Home Blog Page 3031

ಜಿಲ್ಲಾ ಉತ್ತಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯಿಂದ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ. ಹಿರೇಮಠ ಹಾಗೂ ಎಸ್.ಜಿ. ಅಪರಂಜಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಇನಾಮತಿ, ತರಗತಿಗಳಲ್ಲಿ ಶಿಕ್ಷಕರು ಅಂಕ ಗಳಿಕೆಗಾಗಿ ಮಾತ್ರ ಮಕ್ಕಳನ್ನು ಸಜ್ಜುಗೊಳಿಸಬಾರದು. ಅವರಿಗೆ ಜೀವನ ಪಾಠವನ್ನು ಕಲಿಸಬೇಕು. ಮಕ್ಕಳ ನೈಜ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು ಎಂದರು.
ಶಿಕ್ಷಕ ವೃತ್ತಿಯು ತುಂಬಾ ಪವಿತ್ರವಾದದ್ದು. ಸಮಾಜ ಸುಧಾರಿಸುವ ಹಾಗೂ ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷ ಮಂಜುನಾಥ ಇಟಗಿ ಮಾತನಾಡಿ, ರಾಷ್ಟ್ರ ಹಾಗೂ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು ಎಂದು ಹೇಳಿದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪಿ.ಜಿ. ಹಿರೇಮಠ, ಎಸ್.ಜಿ. ಅಪರಂಜಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಂ.ಎಸ್. ಶೀರನಹಳ್ಳಿ, ಮಂಜುನಾಥ ಮುಧೋಳ, ಪವನ ಚೋಪ್ರಾ, ಮಹೇಶ ಎಸ್.ಎಚ್., ಪ್ರಭಾಕರ ಮುನವಳ್ಳಿ, ಪಿ.ಎನ್. ಉಮಲೂಟಿ, ಬಿ.ಎಚ್. ಹಲವಾಗಲಿ, ಪಿ.ಎನ್. ಕಲಘಟಗಿ, ಶಿವರಾಜ ಹಿರೇಮಠ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಾ.ನಿಂಗು ಸೊಲಗಿ ಸ್ವಾಗತಿಸಿದರು.

ಮುಂಜಾಗ್ರತೆ ಮೂಲಕ ಕೊವಿಡ್ ತಡೆಗಟ್ಟಬಹುದು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಮಹಾಮಾರಿ ಕೊವಿಡ್ 19 ಜಗತ್ತನ್ನೇ ತಲ್ಲಣಗೊಳಿಸಿದೆ. ಇದರಿಂದ ನಾವು ಹೊರ ಬರಬೇಕಾದರೆ ಜಾಗೃತಿ ಅಗತ್ಯವಾಗಿದೆ. ಈ ರೋಗದ ಮುಂಜಾಗ್ರತೆ ಕೈಕೊಳ್ಳುವುದರಿಂದ ಹರಡುವುದನ್ನು ತಡೆಯಬಹುದು ಎಂದು ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜೆ. ಎಸ್. ಪಾಟೀಲ್ ಹೇಳಿದರು.
ನಗರದ ಶ್ರೀ ಗವಿಸಿದ್ದೇಶ್ವರ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಏನ್. ಎಸ್. ಎಸ್. ಹಾಗೂ ಏನ್. ಸಿ. ಸಿ ಘಟಕಗಳ ವತಿಯಿಂದ ಹಮ್ಮಿಕೊಂಡ ವಿದ್ಯಾರ್ಥಿಗಳಿಗೆ ಕೊವಿಡ್ 19 ಜಾಗೃತಿ ಜನ ಆಂದೋಲನ ಪ್ರಚಾರ ನಿಮಿತ್ತ ಕೊವಿಡ್ ಜಾಗೃತಿ ಮತ್ತು ಕೊವಿಡ್ ರಕ್ಷಣೆಯ ಪ್ರತಿಜ್ಞಾವಿಧಿ ಬೋಧನೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೊವಿಡ್‌ನಿಂದ ರಕ್ಷಿಸಿಕೊಳ್ಳಲು ಸದಾ ಜಾಗೃತರಾಗಿರಬೇಕು ಮತ್ತು ತಪ್ಪದೆ ಮಾಸ್ಕ್ ಧರಿಸಬೇಕು. ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು. ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಮತ್ತು ನಿಮ್ಮ ಕುಟುಂಬ ಹಾಗೂ ಸುತ್ತಮುತ್ತಲಿನ ನಾಗರಿಕರಲ್ಲಿ ಇದರ ಕುರಿತು ಜಾಗೃತಿ ಮೂಡಿಸಿ ದೇಶವನ್ನು ಕೊವಿಡ್‌ನಿಂದ ರಕ್ಷಿಸುವ ಕರ್ತವ್ಯದಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು. ನಂತರ ಮಹಾವಿದ್ಯಾಲಯದ ಸೂಚನಾ ಫಲಕಗಳಲ್ಲಿ ಕೊವಿಡ್ ಜಾಗೃತಿ ಮೂಡಿಸುವ ಭಿತ್ತಿಪತ್ರ ಅಂಟಿಸಲಾಯಿತು.
ಏನ್.ಎಸ್.ಎಸ್. ಘಟಕಾಧಿಕಾರಿಗಳಾದ ರಾಜು ಹೊಸಮನಿ, ಡಾ ನಾಗರಾಜ ದಂಡೋತಿ, ಸಹ ಪ್ರಾಧ್ಯಾಪಕ ಡಾ. ಬಸವರಾಜ ಪೂಜಾರ್, ಪ್ರಾಧ್ಯಾಪಕರಾದ ಡಾ. ಚನ್ನಬಸವ, ಡಾ ಕರಿಬಸವೇಶ್ವರ, ಶ್ರೀದೇವಿ, ವೆಂಕಟೇಶ್ ನಾಯ್ಕ, ಮಂಜುನಾಥ್ ಗಾಳಿ, ಡಾ ಶರಣಪ್ಪ, ಶರಣಪ್ಪ ಜಾಲೀಹಾಳ್, ಮಹೇಶ್ ಬಿರಾದಾರ್, ವಿನೋದ ಮಡಿಬಸನಗೌಡರ, ಅರುಣ್ ಎ ಜಿ, ಡಾ. ಶಶಿಕಾಂಮ್ಮಪುರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜೈ ಭೀಮ್ ಜಿಲ್ಲಾ ಕಾರ್ಯಾಲಯ ಉದ್ಘಾಟನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ನಗರದ ಕುಮಾರವ್ಯಾಸ ಕಾಂಪ್ಲೆಕ್ಸ್‌ನಲ್ಲಿ ಜೈ ಭೀಮ್ ಜಿಲ್ಲಾ ಕಾರ್ಯಾಲಯವನ್ನು ದಲಿತ ಮುಖಂಡ ಎಸ್.ಎನ್. ಬಳ್ಳಾರಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಲಿತ ಮುಖಂಡ ಸುರೇಶ ಹೊಸಮನಿ, ಮಾಜಿ ನಗರಸಭಾ ಸದಸ್ಯ ಮಂಜುನಾಥ ಮುಳಗುಂದ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಜೈ ಭೀಮ್ ಗದಗ ಜಿಲ್ಲಾಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ, ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಎಫ್. ತೌಜಲ್, ರಾಷ್ಟ್ರೀನ್ ಜೋಸೆಫ್, ಹೇಮಂತ್ ಹುಬ್ಬಳ್ಳಿ, ರಾಜೇಶ ವಿ. ಶೆಟ್ಟರ್, ವಿಜಯ ಪೂಜಾರ, ಬಸವರಾಜ ಬದಾಮಿ, ಪರಶುರಾಮ ಪಾತ್ರೋಟ, ಬಾಬು ಬಳ್ಳಾರಿ, ಪ್ರೇಮ ಹುಬ್ಬಳ್ಳಿ, ಅಭಿಷೇಕ ಬಳ್ಳಾರಿ, ಪವನ ಸಕ್ರಿ, ವಿಶ್ವನಾಥ ಹುಬ್ಬಳ್ಳಿ, ವಿನಾಯಕ ಬಳ್ಳಾರಿ, ವಿರುಪಾಕ್ಷಿ ಸಂಗಾಪೂರ, ವಿಶ್ವ ಎಸ್. ಹೊಸಮನಿ ಮತ್ತಿತರರು ಉಪಸ್ಥಿತರಿದ್ದರು.

ಕೊರೋನಾ ವಾರಿಯರ್ಸ್ ಮನೆಗೆ ನುಗ್ಗಿದ ನೀರು; ನರಗುಂದ ಪಟ್ಟಣದಲ್ಲಿ ಭಾರಿ ಮಳೆಯಿಂದ ಅವಾಂತರ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ತಾಲೂಕು ಆಸ್ಪತ್ರೆಯ ಆವರಣದಲ್ಲಿರುವ ಕೊರೋನಾ ವಾರಿಯರ್ಸ್ ಗಳ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದ ಘಟನೆ ನಡೆದಿದೆ.
ನೀರು ನುಗ್ಗಿದ ಪರಿಣಾಮ ಎರಡು ದಿನದ ಬಾಣಂತಿ, ಹಸುಗೂಸು ನರಳಾಟ ಪಡುವಂತಾಗಿತ್ತು. ತಾಲೂಕಾಸ್ಪತ್ರೆಯ ಆವರಣದಲ್ಲಿನ ಭಾರತಿ ಪಾಟೀಲ, ಸಂಗಮ್ಮ ಚಿತ್ತರಗಿ ಎಂಬುವರ ಮನೆಗಳಿಗೆ ನೀರು ನುಗ್ಗಿದೆ.
ಇದರಿಂದಾಗಿ ಭಾರತಿ ಪಾಟೀಲರ ಮಗಳು ಸ್ಮೀತಾ ಜಾಧವ ತನ್ನ ಎರಡು ದಿನದ ಹಸುಗೂಸನ್ನು ರಕ್ಷಿಸಲು ಹರಸಾಹಸ ಪಡಬೇಕಾಯಿತು. ಇಷ್ಟೆಲ್ಲಾ ನಡೆದಿದ್ದರೂ ಸ್ಥಳಕ್ಕೆ ತಾಲೂಕಾಡಳಿತದ ಯಾವೊಬ್ಬ ಅಧಿಕಾರಿಯೂ ಬಾರದೇ ಇದ್ದದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.

ಕರಪತ್ರದಲ್ಲಿ ಮುದ್ರಕರ ಹೆಸರು, ವಿಳಾಸ ಕಡ್ಡಾಯ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಜಾಹೀರಾತು, ಮಾಹಿತಿ ಪ್ರಕಟಿಸುವವರು ಪ್ರತಿಯ ಮೇಲೆ ಪ್ರಕಾಶಕರು, ಮುದ್ರಕರ ಹೆಸರು, ವಿಳಾಸ ಹಾಗೂ ಮುದ್ರಿತ ಪ್ರತಿಗಳ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮುದ್ರಣ ಸಂಸ್ಥೆ, ಕೇಬಲ್ ಆಪರೇಟರ್ ಹಾಗೂ ಚಲನಚಿತ್ರ ಮಂದಿರಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಸ್ಲಿಪ್, ಅಭ್ಯರ್ಥಿಯ ಹೆಸರು ಮತಹಾಕಿ ಎನ್ನುವ ಮಾಹಿತಿ ವಿಷಯದ ಮುದ್ರಣಕ್ಕೆ ಜಿಲ್ಲಾ ಎಂಸಿಎಂಸಿ ಸಮಿತಿಯ ಪೂರ್ವಾನುಮತಿ ಅವಶ್ಯಕವಿಲ್ಲ. ಆದರೆ ಮುದ್ರಿಸಿದ ವಿಷಯದ ಪ್ರತಿ ಹಾಗೂ ವೆಚ್ಚದ ವಿವರವನ್ನು ಎಂಸಿಎಂಸಿ ಸಮಿತಿಗೆ ಸಲ್ಲಿಸಬೇಕು. ಅಭ್ಯರ್ಥಿಯ ಸಾಧನೆಯ ಕುರಿತು ಕಿರುಹೊತ್ತಿಗೆ, ಕರಪತ್ರ ಮುದ್ರಣದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗವುಂತಹ ವಿಷಯಗಳನ್ನು ಮುದ್ರಿಸಬಾರದು. ನಿಯಮ ಉಲ್ಲಂಘನೆಯಾದಲ್ಲಿ ಅಂತಹ ಮುದ್ರಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಟಿ.ವಿ., ಕೇಬಲ್ ನೆಟ್‌ವರ್ಕ್, ರೇಡಿಯೋ, ಸಾಮಾಜಿಕ ಜಾಲತಾಣ, ಇ-ಪೇಪರ್ ಮೂಲಕ ಚುನಾವಣಾ ಜಾಹೀರಾತು ನೀಡುವವರು ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಟ ಮೂರು ದಿನ ಮುಂಚಿತವಾಗಿ, ಸಂಘ ಸಂಸ್ಥೆಗಳಿದ್ದಲ್ಲಿ ಕನಿಷ್ಠ ೭ ದಿನಗಳ ಮುಂಚಿತವಾಗಿ ನಿಗದಿತ ನಮೂನೆಯಲ್ಲಿ ಮಂಜೂರಾತಿಗೆ ಅರ್ಜಿ ಸಲ್ಲಿಸಬೇಕು ಎಂದರು.
ಅರ್ಜಿ ನಮೂನೆಯಲ್ಲಿ ಎಲ್ಲ ಅವಶ್ಯಕ ವಿವರ ಮತ್ತು ಜಾಹೀರಾತು ವಿಷಯದ ಎಲೆಕ್ಟ್ರಾನಿಕ್ ಟ್ರಾನ್ಸ್‌ಸ್ಕ್ರಿಪ್ಷನ್ ಹಾಗೂ ಆ ವಿಷಯದ ಸಂಪೂರ್ಣ ವಿವರದ ಧೃಡೀಕೃರಿಸಿದ ಸ್ಕ್ರಿಪ್ಟ (ಬರವಣಿಗೆ ರೂಪದಲ್ಲಿ) ತಲಾ ಎರಡು ಪ್ರತಿಗಳನ್ನು ಸಲ್ಲಿಸಬೇಕು. ಈ ಜಾಹೀರಾತಿನ ತಯಾರಿಕಾ ವೆಚ್ಚ ತಿಳಿಸಬೇಕು.
ಟಿ.ವಿ. ಕೇಬಲ್, ಸಾಮಾಜಿಕ ಜಾಲತಾಣ, ರೇಡಿಯೋ, ಇ-ಪೇಪರ್‌ಗಳ ಪ್ರದರ್ಶನ ವೆಚ್ಚ ಹಾಗೂ ವೇಳಾಪಟ್ಟಿಯನ್ನು ವಿವರವಾಗಿ ನೀಡಬೇಕು. ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯು ಪ್ರಯೋಜನಕ್ಕೆ ಜಾಹೀರಾತನ್ನು ಬಳಸಿಕೊಳ್ಳುತ್ತಿರುವ ಪ್ರಮಾಣಪತ್ರ ಸಲ್ಲಿಸಬೇಕು. ಜಾಹೀರಾತುಗಳ ವೆಚ್ಚವನ್ನು ಚೆಕ್ ಅಥವಾ ಡಿಡಿ ಮೂಲಕ ಪಾವತಿಸುವುದಾಗಿ ಅರ್ಜಿದಾರರು ಪ್ರಮಾಣೀಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಆನಂದ್ ಕೆ. ಮಾತನಾಡಿ, ಮುದ್ರಕರು ಪ್ರಚಾರ ಸಾಮಗ್ರಿ ಮುದ್ರಣದಲ್ಲಿ ಪರಿಸರ ಸ್ನೇಹಿ ಸಾಮಗ್ರಿಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ವಿವಿಧ ಮುದ್ರಣ ಸಂಸ್ಥೆಗಳ ಮಾಲಕರು, ಪ್ರತಿನಿಧಿಗಳು, ಕೇಬಲ್ ಆಪರೇಟರ್‌ಗಳು, ಚಲನಚಿತ್ರ ಮಂದಿರದ ಪ್ರತಿನಿಧಿಗಳು, ವಾರ್ತಾಧಿಕಾರಿ ವಸಂತ ಮಡ್ಲೂರ, ಜಿಲ್ಲಾಧಿಕಾರಿ ಚುನಾವಣಾ ವಿಭಾಗದ ಅಧಿಕಾರಿ ಸಿಬ್ಬಂದಿ ಮತ್ತಿತರರಿದ್ದರು.

ಕೊಪ್ಪಳದಲ್ಲಿ ಮರಳು ದಂಧೆಗಿಲ್ಲ ಕಡಿವಾಣ?

0

ಬಿಯಸ್ಕೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಕೊರೋನಾ ಸಂದರ್ಭದಲ್ಲಿ ಸದ್ದಿಲ್ಲದೆ ನಡೆಯುತ್ತಿದೆ. ಅಕ್ರಮ ದಂಧೆಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆದ್ರೆ ಜಿಲ್ಲೆಯಲ್ಲಿ ಎಲ್ಲಾ ದಂಧೆಗಳಿಗೆ ಬ್ರೇಕ್ ಹಾಕಲಾಗಿದೆ. ಯಾರೆ ಅಕ್ರಮ ದಂಧೆಗಳನ್ನು ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲ ಪುಢಾರಿ ರಾಜಕಾರಣಿಗಳು ಸಹ ಈ ದಂಧೆಯಲ್ಲಿ ತೊಡಗಿರುವುದು ಮರಳು ಅಕ್ರಮ ದಂಧೆ ನಿಂತಿಲ್ಲ ಎಂಬುದನ್ನು ಸಾರಿ ಹೇಳುತ್ತದೆ.
ಜಿಲ್ಲಾಧಿಕಾರಿಗಳ ಖಡಕ್ ಆದೇಶದಲ್ಲಿಯೂ, ದಂಧೆಕೋರರು ಮಾತ್ರ ಮರಳು ಅಕ್ರಮ ಸಾಗಾಟ ಮಾಡುತ್ತಲೇ ಇದ್ದಾರೆ. ಅದು ಅಧಿಕಾರಿಗಳ ಕಣ್ಣುತಪ್ಪಿಸಿಯೋ ಅಥವಾ ಯಾರದ್ದೂ ಕೈವಾಡದಿಂದಲೋ? ಎಂಬುದು ನೈಜ ತನಿಖೆಯಿಂದ ಮಾತ್ರ ಹೇಳಲು ಸಾಧ್ಯ.
ಮರಳು ದಂಧೆಗೆ ಈಗ ಸರ್ಕಾರಿ ಜಮೀನು ಸೂಕ್ತ. ಯಾಕೆಂದರೆ ಒಂದು ವೇಳೆ ದಾಳಿಯಾದರೆ ಯಾರ ಮೇಲೂ ಕೇಸ್ ದಾಖಲಾಗುವುದಿಲ್ಲ ಎಂದು ಅಕ್ರಮ ಮರಳನ್ನು ಸರ್ಕಾರಿ ಜಾಗದಲ್ಲಿ ಸಂಗ್ರಹಿಸಲಾಗುತ್ತಿದೆ. ಹಳ್ಳ, ನದಿಗಳಲ್ಲಿ ಅಗೆದ ಮರಳನ್ನು ನೇರವಾಗಿ ಸರ್ಕಾರಿ ಜಮೀನುಗಳಲ್ಲಿ ಡಂಪ್ ಮಾಡಲಾಗುತ್ತದೆ. ನಂತರ ರಾತ್ರೋ ರಾತ್ರಿ ಸಾಗಿಸಲಾಗುತ್ತದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರೂಪಾ ಸಿ.ಎಚ್. ಅವರನ್ನು ಹಲವು ಬಾರಿ ಸಂಪರ್ಕಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ.


ಹೀಗೆ ಸಂಗ್ರಹಿಸಿದ ಮರಳು ಅಡ್ಡದಾರಿಗಳಿಂದ ನೇರವಾಗಿ ಮುಖ್ಯ ರಸ್ತೆಗಳಿಗೆ ಸೇರುತ್ತದೆ. ಅಲ್ಲಿಂದ ನೇರವಾಗಿ ಗದಗ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೆ ಅಕ್ರಮ ಮರಳನ್ನು ಟಿಪ್ಪರ್‌ಗಳ ಮೂಲಕ ಸಾಗಿಸಲಾಗುತ್ತಿದೆ. ಹಲವಡೆ ಅಧಿಕಾರಿಗಳು ದಾಳಿ ಮಾಡಿದ್ರೂ ಮಾಹಿತಿ ಮಾತ್ರ ಹೊರಬರುತ್ತಿಲ್ಲ. ಇನ್ನು ಕೆಲವಡೆ ಅಧಿಕಾರಿಗಳು ದಾಳಿ ಮಾಡಿದ ಸ್ಥಳದಲ್ಲಿ ಮರಳು ಜಪ್ತಿ ಮಾಡಲಾಗುತ್ತಿದೆ. ಆದರೆ ಮಾಹಿತಿ ಮಾತ್ರ ಸಿಗುತ್ತಿಲ್ಲ.
ಕಾರಟಗಿ, ಕನಕಗಿರಿ, ಕಿನ್ನಾಳ ಹಾಗೂ ಮಾದಿನೂರು ಪ್ರದೇಶದಲ್ಲಿ ಅತಿ ಹೆಚ್ಚು ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ದಾಳಿ ಮಾಡಿದ ಮರುದಿನವೇ ಮತ್ತೆ ಮರಳನ್ನು ಸಾಗಾಟ ಮಾಡಲಾಗುತ್ತದೆ. ಕಳೆದ ಎರಡು ದಿನಗಳ ಹಿಂದೆ ಸುಮಾರು 280 ಮೆಟ್ರಿಕ್ ಟನ್ ಮರಳನ್ನು ಸರ್ಕಾರದ ಸ್ಥಳಗಳಲ್ಲಿ ಸ್ಟಾಕ್ ಮಾಡಲಾಗಿತ್ತು. ಕಳೆದ ತಿಂಗಳು ಇದೆ ಸ್ಥಳದಲ್ಲಿ 290 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಳ್ಳಲಾಗಿತ್ತು. ಆದ್ರೆ ಮಾಹಿತಿ ಹೊರ ಬಂದಿರಲಿಲ್ಲ. ದಾಳಿಗೆ ಸಂಬಂಧಿಸಿದಂತೆ ತಹಸೀಲ್ದಾರ್ ಜಿ ಬಿ ಮಜ್ಜಿಗಿ ಹಾಗೂ ಭೂವಿಜ್ಞಾನಿ ಅಧಿಕಾರಿ ರೂಪ ಸಿ ಎಚ್ ಅವರು ದಾಳಿ ಮಾಡಿ ಮರಳು ಜಪ್ತಿ ಮಾಡಿದ್ದಾರೆ.

ಆದರೆ ಇಲ್ಲಿ ಅನುಮಾನ ಮೂಡುತ್ತಿರುವುದು, ಮರಳು ಅಕ್ರಮ ದಂಧೆ ಮಾಡುವ ಕಿಲಾಡಿಗಳಿಗೆ ಸರ್ಕಾರಿ ಜಾಗದಲ್ಲಿ ಡಂಪ್ ಮಾಡುವ ಐಡಿಯಾ ಹೇಳಿಕೊಟ್ಟವರು ಯಾರು? ದಾಳಿ ಮಾಡಿದರೂ ಪದೆ ಪದೇ ನದಿ ಹಳ್ಳಗಳನ್ನು ಅಗೆದು ಇದೇ ಜಾಗದಲ್ಲಿ ಮರಳುಗಾರಿಕೆ ಮಾಡುತ್ತಿರುವ ಆ ಪ್ರಭಾವಿಗಳು ಯಾರು? ಪೊಲೀಸರೂ ಕಠಿಣ ಕ್ರಮಗಳಿಗೆ ಮುಂದಾಗದ್ದಕ್ಕೆ ಕಾರಣಗಳೇನು? ಇಂಥ ಹಲವಾರು ಅನುಮಾನದ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿದ್ದು, ಕಡಿವಾಣ ಹಾಕಲು ಒತ್ತಾಯಿಸಿದ್ದಾರೆ.

ಭೀಮ್ ಆರ್ಮಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳಿಗೆ ಸನ್ಮಾನ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಭೀಮ್ ಆರ್ಮಿ ಗದಗ ಜಿಲ್ಲಾಧ್ಯಕ್ಷರಾದ ನಾಗರಾಜ ಕಾಳೆ ಮತ್ತು ಭೀಮ್ ಆರ್ಮಿಯ ಪದಾಧಿಕಾರಿಗಳನ್ನ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾಧ್ಯಕ್ಷ ರಾಘವೇಂದ್ರ ಪರಸಪ್ಪ ಪರಾಪೂರ ಮಾತನಾಡಿ ಅಂಬೇಡ್ಕರವರ ತತ್ವ ಸಿದ್ಧಾಂತಗಳ ಮೇಲೆ ಕಾರ್ಯನಿರ್ವಹಿಸಿ ಹಾಗೂ ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಬಡವರಿಗೆ ಅನ್ಯಾಯವಾದರೆ ಹೋರಾಟಕ್ಕೆ ಸದಾ ಸಿದ್ಧರಾಗಿರಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪರಶುರಾಮ ಸಂಗಾಪೂರ, ಮಾದಿಗ ಸಮಾಜದ ಹಿರಿಯರಾದ ಸುರೇಶ ಹೊಸಮನಿ, ಅಶೋಕ ಹಾದಿಮನಿ, ಆಟೋ ಮಾಲಕರ ವ ಚಾಲಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಎಂ. ಕಲ್ಮನಿ, ಉಪಾಧ್ಯಕ್ಷ ಮಂಜುನಾಥ ಅಗಸಿಮನಿ, ಜೈ ಭೀಮ ಸೇನಾ ರಾಜ್ಯ ಉಪಾಧ್ಯಕ್ಷ ಮೈಲಾರಪ್ಪ ವಿ. ಚಳ್ಳಮರದ, ಮಾದಿಗ ಸಮಾಜದ ಹಿರಿಯರಾದ ಉಡಚಪ್ಪ ಹಳ್ಳಿಕೇರಿ, ವಿನಾಯಕ ವೈ. ಪರಾಪೂರ, ನಿಂಗಪ್ಪ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ವಿಶಾಲ ಗೋಶಲ್ಯನವರ, ಖಜಾಂಚಿ ವಿರುಪಾಕ್ಷಿ ಗೌಡರ, ಸಹ-ಕಾರ್ಯದರ್ಶಿ ಶ್ರೀಧರ ಜಕ್ಕಲಿ, ಭೀಮ ಆರ್ಮಿ ಜಿಲ್ಲಾ ಕಾರ್ಯದರ್ಶಿ ಆಕಾಶ ಕೋಣಿಮನಿ, ಮಂಜುನಾಥ ವೈ. ಪರಾಪೂರ, ಮಲ್ಲು ಪೂಜಾರ, ಪರಸಪ್ಪ ಹುಣಸೀಮರದ, ದೇವಿಂದ್ರಪ್ಪ ಗೊಣೆಮ್ಮನವರ, ಮಲ್ಲಪ್ಪ ಸತ್ಯಪ್ಪ ಪೂಜಾರ, ದವಲಪ್ಪ ನಡಿಗೇರ, ರಮೇಶ ರಾಲದೊಡ್ಡಿ, ವಿಜಯ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು.

ಧಾರವಾಡ ಜಿಪಂ ಸಿಇಒ ಡಾ.ಸುಶೀಲಾ ಅಧಿಕಾರ ಸ್ವೀಕಾರ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಧಾರವಾಡ
ಇಲ್ಲಿನ ಜಿಪಂ ಸಿಇಒ ಆಗಿ ಡಾ.ಸುಶೀಲಾ ಬಿ. ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಇಲ್ಲಿಂದ ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ್ ಅವರು ಡಾ.ಸುಶೀಲಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಹೈದರಾಬಾದ್‌ನ ಗಾಂಧಿ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿರುವ ಡಾ.ಸುಶೀಲಾ, ಕೆಲಕಾಲ ವೈದ್ಯಕೀಯ ವೃತ್ತಿ ನಡೆಸಿ ನಂತರ 2013ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ರೇಲ್ವೆ ಸಿಬ್ಬಂದಿ ಸೇವೆಗೆ ಅರ್ಹತೆ ಪಡೆದರು.
ಪುನಃ 2015ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್) ಕರ್ನಾಟಕ ಕೇಡರ್‌ಗೆ ಆಯ್ಕೆಯಾದರು. ರಾಯಚೂರಿನಲ್ಲಿ ಜಿಲ್ಲಾ ತರಬೇತಿ, ಸೇಡಂ ಹಾಗೂ ಕಲಬುರ್ಗಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಪಂಚಸೇನೆ ಹೋರಾಟದ ಎಚ್ಚರಿಕೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಶಾಲೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುವುದು ಸಲ್ಲದು. ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಪಂಚಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಮನಗುಂಡಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 109 ಶಿಕ್ಷಕರು ಮರಣ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿಯ ರಾಮದುರ್ಗ ತಾಲೂಕಿನ ಎ.ತಿಮ್ಮಾಪೂರ ಗ್ರಾಮದ ಶಾಲಾ ಮಕ್ಕಳಿಗೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿ 130 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳಿಗೆ ಕೊರೋನಾ ಸೋಫಂಖು ಇರುವುದು ಪತ್ತೆಯಾಗಿರುವುದು ಆತಂಕಕಾರಿ ವಿಚಾರ ಎಂದರು.
ಜನಪ್ರತಿನಿಧಿಗಳು ಸುಸಜ್ಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರೂ ಮೃತಪಟ್ಟಿದ್ದಾರೆ. ಇನ್ನು ಸಾಮಾನ್ಯ ಜನರು, ಮಕ್ಕಳು, ಶಿಕ್ಷಕರ ಪಾಡೇನು ಎಂದು ಪ್ರಶ್ನಿಸಿರುವ ಅವರು, ಕೂಡಲೇ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮುಖ್ಯಮಂತ್ರಿ, ಸಚಿವರ ಮನೆಗಳಿಗೆ ಮುತ್ತಿಗೆ ಹಾಕಿ ದಿಗ್ಭಂಧನ ವಿಧಿಸಲಾಗುವುದು ಎಂದು ಪಂಚಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಮನಗುಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಆರ್. ಬೊಮ್ಮಾಯಿ ಪುಣ್ಯಸ್ಮರಣೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ 13ನೇ ಪುಣ್ಯಸ್ಮರಣೆಯನ್ನು ನಗರದಲ್ಲಿನ ಬೊಮ್ಮಾಯಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮಹಾಪೌರ ಡಾ.ಪಾಂಡುರಂಗ ಪಾಟೀಲ, ವಿಜಯಾನಂದ ಹೊಸಕೊಟಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಮಜ್ಜಗಿ, ರವಿ ನಾಯಕ, ರಾಮಣ್ಣ ಬಡಿಗೇರ, ಕಿರಣ ಉಪ್ಪಾರ, ಗುರು ಹೂಗಾರ, ನಾಗರಾಜ ಕಟಾವಿ, ಚಂದ್ರು ಕಿರೇಸೂರ, ರಾಮನಗೌಡ್ರ ಶೆಟ್ಟನಗೌಡರ, ದಾವಲ್ ಮೊದಲಾದವರು ಉಪಸ್ಥಿತರಿದ್ದರು.

error: Content is protected !!