Home Blog Page 3024

ಸಂಕನೂರ ಸೈನ್ಯದೆದುರು ಕುಬೇರಪ್ಪ ಏಕಾಂಗಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿ?ತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದರೂ ಕೈ ಪಾಳಯದಲ್ಲಿ ಈಗಲೂ ಒಗ್ಗಟ್ಟು ಪ್ರದರ್ಶನವಾಗುತ್ತಿಲ್ಲ. ಹೀಗಾಗಿ ಡಾ| ಆರ್.ಎಂ. ಕುಬೇರಪ್ಪ ಏಕಾಂಗಿಯಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ.
ವರ್ಷದ ಹಿಂದೆಯೇ ಕೆಪಿಸಿಸಿ ರಾಜ್ಯ ಪದವೀಧರ ಮತ್ತು ಶಿಕ್ಷಕರ ಘಟಕದ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆಯೇ ಕುಬೇರಪ್ಪ ಅವರು ಚುನಾವಣೆ ತಯಾರಿ ಆರಂಭಿಸಿದ್ದರು. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಂಚರಿಸಿ, ಪದವೀಧರ ಮತದಾರರನ್ನು ಸಂಪರ್ಕಿಸುವ ಕೆಲಸ ಮಾಡಿದ್ದರು. ನೋಂದಣಿ ಪ್ರಕ್ರಿಯೆ ಚುರುಕುಗೊಳ್ಳಲೂ ಕಾರಣರಾಗಿದ್ದರು.
ಕೈಕೊಟ್ಟ ನಾಯಕರು: ಆದರೆ ಕುಬೇರಪ್ಪ ಅವರಿಗೆ ಕಾಂಗ್ರೆಸ್ ನಾಯಕರು ಮಾತ್ರ ಸಾಥ್ ನೀಡಲಿಲ್ಲ. ಗದಗ ಮಾತ್ರವಲ್ಲದೆ ಧಾರವಾಡ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರೂ ಅವರಿಗೆ ಕೈ ಕೊಟ್ಟಿದ್ದಾರೆ. ಪಕ್ಷ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ ಮೇಲೂ ಕೈ ನಾಯಕರು ಕುಬೇರಪ್ಪ ಪರ ಒಗ್ಗಟ್ಟು ಪ್ರದರ್ಶಿಸದಿರುವುದು ಈಗ ಗುಟ್ಟಾಗಿ ಉಳಿದಿಲ್ಲ.

ಒಂದು ಸುತ್ತಿನ ಪ್ರಚಾರ ಪೂರ್ಣ
ಮತದಾರ ಕಾರ್ಯಕರ್ತರ ಸಮಿತಿ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಪರ ಒಂದು ಸುತ್ತಿನ ಪ್ರಚಾರ ಕಾರ್ಯಪೂರ್ಣಗೊಂಡಿದೆ. ವಿಶೇ?ವಾಗಿ ರೋಣ ಮತಕ್ಷೇತ್ರದಲ್ಲಿ ಕುಬೇರಪ್ಪ ಅವರ ಪರವಾಗಿ ಸಾಕ? ಪ್ರಚಾರ ಮಾಡಲಾಗಿದೆ. ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸುವ ಕೆಲಸ ಮಾಡಲಾಗುತ್ತಿದೆ.
– ಜಿ.ಎಸ್. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಯುವ ಘಟಕವೂ ಜತೆಗಿಲ್ಲ: ಜಿಲ್ಲಾ ಯೂತ್ ಕಾಂಗ್ರೆಸ್ ಘಟಕ ಪದವೀಧರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಪದವೀಧರರನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಶ್ರಮಿಸಬೇಕಿತ್ತು. ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿತ್ತು. ಆದರೆ ಯೂತ್ ಕಾಂಗ್ರೆಸ್ ಘಟಕ ಇದ್ಯಾವುದನ್ನೂ ಮಾಡಲೇ ಇಲ್ಲ. ಕೊನೆ ಪಕ್ಷ ನೋಂದಣಿ ಪ್ರಕ್ರಿಯೆ ಮುಗಿದ ಮೇಲಾದರೂ ಪ್ರಚಾರ ಕಾರ್ಯದಲ್ಲಿತೊಡಗಿಕೊಳ್ಳುವ ನಿರೀಕ್ಷೆಯೂ ಹುಸಿಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಹೇಳುತ್ತಿದ್ದಾರೆ.

ಕಮಲ ಪ್ರಚಾರ ಜೋರು
ಬಿಜೆಪಿ ಅಭ್ಯರ್ಥಿ ಸಂಕನೂರ ಪರ ದೊಡ್ಡ ದೊಡ್ಡ ನಾಯಕರು ಮತಯಾಚನೆಯಲ್ಲಿ ತೊಡಗಿದ್ದಾರೆ. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಗಣಿ, ಭೂವಿಜ್ಞಾನ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಿ.ಸಿ. ಪಾಟೀಲ, ಸಂಸದರಾದ ಶಿವಕುಮಾರ ಉದಾಸಿ ಮತ್ತು ಯುವ ಮುಖಂಡ ಅನಿಲ ಮೆಣಸಿನಕಾಯಿ ಕ್ಷೇತ್ರದಲ್ಲಿದ್ದು, ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ, ರವಿ ಅವರೂ ಧಾರವಾಡ ಭಾಗದಲ್ಲಿ ಸಂಕನೂರ ಪರ ಮತ ಯಾಚಿಸಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಏಕಾಂಗಿಯಾಗಿ ಕ್ಷೇತ್ರದ ತುಂಬ ಓಡಾಡಿ, ಪದವೀಧರರ ಬೆಂಬಲವನ್ನು ಪಡೆಯಲು ತೀವ್ರ ಪ್ರಯತ್ನ ನಡೆಸುತ್ತಿದ್ದರೆ. ಕಾಂಗ್ರೆಸ್ಸಿನ ಯಾವುದೇ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗದಿರುವುದು ಕುಬೇರಪ್ಪ ಏಕಾಂಗಿಯಾಗಿರುವುದಕ್ಕೆ ಸಾಕ್ಷಿಯಾಗಿದೆ.

ನಾಯಕರು ಎಲ್ಲಿ?: ಉತ್ತರ ಕರ್ನಾಟಕದ ಪ್ರಭಾವಿ ನಾಯಕ, ಹಿರಿಯ ಕಾಂಗ್ರೆಸಿಗ ಎಚ್.ಕೆ. ಪಾಟೀಲ ಅವರು ಈ ಹಿಂದೆ ಪಶ್ಚಿಮ ಪದವೀಧರ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿದ್ದರು. ಆಗೆಲ್ಲ ಜಿಲ್ಲೆಯ ಕೈ ನಾಯಕರು ಆಸಕ್ತಿಯಿಂದ ಚುನಾವಣೆಯಲ್ಲಿ ಭಾಗವಹಿಸಿ, ಎಚ್.ಕೆ. ಪಾಟೀಲ ಗೆಲುವಿಗೆ ಉತ್ಸಾಹದಿಂದ ಕೆಲಸ ಮಾಡುತ್ತಿದ್ದರು. ಆದರೆ ಆ ಉತ್ಸಾಹ ಕುಬೇರಪ್ಪ ಅವರ ಸ್ಪರ್ಧೆಯ ವಿಷಯದಲ್ಲಿ ಕಾಣುತ್ತಿಲ್ಲ. ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಜಿ.ಎಸ್. ಪಾಟೀಲ ಹಾಗೂ ಕುಬೇರಪ್ಪ ಅವರ ಆಪ್ತ ಪ್ರೊ| ಹನುಮಂತಗೌಡ ಕಲ್ಮನಿ ಇವರನ್ನು ಹೊರತುಪಡಿಸಿ ಜಿಲ್ಲೆಯ ಕಾಂಗ್ರೆಸ್ ಮಾಜಿ ಶಾಸಕರು, ಮುಖಂಡರು ಕುಬೇರಪ್ಪ ಪರವಾಗಿ ಗಂಭೀರವಾಗಿ ಚುನಾವಣೆ ಎದುರಿಸುವ ಎದೆಗಾರಿಕೆ ಪ್ರದರ್ಶಿಸುತ್ತಿಲ್ಲ. ಪ್ರಚಾರಕ್ಕೂ ಬರುತ್ತಿಲ್ಲ.

ಉತ್ಸಾಹ ಇದೆ
ಯೂತ್ ಕಾಂಗ್ರೆಸ್ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದೆ. ಎಚ್.ಕೆ. ಪಾಟೀಲ ಅವರು ಸ್ಪರ್ಧಿಸುತ್ತಿದ್ದ ಸಂದರ್ಭದಲ್ಲಿ ಇದ್ದ ಉತ್ಸಾಹ ಈಗಲೂ ಇದೆ.
-ಅಶೋಕ ಮಂದಾಲಿ, ಯೂತ್ ಕಾಂಗ್ರೆಸ್ ಅಧ್ಯಕ್ಷ

ಆರೋಗ್ಯಕರ ಆಹಾರದಿಂದ ಆರೋಗ್ಯಕರ ಸಮಾಜ: ಕವಿತಾ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಮಹಿಳಾ ಶಕ್ತಿ ಮಹಾನ್ ಶಕ್ತಿಯಾಗಿದ್ದು, ಮಹಿಳೆಯ ಛಲ, ಹೋರಾಟ ಆಕೆಯ ಬದುಕನ್ನು ಉನ್ನತಕ್ಕೇರಿಸಿವೆ ಎಂದು ಗದಗ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಕವಿತಾ ದಂಡಿನ ಅಭಿಪ್ರಾಯಪಟ್ಟರು.
ಸೋಮವಾರ ಬೆಟಗೇರಿ ಅಂಬೇಡ್ಕರ್ ನಗರದ ಬಾಲಾಜಿ ಉದ್ಯಾನವನದಲ್ಲಿ ಗದುಗಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಏರ್ಪಡಿಸಿದ್ದ ಮಹಿಳಾ ಜಾಗೃತಿ ಯೋಜನೆಯಡಿ ಕುಟುಂಬದ ಆರೋಗ್ಯದಲ್ಲಿ ಪೌಷ್ಟಿಕ ಆಹಾರದ ಪಾತ್ರ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುಟುಂಬವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವ ಮಹಿಳೆ, ಸಮಾಜವನ್ನೂ ಪ್ರಗತಿಪಥದೆಡೆಗೆ ಸಾಗಿಸುವಲ್ಲಿ ಮುಂಚೂಣಿಯಲ್ಲಿದ್ದಾಳೆ ಎಂಬುದು ಇತಿಹಾಸ ಹಾಗೂ ರಾಜಕೀಯ ವಿದ್ಯಮಾನಗಳಿಂದ ನಿರೂಪಿತವಾಗಿದೆ. ಮಹಿಳೆಯನ್ನು ಭೂದೇವಿಗೆ ಹೊಲಿಕೆ ಮಾಡಲಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯನ್ನು ಭೂಮಿ ತೂಕಕ್ಕೆ ಹೋಲಿಕೆ ಮಾಡಲಾಗಿದೆ. ಆರೋಗ್ಯಕರ ಕುಟುಂಬ, ಸಮಾಜ ನಿರ್ಮಾಣದಲ್ಲಿ ಆರೋಗ್ಯಕರ ಆಹಾರವೂ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.
ಕೊರೊನಾ ಸೋಂಕಿನಿಂದಾಗಿ ಮಾನವ ಸಂಕುಲಕ್ಕೆ ತೀವ್ರ ಪೆಟ್ಟು ಬಿದ್ದಿದೆ, ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪ್ರಜ್ಞಾವಂತರಾದ ನಾವೆಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕುಟುಂಬ, ಪರಿವಾರದ ಕಾಳಜಿಯಿಂದ ಮಾಸ್ಕ್, ಸ್ಯಾನಿಟೈಜರ್ ಬಳಕೆಗೆ ಜ್ಞಾಪಿಸುವದಲ್ಲದೆ, ಬಿಸಿ-ಪೌಷ್ಟಿಕ ಆಹಾರ, ಪೇಯಗಳನ್ನು ಸಿದ್ಧಪಡಿಸಿ ಕುಟುಂಬದ ಆರೋಗ್ಯವನ್ನು ಮಹಿಳೆಯರೇ ಕಾಪಾಡುತ್ತಿದ್ದಾರೆ ಎಂದರು.
ಸಂಸ್ಥೆಯ ಯೋಜನಾ ನಿರ್ದೇಶಕ ಶಿವಾನಂದ ಆಚಾರ್ಯ ಮಾತನಾಡಿ, ಮಹಿಳೆಯರದು ಲೆಕ್ಕಾಚಾರದ ಬದುಕು. ಎಲ್ಲ ರೀತಿಯ ಸಮತೋಲನ ಕಾಯ್ದುಕೊಂಡು ಕುಟುಂಬ ಹಾಗೂ ಸಮಾಜವನ್ನು ಸನ್ಮಾರ್ಗದೆಡೆಗೆ ಮುನ್ನಡೆಸುವಲ್ಲಿ ಮಹಿಳೆಯರ ಪಾತ್ರ ಹಿರಿದಾದುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಒಕ್ಕೂಟದ ಅಧ್ಯಕ್ಷೆ ವೀನಾ ಕಬ್ಬಿಣದ, ಮಹಿಳೆಯರು ಸಂಘಟಿತರಾಗುವ ಮೂಲಕ ಸ್ವಯಂ ಉದ್ಯೋಗ ಕೈಗೊಂಡು ಕುಟುಂಬಕ್ಕೆ ನೆರವಾಗಬೇಕು. ಅಂದಾಗ ಕುಟುಂಬ ಆರ್ಥಿಕವಾಗಿ ಇನ್ನಷ್ಟು ಸದೃಢತೆ ಪಡೆಯುವುದು ಎಂದರು.
ಸವಿತಾ ಕುಲಕರ್ಣಿ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಈಶ್ವರ ಸ್ವಾಗತಿಸಿ ನಿರೂಪಿಸಿದರು. ದೀಪಾ ಅಂಗಡಿ ವಂದಿಸಿದರು. ಅನಸೂಯಾ ಶೀಲವಂತ, ಪಾರ್ವತಿ ಪಿರಂಗಿ, ಜಯಶ್ರೀ ಕಬ್ಬಿಣದ, ಖೈರೂನಾ ಬೇಲೇರಿ, ಶ್ರವಂತಿ ಗಾರ್ಗಿ, ಸವಿತಾ ನಾಗಾವಿ, ಕವಿತಾ ಶಿರಹಟ್ಟಿ, ರೇಶ್ಮಾ ಕಲಾಲ, ಸಹನಾ ಅಣ್ಣಿಗೇರಿ, ಅಂಬಿಕಾ ಮಿಟ್ಟಿ, ರುಕ್ಮಿಣಿ ಗಂಧದ ಕಾರ್ಯಕ್ರಮದಲ್ಲಿದ್ದರು.

ಕಾಡದಿರಲಿ ಕ್ಷಯ, ಬೇಡ ಭಯ: ಡಾ.ಸವಡಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕ್ಷಯ ರೋಗದ ಬಗ್ಗೆ ಯಾರೂ ಭಯ ಪಡುವ ಅಗತ್ಯವಿಲ್ಲ‌‌. ಸೂಕ್ತ ಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ಕ್ಷಯರೋಗ ಕಾಡುವುದಿಲ್ಲ. ಆದರೆ ಎಲ್ಲರಿಗೂ ತಮ್ಮ ಆರೋಗ್ಯ ಕಾಳಜಿ ಮುಖ್ಯ ಎಂದು ಗಂಗಾವತಿ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ನಿರ್ಮೂಲನಾ ಘಟಕ ಕೊಪ್ಪಳ. ಉಪ ವಿಭಾಗ ಆಸ್ಪತ್ರೆ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ ಗಂಗಾವತಿ, ಕರ್ನಾಟಕ ಆರೋಗ್ಯ ಸಂವರ್ಧನ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಕ್ಷಯ ರೋಗಿಗಳ ಮನೋಚೈತನ್ಯ ಹಾಗೂ ಪೌಷ್ಟಿಕ ಆಹಾರ ವಿತರಣಾ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕ್ಷಯ ರೋಗಿಗಳಿಗೆ ಆತ್ಮಸ್ಥೈರ್ಯ ಹಾಗೂ ಆರೋಗ್ಯದ ಕಳಕಳಿ ನೀಡುವ ಮಹದುದ್ದೇಶದಿಂದ ಉಪವಿಭಾಗ ಆಸ್ಪತ್ರೆಯ ಮಾನಸಿಕ ತಜ್ಞರಾದ ಡಾ.ವಾದಿರಾಜ ಅವರಿಂದ ಶಿಬಿರದಲ್ಲಿ ಪಾಲ್ಗೊಂಡ ಎಲ್ಲ ಕ್ಷಯರೋಗಿಗಳಿಗೆ ಮನೋ ಚೈತನ್ಯ ಹಾಗೂ ಮಾನಸಿಕ ಆರೋಗ್ಯದ ಕೌಶಲ್ಯಗಳ ಬಗ್ಗೆ ಮಾಹಿತಿ ನೀಡುತ್ತಾರೆ ಎಂದರು.

ಕ್ಷಯರೋಗಕ್ಕೆ ಯಾರು ಭಯಪಡುವ ಅಗತ್ಯವಿಲ್ಲ ನಿಮ್ಮೆಲ್ಲರಿಗೂ ನಮ್ಮ ಉಪ ವಿಭಾಗ ಆಸ್ಪತ್ರೆಯ ಎಲ್ಲಾ ವಿಭಾಗಗಳು ಸದಾ ತೆರೆದಿರುತ್ತದೆ. ಸರಿಯಾದ ಸಮಯದಲ್ಲಿ ಊಟ ಮತ್ತು ನಿಯಮಿತ ವ್ಯಾಯಾಮ ಮಾತ್ರೆಗಳನ್ನು ತೆಗೆದುಕೊಳ್ಳುವ ಮೂಲಕ ಸರ್ಕಾರಿ ವ್ಯವಸ್ಥೆಯಲ್ಲಿ ತಜ್ಞರಿಂದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಅವರು ಕೋರಿದರು.

ಕಾರ್ಯಕ್ರಮದ ಕುರಿತು ಕ್ಷಯರೋಗ ಪರಿವೀಕ್ಷಕ ಮಲ್ಲಿಕಾರ್ಜುನ್ ಅವರು ಮಾತನಾಡಿ, ಕ್ಷಯರೋಗವು ಯಾವುದೇ ಪಾಪ ಕರ್ಮಗಳಿಂದ ಬರುವಂಥದ್ದಲ್ಲ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಕ್ಷಯ ಇರುವವರು ಕೆಮ್ಮುವಾಗ, ಸೀನುವಾಗ ಅವರ ಬಾಯಿಂದ ಬರುವ ತುಂತುರು ಹನಿಗಳ ಮುಖಾಂತರ ಆರೋಗ್ಯವಂತ ವ್ಯಕ್ತಿಗೆ ಕ್ಷಯ ಹರಡುತ್ತದೆ.

ಚಿಕಿತ್ಸೆ ಕೊಡದಿರುವ ರೋಗಿಯು ಒಂದು ವರ್ಷಕ್ಕೆ 16 ರಿಂದ 18 ಜನರಿಗೆ ಸೋಂಕನ್ನು ಹರಡುತ್ತಾನೆ‌. ಆದ್ದರಿಂದ ಶಿಬಿರಾರ್ಥಿಗಳು ನಿಮ್ಮ ಮನೆಯ ಸುತ್ತಮುತ್ತಲಿನಲ್ಲಿರುವ ಕ್ಷಯ ಲಕ್ಷಣವಿರುವ ಅವರನ್ನು ಗುರುತಿಸಿ ಪರೀಕ್ಷೆ ಮತ್ತು ಚಿಕಿತ್ಸೆಗೆ ಕಳುಹಿಸಿಕೊಡಿ ಎಂದು ತಿಳಿಸಿದರು.

ನಕಲಿ ವೈದ್ಯರನ್ನು ಸಂಪರ್ಕಿಸದೆ ಸರ್ಕಾರಿ ವ್ಯವಸ್ಥೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದಲ್ಲಿ ನೀಡುವ ಚಿಕಿತ್ಸೆ ಪಡೆದುಕೊಳ್ಳಲು ಅವರು ಮನವಿ ಮಾಡಿದರು.

ಚಿಕಿತ್ಸಾ ಮೇಲ್ವಿಚಾರಕ ನಾಗರಾಜ್ ಮಾತನಾಡಿ, ಕ್ಷಯ ರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ನೀಡಲಾಗುವುದು. ಜೊತೆಗೆ ಕ್ಷಯ ದೃಢ ಪಟ್ಟವರಿಗೆ ಸರ್ಕಾರದಿಂದ ಪ್ರತಿ ತಿಂಗಳು ಐನೂರು ರೂ.ಗಳ ಸಹಾಯಧನ ನೀಡಲಾಗುವುದು. ಹಾಗೂ ಚಿಕಿತ್ಸೆಯ ಸಮಯದಲ್ಲಿ ಸಹ ವ್ಯಾಧಿ ಸೋಂಕುಗಳ ಪರೀಕ್ಷೆ ಹಾಗೂ ಚಿಕಿತ್ಸೆ ಕೂಡ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮ ಸಂಯೋಜಕಿ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಕುಮಾರಿಕಾ ಸಿಂಬಿ ಮಾತನಾಡಿ, ಪವರ್ ವಿಟಾ ಪ್ರೋಟೀನ್ ಪೌಡರ್ ಹೇಗೆ ಉಪಯೋಗಿಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮ ಸಂಯೋಜಕ ಹನುಮಂತ ಅವರು ಶಿಬಿರಾರ್ಥಿಗಳಿಗೆ ತೂಕ, ಅವರ ಆಕ್ಸಿಜನ್ ಮಟ್ಟ, ಟೆಂಪರೇಚರ್ ಪರೀಕ್ಷೆ ಮಾಡಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ಶಿವಾನಂದ್, ಸಮುವೆಲ್, ಯಮನೂರಪ್ಪ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಆನ್‌ಲೈನ್ ಸ್ಕಿಲ್ ಗೇಮ್‌ಗಳನ್ನು ನಿಷೇಧಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಇತ್ತೀಚೆಗೆ ಆನ್‌ಲೈನ್ ಗೇಮ್‌ಗಳೆಂಬ ಹೊಸ ಅವತಾರದಲ್ಲಿ ವಯಸ್ಸಿನ ಹಂಗಿಲ್ಲದೆ ಜನರು ಜೂಜಾಟದ ದಾಸರಾಗುತ್ತಿರುವುದು ತೀವ್ರ ಆತಂತಕ್ಕೆ ಕಾರಣವಾಗಿದೆ. ಇವುಗಳನ್ನು ನಿಷೇಧಿಸಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಆತಂಕ ವ್ಯಕ್ತಪಡಿಸಿದರು. ಅವರು ಆನ್‌ಲೈನ್ ಸ್ಕಿಲ್ ಗೇಮ್ ಜೂಜಾಟಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಸೋಮವಾರ ಗಂಗಾವತಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಆನ್‌ಲೈನ್ ಗೇಮ್ ಹೆಸರಿನಲ್ಲಿ ರೂಪಾಂತರಗೊಂಡು ಜನರನ್ನು ಆಕರ್ಷಿಸಲಾಗುತ್ತಿದೆ.
ಬರೀ 25ರಿಂದ 50 ರೂ. ಬಂಡವಾಳ ಹಾಕಿ ಕೋಟಿ ಕೋಟಿ ಹಣ ಗೆಲ್ಲಬಹುದೆಂಬ ಆಮಿಷವೊಡ್ಡಿ ಯುವಕರ ದಾರಿ ತಪ್ಪಿಸುವಂತಹ ರಮ್ಮಿ ಸರ್ಕಲ್, ಡ್ರೀಮ್-11, ಎಂ-11 ಸರ್ಕಲ್, ಗೇಮ್ ಜಿ, ಮಿಲಿಯನ್ ಫೆಸ್ಟ್, ಪ್ರೀಮಿಯರ್ ಲೀಗ್, ಪೋಕರಿಬಾಜಿ, ರಮ್ಮಿ ಬಾಜಿ, ರಮ್ಮಿ ಗುರು, ಜಂಗ್ಲಿ ರಮ್ಮಿ, ವಿನ್ ರಮ್ಮಿ, ರಮ್ಮಿ ಕಲ್ಚರ್, ಮೈಟೀಮ್ 11 ಸರ್ಕಲ್, ಫ್ಯಾನ್ ಫ್ಯಾಂಟಸಿ, ಪೇಟಿಎಂ ಫಸ್ಟ್ ಗೇಮ್ ಮುಂತಾದ ನೂರಾರು ಆನ್‌ಲೈನ್ ಗೇಮ್ ಆಪ್‌ಗಳು ಸ್ಕಿಲ್ ಗೇಮ್ (ಕೌಶಲ್ಯ ಆಟ) ಹೆಸರಲ್ಲಿ ಜೂಜಾಡಿಸಿ, ಸಾವಿರಾರು ಕುಟುಂಬಗಳನ್ನು ಬೀದಿಗೆ ತರುತ್ತಿವೆ.
ಕ್ರಿಕೆಟ್ ಮತ್ತು ಜೂಜು ಪ್ರೇಮಿಗಳನ್ನೇ ಗುರಿಯಾಗಿಸಿಕೊಂಡು ಆನ್‌ಲೈನ್ ಆಪ್‌ಗಳನ್ನು ರೂಪಿಸಲಾಗುತ್ತಿದೆ. ಈ ಆಪ್‌ಗಳ ನಿಯಂತ್ರಣಕ್ಕೆ ಕಾನೂನಿನ ಅಗತ್ಯವಿದೆ ಎಂದು ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಇತ್ತೀಚೆಗೆ ಅಭಿಪ್ರಾಯಿಸಿದ್ದು ಸಮಸ್ಯೆಯ ಗಂಭೀರತೆಗೆ ಸಾಕ್ಷಿಯಾಗಿದೆ ಎಂದರು.
ಇಂತಹ ಆನ್‌ಲೈನ್ ಗೇಮ್‌ಗಳಿಗೆ ಕೃಷಿಕರು, ವಿದ್ಯಾವಂತ ನಿರುದ್ಯೋಗಿಗಳು, ಸಣ್ಣಪುಟ್ಟ ವ್ಯಾಪಾರಿಗಳ ಹೆಸರಿನಲ್ಲಿ ಜಾಹೀರಾತು ವಿಡಿಯೋ ಮಾಡಿ ಪ್ರಕಟಿಸಲಾಗುತ್ತಿದೆ. ಸರ್ಕಾರ ಇಂತಹ ಆನ್‌ಲೈನ್ ಗೇಮ್ ಆಪ್‌ಗಳನ್ನು ನಿ?ಧಿಸಿ, ಯುವಕರು ಜೂಜಾಟಕ್ಕೆ ಬಲಿಯಾಗುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.
ಕರವೇ ಪದಾಧಿಕಾರಿಗಳಾದ ಭರಮಪ್ಪ, ಶಂಕರ ಪೂಜಾರಿ, ಹುಸೇನಸಾಬ್, ಉಮೇಶ, ಅಮ್ಜಾದ್, ಈರಣ್ಣ, ಜಿಲಾನ್ ಸಾಬ್, ಹಸೇನಸಾಬ್ ಮುದುಗಲ್ ಉಪಸ್ಥಿತರಿದ್ದರು.
 

ವಸಂತಸಿಂಗ ಜಮಾದಾರ ನಗರ ಅಭಿವೃದ್ಧಿಗೆ ಮನವಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ-ಬೆಟಗೇರಿ ನಗರಸಭೆ ವಾರ್ಡ್ ನಂ. 4ರ ವಸಂತಸಿಂಗ ಜಮಾದಾರ ನಗರದ ಅಭಿವೃದ್ಧಿಗೆ ಆಗ್ರಹಿಸಿ ವಸಂತಸಿಂಗ ಜಮಾದಾರ ನಗರ ಅಭಿವೃದ್ದಿ ಹೋರಾಟ ಸಮಿತಿಯ ಅಧ್ಯಕ್ಷರಾದ ಹುಲ್ಲೇಶ ಎಚ್. ಭಜಂತ್ರಿ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಹುಯಿಲಗೋಳ ರಸ್ತೆ ಬೆಟಗೇರಿಯಿಂದ 2 ಕಿ.ಮೀ. ದೂರದಲ್ಲಿ ವಸಂತಸಿಂಗ ಜಮಾದಾರ ನಗರವಿದ್ದು, ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ಹಾಗೂ ತಗಡಿನ ಶೆಡ್‌ಗಳಲ್ಲಿ ವಾಸಿಸುತ್ತಿದ್ದಾರೆ. ಹಕ್ಕುಪತ್ರಕ್ಕಾಗಿ ಮನವಿ ಸಲ್ಲಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ನಗರಸಭೆ ವತಿಯಿಂದ ವಿದ್ಯುತ್ ಹಾಗೂ ಶೌಚಾಲಯ ಸೌಲಭ್ಯಗಳನ್ನು ಮಾತ್ರ ಕಲ್ಪಿಸಿದ್ದಾರೆ. ಇಲ್ಲಿನ ಆಶ್ರಯ ಕಾಲೊನಿಯಲ್ಲಿ ಸುಮಾರು 200 ಪ್ಲಾಟ್‌ಗಳು ಖಾಲಿ ಇದ್ದು, ನಗರಸಭೆ ಅಥವಾ ಸರ್ಕಾರದ ವತಿಯಿಂದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಮನೆ ಕಟ್ಟಿಕೊಡಬೇಕೆಂದು ಹುಲ್ಲೇಶ ಭಜಂತ್ರಿ ಮನವಿ ಮಾಡಿಕೊಂಡರು.
1995 ರಲ್ಲಿ ಇಂದಿರಾ ಹಾಗೂ ಡಾ. ಬಿ.ಆರ್. ಅಂಬೇಡ್ಕರ ಆವಾಸ ವಸತಿ ಯೋಜನೆ ಅಡಿಯಲ್ಲಿ ವಸಂತಸಿಂಗ ಜಮಾದಾರ ನಗರ ಆಶ್ರಯ ಕಾಲೋನಿಯನ್ನು ಸರ್ಕಾರ ನಿರ್ಮಿಸಿದೆ. ಈವರೆಗೂ ಗಟಾರು, ರಸ್ತೆ, ಬೀದಿದೀಪ, ಉದ್ಯಾನವನ, ಅಂಗನವಾಡಿ, ಶಾಲೆ, ಮುಂತಾದ ಸೌಲಭ್ಯಗಳನ್ನು ಒದಗಿಸಿಲ್ಲ. ನಮ್ಮ ಮನವಿಗೇ ಸರ್ಕಾರ ಇನ್ನು 45 ದಿನಗಳಲ್ಲಿ ಸ್ಪಂದಿಸದಿದ್ದರೆ ಡಿ. 15 ರಂದು ಬೆಟಗೇರಿ ವಸಂತಸಿಂಗ ಜಮಾದಾರ ನಗರ ಆಶ್ರಯ ಕಾಲೋನಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹುಲ್ಲೇಶ ಎಚ್. ಭಜಂತ್ರಿ ಹಾಗೂ ರಾಮಣ್ಣ ಭಜಂತ್ರಿ ಮುಂಡರಗಿ ಎಚ್ಚರಿಸಿದರು.
ಭೀಮಣ್ನ ಪನ್ನೂರ, ವೀರನಗೌಡ, ಭೀಮಾಜಿ ಪಲ್ಲೂರ, ದೇವೇಂದ್ರಪ್ಪ ಮ್ಯಾಗೇಡಿ, ಫಕ್ಕೀರಪ್ಪ ಮಾಚಲ, ಬಸಪ್ಪ ಲಕ್ಕುಂಡಿ, ನಾಗರಾಜ ವಾಲ್ಮಿಕಿ, ಲಕ್ಷ್ಮಣ ಅಡಕಿ, ಯಲ್ಲಮ್ಮ ಬಾರಕೇರ, ಲಕ್ಷ್ಮವ್ವ, ಶೋಭಾ ಬಾಕಳೆ, ಬಸಣ್ಣ ಕೊತಂಬರಿ, ದಾನೇಶ ಹಿರೇಮಠ, ಸುಭಾಸ ಕದಡಿ ಉಪಸ್ಥಿತರಿದ್ದರು.
 

ಹೆಣ್ಣು ಮಗುವಿನ ಕುರಿತು ಜಾಗೃತಿ ಮೂಡಿಸಿ: ಹೋಸಕೇರಾ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಹೆಣ್ಣು ಮಕ್ಕಳ ಸಂಖ್ಯೆ ದಿನದಿನಕ್ಕೆ ಇಳಿಮುಖವಾಗತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಹೆಣ್ಣು ಮಗುವಿನ ಕುರಿತು ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ಲಿಂಗ ಸಮಾನತೆ, ಭ್ರೂಣಹತ್ಯ, ಬಾಲ್ಯವಿವಾಹ ಸಮಸ್ಯೆಗಳನ್ನು ಪರಿಹರಿಸಲು ಜಾಗೃತಿ ಮೂಡಿಸಬೇಕಿದೆ ಎಂದು ಆರ್.ಪಿ.ಡಿ. ಟಾಸ್ಕ್ ಫೋರ್ಸ್ ರಾಜ್ಯಾಧ್ಯಕ್ಷ ಮಂಜುನಾಥ ಎಂ. ಹೊಸಕೇರಾ ಹೇಳಿದರು.
ಕರ್ನಾಟಕ ರಾಜ್ಯ ವಿಕಲಚೇತನರ ಆರ್.ಪಿ.ಡಿ. ಟಾಸ್ಕ್ ಫೋರ್ಸ್ ಜಿಲ್ಲಾ ಘಟಕ ಕೊಪ್ಪಳ, ಶ್ರೀ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘ ಅಳವಂಡಿ, ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿದಿನ ಕೊಪ್ಪಳ, ಸ್ಫೂರ್ತಿ ಹದಿಹರಿಯರ ಮಾದರಿ ಹೆಣ್ಣು ಮಕ್ಕಳ ಯೋಜನೆ ಅಡಿಯಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾದ ಹೆಣ್ಣು ಮಕ್ಕಳಿಗೆ ಪ್ರಶಂಸನಾ ಪ್ರಮಾಣ ಪತ್ರಗಳನ್ನು ಅಳವಂಡಿ ಶ್ರೀ ಸಿದ್ದೇಶ್ವರ ಸಮುದಾಯ ಭವನದಲ್ಲಿ ವಿತರಿಸಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ಶ್ರೀ ಮರುಳಾದ್ಯ ಶಿವಾಚಾರ್ಯ ಸ್ವಾಮೀಜಿ, ಹೆಣ್ಣು ಮಕ್ಕಳು ಚಿಕ್ಕಂದಿನಲ್ಲಿ ತಂದೆ ತಾಯಿ, ಮದುವೆ ಬಳಿಕ ಗಂಡನ, ಮುಪ್ಪಿನ ಕಾಲದಲ್ಲಿ ಮಕ್ಕಳ ಆಶ್ರಯದಲ್ಲಿ ಬದುಕುವುದು ಸಾಮಾಜಿಕ ಧರ್ಮ. ಬಾಲ್ಯವಿವಾಹ ನಿಷೇಧ ಕಾಯ್ದೆ ಜಾರಿ ಬಗ್ಗೆ ಜನಜಾಗೃತಿ ಅಭಿಯಾನ ಆಗಬೇಕಿದೆ ಎಂದು ಆಶೀರ್ವದಿಸಿದರು.
ಗ್ರಾ.ಪಂ. ಕಾರ್ಯದರ್ಶಿ ಬಸವರಾಜ, ಜಿಲ್ಲಾ ಯುವ ಪ್ರಶಸ್ತಿ ವಿಜೇತ ವೀರೇಶ ಹಾಲಗುಂಡಿ, ಶ್ರೀ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಳವಂಡಿ, ಯೋಗೇಶ್ವರ್ ವಾಲಿಕಾರ, ತಾಜುದ್ದೀನ್, ಅಂಗನವಾಡಿ ಕಾರ್ಯಕರ್ತೆಯರಾದ ಪುಷ್ಪಾವತಿ ಮುನಿಯಮ್ಮನವರ, ಲಲಿತಾ ಆರೇರ, ಅನ್ನಪೂರ್ಣಾ, ಮರಿಬಸಮ್ಮ, ಲಲಿತಾ, ಹನುಮವ್ವ, ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನದ ಸಿಬ್ಬಂದಿ ಮಲ್ಲಪ್ಪ, ಲತಾ ಉಪಸ್ಥಿತರಿದ್ದರು.
 

ಬೀದಿ ದನಗಳ ಮಾಲೀಕರಿಗೆ ಚಳಿ ಬಿಡಿಸಿದ ಅಧಿಕಾರಿಗಳು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಗಂಗಾವತಿ ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ದಟ್ಟವಾಗುತ್ತಿದೆ. ಇದರೊಂದಿಗೆ ರಸ್ತೆ ಅಪಘಾತಗಳೂ ಹೆಚ್ಚುತ್ತಿದ್ದು, ಬೀದಿ ದನಗಳು ರಸ್ತೆಯ ಮೇಲೆ ನಿಲ್ಲುವುದು, ಓಡಾಡುವುದು ಹಾಗೂ ಮಲಗುವುದೂ ಪ್ರಮುಖ ಕಾರಣ ಎಂದರಿತ ಪೊಲೀಸ್ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು, ಸೋಮವಾರ ರಾತ್ರಿ ತಂಡಗಳನ್ನು ರಚಿಸಿ, ರಸ್ತೆ ಮೇಲೆ ಮಲಗಿದ್ದ ಜಾನುವಾರುಗಳನ್ನು ಗಂಗಾವತಿ ಪ್ರವಾಸಿ ಮಂದಿರದ ಆವರಣಕ್ಕೆ ಸಾಗಿಸಿದರು.
ಆ ಬಳಿಕ ಅಧಿಕಾರಿಗಳು ಈ ಜಾನುವಾರುಗಳನ್ನು ಕೊಪ್ಪಳದ ಗೋಶಾಲೆಗೆ ಕಳುಹಿಸಲು ಸಿದ್ಧತೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಾನುವಾರುಗಳ ಮಾಲೀಕರು ಆಗಮಿಸಿ, ಅವುಗಳನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು.

ಪೊಲೀಸ್ ಮತ್ತು ನಗರಸಭೆ ಅಧಿಕಾರಿಗಳು ಜಾನುವಾರು ಮಾಲೀಕರನ್ನು ನಗರದ ಪೊಲೀಸ್ ಠಾಣೆಗೆ ಕರೆಸಿ, ಅವರಿಗೆ ಸೂಕ್ತವಾದ ಮಾಹಿತಿ ನೀಡಿ ತಪ್ಪೊಪ್ಪಿಗೆ ಪತ್ರವನ್ನು ಬರೆಸಿಕೊಂಡರು.
ಡಿವೈಎಸ್ಪಿ ಉಜ್ಜನಕೊಪ್ಪ ಮಾತನಾಡಿ, ಜಾನುವಾರುಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ, ರಸ್ತೆ ಅಪಘಾತಗಳೂ ಸಂಭವಿಸುತ್ತಿವೆ. ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದರೂ ದನಗಳನ್ನು ಬೀದಿಗೆ ಬಿಡುವುದನ್ನು ನಿಲ್ಲಿಸಿಲ್ಲ. ಇದು ಕೊನೆಯ ಅವಕಾಶ. ಇದೇ ವರ್ತನೆ ಮುಂದುವರಿದರೆ ಜಾನುವಾರುಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಗಂಗಾವತಿ ನಗರ ಠಾಣೆಯ ಪಿಎಸ್‌ಐ ವೆಂಕಟಸ್ವಾಮಿ, ನಗರಸಭೆ ಪೌರಾಯುಕ್ತ ಅರವಿಂದ್ ಜಮಖಂಡಿ, ನಗರಸಭೆ ಸಿಬ್ಬಂದಿ ದತ್ತಾತ್ರೇಯ ಹೆಗಡೆ, ನಾಗರಾಜ್, ನೇತ್ರಾವತಿ, ಸಾಮಾಜಿಕ ಹೋರಾಟಗಾರ ಹುಸೇನಪ್ಪ ಅಂಚಿನಾಳ, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಹುಲಿಗೇಶ ಕುಜ್ಜಿ ಉಪಸ್ಥಿತರಿದ್ದರು.
 

ಗದಗ ರೈಲ್ವೆ ನಿಲ್ದಾಣಕ್ಕೆ ಪುಟ್ಟರಾಜರ ಹೆಸರಿಡಲು ಮನವಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಅಂಧ, ಅನಾಥರ ಬಾಳಿಗೆ ಬೆಳಕಾಗಿದ್ದ ಸಂಗೀತ ಸಾಮ್ರಾಟ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರು ಸಂಗೀತ ಲೋಕದಲ್ಲಿ ಮಾಡಿದ ಸಾಧನೆ ಅಪ್ರತಿಮವಾಗಿದ್ದು, ಅವರ ಹೆಸರನ್ನು ಚಿರಸ್ಥಾಯಿಯಾಗಿಸಲು ಗದಗ-ಬೆಟಗೇರಿ ರೈಲ್ವೇ ನಿಲ್ದಾಣಕ್ಕೆ ಡಾ. ಪುಟ್ಟರಾಜ ಗವಾಯಿಗಳ ಹೆಸರನ್ನು ಇರಿಸುವಂತೆ ರೈಲ್ವೇ ಇಲಾಖೆಗೆ ಶಿಫಾರಸ್ಸು ಮಾಡಲು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಸಂಸದ ಶಿವಕುಮಾರ ಉದಾಸಿ ಅವರಿಗೆ ಮನವಿ ನೀಡಿದರು.
ಕೇಂದ್ರ ರೈಲ್ವೆ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸದ್ಗುರು ಸಿದ್ದಾರೂಢ ಸ್ವಾಮೀಜಿ ಅವರ ನಾಮಕರಣ ಮಾಡಿದ್ದು, ಅದೇ ಮಾದರಿಯಲ್ಲಿ ಗದಗ ವೀರೇಶ್ವರ ಪುಣ್ಯಾಶ್ರಮದ ಲಿಂ. ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳವರ ಹೆಸರನ್ನು ಇರಿಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರಾದ ಬಸವಣ್ಣೆಯ್ಯ ಹಿರೆಮಠ, ಮಹೇಶ ದಾಸರ, ವೆಂಕಟೇಶ ಬೇಲೂರ, ಸಹದೇವ ಬಂಡಿ, ಯಲ್ಲಪ್ಪಣ್ಣ ತೇರದಾಳ, ಪರಶುರಾಮ ಬಂಕದ, ತಿಮ್ಮಣ್ಣ ಡೊಣಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಶಿವಬಸವ ಜನಕಲ್ಯಾಣ ಸಂಸ್ಥೆ, ಸೋಮೇಶ್ವರಯ್ಯ ಹಿರೇಮಠ ಜನಕಲ್ಯಾಣ ಪ್ರತಿಷ್ಠಾನ, ನಾಗಾವಿ, ವೆಂಕಟೇಶ ದಾಸರ ಅಭಿಮಾನಿಗಳ ಬಳಗ, ಕರ್ನಾಟಕ ರಾಜ್ಯ ರೈಲ್ವೇ ಹೋರಾಟ ಸಮಿತಿ, ಗದಗ ಬೋವಿ ಸಮಾಜದ ಮುಖಂಡರು ಮನವಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸನ್ಮಾನ: ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಪ್ರಥಮ ಬಾರಿಗೆ ಗದಗ ನಗರಕ್ಕೆ ಆಗಮಿಸಿದ ಬಿ. ಶ್ರೀರಾಮುಲು, ಸಂಸದರಾದ ಶಿವಕುಮಾರ ಉದಾಸಿ ಹಾಗೂ ಬಿಜೆಪಿ ಮುಖಂಡರಾದ ಅನಿಲ ಮೆಣಸಿನಕಾಯಿ ಅವರನ್ನು ಸನ್ಮಾನಿಸಿ, ಸಾಧನೆಯ ಹರಿಕಾರ ನರೇಂದ್ರ ಮೋದಿ ಅವರನ್ನು ಕುರಿತ ಗ್ರಂಥವನ್ನು ನೀಡಿ ಗೌರವಿಸಿದರು.
ಮಂಜುನಾಥ ಶಾಂತಗಿರಿ, ಕೃಷ್ಣಾ ಜಾಧವ, ಅಡಿವೆಪ್ಪ ಬಾಗಲಕೋಟಿ, ಜಗದೀಶ ಕಟ್ಟಿಮನಿ, ದೇವು ಕಟಗಿ, ಸುನೀಲ ನಿಡಗುಂದಿ, ದ್ಯಾಮಣ್ಣ ಹುನಗುಂದ, ಹನಮಂತ ಗೊಜನೂರ, ಪರಶುರಾಮ ಬಂಕದಮನಿ, ಶ್ರೀನಿವಾಸ ಖಟವಟೆ, ಶಂಕರ ಸಿದ್ಲಿಂಗ್, ಚಂದ್ರಶೇಖರ ಬ್ಯಾಹಟ್ಟಿ, ಕುಮಾರಗೌಡ ಪಾಟೀಲ ಉಪಸ್ಥಿತರಿದ್ದರು.
 

ಸಿಡಿಲು ಬಡಿದು ಬಾಲಕಿ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಲಬುರ್ಗಾ: ತಾಲೂಕಿನ ಗೆದಗೇರಿ ತಾಂಡಾದಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ಬಾಲಕಿ ಮೃತಪಟ್ಟಿದ್ದಾಳೆ.

ರೂಪಾ ಚೌಹಾಣ (14) ಮೃತಪಟ್ಟ ಬಾಲಕಿಯಾಗಿದ್ದಾಳೆ. ಜಮೀನಿನಲ್ಲಿ ನಿಂತಾಗ ಸಿಡಿಲು‌ ಬಡಿದು ಅಸ್ವಸ್ಥಗೊಂಡು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾಳೆ.

ಮೃತ ಬಾಲಕಿ 6ನೇ ತರಗತಿ ಶಾಲೆ ಅಭ್ಯಾಸ ಮಾಡುತ್ತಿದ್ದಳು. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಹಾರ ಚುನಾವಣೆ ಬಂದೋಬಸ್ತ್‌ಗೆ ವಿಶೇಷ ರೈಲು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯ ಬಂದೋಬಸ್ತ್ ಕರ್ತವ್ಯಕ್ಕೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್-ಹೊಸಳ್ಳಿಯ ಇಂಡಿಯನ್ ರಿಜರ್ವ್ ಬಟಾಲಿಯನ್ (ಐಆರ್‌ಬಿ)ನ ಸುಮಾರು 200 ಸಿಬ್ಬಂದಿ ವಿಶೇಷ ರೈಲಿನಲ್ಲಿ ರವಿವಾರ ರಾತ್ರಿ ತೆರಳಿದರು.

ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಬಂದ ವಿಶೇಷ ರೈಲನ್ನು ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಯಾನಿಟೈಜರ್ ಮಾಡಲಾಯಿತು. ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಐಆರ್‌ಬಿ ಕಮಾಂಡೆಂಟ್ ಮಹಾದೇವಪ್ರಸಾದ್ ಅವರು ಸಹಾಯಕ ಕಮಾಂಡೆಂಟ್ ಸತೀಶ್. ಇ. ನೇತೃತ್ವದಲ್ಲಿ ಬಿಹಾರ ರಾಜ್ಯಕ್ಕೆ ತೆರಳುತ್ತಿರುವ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.

ಚುನಾವಣಾ ಕರ್ತವ್ಯದ ವೇಳೆ ಶಿಸ್ತಿನಿಂದ ಕೆಲಸ ಮಾಡಿ, ಇಡೀ ದೇಶಕ್ಕೆ ನಿಮ್ಮ ಕೆಲಸ ಮಾದರಿಯಾಗಲಿ ಎಂದು ಶುಭ ಹಾರೈಸಿ ಬೀಳ್ಕೊಟ್ಟರು.

error: Content is protected !!