ವಿಜಯಸಾಕ್ಷಿ ಸುದ್ದಿ, ಹೊನ್ನಾವರ : ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವಿಶ್ವ ವೀರಾಂಜನೇಯ ಮಹಾ ಸಂಸ್ಥಾನ, ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ.29 ಮತ್ತು 30ರಂದು ಶ್ರೀ ವೀರಾಂಜನೇಯ ದೇವರ, ಶ್ರೀ ಗೋಪಾಲಕೃಷ್ಣ ದೇವರ, ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಶ್ರೀ ಚೌಡೇಶ್ವರಿ ದೇವಿಯ ವರ್ಧಂತಿ ಉತ್ಸವ ಆಯೋಜನೆಗೊಂಡಿದೆ.
ಇದರಂಗವಾಗಿ ಮಾ.29ರಂದು ಗಣಪತಿ ಪೂಜೆ, ಪುಣ್ಯಾಹ, ಶ್ರೀ ದೇವರ ಕಲಾವೃದ್ಧಿ ಹವನ, 28 ನಾಳಿಕೇರ ಗಣಹವನ ಆಯೋಜಿಸಲಾಗಿದೆ. ಸಂಜೆ ರಾಕ್ಷೋಘ್ನ ಪಾರಾಯಣ, ತಾರಕ ಮಂತ್ರ ಜಪ, ಆಂಜನೇಯ ಮೂಲಮಂತ್ರ ಜಪ, ಕಲಶ ಸ್ಥಾಪನೆ, ಮಾ.30ರಂದು ಶತರುದ್ರ ಪಾರಾಯಣ, ರುದ್ರಾಭಿಷೇಕ-ರುದ್ರಹವನ, ಆಂಜನೇಯ ಮೂಲಮಂತ್ರ ಹವನ, ರಾಜೋಪಚಾರ ಸೇವೆ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಸಂತರ್ಪಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 9:30ರಿಂದ ಯಕ್ಷಗಾನ ಸೇವೆ ನಡೆಯಲಿದೆ. ಮಾ.30ರಂದು ಸಂಜೆ ಪಲ್ಲಕ್ಕಿ ಉತ್ಸವ, ರಾಜೋಪಚಾರ ಸೇವೆ, ರಂಗಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ, ಸಂತರ್ಪಣೆ ನಡೆಯಲಿದ್ದು, ಸೇವೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸೇವಾರ್ಥಿಗಳು ದೇವಾಲಯದ ಸೇವಾ ಕಚೇರಿ, ಮೊ-6361011288, 7019342699ರಲ್ಲಿ ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.