Home Blog Page 3

ಇನ್ನರ್‌ವೀಲ್ ಕ್ಲಬ್‌ನಿಂದ ಗುರುಪೂರ್ಣಿಮೆ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿಯೊಬ್ಬ ಜೀವಿಯ ಅವಿಭಾಜ್ಯ ಅಂಗವಾದ ಗುರುವಿಗೆ ಕೃತಜ್ಞತೆಯನ್ನು ತೋರಿಸಲೆಂದು ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪಂಚಾಕ್ಷರಿ ಗವಾಯಿಗಳವರ ವಸತಿಯುತ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಬಿ. ಹಿರೇಮಠರನ್ನು ಸನ್ಮಾನಿಸಲಾಯಿತು. ಇನ್ನರ್ ವೀಲ್ ಕ್ಲಬ್‌ನ ಅಧ್ಯಕ್ಷರಾದ ಅಶ್ವಿನಿ ಜಗತಾಪ ವಿದ್ಯಾರ್ಥಿ ಜೀವನದಲ್ಲಿ ಗುರುವಿನ ಮಹತ್ವವನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಯಶ್ರೀ ಉಗಲಾಟ, ಪುಷ್ಪಾ ಭಂಡಾರಿ, ಪೂಜಾ ಭೂಮಾ, ಮೀನಾಕ್ಷಿ ಕೊರವಣ್ಣವರ, ಶಿಲ್ಪಾ ಅಕ್ಕಿ, ತನುಜಾ ಗೋವಿಂದಪ್ಪನವರ, ಸುಮಾ ಪಾಟೀಲ, ಸಾಗರಿಕಾ ಅಕ್ಕಿ ಹಾಗೂ ಪವಿತ್ರಾ ಬಿರಾದರ ಉಪಸ್ಥಿತರಿದ್ದರು.

ಟೆಕ್ಸಾಸ್ ಕಂಪನಿಯ ಕಾರ್ಯ ಶ್ಲಾಘನೀಯ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬೆಂಗಳೂರಿನ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯಿಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪುರಸಭೆ ಸದಸ್ಯ ರಾಜೇಶ ಕುಂಬಿ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಕನ್ನಡ ಶಾಲೆಗಳನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಇಂಗ್ಲಿಷ್ ಭಾಷೆಗೆ ಮರುಳಾಗಿರುವ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕಬಾರದು. ಕನ್ನಡ ಶಾಲೆಗಳಲ್ಲಿಯೇ ಕಲಿತವರು ಮುಂದೆ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುವುದನ್ನು ಕಾಣುತ್ತಿದ್ದೇವೆ. ಪಾಲಕರು ಕನ್ನಡ ಶಾಲೆ ಎಂದು ಮೂಗು ಮುರಿಯದೇ ಅಲ್ಲಿಗೆ ಮಕ್ಕಳನ್ನು ಕಳುಹಿಸಬೇಕು ಎಂದರು.

ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಣಗಿ ಮಾತನಾಡಿ, ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಟೆಕ್ಸಾಸ್ ಕಂಪನಿಯವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ಕೊಡುತ್ತಿರುವುದ ಖುಷಿ ತಂದಿದೆ. ಎಲ್ಲ ಕಂಪನಿಗಳು ಮತ್ತು ಸಂಘ-ಸAಸ್ಥೆಗಳು ಕನ್ನಡ ಶಾಲೆಗಳನ್ನು ಉಳಿಸಲು ಪ್ರಯತ್ನಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ ಮಾತನಾಡಿ, ಟೆಕ್ಸಾಸ್ ಕಂಪನಿಯವರು ಪ್ರತಿ ವರ್ಷ ನೂರಾರು ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಕೆಲಸ ಎಂದರು ಹೇಳಿದರು.

ಸಿಆರ್‌ಪಿಗಳಾದ ಉಮೇಶ ನೇಕಾರ, ಸತೀಶ ಬೋಮಲೆ, ಶಿಕ್ಷಕಿ ಎಚ್.ಡಿ. ನಿಂಗರೆಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಟೆಕ್ಸಾಸ್ ಕಂಪನಿ ಸಿಬ್ಬಂದಿ, ಭಾವನಾ, ಮಹೇಶ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ ಬಸಾಪುರ, ಉಪಾಧ್ಯಕ್ಷೆ ನಿಖಿತಾ ಶೇರಖಾನೆ, ಶಿಕ್ಷಕ ಸಿಬ್ಬಂದಿ ಇದ್ದರು.

ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನದಿಂದ ಪ್ರತಿಭಾ ಪುರಸ್ಕಾರ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಬಿ.ಜಿ. ಅಣ್ಣಿಗೇರಿ ಗುರುಗಳ ನಿಸ್ವಾರ್ಥ ಸೇವೆ, ಪ್ರಾಮಾಣಿಕತೆಗಳನ್ನು ಇಂದಿನ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಗದಗ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಪಾಟೀಲ ಹೇಳಿದರು.

ಪ್ರತಿಷ್ಠಾನದ ವತಿಯಿಂದ ಇಲ್ಲಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಬಹಳ ಮುಖ್ಯವಾಗಿದ್ದು, ಅಣ್ಣಿಗೇರಿ ಗುರುಗಳ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಈ ದಿಸೆಯಲ್ಲಿ ಅವರ ಹೆಸರಿನಲ್ಲಿ ಪ್ರತಿಭಾ ಪ್ರತಿಷ್ಠಾನವನ್ನು ಸ್ಥಾಪಿಸಿ ಗದಗ ಗ್ರಾಮೀಣ ಹಾಗೂ ಶಹರದಲ್ಲಿರುವ ಸರಕಾರಿ ಶಾಲೆ ಹಾಗೂ ವಸತಿ ಶಾಲೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುತ್ತಿದೆ ಎಂದರು.

ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಡಾ. ಜಿ.ಬಿ. ಬಿಡನಾಳ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಮಯಕ್ಕೆ ಹೆಚ್ಚು ಮಹತ್ವನ್ನು ನೀಡಬೇಕು. ದೈರ್ಯದಿಂದ ಪ್ರತಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಗುರುಗಳ ಮಾರ್ಗದರ್ಶನ ಪಡೆಯಬೇಕು ಎಂದರು.

ಪ್ರಥಮ ಸ್ಥಾನ ಪಡೆದ ಗಾಯತ್ರಿ ವಿಜಯಹಾಳ, ರೋಹಿಣಿ ಮಾಡಲಗೇರಿ, ಶಿವಲೀಲಾ ಅಬ್ಬಿಗೇರಿ, ದೃಷ್ಟಿ ರಾಜಕುಮಾರಿ ಮುಸ್ಕಿನಭಾವಿ, ವಿಜಯಲಕ್ಷ್ಮೀ ರಮೇಶ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯೋಪಾಧ್ಯಾಯ ವೈ.ಎಚ್. ತೆಕ್ಕಲಕೋಟಿ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಾಂತೇಶ ಕುಂಬಾರ, ಸುಭಾಸಚಂದ್ರ ಬೆಟದೂರು, ಶಿವಣ್ಣ ಕತ್ತಿ, ಭಾರತಿ ಪಾಟೀಲ, ನೇಹಾ ಸುಧಾರಾಣಿ ಉಪಸ್ಥಿತರಿದ್ದರು. ಎ.ಎಸ್. ಕಳಸದ ಸ್ವಾಗತಿಸಿದರು. ವೈ.ವೈ. ಬೆಟಗೇರಿ ನಿರೂಪಿಸಿದರು. ಶಾರದಾ ಮುಂಡೇವಾಡೆ ವಂದಿಸಿದರು.

ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಗುರು ಪೌರ್ಣಿಮೆ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಹಳೇ ಸರಾಫ ಬಜಾರ ಕರೂಗಲ್ ಓಣೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರೀ ಸಾಯಿ ಸೇವಾ ಸಮಿತಿ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮುಂಜಾನೆ ಕಾಕಡರತಿ, ಶೇಜಾರತಿ, ಪಂಚಾರತಿ, ಮಂಗಲಸ್ನಾನ, ಮಧ್ಯಾಹ್ನ ಪ್ರಸಾದ ಸೇವೆ ಜರುಗಿತು. ಈ ಸಂದರ್ಭದಲ್ಲಿ 24ನೇ ವಾರ್ಡ್‌ ನ ನಗರಸಭಾ ಸದಸ್ಯ ನಾಗರಾಜ ತಳವಾರ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿಯ ಜೊತೆಯಲ್ಲಿ ಉತ್ತಮ ಗುರುವಿನ ಪಾತ್ರ ಬಹಳ ಮುಖ್ಯ. ಅಜ್ಞಾನದಿಂದ ಸುಜ್ಞಾನದ ಕಡೆಗೆ, ಅಂಧಕಾರದಿಂದ ಬೆಳಕಿನ ಕಡೆಗೆ ನಡೆಸುವವರೇ ಗುರು. ಗುರುವಿನ ಕರುಣೆ, ಪ್ರೀತಿ ವಾತ್ಸಲ್ಯಗಳು ಸದಾ ಎಲ್ಲರ ಮೇಲಿರಲಿ ಎಂದರು.

ಸಾಯಿಸೇವಾ ಸಮಿತಿ ಅಧ್ಯಕ್ಷ ಸಂತೋಷ ಮಹೇಶಚಂದ್ರ ಕಬಾಡರ ಮಾತನಾಡಿ, ವ್ಯಕ್ತಿಯೋರ್ವನ ಜೀವನವನ್ನು ಸಾರ್ಥಕವಾಗಿಸುವವರೇ ಶ್ರೀ ಶಿರಡಿ ಸಾಯಿಬಾಬಾ ಗುರುಗಳು ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಸಹ ಕಾರ್ಯದರ್ಶಿ ಸುನೀಲ ಮುಳ್ಳಾಳ, ಕಾರ್ಯದರ್ಶಿ ಮಂಜುನಾಥ ಮಜ್ಜಿಗುಡ್ಡ, ಖಜಾಂಚಿ ಮಹೇಶ ಕೋರಿ, ಸದ್ಯರಾದ ಬಾಬು ಸುಲಾಖೆ, ಮಂಜುನಾಥ ಮುರಿಗೆಪ್ಪ ಕರುಗಲ್, ಕೇದಾರ ಅಬ್ಬಿಗೇರಿ, ಸುಮಂತ ನೀಡೋಣೆ, ಸುರೇಶ ಹನುಮಸಾಗರ, ಹಿರಿಯರಾದ ದೇಸಾಯಿಗೌಡ್ರ, ಈರಣ್ಣ ಬಾಳಿಕಾಯಿ ಸೇರಿದಂತೆ ಸಾಯಿ ಬಾಬಾ ಸದ್ಭಕ್ತರು ಪಾಲ್ಗೊಂಡಿದ್ದರು.

ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಲಲಿತಾ ಕಲಾ ಸಂಸ್ಥೆಯ ವಿಜಯ ಪ್ರಾಥಮಿಕ ಶಾಲೆ, ವಿಜಯ ವಾಣಿಜ್ಯ ಪದವಿಪೂರ್ವ ವಿದ್ಯಾಲಯಗಳಲ್ಲಿ ಗುರುಪೂರ್ಣಿಮ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಸ್ಥೆಯ ಅಧ್ಯಕ್ಷ ಅಶೋಕ ಅಕ್ಕಿ ಮಾತಾನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಏಕಾಗ್ರತೆಯಿಂದ ಪುಸ್ತಕ ಓದುವ ಮತ್ತು ವಿವಿಧ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಸAಸ್ಥೆಯ ಕಾರ್ಯದರ್ಶಿ ಸಂತೋಷ ಅಕ್ಕಿ ಮಾತನಾಡಿ, ಸನಾತನ ಕಾಲದಲ್ಲಿ ಗುರು-ಶಿಷ್ಯ ಪರಂಪರೆಯ ಬಗ್ಗೆ ಮತ್ತು ಹಿಂದಿನ ಗುರುಕುಲ ಪದ್ಧತಿ, ಈಗಿನ ಶೈಕ್ಷಣಿಕ ಪದ್ಧತಿಗಳನ್ನು ವಿವರಿಸಿದರು. ಸಾಗರಿಕಾ. ಎಸ್ ಅಕ್ಕಿ ಹಾಗೂ ಪದವಿ ಮಹಾವಿದ್ಯಾಲಯದ ಡಾ. ಸಿ.ವಿ. ಬಡಿಗೇರ, ಪೂರ್ವ ಪದವಿ ಮಹಾವಿದ್ಯಾಲಯದ ಶಿಲ್ಪಾ ಮಲ್ಲಾಪೂರ, ಪೂರ್ವ ಪ್ರಾಥಮಿಕ ಮುಖ್ಯೋಪಾಧ್ಯಾಯೆ ರೇಖಾ ಮಲೇಕರ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯೆ ಭಾಗ್ಯಲಕ್ಷ್ಮೀ ಶೇಷಗಿರಿ ಮತ್ತು ಸಂಸ್ಥೆಯ ಸಿಬ್ಬಂದಿಯವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೊ. ರವಿಚಂದ್ರ ಸ್ವಾಗತಿಸಿದರು. ಪ್ರೊ. ವೀರೇಶ ಬನಿಕಟ್ಟಿ ನಿರೂಪಿಸಿದರು. ಪ್ರೊ. ಅರುಣಕುಮಾರ ವಂದಿಸಿದರು.

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ ಹಾಗೂ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆ ಗದಗ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2025ರ ನಿಮಿತ್ತ ಜಾಥಾ ಕಾರ್ಯಕ್ರಮ ಜರುಗಿತು.

ಜಿಲ್ಲಾ ಕುಟುಂಬ ಕಲ್ಯಾಣ ಯೋಜನಾ ಅಧಿಕಾರಿ ಡಾ. ವಾಯ್.ಕೆ. ಭಜಂತ್ರಿ ಹಾಗೂ ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ವೆಂಕಟೇಶ ರಾಠೋಡ ಹಸಿರು ನಿಶಾನೆ ತೋರಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ಜಾಧವ ಮತ್ತು ರೂಪಸೇನ ಚವ್ಹಾಣ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ, ವಾಯ.ಕೆ. ಹಕ್ಕಿ, ಎಸ್.ಹೆಚ್.ಐ.ಓ ಸರೋಜಾ ಕಟ್ಟಿಮನಿ, ಎಲ್.ಹೆಚ್.ವಿ ಸಿದ್ದಪ್ಪ ಲಿಂಗದಾಳ, ಹೆಚ್.ಐ.ಓ, ಡಿ.ಸಿ. ಹಿರೇಹಾಳ ಹೆಚ್.ಐ.ಓ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಓದುವ ಸಂಸ್ಕೃತಿ ಹೆಚ್ಚಿಸುವ ಪುಸ್ತಕ ದಾಸೋಹ

0

ವಿಜಯಸಾಕ್ಷಿ ಸುದ್ದಿ, ಗದಗ:  ಓದುವ ಸಂಸ್ಕೃತಿಯನ್ನೇ ಮರೆತಿರುಬಹುದಾದ ಈಗಿನ ವಿದ್ಯಾರ್ಥಿಗಳಲ್ಲಿ ಮತ್ತೆ ಓದುವ ಸಂಸ್ಕೃತಿಯನ್ನು ಹೆಚ್ಚಿಸಬೇಕು. ಪುಸ್ತಕದ ಮೂಲಕ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಬೇಕು ಎನ್ನುವ ದಿಶೆಯಲ್ಲಿ ಕಲಾ ವಿಕಾಸ ಪರಿಷತ್ತಿನವರು ಹಮ್ಮಿಕೊಂಡಿರುವ ಈ ಪುಸ್ತಕ ದಾಸೋಹ ಕಾರ್ಯಕ್ರಮ ಅಭಿನಂದನಾರ್ಹವಾದುದು ಎಂದು ಭಾರತೀಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರೊ. ಡಾ. ಎಸ್.ವಾಯ್. ಚಿಕ್ಕಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಗದುಗಿನ ಕಲಾ ವಿಕಾಸ ಪರಿಷತ್ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಏರ್ಪಡಿಸಿದ್ದ ಕಲಾ ವಿಕಾಸ ಪುಸ್ತಕ ದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಭೂತಿ ಮಾಸಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಮಾತನಾಡಿ, ಪುಸ್ತಕ ಓದುವುದರಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಲಾಭಗಳು, ಪುಸ್ತಕಗಳ ಮಹತ್ವ, ನಿರಂತರ ಓದು ವ್ಯಕ್ತಿಯ ಬದುಕನ್ನು ಹೇಗೆ ಬದಲಿಸಬಲ್ಲದು ಎಂಬುದನ್ನು ತಿಳಿಸಿದರು.

ಪುಸ್ತಕ ದಾಸೋಹದ ರೂವಾರಿ ಕಲಾ ವಿಕಾಸ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಸಿ.ಕೆ.ಎಚ್. ಶಾಸ್ತ್ರಿ ಕಡಣಿ ಪುಸ್ತಕ ದಾಸೋಹದ ಆಶಯವನ್ನು ತಿಳಿಸಿ, 25 ವರ್ಷಗಳಿಂದ ಕಲಾ ವಿಕಾಸ ಪರಿಷತ್ತಿನ ಅಡಿಯಲ್ಲಿ ಕಲೆಯನ್ನು ಸಾರ್ವತ್ರಿಕಗೊಳಿಸಿ ಕಲಾ ಪ್ರತಿಭೆಗಳನ್ನು ಪರಿಚಯಿಸಿದ ಮತ್ತು ನಾಡಿನ ಉದ್ದಗಲಕ್ಕೂ ಮಾತ್ರವಲ್ಲದೆ ದೇಶದಾದ್ಯಂತ ಕಲಾ ಸೇವೆ ಸಲ್ಲಿಸಿದ ಪರಿಷತ್‌ನ ಪರಿಚಯ ಮಾಡಿಕೊಟ್ಟರು.

ಇದೇ ಸಂದರ್ಭದಲ್ಲಿ ಖಾಸಗಿ ಸುದ್ದಿ ವಾಹಿನಿಯಿಂದ `ರಿಯಲ್ ಸ್ಟಾರ್’ ರಾಜ್ಯಪ್ರಶಸ್ತಿ ಪಡೆದ ನಿಮಿತ್ತ ಪ್ರೊ. ಎಸ್.ವಾಯ್. ಚಿಕ್ಕಟ್ಟಿಯವರನ್ನು ಮತ್ತು ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಶೇ.98 ಅಂಕ ಪಡೆದ ವಿದ್ಯಾರ್ಥಿ ಸಾರಿಕಾ ಕಾಲವಾಡಮಠರನ್ನು ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯಾಧ್ಯಾಪಕಿ ಶೋಭಾ ಸ್ಥಾವರಮಠ ಸ್ವಾಗತಿಸಿದರು. ಬಡಿಗೇರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

`ಮಾಸದ ಮಾತು’ 25ನೇ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗುರುಭಕ್ತಿಯೇ ಗುರಿಯನ್ನು ಜಯಿಸುವ ಶಕ್ತಿ. ಜನಿಸಿದಾಗ ಮೂಳೆ-ಮಾಂಸದ ತಡಿಕೆಯಂತಿರುವ ನಮಗೆ ತಾಯಿಯೇ ಮೊದಲ ಗುರು. ತಂದೆ ಬದುಕನ್ನು ತೋರುತ್ತಾನೆ. ಶಿಕ್ಷಕರು ಐಹಿಕ ಗುರುಗಳಾದರೆ, ಆಧ್ಯಾತ್ಮಿಕ ಗುರುಗಳು ಬದುಕುವ ಬಗೆಯನ್ನು ಕಲಿಸುತ್ತಾರೆ ಎಂದು ಶರಣ ಚಿಂತಕ, ಪ್ರಗತಿಪರ ಕೃಷಿಕ ಬಸವರಾಜ ಬೆಂಡಿಗೇರಿ ಅಭಿಪ್ರಾಯಪಟ್ಟರು.

ಅವರು ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೆಳಗಿನ ಬಸ್ತಿಬಣದ ಈಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ಮಾಸದ ಮಾತು’ ಸರಣಿಯ 25ನೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕ ಶ್ರೀಪಾಲ ಘೋಂಗಡಿ ಉಪನ್ಯಾಸ ನೀಡಿ, `ಅಕ್ಷರ ಮಾತ್ರಂ ಕಲಿಸಿದಾತಂ ಗುರು’ ಎನ್ನುವಂತೆ ಪ್ರತಿಯೊಂದು ಹಂತದಲ್ಲಿ ವಿವಿಧ ರೀತಿಯಿಂದ ನಮಗೆ ಮಾರ್ಗದರ್ಶನ ಮಾಡಿದ ಪ್ರತಿಯೊಬ್ಬರೂ ಗುರು ಸಮಾನರಾಗುತ್ತಾರೆ. ಕೆಲವರು ವೃತ್ತಿಯನ್ನು ಕಲಿಸಿದರೆ, ಕೆಲವರು ಬದುಕಿನ ರೀತಿಯನ್ನು ತಿಳಿಸಿಕೊಡುತ್ತಾರೆ. ಆ ಎಲ್ಲ ಗುರುಗಳನ್ನು ಸ್ಮರಿಸುವ ದಿನವೇ ಈ ಗುರುಪೂರ್ಣಿಮೆ ಎಂದರು.

ಪುರಸಭೆಯ ಮಾಜಿ ಉಪಾಧ್ಯಕ್ಷ ಗುರುಪುತ್ರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಈಶ್ವರ ಮೆಡ್ಲೇರಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಹಿರಿಯ ಅಧ್ಯಾತ್ಮ ಚಿಂತಕರಾದ ಪಾಪಣ್ಣ ಬನ್ನಿ, ಈರಣ್ಣ ಶಿರೋಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಿದ್ದಣ್ಣ ಹಡಪದ, ಸುನೀಲ ಮೆಡ್ಲೇರಿ ಹಾಗೂ ಶ್ರೀನಿಧಿ ಶಿಳ್ಳಿನ ಗುರುಗೀತ ನಮನ ಕಾರ್ಯಕ್ರಮ ನಡೆಸಿಕೊಟ್ಟರು.

ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ ಚಾಕಲಬ್ಬಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ನಾಗರಾಜ ಮಜ್ಜಿಗುಡ್ಡ ನಿರೂಪಿಸಿದರು. ಶಂಕರ ಶಿಳ್ಳಿನ ವಂದಿಸಿದರು. ಈ ಸಂದರ್ಭದಲ್ಲಿ ಈರಣ್ಣ ಗಾಣಿಗೇರ, ಶರಣಪ್ಪ ಯಲಿವಿಗಿ, ಈಶ್ವರ ಬನ್ನಿಕೊಪ್ಪ, ಬಸವರಾಜ ಮೆಡ್ಲೇರಿ, ಕೊಟ್ರೇಶ ಅಳವಂಡಿ, ಲಕ್ಷ್ಮಣ ಮೆಡ್ಲೇರಿ, ನಾಗರಾಜ ಗುಜರಿ, ಈರಣ್ಣ ರಿತ್ತಿ, ಎಚ್.ಎಂ. ಸಪ್ಪಿನ, ಮಹಾಬಲೇಶ್ವರ ಮೆಡ್ಲೇರಿ, ತಿಪ್ಪಣ್ಣ ಹಡಪದ, ಮಂಜುನಾಥ ಮೆಡ್ಲೇರಿ, ನಾರಾಯಣ ಮೆಡ್ಲೇರಿ ಮುಂತಾದವರು ಉಪಸ್ಥಿತರಿದ್ದರು.

ಕಪ್ಪತ್ತಗುಡ್ಡದ ಸಂರಕ್ಷಣೆಗೆ ಬದ್ಧರಾಗಬೇಕಿದೆ

0

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶುದ್ಧ ಹವಾಗುಣಕ್ಕೆ ದೇಶದಲ್ಲಿಯೇ ಹೆಸರಾಗಿರುವ ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಸಂರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಗದಗ ಎಪಿಎಂಸಿ ಯಾರ್ಡ್‌ ನ ವಾಯು ವಿಹಾರ ಬಳಗದ ಅಧ್ಯಕ್ಷ ಚನ್ನವೀರಪ್ಪ ಹುಣಶೀಕಟ್ಟಿ ಹೇಳಿದರು.

ವಾಯು ವಿಹಾರ ಬಳಗ ಕಳಸಾಪೂರದ ಶ್ರೀಗುರು ರಾಘವೇಂದ್ರ ಮಠದಿಂದ ಸುಕ್ಷೇತ್ರ ವೆಂಕಟಾಪೂರದ ಶ್ರೀ ವೆಂಕಟೇಶ್ವರ ದೇವಸ್ಥಾನದವರೆಗೆ ಕೈಗೊಂಡಿದ್ದ ಪಾದಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು, ಅವುಗಳಲ್ಲಿ ಕಪ್ಪತ್ತಗುಡ್ಡವೂ ಒಂದಾಗಿದೆ. ಇಂತಹ ರಮಣೀಯ ನಿಸರ್ಗಧಾಮ ನಮ್ಮ ಭಾಗದಲ್ಲಿರುವದು ನಮ್ಮ ಹೆಮ್ಮೆ. ತಿರುಪತಿ ಶ್ರೀ ವೆಂಕಟೇಶ ದೇವಾಲಯದ ದರ್ಶನ ಪಡೆಯಲಾಗದವರು ಗದಗ ತಾಲೂಕಿನ ವೆಂಕಟಾಪೂರದ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಧನ್ಯರಾಗಬೇಕೆಂದು ಹಿರಿಯರು ಹೇಳುತ್ತಾರೆ. ಆ ಹಿನ್ನೆಲೆಯಲ್ಲಿ ನಾವೆಲ್ಲ ವಾಯು ವಿಹಾರ ಬಳಗದವರು ಪಾದಯಾತ್ರೆ ಕೈಗೊಂಡಿದ್ದೇವೆ ಎಂದರು.

ವಾಯು ವಿಹಾರ ಬಳಗದ ಪ್ರಕಾಶ ಉಗಲಾಟದ, ಬಾಬುಗೌಡ ಮಲ್ಲನಗೌಡ್ರ, ಮುರುಘರಾಜೇಂದ್ರ ಬಡ್ನಿ, ರಾಜು ಮಲ್ಲಾಡದ ಮುಂತಾದವರು ಮಾತನಾಡಿದರು. ರಮೇಶ ಶಿಗ್ಲಿ ಪ್ರಾರ್ಥಿಸಿದರು, ಮಧುಸೂಧನ ಪುಣೇಕರ ಸ್ವಾಗತಿಸಿದರು. ಸಂಜಯ ಬಾಗಮಾರ ನಿರೂಪಿಸಿದರು. ಕೊನೆಗೆ ವಿಶ್ವನಾಥ ಯಳಮಲಿ ವಂದಿಸಿದರು.

ಪಾದಯಾತ್ರೆಯಲ್ಲಿ ತಾತನಗೌಡ ಪಾಟೀಲ, ಮಹಾಂತೇಶ ಪಾಟೀಲ, ಶರಣು ಗದಗ, ಮೌಲಾವಲಿ ಮುಲ್ಲಾನವರ, ಚಂದ್ರು ಸುರಕೋಡ, ವಿಜಯ ಶಿವಪ್ಪಗೌಡ್ರ, ಸಿದ್ಧಣ್ಣ ಹಲವಾಗಲಿ, ಅರವಿಂದ ಕಾಮತ, ಅಶೋಕಗೌಡ ಪಾಟೀಲ, ಮಂಜುನಾಥ ಬೇಲೇರಿ, ಸಿದ್ಧಣ್ಣ ಮುನವಳ್ಳಿ, ರಾಜು ಮಲ್ಲಾಡದ, ರೇಣುಕಪ್ರಸಾದ ಹಿರೇಮಠ, ಬಾಪುಗೌಡ ಸಂಕನಗೌಡ್ರ, ಸುರೇಶ ರಡ್ಡೇರ, ಉಮೇಶ ನಾಲವಾಡ, ಮಹಾಂತೇಶ ಬಾತಾಖಾನಿ, ಚಿಕ್ಕನಗೌಡ್ರ, ಶರಣಪ್ಪಗೌಡ ಪವಾಡಿಗೌಡ್ರ ಮುಂತಾದವರಿದ್ದರು.

ಮಹಿಳಾಪರ ಗ್ಯಾರಂಟಿಗಳಿಗೆ ಅಪಾರ ಮೆಚ್ಚುಗೆ

0

ವಿಜಯಸಾಕ್ಷಿ ಸುದ್ದಿ, ರೋಣ: ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಲು ಸಾದ್ಯವಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಮತ್ತಷ್ಟು ಶಕ್ತಿ ನೀಡಿದಂತಾಗಿದೆ ಎಂದು ರೋಣ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲರಲ್ಲಿ ನೂರಾರು ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲರು ಕಳೆದ ಕೆಲ ದಿನಗಳಿಂದ ಪ್ರತಿ ಗ್ರಾಮಗಳಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಮಹತ್ವ ಮತ್ತು ಕುಟುಂಬಗಳಿಗೆ ಆಗುತ್ತಿರುವ ಅನುಕೂಲತೆಯ ಬಗ್ಗೆ ಸಭೆಗಳನ್ನು ನಡೆಸಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಗುರುವಾರ ರೋಣ ಬಸ್ ನಿಲ್ದಾಣದತ್ತ ತೆರಳಿ ಮಹಿಳಾ ಪ್ರಯಾಣಿಕರ ಜೊತೆಗೆ ಶಕ್ತಿ ಯೋಜನೆ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿದ್ದ ನೂರಾರು ಮಹಿಳೆಯರು ಶಕ್ತಿ ಯೋಜನೆಯಿಂದ ಬಡ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಅಲ್ಲದೆ, ನಿತ್ಯ ಬೆರೆ ಸ್ಥಳಗಳಿಗೆ ತೆರಳಿ ವ್ಯಾಪಾರ-ವಹಿವಾಟು ನಡೆಸುವ ಮತ್ತು ಬಟ್ಟೆ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ಸೇರಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಯೋಜನೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗೃಹಲಕ್ಷ್ಮೀ, ಗೃಹ ಜ್ಯೋತಿ ಯೋಜನೆಗಳಿಂದಲೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿದೆ. ದುಬಾರಿ ಕಾಲದಲ್ಲಿ ಬಡವರ ಬದುಕು ಹಸನುಗೊಳ್ಳಲು ಗ್ಯಾರಂಟಿ ಯೋಜನೆಗಳು ಲಾಭದಾಯಕವಾಗಿದ್ದು, ಇದರಿಂದ ಮಹಿಳೆಯರಿಗೆ ಕಾಂಗ್ರೆಸ್ ಸರಕಾರ ಶಕ್ತಿ ನೀಡಿದಂತಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ನಮಗೆ ಹರ್ಷ ಮೂಡಿಸಿದೆ. ನಾನು ಸಹ ಪ್ರತಿ ಗ್ರಾಮಗಳಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಸಮಸ್ಯೆಗಳಿದ್ದಲ್ಲಿ ಸ್ಥಳದಲ್ಲಿಯೇ ಸರಿಪಡಿಸಿ ಫಲಾನುಭವಿಗಳಿಗೆ ಯೋಜನೆಗಳ ಲಾಭವನ್ನು ತಲುಪುವಂತೆ ಮಾಡಲಾಗುತ್ತಿದೆ.

– ಸಂಗನಗೌಡ ಪಾಟೀಲ.

ಅಧ್ಯಕ್ಷರು, ಗ್ಯಾರಂಟಿ ಸಮಿತಿ-ರೋಣ.

“ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆಗಳಿಂದ ನಮಗೆ ಅನುಕೂಲವಾಗಿದೆ. ಇವತ್ತು ಆರ್ಥಿಕ ಸ್ಥಿತಿ ಸುಧಾರಿಸಲು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಸಹಕಾರಿಯಾಗಿದೆ. ನಾವೆಲ್ಲ ಗ್ರಾಮಗಳಿಗೆ ತೆರಳಿ ಹಣ್ಣು ಮಾರಾಟ ಮಾಡುತ್ತೇವೆ. ಬಸ್ ಪ್ರಯಾಣ ಉಚಿತವಾದಾಗಿನಿಂದ ಬಡವರ್ಗದವರಿಗೆ ಸಹಾಯವಾಗಿದೆ.

– ಮಲ್ಲವ್ವ.

ಗ್ಯಾರಂಟಿ ಯೋಜನೆಯ ಫಲಾನುಭವಿ.

error: Content is protected !!