Home Blog Page 3018

ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲಾಗುವುದು ಕಡ್ಡಾಯ!

ವಿಜಯಸಾಕ್ಷಿ ಸುದ್ದಿ, ದಾವಣಗೆರೆ

ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಲು ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರು ಕಾರಣ. ಹೀಗಾಗಿ ಇನ್ನು ಮುಂದೆ ಕೊರೊನಾ ಸೋಂಕಿತರಿಗೆ ಹೋಂ ಐಸೋಲೇಷನ್‌ ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡುವುದಿಲ್ಲ. ಅವರು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿಯೇ ದಾಖಲಾಗಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಕೋವಿಡ್‌ ಸೋಂಕಿತರಿಗೆ ಇನ್ನು ಮುಂದೆ ಹೋಂ ಐಸೋಲೇಷನ್‌ ಇರುವುದಿಲ್ಲ. ಅವರು ನೇರವಾಗಿ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿ ದಾಖಲಾಗಬೇಕು. ಹೀಗಾಗುವುದರಿಂದ ಸೋಂಕು ಹರಡುವುದನ್ನು ತಡೆಯಬಹುದು. ಉತ್ತಮ ಸೌಲಭ್ಯವಿರುವ ಹಾಸ್ಟೆಲ್‌, ಸರ್ಕಾರಿ-ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕು ಕಂಡು ಬಂದಿದ್ದು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವಂತೆ ಮಾಡಲಾಗಿದೆ. ಅಗತ್ಯವಿರುವ ಔಷಧಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿ – ಸೋನಿಯಾ ಗಾಂಧಿ ಮನವಿ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ದೇಶದಲ್ಲಿ ಕೊರೊನಾದೊಂದಿಗೆ ಬ್ಲ್ಯಾಕ್ ಫಂಗಸ್ ನ ಹಾವಳಿ ಕೂಡ ಶುರುವಾಗಿದೆ. ಹೀಗಾಗಿ ಬ್ಲ್ಯಾಕ್ ಫಂಗಸ್ ನ ರೋಗಿಗಳಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಬ್ಲ್ಯಾಕ್ ಫಂಗಸ್ ನ್ನು ಸೇರಿಸಿಲ್ಲ. ಅದೇ ರೀತಿ ಹಲವು ಅನೇಕ ಆರೋಗ್ಯ ವಿಮಾ ಯೋಜನೆಗಳಲ್ಲಿಯೂ ಸೇರಿಸಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಬ್ಲ್ಯಾಕ್ ಫಂಗಸ್ ನ್ನು ಸಾಂಕ್ರಾಮಿಕ ರೋಗ ಕಾಯ್ದೆಯಡಿ ಘೋಷಿಸಬೇಕೆಂದು ರಾಜ್ಯ ಸರ್ಕಾರಗಳನ್ನು ಸಹ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಿಪೊಸೊಮಲ್ ಆಂಪೊಟೆರಿಸಿನ್-ಬಿ ಅತ್ಯಗತ್ಯವಾಗಿದ್ದು, ಮಾರುಕಟ್ಟೆಯಲ್ಲಿ ಅದರ ಕೊರತೆ ಎದುರಾಗಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪತ್ತೆಯಾಯಿತು ವೈಟ್ ಫಂಗಸ್! ಈ ಜಿಲ್ಲೆಯಲ್ಲಿ 6 ವೈಟ್ ಫಂಗಸ್ ಪ್ರಕರಣ ಪತ್ತೆ!

ವಿಜಯಸಾಕ್ಷಿ ಸುದ್ದಿ, ರಾಯಚೂರು

ಕೊರೊನಾದೊಂದಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಜನರ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಇದರೊಂದಿಗೆ ವೈಟ್ ಫಂಗಸ್ ನ ಹಾವಳಿ ಕೂಡ ಶುರುವಾಗಿದೆ. ಜಿಲ್ಲೆಯಲ್ಲಿ ವೈಟ್ ಫಂಗಸ್ ಕಾಣಿಸಿಕೊಂಡಿದೆ.
ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ 6 ಜನರಲ್ಲಿ ಕಾಣಿಸಿಕೊಂಡಿದೆ. ಇಲ್ಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿಯೇ 6 ಜನರಲ್ಲಿ ಇದರ ಲಕ್ಷಣ ಪತ್ತೆಯಾಗಿದೆ. ಕೊರೊನಾದಿಂದ ಗುಣಮುಕರಾದವರಲ್ಲಿಯೇ ವೈಟ್ ಫಂಗಸ್ ಕಾಣಿಸಿಕೊಂಡಿದೆ.

ಗ್ಯಾಸ್ಟ್ರೋ, ಲಿವರ್ ಹಾಗೂ ಎಂಡೋಸ್ಕೋಪಿ ತಜ್ಞ ಡಾ. ಮಂಜುನಾಥ್ ಅವರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಸೋಂಕಿತರು ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಡಾ.ಮಂಜುನಾಥ್, ವೈಟ್ ಫಂಗಸ್ ಕುರಿತು ಯಾರೂ ಹೆದರಬಾರದು. ಈ ಫಂಗಸ್ ಗೆ 14 ದಿನಗಳ ಔಷಧಿ ಕೊಡಲಾಗುತ್ತದೆ. 7 ದಿನಗಳಲ್ಲಿ ಸೋಂಕಿತರು ಗುಣಮುಖರಾಗುತ್ತಾರೆ. ಅನ್ನನಾಳದಲ್ಲಿ ತೊಂದರೆ ಕೊಡುವ ಸೋಂಕು ಜೀವಮಾರಕವಲ್ಲ ಎಂದು ಹೇಳಿದ್ದಾರೆ.

ವೈಟ್ ಫಂಗಸ್ ರಕ್ತಕ್ಕೆ ಸೇರಿದರೆ ಮಾತ್ರ ಅದು ಮಾರಣಾಂತಿಕ ಸಮಸ್ಯೆಯಾಗುವ ಸಾಧ್ಯತೆ ಇದೆ. 100 ಜನರಿಗೆ ಸ್ಟಿರೈಡ್ ಕೊಟ್ಟರೆ ಒಬ್ಬರಲ್ಲಿ ಈ ವೈಟ್ ಫಂಗಸ್ ಕಾಣಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಕ್ಯಾಂಡಿಡಾ ಫಂಗಸ್, ಆಸ್ಪರ್ ಜಿಲೋಸಿಸ್ ಫಂಗಸ್ ನ್ನು ವೈಟ್ ಫಂಗಸ್ ಎಂದು ಕರೆಯುತ್ತಾರೆ.

ಸದ್ಯ ಇದು ಕಾಣಿಸಿಕೊಂಡ 6 ಜನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜನರು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಚಿರತೆಗಳ ಕಳೇಬರ ಪತ್ತೆ; ವಿಷ ಹಾಕಿ ಕೊಂದಿರುವ ಶಂಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಜಿಲ್ಲೆಯ ಬಳವಾಡಿಯ ಬಯಲು ಪ್ರದೇಶದಲ್ಲಿ ಮೂರು ಚಿರತೆಗಳ ಕಳೇಬರಗಳು ಪತ್ತೆಯಾಗಿವೆ.
ಈ ಚಿರತೆಗಳಿಗೆ ಯಾರೋ ವಿಷ ಪ್ರಾಶನ ಮಾಡಿರಬಹುದು ಎಂದು ಶಂಕಿಸಲಾಗಿದೆ.

ತಾಯಿ ಚಿರತೆ ಹಾಗೂ ಎರಡು ಚಿರತೆ ಮರಿಗಳು ಸಾವನ್ನಪ್ಪಿವೆ. ಎರಡು ದಿನಗಳ ಹಿಂದೆಯಷ್ಟೇ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಬಳಿಯ ಸಿಸಿಟಿವಿಯಲ್ಲಿ ಈ ಚಿರತೆಗಳು ಸೆರೆಯಾಗಿದ್ದವು.
ಆ ನಂತರ ಅವರು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಯಾರೋ ದುಷ್ಕರ್ಮಿಗಳು ಚಿರತೆಗಳಿಗೆ ತಿನ್ನುವ ತಿನ್ನುವ ಆಹಾರದಲ್ಲಿ ವಿಷ ಹಾಕಿರಬೇಕು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ತಾಯಿ ಚಿರತೆ ಹಾಗೂ ಚಿರತೆ ಮರಿಗಳು ಒಟ್ಟೊಟ್ಟಿಗೆ ಓಡಾಡುತ್ತಿದ್ದರಿಂದಾಗಿ ಬೆಮೆಲ್ ಫ್ಯಾಕ್ಟರಿ ಹಾಗೂ ಬೆಳವಾಡಿ ಸುತ್ತಮುತ್ತಲಿನ ಜನ ಭಯದ ವಾತಾವರಣದಲ್ಲಿದ್ದರು. ಭಯದ ಕಾರಣಕ್ಕೆ ವಿಷ ಹಾಕಿ ಕೊಂದಿದ್ದಾರೆಂದು ಅರಣ್ಯ ಇಲಾಖೆಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಶವಗಳ ಮರಣೋತ್ತರ ಪರೀಕ್ಷೆಗೆ ಅರಣ್ಯ ಸಿಬ್ಬಂದಿ ತಯಾರಿ ನಡೆಸುತ್ತಿದ್ದಾರೆ.

ಮಕ್ಕಳಿಗೆ ಸೋಂಕು ಹರಡುವ ಭೀತಿ; ಆತ್ಮಹತ್ಯೆ ಮಾಡಿಕೊಂಡ ತಂದೆ -ತಾಯಿ!

ವಿಜಯಸಾಕ್ಷಿ ಸುದ್ದಿ, ವಿಜಯವಾಡ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದಂಪತಿ, ತಮ್ಮ ಮಕ್ಕಳಿಗೆ ಸೋಂಕು ತಗಲಬಹುದು ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಪೆಡಾನಾದಲ್ಲಿ ನಡೆದಿದೆ.

ಪೆಡಾನಾ ಪೊಲೀಸರು ಹೇಳುವಂತೆ, ಜಕ್ಕುಲಾ ಲೀಲಾ ಪ್ರಸಾದ್ (40) ಮತ್ತು ಭಾರತಿ (37) ದಂಪತಿ ಕಳೆದ 10 ದಿನಗಳಿಂದ ಕೊರೊನಾ ಲಕ್ಷಣದಿಂದ ಬಳಲುತ್ತಿದ್ದರು. ಅವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

ಈ ದಂಪತಿಗೆ ಒಂಭತ್ತು ಹಾಗೂ ಐದು ವರ್ಷ ವರ್ಷದ ಹೆಣ್ಣುಮಕ್ಕಳಿದ್ದು, ಅವರಿಗೆ ಸೋಂಕು ಹರಡಬಹುದೆಂಬ ಭಯದಿಂದ, ದಂಪತಿಗಳು ಖಿನ್ನತೆಗೆ ಜಾರಿದ್ದರು. ಕಾರಣ, ಕುಟುಂಬದ ಯಾವುದೇ ಸದಸ್ಯರು ಅವರ ರಕ್ಷಣೆಗೆ ಬಂದಿರಲಿಲ್ಲ. ಹೀಗಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಸಿಆರ್ ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸರ ಥಳಿತಕ್ಕೆ ಬಾಲಕ ಬಲಿ!

ವಿಜಯಸಾಕ್ಷಿ ಸುದ್ದಿ, ಲಖನೌ

ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಪೊಲೀಸರು ಬಾಲಕನನ್ನು ಥಳಿಸಿದ ನಂತರ ಆತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಟ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ಬಾಲಕನ ಕುಟುಂಬ ಸದಸ್ಯರು ಪೊಲೀಸರ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಹೋಮ್ ಗಾರ್ಡ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಬಾಲಕ ಮನೆಯ ಹೊರಭಾಗದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾಗ ಆತನನ್ನು ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಈ ಕುರಿತು ಹೇಳಿಕೆಯನ್ನು ಪಡೆದಿದ್ದು, ಆರೋಪ ಎದುರಿಸುತ್ತಿರುವ ಸಿಬ್ಬಂದಿಗಳ ವಿರುದ್ಧ ಎಫ್ ಐಆರ್ ನ್ನು ದಾಖಲಿಸಲಾಗುತ್ತದೆ ಹಾಗೂ ತನಿಖೆ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ನೀಡಿದ್ದಾರೆ.

ಕೊರೋನಾ ಕರ್ಫ್ಯೂ ಉಲ್ಲಂಘನೆ ಮಾಡಿದ್ದಾನೆಂದು ಪೊಲೀಸ್ ಸಿಬ್ಬಂದಿಗಳು 17 ವರ್ಷದ ಬಾಲಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಕುಟುಬಸ್ಥರು ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.
ಥಳಿತದಿಂದ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿಯೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳಿದ್ದರು ಎಂದು ಕುಟುಂಬಸ್ಥರು ಹೇಲಿದ್ದಾರೆ.

ಆಕ್ರೋಶಗೊಂಡ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಬಾಲಕನ ಕುಟುಂಬ ಸದಸ್ಯರಿಗೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಇರಲಿದೆ ಮಳೆರಾಯನ ಆರ್ಭಟ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ. 22 ರಂದು ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಅಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಎರಡು ದಿನಗಳವರೆಗೆ ಮಳೆ ಅಥವಾ ಗುಡುಗು ಸಹಿತ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 24 ಗಂಟೆಗಳ ಅವಧಿಯಲ್ಲಿ ಮಳೆ 64.5 ಮಿಮೀ ಮತ್ತು 115.5 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೋಟಿ ಕೋಟಿ ಬಾಚುತ್ತಿದ್ದ ಸಲ್ಮಾನ್ ಖಾನ್, ರಾಧೆ ಚಿತ್ರದಿಂದ ಮೊದಲು ಗಳಿಸಿದ್ದು ಎಷ್ಟು ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಸುಲ್ತಾನ್ ಎಂದು ಸಲ್ಮಾನ್ ಖಾನ್ ಹೆಸರು ಮಾಡಿದ್ದರು. ಅವರ ಬಹುತೇಕ ಚಿತ್ರಗಳು ಬಿಡುಗಡೆಯಾದ ಮೊದಲ ದಿನವೇ ಕೋಟಿ ಕೋಟಿ ಹಣ ದೋಚಿ, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದವು. ಆದರೆ, ಅವರ ಚಿತ್ರ ಕೂಡ ಈಗ ಕೆಟ್ಟ ದಾಖಲೆ ಬರೆದಿದೆ.

ಇತ್ತೀಚೆಗಷ್ಟೇ ತೆರೆಕಂಡಿದ್ದ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿಯೇ ದೇಶದಲ್ಲಿ ಲಾಕ್ ಡೌನ್ ಜಾರಿಯಾಗಿದೆ. ಹೀಗಾಗಿ ಹೆಚ್ಚು ಕಲೆಕ್ಷನ್ ಮಾಡಲು ಸಾಧ್ಯವಾಗಿರಲಿಲ್ಲ. ಇಡೀ ದೇಶದಲ್ಲಿಯೇ ಈ ಚಿತ್ರ ಕೇವಲ ಮೂರು ಚಿತ್ರ ಮಂದಿರಗಳಲ್ಲಿ ಮಾತ್ರ ತೆರೆ ಕಂಡಿದೆ.

ಹೀಗಾಗಿ ಈ ಚಿತ್ರ ತಂಡ ಓಟಿಟಿ ಮೊರೆ ಹೋಯಿತು. ಆದರ ನಡುವೆಯೂ ತ್ರಿಪುರದ ಮೂರು ಥಿಯೇಟರ್ಗಳಲ್ಲಿ ರಾಧೆ ಬಿಡುಗಡೆ ಆಯಿತು. ಮೊದಲ ದಿನ ಮೂರು ಚಿತ್ರಮಂದಿರಗಳಿಂದ ಒಟ್ಟು 11 ಶೋಗಳು ನಡೆದಿದ್ದವು. ಈ ಎಲ್ಲ ಪ್ರದರ್ಶನಗಳಿಂದ ಒಟ್ಟು ರೂ. 10,432 ಮಾತ್ರ ಕಲೆಕ್ಷನ್ ಆಗಿದೆ. ಹೀಗಾಗಿ ಬಾಕ್ಸ್ ಆಫೀಸ್ ಸುಲ್ತಾನ್ ಕೋಟಿ ಎತ್ತುವ ಕೈಯಲ್ಲಿ ಪುಡಿಗಾಸು ಹಿಡಿಯುವಂತೆ ಈ ಕೊರೊನಾ ಮಾಡಿತಲ್ಲ ಎಂದು ಚಿತ್ರ ತಂಡದ ಸದಸ್ಯರು ಮಾತನಾಡುತ್ತಿದ್ದಾರೆ.

ಈ ಮೂರು ಚಿತ್ರ ಮಂದಿರಗಳಲ್ಲಿ ರಾಧೆ ಪ್ರದರ್ಶನ ಕಂಡಿದ್ದು ಕೇವಲ ನಾಲ್ಕು ದಿನ ಮಾತ್ರ. ಅಲ್ಲಿ ಕೂಡ ಸಂಪೂರ್ಣ ಲಾಕ್ ಡೌನ್ ಆದ ಮೇಲೆ ರಾಧೆಗೆ ಸಂಪೂರ್ಣ ಬಾಗಿಲು ಹಾಕಲಾಯಿತು. ಅಂದರೆ, ಚಿತ್ರ ಥಿಯೇಟರ್ ನಲ್ಲಿ ಪ್ರದರ್ಶನ ಕಂಡ ನಂತರ ಒಟ್ಟು ಇಲ್ಲಿಯವರೆಗೆ ರೂ. 63 ಸಾವಿರ ಗಳಿಸಿದ ಎಂದು ಮೂಲಗಳು ತಿಳಿಸಿವೆ.
ನಂತರ ಈ ಚಿತ್ರ ಓಟಿಟಿಯಲ್ಲಿ ಭರ್ಜರಿ ಹಣ ಬಾಚಿಕೊಂಡಿದೆ.

ಮೇ .13ರಂದು ಈ ಚಿತ್ರ ಜೀ ಪ್ಲೆಕ್ಸ್ನಲ್ಲಿ ‘ರಾಧೆ ರಿಲೀಸ್ ಆಗಿತ್ತು. ಅಂದು ಒಂದೇ ದಿನಕ್ಕೆ ಈ ಚಿತ್ರ ರೂ. 42 ಲಕ್ಷ ಗಳಿಸಿದೆ. ಡಿಜಿಟಲ್ ಮಾಧ್ಯಮದಲ್ಲಿ ಈ ಚಿತ್ರ ಒಂದೇ ದಿನ 42 ಲಕ್ಷ ವೀಕ್ಷಣೆ ಕಂಡಿದೆ. ಒಂದು ಬಾರಿ ಸಿನಿಮಾ ವೀಕ್ಷಣೆ ಮಾಡಬೇಕೆಂದರೆ ರೂ. 249 ಸಂದಾಯ ಮಾಡಬೇಕು. ಹೀಗಾಗಿ ಈ ಸಿನಿಮಾ ಮೊದಲ ದಿನ ಗಳಿಸಿದ್ದು ರೂ. 108 ಕೋಟಿ ಎಂದು ವರದಿಯಾಗಿದೆ.

ಮೋಜು –ಮಸ್ತಿಗೆ ಹೊರಟಿದ್ದ ಅಧಿಕಾರಿಗಳನ್ನು ಪ್ರಶ್ನಿಸಿದ್ದವರ ಮೇಲೆಯೇ ಕೇಸ್ ದಾಖಲು!

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ಪಾರ್ಟಿಗಾಗಿ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ತೆಡೆದಿದ್ದ ಗ್ರಾಮಸ್ಥರು ಹಾಗೂ ಗ್ರಾಪಂ ಸದಸ್ಯರ ಮೇಲೆಯೇ ಕೇಸ್ ದಾಖಲಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ನಾಲ್ವರ ಮೇಲೆ ಎಫ್ ಐಆರ್ ದಾಖಲಾಗಿದೆ.

ಭದ್ರಾ ಅಭಯಾರಣ್ಯದ ಮುತ್ತೋಡಿ ವಲಯದಲ್ಲಿರುವ ಸೀಗೇಕಾನ್ ಅರಣ್ಯ ಪ್ರವಾಸಿ ಮಂದಿರದಲ್ಲಿ ಬುಧವಾರ ರಾತ್ರಿ ಹೊತ್ತು ಅರಣ್ಯಾಧಿಕಾರಿಗಳು ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ನಂತರ ಗುರುವಾರ ಇವರು ತಾಲೂಕು ಸಂತವೇರಿಯ ಬೇಟೆ ನಿಗ್ರಹ ದಳದ ಬಳಿ ಪಾರ್ಟಿಗೆ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಗ್ರಾಮಸ್ಥರು ಅಡ್ಡಗಟ್ಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ರಾಜ್ಯ ಅರಣ್ಯ ಪಡೆ ಮುಖ್ಯಸ್ಥ ಸಂಜಯ್ ಮೋಹನ್ ಮತ್ತು ಅವರ ಸಿಬ್ಬಂದಿ 10ಕ್ಕೂ ಹೆಚ್ಚು ಕಾರುಗಳಲ್ಲಿ ತೆರಳುತ್ತಿದ್ದರು. ಇವುಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೇ, ಪಾರ್ಟಿಗಾಗಿಯೇ ಈ ಸಿಬ್ಬಂದಿ 10ಕ್ಕೂ ಹೆಚ್ಚು ನಾಟಿ ಕೋಳಿಗಳನ್ನು ಖರೀದಿಸಿದ್ದರು ಎನ್ನಲಾಗಿದೆ. ಇವರೆಲ್ಲ ಪಾರ್ಟಿಗಾಗಿ ಸಂತವೇರಿ ಸಮೀಪದ ಗೇಮ್ ಫಾರೆಸ್ಟ್ ನತ್ತ ಹೊರಟಿದ್ದರು. ಗ್ರಾಪಂ ಸದಸ್ಯರು ಸೇರಿದಂತೆ ಗ್ರಾಮಸ್ಥರು ತಡೆದು ಪ್ರಶ್ನಿಸಿದ್ದಾರೆ. ಆಗ ಅಧಿಕಾರಿಗಳು ಮರಳಿ ಹೋಗಿದ್ದರು ಎನ್ನಲಾಗಿದೆ.

ಆದರೆ, ಸದ್ಯ ಅಧಿಕಾರಿಗಳನ್ನು ತಡೆದ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರ ಮೇಲೆಯೇ ದೂರು ದಾಖಲಾಗಿದೆ. ಇದಕ್ಕ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಏರ್ ಇಂಡಿಯಾ ಮೇಲೆ ದೊಡ್ಡ ಸೈಬರ್ ದಾಳಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಏರ್ ಇಂಡಿಯಾ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಈ ಮೂಲಕ ಲಕ್ಷಾಂತರ ಪ್ರಯಾಣಿಕರ ವೈಯಕ್ತಿಕ ವಿವರಗಳು ಕಳ್ಳತನವಾಗಿವೆ.
ಫೆಬ್ರವರಿ ತಿಂಗಳಲ್ಲಿ ಡೇಟಾ ಪ್ರಾಸೆಸರ್ ಮೇಲೆ ದೊಡ್ಡ ಮಟ್ಟದ ಸೈಬರ್ ದಾಳಿ ನಡೆದಿದೆ. ಸುಮಾರು ಹತ್ತು ವರ್ಷಗಳ ಅವಧಿಯಲ್ಲಿನ ಡೇಟಾ ಕಳ್ಳತನ ಮಾಡಲಾಗಿದೆ. ಏರ್ ಇಂಡಿಯಾ ಗ್ರಾಹಕರ ಕ್ರೆಡಿಟ್ ಕಾರ್ಡ್, ಪಾಸ್‌ಪೋರ್ಟ್, ಫೋನ್ ನಂಬರ್ ಸೇರಿದಂತೆ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿವೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಈ ಸಂಗತಿ ವಿಶ್ವಾದ್ಯಂತ 4,500,000 ದತ್ತಾಂಶದ ಮೇಲೆ ಪರಿಣಾಮ ಬೀರಿದೆ. ಹೆಸರು, ಹುಟ್ಟಿದ ದಿನಾಂಕ, ಸಂಪರ್ಕ ಮಾಹಿತಿ, ಪಾಸ್‌ ಪೋರ್ಟ್, ಟಿಕೆಟ್, ಕ್ರೆಡಿಟ್ ಕಾರ್ಡ್, ಸ್ಟಾರ್ ಅಲಯನ್ಸ್‌ ಹಾಗೂ ಏರ್ ಇಂಡಿಯಾ ಪ್ರಯಾಣಿಕರ ಮಾಹಿತಿಗಳನ್ನು ಇದು ಒಳಗೊಂಡಿರುತ್ತದೆ. ಹೀಗಾಗಿ ಪ್ರಯಾಣಿಕರು ತಮ್ಮ ವೈಯಕ್ತಿಕ ಮಾಹಿತಿ ಸುರಕ್ಷತೆಗಾಗಿ ಸಾಧ್ಯವಾದಾಗಲೆಲ್ಲಾ ಪಾಸ್‌ವರ್ಡ್‌ ಬದಲಾಯಿಸುವಂತೆ ತಿಳಿಸುತ್ತಿರುತ್ತೇವೆ ಎಂದು ಸಂಸ್ಥೆ ಹೇಳಿದೆ.

ಕ್ರೆಡಿಟ್ ಕಾರ್ಡ್ ಹೊಂದಿರುವ ಸಿವಿವಿ/ಸಿವಿಸಿ ಡೇಟಾ ಸಂಗ್ರಹಿಸಲಾಗಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ದಾಳಿಗೆ ಒಳಗಾದ ಪ್ರಯಾಣಿಕರಿಗೆ ಸಹಾಯ ಮಾಡಲು ಸಂಸ್ಥೆ ಕಾಲ್ ಸೆಂಟರ್ ಸ್ಥಾಪಿಸಿದೆ. ಈ ಕುರಿತು ತನಿಖೆಗೆ ಮುಂದಾಗಿದೆ.

error: Content is protected !!