Home Blog Page 299

ಹೈಟೆಕ್ ಶೌಚಾಲಯ ಕಾಮಗಾರಿಗೆ ಭೂಮಿಪೂಜೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇತಿಹಾಸ ಪ್ರಸಿದ್ಧ ಲಕ್ಕುಂಡಿ ಗ್ರಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಇಲ್ಲಿಯ ಹಾಲಗೊಂಡ ಬಸವೇಶ್ವರ ಕೆರೆಯ ಪಕ್ಕದಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ಶೌಚಾಲಯ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪೂಜಾರ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ರಾಜ್ಯ ಸದಸ್ಯ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ 50 ಲಕ್ಷ ರೂ ಅನುದಾನದಲ್ಲಿ ಗ್ರಾಮದಲ್ಲಿ ಎರಡು ಹೈಟೆಕ್ ಶೌಚಾಲಯಗಳು ನಿರ್ಮಾಣವಾಗಲಿವೆ. ಒಂದು ಇಲ್ಲಿಯ ಪ್ರಸಿದ್ಧ ನನ್ನೇಶ್ವರ ಹಾಗೂ ಕಾಶಿ ವಿಶ್ವನಾಥ ಸ್ಮಾರಕಗಳನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ದಿಸೆಯಲ್ಲಿ, ಇನ್ನೊಂದು ಪ್ರವಾಸಿಗರು ಹೋಗುವ ಮುಖ್ಯ ರಸ್ತೆಯ ಎಂ.ಕೆ.ಬಿ.ಎಸ್ ಶಾಲೆಯ ಹತ್ತಿರ ಹೈಟೆಕ್ ಶೌಚಾಲಯ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಸ್.ಬಿ. ಕಲಕೇರಿ, ಮುಖಂಡರಾದ ದತ್ತಾತ್ರೇಯ ಜೋಶಿ, ವೀರಯ್ಯ ಗಂಧದ, ಗ್ರಾ.ಪಂ ಸದಸ್ಯರಾದ ರುದ್ರಪ್ಪ ಮುಸ್ಕಿನಭಾವಿ, ಪೀರಸಾಬ ನದಾಫ್, ಕುಬೇರಪ್ಪ ಬೆಂತೂರ, ಮಹಾಂತೇಶ ಕಮತರ, ವಿರೂಪಾಕ್ಷಿ ಬೆಟಗೇರಿ, ರಜೀಯಾಬೇಗಂ ತಹಸೀಲ್ದಾರ, ಪಿ.ಡಿ.ಒ ಅಮೀರನಾಯಕ, ಎಂ.ಎ. ಗಾಜಿ ಇದ್ದರು.

ಗುಡಿಸಲಾದರೂ ಕಟ್ಟಿಕೊಳ್ಳುತ್ತೇವೆ, ನಿವೇಶನ ಗುರುತಿಸಿಕೊಡಿ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: 8 ವರ್ಷಗಳ ಹಿಂದೆ ಆಶ್ರಯ ನಿವೇಶನ ಹಕ್ಕುಪತ್ರ ಪಡೆದಿದ್ದರೂ ಇದುವರೆಗೂ ತಮ್ಮ ಹೆಸರಿನ ನಿವೇಶನ ಗುರುತಿಸಿಕೊಡದೇ ಇರುವುದಕ್ಕೆ ಅಸಮಾಧಾನಗೊಂಡ ಫಲಾನುಭವಿಗಳು ಶನಿವಾರ ಪುರಸಭೆಗೆ ದೌಡಾಯಿಸಿ 8 ದಿನಗಳಲ್ಲಿ ಫಲಾನುಭವಿಗಳಿಗೆ ನಿವೇಶನ ಗುರುತಿಸಿಕೊಡಬೇಕು ಮತ್ತು ಅಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಪುರಸಭೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಈ ವೇಳೆ ತಮ್ಮ ಅಳಲು ತೋಡಿಕೊಂಡ ಕವಿತಾ ಪಾಟೀಲ, ದೀಪಾ ಕುಂದಗೋಳ ಮಾತನಾಡಿ, ಪಟ್ಟಣದ ಪುರಸಭೆ ವ್ಯಾಪ್ತಿಯ ತಮ್ಮಾ-ತಿಮ್ಮಿ ಗುಡ್ಡದಲ್ಲಿ 2018ರಲ್ಲಿಯೇ 438 ಫಲಾನುಭವಿಗಳಿಗೆ ನಗರ ನಿವೇಶನ ಯೋಜನೆಯಡಿ ಹಕ್ಕುಪತ್ರ ನೀಡಿದ್ದಾರೆ. ಅಂದಿನಿಂದ ಇವತ್ತಿನವರೆಗೂ ನಮ್ಮ ನಿವೇಶನ ಗುರುತಿಸಿಕೊಟ್ಟಿಲ್ಲ ಮತ್ತು ಅಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿಲ್ಲ. ನಮ್ಮ ಜಾಗ ಯಾವುದೆಂದು ಗೊತ್ತಿಲ್ಲದಿದ್ದರೂ ಅನೇಕ ವರ್ಷಗಳಿಂದ ಪುರಸಭೆಗೆ ಟ್ಯಾಕ್ಸ್ ಕಟ್ಟುತ್ತಾ ಬಂದಿದ್ದೇವೆ. ಹಕ್ಕುಪತ್ರ ಪಡೆದು ಸ್ವಂತ ಸೂರಿನ ಕನಸು ಕಾಣುತ್ತಲೇ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಮ್ಮ ಬೇಡಿಕೆಗಾಗಿ ಕಳೆದ ಹಲವಾರು ವರ್ಷಗಳಿಂದ ಎಲ್ಲ ಫಲಾನುಭವಿಗಳು ಸೇರಿ ಮುಖ್ಯಮಂತ್ರಿಗಳಾದಿಯಾಗಿ ಎಲ್ಲ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕೈ-ಕಾಲು ಮುಗಿದು ಕೇಳಿಕೊಳ್ಳುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ನಿವೇಶನ ಗುರುತಿಸಿ ಸೌಲಭ್ಯ ಕಲ್ಪಿಸಿಕೊಟ್ಟರೆ ಗುಡಿಸಲು ಕಟ್ಟಿಕೊಂಡಾದರೂ ಬದುಕುತ್ತೇವೆ. ಇನ್ನಾದರೂ ಸಂಬಂಧಪಟ್ಟವರು ನಮ್ಮ ಗೋಳು ಕೇಳಬೇಕು ಎಂದು ವಿನಂತಿಸಿದರು.

ಕರವೇ ಮುಖಂಡ ಪ್ರಕಾಶ ಕೊಂಚಿಗೇರಿಮಠ, ಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಬಸವರಾಜ ಹಿರೇಮನಿ, ಸುರೇಶ ಹಟ್ಟಿ, ಮಂಜುನಾಥ ಮುಳಗುಂದ, ಮಂಜು ಸುತಾರ ಮಾತನಾಡಿ, ಪಟ್ಟಣದಿಂದ ದೂರ ಇರುವ, ಜನವಸತಿಗೆ ಯೋಗ್ಯವಲ್ಲದ ಮತ್ತು ಸಂಪರ್ಕ ರಸ್ತೆಯೂ ಇಲ್ಲದ ನಿರ್ಜನವಾದ ಗುಡ್ಡದ ಪ್ರದೇಶದಲ್ಲಿ ಆಶ್ರಯ ನಿವೇಶನಕ್ಕೆ ಭೂಮಿ ಖರೀದಿಸಿದ್ದೇ ದೊಡ್ಡ ತಪ್ಪಾಗಿದೆ. ಇನ್ನು 8 ವರ್ಷಗಳ ಹಿಂದೆ ಹಕ್ಕುಪತ್ರ ನೀಡಿದ್ದರೂ ಅಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ ಮತ್ತು ಫಲಾನುಭವಿಗಳಿಗೆ ನಿವೇಶನ ಗುರುತಿಸಿಕೊಟ್ಟಿಲ್ಲ. 8 ದಿನಗಳಲ್ಲಿ ಫಲಾನುಭವಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಫಲಾನುಭವಿಗಳೊಂದಿಗೆ ಅನೇಕ ಸಂಘಟನೆಗಳು ಪುರಸಭೆಯ ಮುಂದೆ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದರು.

ಈ ವೇಳೆ ಫಲಾನುಭವಿಗಳಾದ ಪಲ್ಲವಿ ಹಿರೇಮಠ, ರೇವತಿ ಕಟ್ಟಿಮನಿ, ಶಿವಲೀಲಾ ಹಿಪ್ಪರಗಿ, ಶೋಭಾ ಕಮತದ, ಸುಶಿಲವ್ವ ಹಿರೇಮಠ, ನಿರ್ಮಲಾ ಬೆಳದಡಿ, ದ್ರಾಕ್ಷಾಯಣಿ ಮಲ್ಲಸಮುದ್ರ, ಶ್ಯಾಮಿನಾ ನದಾಫ್, ಸುಶೀಲಾ ಪಾಟೀಲ, ಲಲಿತಾ ಆರೇರ, ಪ್ರೇಮಾ ಮೇದೂರ, ಮಾದೇವಕ್ಕ ಗೂಡೂರ, ಜಮೀನಾ ಬೇಗಂ ಮುಂತಾದವರು ಇದ್ದರು.

ಬಾಕ್ಸ್
ಮನವಿ ಪತ್ರ ಸ್ವೀಕರಿಸಿದ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ತಮ್ಮಾ-ತಿಮ್ಮಿ ಗುಡ್ಡದ ಹತ್ತಿರ 16 ಎಕರೆ ಜಮೀನಿನಲ್ಲಿ 648 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ 438 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ನಿವೇಶನಕ್ಕೆ ಸಂಪರ್ಕ ರಸ್ತೆ ಕಲ್ಪಿಸುವ ಪ್ರಕ್ರಿಯೆ ನಡೆದಿದೆ. ಕಚ್ಚಾ ರಸ್ತೆ-ಗಟಾರು ನಿರ್ಮಿಸಿ ಕಲ್ಲು ನೆಡಲಾಗಿದೆ. ಶಾಸಕರೊಂದಿಗೆ ಚರ್ಚಿಸಿ ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ರಸ್ತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ನಿವೇಶನ ಗುರುತಿಸಿಕೊಡಲಾಗುತ್ತದೆ ಎಂದರು.

ಕೋಮುವಾದ ಹಿಮ್ಮೆಟ್ಟಿಸುವ ಶಪಥ

0

ವಿಜಯಸಾಕ್ಷಿ ಸುದ್ದಿ, ಗದಗ: ಜಾತ್ಯಾತೀತ ಪ್ರಜಾಸತ್ತಾತ್ಮಕ ಭಾರತ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದೆ. ಬಹುಸಂಖ್ಯಾತ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮಾರಕವಾದ ಕೋಮುವಾದಿ ಆಡಳಿತ ಮುಕ್ತಗೊಳಿಸಿ ಭಾರತದ ಸಂವಿಧಾನಕ್ಕೆ ಪೂರಕವಾದ ಪ್ರಜಾಪ್ರಭುತ್ವ ಆಡಳಿತ ಸ್ಥಾಪಿಸಲು ಜಾತ್ಯಾತೀತ ಶಕ್ತಿಗಳು ಇಂದು ಒಂದಾಗುವ ಕಾಲ ಸನ್ನಿಹಿತವಾಗಿದೆ. ದೇಶದ ಬಹುಸಂಖ್ಯಾತರ ಅಭಿವೃದ್ಧಿಗೆ ಮಾರಕವಾದ ಕೋಮುವಾದಿ ಸರಕಾರವನ್ನು ಕಿತ್ತೊಗೆಯಲು ನಾವೆಲ್ಲರೂ ಮತ್ತೊಮ್ಮೆ 1947ರ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು ಎಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸ್ವಾತಿ ಸುಂದರೇಶ ಹೇಳಿದರು.

ಅವರು ನಗರದ ಗಾಂಧಿ ವೃತ್ತದಲ್ಲಿ ಸಂಘಟಿಸಿದ್ದ ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ರಾಜ್ಯಾದ್ಯಂತ ಸಿಪಿಐ ಶತಮಾನೋತ್ಸವ ಜಾಥಾ ಸಂಚರಿಸುತ್ತಿದ್ದು, ಡಿ. 23ಕ್ಕೆ ಜಾಥಾ ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಜಾತ್ಯಾತೀತ, ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಿ ಕೋಮುವಾದ ಹಿಮ್ಮೆಟ್ಟಿಸುವ ಶಪಥ ಮಾಡಿದ್ದಾರೆ ಎಂದು ತಿಳಿಸಿದರು.

ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ದಲಿತ ಮುಖಂಡ ವೆಂಕಟೇಶಯ್ಯ,
ದಲಿತ ನಾಯಕರಾದ ಸತೀಶ ಹೂಲಿ, ರಮೇಶ ಬಾಳಮ್ಮನವರ, ನಾರಾಯಣಸ್ವಾಮಿ, ಎಐಸಿಯುಟಿ ನವಲೂರ, ಸಿಪಿಐನ ಷಣ್ಮುಖಸ್ವಾಮಿ, ಸತೀಶ ಪಾಸಿ, ವಾಸುದೇವ ಹುಣಸಿಮರದ, ಬಸವರಾಜ ಪೂಜಾರ ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಲಿತ ಕಲಾಮಂಡಳಿ ಹಾಗೂ ಸಿಪಿಐ ಕಲಾ ತಂಡದಿಂದ ಕ್ರಾಂತಿಗೀತೆ ಹಾಡಿದರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ದಿ. ಬಿ. ಬಾಬು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಶಾರ್ಟ್‌ ಸರ್ಕ್ಯೂಟ್‌ನಿಂದ ಕಿರಾಣಿ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

0

ಗದಗ:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ ಆಗಿರುವ ಘಟನೆ ಗದಗನ ಬೆಟಗೇರಿಯ ಟೆಂಗಿನಕಾಯಿ ‌ಬಜಾರ್‌ನಲ್ಲಿ ಜರುಗಿದೆ.

ತಿಪ್ಪಣಸಾ ಅರವಟಗಿ ಅವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.

ಬೆಟಗೇರಿ ಪೊಲೀಸರ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಈ ಘಟನೆ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಎಕ್ಸ್‌ಪ್ರೆಸ್‌ ರೈಲು! 8 ಆನೆಗಳು ಸಾವು

0

ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

ಬೆಳಗಿನ ಜಾವ ಸುಮಾರು 2.17ರ ಸುಮಾರಿಗೆ ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಪಿಟಿಐಗೆ ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಅರಣ್ಯ ಇಲಾಖೆ ಹಾಗೂ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಅಪಘಾತದ ಹಿನ್ನೆಲೆಯಲ್ಲಿ ಜಮುನಾಮುಖ್–ಕಂಪೂರ್ ವಿಭಾಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗುತ್ತಿದೆ. ಹಳಿ ಪುನಃಸ್ಥಾಪನೆ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಯಿರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಮಿಜೋರಾಂನ ಸಾಯಿರಾಂಗ್ (ಐಜ್ವಾಲ್ ಸಮೀಪ) ಮತ್ತು ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ನಡುವೆ ಸಂಚರಿಸುತ್ತದೆ. ಅಪಘಾತ ಸಂಭವಿಸಿದ ಸ್ಥಳವು ಗುವಾಹಟಿಯಿಂದ ಸುಮಾರು 126 ಕಿಲೋಮೀಟರ್ ದೂರದಲ್ಲಿದೆ.

ರೈಲು ಹಳಿ ತಪ್ಪಿದ್ದರಿಂದ ಹಾಗೂ ಆನೆಗಳ ದೇಹದ ಭಾಗಗಳು ಹಳಿಗಳ ಮೇಲೆ ಚದುರಿದ್ದ ಕಾರಣ ಅಸ್ಸಾಂ ಮತ್ತು ಈಶಾನ್ಯದ ಇತರ ಭಾಗಗಳಿಗೆ ರೈಲು ಸೇವೆಗಳು ತೀವ್ರವಾಗಿ ಬಾಧಿತವಾಗಿವೆ. ಪರಿಣಾಮ ಬೀರಿದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಇತರ ಬೋಗಿಗಳ ಖಾಲಿ ಬರ್ತ್‌ಗಳಲ್ಲಿ ಸ್ಥಳಾಂತರಿಸಲಾಗಿದೆ.

ರೈಲು ಗುವಾಹಟಿ ತಲುಪಿದ ನಂತರ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುವುದು. ನಂತರ ರೈಲು ತನ್ನ ಮುಂದಿನ ಪ್ರಯಾಣವನ್ನು ಮುಂದುವರಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳ ಪ್ರಕಾರ, ಈ ಘಟನೆ ಆನೆ ಕಾರಿಡಾರ್ ಅಲ್ಲದ ಪ್ರದೇಶದಲ್ಲಿ ಸಂಭವಿಸಿದೆ. ಹಳಿಗಳ ಮೇಲೆ ಆನೆಗಳ ಹಿಂಡು ನಿಂತಿರುವುದನ್ನು ಗಮನಿಸಿದ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದರೂ, ಅಪಘಾತವನ್ನು ತಪ್ಪಿಸಲು ಸಾಧ್ಯವಾಗಿಲ್ಲ.

ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ.!

0

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಲಾಗಿದೆ.

ಉದ್ಘಾಟನೆಯ ನಂತರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲ, ಇಡೀ ಈಶಾನ್ಯ ಭಾರತದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿಯಲ್ಲಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂಬುದನ್ನು ಇಡೀ ದೇಶ ನೋಡುತ್ತಿದೆ” ಎಂದು ಹೇಳಿದರು.

ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ನೂತನ ಟರ್ಮಿನಲ್, ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂನ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾದ ಈ ಟರ್ಮಿನಲ್, ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ.

ಇದರಿಂದ ಅಸ್ಸಾಂ ಹಾಗೂ ನೆರೆಯ ರಾಜ್ಯಗಳ ಸಂಪರ್ಕ ವ್ಯವಸ್ಥೆ ಸುಧಾರಿಸುವುದರೊಂದಿಗೆ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಮ-ಲಕ್ಷ್ಮಣ ಅಸಲಿ ನಾಣ್ಯ ಎಂದು ನಂಬಿಸಿ ಮೋಸ: ಇಬ್ಬರು ಆರೋಪಿಗಳು ಅರೆಸ್ಟ್!

0

ಮಂಡ್ಯ: ಮಾಂತ್ರಿಕ ಶಕ್ತಿಯಿರುವ ಅದೃಷ್ಟದ ‘ರಾಮ–ಲಕ್ಷಣ’ ನಾಣ್ಯ ಎಂದು ನಂಬಿಸಿ ಸಾರ್ವಜನಿಕರಿಗೆ ವಂಚಿಸಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಹಳೆಯ ತಾಮ್ರದ ನಾಣ್ಯವನ್ನು ಮಾಂತ್ರಿಕ ನಾಣ್ಯವೆಂದು ಹೇಳಿ ಹಣ ಪಡೆದು ಪರಾರಿಯಾಗಲು ಯತ್ನಿಸಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದ ಯಶ್ವಂತ್ ರಾವ್ ಹಾಗೂ ಸುಧೀರ್ ಎಂಬುವವರನ್ನು ಬಂಧಿಸಲಾಗಿದೆ. ಈ ಯುವಕರು ಮತ್ತೊಬ್ಬ ಸಹಚರನೊಂದಿಗೆ ಸೇರಿ ಅಮಾಯಕ ಜನರಿಗೆ ಮಾಂತ್ರಿಕ ಶಕ್ತಿಯುಳ್ಳ ನಾಣ್ಯ ಎಂದು ನಂಬಿಸಿ ವಂಚನೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.

ಇತ್ತೀಚೆಗೆ ಬೆಂಗಳೂರಿನ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿದ್ದ ಆರೋಪಿಗಳು, ಒಂದು ಲಕ್ಷ ರೂಪಾಯಿಗೆ ನಾಣ್ಯ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ನಾಣ್ಯ ಪಡೆಯಲು ಬೆಂಗಳೂರಿನ ವ್ಯಕ್ತಿ ನಾಗಮಂಗಲ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಆಗಮಿಸಿದ್ದರು.

ಈ ವೇಳೆ ಆರೋಪಿಗಳು ಮಾಂತ್ರಿಕ ನಾಣ್ಯವೆಂದು ಹಳೆಯ ತಾಮ್ರದ ನಾಣ್ಯವೊಂದನ್ನು ನೀಡಿ, ಒಂದು ಲಕ್ಷ ರೂಪಾಯಿ ಹಣ ಪಡೆದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ವಂಚನೆಗೆ ಒಳಗಾದುದನ್ನು ಅರಿತ ವ್ಯಕ್ತಿ ‘ಕಳ್ಳ ಕಳ್ಳ’ ಎಂದು ಕೂಗಿದ್ದಾರೆ. ವ್ಯಕ್ತಿಯ ಚೀರಾಟ ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಚುರುಕಾಗಿ ಓಡುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದಾರೆ.

ವಂಚನೆ ವಿಚಾರ ತಿಳಿದ ಸ್ಥಳೀಯರು ಆಕ್ರೋಶಗೊಂಡು ಇಬ್ಬರು ಆರೋಪಿಗಳಿಗೆ ಧರ್ಮದೇಟು ನೀಡಿದ್ದಾರೆ. ಆದರೆ ಗುಂಪಿನಲ್ಲಿದ್ದ ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಟೌನ್ ಪೊಲೀಸರು, ಸಾರ್ವಜನಿಕರ ವಶದಲ್ಲಿದ್ದ ಯಶ್ವಂತ್ ರಾವ್ ಹಾಗೂ ಸುಧೀರ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

2 ತಿಂಗಳಲ್ಲಿ 1000 ಕೋಟಿ ವಹಿವಾಟು! ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್!

0

ದಾವಣಗೆರೆ: ದಾವಣಗೆರೆ ಪೊಲೀಸರು ಪತ್ತೆಹಚ್ಚಿದ್ದ ಸೈಬರ್ ವಂಚನೆ ಪ್ರಕರಣ ಇದೀಗ ರಾಜ್ಯದಲ್ಲೇ ಅತಿದೊಡ್ಡ ಸೈಬರ್ ಅಪರಾಧ ಪ್ರಕರಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆರಂಭದಲ್ಲಿ ಸುಮಾರು 150 ಕೋಟಿ ರೂಪಾಯಿ ಹಣ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ, ತನಿಖೆ ಮುಂದುವರಿದಂತೆ 1,000 ಕೋಟಿ ರೂಪಾಯಿಗೂ ಅಧಿಕ ಹಣ ವರ್ಗಾವಣೆ ನಡೆದಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರು ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಎರಡು ತಿಂಗಳ ಹಿಂದೆ ದಾವಣಗೆರೆ ಸೈಬರ್ ಪೊಲೀಸ್ ಠಾಣೆಗೆ ಪ್ರಮೋದ್ ಎಂಬ ವ್ಯಕ್ತಿ ದೂರು ದಾಖಲಿಸಿದ್ದರು. ಕನ್‌ಸ್ಟ್ರಕ್ಷನ್ ಉದ್ಯಮ ನಡೆಸುತ್ತಿದ್ದ ಪ್ರಮೋದ್, ತನ್ನ ಬ್ಯಾಂಕ್ ಖಾತೆಯಿಂದ 52 ಲಕ್ಷ ರೂಪಾಯಿ ಕಳೆದುಕೊಂಡಿರುವುದಾಗಿ ತಿಳಿಸಿದ್ದರು. ಈ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು, ಪ್ರಮೋದ್ ಖಾತೆಯಿಂದಲೇ ಸುಮಾರು 150 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವುದನ್ನು ಪತ್ತೆಹಚ್ಚಿದ್ದರು.

ತನಿಖೆ ಮುಂದುವರಿದಂತೆ ಆರಂಭದಲ್ಲಿ ಸಂತ್ರಸ್ತನಾಗಿದ್ದ ಪ್ರಮೋದ್‌ನೇ ಪ್ರಕರಣದ ಪ್ರಮುಖ ಆರೋಪಿಯಾಗಿರುವುದು ಗೊತ್ತಾಗಿದೆ. ವಿಚಾರಣೆಯಲ್ಲಿ ಆತನ ಖಾತೆಗೆ ಜಮೆಯಾದ ಹಣ ಅನಾಮಧೇಯ ಮೂಲಗಳಿಂದ ಬಂದಿರುವುದು ಹಾಗೂ ಯಾವುದೇ ಉದ್ಯಮ ಇಲ್ಲದಿದ್ದರೂ ಕರೆಂಟ್ ಅಕೌಂಟ್ ತೆರೆಯಲಾಗಿದ್ದುದೂ ಬಹಿರಂಗವಾಗಿದೆ.

ಪೊಲೀಸರ ತನಿಖೆಯಲ್ಲಿ ಕರೆಂಟ್ ಅಕೌಂಟ್‌ಗಳನ್ನು ತೆರದು ಅವುಗಳನ್ನು ಇತರರಿಗೆ ಮಾರಾಟ ಮಾಡುವ ದೊಡ್ಡ ಜಾಲವೊಂದು ಬಯಲಾಗಿದೆ. ದುಬೈ ಸೇರಿದಂತೆ ವಿದೇಶಗಳಿಂದ ಕೋಟಿ ಕೋಟಿ ರೂಪಾಯಿ ಹಣ ಈ ಖಾತೆಗಳಿಗೆ ಜಮೆಯಾಗುತ್ತಿದ್ದು, ಆನ್‌ಲೈನ್ ಗೇಮಿಂಗ್, ಗ್ಯಾಂಬ್ಲಿಂಗ್, ನಕಲಿ ಟ್ರೇಡಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳಿಂದ ಹಣ ಹರಿದುಬರುತ್ತಿದ್ದ ಮಾಹಿತಿ ಲಭ್ಯವಾಗಿದೆ.

ಪ್ರಮೋದ್ ತನ್ನ ಕರೆಂಟ್ ಅಕೌಂಟ್ ಅನ್ನು ಇತರರಿಗೆ ಬಳಕೆಗೆ ನೀಡಿ ಕಮಿಷನ್ ಪಡೆಯುತ್ತಿದ್ದನೆಂದು ತಿಳಿದುಬಂದಿದೆ. ಆದರೆ ಜಮೆಯಾದ ಹಣಕ್ಕೆ ಕಮಿಷನ್ ನೀಡದ ಕಾರಣ ತನ್ನ ಖಾತೆಯಲ್ಲಿದ್ದ ಹಣವನ್ನು ವಂಚಕರು ಕದ್ದಿದ್ದಾರೆ ಎಂದು ಆತ ದೂರು ನೀಡಿದ್ದಾನೆ ಎಂಬುದೂ ತನಿಖೆಯಲ್ಲಿ ಸ್ಪಷ್ಟವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಬೇಲೂರು ಮೂಲದ ಅರ್ಫಾತ್ ಪಾಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅರ್ಫಾತ್ ಖಾತೆಯಲ್ಲಿ ಇದ್ದ 18 ಕೋಟಿ ರೂಪಾಯಿ ಹಣವನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಲ್ಲದೆ, ಕಳೆದ ಎರಡು ತಿಂಗಳಲ್ಲಿ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ 132 ಕೋಟಿ ರೂಪಾಯಿ ಹಣವನ್ನು ಅರ್ಫಾತ್ ವಿತ್‌ಡ್ರಾ ಮಾಡಿಕೊಂಡಿದ್ದ ಅಚ್ಚರಿಯ ಮಾಹಿತಿಯೂ ತನಿಖೆಯಲ್ಲಿ ಬಹಿರಂಗವಾಗಿದೆ. ಅರ್ಫಾತ್ ನೀಡಿದ ಮಾಹಿತಿಯ ಆಧಾರದಲ್ಲಿ ಗುಜರಾತ್‌ನ ಅಹಮದಾಬಾದ್ ಮೂಲದ ಸಂಜಯ್ ಕುಂದ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಬಿಜೆಪಿ ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ರವಾನಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಈ ದೇಶದ ಸ್ವಾತಂತ್ರ್ಯದ ನಾಯಕತ್ವ ವಹಿಸಿದ ಮಹಾತ್ಮಾ ಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕನ್ನಡ ನೆಲ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದರು.

ಈ ದೇಶಕ್ಕೆ ಸ್ವಾತಂತ್ರ್ಯದ ಬುನಾದಿ ಹಾಕಿದರು. ಕಳೆದ ವರ್ಷ ನಾವು ಗಾಂಧಿ ಭಾರತ ಕಾರ್ಯಕ್ರಮ ಮಾಡಿದೆವು. ಮಹತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ಸರ್ಕಾರ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿತು. ಈ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಭೂಮಿ ಮಟ್ಟ ಮಾಡಲು, ಕೊಟ್ಟಿಗೆ ನಿರ್ಮಾಣ,

ಆಶ್ರಯಮನೆ ನಿರ್ಮಾಣ ಮಾಡಲು ಸರ್ಕಾರ ಕೂಲಿ ನೀಡುತ್ತದೆ. ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರು ಈ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ತಂದ ಈ ಯೋಜನೆಯಲ್ಲಿ ಈ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆಯುತ್ತಿದೆ. ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಿರಿ ಎಂದು ಹೇಳಿದೆ. ಮಹಾತ್ಮಾ ಗಾಂಧಿ ಅವರ ಹೆಸರು ಅಜರಾಮರ” ಎಂದು ತಿಳಿಸಿದರು.

ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಬೇಡಿ

“ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಹಾಗೂ ಶಾಸಕರು ಇನ್ನು ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು ಎಂದು ಸವಾಲು ಹಾಕುತ್ತೇನೆ. ಬಡವರಿಗೆ ಉದ್ಯೋಗ ನೀಡುವ ಯೋಜನೆಯ ಹೆಸರಿನಿಂದ ನೀವು ಗಾಂಧೀಜಿ ಅವರ ಹೆಸರು ತೆಗೆಯುತ್ತಿದ್ದೀರಿ ಎಂದರೆ ನೀವು ದೇಶದ್ರೋಹಿಗಳು. ಬೇರೆ ದೇಶದ ನಾಯಕರು ನಮ್ಮ ದೇಶಕ್ಕೆ ಬಂದರೆ ಮೊದಲು ಅವರು ಗಾಂಧಿ ಸಮಾಧಿಗೆ ಹೋಗಿ ಪೂಜೆ ಮಾಡುತ್ತಾರೆ. ಗಾಂಧಿ ಭಾವಚಿತ್ರಕ್ಕೆ ನಮಿಸುತ್ತಾರೆ. ಆದರೆ ಗಾಂಧಿ ಅವರ ಹೆಸರು ತೆಗೆಯುವ ಮೂಲಕ ಮತ್ತೊಮ್ಮೆ ಗಾಂಧಿ ಅವರನ್ನು ಕೊಲ್ಲುತ್ತಿದ್ದೀರಿ.

ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ

“ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ. ದ್ವೇಷ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ. ಇಂದು ಸತ್ಯಮೇವ ಜಯತೆ ಎಂದು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಗೆ ಘನತೆ ಇಲ್ಲದೆ ಬದುಕುತ್ತಿದ್ದಾರೆ. ಪಿತೂರಿಯಿಂದ ಸೋಲಿಸಲು, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ದೇಶದ ಭವಿಷ್ಯ ರೂಪಿಸಲು ಸಂವಿಧಾನದ ರೂಪದಲ್ಲಿ ಕಾರ್ಯಕ್ರಮಗಳನ್ನು ಕೊಟ್ಟುಕೊಂಡು ಬಂದಿದೆ” ಎಂದು ತಿಳಿಸಿದರು.

“ಈ ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ, ಮನಮೋಹನ್ ಸಿಂಗ್ ಅವರು ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೋಟಮ್ಮ ಅವರ ನೇತೃತ್ವದಲ್ಲಿ ಸ್ತ್ರೀಶಕ್ತಿ ಸಂಘ ಪ್ರಾರಂಭಿಸಿದರು. ನಮ್ಮ ಈ ಯೋಜನೆಗಳನ್ನು ಬೇರೆ ಸರ್ಕಾರಗಳು ತೆಗೆದುಹಾಕಲು ಸಾಧ್ಯವಾಯಿತಾ ಇಲ್ಲ. ನಮ್ಮ ಐದು ಗ್ಯಾರಂಟಿಗಳನ್ನೂ ಕೂಡ ತೆಗೆದುಹಾಕಲು ಸಾಧ್ಯವಿಲ್ಲ. ಇದು ಕಾಂಗ್ರೆಸ್ ಸರ್ಕಾರಗಳ ಕಾರ್ಯಕ್ರಮ. ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದನ್ನು ಟೀಕಿಸಿದ್ದರು. ಅದಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡಿದೆವು” ಎಂದರು.

“ನ್ಯಾಷನಲ್ ಹೆರಾಲ್ಡ್ ಈ ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಹುಟ್ಟಿಕೊಂಡ ಪತ್ರಿಕೆ. 1937ರಲ್ಲಿ ನೆಹರು ಅವರು ಈ ಪತ್ರಿಕೆ ಆರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಇದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಆಸ್ತಿಯಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದು, ಕೆಲವು ಸಂಸ್ಥೆಗಳ ಅದ್ಯಕ್ಷನಾಗಿದ್ದು, ಆ ಸಂಸ್ಥೆಗಳ ಆಸ್ತಿಗಳೆಲ್ಲವೂ ನನ್ನ ವೈಯಕ್ತಿಕ ಆಸ್ತಿಯಾಗಲು ಸಾಧ್ಯವೇ? ನಾನು ಈ ಹುದ್ದೆಯಲ್ಲಿ ಇರುವವರೆಗೂ ಈ ಸಂಸ್ಥೆಗಳು ನನ್ನ ಜವಾಬ್ದಾರಿ,

ನನ್ನ ನಂತರ ಎಐಸಿಸಿ ಅವರು ಈ ಸ್ಥಾನಕ್ಕೆ ಯಾರನ್ನು ಕೂರಿಸುತ್ತಾರೋ, ಅವರಿಗೆ ಈ ಸಂಸ್ಥೆಯ ಆಸ್ತಿಗಳ ಜವಾಬ್ದಾರಿ ಹೋಗುತ್ತದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋಹ್ರಾ, ಆಸ್ಕರ್ ಫರ್ನಾಂಡೀಸ್ ಅವರ ಹೆಸರಿನಲ್ಲಿ ಸ್ವಲ್ಪ ಷೇರುಗಳನ್ನು ನೀಡಲಾಗಿತ್ತು. ಅದಕ್ಕೆ ಇವರ ಮೇಲೆ ಪಿಎಂಎಲ್ಎ ಪ್ರಕರಣ ದಾಖಲಿಸಿ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು.

“ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ, ಪೋಲೀಸ್ ಠಾಣೆ, ಕೋರ್ಟ್ ಜೈಲು ಸುತ್ತುವಂತೆ ಮಾಡಿದರು. ಆಗ ನೀವೆಲ್ಲರೂ ನನಗಾಗಿ ಪ್ರಾರ್ಥನೆ ಮಾಡಿದಿರಿ. ನಂತರ ನನ್ನ ಮೇಲಿನ ಪ್ರಕರಣ ವಜಾಗೊಂಡಿತು. ಅದೇ ರೀತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಇಡಿ ದಾಖಲಿಸಿದ್ದ ಆರೋಪ ಪಟ್ಟಿಯನ್ನು ಕೋರ್ಟ್ ವಜಾಗೊಳಿಸಿದೆ. ಆದರೆ ಅವರು ಇಲ್ಲಿಗೆ ನಿಲ್ಲಿಸುವುದಿಲ್ಲ. ಮೊನ್ನೆ ಹೊಸದಾಗಿ ಎಫ್ಐಆರ್ ದಾಖಲಿಸಿ ನೋಟೀಸ್ ನೀಡಿದ್ದಾರೆ. ಅವರ ವಿಚಾರಣೆಗೆ ಹಾಜರಾಗಲು ನಾನು ದೆಹಲಿಗೆ ತೆರಳುತ್ತಿದ್ದೇನೆ. ಅವರಿಗೆ ಎಫ್ಐಆರ್ ಪ್ರತಿ ನೀಡುವಂತೆ ಕೇಳಿದ್ದೇನೆ” ಎಂದರು.

“ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನಾನು ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ್ ದೇಣಿಗೆ ನೀಡಿದ್ದೇವೆ. ಶಾಮನೂರು ಶಿವಶಂಕರಪ್ಪ ಅವರು ಕೊಡಿಸಿದ್ದಾರೆ. ನಮ್ಮೆಲ್ಲರಿಗೂ ನೋಟೀಸ್ ನೀಡಿದ್ದಾರೆ. ನಾವು ಇದನ್ನು ಎದುರಿಸುತ್ತೇವೆ. ನಾವೆಲ್ಲರೂ ಕಾಂಗ್ರೆಸಿಗರು. ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಮ್ಮ ಶಾಸಕರು ಪ್ರತಿ ತಿಂಗಲು ತಮ್ಮ ವೇತನದಲ್ಲಿ 25 ಸಾವಿರ ನೀಡುತ್ತಿದ್ದಾರೆ.

ಹೀಗೆ ಪಕ್ಷಕ್ಕೆ ದೇಣಿಗೆ ಕೊಟ್ಟವರ ಮೇಲೆ ಪ್ರಕರಣ ದಾಖಲಿಸಲು ಸಾಧ್ಯವೇ? ಅದೇ ರೀತಿ ನ್ಯಾಷನಲ್ ಹೆರಾಲ್ಡ್ ಆಸ್ತಿ ಉಳಿಸಿಕೊಳ್ಳಲು ಸುಮಾರು 100 ಕೋಟಿಯಷ್ಟು ಹಣವನ್ನು ಕಾಂಗ್ರೆಸಿಗರು ನೀಡಿದರು. ಈ ಹಣ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಖಾತೆಗೆ ಹಣ ಹೋಗಿಲ್ಲ. ಆದರೂ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ್ದಾರೆ” ಎಂದು ಕಿಡಿಕಾರಿದರು.

Health Tips: ನಿಮ್ಮ ನಾಲಿಗೆಯೇ ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು; ನೀವು ಮಿಸ್ ಮಾಡ್ದೆ ಈ ಸ್ಟೋರಿ ನೋಡಿ!

0

ವೈದ್ಯರು ಸಾಮಾನ್ಯ ಚೆಕಪ್‌ನಲ್ಲೂ ನಿಮ್ಮ ನಾಲಿಗೆ ನೋಡುವುದೇಕೆ ಎಂದು ಯೋಚಿಸಿದ್ದೀರಾ? ಆ ಮಾಡಿ ಎನ್ನುತ್ತಾ ನಾಲಿಗೆ ಹಾಗೂ ಕಿರುನಾಲಿಗೆ ನೋಡಿ ಅರ್ಧ ನಿಮಿಷದಲ್ಲಿ ಆರೋಗ್ಯ ಅಳೆಯುತ್ತಾರೆ ವೈದ್ಯರು. ಏಕೆಂದರೆ ನಾಲಿಗೆ ನಮ್ಮ ಆರೋಗ್ಯದ ಬಗ್ಗೆ ಸಾಕಷ್ಟನ್ನು ಹೇಳುತ್ತದೆ.

ಸಾಮಾನ್ಯವಾಗಿ ಅನಾರೋಗ್ಯಕ್ಕೆ ಒಳಗಾದಾಗ ನಾವು ವೈದ್ಯರ ಬಳಿ ಹೋಗುತ್ತೇವೆ. ಆಗ ಅವರು ನಮ್ಮ ಕಣ್ಣು ಮತ್ತು ನಾಲಿಗೆಯನ್ನು ಮೊದಲು ಪರೀಕ್ಷೆ ಮಾಡುತ್ತಾರೆ. ಏಕೆಂದರೆ ನಮ್ಮ ಅರೋಗ್ಯ ಹೇಗಿದೆ ಎಂದು ಹೇಳುವುದಕ್ಕೆ ನಾಲಿಗೆ ಮತ್ತು ಕಣ್ಣು ಮುಖ್ಯ ಪಾತ್ರ ವಹಿಸುತ್ತವೆ. ಅದರಲ್ಲೂ ನಾಲಿಗೆ ಆರೋಗ್ಯದ ಗುಣಲಕ್ಷಣಗಳ ಬಗ್ಗೆ ತಿಳಿಸುವ ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ನಾಲಿಗೆಯಿಂದ ನಿರ್ಣಯಿಸುವುದು ವೈದ್ಯರಿಗೆ ತುಂಬಾ ಸುಲಭ. ಹಾಗಿದ್ದರೆ ವೈದ್ಯರು ಹೇಗೆ ಅದನ್ನು ತಿಳಿಯುತ್ತಾರೆ ಎಂಬ ಪ್ರಶ್ನೆ ನಿಮ್ಮಲ್ಲಿರಬಹುದು ಅದಕ್ಕೆ ಉತ್ತರ ಇಲ್ಲಿದೆ.

1. ಬಿಳಿ ಬಣ್ಣದ ಕಣಗಳು:-

ನಾಲಿಗೆಯ ಮೇಲಿನ ಬಿಳಿ ಲೇಪನ ಅಥವಾ ಬಿಳಿ ಕಣಗಳು ಓರಲ್ ಕ್ಯಾಂಡಿಡಿಯಾಸಿಸ್ ಕ್ಯಾಂಡಿಡಾ ಅಲ್ಬಿಕಾನ್ಸ್ ಎಂಬ ಶಿಲೀಂಧ್ರ. ಇದರ ಬೆಳೆವಣಿಗೆಯು ಬಾಯಿಗೆ ಸಂಬಂಧಿಸಿದ ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈ ಶಿಲೀಂಧ್ರವು ಯಾವಾಗಲೂ ಬಾಯಿಯಲ್ಲಿರುತ್ತದೆ ಮತ್ತು ಸಂಪೂರ್ಣವಾಗಿ ನಿರುಪದ್ರವವಾಗಿದೆ. ಅಲ್ಲದೆ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬ ಮುನ್ಸೂಚನೆಯನ್ನು ಕೂಡ ಇದು ನೀಡುತ್ತದೆ.

2. . ಕೆಂಪಾದ ನಾಲಿಗೆ:-

ಕೆಂಪು ನಾಲಿಗೆ ಎಂದರೆ ಅಪೌಷ್ಟಿಕತೆ ಎಂದರ್ಥ. ಇದಕ್ಕಾಗಿ ಹೆಚ್ಚು ಪೋಷಕಾಂಶವುಳ್ಳ ಆಹಾರ ಸೇವಿಸುವುದು ಸೂಕ್ತ. ವಿಟಮಿನ್ ಬಿ -12 ದೋಷ ಫೋಲಿಕ್ ಆಮ್ಲ ಅಥವಾ ವಿಟಮಿನ್ ಬಿ -12 ಕೊರತೆಯು ನಿಮ್ಮ ನಾಲಿಗೆಯನ್ನು ಕೆಂಪಾಗಿ ಕಾಣುವಂತೆ ಮಾಡುತ್ತದೆ. ಇದಕ್ಕಾಗಿ ಸರಿಯಾದ ಪೌಷ್ಠಿಕಾಂಶವನ್ನು ತೆಗೆದುಕೊಳ್ಳುವುದರ ಜತೆಗೆ ವಿಟಮಿನ್ ಅಧಿಕವಾಗಿರುವ ಆಹಾರವನ್ನು ತೆಗೆದುಕೊಳ್ಳಬೇಕು.

3. ನಾಲಿಗೆಯಲ್ಲಿನ ಚುಕ್ಕೆಗಳು
ನಾಲಿಗೆ ಸ್ನಾಯುವಿನ:-

ಎಪಿಥೀಲಿಯಂ ಮೇಲಿನ ಚುಕ್ಕೆಗಳು ಕೆಲವು ಬಾರಿ ಜೀವನದುದ್ದಕ್ಕೂ ಬೆಳೆಯುತ್ತದೆ. ಸಾಮಾನ್ಯವಾಗಿ ಕ್ಯಾನ್ಸರ್ ರೋಗಿಗಳಲ್ಲಿ ಕಪ್ಪು ನಾಲಿಗೆ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲೂ ಕೀಮೋಥೆರಪಿಯಲ್ಲಿರುವವರು, ಮಧುಮೇಹಿಗಳು ಕಪ್ಪು ನಾಲಿಗೆಯನ್ನು ಹೊಂದಿರುತ್ತಾರೆ. ಈ ರೀತಿಯ ಸಮಸ್ಯೆ ಇರುವವರು ವೈದ್ಯರನ್ನು ಕಾಣುವುದು ಉತ್ತಮ. ಅದರಲ್ಲೂ ನಾಲಿಗೆಯ ಮೇಲೆ ಹೆಚ್ಚು ಗುಳ್ಳೆ ಹೊಂದಿರುವವರು ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಬಾಯಿ ಮುಕ್ಕಳಿಸುವುದು ಸೂಕ್ತ.

4. ಹಳದಿ ಬಣ್ಣ:

ನಾಲಿಗೆ ಹಳದಿ ಬಣ್ಣಕ್ಕೆ ತಿರುಗಿದರೆ, ಅದು ಕಾಮಾಲೆ ಅಥವಾ ಮಧುಮೇಹದ ಆರಂಭಿಕ ಲಕ್ಷಣವಾಗಿರಬಹುದು. ಬಾಯಿ ಸ್ವಚ್ಛವಾಗಿಲ್ಲದಿರುವುದು ಕೂಡ ಇದಕ್ಕೆ ಕಾರಣವಾಗಬಹುದು.

5. ನೇರಳೆ ಬಣ್ಣ:

ನಾಲಿಗೆ ನೇರಳೆ ಬಣ್ಣದಲ್ಲಿ ಕಾಣಿಸಿಕೊಂಡರೆ, ಅದು ಹೃದಯ ಸಂಬಂಧಿತ ಸಮಸ್ಯೆ ಅಥವಾ ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುತ್ತಿಲ್ಲ ಎಂಬುದನ್ನು ಹೇಳುತ್ತದೆ.

6.ಗಾಢ ಅಥವಾ ಕಪ್ಪು ಬಣ್ಣ:

ತೀವ್ರವಾದ ಬ್ಯಾಕ್ಟೀರಿಯಾದ ಸೋಂಕಿನ ಸಂದರ್ಭಗಳಲ್ಲಿ ಅಥವಾ ಧೂಮಪಾನ ಅಥವಾ ಮಾದಕ ದ್ರವ್ಯ ಸೇವನೆಯ ಅಭ್ಯಾಸ ಹೊಂದಿರುವವರಲ್ಲಿ ನಾಲಿಗೆ ಗಾಢ ಬಣ್ಣಕ್ಕೆ ತಿರುಗುತ್ತದೆ.

error: Content is protected !!