Home Blog Page 3041

ಇನ್ನು ಮುಂದೆ ಬಿಗ್ ಬಜೆಟ್ ಚಿತ್ರಗಳಲ್ಲಿಯೂ ಕಾಣಸಿಗಲಿರುವ ಕಿಚ್ಚ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕನ್ನಡ ಮಾತ್ರವಲ್ಲದೆ ಪರಭಾಷೆಯಲಲಿಯೂ ತಮ್ಮ ಅಮೋಘ ನಟನೆಯಿಂದ ಭಾರಿ ಹೆಸರು ಮಾಡಿರುವ ಕಿಚ್ಚ ಸುದೀಪ್ ಬಿಗ್‌ ಬಜೆಟ್ ಸಿನಿಮಾಗಳಲ್ಲಿಯೂ ಇನ್ನು ಮುಂದೆ ಸದ್ದು ಮಾಡಲಿದ್ದಾರೆ. ಕಿಚ್ಚನಿಗೆ ಆಫರ್‌ ಗಳ ಸುರಿಮಳೆಯಾಗಿದ್ದು, ಹಿಂದಿ ಸಿನಿಮಾದ ಆದಿಪುರುಷದಿಂದ ಆಫರ್ ಬಂದಿದೆ.

ನಟ ‘ಕಿಚ್ಚ’ ಸುದೀಪ್ ಅವರಿಗೆ ಬಾಲಿವುಡ್ ಮಾತ್ರವಲ್ಲದೆ, ಇಡೀ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಈಗ ಪುಲಿ, ಬಾಹುಬಲಿ, ಸೈರಾ ನರಸಿಂಹ ರೆಡ್ಡಿ, ದಬಾಂಗ್ – 3 ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಂಡಿರುವ ಕಿಚ್ಚ, ಕೆಲವು ದಿನಗಳಿಂದ ಶಂಕರ್ ನಿರ್ದೇಶನದ ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಮತ್ತೊಂದು ದೊಡ್ಡ ಸಿನಿಮಾದಲ್ಲಿ ಕಿಚ್ಚ ನಟಿಸುತ್ತಾರೆ ಎಂಬ ಸುದ್ದಿ ಬಾರಿ ಹಾರಿದಾಡುತ್ತಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆರಂಭದಿಂದಲೂ ಈ ಸಿನಿಮಾ ಪಾತ್ರವರ್ಗದಿಂದಲೇ ಗಮನ ಸೆಳೆಯುತ್ತಿದೆ. ರಾಮಾಯಣವನ್ನು ಆಧಾರವಾಗಿಟ್ಟುಕೊಂಡು ‘ಆದಿಪುರುಷ್’ ಸಿನಿಮಾ ಮಾಡಲಾಗುತ್ತಿದೆ. ಇಲ್ಲಿ ರಾಮನಾಗಿ ಪ್ರಭಾಸ್ ಕಾಣಿಸಿಕೊಂಡಿದ್ದು, ರಾವಣನ ಪಾತ್ರದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ನಿರ್ವಹಿಸಲಿದ್ದಾರೆ. ಈಗ ನಟ ಕಿಚ್ಚ ಸುದೀಪ್ ರಾವಣನ ಸಹೋದರ ವಿಭೀಷಣನ ಪಾತ್ರ ಮಾಡುವುದು ಟಾಕ್ ಆಫ್ ದಿ ಟೌನ್ ಆಗಿದೆ. ಇನ್ನೂ ಈ ಪಾತ್ರವನ್ನು ಸುದೀಪ್ ಮಾಡುತ್ತಾರಾ ಅಥವಾ ಇಲ್ಲಾವಾ ಎಂಬುವುದನ್ನು ಅವರೇ ಸ್ಪಷ್ಟ ಪಡಿಸಬೇಕಿದೆ.

ಇದು ಕರುನಾಡ? ಅಥವಾ ಕೊರೊನಾಡ?

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದು ಮಹಾಮಾರಿ ಸ್ಫೋಟಗೊಂಡಿದೆ. ಇಂದು ಬರೋಬ್ಬರಿ ರಾಜ್ಯದಲ್ಲಿ 49,058 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, ಸಾವಿನ ಸಂಖ್ಯೆಯಲ್ಲಿಯೂ ದಾಖಲೆ ಬರೆದಿದೆ.
ಇಂದು ರಾಜ್ಯದಲ್ಲಿ 328 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 23,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 139 ಜನ ಬಲಿಯಾಗಿದ್ದಾರೆ.

ಇಂದು 18,943 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆ ಕಂಡಿದೆ. ಮೃತರ ಸಂಖ್ಯೆ 17,212ಕ್ಕೆ ಏರಿಕೆ ಕಂಡಿದೆ.

ಇಂದು ರಾಜ್ಯದ ಬಾಗಲಕೋಟೆ 665, ಬಳ್ಳಾರಿ 922, ಬೆಳಗಾವಿ 843, ಬೆಂಗಳೂರು ಗ್ರಾಮಾಂತರ 963, ಬೆಂಗಳೂರು ನಗರ 23,706, ಬೀದರ್ 336, ಚಾಮರಾಜನಗರ 707, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ಚಿತ್ರದುರ್ಗ 126, ದಕ್ಷಿಣ ಕನ್ನಡ 1,191, ದಾವಣಗೆರೆ 672, ಧಾರವಾಡ 824, ಗದಗ 191, ಹಾಸನ 1,403, ಹಾವೇರಿ 236, ಕಲಬುರಗಿ 1,652, ಕೊಡಗು 697, ಕೋಲಾರ 756, ಕೊಪ್ಪಳ 357, ಮಂಡ್ಯ 1,301, ಮೈಸೂರು 2,531, ರಾಯಚೂರು 819, ರಾಮನಗರ 413, ಶಿವಮೊಗ್ಗ 635, ತುಮಕೂರು 2,418, ಉಡುಪಿ 1,526, ಉತ್ತರ ಕನ್ನಡ 734, ವಿಜಯಪುರ 662 ಮತ್ತು ಯಾದಗಿರಿಯಲ್ಲಿ 721 ಕೊರೊನಾ ಪ್ರಕರಣಗಳು ವರದಿಯಾಗಿವೆ.

ಕೊರೋನಾ; ಗುರುವಾರ 191 ಜನರಿಗೆ ಸೋಂಕು, ಮೂವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 06 ಗುರುವಾರ ಗದಗ ಜಿಲ್ಲೆಯಲ್ಲಿ ಸೋಂಕು ಮೂರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಸತತ ನಾಲ್ಕನೇ ದಿನವೂ ಸೋಂಕಿತರ ಸಂಖ್ಯೆ ಆಸುಪಾಸಿನಲ್ಲಿದೆ. ಕೋವಿಡ್ ನಿಂದ ಮೂವರು ಮೃತಪಟ್ಟಿದ್ದಾರೆ.

ಇಂದಿನ 191 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13787 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -111, ಮುಂಡರಗಿ-19, ನರಗುಂದ-14, ರೋಣ-22, ಶಿರಹಟ್ಟಿ-20, ಹೊರಜಿಲ್ಲೆಯ-05 ಸೇರಿದಂತೆ 191 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಿಂದಾಗಿ ಮೂವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ 58 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೇ04 ರಂದು ಮೃತಪಟ್ಟಿದ್ದು, ಇನ್ನೊಬ್ಬರು ರೋಣ ತಾಲೂಕಿನ ನಿವಾಸಿ 68 ವರ್ಷದ ವ್ಯಕ್ತಿ ಮೇ-04 ರಂದು ಜಿಮ್ಸ್ ನಲ್ಲಿ, ಹಾಗೂ ಗದಗನ ಹನುಮಾನ್ ಗಲ್ಲಿ ನಿವಾಸಿ 82 ವರ್ಷದ ವೃದ್ಧೆ ಮೇ 3 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
150 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 130 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12651 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 986 ಪ್ರಕರಣಗಳು ಸಕ್ರಿಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 258 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೊರೊನಾ ಸಂಕಷ್ಟ; ನಟಿ ಸನ್ನಿಲಿಯೋನನಿಂದ ಮಾನವೀಯ ಕಾರ್ಯ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಸದ್ಯ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ಭಾರತವೇ ಸಿಲುಕಿದೆ. ಈಗಾಗಲೇ ಹಲವೆಡೆ ಲಾಕ್ ಡೌನ್ ಕೂಡ ಘೋಷಣೆಯಾಗಿದೆ. ಹೀಗಾಗಿ ಸಾವಿರಾರು ವಲಸೆ ಕಾರ್ಮಿಕರು ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಇಂತಹ ಜನರಿಗೆ ಹಲವರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಇವರ ಸಾಲಿಗೆ ಸದ್ಯ ನಟಿ ಸನ್ನಿಲಿಯೋನ್ ನಿಂತಿದ್ದಾರೆ.

ನಟಿ ಸನ್ನಿ ಲಿಯೋನ್ ಸದಾ ಜನರ ಕಷ್ಟಕ್ಕೆ ಸ್ಪಂದಿಸುವ ಮನಸ್ಥಿತಿ ಹೊಂದಿದ ಸಹೃದಯಿ. ಸದ್ಯ ಕಷ್ಟಕ್ಕೆ ಸಿಲುಕಿದವರ ಹೊಟ್ಟೆ ತುಂಬಿಸುತ್ತ ಮಾನವೀಯ ಕಾರ್ಯ ಮಾಡುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹಸಿದಿರುವ ಸುಮಾರು 10 ಸಾವಿರ ಜನರಿಗೆ ಅನ್ನ ನೀಡುವ ಮಹಾನ್ ಕಾರ್ಯವನ್ನು ಅವರು ಮಾಡುತ್ತಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸನ್ನಿ, ದೇಶದಲ್ಲಿ ನಾವು ಬಿಕ್ಕಟ್ಟು ಎದುರಿಸುತ್ತಿದ್ದೇವೆ. ಸಹಾನುಭೂತಿ ಮತ್ತು ಒಗ್ಗಟ್ಟಿನೊಂದಿಗೆ ನಾವು ಮುಂದೆ ಬರುತ್ತೇವೆ. ಈ ಸಮಯದಲ್ಲಿ ಅಗತ್ಯವಿರುವ ಸಾವಿರಾರು ಜನರಿಗೆ ಪ್ರೋಟೀನ್ ತುಂಬಿದ ಸಸ್ಯಾಹಾರಿ ಆಹಾರ ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಶಾಸಕರೇ ವೈದ್ಯರಾಗಿ ಸೇವೆ ಮಾಡಿದರೆ? ಈ ಸುದ್ದಿ ಓದಿ ಮೆಚ್ಚುಗೆಯ ಮಾತು ನಿಮ್ಮಿಂದಲೂ ಬರುತ್ತದೆ!

ವಿಜಯಸಾಕ್ಷಿ ಸುದ್ದಿ, ತುಮಕೂರು

ಇಡೀ ರಾಜ್ಯವೂ ಸೇರಿದಂತೆ ದೇಶವನ್ನು ಕೊರೊನಾ ನಲುಗಿಸುತ್ತಿದೆ. ಹೀಗಾಗಿ ಜನರ ಬದುಕು ಬೀದಿಗೆ ಬಂದು ನಿಂತಿದೆ. ಜನರ ಕಣ್ಣೀರು ಒರೆಸಲು ಹಲವರು ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಇಲ್ಲಿ ಶಾಸಕರೇ ವೈದ್ಯರಾಗಿ ಜನರ ಸೇವೆ ಮಾಡುತ್ತಿದ್ದಾರೆ.

ಈ ಕ್ಷೇತ್ರದಲ್ಲಿ ಸ್ವತಃ ಶಾಸಕರೇ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸುಮಾರು 1,300 ಕೊರೊನಾ ರೋಗಿಗಳು ಈ ಕ್ಷತ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎಲ್ಲ ರೋಗಿಗಳನ್ನು ಮಾತನಾಡಿಸಿ, ಅವರ ನೋವಿಗೆ ಸ್ಪಂದಿಸುತ್ತ ಶಾಸಕರು ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರೇ ಈ ಮಹತ್ತರ ಕೆಲಸ ಮಾಡುತ್ತಿದ್ದಾರೆ.

ವೈದ್ಯರಾಗಿರುವ ಶಾಸಕ ಡಾ. ರಂಗನಾಥ್ ಅವರು ಸದ್ಯ ಜನರ ಸೇವೆಯನ್ನು ಈ ರೀತಿಯಾಗಿ ಮಾಡುತ್ತಿದ್ದಾರೆ. ಶಾಸಕರು ಪ್ರತಿದಿನ ಎರಡು ಬಾರಿ ಎಲ್ಲ ರೋಗಿಗಳನ್ನು ಕಂಡು ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಅಲ್ಲದೇ, ಹೆಚ್ಚಿನ ಚಿಕಿತ್ಸೆ ಬೇಕಾದವರಿಗೆ ಬೆಡ್ ಕೊಡಿಸುತ್ತಿದ್ದಾರೆ. ತುಮಕೂರು ಹಾಗೂ ಬೆಂಗಳೂರಿಗೆ ಹಲವು ರೋಗಿಗಳನ್ನು ದಾಖಲಿಸಿ ಸೂಕ್ತ ಚಿಕಿತ್ಸೆ ಸಿಗುವಂತೆ ಕೂಡ ಮಾಡಿದ್ದಾರೆ. ಇನ್ನುಳಿದ ರೋಗಿಗಳಿಗೆ ಅವರೇ ಸ್ವಕಃ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಶಾಸಕರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೋಮಿಯೋಪಥಿ ಔಷಧ ಸೇವಿಸಿ ಒಂದೇ ಕುಟುಂಬದ ೮ ಜನರ ಸಾವು !

ವಿಜಯಸಾಕ್ಷಿ ಸುದ್ದಿ, ರಾಯ್ಪುರ

ಹೋಮಿಯೊಪಥಿ ಔಷಧ ಸೇವಿಸಿ ಒಂದೇ ಕುಟುಂಬದ 8 ಜನ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅಲ್ಲದೇ, ಈ ಘಟನೆಯಲ್ಲಿ ಐವರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಛತ್ತೀಸ್ ಗಢದ ಬಿಲಾಸ್‌ ಪುರ್‌ ನಲ್ಲಿ ನಡೆದಿದೆ.

ಅಸ್ವಸ್ಥರಾಗಿರುವ 5 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವನ್ನಪ್ಪಿರುವ ಕುಟುಂಬ drosera- 30 ಎಂಬ ಹೋಮಿಯೊಪಥಿ ಔಷಧವನ್ನು ಸೇವಿಸಿದ್ದರು. ಇದರಲ್ಲಿ ಶೇ. 91ರಷ್ಟು ಕಳ್ಳಭಟ್ಟಿ ಸೇರಿದ್ದರಿಂದಾಗಿ ಸೇವಿಸಿದವರು ಸಾವನ್ನಪ್ಪಿದ್ದಾರೆ. ಹಲವರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ.

ಔಷಧಿ ಸೇವಿಸಲು ನಿರ್ದೇಶಿಸಿದ್ದ ವೈದ್ಯರು ಸದ್ಯ ತಲೆ ಮರೆಸಿಕೊಂಡಿದ್ದಾರೆ ಎಂದು ಬಿಲಾಸ್‍ ಪುರ್ ಮುಖ್ಯ ವೈದ್ಯಾಧಿಕಾರಿ ಹೇಳಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ

ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿದರೂ ಮಹಾಮಾರಿ ಮಾತ್ರ ತನ್ನ ಆಟ ನಿಲ್ಲಿಸುತ್ತಿಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14 ಜನ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ, ಈ ಬಾರಿ ಸೋಂಕಿತರ ಆಕ್ಸಿಜನ್ ನ ಕೊರತೆಯಿಂದಾಗಿ ಸತ್ತಿಲ್ಲ.

ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ನ ಕೊರತೆಯಾಗಿಲ್ಲ. ಹೀಗಾಗಿ ಸತ್ತವರು ಕೂಡ ಆಕ್ಸಿಜನ್ ನ ಕೊರತೆ ಎದುರಿಸಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಅವಶ್ಯಕತೆಗಿಂತ ಹೆಚ್ಚಾಗಿ ಆಕ್ಸಿಜನ್ ಇದೆ. ಸೋಂಕಿತರು ಅಂತಿಮ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೈ ಮೀರಿದ ನಂತರ ರೋಗಿಗಳು ಆಸ್ಪತ್ರೆಯ ಬಾಗಿಲು ತಟ್ಟುತ್ತಿರುವುದರಿಂದಾಗಿ ಸಾವಿನ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಮೇ. 4 ರಂದು ಎಂಟು ಜನ ಹಾಗೂ ಮೇ. 5 ರಂದು 8 ಜನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೇ. 3ರಂದು ಆಕ್ಸಿಜನ್ ಕೊರತೆಯಿಂದ 24 ಜನ ಸಾವನ್ನಪ್ಪಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಇದರಿಂದಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಜಿಲ್ಲಾಸ್ಪತ್ರೆಗೆ ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿದೆ. ಅಷ್ಟೇ ಅಲ್ಲದೇ, ಸ್ವತಃ ಪರಿಸ್ಥಿತಿ ಅವಲೋಕಿಸಿ, ಸಮಸ್ಯೆ ತಲೆದೋರದಂತೆ ಕಾಣುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಕೂಡ ನಿನ್ನೆಯಿಂದ ಚಾಮರಾಜನಗರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಬಿಗ್ ಬಾಸ್ ಮನೆಯಿಂದ ದಿವ್ಯ ಹೊರಗೆ; ಕಣ್ಣೀರು ಹಾಕಿದ ಅರವಿಂದ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಬಿಗ್‌ ಬಾಸ್‌ ನ 62ನೇ ದಿನದಲ್ಲಿ ಎಲಿಮೇಷನ್ ಇಲ್ಲದೆಯೇ ಮನೆಯಿಂದ ದಿವ್ಯಾ ಉರುಡುಗ ಹೊರ ಬಂದಿದ್ದಾರೆ. ದಿವ್ಯ ಉರುಡುಗಗೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಮನೆ ತೊರೆದಿದ್ದಾರೆ. ಈ ವಿಷಯ ಕೇಳಿದ ಅರವಿಂದ್ ಕಣ್ಣೀರು ಹಾಕಿದ್ದಾರೆ.

ದಿವ್ಯ ಉರುಡುಗ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಬಟ್ಟೆಗಳನ್ನು ತಂದು ಸ್ಟೋರ್ ರೂಮಿಗೆ ಇರಿಸಿ ಈ ಕೂಡಲೇ ಎಂದು ಬಿಗ್ ಬಾಸ್ ಆದೇಶಿಸಿದ್ದಾರೆ. ಈ ಆದೇಶವನ್ನು ಕೇಳಿದ ಅರವಿಂದ್, ಹೋದರೆ ಅವಳು ಇನ್ನು ಬರುವುದಿಲ್ಲ ಎಂದು ಹೇಳಿ ಗಳಗಳನೆ ಅತ್ತಿದ್ದಾರೆ.

ದಿನ ಬೆಳಿಗ್ಗೆ ಎದ್ದು ರಾತ್ರಿ ತನಕ ನನ್ನ ಜೊತೆ ಅವಳು ಇರುತ್ತಿದ್ದಳು. ನಿಮ್ಮ ಜೊತೆ ಗಲಾಟೆಯಾದರೂ ಅಥವಾ ಖುಷಿಯಾದರೂ ನನ್ನ ಜೊತೆಯೇ ಇರುತ್ತಿದ್ದಳು. ಈಗ ಎಲ್ಲ ಹೋಯಿತು ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ನಿನ್ನೆ ಲೀವಿಂಗ್ ಏರಿಯಾದಲ್ಲಿ ಸದಸ್ಯರು ಕುಳಿತಿದ್ದ ಸಂದರ್ಭದಲ್ಲಿ ದಿವ್ಯಾ ಅವರಿಗೆ ಸ್ಕ್ಯಾನಿಂಗ್ ಮಾಡಿಸಬೇಕೆಂದು ವೈದ್ಯರು ಸೂಚಿಸಿದ್ದರಿಂದ ಅವರನ್ನು ತಪಾಸಣೆಗೆ ಕರೆದೊಯ್ಯಲಾಗಿದೆ. ಅವರು ಕ್ಷೇಮವಾಗಿದ್ದಾರೆ ಎಂದು ಆರಂಭದಲ್ಲಿ ಬಿಗ್ ಬಾಸ್ ಮನೆ ಮಂದಿಗೆ ತಿಳಿಸಿದ್ದರು. ಇದನ್ನು ಹೇಳುತ್ತಿದ್ದಂತೆ ಅರವಿಂದ್ ಸ್ವಲ್ಪ ಭಾವುಕರಾಗಿದ್ದರು. ದಿವ್ಯಾ ಉರುಡುಗ ಮತ್ತೆ ಬಿಗ್ ಬಾಸ್ ಮನೆಗೆ ಬರುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಹೆಣ್ಮಕ್ಕಳಷ್ಟೇ ತಾಳಿ ಏಕೆ ಕಟ್ಗೊಬೇಕು….ನಾನು ಕಟ್ಗೋತೇನಿ…!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ವಧು ಮಂಗಲಸೂತ್ರ ಹಾಕಿಕೊಳ್ಳುವುದು ಪದ್ಧತಿ ಹಾಗೂ ಇಲ್ಲಿಯವರೆಗೂ ನಡೆದುಕೊಂಡು ಬಂದ ರೂಢಿ. ಆದರೆ, ಈ ಸಂಪ್ರದಾಯಕ್ಕೆ ಇಲ್ಲೊಂದು ಜೋಡಿ ತಿಲಾಂಜಲಿ ಹಾಕಿದೆ. ಇಲ್ಲಿ ವಧು ತಾಳಿ ಕಟ್ಟಿದ್ದು, ವರ ಕಟ್ಟಿಸಿಕೊಂಡಿದ್ದಾರೆ.

ಹುಡುಗಿಯರು ಮಾತ್ರ ಯಾವ ಕಾರಣಕ್ಕೆ ತಾಳಿ ಕಟ್ಟಿಕೊಳ್ಳಬೇಕು ಎಂಬುವುದು ಇಲ್ಲಿ ಹುಡುಗನ ವಾದ. ಇದನ್ನು ಗಮನಿಸಿದ ನೆಟ್ಟಿಗರು ಮಾತ್ರ ಹುಡುಗನ ಕಾರ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಹಲವರಂತೂ ಸೀರೆನೂ ಉಟ್ಟಿಕೊಳ್ಳಬಹುದಲ್ಲ ಎಂದು ಕಾಲು ಎಳೆದಿದ್ದಾರೆ.

ಹೀಗೆ ತಾಳಿ ಕಟ್ಟಿಕೊಂಡ ವರನ ಹೆಸರು ಸಾರ್ದೂಲ್ ಕದಮ್. ತಾಳಿ ಕಟ್ಟಿದ ವಧು ತನುಜಾ. ಶಾರ್ದೂಲ್ ಕದಮ್ ತಾಳಿ ಕಟ್ಟಿಕೊಂಡ ಕುರಿತು ಹ್ಯೂಮನ್ ಆಫ್ ಬಾಂಬೆ ಎಂಬ ಫೋಟೋ ಬ್ಲಾಗ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಸ್ಟೋರಿ ನೋಡುತ್ತಿದ್ದಂತೆ ನೆಟ್ಟಿಗರು ಮಾತ್ರ ಟ್ರೋಲ್ ಮಾಡುತ್ತಿದ್ದಾರೆ.

ಹೀಗೆ ಡಿಫರೆಂಟ್ ಮದುವೆಯಾಗಿರುವ ತನುಜಾ ಹಾಗೂ ಶಾರ್ದೂಲ್ ಅವರು ಲವ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಭೇಟಿಯಾದಾಗೊಮ್ಮೆ ಮಹಿಳಾ ವಾದದ ಬಗ್ಗೆ ಮಾತನಾಡಿದ್ದಾರೆ. ಆಗ ಶಾರ್ದೂಲ್ ನಾನೊಬ್ಬ ಕಟ್ಟಾ ಸ್ತ್ರೀಸಮಾನತಾವಾದಿ ಎಂದು ಹೇಳಿದ್ದಾರೆ.

ಒಂದು ವರ್ಷ ಡೇಟಿಂಗ್ ಮಾಡಿದ ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಮದುವೆಯಲ್ಲಿ ಸ್ತ್ರೀ ಮಾತ್ರ ಮಂಗಲಸೂತ್ರ ಕಟ್ಟಿಸಿಕೊಳ್ಳಬಾರದು. ನಮ್ಮ ಮದುವೆಯಲ್ಲಿ ಹಾಗಾಗುವುದು ಬೇಡ. ನನಗೆ ನೀನೂ ಕೂಡ ತಾಳಿ ಕಟ್ಟಬೇಕು ಎಂದು ತನುಜಾ ಬಳಿ ಶಾರ್ದೂಲ್ ಹೇಳಿದ್ದಾರೆ. ಹೀಗಾಗಿ ತಮ್ಮ ಮದುವೆಯಲ್ಲಿ ಇಬ್ಬರೂ ತಾಳಿ ಧರಿಸಿದ್ದಾರೆ.

ಇದು ಸುದ್ದಿಯಾಗುತ್ತಿದ್ದಂತೆ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಆದರೆ, ಈ ಜೋಡಿ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಟ್ರೋಲ್ ಮಾಡುತ್ತಿರುವುದರಿಂದಾಗಿ ನಮಗೇನು ಸಮಸ್ಯೆಯಾಗಿಲ್ಲ. ಹೆಣ್ಣುಮಕ್ಕಳ ಮನಸು ಅರ್ಥವಾಗುತ್ತದೆ. ಅವರ ಭಾವನೆಯನ್ನು ನಾನು ಗೌರವಿಸುತ್ತೇನೆ ಎಂದು ಶಾರ್ದೂಲ್ ಹೇಳಿದ್ದಾರೆ. ಇವರ ಮದುವೆಯಾಗಿ ನಾಲ್ಕು ತಿಂಗಳಾಗಿದ್ದು, ಅಂದು ತನುಜಾ ಕೈಯ್ಯಲಿ ಕಟ್ಟಿಸಿಕೊಂಡ ತಾಳಿಯನ್ನು ಇಂದಿಗೂ ಶಾರ್ದೂಲ್ ತೆಗೆದಿಲ್ಲ.

ಚುನಾವಣೆ ಕರ್ತವ್ಯಕ್ಕೆ ತೆರಳಿದ್ದ ಎಷ್ಟು ಜನ ನೌಕರಸ್ಥರು ಸಾವನ್ನಪ್ಪಿದ್ದಾರೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ, ಲಕ್ನೊ

ಕೊರೊನಾ ಅಟ್ಟಹಾಸದ ಮಧ್ಯೆಯೂ ದೇಶದಲ್ಲಿ ಚುನಾವಣಾ ಆಯೋಗ ಮತದಾನ ನಡೆಸಿದೆ. ಆದರೆ, ಕೆಲಸಕ್ಕೆ ಹಾಜರಾಗಿದ್ದ ಸುಮಾರು 2 ಸಾವಿರಕ್ಕೂ ಅಧಿಕ ಉದ್ಯೋಗಿಗಳು ಸಾವನ್ನಪ್ಪಿರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ.
ಸತ್ತವರ ಪೈಕಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ಹಾವಳಿಯ ಮಧ್ಯೆಯೂ ಉತ್ತರ ಪ್ರದೇಶದಲ್ಲಿ ಪಂಚಾಯತಿ ಚುನಾವಣೆ ನಡೆದಿದೆ. ಆದರೆ, ಈ ಚುನಾವಣೆ ಕೆಲಸಕ್ಕೆ ಹಾಜರಾಗಿದ್ದ ಬಹುತೇಕ ನೌಕರರು ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 706 ಜನ ಶಿಕ್ಷಕರು ಬಲಿಯಾಗಿದ್ದಾರೆ. ಅಲ್ಲದೇ, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕ ಶಿಕ್ಷಣ ಇಲಾಖೆಯದ್ದಾಗಿದೆ.

ಉತ್ತರ ಪ್ರದೇಶದ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ದಿನೇಶ್ ಚಂದ್ರ ಶರ್ಮಾ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 10 ಪುಟಗಳ ದೀರ್ಘವಾದ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ, ಜಿಲ್ಲಾವಾರು ಶಿಕ್ಷಕರ ಮಾಹಿತಿಯನ್ನು ಕೂಡ ಸಿಎಂಗೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಶಿಕ್ಷಕರ ಮರಣ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಮುಖ್ಯ ಕಾರಣವೇ ಚುನಾವಣೆಯ ಕೆಲಸ. ಕೂಡಲೇ ಸರ್ಕಾರ ಮೃತ ಕುಟುಂಬಗಳಿಗೆ ರೂ. 50 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ನೌಕರರು ಕಚೇರಿಗಳಿಗೆ ಆಗಮಿಸುತ್ತಿಲ್ಲ. ಹಲವರು ಸ್ವಯಂ ಕ್ವಾರಂಟೈನ್ ನಲ್ಲಿದ್ದಾರೆ. ಇದರಿಂದಾಗಿ ದೇಶದ ಜನರೇ ಬೆಚ್ಚಿ ಬಿದ್ದಿದ್ದಾರೆ.

error: Content is protected !!