನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.

ಚಿಕ್ಕುಂಬಿಯ ನಾಗಲಿಂಗೇಶ್ವರ ಮಠದ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಈಶ್ವರಾಚಾರ್ಯ ಎಂ.ಪಿ, ನೌಕರರ ಸಂಘದ ನಿರ್ದೇಶಕ ಬಿ.ಎಂ. ಬಡಿಗೇರ ಸಮಾರಂಭ ಉದ್ದೇಶಿಸಿ ಮಾತನಾಡಿದರು.

2025ರ ರಾಷ್ಟ್ರೀಯ ಹಾಗೂ 2014ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ವಾಯ್. ಶಿಲ್ಪಿ (ಕಲಬುರಗಿ) ಮತ್ತು ನಾಗಲಿಂಗಪ್ಪ ಗಂಗೂರ (ಬಾಗಲಕೋಟೆ), ಗದಗ ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಉಮೇಶ ಕೆ. ಅರ್ಕಸಾಲಿ, ಪತ್ರಕರ್ತ ಮೌನೇಶ ಸಿ. ಬಡಿಗೇರ, ಟಿವಿ ವರದಿಗಾರರಾದ ಗಿರೀಶ ಕಮ್ಮಾರ ಮತ್ತು ಮಂಜುನಾಥ ಪತ್ತಾರ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವರವಿ ಕ್ಷೇತ್ರದ ಶ್ರೀಮೌನೇಶ್ವರ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಕಮಿಟಿ ಅಧ್ಯಕ್ಷ ಮೋಹನ ನರಗುಂದ, ಗೌರವಾಧ್ಯಕ್ಷ ಎ.ಎನ್. ಬಡಿಗೇರ, ನಿರ್ದೇಶಕ ಬಿ.ಎಂ. ಬಡಿಗೇರ, ಪ್ರಮುಖರಾದ ಮೌನೇಶ ಅರ್ಕಸಾಲಿ, ಶ್ರೀಧರ ಕೊಣ್ಣೂರ, ಕೆ.ಎಸ್. ಬಡಿಗೇರ, ರಿಂದಮ್ಮ ಬಡಿಗೇರ, ಶಿವಲೀಲಾ ಕೆ. ಬಡಿಗೇರ, ಪ್ರಧಾನ ಕಾರ್ಯದರ್ಶಿ ಸಿ.ವಿ. ಬಡಿಗೇರ ಉಪಸ್ಥಿತರಿದ್ದರು.

ಕೊಪ್ಪಳದ ಎಸ್.ಎನ್. ಬಡಿಗೇರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಖ.ಎಸ್. ಬಡಿಗೇರ ಸ್ವಾಗತಿಸಿದರು. ಸುಮಂಗಲಾ ಪತ್ತಾರ ಕಾರ್ಯಕ್ರಮ ನಿರೂಪಿಸಿದರು. ಆರ್.ಎಂ. ಬಡಿಗೇರ ವಂದಿಸಿದರು.

ಸಮಾರಂಭ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಮಾತನಾಡಿ, ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಸ್ಕಾರಗಳನ್ನು ಉಳಿಸಿ–ಬೆಳೆಸುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾಗಿದೆ. 21ನೇ ಶತಮಾನ ಜ್ಞಾನ, ವಿದ್ಯೆ, ಕೌಶಲ್ಯಗಳ ಯುಗವಾಗಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜಬಾಂಧವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣವೇ ಇಂದಿನ ಶ್ರೇಷ್ಠ ಸಿರಿವಂತಿಕೆಯಾಗಿದೆ ಎಂದರು.

ಬಳ್ಳಾರಿ| ಸೆಲ್ಫಿ ವಿಡಿಯೋ ಮಾಡುತ್ತಲೇ ಯುವತಿ ನೇಣಿಗೆ ಶರಣು!

0

ಬಳ್ಳಾರಿ: ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು ಸೆಲ್ಫಿ ವಿಡಿಯೋ ಮಾಡುತ್ತಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ.

ಮುನ್ನಿ (23) ಎಂದು ಗುರುತಿಸಲಾದ ಯುವತಿ, ತಮಗೆ ಆಗಿರುವ ಅನ್ಯಾಯವನ್ನು ವಿಡಿಯೋದಲ್ಲಿ ಹೇಳಿಕೊಳ್ಳುತ್ತಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದ ಮುನ್ನಿ, ಒಂದು ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಎರಡು ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈ ಮಧ್ಯೆ ಮಹಮ್ಮದ್ ಶೇಕ್ಷಾವಲ್ಲಿ ಎಂಬ ವಿವಾಹಿತ ವ್ಯಕ್ತಿಯೊಂದಿಗೆ ಸ್ನೇಹ ಬೆಳೆದು ಅದು ಸಂಬಂಧಕ್ಕೆ ತಿರುಗಿತ್ತು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಹಾಗೂ ಗಲಾಟೆಗಳು ನಡೆದಿದ್ದು, ಇದೇ ಕಾರಣಕ್ಕೆ ಮುನ್ನಿ ತೀವ್ರ ಮನಸ್ತಾಪಕ್ಕೆ ಒಳಗಾಗಿ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಮುನ್ನಿಗೆ ಎರಡನೇ ಮದುವೆ ಕುರಿತು ಮನೆಯಲ್ಲೇ ಚರ್ಚೆ ನಡೆಯುತ್ತಿತ್ತು ಎನ್ನಲಾಗಿದ್ದು, ಶೇಕ್ಷಾವಲ್ಲಿಯೊಂದಿಗೆ ಇರುವ ಸಂಬಂಧವೇ ಆಕೆಯ ಬದುಕಿಗೆ ಮುಳುವಾಗಿದೆ ಎಂಬ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ. ಪ್ರಕರಣ ಸಂಬಂಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಯಲ್ಲಪ್ಪ ಎಚ್. ಬಾಬರಿ ಚಾಲನೆ

0

ಗದಗ: ತಿಮ್ಮಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಚಾಲನೆ ನೀಡಿದರು. 1ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಮುಂದೆ ಬರಬಹುದಾದ ಅಂಗವಿಕಲತೆಯನ್ನು ತಡೆಯೋಣ ಎಂದು ಹೇಳಿದರು.

ಸಹಾಯಕ ವೈದ್ಯರಾದ ಗಂಗಮ್ಮ ಕುಂಬಾರ ಹಾಗೂ ಅಕ್ಷತಾ ಇಳಿಗೆರೆ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮೀ ಇದ್ಲಿ, ಶಂಕರಮ್ಮ ಇದ್ಲಿ, ವಿದ್ಯಾ ಇದ್ಲಿ, ದೇವಕ್ಕ ಆಲೂರು, ಶೃತಿ ತುಪ್ಪದ, ಸತ್ಯಮ್ಮ ಮಣ್ಣೂರ, ವಿಜಯಲಕ್ಷ್ಮೀ ಉಂಡಿ, ಶಾರದಾ ಗೋಂದಿ ಮುಂತಾದವರಿದ್ದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎನ್.ಎಚ್. ಕೋನರಡ್ಡಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪೋಲಿಯೋ ಮುಕ್ತ ಸಮಾಜ ರೂಪಿಸಲು ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಪೋಲಿಯೋ ಮುಕ್ತ ಸಮಾಜ ರೂಪಿಸಲು ಶ್ರಮಿಸಬೇಕೆಂದು ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಅವರು ಭಾನುವಾರ ಬೆಳಿಗ್ಗೆ ಧಾರವಾಡ ನಗರದ ಮಹಾನಗರಪಾಲಿಕೆ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಸಂಯುಕ್ತವಾಗಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೇಶವನ್ನು ಪೋಲಿಯೋ ಮುಕ್ತವಾಗಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನದ ಸದುಪಯೋಗವನ್ನು ಪ್ರತಿಯೊಬ್ಬ ಪೋಷಕರು ಪಡೆದುಕೊಳ್ಳಬೇಕು. ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ವ್ಯವಸ್ಥಿತವಾಗಿ ಅಭಿಯಾನವನ್ನು ಸಂಘಟಿಸಲಾಗಿದೆ. ಜಿಲ್ಲೆಯ ಮೂಲೆ ಮೂಲೆಗೂ ಲಸಿಕೆ ತಲುಪಿಸುವ ಉದ್ದೇಶದಿಂದ ಒಟ್ಟು 891 ಪಲ್ಸ್ ಪೋಲಿಯೋ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಭ್ಯವಿದ್ದು, ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.

ಪೋಲಿಯೋ ಎಂಬುದು ಮಾರಕ ಕಾಯಿಲೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವುದು ಅತ್ಯಗತ್ಯ. ನಿಮ್ಮ ಮನೆಯಲ್ಲಿ ಅಥವಾ ನೆರೆಹೊರೆಯಲ್ಲಿ ಐದು ವರ್ಷದೊಳಗಿನ ಮಕ್ಕಳಿದ್ದರೆ ಅವರನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತಂದು ಪೋಲಿಯೋ ಹನಿ ಹಾಕಿಸಿ. ಸರ್ಕಾರದ ಈ ಬೃಹತ್ ಅಭಿಯಾನದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ ಮಾತನಾಡಿ, ಈ ಬಾರಿಯ ಅಭಿಯಾನದಲ್ಲಿ ಕೇವಲ ಮೂರು ದಿನಗಳ ಅವಧಿಯಲ್ಲಿ ಒಟ್ಟು 2 ಲಕ್ಷದ 7 ಸಾವಿರ ಮಕ್ಕಳನ್ನು ತಲುಪಿ, ಪೋಲಿಯೋ ಲಸಿಕೆ ನೀಡುವ ಬೃಹತ್ ಗುರಿಯನ್ನು ಹೊಂದಲಾಗಿದೆ. ಈ ಗುರಿಯನ್ನು ತಲುಪಲು ಈಗಾಗಲೇ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ಮಗುವಿಗೂ ಲಸಿಕೆ ತಲುಪುವಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಅವರು ಹೇಳಿದರು.

ಹಿರಿಯ ಮಕ್ಕಳ ತಜ್ಞ ವೈದ್ಯ ಡಾ. ರಾಜನ್ ದೇಶಪಾಂಡೆ ಮಾತನಾಡಿ, ಪೋಲಿಯೋ ಹರಡಲು ಯಾವುದೇ ವೈರಸ್ ಅಥವಾ ಅಧಿಕೃತ ಅನುಮತಿಯ ಅಗತ್ಯವಿಲ್ಲ. ಇದು ಪಕ್ಕದ ದೇಶಗಳಿಂದ ಅಥವಾ ರಾಜ್ಯಗಳಿಂದ ಅತ್ಯಂತ ವೇಗವಾಗಿ ಸಂಚರಿಸಬಲ್ಲದು ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಇಲಾಖೆಯ ರೇಖಾ ಬಾಡಗಿ ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ.ಎಚ್.ಓ ಅಧಿಕಾರಿ ಡಾ. ಸುಜಾತಾ ಹಸವೀಮಠ ವಂದಿಸಿದರು.

ವೇದಿಕೆಯಲ್ಲಿ ಮಹಾನಗರಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದ್ರೆ, ಆರೋಗ್ಯ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕಿ ಡಾ. ಎಚ್.ಆರ್. ಪುಷ್ಪಾ, ರಾಜ್ಯ ನೋಡಲ್ ಅಧಿಕಾರಿ ಡಾ.ಉಮಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡೆಪ್ಪನವರ, ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ, ಮಹಾನಗರಪಾಲಿಕೆ ಧಾರವಾಡ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಶ್ವಿನಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಶಶಿಧರ ಕಳಸೂರಮಠ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ರೋಟರಿ ಕ್ಲಬ್ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು 2014ರಲ್ಲಿ ಭಾರತವನ್ನು ಅಧಿಕೃತವಾಗಿ ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿತು. ಸತತ ಮೂರು ವರ್ಷಗಳ ಕಾಲ ದೇಶದಲ್ಲಿ ಯಾವುದೇ ಹೊಸ ಪೋಲಿಯೋ ಪ್ರಕರಣಗಳು ವರದಿಯಾಗದ ಕಾರಣ, ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಅಧಿಕೃತವಾಗಿ ಪೋಲಿಯೋ ಮುಕ್ತ ದೇಶ ಎಂದು ಘೋಷಿಸಿತು. ಆದರೂ ಅಪಾಯದ ಭೀತಿ ಮಾತ್ರ ಇನ್ನೂ ಪೂರ್ಣವಾಗಿ ಕಡಿಮೆಯಾಗಿಲ್ಲ ಎಂದು ಹೇಳಿದರು.


ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪುರಸಭೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದು, ಪುನಃ ನೇಮಿಸಿಕೊಳ್ಳಬೇಕು ಎಂದು ಗುತ್ತಿಗೆ ಕಾರ್ಮಿಕರು ಪುರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಗುತ್ತಿಗೆದಾರ ಪೌರಕಾರ್ಮಿಕರ ಪಾಲಕರಾದ ಕಮಲವ್ವ ನಂದೆಣ್ಣವರ ಹಾಗೂ ಯಲ್ಲಕ್ಕ ಗಡದವರ ಮಾತನಾಡಿ, ಕಳೆದ 10 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನಮಗೆ ನ್ಯಾಯ ಸಿಗುತ್ತಿಲ್ಲ. ನ್ಯಾಯ ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ. ಮಾರ್ಚ್ನಿಂದ ಕಾರ್ಯ ನಿರ್ವಹಿಸುತ್ತಿದ್ದು, ಗುತ್ತಿಗೆದಾರ 2 ತಿಂಗಳ ಗೌರವಧನ ಕೊಟ್ಟು ಇನ್ನು ಎರಡು ತಿಂಗಳು ಗೌರವಧನ ಕೊಟ್ಟಿಲ್ಲ. 10 ಜನರಲ್ಲಿ 6 ಜನರನ್ನು ಪುನಃ ತೆಗೆದುಕೊಂಡಿದ್ದಾರೆ. ನಾಲ್ಕು ಜನರನ್ನು ಕೆಲಸದಿಂದ ತೆಗೆದುಹಾಕಿದ್ದು, ಹೋರಾಟ ಮಾಡಿದವರನ್ನು ಬಿಟ್ಟು ಬೇರೆಯವರನ್ನು ಕೆಲಸಕ್ಕೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರಲ್ಲದೆ, ನಾಲ್ಕು ಜನರನ್ನು ಪುನಃ ಕೆಲಸಕ್ಕೆ ತೆಗೆದುಕೊಂಡರೆ ಮಾತ್ರ ಉಳಿದವರು ಕೆಲಸಕ್ಕೆ ಹಾಜರಾಗುತ್ತೇವೆ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರೊಂದಿಗೆ ಮಾತನಾಡಿ, ಅವರಿಗೆ ತಿಳಿಹೇಳಿ ಪರಿಸ್ಥಿತಿ ಶಾಂತಗೊಳಿಸಿದರು. ಈ ಸಂದರ್ಭದಲ್ಲಿ ನೀಲಪ್ಪ ಶಿರಹಟ್ಟಿ, ಕಲ್ಯಾಣಕುಮಾರ ಹಾದಿಮನಿ, ದುರ್ಗವ್ವ ಶಿರಹಟ್ಟಿ, ಮಲ್ಲವ್ವ ನಂದೆಣ್ಣವರ, ಹನುಮವ್ವ ಗಡದವರ, ದ್ಯಾಮಕ್ಕ ನಂದೆಣ್ಣವರ, ಕರಿಯವ್ವ ದೊಡ್ಡಮನಿ, ಪ್ರೇಮವ್ವ ಹಾದಿಮನಿ ಮತ್ತಿತರರು ಇದ್ದರು.

ಆತ್ಮ ನಿರ್ಭರ ಭಾರತ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ದಂಡಿನರವರ ಕಾನೂನು ಮಹಾವಿದ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸಿಂಗೌಡರ್, ರಾಜು ಕುರಡಗಿ, ರವಿ ದಂಡಿನ, ವಿಜಯಲಕ್ಷ್ಮಿ ಮಾನ್ವಿ, ನಿರ್ಮಲಾ ಕೊಳ್ಳಿ, ಕವಿತಾ ಬಂಗಾರಿ, ಸ್ವಾತಿ ಅಕ್ಕಿ, ಪದ್ಮಿನಿ ಮುತ್ತಲದಿನ್ನಿ, ವಂದನಾ ವರ್ನೆಕರ್, ಅಶ್ವಿನಿ ಜಗತಾಪ್, ಶಾರದಾ ಸಜ್ಜನ್, ಶ್ವೇತಾ ದಂಡಿನ, ಅಕ್ಕಮ್ಮ ವಸ್ತ್ರದ, ಸುಮಂಗಲ ಕೊನೆಹೂಲ, ಶಿವಲೀಲಾ ಉಮಚಗಿ, ಕಮಲಾಕ್ಷಿ ತೆಕ್ಕಲ್ಕೋಟೆ, ಕಸ್ತೂರಿ ಕಮ್ಮಾರ್, ಪ್ರೀತಿ ಶಿವಪ್ಪನಮಠ, ರೇಖಾ ಗವಳಿ, ನಾಗರಾಜ ಕುಲಕರ್ಣಿ, ರಮೇಶ್ ಸಜ್ಜಗಾರ್, ಮಂಜುನಾಥ ಶಾಂತಗಿರಿ ಮುಂತಾದವರು ಉಪಸ್ಥಿತರಿದ್ದರು.

error: Content is protected !!