“ಇನ್ನು ಕಸಕ್ಕೂ ಕಾನೂನಿನ ಕಟ್ಟುಪಾಡು!”
ರಾಹುಲ್ ಗಾಂಧಿ ಹೇಳಿಕೆ ನಾಚಿಕೆಗೇಡು: ‘ದೇಶ ದ್ರೋಹಿ’ ಮಾತಿಗೆ ಜೋಶಿ ತಿರುಗೇಟು!
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್ಎಸ್ಎಸ್ ವಿರುದ್ಧ “ದೇಶದ್ರೋಹಿಗಳು” ಎಂಬ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ, ರಾಹುಲ್ ಗಾಂಧಿಯ ಹೇಳಿಕೆ “ನಾಚಿಕೆಗೇಡಿನದು” ಎಂದು ಟೀಕಿಸಿದ್ದಾರೆ. ರಾಷ್ಟ್ರಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವವರನ್ನು ದೇಶದ್ರೋಹಿಗಳೆಂದು ಕರೆಯುವುದು ದೇಶಭಕ್ತರಿಗೆ ಮಾಡಿದ ಅವಮಾನ ಎಂದು ಅವರು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯ ಕಾಲದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷವೇ ಈಗ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಿಸುವುದು, ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುವುದು ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್ನ ಇತಿಹಾಸ ಎಂದು ಆರೋಪಿಸಿದ್ದಾರೆ.
ಚೀನಾದೊಂದಿಗೆ ಸಂಬಂಧ, 1962ರ ಯುದ್ಧದ ಪರಿಣಾಮಗಳು, ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಸಿಗಬೇಕಿದ್ದ ಸ್ಥಾನಗಳನ್ನು ಉಲ್ಲೇಖಿಸಿದ ಜೋಶಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದ ಜಾಗತಿಕ ಸ್ಥಾನಮಾನ ದುರ್ಬಲಗೊಂಡಿದೆ ಎಂದು ಟೀಕಿಸಿದ್ದಾರೆ.
ಇನ್ನು ರಾಹುಲ್ ಗಾಂಧಿಗೆ ಹತಾಶೆ ಹೆಚ್ಚಾಗಿದೆ ಎಂದು ಹೇಳಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕವಾಗಿ ಮತ್ತು ಜಾಗತಿಕವಾಗಿ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ರಾಷ್ಟ್ರವಾದಿ ಶಕ್ತಿಗಳನ್ನು ಟೀಕಿಸುವ ಮೂಲಕ ಕಾಂಗ್ರೆಸ್ ತನ್ನ ಇತಿಹಾಸವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಮತ್ತೊಂದೆಡೆ, ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಬಿಜೆಪಿ-ಆರ್ಎಸ್ಎಸ್ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ, ಇಂಧನ ಬೆಲೆಗಳ ವಿಷಯದಲ್ಲಿ ಜನರಿಗೆ ತಪ್ಪು ಭರವಸೆ ನೀಡಲಾಗಿದೆ ಹಾಗೂ ಆರ್ಥಿಕ ನೀತಿಗಳ ಕುರಿತು ಗಂಭೀರ ಪ್ರಶ್ನೆಗಳು ಇವೆ ಎಂದು ಆರೋಪಿಸಿದ್ದಾರೆ.
ಈ ಹೇಳಿಕೆ–ಪ್ರತಿಹೇಳಿಕೆಗಳ ನಡುವೆ ರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ತೀವ್ರ ವಾಗ್ವಾದದ ವಾತಾವರಣ ನಿರ್ಮಾಣವಾಗಿದೆ.
ಮೇ 22ರಿಂದ ರಾಷ್ಟ್ರಮಟ್ಟದ ‘ಮೂಟ್ ಕೋರ್ಟ್’ ಮಹಾಸ್ಪರ್ಧೆ
ವಿಜಯಸಾಕ್ಷಿ ಸುದ್ದಿ, ಗದಗಳ ಗದಗ ನಗರ ಮತ್ತೊಮ್ಮೆ ರಾಷ್ಟ್ರಮಟ್ಟದ ಕಾನೂನು ಚಟುವಟಿಕೆಗಳಿಗೆ ಸಾಕ್ಷಿಯಾಗಲಿದ್ದು, ಕೆ.ಎಲ್.ಇ. ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯ ವತಿಯಿಂದ ಮೇ 22ರಿಂದ 24ರವರೆಗೆ 3ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ–2026 ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 27 ಕಾನೂನು ವಿದ್ಯಾರ್ಥಿ ತಂಡಗಳು ಭಾಗವಹಿಸುತ್ತಿದ್ದು, ಮೂರು ದಿನಗಳ ಕಾಲ ಗದಗದಲ್ಲಿ ಕಾನೂನು ವಾದ-ಪ್ರತಿವಾದಗಳ ಸಿಡಿಲು ಮೊಳಗಲಿದೆ.
ಈ ಕುರಿತು ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ಮಾಹಿತಿ ನೀಡಿದರು.
ಈ ವರ್ಷದ ಸ್ಪರ್ಧೆ “ಹಿಂದೂ ಕಾನೂನಿನ ದಾಂಪತ್ಯ ಹಕ್ಕುಗಳ ಮರುಸ್ಥಾಪನೆ” ವಿಷಯವನ್ನು ಆಧರಿಸಿಕೊಂಡಿದ್ದು, ಕಾನೂನು ವಿದ್ಯಾರ್ಥಿಗಳಲ್ಲಿ ವಾದ ಮಂಡನೆ, ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಅರಿವು ಬೆಳೆಸುವ ಉದ್ದೇಶ ಹೊಂದಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆ ಯುವ ಕಾನೂನು ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಮಹತ್ವದ ವೇದಿಕೆಯಾಗಲಿದೆ ಎಂದರು.
ಮೇ 22ರಂದು ಸಂಜೆ 5 ಗಂಟೆಗೆ ಗದಗದ ಜೆ.ಟಿ. ಕಾಲೇಜು ಆವರಣದ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಹಾತ್ಮ ಗಾಂಧೀ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. (ಡಾ.) ಸುರೇಶ ವಿ. ನಾಡಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಡಾ. ಸಂಜೀವ ಎಂ. ಹುಲ್ಲೂರ ಹೇಳಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲರಾದ ಡಾ. ಜಗದೀಶ ಎಸ್. ಹಾಲಶೆಟ್ಟಿ ಹಾಗೂ ಜೆ.ಟಿ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಎ. ಮಾನ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ಪರ್ಧೆಯಲ್ಲಿ ಪ್ರಾಥಮಿಕ ಸುತ್ತು, ಕ್ವಾರ್ಟರ್ ಫೈನಲ್, ಸೆಮಿ ಫೈನಲ್ ಹಾಗೂ ಅಂತಿಮ ಸುತ್ತುಗಳು ನಡೆಯಲಿವೆ.
ಮೇ 24ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿ.ಎ. ಪಾಟೀಲ ಸಮಾರೋಪ ಭಾಷಣ ಮಾಡಲಿದ್ದಾರೆ.
ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಉಮೇಶ ಮಂಜುನಾಥ ಭಟ್ ಅಡಿಗ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷ ಎಂ.ಐ. ಶಿಗ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕೆ.ಎಲ್.ಇ. ಕಾನೂನು ಮಹಾವಿದ್ಯಾಲಯ, ಬೆಂಗಳೂರಿನ ಪ್ರಾಚಾರ್ಯ ಹಾಗೂ ಕಾನೂನು ಅಕಾಡೆಮಿ ನಿರ್ದೇಶಕ ಡಾ. ಜೆ.ಎಂ. ಮಲ್ಲಿಕಾರ್ಜುನಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ. ಶೆಲ್ಲಿಕೇರಿ ಮತ್ತು ಎಸ್.ಎಫ್. ಹಾದಿಮನಿ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂಜೀವ ಎಂ. ಹುಲ್ಲೂರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್.ಎ. ಮಾನ್ವಿ, ಎಸ್.ಎಫ್. ಹಾದಿಮನಿ, ಬಿ.ಜಿ. ಶೆಲ್ಲಿಕೇರಿ, ಪಿ.ಜಿ. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭ
‘ಹಿಂದೂ ಸಮಾವೇಶ’ಕ್ಕೆ ತೀವ್ರ ಪ್ರತಿರೋಧ
- ಸಭೆಯಲ್ಲಿ ಚರ್ಚಿಸಿ ಈ ಕೆಳಗಿನ ತೀರ್ಮಾನಗಳನ್ನು ಕೈಗೊಳ್ಳಲಾಯಿತು
- ನಿಜ ಶರಣರ ಸಮಾವೇಶ ಆಯೋಜಿಸಿ ವಚನ ಚಳುವಳಿಯನ್ನು ಮನೆಮನೆಗೂ ತಲುಪಿಸುವುದು
- ಕೋಮುದ್ವೇಷ ಬಿತ್ತುತ್ತಿದ್ದಾರೆ ಎನ್ನಲಾದ ಕನ್ಹೇರಿ ಮಠದ ಸ್ವಾಮೀಜಿಗೆ ಗದಗ ಜಿಲ್ಲೆ ಪ್ರವೇಶ ನಿರ್ಬಂಧಿಸಲು ಆಗ್ರಹಿಸುವುದು
- ಜಿಲ್ಲೆಯಾದ್ಯಂತ ಜಾಗೃತಿ ಅಭಿಯಾನ ನಡೆಸುವುದು
- ಹಿಂದೂ ಸಮಾವೇಶಕ್ಕೆ ಸಂಘಟಿತ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸುವುದು
“ ತೋಂಟದಾರ್ಯ ಮಠದ ಜಾತ್ರಾ ಸಮಿತಿಯ ಅಧ್ಯಕ್ಷರೇ ಈ ಹಿಂದೂ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದರೆ, ಆ ಮಠದ ಆಯ್ಕೆಗಳ ಬಗ್ಗೆ ಯೋಚನೆ ಮಾಡಬೇಕಿದೆ. ಇದು ಆರೋಪದ ಭಾಷೆಯಲ್ಲ, ಒಳಸಂಕಟದಿಂದ ಹೇಳುತ್ತಿರುವ ಮಾತು. ನಡೆಯಲಿರುವ ಹಿಂದೂ ಸಮಾವೇಶವನ್ನು ನಾವೆಲ್ಲರೂ ಪ್ರತಿಭಟಿಸಬೇಕಿದೆ”ಬಸವರಾಜ ಸೂಳಿಬಾವಿಬಂಡಾಯ ಸಾಹಿತಿ
ಶಾಂತಿ-ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ: ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಸುಬ್ಬಾಪೂರಮಠ
IPL 2026: ಆರ್ಸಿಬಿಗೆ ಬಿಗ್ ರಿಲೀಫ್; ತಂಡಕ್ಕೆ ಸ್ಟಾರ್ ಆಟಗಾರ ರಿಟರ್ನ್!
ಐಪಿಎಲ್ನಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಪ್ರಮುಖ ಆರಂಭಿಕ ಆಟಗಾರ ಫಿಲ್ ಸಾಲ್ಟ್ ವಾಪಸ್ಸಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಎಡಗೈ ಬೆರಳಿನ ಗಾಯಕ್ಕೆ ಒಳಗಾಗಿ ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ವಾರಾಂತ್ಯದಲ್ಲಿ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯಲು ಹೋಗಿ ಫಿಲ್ ಸಾಲ್ಟ್ ಗಾಯಕ್ಕೆ ತುತ್ತಾಗಿದ್ದರು. ಗಾಯದ ನಂತರ ಅವರು ಇಂಗ್ಲೆಂಡ್ಗೆ ಮರಳಿದ್ದರೆ, ಅವರ ಸ್ಥಾನಕ್ಕೆ ಜಾಕೋಬ್ ಬೆಥೆಲ್ ತಂಡದಲ್ಲಿ ಅವಕಾಶ ಪಡೆದಿದ್ದರು.
ಈಗ ಸಾಲ್ಟ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಭಾರತಕ್ಕೆ ವಾಪಸ್ ಆಗುವುದು ಖಚಿತವಾಗಿದೆ. ಆದರೆ ಶುಕ್ರವಾರ ಹೈದರಾಬಾದ್ (SRH) ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅವರು ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ತಂಡದ ಮೂಲಗಳು ತಿಳಿಸಿವೆ.
ಸಾಲ್ಟ್ ಗಾಯಕ್ಕಿಂತ ಮುನ್ನ 6 ಪಂದ್ಯಗಳಲ್ಲಿ ಆಡಿದ್ದು, 168.33ರ ಸ್ಟ್ರೈಕ್ ರೇಟ್ನಲ್ಲಿ 202 ರನ್ ಕಲೆಹಾಕಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕೇವಲ 36 ಎಸೆತಗಳಲ್ಲಿ 78 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಪಾತ್ರರಾಗಿದ್ದರು.
ಇದೇ ವೇಳೆ ಅಂಕಪಟ್ಟಿಯಲ್ಲಿ 18 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿರುವ ಆರ್ಸಿಬಿ, ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದರೆ ಕ್ವಾಲಿಫೈಯರ್-1 ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಉತ್ತಮ ನೆಟ್ ರನ್ರೇಟ್ ಕಾಯ್ದುಕೊಳ್ಳುವುದು ಕೂಡ ತಂಡಕ್ಕೆ ಮುಖ್ಯವಾಗಿದೆ.
ಮತ್ತೊಂದೆಡೆ ಸನ್ರೈಸರ್ಸ್ ಹೈದರಾಬಾದ್ ಕೂಡ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ತೀವ್ರ ಪೈಪೋಟಿಯ ನಿರೀಕ್ಷೆ ಹುಟ್ಟಿಸಿದೆ.
ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ತತ್ತರ: ನೀರಿನಿಂದ ಮುಳುಗಿದ ರಸ್ತೆ–ಅಂಡರ್ಪಾಸ್!
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯ ಪರಿಣಾಮ ಹಲವು ಕಡೆ ಅವಾಂತರಗಳು ಸಂಭವಿಸಿರುವ ಘಟನೆ ವರದಿಯಾಗಿದೆ.
ಕಡೂರು ಮತ್ತು ಬೀರೂರು ಭಾಗಗಳಲ್ಲಿ ಸುರಿದ ನಿರಂತರ ಮಳೆಯಿಂದ ರಸ್ತೆಗಳು ಹಾಗೂ ರೈಲ್ವೆ ಅಂಡರ್ಪಾಸ್ಗಳು ಜಲಾವೃತಗೊಂಡು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಕಡೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ವೇಳೆ ಬಸವೇಶ್ವರ ಸರ್ಕಲ್ ಪ್ರದೇಶ ಕೆರೆಯಂತಾಗಿ ಮಾರ್ಪಟ್ಟಿದ್ದು, ಸ್ಥಳೀಯರಿಗೆ ಓಡಾಟ ಕಷ್ಟಕರವಾಗಿದೆ.
ಇನ್ನು ಕಡೂರು–ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್ಪಾಸ್ನಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಅನೇಕ ವಾಹನಗಳು ನೀರಿನಲ್ಲಿ ಸಿಲುಕಿಕೊಂಡು ಸವಾರರು ಪರದಾಡಿದ ಘಟನೆ ನಡೆದಿದೆ.
ಸ್ಥಳೀಯರು ತಕ್ಷಣ ನೀರು ತೆರವುಗೊಳಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದು, ಮುಂದಿನ ಮಳೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.
“ಹೆಸ್ಕಾಂ ಅಧಿಕಾರಿ ವಿರುದ್ಧ ಗುತ್ತಿಗೆದಾರರ ಆಕ್ರೋಶ!”
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ ಕಚೇರಿಯಲ್ಲಿ ತಾಂತ್ರಿಕ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಗುರುರಾಜ್ ಸಿ. ಅವರನ್ನು ತಕ್ಷಣ ಬೇರಡೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲ್ಲೂಕು ಸಂಘದ ಸದಸ್ಯರು ಸೋಮವಾರ ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಕಲ್ಯಾಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಸೂರಣಗಿ ಮಾತನಾಡಿ, ಗ್ರಾಹಕರು ವಿದ್ಯುತ್ ಸಂಪರ್ಕಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಮಂಜೂರಾತಿಗೆ ಕಳುಹಿಸುವ ಬದಲು ತಾಂತ್ರಿಕ ಸಹಾಯಕ ಗುರುರಾಜ್ ಸಿ. ಅವರು ಮೇಲಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕೃತ ವಿದ್ಯುತ್ ಗುತ್ತಿಗೆದಾರರಾದ ನಮಗೆ ಹಾಗೂ ಗ್ರಾಹಕರಿಗೆ ವಿನಾಕಾರಣ ತೊಂದರೆ ನೀಡಿ ಕಡತಗಳನ್ನು ತಿರಸ್ಕರಿಸಲಾಗುತ್ತಿದೆ. ಸಣ್ಣಪುಟ್ಟ ನೆಪ ಹೇಳಿ ಕೆಲಸ ವಿಳಂಬ ಮಾಡುತ್ತಿರುವುದರಿಂದ ಗುತ್ತಿಗೆದಾರರ ಬದುಕೇ ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.
ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ಸುಮಾರು 20 ಅಧಿಕೃತ ಗುತ್ತಿಗೆದಾರರು ಕೆಇಆರ್ಸಿ ನಿಯಮಾನುಸಾರ ಸೇವೆ ಸಲ್ಲಿಸುತ್ತಿದ್ದು, ತಾಂತ್ರಿಕ ಪರಿಶೀಲನೆಗಾಗಿ ಸಲ್ಲಿಸುವ ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗುತ್ತಿದೆ ಎಂದು ಆರೋಪಿಸಿದರು.
“ಇಂತಹ ಅಧಿಕಾರಿಯಿಂದ ನಮಗೆ ಕೆಲಸ ಸಾಧ್ಯವಾಗುತ್ತಿಲ್ಲ. ಅವರನ್ನು ತಕ್ಷಣ ಬೇರಡೆ ವರ್ಗಾವಣೆ ಮಾಡಿದರೆ ಮಾತ್ರ ಮುಂದಿನ ಕಾರ್ಯ ಮುಂದುವರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ಕಾರ್ಯನಿರ್ವಾಹಕ ಎಂಜಿನಿಯರ್ ಕಲ್ಯಾಣಶೆಟ್ಟಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಳಿಕ ಗುತ್ತಿಗೆದಾರರು ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಭೇಟಿ ಮಾಡಿ, ಗುತ್ತಿಗೆದಾರರು ಹಾಗೂ ಗ್ರಾಹಕರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ. ಆಂಜಿನಪ್ಪ, ಸಂಘದ ಉಪಾಧ್ಯಕ್ಷ ಜಗನ್ನಾಥ ಕುಲಕರ್ಣಿ, ಕಾರ್ಯದರ್ಶಿ ಸಂತೋಷ ವಸ್ತ್ರದ, ಚಂದ್ರು ನಾವಿ, ಮೆಹಬೂಬಖಾನ್ ಪಠಾಣ, ದುಂಡಪ್ಪ ಸವಣೂರ, ಅಪ್ಪಣ್ಣ ಕುಬೇರ, ದಾದಾಪೀರ್ ಮಿರ್ಜಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಗ್ರಾಹಕರಿಗೆ ಸೇವೆ ನೀಡಬೇಕಾದ ಕಚೇರಿಯೇ ವಿಳಂಬದ ಕೇಂದ್ರವಾಗಬಾರದು.”
ಶರಣಪ್ಪ ಸೂರಣಗಿ
ಜಿಲ್ಲಾ ಘಟಕದ ಉಪಾಧ್ಯಕ್ಷ
ದೇವಾಲಯದ ವಾತಾವರಣದಿಂದ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿವೆ ಕಾರಣಗಳು
ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದ್ದು, ಅನೇಕರು ಪ್ರತಿನಿತ್ಯ ಮನೆ ಹಾಗೂ ದೇವಾಲಯಗಳಲ್ಲಿ ಪೂಜೆ, ಧಾರ್ಮಿಕ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ.
ಕೆಲವರು ಸಂಕಷ್ಟದ ಸಮಯದಲ್ಲಿ ದೇವರನ್ನು ಆಶ್ರಯಿಸುವರೆಂದರೆ, ಇನ್ನೂ ಕೆಲವರು ದಿನನಿತ್ಯ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಾಗಿರದೆ, ಮಾನಸಿಕ ಮತ್ತು ದೈಹಿಕವಾಗಿ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ನಂಬಲಾಗುತ್ತದೆ. ದೇವಾಲಯದ ಶಾಂತ ವಾತಾವರಣ, ಮಂತ್ರ ಪಠಣೆ, ಶಂಖ ಹಾಗೂ ಗಂಟೆಯ ಧ್ವನಿ ಮನಸ್ಸಿಗೆ ಸಕಾರಾತ್ಮಕ ಶಕ್ತಿ ನೀಡುತ್ತದೆ.
ದೇವಾಲಯಕ್ಕೆ ಭೇಟಿ ನೀಡುವುದರಿಂದ ಲಭಿಸುವ ಪ್ರಯೋಜನಗಳು:
ಮನಸ್ಸಿಗೆ ಶಾಂತಿ ನೀಡುತ್ತದೆ:
ದೇವಾಲಯಗಳಲ್ಲಿ ಧೂಪದ್ರವ್ಯ, ದೀಪ ಬೆಳಕು, ಮಂತ್ರ ಪಠಣೆ ಮತ್ತು ಶಂಖ-ಗಂಟೆಯ ಶಬ್ದಗಳು ವಾತಾವರಣವನ್ನು ಶುದ್ಧಗೊಳಿಸಿ ಮನಸ್ಸಿಗೆ ಶಾಂತಿ ನೀಡುತ್ತವೆ. ಇದರಿಂದ ನಕಾರಾತ್ಮಕ ಆಲೋಚನೆಗಳು ಕಡಿಮೆಯಾಗುತ್ತವೆ.
ಒತ್ತಡ ಕಡಿಮೆ ಮಾಡುತ್ತದೆ:
ಮಂತ್ರ ಪಠಣೆ ಮತ್ತು ಧಾರ್ಮಿಕ ಧ್ವನಿಗಳು ಮನಸ್ಸನ್ನು ಶಾಂತಗೊಳಿಸಿ ದಿನನಿತ್ಯದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ಏಕಾಗ್ರತೆ ಹೆಚ್ಚಿಸುತ್ತದೆ:
ದೇವರ ದರ್ಶನ, ಧ್ಯಾನ ಮತ್ತು ತಿಲಕ ಧಾರಣೆ ಮನಸ್ಸಿನ ಏಕಾಗ್ರತೆಯನ್ನು ಹೆಚ್ಚಿಸಲು ಸಹಕಾರಿ ಎಂದು ನಂಬಲಾಗುತ್ತದೆ.
ದೈಹಿಕ ಚಟುವಟಿಕೆ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯ:
ದೇವಾಲಯಗಳಲ್ಲಿ ಬರಿಗಾಲಿನಲ್ಲಿ ನಡೆಯುವುದು ಮತ್ತು ಪ್ರದಕ್ಷಿಣೆ ಹಾಕುವುದು ಪಾದಗಳ ಒತ್ತಡ ಬಿಂದುಗಳನ್ನು ಸಕ್ರಿಯಗೊಳಿಸಿ ರಕ್ತಸಂಚಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಶಕ್ತಿಯ ಮಟ್ಟ ಹೆಚ್ಚಿಸುತ್ತದೆ:
ಗಂಟೆಯ ಶಬ್ದ ಮತ್ತು ಧಾರ್ಮಿಕ ವಾತಾವರಣ ದೇಹದ ಶಕ್ತಿಯನ್ನು ಉತ್ತೇಜಿಸುತ್ತದೆ ಎಂದು ನಂಬಿಕೆ ಇದೆ.
ಸಕಾರಾತ್ಮಕ ಚಿಂತನೆ ಬೆಳೆಯುತ್ತದೆ:
ದೇವಾಲಯದ ಶಾಂತ ವಾತಾವರಣ ಮನಸ್ಸಿನ ಚಂಚಲತೆಯನ್ನು ಕಡಿಮೆ ಮಾಡಿ ಸಕಾರಾತ್ಮಕ ಭಾವನೆಗಳನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಮಕ್ಕಳನ್ನು ದೇವಾಲಯಕ್ಕೆ ಕರೆದುಕೊಂಡು ಹೋಗುವುದರಿಂದ ಅವರು ಸಂಸ್ಕೃತಿ ಮತ್ತು ಪರಂಪರೆಯನ್ನು ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಲಾಗುತ್ತದೆ.

