Home Blog Page 3039

ಭೂಮಿಯ ಮೇಲೆ ಕೊರೊನಾ ಇದೆ ಎಂದು ಆಕಾಶದಲ್ಲಿ ಮದುವೆಯಾದ ಜೋಡಿ!

ವಿಜಯಸಾಕ್ಷಿ ಸುದ್ದಿ, ಚೆನ್ನೈ

ಭೂಮಿಯ ಮೇಲೆ ಕೊರೊನಾ ಇದೆ ಎಂದು ನವಜೋಡಿಯೊಂದು ಆಕಾಶದಲ್ಲಿ ಮದುವೆಯಾಗಿರುವ ವಿಶೇಷ ಘಟನೆ ನಡೆದಿದೆ. ಮಧುರೈ ನಿವಾಸಿಗಳಾದ ರಾಕೇಶ್, ಧೀಕ್ಷಣಾ ಎಂಬ ಜೋಡಿಯೇ ಈ ರೀತಿಯ ವಿಶೇಷ ಮದುವೆಯಾಗಿದೆ.

ಮದುವೆಗಾಗಿಯೇ ವಿಶೇಷ ವಿಮಾನವೊಂದನ್ನು ಬುಕ್ ಮಾಡಿದ್ದರು. 2 ಗಂಟೆಗಳ ಕಾಲ ಬಾಡಿಗೆ ತೆಗೆದುಕೊಂಡು ಆಕಾಶದಲ್ಲಿ ಮದುವೆಯಾಗಿದ್ದಾರೆ. ಅಲ್ಲದೇ, ವಿಮಾನದಲ್ಲಿ ಹೆಚ್ಚು ಜನರನ್ನು ಕೂಡಿಸುವ ಮೂಲಕ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ.

130 ಜನ ಸಂಬಂಧಿಕರನ್ನು ಸೇರಿಸಿ ಮದುವೆಯಾಗಿದ್ದಾರೆ. ವಿಮಾನವು ಮಧುರೈನಿಂದ ತೂತುಕಡಿಗೆ ಸಂಚರಿಸುವ ಸಂದರ್ಭದಲ್ಲಿ ಮದುವೆ ನಡೆದಿದೆ. ಸದ್ಯ ಈ ಮದುವೆಯ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲಲಿ ವೈರಲ್ ಆಗಿದೆ.

ಅತ್ತೆಯ ಮನೆಯಲ್ಲಿಯೇ ಇದ್ದು, ಕೊರೊನಾ ಬಂದಿದ್ದಕ್ಕೆ ಅವರನ್ನೇ ಹೊರಗೆ ಹಾಕಿದ ಪಾಪಿ ಅಳಿಯ!

ವಿಜಯಸಾಕ್ಷಿ ಸುದ್ದಿ, ಮಂಡ್ಯ

ಕೊರೊನಾ ಬಂದಿದೆ ಎಂಬ ಕಾರಣಕ್ಕೆ ಇಲ್ಲೊಬ್ಬ ವ್ಯಕ್ತಿ ಅತ್ತೆ ಹಾಗೂ ಮಾವನನ್ನು ಮನೆಯಿಂದ ಹೊರಗೆ ಹಾಕಿರುವ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅತ್ತೆಗೆ ಕೊರೊನಾ ಪಾಸಿಟಿವ್ ಬಂದಿದ್ದಕ್ಕೆ ಅಳಿಯ ಮನೆಗೆ ಸೇರಿಸಲು ಒಪ್ಪದೇ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೈದು ಕಳಿಸಿದ್ದಾನೆ.

ಅರೆಚಾಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ವೈದ್ಯರು ಸಿದ್ದಮ್ಮರನ್ನು ಹೋಂ ಐಸೋಲೇಷನ್ ನಲ್ಲಿ ಇರುವಂತೆ ಸೂಚಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿದ್ದಮ್ಮ ಅವರನ್ನು ಮನೆಗೆ ಬಿಡಲು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಿದ್ದಮ್ಮ ಅವರ ಅಳಿಯ ಮುತ್ತೇಗೌಡ, ಆಕೆಗೆ ಕೊರೊನಾ ಪಾಸಿಟಿವ್ ಬಂದಿದೆ. ಮನೆಗೆ ಸೇರಿಸಿಕೊಳ್ಳುವುದಿಲ್ಲ. ಆಕೆಯನ್ನು ಕರೆದುಕೊಂಡು ಹೋಗಿ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ರೇಗಿದ್ದಾನೆ. ಮುತ್ತೇಗೌಡನನ್ನು ಸಿದ್ದಮ್ಮ ಅವರು ಮನೆಯ ಅಳಿಯನನ್ನಾಗಿ ಮಾಡಿಕೊಂಡಿದ್ದಾರೆ. ಹೀಗಿದ್ದರೂ ಅಳಿಯ, ಅತ್ತೆಯ ಮನೆಯಲ್ಲಿಯೇ ಇದ್ದು, ಅವರಿಗೆ ಬೇಡ ಎಂದು ಹೇಳಿದ್ದಾನೆ. ಸದ್ಯ ಸಿದ್ದಮ್ಮ ಅವರನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಟಿ ಕೋಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ವಿಜಯಸಾಕ್ಷಿ ಸುದ್ದಿ, ಗದಗ

ಕೊರೊನಾ ಆತಂಕದ ಹಿನ್ನೆಲೆಯಲ್ಲಿ ನಾಟಿ ಕೋಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಡಿಮ್ಯಾಂಡ್ ಬಂದಿದೆ. ಕೊರೊನಾ ಸೋಂಕಿತರು ನಾಟಿ ಕೋಳಿ ಸೇವಿಸಿದರೆ ರೋಗ‌ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಸಂದೇಶ ಹರಿದಾಡುತ್ತಿರುವುದರಿಂದಾಗಿ ನಾಟಿ ಕೋಳಿ ಖರೀದಿಸಲು ಜನ ಮುಗಿ ಬೀಳುತ್ತಿದ್ದಾರೆ.

ರೋಗ ನಿರೋಧಕ ಶಕ್ತಿ ವೃದ್ಧಿಸಲು ನಾಟಿ ಕೋಳಿ ಸಹಕಾರಿ ಎಂಬ ಸಲಹೆಯನ್ನು ವೈದ್ಯರು ಹೇಳಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿದ್ದು, ಜನ ನಾಟಿ ಕೋಳಿ ಹುಡುಕಾಡಿ ಖರೀದಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸದ್ಯ ಜಿಲ್ಲೆಯ ರೋಣ ಪಟ್ಟಣದಲ್ಲಿ ನಾಟಿ ಕೋಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಹಳ್ಳಿಗಳಿಂದ ಬೆಳ್ಳಂ ಬೆಳಿಗ್ಗೆ ಪಟ್ಟಣಕ್ಕೆ ಬಂದು ಜನರು, ನಾಟಿ ಕೋಳಿ ಖರೀದಿಸುತ್ತಿದ್ದಾರೆ. ತಾವು ಸಾಕಿದ್ದ ನಾಟಿ ಕೋಳಿಗಳನ್ನೆಲ್ಲ ಅವರು ಉತ್ತಮ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಜನರು ಕೂಡ ಮುಗಿಬಿದ್ದು ನಾಟಿ ಕೋಳಿ ಖರೀದಿಸುತ್ತಿದ್ದಾರೆ.

ನಾಟಿ ಕೋಳಿ ಮಾರಾಟಗಾರರ ಕೋಳಿಗಳು ಚೌಕಾಸಿ ಇಲ್ಲದೆ, ಬೆಳಿಗ್ಗೆ 8 ಗಂಟೆಯೊಳಗೆ ಮರಾಟವಾಗುತ್ತಿವೆ. ಇದರಿಂದಾಗಿ ನಾಟಿ ಕೋಳಿ ವ್ಯಾಪಾರಸ್ಥರು ಫುಲ್ ಖುಷಿ ಆಗುತ್ತಿದ್ದಾರೆ. ಇಲ್ಲಿಯವರೆಗೆ ಒಂದು ನಾಟಿ ಕೋಳಿ ರೂ. 250ಕ್ಕೆ ಮಾರಾಟವಾಗುತ್ತಿದ್ದವು. ಸದ್ಯ ಅದರ ದರ ರೂ. 400ರಷ್ಟಾಗಿದೆ. ದರ ಎಷ್ಟೇ ಆದರೂ ಜನರು ಮಾತ್ರ ಚೌಕಾಸಿ ಮಾಡದೆ ನಾಟಿ ಕೋಳಿ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ನಾಟಿ ಕೋಳಿ ಮಾಂಸದಲ್ಲಿ ಪ್ರೊಟೀನ್ ವಿಟಮಿನ್ ಅಂಶ ಹೆಚ್ಚಳವಾಗಿರುತ್ತದೆ. ದೇಹದ ಮಾಂಸ – ಖಂಡಗಳು ಗಟ್ಟಿಯಾಗಿ ಕೊರೊನಾ ವಿರುದ್ಧ ಹೋರಾಟ ಮಾಡಲು ನಾಟಿ ಕೋಳಿ ಸಹಕಾರಿಯಾಗಿವೆ ಎಂಬ ವೈದ್ಯರ ಸಂದೇಶ ಹರಿದಾಡುತ್ತಿವೆ.

ಗದಗನಲ್ಲಿ ಕೃಷ್ಣಮೃಗ ಮಾಂಸ ಮಾರಾಟ ದಂಧೆ; ಪೊಲೀಸ್- ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಕೃಷ್ಣಮೃಗ ಬೇಟಿಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ.

ತಾಲೂಕಿನ ಕಣಗಿನಹಾಳ ಗ್ರಾಮದ ಹೊರವಲಯದಲ್ಲಿ ಒಂದು ಹೆಣ್ಣು, ಹಾಗೂ ಗಂಡು ಕೃಷ್ಣ ಮೃಗ ಬೇಟಿಯಾಡಿದ್ದ ಖದೀಮರು, ಮಾಂಸ ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಪಡೆದ ಗದಗ ಗ್ರಾಮೀಣ ಠಾಣೆಯ ಪಿಎಸ್ಐ ಅಜಿತಕುಮಾರ್ ಹೊಸಮನಿ ಹಾಗೂ ಸಿಬ್ಬಂದಿ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದಾನೆ.

ಬಂಧಿತರನ್ನು ರಾಮಚಂದ್ರಪ್ಪ ಹನಮಪ್ಪ ಹರಣಶಿಕಾರಿ ಹಾಗೂ ಮಲ್ಲಿಕಾರ್ಜುನ ಕಾಯಪ್ಪ ಹಾತಲಗೇರಿ ಎನ್ನಲಾಗಿದೆ. ಇನ್ನೊಬ್ಬ ಪ್ರಮುಖ ಆರೋಪಿ ಸುರೇಶ ರಾಮಪ್ಪ ದೊಡ್ಡಮನಿ ಪರಾರಿಯಾಗಿದ್ದಾನೆ.

ಬಂಧಿತರಿಂದ ಇನ್ನೂ ಮಾರಾಟವಾಗದೇ ಉಳಿದಿದ್ದ ಒಂದು ಕೃಷ್ಣ ಮೃಗದ ಕಳೇಬರ ವಶಪಡಿಸಿಕೊಳ್ಳಲಾಗಿದೆ.

ಆರ್ ಎಫ್ಒ ರಾಜು ಗೊಂದಕರ್, ಡಿವೈಆರ್ ಎಫ್ಒ ಗಳಾದ ಆರ್ ವೈ ಕಂಬಳಿ, ಎಮ್ ಎಸ್ ನಾಗಮ್ಮನವರ್, ಬಿಂಕದಕಟ್ಟಿಯ ಅರಣ್ಯರಕ್ಷಕರಾದ ಬಸವರಾಜ್ ಅಂಗಡಿ, ಅಮೀನಸಾಬ್ ಬಳೂಟಗಿ, ಗ್ರಾಮೀಣ ಠಾಣೆಯ ಮುಖ್ಯ ಪೇದೆ ಚೌಡರ್ ಹಾಗೂ ಬೂದಿಹಾಳ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಹಾಗೂ ಪೊಲೀಸರ ಕಾರ್ಯಕ್ಕೆ ಡಿಸಿಎಫ್ ಸೂರ್ಯಸೇನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಾಸ್ಟರ್ ಮೈಂಡ್ ಪರಾರಿ

ಪ್ರಕರಣದ ಪ್ರಮುಖ ಆರೋಪಿ ಸುರೇಶ್ ರಾಮಪ್ಪ ದೊಡ್ಡಮನಿ ಪರಾರಿಯಾಗಿದ್ದಾನೆ. ಕಣಗಿನಹಾಳ ಗ್ರಾಮದ ಬಲ್ಲ ಮೂಲಗಳ ಪ್ರಕಾರ ಜಿಂಕೆ, ಕೃಷ್ಣ ಮೃಗ ಬೇಟಿಯಾಡಿ ಮಾಂಸ ಮಾರಾಟ ಮಾಡೋದನ್ನು ದಂದೆಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಯಾರೂ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಕಂಪ್ಲಿಯಲ್ಲಿ ಎಸ್.ಬಿ.ಫೌಂಡೇಷನ್ ವತಿಯಿಂದ ಕೋವಿಡ್ ಆಸ್ಪತ್ರೆ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಕರುನಾಡಲ್ಲಿ ಮರಣ ಮೃದಂಗವನ್ನು ಭಾರಿಸುತ್ತಿರುವ ಕೊರೊನಾ ವೈರಸ್ ನಿಂದ ರಾಜ್ಯದ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ರಾಜ್ಯದಲ್ಲಿಯೇ ಕೊರೊನಾ ಸೊಂಕಿತರ ಪಟ್ಟಿಯಲ್ಲಿ ಬಳ್ಳಾರಿ ಜಿಲ್ಲೆ ಎರಡನೇ ಸ್ಥಾನದಲ್ಲಿರುವ ಕಾರಣ, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿರುವ ಈ ಸಂದರ್ಭದಲ್ಲಿ, ಮಾಜಿ ಶಾಸಕರಾದ ಟಿ.ಎಚ್.ಸುರೇಶಬಾಬು ಅವರು ಕ್ಷೇತ್ರದ ಜನರ ಆತಂಕವನ್ನು ದೂರ ಮಾಡಲು ತಮ್ಮ ಸ್ವಂತ ಹಣದಿಂದ ಎಸ್.ಬಿ.ಫೌಂಡೇಷನ್ ನೇತೃತ್ವದಲ್ಲಿ ತಮ್ಮ ಕ್ಷೇತ್ರದ ಕಂಪ್ಲಿ ಪಟ್ಟಣದಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ೫೦ ಹಾಸಿಗೆಯ ಕೋವಿಡ್ ಆಸ್ಪತ್ರೆಯನ್ನು ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹಾಗೂ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಜಿಗಳು ಉದ್ಘಾಟಿಸಿದರು.

ಕಂಪ್ಲಿ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಪ್ರಾರಂಭಿಸಿರುವ ಈ ಆಸ್ಪತ್ರೆಗೆ ಎಸ್.ಬಿ.ಫೌಂಡೇಷನ್ ವತಿಯಿಂದ ನುರಿತ ವೈದ್ಯರು ಹಾಗೂ ಶುಶ್ರುಷಕರು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಆಸ್ಪತ್ರೆಗೆ ದಾಖಲಾದ ಸೋಂಕಿತರಿಗೆ ಉತ್ತಮ ಚಿಕಿತ್ಸೆ, ಔಷದ ಉಪಚಾರ ಹಾಗೂ ಉಚಿತ ಊಟ-ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

ಆಸ್ಪತ್ರೆಗೆ ದಾಖಲಾಗುವ ಸೋಂಕಿತರು ಒಂದು ರೂಪಾಯಿ ಖರ್ಚಿಲ್ಲದೆ ಸಂಪೂರ್ಣ ಗುಣಮುಖರಾಗಿ ಮನೆಗೆ ಹೋಗುವ ವರೆಗಿನ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಮಾಜಿ ಶಾಸಕ ಸುರೇಶಬಾಬು ಅವರ ಎಸ್.ಬಿ.ಪೌಂಡೇಷನ್ ನಿಂದ ಭರಿಸಲಾಗುವುದು. ಮಾಜಿ ಶಾಸಕರೊಬ್ಬರು ಇಂತಹ ದಿಟ್ಟ ಹೆಜ್ಜೆಯನ್ನಿಡುವ ಮೂಲಕ ಜನರ ಸೇವೆ ಮಾಡುತ್ತಿರುವುದು ರಾಜ್ಯದಲ್ಲಿ ಇದೆ ಮೊದಲು ಎಂದೆ ಹೇಳಬಹುದು.

ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿದಿನ ೧೫೦೦ ರಿಂದ ೨೦೦೦ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದು, ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ. ಅಲ್ಲದೇ ಸೋಂಕಿತರಿಗೆ ಜಿಲ್ಲೆಯಲ್ಲಿ ಬೆಡ್ ಮತ್ತು ಆಕ್ಸಿಜನ್ ಸರಿಯಾದ ಸಮಯಕ್ಕೆ ದೊರಕದ ಕಾರಣ ಜನರು ಸಂಕಷ್ಟಕ್ಕೊಳಗಾಗಿರುವ ಇಂತಹ ಕಠಿಣ ಮತ್ತು ಆತಂಕದ ಸಮಯದಲ್ಲಿ ಕಂಪ್ಲಿ ಮಾಜಿ ಶಾಸಕ ಟಿ. ಎಚ್. ಸುರೇಶಬಾಬು ಅವರು ಎಸ್ ಬಿ ಫೌಂಡೇಶನ್ ವತಿಯಿಂದ ತಮ್ಮ ತಂದೆಯವರಾದ ರೇಲ್ವೆ ಬಾಬು ಅವರ ಸ್ಮರಣಾರ್ಥ ಕಂಪ್ಲಿಯಲ್ಲಿ ೫೦ ಹಾಸಿಗೆಯ ಹಾಗೂ ೧೦ ಆಕ್ಸಿಜನ್ ಬೆಡ್ ಸೌಕರ್ಯ ಹೊಂದಿರುವ ಕೋವಿಡ್ ಆಸ್ಪತ್ರೆಯನ್ನು ಕಂಪ್ಲಿ ಭಾಗದ ಜನತೆಗೆ ಅರ್ಪಿಸಿದ್ದಾರೆ.

ಐವತ್ತು ಹಾಸಿಗೆಯ ಈ ಆಸ್ಪತ್ರೆಯನ್ನು ಮುಂದೆ ಅವಶ್ಯಕತೆ ಬಿದ್ದರೆ, ೨೦೦ ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನು ಸುರೇಶಬಾಬು ಅವರು ಹೊಂದಿದ್ದಾರೆ. ಇತ್ತೀಚೆಗೆ ಜಿಲ್ಲೆಯ ಜಿಂದಾಲ್ ನಲ್ಲಿ ಕೊರೊನಾ ಸೋಂಕಿತರಿಗೆ ೩೦೦ ಹಾಸಿಗೆಯ ಆಸ್ಪತ್ರೆಯನ್ನು ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸೌಲಭ್ಯವನ್ನು ಕಲ್ಪಿಸಿ ಆಸ್ಪತ್ರೆಯನ್ನು ಪ್ರಾರಂಭಿಸಿರುವ ಬೆನ್ನಲ್ಲೇ ಜಿಲ್ಲೆಯ ಕಂಪ್ಲಿ ಮತ್ತು ಕುರಗೋಡು ಪಟ್ಟಣಗಳಲ್ಲಿ ಈ ಆಸ್ಪತ್ರೆಗಳು ಪ್ರಾರಂಭವಾಗುತ್ತಿರುವುದು ನಿಜಕ್ಕೂ ಸಂತಸದ ಸಂಗತಿ.

ಮುಂಬರುವ ದಿನಗಳಲ್ಲಿ ಕಂಪ್ಲಿ ಕ್ಷೇತ್ರದ ಕುರಗೋಡು ಪಟ್ಟಣದಲ್ಲಿ ಮಾಜಿ ಶಾಸಕರು ಇದೇ ತರಹದ ಆಸ್ಪತ್ರೆ ಪ್ರಾರಂಭಿಸಲು ಯೋಜನೆಯನ್ನು ರೂಪಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ಯೋಜನೆಯೂ ಜಾರಿಗೆ ಬರಲಿದೆ.

ಈಗ ಕೊರೊನಾ ಮಹಾಮಾರಿಯಿಂದ ಜಿಲ್ಲೆಯ ಜನರು ತತ್ತಿರಸಿಹೋಗಿದ್ದಾರೆ. ಶ್ರೀಮಂತರು ದುಡ್ಡು ತೆಗೆದುಕೊಂಡು ರಾಜ್ಯದ ದೊಡ್ಡ, ದೊಡ್ಡ ಆಸ್ಪತ್ರೆಗಳಿಗೆ ಅಲೆದರೂ ಬೆಡ್ ಸಿಗದ ಗಂಭೀರ ಪರಸ್ಥಿತಿ ಇದೆ. ಇನ್ನೂ ಬಡವರ ಪಾಡು ಆ ಭಗವಂತನೇ ಬಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರ ಈ ಮಹತ್ವದ ಕಾರ್ಯದಿಂದ ಕ್ಷೇತ್ರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈ ಕೊರೊನಾ ರೋಗವನ್ನು ನಾವು ಗೆದ್ದು ಬರಬಹುದು ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ಮಾಜಿ ಶಾಸಕ ಸುರೇಶಬಾಬು ಅವರು “ಕಾಯಕವೇ ಕೈಲಾಸ” ವೆಂದು ಸಾರಿದ ಅಣ್ಣ ಬಸವಣ್ಣವರ ವಚನದಂತೆ ಹಾಗೂ ಅಂಬೇಡ್ಕರ್ ಮತ್ತು ಮದರ ತೆರೇಸಾ ಅವರ ಆಸೆಯದಂತೆ ಜನ ಸೇವೆಯಲ್ಲಿಯೇ ಕೈಲಾಸನ್ನು ಹಾಗೂ ಮಾಡುವ ಕಾರ್ಯದಲ್ಲಿ ತೃಪ್ತಿಯನ್ನು ಕಾಣುವ ಆಸೆಯನ್ನು ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಸಣ್ಣ ಪಕೀರಪ್ಪ, ತಹಸೀಲ್ದಾರ್ ಗೌಸಿಯಾ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ರಾಧಿಕಾ ಮುಂತಾದವರು ಉಪಸ್ಥಿತರಿದ್ದರು.

ಕೊರೊನಾ; ನೆಗೆಟಿವ್ ವರದಿ ಬಂದ್ರೂ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ವಿಜಯಸಾಕ್ಷಿ ಸುದ್ದಿ ಗದಗ

ಕುಟುಂಬಸ್ಥರಿಗೆಲ್ಲ ಕೊರೊನಾ ಬರುತ್ತದೆ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಈ ಘಟನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ‌ ಮಹಾಂತೇಶ್ ಪ್ರಭುದೇವ ಕುದರಿ(37) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಶಿಕ್ಷಕ ಗದಗ ತಾಲೂಕಿನ ಕುರ್ತಕೋಟಿ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ‌ ಸಲ್ಲಿಸುತ್ತಿದ್ದರು.

ಶಿಕ್ಷಕ ಮಹಾಂತೇಶ್ ಅವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅಲ್ಲದೇ, ಅವರು ಸೋಂಕಿನಿಂದ ಗುಣಮುಖರಾಗಿದ್ದರು ಕೂಡ. ಅವರ ವರದಿ ನೆಗೆಟಿವ್ ಕೂಡ ಬಂದಿತ್ತು. ಆದರೆ, ಶಿಕ್ಷಕರು ಮಾತ್ರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರಿಂದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ನರೇಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ‌ಆಸ್ಪತ್ರೆಯಲ್ಲಿ ಮಹಾಂತೇಶ್ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನೆಗೆಟಿವ್ ಬಂದಿದ್ದರಿಂದಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು ಎಂದು ನರೇಗಲ್ ಪಿಎಸ್ ಐ ರಾಘವೇಂದ್ರ ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ವಿಸ್ತರಣೆಗೆ ಅವಕಾಶ ಕೊಡಬೇಡಿ ಎಂದು ಕೈಮುಗಿದು ಕೇಳಿಕೊಂಡ ಡಿಸಿ

ವಿಜಯಸಾಕ್ಷಿ ಸುದ್ದಿ, ಉಡುಪಿ

ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಹೀಗಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಜನರಲ್ಲಿ ಮನವಿ ಮಾಡಿದ್ದಾರೆ. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಡಿ. ಆದಷ್ಟು ಸಂಭ್ರಮದ ಕಾರ್ಯಕ್ರಮಗಳಿಂದ ದೂರ ಇರಿ ಎಂದಿದ್ದಾರೆ.

ಸೋಂಕಿತರನ್ನು ಭೇಟಿಯಾದ ಸಂದರ್ಭದಲ್ಲಿ ನಾನು ಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಮದುವೆಯಲ್ಲಿ ಭಾಗಿ ಆದವರಲ್ಲಿ ಸೋಂಕು ಹೆಚ್ಚಾಗಿ ವ್ಯಾಪಿಸಿದೆ ಎಂದು ಜನರಿಗೆ ಕಿವಿ ಮಾತು ಹೇಳಿದ್ದಾರೆ.
ಹೀಗಾಗಿ ಜನರು ಮದುವೆ ಕಾರ್ಯಕ್ರಮಗಳನ್ನು ಮುಂದೂಡಿದರೆ ಒಳ್ಳೆಯದು. ಒಂದು ವೇಳೆ ನಡೆದರೂ ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಡಿ ಎಂದು ಹೇಳಿದ್ದಾರೆ.

ಮೆಹಂದಿ ಕಾರ್ಯಕ್ರಮ ಆಯೋಜಿಸಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, ನಿಮ್ಮ ನಿರ್ಲಕ್ಷ್ಯದಿಂದಾಗಿ ಮತ್ತೊಮ್ಮೆ ಲಾಕ್ ಡೌನ್ ವಿಸ್ತರಿಸಲು ಅವಕಾಶ ಕೊಡಬೇಡಿ. ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಇಂದಿನಿಂದ ಕಠಿಣ ಲಾಕ್ ಡೌನ್!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದಿನಿಂದ ಮತ್ತೆ ಲಾಕ್ ಡೌನ್ ಜಾರಿಯಾಗಿದೆ. ಮೇ. 10ರಂದು ಘೋಷಣೆಯಾಗಿದ್ದ ಲಾಕ್ ಡೌನ್ ಅಂತ್ಯವಾಗಬೇಕಿತ್ತು. ಆದರೆ, ಕೊರೊನಾ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಈ ಲಾಕ್ ಡೌನ್ ನ್ನು ಕಠಿಣಗೊಳಿಸಲಾಗಿದೆ.

ಇಂದಿನಿಂದ ಜೂ. 7ರ ವರೆಗೆ ಬೆಳಿಗ್ಗೆ 6ರ ವರೆಗೆ 2ನೇ ಹಂತದ ಲಾಕ್ಡೌನನ್ ಜಾರಿಯಲ್ಲಿರಲಿದೆ. ವಿಮಾನ ಮತ್ತು ರೈಲುಗಳಲ್ಲಿ ಪ್ರಯಾಣಕ್ಕೆ ಅವಕಾಶ ಇದೆ. ದಿನಸಿ ಖರೀದಿಗೆ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿದೆಯಾದರೂ ಆಯಾ ಜಿಲ್ಲೆಯಲ್ಲಿ ಕೆಲವು ಬದಲಾವಣೆಗಳಾಗಿವೆ.
ಧಾರವಾಡ ಜಿಲ್ಲೆಯಲ್ಲಿ ಇಂದು ಮಾತ್ರ ದಿನಸಿ ಖರೀದಿಗೆ ಅನುಮತಿ ಇದ್ದು, ನಾಳೆಯಿಂದ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಇನ್ನುಳಿದಂತೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಡಳಿತ ಬೇರೆ ಬೇರೆ ನಿರ್ಧಾರ ಕೈಗೊಂಡಿವೆ. ಕೆಲವು ಜಿಲ್ಲೆಗಳಲ್ಲಿ ವಾರದಲ್ಲಿ ಎರಡು ದಿನ ದಿನಸಿ ಖರೀದಿಗೆ ಅವಕಾಶ ನೀಡಲಾಗಿದೆ.

ತಡರಾತ್ರಿ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಯುವಕ!

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಯುವಕನೊಬ್ಬ ಇಲ್ಲಿಯ ವಿಮ್ಸ್ ಆಸ್ಪತ್ರೆಗೆ ನುಗ್ಗಿ ಕಾರ್ಯನಿರತ ಮಹಿಳಾ ವೈದ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ವಿಮ್ಸ್ ಆಸ್ಪತ್ರೆಯಲ್ಲಿ ತಡರಾತ್ರಿ ನಡೆದಿದೆ. ಕೊರೊನಾ ಸೋಂಕಿತರ ಸೇವೆಯಲ್ಲಿ ನಿರತರಾಗಿದ್ದ ಮಹಿಳಾ ವೈದ್ಯೆಯ ಮೇಲೆ ಈ ಯುವಕ ತಡ ರಾತ್ರಿ 3ಗಂಟೆಯ ಹೊತ್ತಿಗೆ ನುಗ್ಗಿ ಹಲ್ಲೆ ಮಾಡಿ, ರಂಪಾಟ ನಡೆಸಿದ್ದಾನೆ.

ಈ ಯುವಕ ಡಾ. ಪ್ರಿಯದರ್ಶಿನಿ ಎಂಬ ವೈದ್ಯೆಯ ಮೇಲೆ ಹಲ್ಲೆ ನಡೆಸಿದ್ದಾನೆ. ವೈದ್ಯೆಯ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಿಪ್ಪೇಸ್ವಾಮಿ ಎಂಬ ಯುವಕ ವೈದ್ಯೆಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ವ್ಯಕ್ತಿಯ ತಂದೆ ಮಲ್ಲಿಕಾರ್ಜುನ ಗೌಡ ಕೊರೊನಾದಿಂದ ಸಾವನ್ನಪ್ಪಿದ್ದರು. ಹೀಗಾಗಿ ಆಕ್ರೋಶಗೊಂಡು ವೈದ್ಯೆಯ ಮೇಲೆಯೇ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಮಲ್ಲಿಕಾರ್ಜುನಗೊಡ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ವೈದ್ಯರು ಹೇಳಿದ್ದಾರೆ. ಆದರೆ, ನಮ್ಮ ತಂದೆಯ ಸಾವಿಗೆ ವೈದ್ಯರೇ ಕಾರಣ ಎಂದು ತಿಪ್ಪೇಸ್ವಾಮಿ ಹಲ್ಲೆ ನಡೆಸಿದ್ದಾರೆ. ರೋಗಿಯ ಸಂಬಂಧಿಕರ ದುರ್ವರ್ತನೆಗೆ ಸದ್ಯ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ವೈದ್ಯರ ಮೇಲೆ ಈ ರೀತಿ ಹಲ್ಲೆಗಳಾದರೆ, ವೈದ್ಯರು ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ವೈದ್ಯಕೀಯ ಸಿಬ್ಬಂದಿ ಪ್ರಶ್ನಿಸುತ್ತಿದ್ದಾರೆ.

ಸದ್ಯ ಹಲ್ಲೆ ನಡೆಸಿದ ತಿಪ್ಪೇಸ್ವಾಮಿ ವಿರುದ್ಧ ಕೌಲ್ ಬಜಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ನಡುವೆ ಕೊರೊನಾ ಸೋಂಕು ಹೇಗಿದೆ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ಜಾರಿಯಾದಾಗಿನಿಂದ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಆದರೆ, ಬಲಿಯಾಗುತ್ತಿರುವವರ ಸಂಖ್ಯೆ ಮಾತ್ರ ಆತಂಕ ಮೂಡಿಸುತ್ತಿದೆ.
ಇಂದು ರಾಜ್ಯದಲ್ಲಿ 25,979 ಜನರಲ್ಲಿ ಸೋಂಕು ತಗುಲಿದ್ದು, ಬರೋಬ್ಬರಿ 626 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇಂದು 35,573 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,72,986ಕ್ಕೆ ಏರಿಕೆಯಾಗಿದೆ. ಇಂದು 626 ಜನ ಸಾವನ್ನಪ್ಪಿದ್ದು, ಈ ಮೂಲಕ ಸತ್ತವರ ಸಂಖ್ಯೆ 25,282ಕ್ಕೆ ಏರಿದೆ.

ಇಂದು 35,573 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 7,494 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 362 ಜನ ಬಲಿಯಾಗಿದ್ದಾರೆ. ಇನ್ನುಳಿದಂತೆ ಮೈಸೂರಿನಲ್ಲಿ 2,222, ಹಾಸನ 1,618, ತುಮಕೂರು 1,269, ಬಳ್ಳಾರಿ 1,190 ಹಾಗೂ ಬೆಳಗಾವಿಯಲ್ಲಿ 1,066 ಪ್ರಕರಣಗಳು ವರದಿಯಾಗಿವೆ.

error: Content is protected !!