Home Blog Page 3

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಹೆಸರು ನಾಮಕರಣ: ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ: ಶರಾವತಿ ಹಿನ್ನೀರಿನ ನದಿ ಪಾತ್ರದ ಜನರು ಸೇತುವೆ ಲೋಕಾಪರ್ಣೆಗೊಂಡ ಖುಷಿಯಲ್ಲಿದ್ದಾರೆ. ನಮ್ಮದು ದ್ವೀಪವಲ್ಲ, ನಮ್ಮೂರಿಗೆ ಸಂಪರ್ಕದ ಕೊಂಡಿ ಸಿಕ್ಕಿದೆ ಎನ್ನುವ ಸಂತಸ ಅಲ್ಲಿನ ಜನರಲ್ಲಿ ಮನೆ ಮಾಡಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು. ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ.

ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.

ಚಾಕು ಇಟ್ಟುಕೊಂಡೇ ಹಸು ಸಾಗಾಟ: ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ!

0

ಧಾರವಾಡ: ಚಾಕು ಇಟ್ಟುಕೊಂಡೇ ಚನ್ನಮ್ಮನ ಕಿತ್ತೂರಿನಿಂದ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಆಕಳು ಹಾಗೂ ಎಮ್ಮೆಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿದ್ದಾರೆ.

ಕಿತ್ತೂರಿನಿಂದ ಹುಬ್ಬಳ್ಳಿಗೆ ಗೂಡ್ಸ್ ವಾಹನದಲ್ಲಿ ಆಕಳು ಹಾಗೂ ಎಮ್ಮೆ ಸಾಗಿಸುತ್ತಿರುವ ಮಾಹಿತಿ ಪಡೆದ ಬಜರಂಗ ದಳ ಕಾರ್ಯಕರ್ತರು, ಆ ಗೂಡ್ಸ್ ವಾಹನ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿರುವ ನರೇಂದ್ರ ಟೋಲ್‌ಗೇಟ್ ದಾಟಿ ಬಂದ ತಕ್ಷಣವೇ ಅದನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.

ಆ ಕ್ಷಣ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಚಾಲಕ ಮಾತ್ರ ಸಿಕ್ಕಿಬಿದ್ದಿದ್ದಾನೆ. ವಾಹನದಲ್ಲಿ ಚಾಕು ಸಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹೈವೆ ಪೆಟ್ರೋಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಕಿರುತೆರೆ ನಟಿ ಶ್ರುತಿಗೆ ಚಾಕು ಇರಿತ ಪ್ರಕರಣ: ಹಲ್ಲೆಗೆ ಕಾರಣ ತಿಳಿಸಿದ ಪತಿ

ಅಮೃತಧಾರೆ ಸೇರಿದಂತೆ ಇನ್ನೂ ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶ್ರುತಿ ಮೇಲೆ ಆಕೆಯ ಪತಿಯೇ ಭೀಕರವಾಗಿ ಹಲ್ಲೆ ಮಾಡಿದ್ದ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು. ನಟಿ ಶ್ರುತಿ ನೀಡಿದ ದೂರಿನ ಮೇರೆಗೆ ಹನುಮಂತ ನಗರ ಪೊಲೀಸರು ಆಕೆಯ ಪತಿ ಅಮರೇಶ್‌ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಮರೇಷ್‌ ಪತ್ನಿ ಶ್ರುತಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

‘ನಾವು 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದು. ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಶ್ರೀನಗರದಲ್ಲಿ ಪ್ಲಾಟ್ ಒಂದನ್ನ 27 ಲಕ್ಷ ರೂಪಾಯಿ ಕೊಟ್ಟು ಲೀಸ್​ಗೆ ಹಾಕಿಕೊಂಡು ವಾಸ ಮಾಡ್ತಿದ್ವಿ. ಇಬ್ಬರು ಹೆಣ್ಣು ಮಕ್ಕಳಿಗೆ ತಾಯಿ ಪ್ರೀತಿಯನ್ನು ಶ್ರುತಿ ಕೊಟ್ಟಿಲ್ಲ. ಮನೆ ಜವಾಬ್ದಾರಿಯನ್ನೆಲ್ಲ ನಾನೇ ನೋಡಿಕೊಳ್ತಿದ್ದೆ. ಶೂಟಿಂಗ್ ನೆಪದಲ್ಲಿ ಸರಿಯಾಗಿ ಮನೆಗೆ ಬಾರದೇ ಪಾರ್ಟಿ ಪಬ್ ಅಂತ ಸುತ್ತಾಡ್ತಿದ್ಲು’ ಎಂದು ಅಮರೇಶ್ ಆರೋಪಿಸಿದ್ದಾರೆ.

ಮನೆಯಲ್ಲಿ ‘ಯಾರಿಗೂ ಹೇಳದೇ 15 ದಿನ ಪ್ರಯಾಗ್ ರಾಜ್​ಗೆ ಟ್ರಿಪ್ ಹೋಗಿದ್ದಳು. ಇದೇ ವಿಚಾರಕ್ಕೆ ಈ ಹಿಂದೆಯೂ ಗಲಾಟೆ ಆಗಿತ್ತು. ಗಂಡ-ಮಕ್ಕಳಿದ್ದರೂ ಕೂಡ ಅಣ್ಣನ ಜೊತೆ ಇರ್ತೀನಿ ಅಂತ ಮನೆ ಬಿಟ್ಟು ಹೋಗಿದ್ದಳು. ಎಷ್ಟೋ ರಾತ್ರಿಗಳು ಶ್ರುತಿ ಮನೆಗೆ ಬರುತ್ತಿರಲಿಲ್ಲ. ಫೋನ್ ಮಾಡಿದ್ರೆ ಎನ್ ಮಾಡ್ಕೋತಿಯೋ ಮಾಡ್ಕೋ ಎನ್ನುತ್ತಿದ್ದಳು. ಭೋಗ್ಯಕ್ಕಿದ್ದ ಮನೆಯನ್ನ ಖಾಲಿ ಮಾಡಿ ಹಣ ತೆಗೆದುಕೊಂಡು ಮನೆ ಬಿಡೋಣ ಅನ್ನೋದು ಅವಳ ಪ್ಲಾನ್ ಆಗಿತ್ತು’ ಎಂದು ಅಮರೇಶ್ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.

‘ಕಳೆದ ವಾರ ರಾಜಿ ಸಂಧಾನ ಆದಮೇಲೂ ಮತ್ತೆ ಮನೆಗೆ ಸರಿಯಾಗಿ ಬರುತ್ತಿರಲಿಲ್ಲ. ಹೀಗಾಗಿಯೇ ಆಕೆಯನ್ನ ಕೊಲೆ ಮಾಡಿ ಇದಕ್ಕೆಲ್ಲ ಇತಿಶ್ರೀ ಹಾಡೋಣ ಅಂತಿದ್ದೆ. ಆದ್ರೆ ಕೊಲೆ ಮಾಡುವಾಗ ಕಾಲಿಗೆ ಬಿದ್ದು ಕ್ಷಮೆ ಕೇಳಿದಳು. ನೀನು ಹೇಳಿದ ರೀತಿ ನಾನು ಕೇಳುತ್ತೇನೆ ಎಂದು ಕಾಲಿಗೆ ಬಿದ್ದಳು. ಹೆಂಡತಿ ಇನ್ಮೇಲಾದ್ರೂ ಬದಲಾಗ್ತಾಳೆ ಅಂತ ಕೊಲೆ ಮಾಡೋದನ್ನ ಬಿಟ್ಟು ಸುಮ್ಮನಾದೆ’ ಎಂದು ಪೊಲೀಸರ ಮುಂದೆ ಅಮರೇಶ್ ಹೇಳಿಕೆ ನೀಡಿದ್ದಾರೆ.

ಸದ್ಯ ಅಮರೇಷ್‌ ಪೊಲೀಸರ ವಶದಲ್ಲಿದ್ದು ವಿಚಾರಣೆ ಮುಂದುವರೆದಿದೆ. ಇತ್ತ ಪತಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಶ್ರುತಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಿರುತೆರೆ ನಟಿ ಶ್ರುತಿಗೆ ಚಾಕು ಇರಿತ ಪ್ರಕರಣ: ಹಲ್ಲೆಗೆ ಕಾರಣ ತಿಳಿಸಿದ ಪತಿ

ಅಮೃತಧಾರೆ ಸೇರಿದಂತೆ ಇನ್ನೂ ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶ್ರುತಿ ಮೇಲೆ ಆಕೆಯ ಪತಿಯೇ ಭೀಕರವಾಗಿ ಹಲ್ಲೆ ಮಾಡಿದ್ದ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು. ನಟಿ ಶ್ರುತಿ ನೀಡಿದ ದೂರಿನ ಮೇರೆಗೆ ಹನುಮಂತ ನಗರ ಪೊಲೀಸರು ಆಕೆಯ ಪತಿ ಅಮರೇಶ್‌ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಮರೇಷ್‌ ಪತ್ನಿ ಶ್ರುತಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

‘ನಾವು 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದು. ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಶ್ರೀನಗರದಲ್ಲಿ ಪ್ಲಾಟ್ ಒಂದನ್ನ 27 ಲಕ್ಷ ರೂಪಾಯಿ ಕೊಟ್ಟು ಲೀಸ್​ಗೆ ಹಾಕಿಕೊಂಡು ವಾಸ ಮಾಡ್ತಿದ್ವಿ. ಇಬ್ಬರು ಹೆಣ್ಣು ಮಕ್ಕಳಿಗೆ ತಾಯಿ ಪ್ರೀತಿಯನ್ನು ಶ್ರುತಿ ಕೊಟ್ಟಿಲ್ಲ. ಮನೆ ಜವಾಬ್ದಾರಿಯನ್ನೆಲ್ಲ ನಾನೇ ನೋಡಿಕೊಳ್ತಿದ್ದೆ. ಶೂಟಿಂಗ್ ನೆಪದಲ್ಲಿ ಸರಿಯಾಗಿ ಮನೆಗೆ ಬಾರದೇ ಪಾರ್ಟಿ ಪಬ್ ಅಂತ ಸುತ್ತಾಡ್ತಿದ್ಲು’ ಎಂದು ಅಮರೇಶ್ ಆರೋಪಿಸಿದ್ದಾರೆ.

ಮನೆಯಲ್ಲಿ ‘ಯಾರಿಗೂ ಹೇಳದೇ 15 ದಿನ ಪ್ರಯಾಗ್ ರಾಜ್​ಗೆ ಟ್ರಿಪ್ ಹೋಗಿದ್ದಳು. ಇದೇ ವಿಚಾರಕ್ಕೆ ಈ ಹಿಂದೆಯೂ ಗಲಾಟೆ ಆಗಿತ್ತು. ಗಂಡ-ಮಕ್ಕಳಿದ್ದರೂ ಕೂಡ ಅಣ್ಣನ ಜೊತೆ ಇರ್ತೀನಿ ಅಂತ ಮನೆ ಬಿಟ್ಟು ಹೋಗಿದ್ದಳು. ಎಷ್ಟೋ ರಾತ್ರಿಗಳು ಶ್ರುತಿ ಮನೆಗೆ ಬರುತ್ತಿರಲಿಲ್ಲ. ಫೋನ್ ಮಾಡಿದ್ರೆ ಎನ್ ಮಾಡ್ಕೋತಿಯೋ ಮಾಡ್ಕೋ ಎನ್ನುತ್ತಿದ್ದಳು. ಭೋಗ್ಯಕ್ಕಿದ್ದ ಮನೆಯನ್ನ ಖಾಲಿ ಮಾಡಿ ಹಣ ತೆಗೆದುಕೊಂಡು ಮನೆ ಬಿಡೋಣ ಅನ್ನೋದು ಅವಳ ಪ್ಲಾನ್ ಆಗಿತ್ತು’ ಎಂದು ಅಮರೇಶ್ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.

‘ಕಳೆದ ವಾರ ರಾಜಿ ಸಂಧಾನ ಆದಮೇಲೂ ಮತ್ತೆ ಮನೆಗೆ ಸರಿಯಾಗಿ ಬರುತ್ತಿರಲಿಲ್ಲ. ಹೀಗಾಗಿಯೇ ಆಕೆಯನ್ನ ಕೊಲೆ ಮಾಡಿ ಇದಕ್ಕೆಲ್ಲ ಇತಿಶ್ರೀ ಹಾಡೋಣ ಅಂತಿದ್ದೆ. ಆದ್ರೆ ಕೊಲೆ ಮಾಡುವಾಗ ಕಾಲಿಗೆ ಬಿದ್ದು ಕ್ಷಮೆ ಕೇಳಿದಳು. ನೀನು ಹೇಳಿದ ರೀತಿ ನಾನು ಕೇಳುತ್ತೇನೆ ಎಂದು ಕಾಲಿಗೆ ಬಿದ್ದಳು. ಹೆಂಡತಿ ಇನ್ಮೇಲಾದ್ರೂ ಬದಲಾಗ್ತಾಳೆ ಅಂತ ಕೊಲೆ ಮಾಡೋದನ್ನ ಬಿಟ್ಟು ಸುಮ್ಮನಾದೆ’ ಎಂದು ಪೊಲೀಸರ ಮುಂದೆ ಅಮರೇಶ್ ಹೇಳಿಕೆ ನೀಡಿದ್ದಾರೆ.

ಸದ್ಯ ಅಮರೇಷ್‌ ಪೊಲೀಸರ ವಶದಲ್ಲಿದ್ದು ವಿಚಾರಣೆ ಮುಂದುವರೆದಿದೆ. ಇತ್ತ ಪತಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಶ್ರುತಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿರಿಯ ನಟಿ ಬಿ. ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ನಟ ದರ್ಶನ್

ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟಿ ಬಿ. ಸರೋಜಾದೇವಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ನಟಿಯ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದು ಇದೀಗ ನಟ ದರ್ಶನ್‌ ಕೂಡ ಸೋಶಿಯಲ್ ಮೀಡಿಯಾ ಮೂಲಕ ನಟಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

‘ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ. ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ದರ್ಶನ್ ಪೋಸ್ಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಬಿ. ಸರೋಜಾದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದು,  ‘ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಪೋಸ್ಟ್ ಮಾಡಿದ್ದಾರೆ.

ಸರೋಜ ದೇವಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ತಮ್ಮ 17ನೇ ವಯಸ್ಸಿಗೆ. 1955ರಲ್ಲಿ ತೆರೆಗೆ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಬಣ್ಣದ ಬದುಕಿಗೆ ಎಂಟ್ರಿಕೊಟ್ಟರು. ಮೊದಲ ಸಿನಿಮಾವೇ ಸೂಪರ್‌ ಹಿಟ್‌ ಆಗಿ ಕೇವಲ 17ನೇ ವಯಸ್ಸಿಗೆ ಮೊದಲ ಮಹಿಳಾ ಸೂಪರ್​ಸ್ಟಾರ್ ಎನಿಸಿಕೊಂಡರು.

‘ಪಾಂಡುರಂಗ ಮಹಾತ್ಯಂ’ ಚಿತ್ರದ ಮೂಲಕ ತೆಲುಗಿಗೆ ಕಾಲಿಟ್ಟರು. ‘ನಾಡೋಡಿ ಮನ್ನನ್ ’ ಚಿತ್ರದ ಮೂಲಕ ತಮಿಳಿನಲ್ಲಿ ಬೇಡಿಕೆಯ ನಟಿಯಾದರು. ಅವರು 60,70 ಹಾಗೂ 80ರ ದಶಕದಲ್ಲಿ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಗ್ರ ಸ್ಥಾನ ಪಡೆದರು. ಸರೋಜಾ ದೇವಿ ಅವರಿಗೆ 1969ರಲ್ಲಿ ಪದ್ಮ ಶ್ರೀ, 1992ರಲ್ಲಿ ಪದ್ಮ ಭೂಷಣ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕಡೆಯಿಂದ ಅವರಿಗೆ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನ ಕಲೈಮಾಮಣಿ ಪ್ರಶಸ್ತಿಗೆ ಸರೋಜ ದೇವಿ ಭಾಜನರಾಗಿದ್ದರು.

ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆ!

ಶಿವಮೊಗ್ಗ: ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು, ಕಳಸವಳ್ಳಿ, ಸಿಗಂದೂರು ಸಂಪರ್ಕಿಸುವ ಸಿಗಂದೂರು ಸೇತುವೆ ಇಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಿದರು.

ಇದಕ್ಕೂ ಮುನ್ನ ಸಚಿವ ಗಡ್ಕರಿ ಹೋಮದಲ್ಲಿ ಭಾಗಿಯಾಗಿ, ಶರಾವತಿ ನದಿಗೆ ಬಾಗಿನ ಅರ್ಪಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ್ ಸರ್ಜಿ ಸೇರಿದಂತೆ ಸ್ಥಳೀಯ ಜನರು ಭಾಗವಹಿಸಿದ್ದರು. ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು.

2010ರಲ್ಲಿ ಪ್ರಾರಂಭವಾದ ನಿರ್ಮಾಣ ಕಾರ್ಯ 2025ರಲ್ಲಿ ಮುಕ್ತಾಯವಾಗಿದೆ. ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕೆ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ವರೆಗೆ ಗ್ರಾಮೀಣ ಭಾಗದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಮೊದಲ ಹಂತದಲ್ಲಿ ಸೇತುವೆ ನಿರ್ಮಿಸಲಾಗಿದೆ.

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು: ಯುವಕನ ಮೇಲೆ ಮಾರಾಕಸ್ತ್ರಗಳಿಂದ ದಾಳಿ‌!

0

ವಿಜಯಪುರ:ವಿಜಯಪುರ ನಗರದಲ್ಲಿ ಮತ್ತೇ ನೆತ್ತರು ಹರಿದಿದ್ದು, ಯುವಕನ ಮೇಲೆ ನಾಲ್ವರು ಯುವಕರು, ಮಾರಾಕಸ್ತ್ರಗಳಿಂದ ದಾಳಿ‌ ಮಾಡಿದ್ದಾರೆ. ದುಷ್ಕರ್ಮಿಗಳಿಂದ ಸುಶೀಲ್ ಕಾಳೆ ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡಿರೋ ಸುಶೀಲ ಕಾಳೆ ಎಂಬಾತನಿಗೆ ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಜಯಪುರ ನಗರದ ಅಮರ ವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ಈ ಘಟನೆ ಜರುಗಿದೆ. ನಗರದ ಎಸ್ ಎಸ್ ರಸ್ತೆಯ ಎಸ್ ಎಸ್ ಕಾಂಪ್ಲೆಕ್ಸ್ ನಲ್ಲಿರೋ ಸಹಕಾರಿ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿರುವ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಗಾಯಾಳು ಸುಶೀಲ್ ಕಾಳೆ ಪರಿಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ದಾಳಿ ಮಾಡಿ ಪರಾರಿಯಾದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಯಾರು ದಾಳಿ ಮಾಡಿದ್ದು? ಯಾಕೆ‌ ದಾಳಿ‌ ಮಾಡಿದ್ದು? ಎಂಬ ತನಿಖೆಗೆ ಪೊಲೀಸರು ಇಳಿದಿದ್ದಾರೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಸರೋಜಾದೇವಿ ಇನ್ನಿಲ್ಲ ಎನ್ನುವುದು ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ: ಸಂಸದ ಬೊಮ್ಮಾಯಿ

ಬೆಂಗಳೂರು: ಅಭಿನಯ ಶಾರದೆ, ವಿಭಿನ್ನ ಪಾತ್ರವನ್ನ ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ ಎನ್ನುವುದು ನಮ್ಮ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ರಾಜಕುಮಾರ್ ಜೊತ, NTR, ದಿಲೀಪ್ ಕುಮಾರ್ ಜೊತೆ ನಟಿಸಿ ಅತ್ಯಂತ ಪ್ರಖ್ಯಾತ ನಟಿ ಆಗಿದ್ರು. ಕನ್ನಡದಲ್ಲಿ ಹೇಳಬೇಕಾದ್ರೆ ಕಿತ್ತೂರು ರಾಣಿ ಚೆನ್ನಮ್ಮರಾಗಿದ್ದರು. ಚೆನ್ನಮ್ಮ ಅಂದ್ರೆ ಹೀಗಿದ್ರು ಅಂತ ಕಲ್ಪನೆ ಮೂಡಿಸಿದ್ರು‌.

ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್‌ಟಿಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು ಎಂದರು.

ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು. ಅಭಿನಯದ ಜೊತೆ ಗಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಬದುಕಿನ ಕೊನೆಯವರೆಗೂ ಅಮ್ಮನಿಗೆ ಕೊಟ್ಟ ಮಾತು ಉಳಿಸಿಕೊಂಡ ಬಿ ಸರೋಜಾ ದೇವಿ

ಹಿರಿಯ ನಟಿ ಬಿ. ಸರೋಜಾ ದೇವಿ ತಮ್ಮ 87ನೇ ವಯಸ್ಸಿಗೆ ನಿಧನರಾಗಿದ್ದಾರೆ. 60  ವರ್ಷಗಳ ಕಾಲ ಚಿತ್ರರಂಗದಲ್ಲಿ ನಟಿಸಿದ್ದ ಸರೋಜಾ ದೇವಿ ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮೇರು ನಟಿ ಎನಿಸಿಕೊಂಡಿದ್ರು ಸರೋಜಾ ದೇವಿ ತಮ್ಮ ತಾಯಿಗೆ ಕೊಟ್ಟಿದ್ದ ಮಾತನ್ನು ಕೊನೆಯ ಉಸಿರು ಇರುವವರೆಗೂ ಉಳಿಸಿಕೊಂಡಿದ್ದರು.

ಸರೋಜ ದೇವಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ತಮ್ಮ 17ನೇ ವಯಸ್ಸಿಗೆ. 1955ರಲ್ಲಿ ತೆರೆಗೆ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಬಣ್ಣದ ಬದುಕಿಗೆ ಎಂಟ್ರಿಕೊಟ್ಟರು. ಮೊದಲ ಸಿನಿಮಾವೇ ಸೂಪರ್‌ ಹಿಟ್‌ ಆಗಿ ಕೇವಲ 17ನೇ ವಯಸ್ಸಿಗೆ ಮೊದಲ ಮಹಿಳಾ ಸೂಪರ್​ಸ್ಟಾರ್ ಎನಿಸಿಕೊಂಡರು.

‘ಪಾಂಡುರಂಗ ಮಹಾತ್ಯಂ’ ಚಿತ್ರದ ಮೂಲಕ ತೆಲುಗಿಗೆ ಕಾಲಿಟ್ಟರು. ‘ನಾಡೋಡಿ ಮನ್ನನ್ ’ ಚಿತ್ರದ ಮೂಲಕ ತಮಿಳಿನಲ್ಲಿ ಬೇಡಿಕೆಯ ನಟಿಯಾದರು. ಅವರು 60,70 ಹಾಗೂ 80ರ ದಶಕದಲ್ಲಿ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಗ್ರ ಸ್ಥಾನ ಪಡೆದರು. ಸರೋಜಾ ದೇವಿ ಅವರಿಗೆ 1969ರಲ್ಲಿ ಪದ್ಮ ಶ್ರೀ, 1992ರಲ್ಲಿ ಪದ್ಮ ಭೂಷಣ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕಡೆಯಿಂದ ಅವರಿಗೆ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನ ಕಲೈಮಾಮಣಿ ಪ್ರಶಸ್ತಿಗೆ ಸರೋಜ ದೇವಿ ಭಾಜನರಾಗಿದ್ದಾರೆ.

ಸರೋಜಾ ದೇವಿ ಅವರ ಮೂಲ ಹೆಸರು ರಾಧಾದೇವಿ. ಬೈರಪ್ಪ ಗೌಡ- ರುದ್ರಮ್ಮ ದಂಪತಿಗೆ 1938 ಜನವರಿ 7ರಂದು ಬೆಂಗಳೂರಿನಲ್ಲಿ ಸರೋಜ ದೇವಿ ಹುಟ್ಟಿದರು. ಸರೋಜ ದೇವಿ ಅವರ ಪೊಲೀಸ್​ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಸರೋಜ ದೇವಿ ಚಿತ್ರರಂಗಕ್ಕೆ ಎಂಟ್ರಿಕೊಡುವ ಮುನ್ನ ಅವರ ತಾಯಿ ಕೆಲವೊಂದು ಕಂಡಿಷನ್‌ ಗಳನ್ನು ಹಾಕಿದ್ದರಂತೆ. ಈಜುಡುಗೆ ಹಾಗೂ ತೋಳಿಲ್ಲದ ಬ್ಲೌಸ್​​ನ ಯಾವಾಗಲೂ ಹಾಕಬಾರದು ಎಂದು ತಾಯಿ ಸ್ಟ್ರಿಕ್ಟ್ ಆಗಿ ಹೇಳಿದ್ದರು. ಇದನ್ನು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪರಿಪಾಲಿಸಿಕೊಂಡು ಬಂದಿದ್ದರು. ಅದೇ ಕಾರಣಕ್ಕೆ ಸರೋಜಾ ದೇವಿ ಯಾವುದೇ ಸಿನಿಮಾದಲ್ಲಿ ಬೋಲ್ಡ್​ ಆಗಿ ಕಾಣಿಸಿಕೊಂಡಿರಲಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು!

0

ಹಾಸನ:– ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜರುಗಿದೆ.

ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!