Home Blog Page 3

ಶಿವಮೊಗ್ಗದ ವಿಗ್ರಹ ಅಪಮಾನ ಪ್ರಕರಣ: ಇಬ್ಬರು ಆರೋಪಿಗಳು ಬಂಧನ..!

ಶಿವಮೊಗ್ಗ: ಶಿವಮೊಗ್ಗದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ವಿಗ್ರಹ ಅವಮಾನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಈ ಘಟನೆಯ ಸಂಬಂಧ ರೆಹಮತ್‌ವಲ್ಲಾ ಮತ್ತು ಸದ್ದಾಂ ಎಂಬ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಘಟನೆ ಹಿನ್ನೆಲೆ ಶಾಂತಿ ಕಾಪಾಡಲು ಬಡಾವಣೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬಂಗಾರಪ್ಪ ಬಡಾವಣೆಯ ಪಾರ್ಕ್ ನಲ್ಲಿ ಪ್ರತಿಷ್ಠಾಪಿತವಾಗಿದ್ದ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು, ಅಲ್ಲೇ ಇದ್ದ ನಾಗದೇವರ ವಿಗ್ರಹವನ್ನು ಚರಂಡಿಗೆ ಎಸೆದ ಇಬ್ಬರು ಯುವಕರು ಪರಾರಿಯಾಗಿದ್ದರು. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಸೃಷ್ಟಿಸಿತ್ತು.

ಕಿಡಿಗೇಡಿಗಳ ವರ್ತನೆಯಿಂದ ಕೆಲಕಾಲ ಬಡಾವಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ ವೃದ್ಧ..!

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಅದರಲ್ಲೂ ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳನ್ನು ದಿನೇ ದಿನೇ ಹೆಚ್ಚಾಗುತ್ತಲೇ ಇದೆ.

ಇದೀಗ ಮತ್ತೊರ್ವ ವ್ಯಕ್ತಿ ಹೃದಯಾಘಾತಕ್ಕೆ ಸಾವನಪ್ಪಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಿ.ಹೊಸಳ್ಳಿ ಗ್ರಾಮದ 75 ವರ್ಷದ ಸುಮಿತ್ರೆಗೌಡ ಎಂಬ ವೃದ್ಧ ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮನೆಯಲ್ಲೇ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸುಮಿತ್ರೆಗೌಡ, ತಕ್ಷಣವೇ ಸಾವನ್ನಪ್ಪಿದ್ದಾರೆ. ಈ ಘಟನೆಯು ವಯಸ್ಸಾದವರಲ್ಲಿಯೂ ಹೃದಯಾಘಾತದ ಸಂಭವವು ಹೆಚ್ಚುತ್ತಿರುವುದನ್ನು ತೋರಿಸುತ್ತದೆ. ಸುಮಿತ್ರೆಗೌಡರ ಕುಟುಂಬವು ಈ ಆಕಸ್ಮಿಕ ಸಾವಿನಿಂದ ದಿಗ್ಭ್ರಮೆಗೊಂಡಿದೆ. ಸದ್ಯ ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ.

ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೋ! ಮೂವರಿಗೆ ಗಾಯ

ಬೆಂಗಳೂರು: ರಾಜಧಾನಿಯ ಜ್ಞಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ಜುಲೈ 5ರಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಬ್ಯಾಡರಹಳ್ಳಿ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದ ಟೆಂಪೋ ಡಿವೈಡರ್ ಗೆ ಡಿಕ್ಕಿ ಹೊಡೆದು ಎರಡು ಭಾಗಗಳಾಗಿ ಚೂರುಚೂರಾಗಿದ್ದು, ಟೆಂಪೋ ಕ್ಯಾಬಿನ್ ಬ್ರಿಡ್ಜ್ ನಿಂದ ನೇರವಾಗಿ ಕೆಳಗೆ ಬಿದ್ದರೆ, ಬಾಡಿ ಭಾಗ ಬ್ರಿಡ್ಜ್ ಮೇಲೆಯೇ ನಿಂತುಹೋಯ್ತು.

ಅಪಘಾತದ ತೀವ್ರತೆಗೆ ಚಾಲಕ ರಾಘವೇಂದ್ರ ನೇತಾಡುತ್ತಾ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಷ್ಟೇ ಅಲ್ಲ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರಾದ ಸಲೀಂ ಮತ್ತು ಫಯಾಜ್ ಕೂಡ ಗಾಯಗೊಂಡಿದ್ದಾರೆ.

ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಕರೆದಿದ್ದು, ಮೂವರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾವಣಗೆರೆ ಪಿಎಸ್ಐ ತುಮಕೂರಿನಲ್ಲಿ ಆತ್ಮಹತ್ಯೆ.! ಕೌಟುಂಬಿಕ ಕಲಹವೇ ಸಾವಿಗೆ ಕಾರಣವಾಯ್ತಾ..?

ತುಮಕೂರು: ತುಮಕೂರಿನಲ್ಲಿ ದಾವಣಗೆರೆ ಪೊಲೀಸ್ ಠಾಣೆಯ ಪಿಎಸ್ಐ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಜರುಗಿದೆ. ಇದು ಪೊಲೀಸ್ ಅಧಿಕಾರಿಗಳಿಗೆ ದಂಗು ಬಡಿಸಿದ್ದು, ಆತ್ಮಹತ್ಯೆಗೆ ಕಾರಣವಾಗಿ ಡೆತ್ ನೋಟ್ ಕೂಡ ಬರೆದಿಟ್ಟು ಹೋಗಿದ್ದಾರೆ.

ನೇಣಿಗೆ ಶರಣಾದವರನ್ನು ದಾವಣಗೆರೆ ಬಡಾವಣೆಯ ಪಿಎಸ್ಐ ನಾಗರಾಜು (59) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.

ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರಾಜು, ತಮ್ಮ ಬದುಕಿಗೆ ಏಕೆ ಅಂತ್ಯ ಹಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಉದ್ಭವವಾಗಿದೆ. ಲಾಡ್ಜ್ ಕೊಠಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ಹೋದ ಅವರು, ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮನವಿ ಮಾಡಿದ್ದಾರೆ.
ಡೆತ್ ನೋಟ್ ನಲ್ಲಿ ಕೌಟುಂಬಿಕ ಕಲಹವೇ ಸಾವಿಗೆ ಕಾರಣ ಎಂದು ತಿಳಿಸಿದ್ದಾರೆ.

ಮಗನಿಗೆ ಕೆಲಸ ಕೊಡಿಸಿ, ಮಗಳು ಹಾಗೂ ಅಳಿಯ ತುಂಬಾ ಒಳ್ಳೆಯವರು, ಅಳಿಯ ನನ್ನ ಮಗನಷ್ಟೆ” ಎಂದು ಭಾವುಕರಾಗಿ ಬರೆದಿದ್ದಾರೆ ನಾಗರಾಜು. ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಸಿಪಿಐ ಅವಿನಾಶ್ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಿಲ್ಲರ್ ಹೃದಯಾಘಾತಕ್ಕೆ ಒಂದೇ ದಿನ ಇಬ್ಬರು ಬಲಿ..! ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದ ದುರ್ಘಟನೆಗಳು ಮುಂದುವರಿದಿವೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವ ಜೀವಗಳು ಮೃತಪಟ್ಟಿರುವ ಘಟನೆ ತೀವ್ರ ಚಿಂತೆಗೆ ಕಾರಣವಾಗಿದೆ.  ಹೌದು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕು,

ಕೂಡ್ಲುರು ಗ್ರಾಮದಲ್ಲಿ ಬೆಳಗ್ಗೆ ಎದ್ದು ಮುಖ ತೊಳೆಯುತ್ತಿದ್ದ ವೇಳೆ ಪುರುಷೋತ್ತಮ್(35) ಎಂಬ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಪ್ರಾಣ ಹೋಗಿದೆ. ಮಗನ ಕಳೆದುಕೊಂಡ ಕುಟುಂಬ ದುಃಖದಲ್ಲಿ ಮುಳುಗಿದೆ.

ಇನ್ನೂ ಚಿಕ್ಕಮಗಳೂರು ಮೂಡಿಗೆರೆ ತಾಲೂಕು, ಭಾರೀಬೈಲು ಗ್ರಾಮದಲ್ಲಿ  29 ವರ್ಷದ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಎದೆ ಉರಿ ಎಂದು ನಿನ್ನೆ‌ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಳು. ಆಸ್ಪತ್ರೆಗೆ ಬರುವಾಗ ಅರ್ಧ ಗಂಟೆ ಲೇಟ್ ಆಗಿತ್ತು.

ಮಳೆಯಿಂದ ರಸ್ತೆಗೆ ಮರಬಿದ್ದು ಆಸ್ಪತ್ರೆಗೆ ಬರುವುದೂ ತಡವಾಗಿತ್ತು. ಮೊನ್ನೆಯಿಂದಲೂ ಯುವತಿಯ ಆರೋಗ್ಯ ಸರಿ ಇರಲಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋ ಬಿಪಿ ಎಂದು ಹೇಳಿದ್ದರು. ನಿನ್ನೆ ಎದೆ ಉರಿ ಜಾಸ್ತಿಯಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಗೆ ಬರುವಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ.

ಹೃದಯಾಘಾತವು ಈಗ ಎಚ್ಚರಿಕೆಯ ಸಂಕೇತವಾಗಿದ್ದು,ತೀವ್ರ ಎದೆ ಉರಿ, ಉಸಿರಾಟ ತೊಂದರೆ, ದೇಹ ದುರ್ಬಲತೆ ಕಂಡುಬಂದಾಗ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಾವಶ್ಯಕ. ಆರೋಗ್ಯದ ಕಡೆ ನಿರ್ಲಕ್ಷ್ಯವೇ ಪ್ರಾಣಾಪಾಯಕ್ಕೆ ದಾರಿ ಎನ್ನುವುದನ್ನು ಮರೆಯಬಾರದು.

ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ಅವಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗ: ಶಿವಮೊಗ್ಗದ ಶಾಂತಿನಗರ ಬಂಗಾರಪ್ಪ ಬಡಾವಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದ ಘಟನೆ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬನು, ಪಾರ್ಕ್‌ನಲ್ಲಿ ಪ್ರತಿಷ್ಠಾಪಿತವಾಗಿದ್ದ ಗಣೇಶ ಮತ್ತು ನಾಗದೇವರ ವಿಗ್ರಹಗಳತ್ತ ಅವಮಾನಕಾರಿಯಾಗಿ ನಡೆದುಕೊಂಡು,

ಗಣೇಶನ ಮೂರ್ತಿಗೆ ಒದ್ದು, ನಾಗದೇವರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಾನೆ ಎನ್ನಲಾಗಿದೆ. ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕ್ಷಣಕ್ಷಣಕ್ಕೂ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟನೆ

ಘಟನೆ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ,  ಬಡಾವಣೆಯಲ್ಲಿ ಪಾರ್ಕ್‌ಗೆ ಮೀಸಲಾದ ಜಾಗದಲ್ಲಿ ಗಣೇಶ ಮತ್ತು ನಾಗವಿಗ್ರಹ ಪ್ರತಿಷ್ಠಾಪಿತವಾಗಿದ್ದವು. ಸಂಜೆ ಸಮಯದಲ್ಲಿ ವ್ಯಕ್ತಿಯೊಬ್ಬನು ಬಂದು ಅವಮಾನಕಾರ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಾವು ತನಿಖೆ ಆರಂಭಿಸಿದ್ದೇವೆ. ಶಾಂತಿ ಭಂಗವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನುವುದು ಪತ್ತೆ ಮಾಡಬೇಕಿದೆ. ಕೃತ್ಯ ಎಸಗಿದವನನ್ನು ಪತ್ತೆ ಮಾಡಲಾಗುವುದು ಎಮದು ಹೇಳಿದರು.

 

ಗ್ರಾಮೀಣ ರಸ್ತೆ ಮಾಡಿಸೋದು ಕಷ್ಟ..ಹಣ ನೋಡಿ ಮಾಡಬೇಕು: ರಾಯರೆಡ್ಡಿ

ಕೊಪ್ಪಳ:– ಗ್ರಾಮೀಣ ರಸ್ತೆ ಮಾಡಿಸೋದು ಕಷ್ಟ, ಹಣ ನೋಡಿ ಮಾಡಬೇಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮಗೆ ಗ್ಯಾರಂಟಿ ಬೇಡ ಎಂದು ಹೇಳಿ. ನಮ್ಮ ಜನ ಏನೂ ಬೇಡ ಎನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ಕೊಡ್ತೀನಿ ಎಂದಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ ಕೊಡ್ತೀರಿ. ನಮಗೆ ರಸ್ತೆ ಕೊಡಿ ಎಂದು ಕೇಳಿದ ಜನರಿಗೆ ಅವರು ಈ ರೀತಿ ಉತ್ತರಿಸಿದ್ದಾರೆ. ಗ್ರಾಮೀಣ ರಸ್ತೆ ಮಾಡಸೋದು ಕಷ್ಟ. ನಮ್ಮ ಬಳಿ ಇರುವ ಹಣದಲ್ಲಿ ನೋಡಿ ಮಾಡಬೇಕು ಎಂದಿದ್ದಾರೆ.

1.24 ಲಕ್ಷ ಕೋಟಿ ರೂ. ವಿವಿಧ ಉಚಿತ ಯೋಜನೆಗಳಿಗೆ ಹಣ ನೀಡುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳಿಂದ ನೇರವಾಗಿ 54 ಕೋಟಿ ರೂ.ನೀಡುತ್ತಿದ್ದೇವೆ. ಬರುವ ದಿನಗಳಲ್ಲಿ ರಸ್ತೆಗಳಿಗೂ ಹಣ ನೀಡುತ್ತೇವೆ, ಹಳ್ಳಿ ರಸ್ತೆಗಳನ್ನು ಸರಿಪಡಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದಾರೆ.

Gold Price: ಗೋಲ್ಡ್ ಪ್ರಿಯರೇ.. ಇಂದು ಚಿನ್ನದ ಬೆಲೆ ಅಲ್ಪ ಏರಿಕೆ!

ಕಳೆದ ಮೂರ್ನಾಲ್ಕು ವಾರಗಳಿಂದ ಸಾಕಷ್ಟು ಏರಿಳಿತ ಕಂಡಿದ್ದ ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ.

ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​​ಗೆ 10 ರೂ ಮಾತ್ರವೇ ಏರಿಕೆ ಆಗಿರುವುದು. ಬೆಳ್ಳಿ ಬೆಲೆ ಇದ್ದುದರಲ್ಲಿ ತುಸು ಮೇಲಿದೆ. ಹತ್ತು ದಿನದಲ್ಲಿ ಅದು ಗ್ರಾಮ್​​ಗೆ 2 ರೂ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,830 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,600 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,830 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.

ಕರ್ನಾಟಕದಲ್ಲಿ ಒಂದು ವಾರ ವರುಣಾರ್ಭಟ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ವರುಣನಾರ್ಭಟ ಜೋರಾಗಿದ್ದು, ಜುಲೈ 12ರವರೆಗೂ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ: ತಪ್ಪಿದ ಅನಾಹುತ!

ಹುಬ್ಬಳ್ಳಿ: ಹುಬ್ಬಳ್ಳಿ-ಬೈಪಾಸ್ ನೇಕಾರ ನಗರದ ಬ್ರಿಡ್ಜ್ ಬಳಿ ತಡರಾತ್ರಿ ಲಾರಿಯೊಂದು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ಜರುಗಿದೆ.

ಬೆಳಗಾವಿಯಿಂದ ತಮಿಳುನಾಡು ಕಡೆಗೆ ತೆರಳುತ್ತಿದ್ದ ಲಾರಿಗೆ, ಏಕಾಏಕಿ ಬೆಂಕಿ ಹತ್ತಿಕೊಂಡು ಬೈಪಾಸ್ ರಸ್ತೆಯಲ್ಲೆ ಲಾರಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿ ಕಂಡ ತಕ್ಷಣ ಚಾಲಕ ಕೆಳಗೆ ಇಳಿದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.

ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!