Home Blog Page 301

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: 200 ಮನೆಗಳನ್ನ ನೆಲಸಮ ಮಾಡಿದ ಪಾಲಿಕೆ!

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆ ಜೆಸಿಬಿಗಳ ಘರ್ಜನೆ ಕೇಳಿಬರುತ್ತಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಸುಮಾರು 200 ಮನೆಗಳನ್ನು ನೆಲಸಮಗೊಳಿಸಲಾಗಿದೆ.

ಇದಕ್ಕಾಗಿ ಜಿಲ್ಲಾಡಳಿತ 6 ಜೆಸಿಬಿಗಳು ಮತ್ತು 300 ಪೊಲೀಸ್‌ ಸಿಬ್ಬಂದಿಯ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಈ ಜಾಗವು ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿದ್ದು,

ಈ ಗೋಮಾಳ ಜಾಗವನ್ನ ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು. ಆದ್ರೆ ಜಾಗವನ್ನ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಲಾಗಿತ್ತು. ಹೀಗಾಗಿ ಒತ್ತುವರಿ ಮಾಡಿ ನಿರ್ಮಿಸಲಾಗಿರುವ 200 ಮನೆಗಳನ್ನ ನೆಲಸಮಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ರಾಜಕೀಯ ದ್ವೇಷದಿಂದ ಸಸ್ಪೆಂಡ್: ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ!

0

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜಕೀಯ ಒತ್ತಡಕ್ಕೆ ಮಣಿದು ತಮ್ಮನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಸೆಲ್ಫೀ ವೀಡಿಯೋ ಬಿಡುಗಡೆ ಮಾಡಿದ್ದಾರೆ. ವೀಡಿಯೋದಲ್ಲಿ ಕಣ್ಣೀರಿಡುತ್ತಾ ಮಾತನಾಡಿದ ಶಿಕ್ಷಕಿ, ತನಗೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆನೆಂದು ಹೇಳಿಕೊಂಡಿದ್ದಾರೆ.

ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್ ಅವರು ಈ ಆರೋಪ ಮಾಡಿದ್ದಾರೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರವಾಗಿ ಚುನಾವಣೆ ನಡೆಸಲು ಪವನ್ ಪಾಟೀಲ್ ಎಂಬವರು ಯತ್ನಿಸಿದ್ದರು ಎಂದು ಅವರು ದೂರಿದ್ದಾರೆ. ನಿಯಮ ಉಲ್ಲಂಘನೆಯಾಗಿದೆ ಎಂಬುದನ್ನು ಗಮನಿಸಿ, ಸಂಬಂಧಿಸಿದ ದಿನ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಕ್ರಮದಿಂದ ಅಸಮಾಧಾನಗೊಂಡ ಪವನ್ ಪಾಟೀಲ್ ಹಾಗೂ ಅವರ ಬೆಂಬಲಿಗರು ತಮ್ಮ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಒತ್ತಡ ತಂದಿದ್ದಾರೆ ಎಂದು ಶಿಕ್ಷಕಿ ಆರೋಪಿಸಿದ್ದಾರೆ. ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಬಳಸಿ ಶಿಕ್ಷಣಾಧಿಕಾರಿಗಳ ಮೇಲೆ ಒತ್ತಡ ಹೇರಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ರಾಜಕೀಯ ಒತ್ತಡಕ್ಕೆ ಮಣಿದು, ಯಾವುದೇ ಸ್ಪಷ್ಟ ತಪ್ಪು ಇಲ್ಲದಿದ್ದರೂ ಬಿಇಒ ಪ್ರಭಾವತಿ ಪಾಟೀಲ್ ಅವರು ತಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಸುರೇಖಾ ಬಾಯಣ್ಣವರ್ ಆರೋಪಿಸಿದ್ದಾರೆ. ಈ ಘಟನೆ ಶಿಕ್ಷಣ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಧರ್ಮಸ್ಥಳ ಪ್ರಕರಣ: ಬುರುಡೆ ಗ್ಯಾಂಗ್ ವಿರುದ್ಧ ಮಾಸ್ಕ್ ಮ್ಯಾನ್ ಚಿನ್ನಯ್ಯ ದೂರು

0

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಎಂದೇ ಗುರುತಿಸಲ್ಪಟ್ಟಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಶಿವಮೊಗ್ಗದ ಸೋಗಾನೆ ಸಮೀಪದ ಕೇಂದ್ರ ಕಾರಾಗೃಹದಿಂದ ಎರಡು ದಿನಗಳ ಹಿಂದೆ ಬಿಡುಗಡೆಯಾದ ಚಿನ್ನಯ್ಯ, ತನ್ನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ ಹಾಗೂ ಸಮೀರ್ ಎಂ.ಡಿ ಅವರಿಂದ ತನಗೂ ಹಾಗೂ ತನ್ನ ಪತ್ನಿಗೂ ಜೀವ ಬೆದರಿಕೆ ಎದುರಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಪೊಲೀಸ್ ರಕ್ಷಣೆ ಒದಗಿಸುವಂತೆ ಚಿನ್ನಯ್ಯ ಮನವಿ ಮಾಡಿದ್ದಾರೆ. ಚಿನ್ನಯ್ಯ ಸಲ್ಲಿಸಿದ ದೂರು ಅರ್ಜಿಯನ್ನು ಬೆಳ್ತಂಗಡಿ ಪೊಲೀಸರು ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ.

ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್ ನಿಧನ: ಮಲಯಾಳಂ ಸಿನಿರಂಗದ ಬಹುಮುಖ ಪ್ರತಿಭೆಗೆ ವಿದಾಯ

ಮಲಯಾಳಂ ಚಿತ್ರರಂಗದ ಹಿರಿಯ ಹಾಗೂ ಬಹುಮುಖ ಪ್ರತಿಭೆ ಶ್ರೀನಿವಾಸನ್ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೇರಳದ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 69ನೇ ವಯಸ್ಸಿನಲ್ಲಿ ಅವರು ಬದುಕಿಗೆ ವಿದಾಯ ಹೇಳಿದರು.

ನಟನಾಗಿ ಮಾತ್ರವಲ್ಲದೆ, ಚಿತ್ರಕಥೆ ಬರಹಗಾರ ಹಾಗೂ ನಿರ್ದೇಶಕನಾಗಿ ಶ್ರೀನಿವಾಸನ್ ಅಪಾರ ಕೊಡುಗೆ ನೀಡಿದ್ದಾರೆ. ಮಮ್ಮೂಟ್ಟಿ ಹಾಗೂ ನಿವೀನ್ ಪೌಳಿ ಅವರೊಂದಿಗೆ ತಲಾ ಒಂದೊಂದು ಸಿನಿಮಾವನ್ನು ನಿರ್ದೇಶಿಸಿದ್ದ ಅವರು, ಎರಡು ಚಿತ್ರಗಳನ್ನು ನಿರ್ಮಾಣವೂ ಮಾಡಿದ್ದರು.

ವೃತ್ತಿಜೀವನದಲ್ಲಿ ಅವರು ರಾಷ್ಟ್ರ ಪ್ರಶಸ್ತಿ, ಕೇರಳ ರಾಜ್ಯ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ನಟನಾಗಿ ಹಾಗೂ ಬರಹಗಾರನಾಗಿ ಪಡೆದಿದ್ದರು. ಮಲಯಾಳಂ ಚಿತ್ರರಂಗದ ಅನೇಕ ಪ್ರಮುಖ ಕಲಾವಿದರೊಂದಿಗೆ ಅವರಿಗೆ ಆತ್ಮೀಯ ಸಂಬಂಧವಿತ್ತು.

ಶ್ರೀನಿವಾಸನ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಪುತ್ರರಾದ ವಿನೀತ್ ಶ್ರೀನಿವಾಸನ್ ಮತ್ತು ಧ್ಯಾನ್ ಶ್ರೀನಿವಾಸನ್ ಇಬ್ಬರೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿನೀತ್ ನಿರ್ದೇಶನದ ಹೃದಯಪೂರ್ವಂ ಚಿತ್ರವು ಸೂಪರ್ ಹಿಟ್ ಆಗಿತ್ತು.

ಶ್ರೀನಿವಾಸನ್ ಅವರ ನಿಧನದೊಂದಿಗೆ ಮಲಯಾಳಂ ಚಿತ್ರರಂಗ ತನ್ನ ಮಹತ್ವದ ಅಧ್ಯಾಯವೊಂದನ್ನು ಕಳೆದುಕೊಂಡಂತಾಗಿದೆ.

BREAKING NEWS.. ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾಯಕರ್ತೆ ಆತ್ಮಹತ್ಯೆ!

0

ಕಲಬುರಗಿ: ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ನಂದಿಕೂರ ಗ್ರಾಮದ ಬಳಿ ನಡೆದಿದೆ.

ಜ್ಯೋತಿ ಪಾಟೀಲ್ (35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತೆಯಾಗಿದ್ದು, ನಂದಿಕೂರ ಗ್ರಾಮದ ಮಲ್ಲಿನಾಥ್ ಬಿರಾದಾರ್ ಮನೆಗೆ ತೇರಳಿದ್ದ ವೇಳೆ ಈ ಘಟನೆ ನಡೆದಿದೆ.

ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿಯಾಗಿದ್ದು,  ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ ಎಂದು ಹೇಳಲಾಗುತ್ತದೆ.

ಮಲ್ಲಿನಾಥ್ ಬಿರಾದಾರ್ ಪತ್ನಿ ಮೂರು ಜನ ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್; ಪವರ್ ಇಲ್ಲದ ಪ್ರದೇಶಗಳ ಪಟ್ಟಿ ಇಲ್ಲಿದೆ!

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನಿರ್ವಹಣಾ ಕಾಮಗಾರಿ ಪ್ರಯುಕ್ತ ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯ ನೂರಾರು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ. ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಹಾಗೂ ಇನ್ನು ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಪವರ್ ಕಟ್ ಇರಲಿದೆ.

ಎಸ್1-ನಿಮ್ಹಾನ್ಸ್ ಕಿದ್ವಾಯಿ, ಜಯದೇವ, ರಾಜೀವ್‌ಗಾಂಧಿ, ಸಂಜಯಗಾಂಧಿ ಮತ್ತು ಇಂದಿರಾ ಗಾಂಧಿ ಆಸ್ಪತ್ರೆ, 1, 2, 3, 4, 9 ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್ ರಸ್ತೆ, ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ, ಐಎಎಸ್ ಕಾಲೊನಿ, ಕೆಎಎಸ್ ಕಾಲೊನಿ, ಎನ್.ಎನ್.ಪಾಳ್ಯ ಕೈಗಾರಿಕಾ ಪ್ರದೇಶ, ಬಿಎಚ್​ಇಎಲ್ ಲೇಔಟ್, ಎಸ್​​ಆರ್‌ಕೆ ಗಾರ್ಡನ್ಸ್ ತಿಲಕ್ ನಗರ, ಶಾಂತಿ ವಾರ್ಕ್ ಮತ್ತು ಅಪಾರ್ಟ್ ಮೆಂಟ್, ರಂಕಾ ಕಾಲೊನಿ ರಸ್ತೆ, ಜಿಆರ್‌ಬಿ ಮುಖ್ಯರಸ್ತೆ, ಜೈನ ದೇವಾಲಯ ರಸ್ತೆ, ಬಿಟಿಎಂ 4ನೇ ಹಂತದ ಕೆಲವು ಭಾಗಗಳು,

ಬಿಟಿಎಂ 2ನೇ ಹಂತ, ಮಂತ್ರಿ ಅಪಾರ್ಟ್ ಮೆಂಟ್, ಶೋಭಾ ಅಪಾರ್ಟ್ ಮೆಂಟ್, ವೆಗಾಸಿಟಿ ಮಾಲ್, ಬನ್ನೇರುಘಟ್ಟ ಮುರುಗುರಪ್ಪನ ಪಾಳ್ಯ, ಉತ್ತರಹಳ್ಳಿ ಪೂರ್ಣ ಪ್ರಜ್ಞಾ ಲೇಔಟ್, ಬನಶಂಕರಿ 6ನೇ ಹಂತ, ಶ್ರೀನಗರ, ಹೊಸಕರಹಳ್ಳಿ, ತ್ಯಾಗರಾಜನಗರ, ಬಸವನಗುಡಿ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಔಟ್, 100 ಆಡಿ ವರ್ಮುಲ ರಸ್ತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಕಡಿತ ಇರಲಿದೆ.

ಬ್ರಿಗೇಟ್ ರಸ್ತೆ, ಕೇಂಬ್ರಿಡ್ಜ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಚರ್ಚ್ ಸ್ಟ್ರೀಟ್, ಕಮರ್ಶಿಯಲ್ ಸ್ಟ್ರೀಟ್, ಡಿಕನ್ಸನ್ ರಸ್ತೆ, ಇನ್‌ಫೆಂಟ್ರಿ ರಸ್ತೆ, ಈಶ್ವರ ಲೇಔಟ್, ಜೋಗುಪಾಳ್ಯ, ಕಾಮರಾಜ ರಸ್ತೆ, ಎಂ.ಜಿ.ರಸ್ತೆ (ಚಿನ್ನಸ್ವಾಮಿ ಸೇಡಿಯಂ ಸಮೀಪದ ಭಾಗ ಸಹಿತ). ಮ್ಯೂಸಿಯಂ ರಸ್ತೆ, ಪ್ಲೇನ್ ಸ್ಟ್ರೀಟ್, ಪ್ರೆಸ್ಟೀಜ್ ಹೆರ್ಮಿಟೇಜ್ ಅಪಾರ್ಟ್‌ಮೆಂಟ್, ರಿಚ್ಯಂಡ್ ಟೌನ್, ಯೂನಿಯನ್ ಸ್ಟ್ರೀಟ್, ವೆಲಿಂಗ್ಟನ್ ರಸ್ತೆ, ವುಡ್ ಸ್ಟ್ರೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮತ್ತೆ ಸಂಕಷ್ಟದಲ್ಲಿ ಚೈತ್ರಾ ಕುಂದಾಪುರ: ತಂದೆ ನೀಡಿದ ದೂರಿಗೆ ಸ್ಪಂದಿಸಿದ ಕೋರ್ಟ್

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರುವ ಚೈತ್ರಾ ಕುಂದಾಪುರ ಅವರಿಗೆ ಈಗ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ತಂದೆ ಬಾಲಕೃಷ್ಣ ನಾಯ್ಕ್ ಸಲ್ಲಿಸಿದ್ದ ದೂರಿನ ಮೇರೆಗೆ ಹಿರಿಯ ನಾಗರಿಕರ ನ್ಯಾಯಾಲಯ ಚೈತ್ರಾ ವಿರುದ್ಧ ಆದೇಶ ನೀಡಿದ್ದು, ಕುಂದಾಪುರ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಬಾಲಕೃಷ್ಣ ನಾಯ್ಕ್ ಅವರು, ಮಗಳು ಚೈತ್ರಾ ಮತ್ತು ಪತ್ನಿಯಿಂದ ತಮಗೆ ಕಿರುಕುಳವಾಗುತ್ತಿದೆ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ಆದೇಶಿಸಿದ್ದು, ಅವರು ತಮ್ಮ ಮನೆಯಲ್ಲಿ ಭಯವಿಲ್ಲದೆ ವಾಸಿಸುವಂತಾಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ. ಜೊತೆಗೆ, ಈ ವಿಚಾರದಲ್ಲಿ ಚೈತ್ರಾ ಕುಂದಾಪುರ ಅವರಿಂದ ಕಾನೂನುಬದ್ಧ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.

ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ಈ ಮೊದಲು ಸಾರ್ವಜನಿಕವಾಗಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಚೈತ್ರಾ ಮದುವೆ ಸಂದರ್ಭದಲ್ಲಿ ತಂದೆ ವಿರೋಧ ವ್ಯಕ್ತಪಡಿಸಿದ್ದರೆ, ಅದಕ್ಕೆ ಪ್ರತಿಯಾಗಿ ಚೈತ್ರಾ ಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಕಿಡಿಕಾರಿದ್ದರು. ಈ ಘಟನೆಗಳೇ ಕುಟುಂಬದಲ್ಲಿ ಬಿರುಕು ಮೂಡಲು ಕಾರಣವಾಗಿವೆ ಎನ್ನಲಾಗಿದೆ.

ಈ ಹಿಂದೆ ಬಿಗ್ ಬಾಸ್ ಕನ್ನಡ 11ನೇ ಸೀಸನ್‌ನಲ್ಲಿ ಸ್ಪರ್ಧಿಸಿದ್ದ ಚೈತ್ರಾ, ಈಗ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಆದರೆ, ನ್ಯಾಯಾಲಯದ ಈ ಆದೇಶದಿಂದಾಗಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರಬೇಕಾದ ಪರಿಸ್ಥಿತಿ ಉಂಟಾಗುತ್ತದೆಯೇ ಎಂಬುದು ಈಗ ಪ್ರೇಕ್ಷಕರ ಕುತೂಹಲವಾಗಿದೆ.

‘ದ್ವೇಷ ಭಾಷಣ ಮಸೂದೆ’ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶ: ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ

0

ನವದೆಹಲಿ:- ದ್ವೇಷ ಭಾಷಣ ಮಸೂದೆ’ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ‘ದ್ವೇಷ ಭಾಷಣ ಮಸೂದೆ’ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ. ರಾಜ್ಯ ಸರ್ಕಾರ ಈ ಮಸೂದೆ ಮೂಲಕ ಸಂವಿಧಾನದ 19ನೇ ವಿಧಿಯ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದೆ. ಈ ಸರ್ಕಾರದ ಇಂತಹ ನೀತಿಗಳಿಂದಾಗಿ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲದಂತಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬ್ರಿಟಿಷರ ಕಾಲದ ವಸಾಹತು ಶಾಹಿಗಳ ಅಸ್ಪಷ್ಟ ವ್ಯಾಖ್ಯಾನಗಳು, ವ್ಯಾಪಕ ಅಧಿಕಾರದ ದಾಹ ಮತ್ತು ಕಠಿಣ ಕ್ರಿಮಿನಲ್ ಶಿಕ್ಷೆ ಮೂಲಕ ಜನಪರ ಹೋರಾಟವನ್ನು ಹತ್ತಿಕ್ಕಲು ನೋಡಿದೆ. ಈ ಸರ್ಕಾರ ದಬ್ಬಾಳಿಕೆಗಾಗಿ ಇಂತಹ ಕಾನೂನುಗಳನ್ನು ಬಳಸಿಕೊಳ್ಳಲು ನೋಡುತ್ತಿದೆ. ಸಂವಿಧಾನದ ನಿಬಂಧನೆಗಳನ್ನು ಕಿಂಚಿತ್ತೂ ಗೌರವಿಸದೇ ಆಡಳಿತ ನಡೆಸುತ್ತಿದೆ ಎಂದು ಸಚಿವ ಜೋಶಿ ಆಕ್ರೋಶ ಹೊರ ಹಾಕಿದ್ದಾರೆ.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’: ಕಾವ್ಯಾ ಬೈತಿದ್ರೂ ಕ್ಯಾರೆ ಎನ್ನದ ಗಿಲ್ಲಿ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ನಡುವಿನ ಸಂಬಂಧ ಮತ್ತೆ ಬಿಗಡಾಯಿಸಿದೆ. ಡಿಸೆಂಬರ್ 19ರ ಎಪಿಸೋಡ್‌ನಲ್ಲಿ ನಡೆದ ಘಟನೆಗಳು, ಇವರಿಬ್ಬರ ನಡುವಿನ ಅಂತರ ಇನ್ನಷ್ಟು ಹೆಚ್ಚಾಗಿದೆ ಎಂಬುದನ್ನು ತೋರಿಸಿವೆ. ಕಾವ್ಯಾ ನೀಡಿದ ಗಂಭೀರ ಎಚ್ಚರಿಕೆಯನ್ನು ಗಿಲ್ಲಿ ಲಘುವಾಗಿ ತೆಗೆದುಕೊಂಡಿರುವುದು ಮನೆಮಂದಿಯಲ್ಲೂ, ಪ್ರೇಕ್ಷಕರಲ್ಲೂ ಚರ್ಚೆಗೆ ಕಾರಣವಾಗಿದೆ.

ಆರಂಭದಲ್ಲಿ ಜಂಟಿಯಾಗಿ ಆಡಿದ್ದ ಕಾವ್ಯಾ–ಗಿಲ್ಲಿ ಜೋಡಿ, ಪರಸ್ಪರ ಬೆಂಬಲದ ಮೂಲಕ ಗಮನ ಸೆಳೆದಿತ್ತು. ಆದರೆ, ದಿನ ಕಳೆದಂತೆ ಗಿಲ್ಲಿ ಅವರ ವರ್ತನೆ ಕಾವ್ಯಾಗೆ ಅಸಮಾಧಾನ ಮೂಡಿಸಿದೆ. ಹಲವು ಬಾರಿ ತಿದ್ದಿಕೊಳ್ಳುವಂತೆ ಹೇಳಿದರೂ, ಗಿಲ್ಲಿ ತಮ್ಮ ನಿಲುವಿನಲ್ಲಿ ಬದಲಾವಣೆ ತೋರಿಸಿಲ್ಲ ಎಂಬ ಆರೋಪ ಕಾವ್ಯಾರದು.

ಡಿಸೆಂಬರ್ 19ರ ಎಪಿಸೋಡ್‌ನಲ್ಲಿ, ಏರು ಧ್ವನಿಯಲ್ಲಿ ಮಾತನಾಡಿದ ವಿಚಾರದ ಬಗ್ಗೆ ಗಿಲ್ಲಿ ಚಾಕೋಲೇಟ್ ಮೂಲಕ ಇತರ ಸ್ಪರ್ಧಿಗಳಿಗೆ ಸಂದೇಶ ನೀಡಬೇಕಿತ್ತು ಎಂದು ಹೇಳಿದ್ದು, ಇದಕ್ಕೆ ಕಾವ್ಯಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಿಲ್ಲಿ ಕೈ ನೀಡಲು ಯತ್ನಿಸಿದ ಸಂದರ್ಭದಲ್ಲಿಯೂ ಕಾವ್ಯಾ ಅದನ್ನು ನಿರಾಕರಿಸಿದ್ದು, ಇಬ್ಬರ ನಡುವಿನ ತಣಿವು ಸ್ಪಷ್ಟವಾಗಿ ಕಾಣಿಸಿಕೊಂಡಿತು.

ಇದೇ ವೇಳೆ, ಗಿಲ್ಲಿ ಮೊಟ್ಟೆ ತೆಗೆದುಕೊಳ್ಳಲು ಮುಂದಾದಾಗ ಕಾವ್ಯಾ ಕೋಪಗೊಂಡು ಮಾನ-ಮರ್ಯಾದೆ ಮತ್ತು ಸ್ವಾಭಿಮಾನ ಕುರಿತು ಕಠಿಣ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಗಿಲ್ಲಿ ಶಾಂತವಾಗಿಯೇ ಪ್ರತಿಕ್ರಿಯಿಸಿದ್ದು, “ನನಗೆ ಮಾನ-ಮರ್ಯಾದೆ ಇದೆ” ಎಂದು ಹೇಳಿದ್ದಾರೆ. ಈ ಘಟನೆಯ ಬಳಿಕ ಕಾವ್ಯಾ–ಗಿಲ್ಲಿ ನಡುವಿನ ಸಮೀಕರಣ ಯಾವ ದಿಕ್ಕಿಗೆ ಹೋಗಲಿದೆ ಎಂಬ ಕುತೂಹಲ ಬಿಗ್ ಬಾಸ್ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ.

ಪಾತ್ರೆ ತೊಳೆಯುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಯಾಕೆ ಗೊತ್ತಾ..?

0

ಮನೆಯ ಸದಸ್ಯರ ಒಟ್ಟಾರೆ ಆರೋಗ್ಯವು ಬಹುಮಟ್ಟಿಗೆ ಅಡುಗೆ ಮನೆಯ ಮೇಲೆ ಅವಲಂಬಿತವಾಗಿರುತ್ತದೆ. ಅಡುಗೆಗೆ ಬಳಸುವ ಆಹಾರ ಪದಾರ್ಥಗಳು, ಪಾತ್ರೆಗಳು, ನೀರು ಹಾಗೂ ಅಡುಗೆ ಮನೆಯ ಸ್ವಚ್ಛತೆ, ಇವುಗಳು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ. ಆದ್ದರಿಂದ ಅಡುಗೆಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಂತ ಅಗತ್ಯ. ವಿಶೇಷವಾಗಿ, ಪಾತ್ರೆಗಳನ್ನು ಸರಿಯಾದ ರೀತಿಯಲ್ಲಿ ತೊಳೆಯುವುದು ಬಹಳ ಮುಖ್ಯ.

ಸಾಮಾನ್ಯವಾಗಿ ಎಲ್ಲರೂ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆಯುತ್ತಾರೆ. ಆದರೆ ಪಾತ್ರೆ ತೊಳೆಯುವ ವೇಳೆ ನಾವು ಅರಿವಿಲ್ಲದೆ ಮಾಡುವ ಕೆಲವು ತಪ್ಪುಗಳು ಆರೋಗ್ಯಕ್ಕೆ ಋಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ. ಆ ತಪ್ಪುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

ಹೆಚ್ಚು ಡಿಟರ್ಜೆಂಟ್ ಬಳಸುವುದು

ಪಾತ್ರೆಗಳು ಚೆನ್ನಾಗಿ ಸ್ವಚ್ಛವಾಗಲು ಹೆಚ್ಚು ಡಿಟರ್ಜೆಂಟ್ ಬಳಸಬೇಕು ಎಂದು ಅನೇಕರು ಭಾವಿಸುತ್ತಾರೆ. ಆದರೆ ಇದು ತಪ್ಪು. ಹೆಚ್ಚು ಡಿಟರ್ಜೆಂಟ್ ಅಥವಾ ಲಿಕ್ವಿಡ್ ಬಳಸುವುದರಿಂದ ಪಾತ್ರೆಗಳ ಮೇಲೆ ರಾಸಾಯನಿಕ ಪದರ ಉಳಿಯುವ ಸಾಧ್ಯತೆ ಇದೆ. ಇದು ಆಹಾರಕ್ಕೆ ಸೇರಿಕೊಂಡರೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದ್ದರಿಂದ ಅಗತ್ಯವಿರುವಷ್ಟು ಪ್ರಮಾಣದ ಡಿಟರ್ಜೆಂಟ್ ಮಾತ್ರ ಬಳಸುವುದು ಉತ್ತಮ.

ಬಿಸಿನೀರಿನ ಅತಿಯಾದ ಬಳಕೆ

ಪಾತ್ರೆಗಳನ್ನು ಬೇಗನೆ ಸ್ವಚ್ಛಗೊಳಿಸಲು ಅನೇಕರು ಬಿಸಿನೀರನ್ನು ಬಳಸುತ್ತಾರೆ. ಆದರೆ ಪ್ಲಾಸ್ಟಿಕ್ ಹಾಗೂ ನಾನ್-ಸ್ಟಿಕ್ ಪಾತ್ರೆಗಳನ್ನು ಬಿಸಿನೀರಿನಿಂದ ತೊಳೆಯುವುದು ಅಪಾಯಕಾರಿಯಾಗಿದೆ. ಬಿಸಿನೀರು ಪ್ಲಾಸ್ಟಿಕ್‌ನಿಂದ ಹಾನಿಕಾರಕ ಅಂಶಗಳನ್ನು ಹೊರಹಾಕಬಹುದು. ಜೊತೆಗೆ ನಾನ್-ಸ್ಟಿಕ್ ಪಾತ್ರೆಗಳ ಲೇಪನಕ್ಕೂ ಹಾನಿಯಾಗುತ್ತದೆ. ಇದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

ಸ್ಪಾಂಜ್ ಮತ್ತು ಸ್ಕ್ರಬ್ಬರ್‌ಗಳನ್ನು ಸ್ವಚ್ಛಗೊಳಿಸದಿರುವುದು

ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್ ಮತ್ತು ಸ್ಕ್ರಬ್ಬರ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದಿದ್ದರೆ, ಅವುಗಳಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ. ಇಂತಹ ಸ್ಪಾಂಜ್‌ಗಳಿಂದ ಪಾತ್ರೆ ತೊಳೆಯುವುದರಿಂದ ಪಾತ್ರೆಗಳು ಇನ್ನಷ್ಟು ಕಲುಷಿತಗೊಳ್ಳುತ್ತವೆ. ಆದ್ದರಿಂದ ಸ್ಪಾಂಜ್ ಅನ್ನು ವಾರಕ್ಕೊಮ್ಮೆ ಬದಲಾಯಿಸುವುದು ಮತ್ತು ಸ್ಕ್ರಬ್ಬರ್ ಅನ್ನು ಬಿಸಿ ನೀರಿನಲ್ಲಿ ನೆನೆಸಿ ಸ್ವಚ್ಛಗೊಳಿಸುವುದು ಅಗತ್ಯ.

ನಾನ್-ಸ್ಟಿಕ್ ಪಾತ್ರೆಗಳಿಗೆ ಸ್ಟೀಲ್ ಸ್ಕ್ರಬ್ಬರ್ ಬಳಕೆ

ನಾನ್-ಸ್ಟಿಕ್ ಪಾತ್ರೆಗಳನ್ನು ತೊಳೆಯಲು ಸ್ಟೀಲ್ ಸ್ಕ್ರಬ್ಬರ್ ಬಳಸುವುದು ಮತ್ತೊಂದು ದೊಡ್ಡ ತಪ್ಪು. ಇದರಿಂದ ಪಾತ್ರೆಯ ಮೇಲಿನ ಲೇಪನ ಹಾನಿಯಾಗುತ್ತದೆ ಮತ್ತು ಹಾನಿಕಾರಕ ರಾಸಾಯನಿಕಗಳು ಹೊರಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ನಾನ್-ಸ್ಟಿಕ್ ಪಾತ್ರೆಗಳನ್ನು ಸದಾ ಮೃದುವಾದ ಸ್ಪಾಂಜ್‌ನಿಂದಲೇ ತೊಳೆಯಬೇಕು.

ಪಾತ್ರೆಗಳನ್ನು ಸಿಂಕ್‌ನಲ್ಲಿ ಹೆಚ್ಚು ಹೊತ್ತು ಇಡುವುದು

ಕೊಳಕು ಪಾತ್ರೆಗಳನ್ನು ಸಿಂಕ್‌ನಲ್ಲಿ ಹೆಚ್ಚು ಸಮಯ ಇಡುವುದರಿಂದ ಅವುಗಳಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ ಹಾಗೂ ದುರ್ವಾಸನೆ ಬರುತ್ತದೆ. ಊಟ ಮಾಡಿದ ತಕ್ಷಣ ಪಾತ್ರೆಗಳನ್ನು ತೊಳೆಯುವುದರಿಂದ ಅಡುಗೆಮನೆ ಸ್ವಚ್ಛವಾಗಿರುತ್ತದೆ ಮತ್ತು ಆರೋಗ್ಯವೂ ಸುರಕ್ಷಿತವಾಗಿರುತ್ತದೆ.

error: Content is protected !!