Home Blog Page 3022

ರಾಜೀನಾಮೆಗೆ ಸಿದ್ಧರಾದರಾ ಯಡಿಯೂರಪ್ಪ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಹೈಕಮಾಂಡ್ ವಿಶ್ವಾಸ ಇರುವವರೆಗೂ ನಾನು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದು, ಪರೋಕ್ಷವಾಗಿ ರಾಜೀನಾಮೆಗೆ ಮುಂದಾಗಿದ್ದಾರೆಯೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ನನಗೆ ಎಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುವಂತೆ ಸೂಚಿಸುತ್ತಾರೆಯೋ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಇರುತ್ತೇನೆ. ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ, ಕೂಡಲೇ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜೀನಾಮೆ ನೀಡಿದರೂ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ಹೈಕಮಾಂಡ್ ಗೆ ನನ್ನ ಮೇಲೆ ವಿಶ್ವಾಸವಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಮೇಲಿನವರಿಗೆ ವಿಶ್ವಾಸ ಇರುವವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಸಿಎಂ ಅವರ ಮಾತು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆಯೇ? ಅಲ್ಲದೇ, ಹೈಕಮಾಂಡ್ ಈ ಕುರಿತು ಸೂಚನೆ ನೀಡಿದೆಯೇ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಸತ್ಯಾಂಶ ಇನ್ನಷ್ಟೇ ದಿನಗಳಲ್ಲಿ ತಿಳಿದು ಬರಲಿದೆ.

ಜಡೆ ಜಗಳ ಅಂತ್ಯಗೊಳಿಸಿದ ಸರ್ಕಾರ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಸಂದರ್ಭದಲ್ಲಿ ಈ ಇಬ್ಬರೂ ಅಧಿಕಾರಿಗಳ ನಡುವೆ ಸಂಘರ್ಷ ಉಂಟಾಗಿತ್ತು. ಹೀಗಾಗಿ ಈ ಜಡೆ ಜಗಳ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಮೈಸೂರು ನೂತನ ಜಿಲ್ಲಾಧಿಕಾರಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಕೊರೊನಾ ನಿರ್ವಹಣೆ ವಿಷಯದಲ್ಲಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಕೆಲಸ ಮಾಡಿದರೂ ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ನಮ್ಮನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಶಿಲ್ವಾ ನಾಗ್ ಆರೋಪಿಸಿದ್ದರು.

ಬಹುತೇಕ ಜನ ಪ್ರತಿನಿಧಿಗಳು ಕೂಡ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ಶಿಲ್ಪಾ ನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ, ಆರೋಪ ಆಧಾರ ರಹಿತವಾಗಿದೆ. ನನ್ನಿಂದ ಕಿರುಕುಳ ನಡೆದಿದೆ ಎನ್ನುವುದು ಸುಳ್ಳು ಎಂದು ಹೇಳಿದ್ದರು.

ಕನ್ನಡಿಗರ ಆಕ್ರೋಶದಿಂದ ಬುದ್ಧಿ ಕಲಿತ ಅಮೇಜಾನ್ ಕಂಪನಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕನ್ನಡಿಗರ ಆಕ್ರೋಶದಿಂದಾಗಿ ಅಮೇಜಾನ್ ಗೆ ಬುದ್ಧಿ ಬಂದಿದೆ. ಭಾರತದ ಅತ್ಯಂತ ಕೊಳಕು, ಅಸಹ್ಯ ಭಾಷೆ ಕನ್ನಡ ಎಂದು ಸರ್ಚ್ ನಲ್ಲಿ ತೋರಿಸಿದ್ದ ಗೂಗಲ್, ಗೂಗಲ್ ಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. ವಿಶ್ವದ ಅತಿದೊಡ್ಡ ಇ – ಕಾಮರ್ಸ್ ಕಂಪನಿಯಾಗಿರುವ ಅಮೇಜಾನ್ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೆನಡಾದ ಅಮೇಜಾನ್ ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಧ್ವಜದ ಚಿತ್ರ, ಅಶೋಕ ಚಕ್ರದ ಲಾಂಛನವಿರುವ ಮಹಿಳೆಯರ ಒಳ ಉಡುಪುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಈ ಕುರಿತು ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಕನ್ನಡಪರ ಸಂಘಟನೆಗಳು, ಕನ್ನಡಿಗರು, ಸಚಿವರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಆ ಚಿತ್ರವನ್ನು ಅಮೇಜಾನ್ ಈಗ ತೆಗೆದು ಹಾಕಿದೆ.

ವಿಮೆನ್ಸ್ ಫ್ಲ್ಯಾಗ್ ಆಫ್ ಕರ್ನಾಟಕ ಒರಿಜಿನಲ್ ಡಿಸೈನ್ ಎಂಬ ಹೆಸರಿನಲ್ಲಿ ಅಮೇಜಾನ್, ಈ ಬಿಕಿನಿಯನ್ನು ಮಾರಾಟ ಮಾಡಲು ಪ್ರಯತ್ನಿಸಿತ್ತು. ಇದಕ್ಕ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಫ್ಲಾಗ್ ಡಿಸೈನ್ನ ಪ್ರಾಡಕ್ಟ್ ಎಂದು ನಮೂದಿಸಲ್ಪಟ್ಟಿದ್ದ ಕನ್ನಡ ಧ್ವಜವಿರುವ ಮಹಿಳೆಯರ ಒಳಉಡುಪುಗಳನ್ನು ಮಾರಾಟ ಮಾಡಲು ಪ್ರಯತ್ನಿಸಿದ ಅಮೇಜಾನ್ ಗೆ ಟ್ಯಾಗ್ ಮಾಡಿ ವಿರೋಧಿಸಲಾಗಿತ್ತು.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಕೆನಡಾದ ಅಮೇಜಾನ್ ಸಂಸ್ಥೆ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಅಮೇಜಾನ್ ಕ್ಷಮೆ ಯಾಚಿಸದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದಿದ್ದರು.

2 ದಿನಗಳ ಹಿಂದಷ್ಟೇ ಗೂಗಲ್ನಲ್ಲಿ ವೆಬ್ ಸೈಟ್ ಲಿಂಕ್ವೊಂದು ಕನ್ನಡ ಭಾರತದ ಅತ್ಯಂತ ಕೊಳಕು ಭಾಷೆ ಎಂದು ತೋರಿಸುತ್ತಿತ್ತು. ಭಾರತದ ಅಗ್ಲಿಯೆಸ್ಟ್ ಭಾಷೆ ಯಾವುದು ಎಂದು ಸರ್ಚ್ ಮಾಡಿದರೆ ಗೂಗಲ್ ನಲ್ಲಿ ಕನ್ನಡ ಎಂದು ತೋರಿಸುತ್ತಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಗೂಗಲ್ ಕ್ಷಮೆಯಾಚಿಸಿತ್ತು. ಅದರಲ್ಲಿಯೂ ಕನ್ನಡದಲ್ಲಿಯೇ ಕ್ಷಮೆ ಕೇಳಿತ್ತು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆರಾಯನ ಅಬ್ಬರ ಇರಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಬೆಂಗಳೂರಿನಲ್ಲಿ ಎರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಳೆ ಇಳಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ವರ್ಷ ಸಿಲಿಕಾನ್ ಸಿಟಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಬಿಬಿಎಂಪಿ ಅಧಿಕಾರಿಗಳು ಸೂಕ್ತವಾಗಿ ಸಿದ್ಧರಾಗಬೇಕಾದ ಅನಿವಾರ್ಯತೆ ಇದೆ.

ಕೊರೊನಾ ದುರಂತ; ಒಂದೇ ಕುಟುಂಬದ ಮೂವರು ಸಾವು!

ವಿಜಯಸಾಕ್ಷಿ ಸುದ್ದಿ, ವಿಜಯನಗರ

ಕೊರೊನೊದಿಂದಾಗಿ ಇಡೀ ಕುಟುಂಬವೇ ದುರಂತ ಸಾವು ಕಂಡಿದ್ದು, ಕುಟುಂಬದಲ್ಲಿ ಸ್ಮಶಾನ ಮೌನ ಆವರಿಸಿದೆ. ಒಂದೇ ಕುಟುಂಬದ ಮೂವರು ಕೇವಲ ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ್ದಾರ. ಈ ಘಟನೆ ಹೊಸಪೇಟೆ ನಗರದಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ರಾಜ್ಯ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮೀತ್ ಅವರು, ಕಳೆದ ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದರು. ಮರುದಿನವೇ ಅವರ ಸಹೋದರ ಶ್ಯಾವಿಯೋ ಸ್ಮೀತ್ ಕೂಡ ಸಾವನ್ನಪ್ಪಿದ್ದಾರೆ.

ಇಬ್ಬರು ಮಕ್ಕಳ ಸಾವಿನ ಸುದ್ದಿ ಕೇಳಿ ಸಹಿಸಿಕೊಳ್ಳದ ತಂದೆ ಬೇರಿ ಸ್ಮೀತ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಿಪಿಐ ವಿಕಾಸ್ ಲಮಾಣಿ ವಾಟ್ಸ್‌ಆಪ್ ಸ್ಟೇಟಸ್ ವೈರಲ್!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಶಿರಹಟ್ಟಿ ಸಿಪಿಐ ವಿಕಾಸ ಲಮಾಣಿ ಅವರು ಗುರುವಾರ ತಮ್ಮ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ ಸಾಮಾಜಿಕ ಕಳಕಳಿಯುಳ್ಳ ಸಂದೇಶ ಇದೀಗ ವೈರಲ್ ಆಗಿದೆ. ಅನೇಕರು ಅದನ್ನು ತಮ್ಮ ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿಕೊಂಡು, ಉಪಯುಕ್ತ ಮಾಹಿತಿಯನ್ನು ಸ್ನೇಹಿತರಿಗೆ ಶೇರ್ ಮಾಡುತ್ತಿದ್ದಾರೆ.

ಏನಿದೆ ಸ್ಟೇಟಸ್‌ನಲ್ಲಿ?

ಗೆಳೆಯರೆ, ಎಲ್ಲರಿಗೂ ನನ್ನ ನಮಸ್ಕಾರ, ನಾವೆಲ್ಲರೂ ತುಂಬಾ ಸಂದಿಗ್ಧವಾದ ಪರಿಸ್ಥಿತಿಯಲ್ಲಿ ಇದ್ದೇವೆ. ಮುಂಬರುವ ದಿನಗಳಲ್ಲಿಯೂ ತುಂಬ ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭ ಬರುತ್ತದೆ. ನಿನ್ನೆವರೆಗೆ ನಮ್ಮ ಜೊತೆಗೆ ಇದ್ದಂತಹ ಗೆಳೆಯರು ಒಬ್ಬೊಬ್ಬರಾಗಿ ನಮ್ಮಿಂದ ದೂರವಾಗುತ್ತಿದ್ದಾರೆ. ನೀವೆಲ್ಲರೂ ನಿಮ್ಮ ಕುಟುಂಬಕ್ಕೆ, ಸಮಾಜಕ್ಕೆ ಅಮೂಲ್ಯವಾದ ವ್ಯಕ್ತಿಗಳು, ನಿಮ್ಮ ಮೇಲೆ ನಿಮ್ಮ ಕುಟುಂಬವೇ ಸಂಪೂರ್ಣ ಅವಲಂಬಿತವಾಗಿರುತ್ತದೆ. ಕೊರೊನಾ ಎಂಬ ಮಹಾಮಾರಿಯ ವಿಧಿಯ ಆಟಕ್ಕೆ ನಾವೆಲ್ಲರೂ ಬಲಿಪಶುಗಳಾಗುತ್ತಿದ್ದೇವೆ. ನಾವು ಇದ್ದಷ್ಟು ದಿನ ಎಲ್ಲರ ಜತೆಯೂ ಸ್ನೇಹ, ಸಹಕಾರದಿಂದ, ಪ್ರೀತಿ-ವಾತ್ಸಲ್ಯದಿಂದ ಇರೋಣ. ಈ ಮಹಾಮಾರಿಯು ನಮಗೆ ತುಂಬಾ ಒಳ್ಳೆಯ ಪಾಠವನ್ನು ಕಲಿಸಿದೆ, ಇದರ ಜೊತೆ ಆಟ ಆಡುವುದು ಬೇಡ. ಕಡ್ಡಾಯವಾಗಿ ಈ ಸಾಮಾಜಿಕ ಕಳಕಳಿಯ ನಿಯಮಗಳನ್ನು ಪಾಲಿಸೋಣ, ಇಡೀ ಮಾನವ ಕುಲಕ್ಕೆ ಮುಳುವಾಗಿರುವ ಕೊರೊನಾ ಮಹಾಮಾರಿಯನ್ನು ನಮ್ಮ ಗ್ರಾಮದಿಂದ, ರಾಜ್ಯದಿಂದ, ದೇಶದಿಂದ ಈ ಪ್ರಪಂಚದಿಂದಲೇ ಕಿತ್ತು ಹಾಕುವಂತಹ ಪ್ರಯತ್ನ ನಮ್ಮ ನಿಮ್ಮೆಲ್ಲರದಾಗಿರಲಿ, ಆರೋಗ್ಯವೇ ಭಾಗ್ಯ- ಇಂತಿ ನಿಮ್ಮವ,

ವಿಕಾಸ ಲಮಾಣಿ, ಸಿಪಿಐ ಶಿರಹಟ್ಟಿ.

ಶನಿವಾರವೂ ಗದಗ ಜಿಲ್ಲೆಯ ಜನರಿಗೆ ಗುಡ್ ನ್ಯೂಸ್

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯ ಜನರಿಗೆ ಸತತ ಎರಡನೇ ದಿನವೂ ಶುಭ ಸುದ್ದಿ. ಹೌದು ನಿನ್ನೆ ಹಾಗೂ ಇಂದು ಸೋಂಕು ಇಳಿಮುಖದತ್ತ ಸಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಇದ್ದ ಆತಂಕ ದೂರಾಗುತ್ತಿದೆ.

ಇಂದು 152 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.

ಇಂದಿನ 152 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24661 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -70, ಮುಂಡರಗಿ-16, ನರಗುಂದ-06, ರೋಣ-28, ಶಿರಹಟ್ಟಿ-29, ಹೊರಜಿಲ್ಲೆಯ-03 ಸೇರಿದಂತೆ 152 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 269 ಕ್ಕೇರಿದೆ.

ಜಿಲ್ಲೆಯ ಮುಂಡರಗಿ ಕಲಕೇರಿ ಗ್ರಾಮದ ನಿವಾಸಿ 64 ವರ್ಷದ ವ್ಯಕ್ತಿ ಜೂನ್- 03 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -05 ರಂದು ಮೃತಪಟ್ಟಿದ್ದಾರೆ.

ಮುಂಡರಗಿ ತಾಲೂಕಿನ ಹಮ್ಮಗಿ ನಿವಾಸಿ ನಿವಾಸಿ 80 ವರ್ಷದ ವ್ಯಕ್ತಿ ಮೆ-29 ರಂದು ಮುಂಡರಗಿ ತಾಲೂಕು ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 01 ರಂದು ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ 40 ವರ್ಷದ ವ್ಯಕ್ತಿ ಮೇ-23 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ 03 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಗದಗ ತಾಲೂಕಿನ ಕುರ್ತಕೋಟಿ ನಿವಾಸಿ 45 ವರ್ಷದ ವ್ಯಕ್ತಿ ಮೇ -30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 03 ರಂದು ಮೃತಪಟ್ಟಿದ್ದಾರೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 328 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 22489 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1903 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 187 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೊರೋನಾ; ಶನಿವಾರವೂ ಗದಗ ಜಿಲ್ಲೆಯ ಜನರಿಗೆ ‌ಗುಡ್ ನ್ಯೂಸ್

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯ ಜನರಿಗೆ ಸತತ ಎರಡನೇ ದಿನವೂ ಶುಭ ಸುದ್ದಿ. ಹೌದು ನಿನ್ನೆ ಹಾಗೂ ಇಂದು ಸೋಂಕು ಇಳಿಮುಖದತ್ತ ಸಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಇದ್ದ ಆತಂಕ ದೂರಾಗುತ್ತಿದೆ.

ಇಂದು 152 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.

ಇಂದಿನ 152 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24661 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -70, ಮುಂಡರಗಿ-16, ನರಗುಂದ-06, ರೋಣ-28, ಶಿರಹಟ್ಟಿ-29, ಹೊರಜಿಲ್ಲೆಯ-03 ಸೇರಿದಂತೆ 152 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 269 ಕ್ಕೇರಿದೆ.

ಜಿಲ್ಲೆಯ ಮುಂಡರಗಿ ಕಲಕೇರಿ ಗ್ರಾಮದ ನಿವಾಸಿ 64 ವರ್ಷದ ವ್ಯಕ್ತಿ ಜೂನ್- 03 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -05 ರಂದು ಮೃತಪಟ್ಟಿದ್ದಾರೆ.

ಮುಂಡರಗಿ ತಾಲೂಕಿನ ಹಮ್ಮಗಿ ನಿವಾಸಿ ನಿವಾಸಿ 80 ವರ್ಷದ ವ್ಯಕ್ತಿ ಮೆ-29 ರಂದು ಮುಂಡರಗಿ ತಾಲೂಕು ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 01 ರಂದು ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ 40 ವರ್ಷದ ವ್ಯಕ್ತಿ ಮೇ-23 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ 03 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಗದಗ ತಾಲೂಕಿನ ಕುರ್ತಕೋಟಿ ನಿವಾಸಿ 45 ವರ್ಷದ ವ್ಯಕ್ತಿ ಮೇ -30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 03 ರಂದು ಮೃತಪಟ್ಟಿದ್ದಾರೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 328 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 22489 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1903 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 187 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಗದಗ ಜಿಲ್ಲೆಯಲ್ಲಿ ಜೂನ್ 14 ರವರೆಗೆ ನಿಷೇಧಾಜ್ಞೆ; ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ಈ ಅವಧಿಯಲ್ಲಿ ಕೆಳಕಂಡಂತೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ.
ಸಾರ್ವಜನಿಕರು ಈ ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಬೆ. 6 ರಿಂದ ಬೆ 10 ಗಂಟೆಯವರೆಗೆ ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು , ಆಹಾರ ಸಾಮಗ್ರಿ, ದಿನಸಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು, ಹಾಲಿನ ಬೂತ್, ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ರೈತರಿಗೆ ಅಗತ್ಯವಿರುವ ಬೀಜ,ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ಖರೀದಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ತಳ್ಳುಗಾಡಿ, ಆಟೋ, ಟಂಟಂಗಳಲ್ಲಿ ಬೀದಿ ಸುತ್ತುವ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ.

ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು, ಟ್ಯಾಕ್ಸಿ , ಅಟೋ, ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ಇದೆ.

ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳು , ಪಾರ್ಸೆಲ್ ಹಾಗೂ ಹೋಂ ಡಿಲೆವರಿ ಸೇವೆ ಮಾತ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ.

ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆಗೆ, ದೂರ ಸಂಪರ್ಕ, ಇಂಟರ್ ನೆಟ್ , ಪ್ರಸಾರ ಮತ್ತು ಕೆಬಲ್ ಸೇವೆಗಳು, ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ; (ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು) ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆ ಹಾಗೂ ರಸ್ತೆ ಕಾಮಗಾರಿ, ಅಗತ್ಯ ವಸ್ತುಗಳ ತಯಾರಿಕಾ ಘಟಕ; ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕ, ನ್ಯಾಯಬೆಲೆ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಗರಿಷ್ಟ 5 ಜನರಿಗೆ, ಮದುವೆ ಸಮಾರಂಭಗಳಲ್ಲಿ ಗರಿಷ್ಟ 40 ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಕೆಳಗಿನವುಗಳಿಗೆ ಅವಕಾಶವಿಲ್ಲ

ಬಸ್, ಮೆಟ್ರೋ ರೈಲು ಸಂಚಾರ, ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು , ಕ್ರೀಡಾಂಗಣ, ಈಜುಗೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್, ಕ್ಲಬ್ , ಥಿಯೇಟರ್ , ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

ಎಲ್ಲ ಸಾಮಾಜಿಕ , ರಾಜಕೀಯ , ಕ್ರೀಡೆ , ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳ ನಿಷೇಧ, ಎಲ್ಲ ಧಾರ್ಮಿಕ ಸ್ಥಳಗಳು / ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ, ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿಷೇಧ (ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ) ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು ಹಾಗೂ ಇತರ ಪ್ರಯಾಣಿಕ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಪ್ರತಿಬಂಧಕಾಜ್ಞೆ ಜಾರಿ

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 7 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ ಪ್ರತಿಬಂಧಕಾಜ್ಞೆಯನ್ನು ಜೂನ್ 14 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಾಣಿಗಳನ್ನು ಕೊಲ್ಲುವು ಗೋ ರಕ್ಷಣೆಯಾ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಸುಗಳ ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ನಡೆಸದೆ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂತಹ ಗೋ ರಕ್ಷಣೆಯಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅವರು, ಗೋ ರಕ್ಷಣೆ ಕುರಿತು ಬಿಜೆಪಿ ಬೀದಿ ಬೀದಿಯಲ್ಲಿ ಅರಚುತ್ತಲೇ ಇದೆ. ಆದರೆ, ಇವರದು ಕೇವಲ ಮಾತು, ಗೋವುಗಳ ರಕ್ಷಣೆ ಅಲ್ಲ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹಣೆ ಇದೆ.
ಹಸುಗಳಲ್ಲಿ ಕಾಣಿಸಿಕೊಳ್ಳುವ ಕಾಲುಬಾಯಿ ಜ್ವರದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ಇದನ್ನು ರಾಜ್ಯ ಸರ್ಕಾರವೂ ಕೇಳಿಲ್ಲ. ಹೀಗಾಗಿ ರಾಸುಗಳು ಅನಾರೋಗ್ಯದಿಂದ ನರಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲುಬಾಯಿ ಜ್ವರ ಭೀಕರ ಕಾಯಿಲೆಯಾಗಿದೆ. ಈ ರೋಗ ಉಲ್ಭಣಗೊಂಡರೆ ಪ್ರಾಣಿಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕಾಣುತ್ತಿದೆ. ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದಿರುವುದಕ್ಕೆ ಇದೆ ಕಾರಣ ಎಂಬ ಅಂಶ ಬಯಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಅಕ್ಟೋಬರ್‍ ತಿಂಗಳಲ್ಲಿ ಕೇಂದ್ರ ಸರ್ಕಾರವು ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಈ ಅಭಿಯಾನ ಕೈಗೊಂಡಿಲ್ಲ ಎಂದು ಪಶು ವೈದ್ಯರು ಹೇಳಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಪ್ರಾಣಿಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಬೇಕು. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಇದರಿಂದ ಎಚ್ಚೆತ್ತ ಸರ್ಕಾರ ಕೂಡ ಪರಿಹಾರ ನೀಡಿತ್ತು. ಈಗಲೂ ಪ್ರಾಣಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.

error: Content is protected !!