Home Blog Page 3033

ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲಿನ್ ಚಿಟ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಚಾಮರಾಜನಗರ ಆಸ್ಪತ್ರೆಯಲ್ಲಿ ಮೇ 2 ರಂದು 24 ರೋಗಿಗಳ ಸಾವಿಗೀಡಾಗಿರುವುದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ.

ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಸಾವಿಗೀಡಾಗಿದ್ದರೂ, ಅಲ್ಲಿಯ ವೈದ್ಯರು ಮಾತ್ರ ಕೇವಲ ಮೂವರು ಸೋಂಕಿತರು ಮಾತ್ರ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದರು.

ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಿ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು. ಅದರಂತೆ ಇದೀಗ ಸಮಿತಿಯು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು, ಚಾಮರಾಜನಗರದ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರ ನಿರ್ಲಕ್ಷ್ಯದಿಂದ ಆಕ್ಸಿಜನ್ ಕೊರತೆಯುಂಟಾಗಿ 24 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಿದೆ. ಇನ್ನೂ ಮೈಸೂರು ಜಿಲ್ಲಾಧಿಕಾರಿ ರೋಹಿನಿ ಸಿಂಧೂರಿ ಅವರ ಮೇಲೂ ಆರೋಪಗಳು ಕೇಳಿಬಂದಿದ್ದರೂ ಕ್ಲೀನ್ ಚಿಟ್ ನೀಡಲಾಗಿದೆ.

24 ಜನರ ಕೊಲೆಗೆ ಕಾರಣವಾದ ಸರ್ಕಾರ – ಡಿಕೆಶಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ ಸಾವನ್ನಪ್ಪಿರುವ 24 ಜನರ ಸಾವಿಗೆ ಸರ್ಕಾರವೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಾಮಾರಿಯಿಂದಾಗಿ ಕಂಗಾಲಾಗಿದ್ದಾರೆ. ಸದ್ಯದ ಈ ಸ್ಥಿತಿಗೆ ಬಿಜೆಪಿ ಸರ್ಕಾರವೇ ಕಾರಣ.ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಜನರ ಕೊಲೆಗೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

ಈ ಸಾವಿನ ಹೊಣೆ ಯಾರು ಹೊತ್ತಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ ಅವರು, ಸರ್ಕಾರ ಈ ವಿಷಯವಾಗಿ ಮಿಸ್ ಗೈಡ್ ಮಾಡುವ ಕಾರ್ಯ ಮಾಡುತ್ತಿದೆ. 24 ಜನ ಸತ್ತಿದ್ದಕ್ಕೆ ಸರ್ಕಾರವೇ ಹೊಣೆ ಹೊರಬೇಕು ಎಂದು ನ್ಯಾಯಮೂರ್ತಿಗಳೇ ಗರಂ ಆಗಿದ್ದಾರೆ.

ಜನ ಬೀದಿಗೆ ಬಂದಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಪ್ರತಿ ಬಡ ಕುಟುಂಬಕ್ಕೆ ರೂ. 10 ಸಾವಿರ ಆರ್ಥಿಕ ನೆರವು ಘೋಷಿಸಬೇಕು. ಬ್ಯಾಂಕ್ ಗಳ ಸಭೆ ಕರೆಯಬೇಕು. ಇಎಂಐ ಹಾಗೂ ಬಡ್ಡಿ ವಿಚಾರದಲ್ಲಿ ಬ್ಯಾಂಕ್ ಗಳ ಜೊತೆ ಮಾತನಾಡಿ, ಜನರ ನೆರವಿಗೆ ನಿಲ್ಲಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಲಸಿಕೆ ಅಭಾವ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕೋವಿಡ್ ಲಸಿಕೆಯ ಅಭಾವದಿಂದ ಜನರು ಪರದಾಡುತ್ತಿದ್ದಾರೆ. ಸಮರ್ಪಕವಾಗಿ ಲಸಿಕೆ ಪೂರೈಸಲಾಗದ ಸರ್ಕಾರದ ನಡೆಗೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ. ‘ನಿಮ್ಮಿಂದ ವ್ಯಾಕ್ಸಿನ್ ನೀಡಲು ಸಾಧ್ಯವೇ ಇಲ್ಲ ಎಂದಾದರೆ ಹೇಳಿ ನಾವು ಸರ್ಕಾರದಿಂದ ವ್ಯಾಕ್ಸಿನ್ ಒದಗಿಸಲಾಗದು’ ಎಂದೇ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದೆ.

ಲಸಿಕೆ ಪಡೆದರೆ ಕೊರೊನಾದಿಂದ ಪ್ರಾಣ ಉಳಿಸಿಕೊಳ್ಳಬಹುದು ಇದೀಗ ಸಾಕಷ್ಟು ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಉಳಿದವರ ಜೀವರಕ್ಷಿಸಲಾದರೂ ಸರ್ಕಾರ ಲಸಿಕೆ ನೀಡಬೇಕಿದೆ. ಕರ್ನಾಟಕದ ಜನಸಂಖ್ಯೆ 6 ಕೋಟಿಗೂ ಅಧಿಕವಾಗಿದ್ದು, ಈವರೆಗೆ ಒಂದೇಒಂದು ಪರ್ಸ್ಂಟ್ ನಷ್ಟು ಜನರಿಗೂ ಲಸಿಕೆ ನೀಡಲು ಸಾಧ್ಯವಾಗಿಲ್ಲ ವೆಂದರೆ ಇದೆಂತಹ ವ್ಯಾಕ್ಸಿನ್ ಅಭಿಯಾನ, ಇದೆಂತಹ ಲಸಿಕಾ ಉತ್ಸವ ಎಂದು ಕ್ಲಾಸ್ ತಗೆದುಕೊಂಡಿದೆ.

ಮೊದಲ ಡೋಸ್ ಲಸಿಕೆ ಪಡೆಯುವವರ ಕಥೆ ಬಿಡಿ, ಎರಡನೇ ಡೋಸ್ ಲಸಿಕೆ ಪಡೆಯವವರಿಗೂ ಲಸಿಕೆ ಸಿಗುತ್ತಿಲ್ಲವೆಂದರೆ ಹೇಗೆ..? 2 ನೇ ಡೋಸ್ ಪಡೆಯುವುದು ಅವರ ಹಕ್ಕಲ್ಲವೇ? 26 ಲಕ್ಷ ಜನರಿಗೆ ವ್ಯಾಕ್ಸಿನ್ ಕೊರತೆಯಿದ್ದು, ಈ ಗ್ಯಾಪ್ ನ್ನು ನೀವು ಹೇಗೆ ಸರಿಪಡಿಸುತ್ತೀರಿ? ಇದೇ ರೀತಿ ಮುಂದುವರೆದರೆ, ಎರಡೇ ದಿನಗಳಲ್ಲಿ ವ್ಯಾಕ್ಸಿನೇಷನ್ ನೀಡುವಂತೆ ಆದೇಶ ನೀಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ವ್ಯಾಕ್ಸಿನ್ 2ನೇ ಡೋಸ್ ಗೆ 6 ವಾರಗಳ ಕಾಲಾವಕಾಶವಿದೆ. ವ್ಯಾಕ್ಸಿನ್ ನೀಡುವುದು ವಿಳಂಬವಾದರೂ 1ನೇ ಡೋಸ್ ವ್ಯರ್ಥವಾಗಲ್ಲ. ಕೋವಿಶೀಲ್ಡ್ ಗೆ 8 ವಾರ ಕಾಲಾವಕಾಶವಿದೆ ಎಂದು ಕೇಂದ್ರ ಸರ್ಕಾರದ ಎಎಸ್ಜಿ ಐಶ್ವರ್ಯಾ ಭಾಟಿ ಉತ್ತರ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಲಾಕ್ ಡೌನ್!

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಸದ್ಯದ ಲಾಕ್ ಡೌನ್ ನ್ನು ಜೂ. 1ರ ವರೆಗೆ ವಿಸ್ತರಿಸಿದೆ.
ಮಹಾರಾಷ್ಟ್ರಕ್ಕೆ ಪ್ರವೇಶಿಸುವವರು ಕಡ್ಡಾಯವಾಗಿ ನೆಗೆಟಿವ್ ಆರ್ ಟಿ-ಪಿಸಿಆರ್ ವರದಿ ತೋರಿಸಬೇಕು. ಈ ಹಿಂದೆ ಕೊರೊನಾ ಪ್ರಕರಣ ಹೆಚ್ಚಾಗಿರುವ ರಾಜ್ಯಗಳಿಂದ ಬರುವವರಿಗೆ ಮಾತ್ರ ಇದು ಕಡ್ಡಾಯವಾಗಿತ್ತು. ಆದರೆ ಇನ್ನು ಮುಂದೆ ದೇಶದ ಯಾವುದೇ ಭಾಗಗಳಿಂದ ಮಹಾರಾಷ್ಟ್ರ ಪ್ರವೇಶಿಸುವವರು ಕಡ್ಡಾಯವಾಗಿ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿ ಒಯ್ಯಬೇಕು.

ಲಾಕ್ ಡೌನ್ ನಿರ್ಬಂಧ ನಿಯಮ ಜೂ. 1ರ ಬೆಳಿಗ್ಗೆ 7 ಗಂಟೆಯವರಿಗೆ ಅನ್ವಯವಾಗಲಿದೆ. ಅಲ್ಲಿನ ಹೊಸ ನಿಯಮದಲ್ಲಿ ಹಾಲು ಸಂಗ್ರಹ, ಸಾಗಾಟ ಮತ್ತು ಸಂಸ್ಕರಣೆಗೆ ಸಡಿಲವಿರುತ್ತದೆ. ಆದರೆ, ಇದರ ಚಿಲ್ಲರೆ ಮಾರಾಟಕ್ಕೆ ಸಮಯ ನಿಗದಿಯಿರುತ್ತದೆ.

ವಿಷ ಸೇವಿಸಿ ಯುವತಿ ಸಾವು: ಶವ ಸುಟ್ಟುಹಾಕಿ ಪ್ರಕರಣ ಮುಚ್ಚಿ ಹಾಕಲೆತ್ನಿಸಿದ 7 ಜನರ ವಿರುದ್ಧ ಕೇಸ್

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ

ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ತಮ್ಮ ಮಗಳು ವಿಷಸೇವಿಸಿ ಮೃತಪಟ್ಟ ವಿಚಾರವನ್ನು ಬಹಿರಂಗಪಡಿಸದೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆಕೆಯ ಶವವನ್ನು ಸುಟ್ಟು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತವಾಗಿ ೭ ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಗ್ರಾಮದ ಪೂಜಾ (೧೮) ಮೇ ೧೦ರಂದು ರಾತ್ರಿ ೧೦.೩೦ ಗಂಟೆಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದದ್ದಳು. ಆಕೆಯನ್ನು ತಂದೆ ಸುರೇಶ್, ಚಿಕ್ಕಪ್ಪರಾದ ಅಂಜಿನಪ್ಪ, ನಾಗರಾಜ, ಸಂಬಂಧಿಗಳಾದ ಭೀಮಪ್ಪ, ಹನುಮಂತ, ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕೊನೆಯುಸಿರು ಎಳೆದಿದ್ದಾಳೆ.

ಅನಂತರ ಆರೋಪಿತರು ಈ ವಿಷಯವನ್ನು ರಾತ್ರಿ ೧೧.೩೦ ಗಂಟೆ ಸಮಯದಲ್ಲಿ ತಮ್ಮ ಸಂಬಂಧಿಕರಿಗೆ ತಿಳಿಸಿದ್ದಾರೆ. ಇವರೆಲ್ಲರೂ ಸೇರಿಕೊಂಡು ಪೂಜಾಳ ಮೃತ ದೇಹವನ್ನು ಆಸ್ಪತ್ರೆಗೆ ಕರೆದೊಯ್ಯದೆ, ಪೊಲೀಸರಿಗೂ ಮಾಹಿತಿ ತಿಳಿಸದೆ, ತಮ್ಮ ಗ್ರಾಮದ ಕರೆಯ ಸಮೀಪ ಸ್ಮಶಾನದ ಬಳಿ ಸುಟ್ಟು ಹಾಕಿದ್ದಾರೆ. ಈ ಮಾಹಿತಿ ಆಧರಿಸಿ ಅದೇ ಮಾರ್ಗದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಸೊನ್ನದ ರಾಜೇಂದ್ರ ಅವರು ದೂರು ಸಲ್ಲಿಸಿದ್ದಾರೆ. ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಹಲುವಾಗಲು ಸಬ್ ಇನ್‌ಸ್ಪೆಕ್ಟರ್ ಎಚ್.ಎಸ್.ಪ್ರಶಾಂತ ಅವರು ತನಿಖೆ ಕೈಗೊಂಡಿದ್ದಾರೆ.

ಸಾವಿನ ಹಿಂದೆ ಪ್ರೇಮಕಥೆ?

ಮೃತ ಯುವತಿ ಮತ್ತು ಅನ್ಯ ಕೋಮಿನ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ದಿನಗಳ ಹಿಂದೆ ಮದುವೆಯಾಗಲು ಮನೆಬಿಟ್ಟು ಬೇರೆ ಸ್ಥಳಕ್ಕೆ ಹೋಗಿದ್ದರು. ಇವರು ತಂಗಿದ್ದ ಸ್ಥಳವನ್ನು ಹುಡುಗಿಯ ಪಾಲಕರು ಪತ್ತೆ ಹಚ್ಚಿದ್ದಾರೆ. ಆಗ ಹುಡುಗ ಪ್ರಾಣ ಭಯದಿಂದ ತಲೆಮರೆಸಿಕೊಂಡಿದ್ದ. ಹುಡುಗಿಯ ಪಾಲಕರು, ಸಂಬಂಧಿಕರು ಆಕೆಯನ್ನು ಸ್ವ-ಗ್ರಾಮಕ್ಕೆ ಕರೆತಂದು ಬಲವಂತವಾಗಿ ವಿಷ ಉಣಿಸಿದ್ದಾರೆ ಎನ್ನುವ ಗಾಳಿ ಸುದ್ದಿ ಗ್ರಾಮದಲ್ಲಿ ಹರಡಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬುಧವಾರವೂ ಸೋಂಕಿನ ಆರ್ಭಟ; 458 ಜನರಿಗೆ ಸೋಂಕು; ನಾಲ್ವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ಸೋಂಕಿನ ಆರ್ಭಟ ಮುಂದುವರೆದಿದೆ. ನಿನ್ನೆ ಮತ್ತು ಇವತ್ತು ನಾಲ್ಕು ನೂರರ ಗಡಿ ದಾಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಅದರಲ್ಲೂ ಸೋಂಕು ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿದ್ದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಮೇ 12 ಬುಧವಾರ ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 458 ಜನರಿಗೆ ಸೋಂಕು ತಗುಲಿದೆ. ನಾಲ್ವರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.

ಇಂದು 458 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 15986 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -221, ಮುಂಡರಗಿ-71, ನರಗುಂದ-19, ರೋಣ-89, ಶಿರಹಟ್ಟಿ-44, ಹೊರಜಿಲ್ಲೆಯ-10 ಸೇರಿದಂತೆ 458 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಮಾಹಿತಿ ಅಂತೆ ನಾಲ್ವರು ಮೃತಪಟ್ಟಿದ್ದಾರೆ.

ಮೃತ ನಾಲ್ವರು ಬೆಟಗೇರಿ ಭಾಗದ ನಿವಾಸಿಗಳು ಅನ್ನೋದು ಗಾಬರಿ ತರಿಸಿದೆ.

ಬೆಟಗೇರಿ ಭಾಗದ ನಿವಾಸಿ 69 ವರ್ಷ ವಯಸ್ಸಿನ ಮಹಿಳೆ, ಮೇ 06 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿಯ ನಿವಾಸಿ 60 ವರ್ಷದ ಮಹಿಳೆ ಮೇ 12 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿಯ 67 ವರ್ಷದ ಮಹಿಳೆ ಮೇ 11 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಬೆಟಗೇರಿ ಭಾಗದ 75 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೇ 09 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹೇಳಿದ್ದಾರೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
167 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 280 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 13986 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1910 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 169 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಹರ್ತಿ ಬಳಿ ಭೀಕರ ಅಪಘಾತ; ನಾಲ್ವರು ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಇನ್ನೊಬ್ಬ ಗಾಯಗೊಂಡಿದ್ದು ಜಿಮ್ಸ್ ಗೆ ದಾಖಲಾಗಿದ್ದಾರೆ.

ಗದಗ ತಾಲೂಕಿನ ಹರ್ತಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದ್ದು, ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ. ಕಾರಲ್ಲಿದ್ದವರು ಹೊಲದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ನೆರದವರ ಕಣ್ಣಲ್ಲಿ ನೀರು ತರಿಸಿದೆ. ಕಾರಿನ ಕೆಲ ಪಾರ್ಟ್ಸ್ ತುಂಡು ತುಂಡಾಗಿ ಬಿದ್ದಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ಈ ದುರ್ಘಟನೆ ನೆಡದಿದೆ.

ಗಾಯಗೊಂಡ ಶಂಕ್ರಪ್ಪ ಎನ್ನುವಾತ ಗ್ರಾಮಸ್ಥರಿಗೆ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ವೀ ಅಂತ ಮಾಹಿತಿ ನೀಡಿದ್ದಾನೆ.

ಮೃತರು ನವಲಗುಂದ ತಾಲೂಕಿನ ಆರಟ್ಟಿ ಗ್ರಾಮಸ್ಥರು ಎನ್ನಲಾಗಿದೆ. ವೀರೇಶ(26), ಶೇಖಪ್ಪ(45), ಬಾಪೂಗೌಡ (25),ಸಾವಿತ್ರಿ(50) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದವರು.

ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.

ಲಸಿಕೆ ಸಮಸ್ಯೆ – ಜನರಿಂದ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಲಸಿಕೆ ಅಭಾವ ತೀವ್ರಗೊಂಡಿದೆ. ಅಲ್ಲದೇ, ಮೊದಲ ಡೋಸ್ ಪಡೆದವರಿಗೂ ಲಸಿಕೆ ಸಿಗುತ್ತಿಲ್ಲ. ಇದರಿಂದ ಜನ ಪರದಾಡುತ್ತಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.
ನಗರದ ಕೆ.ಸಿ ಜನರಲ್ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ ಜನರು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಲಸಿಕೆ ಪಡೆಯುವವರು ಕೋವಿನ್ ಜಾಲತಾಣದ ಮೂಲಕ ಹೆಸರು ನೊಂದಾಯಿಸೇಕು. ಆದರೆ, ದಾಖಲೆ ಪ್ರಕ್ರಿಯೆ ಮುಗಿಸಿದರೂ ಲಸಿಕೆ ಸಿಗುತ್ತಿಲ್ಲ. ಹಲವರು ಬೆಳಿಗ್ಗೆ 6ರಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಲಸಿಕೆ ಇಲ್ಲದೆ ಮರಳಿ ಹೋಗುತ್ತಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿಯೋ ಲಸಿಕೆಯ ಸಮಸ್ಯೆ ಎದುರಾಗುತ್ತಿದೆ. ಕಲಬುರಗಿ, ಕೋಲಾರ, ಮೈಸೂರು ಸೇರಿದಂತೆ ವಿವಧಡೆ ಅಭಾವ ತಲೆದೋರಿದೆ. ಎರಡನೇ ಡೋಸ್ ಅವಧಿ ಮುಗಿದರೂ ಅಂತಹ ವ್ಯಕ್ತಿಗಳಿಗೆ ಲಸಿಕೆ ಸಿಗುತತಿಲ್ಲ. ಎರಡನೇ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಬಂದರೂ ಮರಳಿ ಹೋಗುತ್ತಿದ್ದಾರೆ. ಆಸ್ಪತ್ರೆಗಳ ಮುಂದೆ ಸ್ಟಾಕ್ ಖಾಲಿ ಆಗಿದೆ ಎಂದು ಬೋರ್ಡ್ ಹಾಕಲಾಗಿದೆ. ಹೀಗಾಗಿ ಆಪ್ ನಲ್ಲಿ ರಿಜಿಸ್ಟ್ರಾರ್ ಆದರೂ ಯಾವುದೇ ಪ್ರಯೋಜನ ಇಲ್ಲ ಎಂದು ಜನರು ಮರಳಿ ಹೋಗುತ್ತಿದ್ದಾರೆ.

ಜನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸೇರಿದಂತೆ ದೇಶದಲ್ಲಿ ಮೂರನೇ ಅಲೆಯನ್ನು ನಿಯಂತ್ರಿಸಲು ಕೂಡ ಲಸಿಕೆಯ ಪಾತ್ರ ಸಾಕಷ್ಟಿದೆ. ಹೀಗಾಗಿ ಸಕಾಲದಲ್ಲಿ ಜನರಿಗೆ ಲಸಿಕೆ ತಲುಪಿಸಬೇಕು ಎನ್ನುವುದು ಎಲ್ಲರ ಬಯಕೆಯಾಗಿದೆ.

ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಾರಂತೆ ಬಿಗ್ ಬಾಸ್ ಸ್ಪರ್ಧಿಗಳು

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸದ್ಯ ಅಂತ್ಯ ಕಂಡಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹಿನಿಯು ಬಿಗ್ ಬಾಸ್ ನ್ನು ಅರ್ಧಕ್ಕೆ ನಿಲ್ಲಿಸಿದೆ. ಸದ್ಯ ಮನೆಯಿಂದ ಅರ್ಧಕ್ಕೆ ಹೊರ ಬಂದಿರುವ ಸ್ಪರ್ಧಿಗಳು ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.

ಬಿಗ್ ಬಾಸ್ ಮನೆ ಭಾನುವಾರದಂದು ಬಾಗಿಲು ಹಾಕಿಕೊಂಡಿದೆ. ಅದರ ಕೊನೆಯ ಸಂಚಿಕೆ ಇಂದು ಪ್ರಸಾರವಾಗಲಿದೆ. ಬಿಗ್ ಬಾಸ್ ಕೊನೆಯಾಗುವ ವಿಷಯ ತಿಳಿದುಕೊಂಡಿರುವ ಸ್ಪರ್ಧಿಗಳು, ಹೊರಗಡೆ ಕೊರೊನಾದಿಂದ ಜನ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆಯೂ ತಿಳಿದುಕೊಂಡಿದ್ದಾರೆ. ನಂತರ ಪ್ರತಿದಿನ ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕೆ ಬಿಗ್ ಬಾಸ್ ಗೆ ಧನ್ಯವಾದ ತಿಳಿಸಿದ್ದಾರೆ.

ಅಲ್ಲದೇ, ಮನೆಯಿಂದ ಹೊರ ಹೋದ ನಂತರ ಕೊರೊನಾ ವಾರಿಯರ್ಸ್ ಆಗಿ ತಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ಸ್ಪರ್ಧಿಗಳು ಹೇಳಿದ್ದಾರೆ. ಇದರೊಂದಿಗೆ ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ. ಭಾರವಾದ ಹೃದಯದಿಂದಲೇ ಸ್ಪರ್ಧಿಗಳು ಮನೆಯಿಂದ ಹೊರ ನಡೆದಿದ್ದಾರೆ.

ಡಿಸಿಎಂ ಲಕ್ಷ್ಣ ಸವದಿ ಅವರ ಸಹೋದರನ ಮಗ ಸೋಂಕಿಗೆ ಬಲಿ!

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ರಾಜ್ಯದಲ್ಲಿ ಮಹಾಮಾರಿ ತಾಂಡವಾಡುತ್ತಿದ್ದು, ಪ್ರತಿ ದಿನ ಅನೇಕ ಜನರು ಬಲಿಯಾಗುತ್ತಿದ್ದಾರೆ. ಸದ್ಯ ಡಿಸಿಎಂ ಲಕ್ಷ್ಮಣ್ ಸವದಿ ಅವರ ಅಣ್ಣನ ಮಗ ಕೂಡ ಮಾಹಾಮಾರಿಗೆ ಬಲಿಯಾಗಿದ್ದಾರೆ.
ವಿನೋದ ಪರಪ್ಪ ಸವದಿ(36) ಮಹಾಮಾರಿಗೆ ಬಲಿಯಾದ ದುರ್ದೈವಿ. ಇವರು ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿರುವ ಪರಪ್ಪ ಸವದಿ ಅವರ ಪುತ್ರರಾಗಿದ್ದಾರೆ. ಸದ್ಯ ಇವರು ಪುತ್ರನ ವಿಯೋಗದಿಂದ ಸಂಕಟ ಪಡುತ್ತಿದ್ದಾರೆ.

ಕೊರೊನಾ ಅಂಟಿಕೊಂಡ ಹಿನ್ನೆಲೆಯಲ್ಲಿ ವಿನೋದ ಅವರು ಕಳೆದ ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

error: Content is protected !!