Home Blog Page 303

ಬೆಂಗಳೂರಿಗರೇ ಎಚ್ಚರ| ಗಾಳಿಯ ಗುಣಮಟ್ಟ ತೀವ್ರ ಕುಸಿತ; ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ!

0

ಬೆಂಗಳೂರು: ದಿನೇ ದಿನೇ ಹದಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ.

ಕಳೆದ ಕೆಲವು ದಿನಗಳಿಂದ 170ರಿಂದ 200ರ ನಡುವೆ ಏರಿಳಿತ ಕಾಣುತ್ತಿದ್ದ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಇಂದೂ 196ಕ್ಕೆ ತಲುಪಿದೆ. ನಗರದ ವಾತಾವರಣ ದೆಹಲಿಯ ಸ್ಥಿತಿಯನ್ನು ನೆನಪಿಸುವಂತಿದ್ದು, ಇದೇ ರೀತಿ ಮುಂದುವರಿದರೆ ಜನರ ಆರೋಗ್ಯಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಬೀಸುತ್ತಿರುವ ಶೀತ ಅಲೆಯ ಪರಿಣಾಮದಿಂದಾಗಿ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಅನೇಕರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಕ್ಕೆ ಜೊತೆಗೆ ವಾಯು ಮಾಲಿನ್ಯ ಕೂಡ ಸೇರಿಕೊಂಡಿರುವುದರಿಂದ ಅಸ್ತಮಾ, ಅಲರ್ಜಿ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿದೆ. ಇಂದಿನ ಅಂಕಿಅಂಶಗಳ ಪ್ರಕಾರ ಬೆಂಗಳೂರಿನಲ್ಲಿ PM2.5 ಪ್ರಮಾಣ 121ಕ್ಕೆ ಏರಿಕೆಯಾದರೆ, PM10 ಪ್ರಮಾಣ 167ರ ಮಟ್ಟದಲ್ಲಿದೆ. 150ಕ್ಕಿಂತ ಹೆಚ್ಚಿನ AQI ಜನರಲ್ಲಿ ಅಸ್ತಮಾ ಸಮಸ್ಯೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಅಗತ್ಯವಿದ್ದರೆ ಮಾಸ್ಕ್ ಧರಿಸುವುದು, ಏರ್ ಪ್ಯೂರಿಫೈಯರ್ ಬಳಕೆ ಹಾಗೂ ಅನಾವಶ್ಯಕವಾಗಿ ಹೊರಗೆ ತೆರಳದಂತೆ ತಜ್ಞರು ಸಲಹೆ ನೀಡಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹೋಲಿಕೆಯಲ್ಲಿ ಈ ವರ್ಷವೇ ಬೆಂಗಳೂರಿನ ಗಾಳಿಯ ಗುಣಮಟ್ಟ ಹೆಚ್ಚು ಹದಗೆಟ್ಟಿದ್ದು, 2025ರಲ್ಲಿ ಸುಮಾರು 90ಕ್ಕೂ ಹೆಚ್ಚು ದಿನಗಳು ಏರ್ ಕ್ವಾಲಿಟಿ ‘ಅನಾರೋಗ್ಯಕರ’ ಮಟ್ಟದಲ್ಲೇ ದಾಖಲಾಗಿರುವುದಾಗಿ AQI ವರದಿ ತಿಳಿಸಿದೆ. ಶೀತ ಅಲೆ ಹಾಗೂ ಕಳಪೆ ಗಾಳಿಯ ಸಂಯೋಜನೆ ನಗರ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

ಶಾರುಖ್–ದೀಪಿಕಾ ರೊಮ್ಯಾಂಟಿಕ್ ಹಾಡು ಲೀಕ್? ‘ಕಿಂಗ್’ ವಿಡಿಯೋ ವೈರಲ್!

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕಿಂಗ್ 2026ರಲ್ಲಿ ಬಿಡುಗಡೆಯಾಗಲಿದೆ. ಎರಡು ವರ್ಷಗಳ ಬಳಿಕ ಶಾರುಖ್ ಅವರನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಹಿನ್ನೆಲೆಯಲ್ಲಿ, ಈ ಆಕ್ಷನ್ ಥ್ರಿಲ್ಲರ್ ಚಿತ್ರದ ಬಗ್ಗೆ ಭಾರಿ ಕ್ರೇಜ್ ನಿರ್ಮಾಣವಾಗಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ರೊಮ್ಯಾಂಟಿಕ್ ಹಾಡಿನಂತೆ ಕಾಣುವ ಒಂದು ವಿಡಿಯೋ ವೈರಲ್ ಆಗಿದ್ದು, ಇದು ‘ಕಿಂಗ್’ ಚಿತ್ರದ ಲೀಕ್ ಆದ ಹಾಡು ಎನ್ನುವ ಊಹಾಪೋಹಗಳು ಹರಡಿದ್ದವು. ವಿಡಿಯೋದಲ್ಲಿ ಶಾರುಖ್ ಖಾನ್ ಸಾಲ್ಟ್ ಅಂಡ್ ಪೆಪ್ಪರ್ ಲುಕ್‌ನಲ್ಲಿ ಹ್ಯಾಂಡ್ಸಮ್ ಆಗಿ ಕಾಣಿಸಿಕೊಂಡರೆ, ದೀಪಿಕಾ ಪಡುಕೋಣೆ ಹಸಿರು ಸೀರೆ ಹಾಗೂ ಕೆಂಪು ಡ್ರೆಸ್‌ನಲ್ಲಿ ಗಮನ ಸೆಳೆದಿದ್ದರು. ವಿಡಿಯೋ ಕೊನೆಯಲ್ಲಿ ಇಬ್ಬರ ಮಧ್ಯೆ ಕಿಸ್ ದೃಶ್ಯವೂ ಇದ್ದುದರಿಂದ ಕುತೂಹಲ ಮತ್ತಷ್ಟು ಹೆಚ್ಚಾಗಿತ್ತು.

ಆದರೆ ಈ ವಿಡಿಯೋ ಅಧಿಕೃತವಾಗಿ ಲೀಕ್ ಆದ ಹಾಡಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ. ವರದಿಗಳ ಪ್ರಕಾರ, ಇದು AI ತಂತ್ರಜ್ಞಾನ ಬಳಸಿ ತಯಾರಿಸಲಾದ ಫ್ಯಾನ್-ಮೇಡ್ ಎಡಿಟ್ ಆಗಿದ್ದು, ಅದರ ರೊಮ್ಯಾಂಟಿಕ್ ದೃಶ್ಯಗಳ ಕಾರಣದಿಂದ ವೈರಲ್ ಆಗಿದೆ. ಈ ವಿಷಯ ಹೊರಬಿದ್ದ ಬಳಿಕ ನೆಟ್ಟಿಗರು ವಿಡಿಯೋವನ್ನು AI ಎಡಿಟ್ ಎಂದು ಗುರುತಿಸಿ ಪ್ರತಿಕ್ರಿಯಿಸುತ್ತಿದ್ದಾರೆ.

‘ವಾರಣಾಸಿ’ ಸೆಟ್ ನೋಡಲು ಭಾರತಕ್ಕೆ ಬರಲು ಜೇಮ್ಸ್ ಕ್ಯಾಮರೂನ್ ಆಸೆ: ರಾಜಮೌಳಿ ಅಧಿಕೃತ ಆಹ್ವಾನ

ಚಿತ್ರರಂಗದ ಇಬ್ಬರು ದಿಗ್ಗಜರಾದ ಜೇಮ್ಸ್ ಕ್ಯಾಮರೂನ್ ಮತ್ತು ಎಸ್.ಎಸ್. ರಾಜಮೌಳಿ ಇತ್ತೀಚೆಗೆ ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕ್ಯಾಮರೂನ್, ರಾಜಮೌಳಿ ಅವರ ನಿರ್ದೇಶನದ ‘ವಾರಣಾಸಿ’ ಚಿತ್ರದ ಸೆಟ್‌ಗೆ ಭೇಟಿ ನೀಡುವ ಇಚ್ಛೆಯನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದಾರೆ.

ತಮ್ಮ ಮುಂದಿನ ಸಿನಿಮಾ ಅವತಾರ್: ಫೈರ್ ಅಂಡ್ ಆಶ್ ಬಿಡುಗಡೆಗೂ ಮುನ್ನ ಮಾತನಾಡಿದ ಕ್ಯಾಮರೂನ್, “ಚಿತ್ರ ನಿರ್ಮಾಪಕರು ಪರಸ್ಪರ ಸಂವಾದ ನಡೆಸಬೇಕು. ಇದರಿಂದ ಕೆಲಸ ಮಾಡುವ ವಿಧಾನ ಮತ್ತು ತಂತ್ರಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ನಾನು ನಿಮ್ಮ ಸೆಟ್‌ಗೆ ಬಂದು ನೀವು ಕೆಲಸ ಮಾಡುವುದನ್ನು ನೋಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜಮೌಳಿ, “ಇದು ನಮಗೆ ಅಪಾರ ಸಂತೋಷದ ವಿಷಯ. ನೀವು ಯಾವಾಗ ಬೇಕಾದರೂ ಭಾರತಕ್ಕೆ ಬಂದು ಸೆಟ್‌ಗೆ ಭೇಟಿ ನೀಡಬಹುದು. ನಿಮ್ಮ ಆಗಮನದಿಂದ ಇಡೀ ಭಾರತೀಯ ಚಿತ್ರರಂಗ ಸಂತೋಷಪಡಲಿದೆ” ಎಂದು ಆಹ್ವಾನ ನೀಡಿದ್ದಾರೆ.

ರಾಜಮೌಳಿ ಮಾಹಿತಿ ನೀಡುವಂತೆ, ‘ವಾರಣಾಸಿ’ ಚಿತ್ರದ ಶೂಟಿಂಗ್ ಸುಮಾರು ಒಂದು ವರ್ಷದಿಂದ ನಡೆಯುತ್ತಿದ್ದು, ಇನ್ನೂ 7–8 ತಿಂಗಳು ಚಿತ್ರೀಕರಣ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕ್ಯಾಮರೂನ್, “ಯಾವುದೇ ವಿಶೇಷ ಅಥವಾ ಭರ್ಜರಿ ದೃಶ್ಯ ಚಿತ್ರೀಕರಿಸುವಾಗ ನನಗೆ ತಿಳಿಸಿ” ಎಂದು ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬೆಳವಣಿಗೆ ‘ವಾರಣಾಸಿ’ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕುತೂಹಲವನ್ನು ಸ್ಪಷ್ಟಪಡಿಸುತ್ತದೆ.

ಶಿವಮೊಗ್ಗ| ಜೈಲು ಸಿಬ್ಬಂದಿಯಿಂದಲೇ ದಿಢೀರ್‌ ದಾಳಿ; ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ!

0

ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ನಡೆಸಿದ ಅನಿರೀಕ್ಷಿತ ಕಾರ್ಯಾಚರಣೆಯಲ್ಲಿ ಅನೇಕ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಜೈಲಿನೊಳಗೆ ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳು ಹರಿದಾಡುತ್ತಿರುವ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕಾರಾಗೃಹ ಅಧಿಕಾರಿಗಳು ಇತ್ತೀಚೆಗೆ ರಾತ್ರಿ ಸುಮಾರು 8 ಗಂಟೆಗೆ ತಪಾಸಣೆ ನಡೆಸಿದರು. ಈ ವೇಳೆ ಜೈಲಿನೊಳಗಿನಿಂದ 3 ಮೊಬೈಲ್ ಫೋನ್‌ಗಳು, 4 ಸಿಮ್ ಕಾರ್ಡ್‌ಗಳು, 3 ಡೇಟಾ ಕೇಬಲ್‌ಗಳು, 2 ಇಯರ್‌ಫೋನ್‌ಗಳು ಹಾಗೂ 1 ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೈಲಿನೊಳಗಿನ ಅಕ್ರಮಗಳನ್ನು ಬಯಲಿಗೆಳೆದ ಜೈಲು ಅಧಿಕಾರಿಗಳ ಕಾರ್ಯವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ ಅಲೋಕ್ ಕುಮಾರ್ ಶ್ಲಾಘಿಸಿದ್ದು, ಕರ್ತವ್ಯ ನಿಷ್ಠೆ ತೋರಿದ ತಂಡಕ್ಕೆ ಪ್ರೋತ್ಸಾಹವಾಗಿ 10,000 ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಶಿವಮೊಗ್ಗದ ಮುಖ್ಯ ಜೈಲು ಅಧೀಕ್ಷಕ ರಂಗನಾಥ್ ಅವರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಕಾವೇರಿ ವಿಭಾಗದಲ್ಲಿ ಈ ಅನಿರೀಕ್ಷಿತ ತಪಾಸಣೆಯಲ್ಲಿ ಭಾಗವಹಿಸಿದ್ದರು.

ಬೊಲೆರೋ-ಬಲ್ಕರ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

0

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.

25 ವರ್ಷದ ಅಶೋಕ್, ನಾಗರಾಜಪ್ಪ ಮೃತರು. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಉಸಿರು ಚಲ್ಲಿದ್ದಾರೆ.

ಮಂಚೆನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲಮಿತಿಯಲ್ಲಿ ವಿಮಾ ಬೋನಸ್ ಪಾವತಿ: ಜೆ.ಸಿ. ಕಠಾರಿ ಅವರಿಗೆ ಸರ್ಕಾರಿ ನೌಕರರಿಂದ ಸನ್ಮಾನ

0

ಗದಗ: ಕಾಲಮಿತಿಯಲ್ಲಿ ಸರಕಾರಿ ನೌಕರರ ವಿಮೆಗಳಿಗೆ ಬೋನಸ್ ಪಾವತಿಸಿದ ಧಾರವಾಡ ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ. ಕಠಾರಿ ಅವರನ್ನು ವಿವಿಧ ಇಲಾಖೆಗಳ ಸರಕಾರಿ ನೌಕರರು ಶಾಲು ಹೊದೆಸಿ, ಸನ್ಮಾನಿಸಿ ಗೌರವಿಸಿದರು. ಜೆ.ಸಿ. ಕಠಾರಿ ಮತ್ತು ಸಿಬ್ಬಂದಿಗಳು ರಜೆ ದಿನಗಳನ್ನು ಲೆಕ್ಕಿಸದೆ, ತಡ ರಾತ್ರಿವರೆಗೂ ಕರ್ತವ್ಯ ನಿರ್ವಹಿಸಿ, ಕೇವಲ 15 ದಿನಗಳಲ್ಲಿ ಸುಮಾರು 2,150 ಸರಕಾರಿ ನೌಕರರಿಗೆ ಲಾಭಾಂಶ ಜಮೆ ಮಾಡಿದ್ದಾರೆ. ಇವರ ಪಾರದರ್ಶಕ ಮತ್ತು ನೌಕರ ಸ್ನೇಹಿ ಕರ್ತವ್ಯ ಗುರುತಿಸಿ, ಮೆಚ್ಚಿದ ವಿವಿಧ ಇಲಾಖೆಗಳ ಸರಕಾರಿ ನೌಕರರು, ಸ್ವತಃ ಕಠಾರಿ ಅವರ ಕಾರ್ಯಾಲಯಕ್ಕೆ ತೆರಳಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಹೈನುಗಾರಿಕೆ ಉತ್ತಮ ಆದಾಯದ ಮೂಲ

0

ವಿಜಯಸಾಕ್ಷಿ ಸುದ್ದಿ, ಬೆಳಗಾ: ವಿಬೆಳಗಾವಿ ಅಧಿವೇಶನದಲ್ಲಿ ತಲಾ ಆದಾಯದಲ್ಲಿ ಉತ್ತರ ಕರ್ನಾಟಕ ಭಾಗದ ಹಿಂದುಳಿದಿರುವಿಕೆಯ ಬಗ್ಗೆ ವಿಶ್ಲೇಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1985ರಲ್ಲಿ ನಾನು ಹೈನುಗಾರಿಕೆ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಅಂದಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಗೆ ಆಸಕ್ತಿ ಕಡಿಮೆಯಿದೆ ಎಂದರು.

ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನವೊಂದಕ್ಕೆ 17 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತದೆ. ಆದರೆ ಕಲಬುರಗಿ, ಯಾದಗಿರಿ, ಬೀದರ್ ರಾಯಚೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನವೊಂದಕ್ಕೆ ಕೇವಲ 67 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತದೆ. ರಾಜ್ಯದ ಎಲ್ಲಾ ಸಹಕಾರಿ ಒಕ್ಕೂಟಗಳಲ್ಲಿ ದಿನವೊಂದಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹಣೆಯಾದರೆ, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಕೇವಲ 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ.

ಹೈನುಗಾರಿಕೆ ಆದಾಯದ ಉತ್ತಮ ಮೂಲವಾಗಿದೆ. ರಾಜ್ಯ ಸರ್ಕಾರವು ಇದಕ್ಕೆ ಪ್ರೋತ್ಸಾಹ ನೀಡುತ್ತಿದ್ದು, ರೈತರಿಗೆ ಪ್ರತಿ ಲೀಟರ್‌ಗೆ ರೂ.7 ಪ್ರೋತ್ಸಾಹ ಧನ ನೀಡುತ್ತಿದೆ. ಇದಕ್ಕಾಗಿ ಪ್ರತಿದಿನ ರೂ.5 ಕೋಟಿ ವೆಚ್ಚವಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆ ಹೆಚ್ಚಾದರೆ ಜನರ ಆದಾಯವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟರು.

ಭೂತಾಯಿಗೆ ನಮಿಸಿ ಪುನೀತರಾದ ರೈತರು

0

ವಿಜಯಸಾಕ್ಷಿ ಸುದ್ದಿ, ಗದಗ: ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ರೈತ ರಾಮಪ್ಪ ರಂಗಪ್ಪ ಕಾಶಪ್ಪನವರ ಇವರ ಹೊಲದಲ್ಲಿ ಸಂಭ್ರಮದಿಂದ ಎಳ್ಳು ಅಮವಾಸ್ಯೆಯನ್ನು ಭೂ ತಾಯಿಗೆ ಚರಗ ಚೆಲ್ಲುವ ಮೂಲಕ ಆಚರಿಸಲಾಯಿತು. ವರ್ಷಾನುಗಟ್ಟಲೇ ದುಡಿದ ದೇಹಗಳು ಸಂಭ್ರಮಿಸುವ ದಿನ. ಅನ್ನ ನೀಡುವ ಭೂ ತಾಯಿಗೆ ಸೀಮಂತ ಮಾಡಿ ಉಣಬಡಿಸುವ ಸಂತಸದ ದಿನ. ಗದಗ ಜಿಲ್ಲೆಯಾದ್ಯಂತ ಎಲ್ಲ ರೈತರು ಈ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಿದರು.

ರೈತರು ಎತ್ತುಗಳನ್ನು ಅಲಂಕರಿಸಿ, ಚಕ್ಕಡಿ ಹೂಡಿಕೊಂಡು ಸಾಲು ಸಾಲಾಗಿ ಹೊರಟಿದ್ದ ಬಗೆ ಕಣ್ಣಿಗೆ ಹಬ್ಬವನ್ನುಂಟುಮಾಡುವಂತಿತ್ತು. ಮನೆಯ ಸಂಬಂಧಿಕರೆಲ್ಲಾ ಬಗೆ ಬಗೆಯ ಅಡುಗೆ ಮಾಡಿಕೊಂಡು ತಮ್ಮ ತಮ್ಮ ಹೊಲಗಳಿಗೆ ತೆರಳಿ ಬನ್ನಿ ಮರಕ್ಕೆ ಸೀರೆ ತೊಡಿಸಿ, ಉಡಿತುಂಬಿ, ಕೈಗೆ ಕಂಕಣ ಕಟ್ಟಿ, ಐದು ಕಲ್ಲುಗಳನಿಟ್ಟು ಪಂಚ ಪಾಂಡವರೆಂದು ಪೂಜಿಸಿದರು. ನೈವೇದ್ಯದ ಮೂಲಕ ಪೂಜೆ ಮಾಡಿ ಹುಲ್ಲಲಿಗೂ… ಚಳಾಂಬ್ರಿಗೋ ಅಂತ ಸಿಹಿ ತಿನಿಸುಗಳನ್ನು ಸುತ್ತ ಎರಚಿ ಮಳೆ-ಬೆಳೆ ಚೆನ್ನಾಗಿ ಆಗಲೆಂದು ಭಕ್ತಿಯಿಂದ ಬೇಡಿಕೊಂಡರು.

ಮುಂಗಾರು ಫಸಲು ಬಂದಾಗ ಮಳೆ ಅಬ್ಬರವಿರುತ್ತೆ. ಭೂ ತಾಯಿಯನ್ನು ಪೂಜೆ ಮಾಡಲಾಗುವುದಿಲ್ಲ. ಹಾಗಾಗಿ ಹಿಂಗಾರು ಸಂದರ್ಭದಲ್ಲಿ ಎಳ್ಳು ಅಮವಾಸ್ಯೆ ವೇಳೆ ಭೂತಾಯಿಗೆ ಸೀಮಂತ ಮಾಡಲಾಗುತ್ತದೆ. ದೂರದ ಊರಿನ ಸಂಬಂಧಿಕರನ್ನು ಹಬ್ಬಕ್ಕೆ ಕರೆದು, ಎಲ್ಲರೂ ಒಟ್ಟಿಗೆ ಪೂಜೆಮಾಡಿ ಒಟ್ಟಿಗೆ ಊಟ ಮಾಡಿ ಸಂಭ್ರಮಿಸಿದರು.

ವರ್ಷಾನುಗಟ್ಟಲೇ ಸಮಸ್ಯೆಗಳ ಸರಮಾಲೆಯಲ್ಲಿ ಬಳಲಿದ ರೈತ ಈ ದಿನದಂದು ಆ ನೋವನ್ನೆಲ್ಲ ಮರೆತು ಸಂತಸದ ಕ್ಷಣಗಳನ್ನು ಅನುಭವಿಸಿದರು. ರೈತರನ್ನು ಸದಾ ಕಾಪಾಡುವ ಭೂತಾಯಿಗೆ ನಮಿಸಿ ಪುನೀತರಾದರು.

ನಿತೀಶ್ ಕುಮಾರ್ ವರ್ತನೆ ಖಂಡನೀಯ

0

ವಿಜಯಸಾಕ್ಷಿ ಸುದ್ದಿ, ಗದಗ: ಬಿಹಾರ ಸರ್ಕಾರ ಆಯೋಜಿಸಿದ್ದ ಆಯುಷ್ ಕಾರ್ಯಕ್ರಮದ ವೇದಿಕೆಯಲ್ಲಿ ಹಿಜಾಬ್ ಧರಿಸಿದ ಮಹಿಳಾ ವೈದ್ಯರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಭ್ಯವಾಗಿ ವರ್ತಿಸಿರುವುದನ್ನು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ಖಂಡಿಸುತ್ತದೆ ಎಂದು ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟಿ ಹೇಳಿದರು.

ಮಹಾಸಭಾದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದು ಭಾರತೀಯ ಸಂಸ್ಕೃತಿಯ ಲಕ್ಷಣವಲ್ಲ. ಹೀಗೆ ಒಬ್ಬ ಮಹಿಳೆಯ ಒಪ್ಪಿಗೆ ಇಲ್ಲದೆ ಆಕೆಯನ್ನು ಸ್ಪರ್ಶಿಸುವುದು ಮಹಿಳೆಯರಿಗೆ ಮಾಡುವ ಅವಮಾನವಾಗಿದೆ. ನಿತೀಶ್ ಕುಮಾರರು ಸಮಾಜವಾದಿ ತತ್ವದ ಹಿನ್ನೆಲೆಯಿಂದ ಬಂದವರು. ಜಯಪ್ರಕಾಶ್ ನಾರಾಯಣ್, ಮೊರಾರ್ಜಿ ದೇಸಾಯಿ, ರಾಮಕೃಷ್ಣ ಹೆಗಡೆ, ಯು.ಪಿ. ಸಿಂಗ್, ಚಂದ್ರಶೇಖರ್‌ರಂತಹ ಘಟಾನುಘಟಿಗಳ ನಾಯಕತ್ವದಲ್ಲಿ ಬೆಳೆದು ಬಂದವರು. ಇಂತಹ ವರ್ತನೆ ಅವರ ಘನತೆಗೆ ಶೋಭೆ ತರುವಂತದ್ದಲ್ಲ. ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಳ್ಳಲು ಅವರ ಸಂಪುಟದ ಸಚಿವ ಸಂಜಯ್ ನಿಸಾದ್ ಬಳಸಿದ ಅಸಾಂವಿಧಾನಿಕ ಪದಗಳನ್ನು ಯಾವುದೇ ನಾಗರಿಕ ಸಮಾಜವು ಒಪ್ಪದು. ಅವರು ಸಚಿವ ಸ್ಥಾನಕ್ಕೆ ಯೋಗ್ಯರಲ್ಲ. ಮಹಿಳೆಯರಿಗೆ ಗೌರವ ನೀಡದ ಇವರು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ನೀರಾವರಿಗೆ ಅಕ್ರಮ ನೀರು ಬಳಕೆ; ತನಿಖೆ ನಡೆಸಲು ತಂಡ ರಚನೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

0

ವಿಜಯಸಾಕ್ಷಿ ಸುದ್ದಿ, ಬೆಳಗಾವಿ, ಸುವರ್ಣಸೌಧ: ಮಹಾರಾಷ್ಟ್ರ ರಾಜ್ಯವು ನೀರಾವರಿ ಯೋಜನೆಗಳಿಗೆ ಅಕ್ರಮವಾಗಿ ನೀರು ಬಳಕೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯದ ಅಧಿಕಾರಿಗಳ ಪ್ರತ್ಯೇಕ ತಂಡ ರಚನೆ ಮಾಡಿ, ವರದಿ ಪಡೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅವರು ವಿಧಾನ ಪರಿಷತ್‌ನಲ್ಲಿ ಶಾಸಕ ಡಾ. ತಳವಾರ್ ಸಾಬಣ್ಣ ಅವರ ನಿಯಮ 33ರ ಸೂಚನೆಗೆ ಉತ್ತರಿಸಿ ಮಾತನಾಡಿದರು.

ಕೃಷ್ಣ ಜಲವಿವಾದ ನ್ಯಾಯಾಧಿಕರಣ-1 (ಬಚಾವತ್ ನ್ಯಾಯಾಧಿಕರಣ) 1976ರಲ್ಲಿ ಅಂತಿಮ ತೀರ್ಪಿನ ಪ್ರಕಾರ ಮಹಾರಾಷ್ಟ್ರ ರಾಜ್ಯವು ಭೀಮಾ ನದಿಯಿಂದ 95 ಟಿಎಂಸಿಗಿಂತ ಹೆಚ್ಚಾಗಿ ನೀರನ್ನು ಬಳಸಬಾರದೆಂದು ಹಾಗೂ 3)(iii) ಪ್ರಕಾರ ಕರ್ನಾಟಕ ರಾಜ್ಯವು ಭೀಮಾ ಮುಖ್ಯ ನದಿಯಿಂದ 15 ಟಿಎಂಸಿಗಿಂತ ಹೆಚ್ಚು ಬಳಸಬಾರದೆಂದು ನಿರ್ಬಂಧವಿದೆ. ಸದರಿ ಅಂತಿಮ ತೀರ್ಪಿನಲ್ಲಿ ಕಣಿವೆ ಮಾಡಿರುವ ಒಟ್ಟಾರೆ ಹಂಚಿಕೆಯಲ್ಲಿ ಯಾವುದೇ ರಾಜ್ಯವು ಇನ್ನೊಂದು ರಾಜ್ಯಕ್ಕೆ ಬಿಡುಗಡೆ ಮಾಡುವ ಕುರಿತು ಆದೇಶವಿಲ್ಲ ಎಂದರು.

ಕರ್ನಾಟಕ ರಾಜ್ಯವು ಕೃಷ್ಣಾ ಜಲವಿವಾದ ನ್ಯಾಯಾಧಿಕರಣ-2ರ ಮುಂದೆ ಭೀಮಾ ನದಿ ಉಪ ಕೊಳ್ಳದಲ್ಲಿನ ಬಳಕೆಗಾಗಿ 12 ಟಿ.ಎಂ.ಸಿ ಹೆಚ್ಚುವರಿ ನೀರಿನ ಬೇಡಿಕೆಯನ್ನು ಮಂಡಿಸಿತ್ತು. ಆದರೆ ನ್ಯಾಯಾಧಿಕರಣವು ರಾಜ್ಯದ ಬೇಡಿಕೆಯನ್ನು ಪರಿಗಣಿಸಿಲ್ಲ. ಸದರಿ ಕೃಷ್ಣಾ ಜಲವಿವಾದ ನ್ಯಾಯಾಧಿಕರಣ-2ರ ಆದೇಶವು ಗೆಜೆಟ್ ಪ್ರಕಟಣೆ ಆಗಬೇಕಾಗಿದೆ ಎಂದು ತಿಳಿಸಿದರು.

ಕಳೆದ ವರ್ಷದ ಬೇಸಿಗೆಯಲ್ಲಿ ಭೀಮಾ ನದಿ ನೀರು ಸಂಪೂರ್ಣ ಬತ್ತಿಹೋಗಿದ್ದರಿಂದ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರ ಕುಡಿಯುವ ನೀರು, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗಿತ್ತು. ಪ್ರತಿ ವರ್ಷ ಭೀಮಾ ತೀರದ ಜನರು ಒಟ್ಟಾಗಿ ಅಮರಣಾಂತರ ಉಪವಾಸ ಸತ್ಯಾಗ್ರಹ ಮಾಡಿ ಕುಡಿಯಲು ಬೇಕಾಗುವ ನೀರನ್ನು ಬಿಡಿಸಿಕೊಳ್ಳುತ್ತಿದ್ದಾರೆ. ಕನಿಷ್ಠ ಕುಡಿಯುವ ನೀರಿಗೂ ಸಂಕಷ್ಟಕ್ಕೆ ಸಿಲುಕುತ್ತಿರುವ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರಿಗೆ 15 ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಕೆಯಾಗಲು ಹಾಗೂ ಮಹಾರಾಷ್ಟ್ರದ ಅಕ್ರಮ ನೀರಾವರಿ ಯೋಜನೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಕುರಿತು ಡಾ. ತಳವಾರ್ ಸಾಬಣ್ಣ ಅವರು ಕೋರಿದ್ದರು.

error: Content is protected !!