Home Blog Page 3017

ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಪಾಟೀಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ

ಅಭಿವೃದ್ಧಿಯೆಡೆಗೆ ಸಾಗುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ ಅವರು ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಶನಿವಾರ ಏರ್ಪಡಿಸಲಾದ ನರಗುಂದ ಪುರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನರಗುಂದದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು 550 ಲಕ್ಷ ರೂ.ಗಳಲ್ಲಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದರು. ಅದೇ ರೀತಿ ಬಹುದಿನಗಳ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಯಾಗಿದ್ದ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 30 ಲಕ್ಷ ರೂ.ಗಳಲ್ಲಿ ಕೈಗೊಳ್ಳಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಸಚಿವ ಪಾಟೀಲ ಹೇಳಿದರು.

ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದರಿಂದ ಜನಜೀವನ ಯಥಾಸ್ಥಿತಿಗೆ ಮರಳುತ್ತಿದ್ದು ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತಿದೆ. ಈ ಆದಾಯವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯಡೆಗೆ ಕೊಂಡೊಯ್ಯೋಣವೆಂದರು.

ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ತಹಸೀಲ್ದಾರ ಪ್ರಶಾಂತ , ಪ್ರಮುಖರಾದ ಹಾಲಪ್ಪನವರ, ಎಮ್.ಎಸ್. ಪಾಟೀಲ, ಅಜ್ಜಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು.

ರೈತರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ : ಆನಂದ್ ಸಿಂಗ್

0

ತುಂಗಭದ್ರಾ ಜಲಾಶಯ 114ನೇ ನೀರಾವರಿ ಸಲಹಾ ಸಮಿತಿ ಸಭೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲ ದಂಡೆ ಕಾಲುವೆಗಳ ವ್ಯಾಪ್ತಿಯ ರೈತರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಅವರು ಇಂದು ಮುನಿರಾಬಾದ್‌ನ ಕಾಡಾ ಕಚೇರಿಯಲ್ಲಿ ನಡೆದ ತುಂಗಭದ್ರ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 114ನೇ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಂದು ವೇಳೆ ನೀರಿನ ತೊಂದರೆ ಯಾಗುವ ಲಕ್ಷಣಗಳು ಕಂಡುಬಂದರೆ ಮುಂಜಾಗೃತೆಯಾಗಿ ನೀರಾವರಿ ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದೇವರ ದಯೆಯಿಂದ ನೀರಿನ ಹರಿವು ಪ್ರಮಾಣ ಹೆಚ್ಚಾದರೆ ನಮಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಾವೆಲ್ಲರೂ ಈ ಹಿಂದೆ ತುಂಗಭದ್ರಾ ಡ್ಯಾಂನ ನೀರಿನ ಬಳಕೆ ಕುರಿತು ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳ ನಡುವೆ ಮಾಡಿಕೊಂಡಿರುವ ಬೆಳೆಗಳನ್ನು ಬೆಳೆಯುವ ಒಪ್ಪಂದವನ್ನು ನಾವು ಯಾರೂ ಪಾಲಿಸುತ್ತಿಲ್ಲ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಹೆಕ್ಟೆರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದೇವೆ. ಹೀಗಾಗಿ ನೀರಿನ ಸಮಸ್ಯೆಯಾಗುತ್ತಿದೆ ಎಂದರು.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ

ನ. 25 ರಿಂದ ಡಿಸೆಂಬರ್. 02 ರವರೆಗೆ ಮೈಲ್-104ರ ಮೇಲ್ಭಾಗದಲ್ಲಿ ಬರುವ ವಿತರಣಾ ಕಾಲುವೆಗಳನ್ನು ನಿಯಂತ್ರಿಸಿ ಗಣೇಕಲ್ ಜಲಾಶಯಕ್ಕೆ ನೀರನ್ನು ಸಂಗ್ರಹಿಸಿಕೊಳ್ಳುವುದು ಹಾಗೂ ರಾಯಚೂರು ನಗರ/ ಪಟ್ಟಣಗಳಿಗೆ ಕುಡಿಯುವ ನೀರಿಗಾಗಿ ಮತ್ತು ವಿತರಣಾ ಕಾಲುವೆ ಅಡಿ ನಿಂತಿರುವ ಬೆಳೆಗಳನ್ನು ಸಂರಕ್ಷಿಸುವುದು. ಡಿ. 01 ರಿಂದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಲಭ್ಯವಾಗಬಹುದಾದ, ಡಿ. 01 ರಿಂದ 20 ರವರೆಗೆ 2400 ಕ್ಯೂಸೆಕ್ಸನಂತೆ 20 ದಿನಗಳಿಗೆ, ಡಿ. 21 ರಿಂದ 31 ರವರೆಗೆ 3300 ಕ್ಯೂಸೆಕ್ಸನಂತೆ 101 ದಿನಗಳಿಗೆ, 2021ರ ಏಪ್ರಿಲ್. 01 ರಿಂದ ಮೇ. 10 ರವರೆಗೆ ಎಡದಂಡೆ ವಿಜಯನಗರ ಕಾಲುವೆಗಳಿಗಾಗಿ 100 ಕ್ಯೂಸೆಕ್ಸ್ನಂತೆ 40 ದಿನಗಳಿಗೆ, ಏ. 01 ರಿಂದ 10 ರವರೆಗೆ 2000 ಕ್ಯೂಸೆಕ್ಸನಂತೆ 10 ದಿನಗಳಿಗೆ ಕುಡಿಯುವ ನೀರಿಗಾಗಿ (ಈ ಅವಧಿಯಲ್ಲಿ ಫೆಬ್ರವರಿ. 15ರ ಬೆಳಗ್ಗೆ 08 ರಿಂದ ಫೆ. 20ರ ಬೆಳಗ್ಗೆ 08 ರವರೆಗೆ ತಖ್ತೆ-2ರಲ್ಲಿ ತೋರಿಸಿದಂತೆ ವಡ್ಡರಹಟ್ಟಿ, ಸಿಂಧನೂರು ವಿಭಾಗಗಳ ವಿತರಣಾ ಕಾಲುವೆಗಳನ್ನು ಆನ್/ಆಫ್ ಮಾಡಿ ಮೈಲ್-104 ರಲ್ಲಿ ಬರುವ ಸಮತೋಲನ ಜಲಾಶಯಕ್ಕೆ ಪೂರೈಕೆ ಮಾಡಿ ಸಂಗ್ರಹಿಸಿಕೊಂಡು ಯರಮರಸ್ ವಿಭಾಗದ ಅಚ್ಚುಕಟ್ಟಿನಲ್ಲಿ ನಿಂತಿರುವ ಬೆಳಗಳನ್ನು ಸಂರಕ್ಷಿಸುವುದು ಹಾಗೂ ರಾಯಚೂರು ಮತ್ತು ಇತರೆ ಕುಡಿಯುವ ನೀರು ಯೋಜನೆಗಳಿಗೆ ನೀರು ಒದಗಿಸುವುದು.) ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ

ಡಿಸೆಂಬರ್. 01 ರಿಂದ 10 ರವರೆಗೆ 10 ದಿನಗಳಿಗೆ ನೀರು ನಿಲುಗಡೆ. ಡಿ. 11 ರಿಂದ 20 ರವರೆಗೆ 750 ಕ್ಯೂಸೆಕ್ಸನಂತೆ 10 ದಿನಗಳಿಗೆ, ಡಿ. 21 ರಿಂದ 31 ರವರೆಗೆ 11 ದಿನಗಳಿಗೆ ನೀರು ನಿಲುಗಡೆ. 2021ರ ಜನವರಿ. 01 ರಿಂದ 15 ರವರೆಗೆ 770 ಕ್ಯೂಸೆಕ್ಸನಂತೆ 15 ದಿನಗಳಿಗೆ ಕಾಲುವೆಯಡಿ ಲಭ್ಯತೆ ಇರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ. ಹರಿವಿನ ಪ್ರಮಾಣಗಳು ಟ್ರಾನ್ಸಮಿಷನ್ ಲಾಸ್‌ಗಳನ್ನೊಳಗೊಂಡಿರುತ್ತವೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ

ಡಿ. 01 ರಿಂದ 25 ರವರೆಗೆ 250 ಕ್ಯೂಸೆಕ್ಸನಂತೆ 25 ದಿನಗಳಿಗೆ, ಡಿ. 26 ರಿಂದ 31 ರವರೆಗೆ 660 ಕ್ಯೂಸೆಕ್ಸನಂತೆ 100 ದಿನಗಳಿಗೆ ದಿನಾಂಕ ಏಪ್ರಿಲ್. 01 ರಿಂದ 10 ರವರೆಗೆ 200 ಕ್ಯೂಸೆಕ್ಸನಂತೆ 10 ದಿನಗಳಿಗೆ ಕುಡಿಯುವ ನೀರಿನ ಸಲುವಾಗಿ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ. ಹರಿವಿನ ಪ್ರಮಾಣಗಳು ಟ್ರಾನ್ಸಮಿಷನ್ ಲಾಸ್‌ಗಳನ್ನೊಳಗೊಂಡಿರುತ್ತವೆ.

ರಾಯಾ ಬಸವಣ್ಣ ಕಾಲುವೆ

ನವೆಂಬರ್. 16 ರಿಂದ 2021ರ ಜನವರಿ. 15 ರವರೆಗೆ 61 ದಿನಗಳಿಗೆ ನೀರು ನಿಲುಗಡೆ. ಜನವರಿ. 16 ರಿಂದ ಮೇ. 31 ರವರೆಗೆ 180 ಕ್ಯೂಸೆಕ್ಸನಂತೆ 136 ದಿನಗಳಿಗೆ ರವರೆಗೆ ಅಥವಾ ಈ ಕಾಲುವೆಯಡಿ ನೀರು ಲಭ್ಯವಿರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ

ಡಿಸೆಂಬರ್. 01 ರಿಂದ 25ಕ್ಯೂಸೆಕ್ಸ ನಂತೆ ಅಥವಾ ಕಾಲುವೆಯ ಮಟ್ಟ 1585.00 ಅಡಿ ತಲುಪುವವರೆಗೆ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ತುಂಗಭದ್ರಾ ಯೋಜನೆಯ 114ನೇ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಎಡದಂಡೆ ಕಾಲುವೆ, ಬಲದಂಡೆ ಕಾಲುವೆಗಳಿಗೆ ಹಾಗೂ ವಿಜಯನಗರ ಕಾಲುವೆಗಳಿಗೆ ಮಿತ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗಾಗಿ ನೀರು ಬಿಡುವ ಬಗ್ಗೆ ಸುಧೀರ್ಘವಾಗಿ ಮತ್ತು ವಿಸ್ತೃತವಾಗಿ ಚರ್ಚಿಸಿ ಈ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಮಾತನಾಡಿ, ನಮ್ಮ ರೈತರು ಭತ್ತದ ಬೆಳೆ ಒಂದನ್ನೇ ಬೆಳೆಯದೇ ಪ್ರತಿ ವರ್ಷ ಒಂದೊಂದು ಬೆಳೆಗಳನ್ನು ಬದಲಾಯಿಸಿ ತಮ್ಮ ಹೊಲ-ಗದ್ದೆಗಳಲ್ಲಿ ಬೆಳೆಯಬೇಕು. ಇದರಿಂದ ಭೂಮಿಯ ಫಲವತ್ತತೆ ನಾಶವಾಗದೇ ಇಳುವರಿಯೂ ಹೆಚ್ಚುತ್ತದೆ. ಆದರೆ, ಈ ಭಾಗದ ರೈತರು ಹೆಚ್ಚಾಗಿ ಭತ್ತವನ್ನು ಪ್ರತಿ ಬಾರಿ ಬೆಳೆಯುತ್ತಿರುವುದರಿಂದ ನೀರಿನ ಸಮಸ್ಯೆ ಮಾತ್ರವಲ್ಲ ಭೂಮಿಯ ಫಲವತ್ತತೆಯೂ ಕಡಿಮೆ ಯಾಗುತ್ತದೆ. ರೈತರು ತಮ್ಮ ಭೂಮಿಯ ಫಲವತ್ತತೆ ಕಡೆಗೆ ಹೆಚ್ಚಿನ ಒತ್ತು ನೀಡಬೇಕು ಅಂದಾಗ ಮಾತ್ರ ಭೂಮಿಯನ್ನು ದೀರ್ಘ ಕಾಲದವರೆಗೆ ಸಂರಕ್ಷಿಸಬಹುದು ಎಂದು ಹೇಳಿದರು.

ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಮಾತನಾಡಿ, ಈ ಬಾರಿ ಅತಿಯಾಗಿ ಮಳೆಯಾಗಿರುವುದರಿಂದ ತುಂಗಭದ್ರಾ ಎಡದಂಡೆ ಕಾಲುವೆ ಭಾಗಗಳಲ್ಲಿ ಬಿತ್ತನೆ ತಡವಾಗಿ ಮಾಡಲಾಗಿದೆ. ಮಸ್ಕಿ ಮತ್ತು ಜವಳಗೇರಾ ಉಪ ವಿಭಾಗದಲ್ಲಿ ಜೋಳ, ಸೂರ್ಯಕಾಂತಿ ಹೆಚ್ಚಾಗಿ ಬಿತ್ತನೆಯಾಗಿರುವುದರಿಂದ ಜನವರಿ. 15 ರವರೆಗೆ ನೀರು ಬೇಕಾಗುತ್ತದೆ ಎಂದು ರೈತರು ಹೇಳುತ್ತಿದ್ದಾರೆ. ಹಾಗಾಗಿ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಸಿರಗುಪ್ಪಾ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ವಿಧಾನ ಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಕೊಪ್ಪಳ ಎಸ್.ಪಿ ಟಿ.ಶ್ರೀಧರ್, ರಾಯಚೂರು ಎಸ್.ಪಿ ನಿಕಮ್ ಪ್ರಕಾಶ ಅಮ್ರಿತ್ ಹಾಗೂ ಮುನಿರಾಬಾದ್ ಕಾಡಾ ಕಚೇರಿಯ ಮುಖ್ಯ ಇಂಜಿನಿಯರ್ ಎಸ್.ಹೆಚ್.ಮಂಜಪ್ಪ, ಅಧೀಕ್ಷಕ ಅಭಿಯಂತರರಾದ ಬಸವರಾಜ ಹಾಗೂ ಪ್ರಕಾಶ, ವಡ್ಡರಹಟ್ಟಿ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ ವಲ್ಕ್ಯಾಪುರ ಸೇರಿದಂತೆ ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಮತ್ತು ನೀರಾವರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಪ್ಪತಗುಡ್ಡದ ಹಸಿರಿಗೆ ಮತ್ತೆ ಬೆಂಕಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಜಿಲ್ಲೆಯ ಸಹ್ಯಾದ್ರಿ ಕಪ್ಪತಗುಡ್ಡದ ಹಸಿರಿನ ವೈಭವದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ದಟ್ಟವಾದ ಹೊಗೆಯಲ್ಲಿ ಕಪ್ಪತಗುಡ್ಡ ಆವರಿಸಿಕೊಂಡಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಬಳಿಯ ಕಪ್ಪತಮಲ್ಲಯ್ಯನ ದೇವಸ್ಥಾನದ ಬಳಿ‌ ಇಂದು ಮಧ್ಯಾಹ್ನ ಬೆಂಕಿ ಬಿದ್ದಿದೆ.
ಇದರಿಂದಾಗಿ ಅಪಾರ ಪ್ರಮಾಣದ ಆಯುರ್ವೇದ ಔಷಧೀಯ ಸಸ್ಯಗಳು ಸುಟ್ಟಿವೆ.

ಕಳೆದ ಬುಧವಾರವೂ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಬೆಂಕಿ ಕಪ್ಪತ್ತಮಲ್ಲಯ್ಯನ ಗುಡ್ಡದವರೆಗೂ ಹರಡಿತ್ತು.

ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣಗಳು ಕಂಡು ಬರುತ್ತಿದ್ದವು.

ಡಿಎಫ್ಒ ಸ್ಪಷ್ಟನೆ

ಕಪ್ಪತಗುಡ್ಡದಲ್ಲಿ ಯಾವುದೇ ಬೆಂಕಿ ಅವಘಡ ಸಂಭವಿಸಿಲ್ಲ. ಬೇಸಿಗೆ ಸಮಯಯ ಸಂಭವಿಸುವ ಬೆಂಕಿಯನ್ನು ತಪ್ಪಿಸುವ ಉದ್ದೇಶದಿಂದ ಅರಣ್ಯ ಇಲಾಖೆಯಿಂದ ಕೈಗೊಂಡಿರುವ ಫೈರ್ ಲೈನ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಬೆಂಕಿ ಹೊತ್ತಿಲ್ಲ ಎಂದು ಡಿಎಫ್ಒ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.

ಇದು ಆತ್ಮಹತ್ಯೆ ಅಲ್ಲ: ಹಿಟ್ ಆಂಡ್ ರನ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಮುಳಗುಂದನಾಕಾದಲ್ಲಿ ಮಧ್ಯರಾತ್ರಿ ನಡೆದಿದ್ದ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅದು ಸುಸೈಡ್ ಅಲ್ಲ ಬದಲಾಗಿ ಹಿಟ್ ಆಂಡ್ ರನ್ ಕೇಸ್ ಎಂದು.

ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಶುಕ್ರವಾರ ‌ಮಧ್ಯರಾತ್ರಿ ಮುಳಗುಂದನಾಕಾದಲ್ಲಿ ಯುವಕನೋರ್ವ ರಸ್ತೆ ದಾಟುತ್ತಿದ್ದಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಪಡಿಸಿ ಪರಾರಿಯಾಗಿತ್ತು. ನಂತರ ಆ ಯುವಕ ಮೃತಪಟ್ಟಿದ್ದ. ಮೃತಪಟ್ಟವನ ಬಗ್ಗೆ ಮೊದಲು ಮಾಹಿತಿ ಇರಲಿಲ್ಲ. ಮಧ್ಯಾಹ್ನದ ಹೊತ್ತಿಗೆ ಮೃತನ ಬಗ್ಗೆ ಮಾಹಿತಿ ಸಿಕ್ಕಿದ್ದು, ಗದಗನ‌ ರಹಮತ್ ನಗರ ನಿವಾಸಿ ನಾಗರಾಜ್ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ ಚಲಿಸುವ ಲಾರಿಯಡಿ ಬಿದ್ದು ಯುವಕ ಆತ್ಮಹತ್ಯೆ

ಈ ಮೊದಲು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಈಗ ಮೃತನ ಕುಟುಂಬದವರು, ಯಾವುದೋ ಗಾಡಿ ಡಿಕ್ಕಿ ಹೊಡೆದಿದ್ದರಿಂದಲೇ ನಾಗರಾಜ್ ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡಿಕ್ಕಿ ಪಡಿಸಿ ಪರಾರಿಯಾದ ಚಾಲಕ ಹಾಗೂ ಲಾರಿ ಪತ್ತೆಗಾಗಿ ಜಾಲ ಬೀಸಿದ್ದಾರೆ.

ಶಾಸಕ ಯತ್ನಾಳ ಗಡಿಪಾರು ಮಾಡಲು ಒತ್ತಾಯಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಕನ್ನಡ ಪರ ಸಂಘಟನೆಗಳ ಹೋರಾಟಗಾರರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜಾಪುರ ಶಾಸಕ ಬಸನಗೌಡ್ ಪಾಟೀಲ ಯತ್ನಾಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದೆ.

ಗದಗನಲ್ಲೂ ಕರವೇ ಕಾರ್ಯಕರ್ತರು ಗಡಿಪಾರು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ನೂರಾರು ಕಾರ್ಯಕರ್ತರು, ಯತ್ನಾಳ ಅವರ ಪ್ರತಿಕೃತಿ ದಹನಕ್ಕೆ ಮುಂದಾದರು. ಈ ವೇಳೆ ತಡೆಯಲು ಬಂದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಪ್ರತಿಕೃತಿ ದಹನಕ್ಕೆ ಅವಕಾಶ ನೀಡದ ಪೊಲೀಸರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಎಚ್ ಎಸ್ ಸೋಂಪೂರ, ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ, ಯುವಘಟಕದ ಜಿಲ್ಲಾಧ್ಯಕ್ಷ ನಿಂಗನಗೌಡ ಪಾಟೀಲ, ಶರಣು ಗೋಡಿ, ಬಸವರಾಜ್ ಸೇರಿದಂತೆ ಕಾರ್ಯಕರ್ತರು ಇದ್ದರು.

ಚಲಿಸುವ ಲಾರಿಯಡಿ ಬಿದ್ದು ಯುವಕ ಆತ್ಮಹತ್ಯೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಭಾರಿ ಗಾತ್ರದ ಚಲಿಸುವ ಲಾರಿಯಡಿ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಗದಗನ ಮುಳಗುಂದನಾಕಾದಲ್ಲಿ ರಾತ್ರಿ‌ ನಡೆದಿದೆ.

ಮಧ್ಯರಾತ್ರಿ ನಡೆದ ಈ ದುರ್ಘಟನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು ವಿಳಾಸ ಪೊಲೀಸರಿಗೆ ಇನ್ನೂ ತಿಳಿದು ಬಂದಿಲ್ಲ.

ಸ್ಥಳೀಯರು ಹಾಗೂ ಪೊಲೀಸರು ಹೇಳುವ ಪ್ರಕಾರ ಈ ಯುವಕ ಕೆಇಬಿ‌ ಕಚೇರಿಯ ರಸ್ತೆಯಿಂದ ಆಗಮಿಸಿ ನಾಕಾದಲ್ಲಿ ಡಿವೈಡರ್ ಮೇಲೆ ನಿಂತು ಲಾರಿ ಬಂದಿದ್ದು ನೋಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸುದ್ದಿ ತಿಳಿದ ಟ್ರಾಫಿಕ್ ಪಿಎಸ್ಐ ಕಮಲಾ‌ ದೊಡ್ಡಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಾರಿಗಾಗಿ ಶೋಧ ನಡೆಸಿದ್ದಾರೆ.

ಕೊವಿಡ್-19: ಶುಕ್ರವಾರದ ಗದಗ ಜಿಲ್ಲೆಯ ಸ್ಥಿತಿಗತಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ನವೆಂಬರ್ 20 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 115598 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 119325 ಮಾದರಿಗಳಲ್ಲಿ 108347 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 330 ಮಾದರಿಗಳ ವರದಿ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಇಂದಿನ 11 ಪ್ರಕರಣಗಳು ಸೇರಿದಂತೆ ಒಟ್ಟು 10648 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ ಆರು ಜನ ಸೇರಿದಂತೆ ಒಟ್ಟು 10443 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 64 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.

ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; ಮೂವರು ಸ್ಥಳದಲ್ಲೇ ಸಾವು

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.
ನಿಟ್ಟಾಲಿ ಕಡೆಯಿಂದ ಬಂದ ಬೈಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ನೂತನವಾಗಿ ನಿರ್ಮಿಸಿರುವ ರಸ್ತೆಗೆ ವೇಗ ನಿಯಂತ್ರಣಗಳನ್ನು ಅಳವಡಿಸದಿರುವುದೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶ್ರೀಧರ್ ತಿಳಿಸಿದ್ದಾರೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಜಿತ್ ಪವಾರ್ ಗೆ ತಲೆನೇ ಇಲ್ಲಾ: ಸಚಿವ ಪ್ರಭು ಚವ್ಹಾಣ ಆಕ್ರೋಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬೆಳಗಾವಿ ನಮಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗದಗನ ಪಶು ವೈದ್ಯಕೀಯ ವಿಶ್ವವಿದ್ಯಾಲಯ ದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾತನಾಡಿದ ಸಚಿವ ಪ್ರಭು ಚವ್ಹಾಣ, ಅಜಿತ್ ಪವಾರ್ ಗೆ ತಲೆನೇ ಇಲ್ಲಾ, ಆತ ಡಬಲ್ ಗೇಮ್ ವ್ಯಕ್ತಿ ಅಂತ ಕಿಡಿ ಕಾರಿದರು. ಗಡಿ ವಿಷಯದಲ್ಲಿ ರಾಜ್ಯದ ಒಂದಿಂಚು ಜಾಗೆಯನ್ನು ಬಿಟ್ಟು ಕೊಡಲ್ಲಾ ಎಂದರು.

ಕರ್ನಾಟಕದ ಜಾಗೆ ನಮ್ಮದು ಅನ್ನುವುದು ದಡ್ಡತನ ಪರಮಾವಧಿ‌. ಅಜಿತ್ ಪವಾರ್ ಡಬಲ್ ಸ್ಟ್ಯಾಂಡರ್ಡ್‌ ವ್ಯಕ್ತಿ, ಅವರಿಗೆ ತಲೆ ಇಲ್ಲಾ ರಾತ್ರೋರಾತ್ರಿ ನಾಯಕನಾದವನು. ಅಂತವನ ಮಾತಿಗೆ ಕಿಮ್ಮತ್ತು ಕೊಡುವುದು ಅಗತ್ಯವಿಲ್ಲಾ ಅಂತಾ ವಾಗ್ದಾಳಿ ನಡೆಸಿದರು.

ಗಡಿ ಬಗ್ಗೆ ಸಾಂಗ್ಲಿ, ಸೊಲ್ಲಾಪುರಗೆ ಬಂದು ಮಾತನಾಡುತ್ತೇನೆ ಎಂದು ಉದ್ದಟತನ ತೋರಿದ ಅಜಿತ ಪವಾರ್ ಗೆ ಧೈರ್ಯವಿದ್ದರೆ ಕರ್ನಾಟಕ ಕ್ಕೆ ಬಂದು ಮಾತನಾಡಲಿ ಎಂದು ಸವಾಲು ಹಾಕಿದರು.

ಅಜಿತ ಪವಾರನದು ಬರಿ ಬೆಂಕಿ ಹಚ್ಚುವ ಕೆಲಸ. ಅದೇ ಅವರ ಉದ್ಯೋಗ, ಮಹಾರಾಷ್ಟ್ರದಲ್ಲೂ ಬರಿ ಬೆಂಕಿ ಹಚ್ಚುವ ಕೆಲಸ ಮಾಡ್ತಾನೆ ಬಂದಿದ್ದಾರೆ. ಮಹಾರಾಷ್ಟ್ರ ಜನರೇ ಕಿಮ್ಮತ್ತು ಕೊಡಲ್ಲಾ, ಇನ್ನು ಕರ್ನಾಟಕ ಜನ ಕಿಮ್ಮತ್ತು ಕೊಡೊದೆ ಇರೋದು ಯಾವ ಲೆಕ್ಕ ಅಂತ ಸಚಿವ ಪ್ರಭು ವ್ಯಂಗ್ಯ ವಾಡಿದರು.

error: Content is protected !!