Home Blog Page 3046

ತನ್ನ ದಾಖಲೆಯನ್ನು ತಾನೇ ಮುರಿದು ಸಾಗುತ್ತಿರುವ ಮಹಾಮಾರಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಸೋಂಕು ಇಂದು ಕೂಡ ತನ್ನ ದಾಖಲೆ ಮುರಿದು ಶರವೇಗದಲ್ಲಿ ಸಾಗಿದೆ. ಇಂದು ಬರೋಬ್ಬರಿ 40,990 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 271 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 19,353 ಜನರಲ್ಲಿ ಸೋಂಕು ಬಂದಿದೆ. 21 ವರ್ಷದ ಯುವಕ ಸೇರಿದಂತೆ 162 ಜನ ಬಲಿಯಾಗಿದ್ದಾರೆ. ಇಂದು ಮೈಸೂರಿನಲ್ಲಿ 3,529 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,068ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,64,131ಕ್ಕೆ ಏರಿಕೆ ಕಂಡಿದೆ. ಈ ಪೈಕಿ 11,43,250 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಲ್ಲಿಯವರೆಗೆ 15,794 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ ರಾಜ್ಯದಲ್ಲಿ ತುಮಕೂರು 2,308, ಕಲಬುರಗಿ 1,407, ಮಂಡ್ಯ 1,235, ಬಳ್ಳಾರಿ 1,163, ಕೊಪ್ಪಳ 1019 ದಕ್ಷಿಣ ಕನ್ನಡ 933, ಚಿಕ್ಕಬಳ್ಳಾಪುರದ 820, ಹಾಸನ 790, ಉತ್ತರ ಕನ್ನಡ 687 ಮತ್ತು ಉಡುಪಿಯ 670 ಜನರಿಗೆ ಸೇರಿದಂತೆ ವಿವಿಧ ಜಿಲ್ಲೆಗಳ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೊರೋನಾ; ಶನಿವಾರ ಜಿಲ್ಲೆಯಲ್ಲಿ 147 ಜನರಿಗೆ ಸೋಂಕು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 01 ಶನಿವಾರ ಜಿಲ್ಲೆಯಲ್ಲಿ ಐದನೇ ದಿನವೂ ಕೊರೋನಾ ಸೋಂಕು ಶತಕ ದಾಟುತ್ತಾ ಸಾಗಿದೆ. ಇಂದು 147 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.

ಇಂದಿನ 147 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12849 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -76, ಮುಂಡರಗಿ-21, ನರಗುಂದ-11, ರೋಣ-17, ಶಿರಹಟ್ಟಿ-20, ಹೊರಜಿಲ್ಲೆಯ-02 ಸೇರಿದಂತೆ 147 ಪ್ರಕರಣಗಳು ದೃಢಪಟ್ಟಿವೆ.

ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 120 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 11958 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 750 ಪ್ರಕರಣಗಳು ಸಕ್ರಿಯವಾಗಿದ್ದು, 592 ಜನರು ಮನೆಯಲ್ಲಿ, 158 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 205 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 344592 ಮಾದರಿಗಳಲ್ಲಿ 331538 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಲಾಕ್ ಡೌನ್!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಕೊರೊನಾ ಹಾವಳಿ ನಿಯಂತ್ರಣಕ್ಕೆ ಬಾರದ ಕಾರಣದಿಂದಾಗಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಸಸಾಲಿದೆ.

ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಲಾಕ್ ಡೌನ್ ಅವಧಿಯನ್ನು ಒಂದು ವಾರ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ ಲಾಕ್ ಡೌನ್ ಮೇ. 3ರ ಬೆಳಿಗ್ಗೆ 5ಕ್ಕೆ ಅಂತ್ಯವಾಗಲಿತ್ತು. ಆದರೆ, ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ, ಒಂದು ವಾರದ ಲಾಕ್‍ ಡೌನ್ ಘೋಷಿಸಿದೆ.

ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಅವರು ಲಾಕ್ ಡೌನ್ ವಿಸ್ತರಿಸುವ ಕುರಿತು ಹೇಳಿದ್ದರು. ಸದ್ಯ ಮೇ 10ರ ಬೆಳಿಗ್ಗೆ 5ರ ವರೆಗೂ ದೆಹಲಿ ಲಾಕ್ ಆಗಿರಲಿದೆ ಎಂದು ಹೇಳಿದ್ದಾರೆ. ಹಿಂದಿನ ಎಲ್ಲ ಮಾರ್ಗಸೂಚಿಗಳು ಕೂಡ ಅನ್ವಯವಾಗಲಿವೆ.

ಮೇ 3ಕ್ಕೆ ಲಾಕ್‍ ಡೌನ್ ತೆರವಾದರೂ ಅಂಗಡಿ ತೆರೆಯಲ್ಲ ಎಂದು ದೆಹಲಿಯ ವ್ಯಾಪಾರಿಗಳು ಶುಕ್ರವಾರ ಘೋಷಣೆ ಮಾಡಿದ್ದರು. ಸರ್ಕಾರದ ಲಾಕ್ ಸಡಿಲಗೊಳಿಸಿದರೂ ನಾವು ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದೇವೆ ಎಂದು 150ಕ್ಕೂ ಅಧಿಕ ವ್ಯಾಪಾರಿ ಸಂಘಟನೆಗಳು ಹೇಳಿದ್ದವು. ಸದ್ಯದ ಸ್ಥಿತಿಯಲ್ಲಿ ಸರ್ಕಾರ ಇನ್ನೂ ಕೆಲವು ದಿನಗಳ ಕಾಲ ಲಾಕ್ ಡೌನ್ ಹೇರುವುದು ಉತ್ತಮ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದರು.

ಕೊರೊನಾಗಿಂತ ನೀರಿನದೇ ದೊಡ್ಡ ಸಮಸ್ಯೆ! ಎಂಟು ದಿನಗಳಿಂದ ನೀರಿಲ್ಲದೆ ಪರಿತಪಿಸುತ್ತಿರುವ ಗುಡಗೇರಿ ಗ್ರಾಮಸ್ಥರು


ನೀರಿಲ್ಲದೆ ಸ್ವಚ್ಛತೆ ಕಾಪಾಡುವುದು ಹೇಗೆ?

ವಿಜಯಸಾಕ್ಷಿ ಸುದ್ದಿ, ಅಳವಂಡಿ

ಅಳವಂಡಿ ಹೊಬಳಿಯ ಕವಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡುಗೇರಿ ಗ್ರಾಮದ ಜನತಾ ಕಾಲನಿಯಲ್ಲಿ ಕೊರೊನಾದಿಂದ ಕಂಗಾಲಾದ ಜನತೆಗೆ ನೀರಿನ ಸಮಸ್ಯೆಯೂ ತಲೆನೋವಾಗಿ ಕಾಡುತ್ತಿದೆ.

ಗುಡಿಗೇರಿಯು ಕೊಪ್ಪಳ ವಿಧಾನಸಭಾ ಕ್ಷೇತ್ರದ ಕೊನೆಯ ಗ್ರಾಮವಾಗಿದ್ದು, ಜನತಾ ಕಾಲನಿಯಲ್ಲಿ ೫೦ಕ್ಕೂ ಹೆಚ್ಚು ಮನೆಗಳಿವೆ. ಸುಮಾರು ೮ ದಿನಗಳಿಂದ ನೀರು ಬಂದಿಲ್ಲ.

ನೀರು ಸರಬರಾಜು ಸರಿಯಾಗಿ ಆಗದಿರುವುದರಿಂದ ತುಂಬ ಸಮಸ್ಯೆ ಎದುರಿಸುತ್ತಿದ್ದೇವೆ. ಮುಸುರೆ ತೊಳೆದರೆ ಬಟ್ಟೆ ಒಗೆಯಲು ಆಗುವುದಿಲ್ಲ, ಬಟ್ಟೆ ಒಗೆದರೆ ಸ್ನಾನಕ್ಕೆ ನೀರು ಇರುವುದಿಲ್ಲ. ಈ ಕಾಲನಿಯಲ್ಲಿ ವಯಸ್ಸಾದವರು ಇದ್ದಾರೆ, ತವರು ಮನೆಗೆ ಬಾಣಂತಿ ಆರೈಕೆಗೆ ಬಂದವರಿದ್ದಾರೆ. ಆದರೆ, ನೀರು ಪೂರೈಕೆಯೇ ಸಮರ್ಪಕವಾಗಿಲ್ಲ. ವಾಟರ್ ಮ್ಯಾನ್ ನೀರು ಬಿಟ್ಟು ಮನೆಗೆ ಹೊಗುತ್ತಾನೆ. ನೀರು ಬಂದಿದೆಯೇ ಇಲ್ಲವೇ ಎನ್ನುವುದನ್ನು ಗಮನಿಸುವುದಿಲ್ಲ. ಸರಿಯಾಗಿ ಕೆಲಸ ಮಾಡುವುದಿಲ್ಲ. ನೀರು ಬಂದಿರುವುದಿಲ್ಲ ಎಂದು ಕೇಳಿದರೆ ಕರೆಂಟ್ ಇಲ್ಲ, ನೀರು ಸಂಜೆ ಬರುತ್ತೆ, ಮೋಟರ್ ಸುಟ್ಟಿದೆ ಎನ್ನುವ ಕಾರಣ ಹೇಳುತ್ತಾನೆ ಎಂದು ಗ್ರಾಮಸ್ಥರು ದೂರಿದರು.

ನೀರು ಕೊಟ್ಟರೆ ಸಾಕು

ಇನ್ನು, ಜನಪ್ರತಿನಿಧಿಗಳೂ ಕೈಗೆ ಸಿಗುವುದಿಲ್ಲ. ಬಾಣಂತಿಯ ಬಟ್ಟೆಗಳನ್ನು ತೊಳೆಯಲು ಹಳ್ಳಕ್ಕೆ ಹೊತ್ತುಕೊಂಡು ಹೊಗಬೇಕು. ಇಲ್ಲಿ ನೀರು ಬರದೇ ಇದ್ದರೆ, ಕೆರೆಗಳಿಗೆ ನೀರು ತರಲು ಹೊಗುತ್ತೇವೆ. ಮಳೆ ಬಂದರೆ ಅದನ್ನು ತರಲಾಗದು. ಕೆರೆಯ ದಾರಿ ಕೆಸರಾಗಿ ನಡೆಯದಂತಾಗುತ್ತದೆ. ಆರೋಗ್ಯ ಇಲಾಖೆಯವರು ಕೊರೊನಾ ಇದೆ, ಸ್ವಚ್ಛತೆ ಕಾಪಾಡಿ ಎನ್ನುತ್ತಾರೆ.

ಬರುವ ನೀರಿನಲ್ಲಿ ಹೇಗೆ ಸ್ವಚ್ಛತೆ ಕಾಪಾಡಿಕೊಳ್ಳುವುದೆಂದು ನಮಗೆ ತಿಳಿಯುತ್ತಿಲ್ಲ. ಚಿಕ್ಕ ಮಕ್ಕಳು, ವಯಸ್ಸಾದವರು, ಬಾಣಂತಿಯರು, ಬಸುರಿಯರು ಇದ್ದಾರೆ. ನಮಗೆ ಸಿ.ಸಿ. ರಸ್ತೆ ಬೇಡ, ಯಾವ ಸೌಲಭ್ಯವೂ ಬೇಡ. ಮೊದಲು ಸರಿಯಾಗಿ ನೀರು ಕೊಡಿ. ಇಂತಹ ದುಃಸ್ಥಿತಿಯಲ್ಲಿ ಜೀವನ ಸಾಗಿಸುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಜಿಲ್ಲಾ ಪಂಚಾಯತ್ ಕ್ಷೇತ್ರವಾದರೂ ಸಮಸ್ಯಗಳು ತಪ್ಪಲಿಲ್ಲವೆಂದು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

ನೀರಿನ ವ್ಯವಸ್ಥೆ ಮಾಡುತ್ತೇವೆ
ನೀರಿನ ಸಮಸ್ಯೆಯನ್ನು ಸರಿಪಡಿಸಲು ಕ್ರಮ ತೆಗೆದುಕೊಂಡಿದ್ದೇವೆ. ಈಗಲೇ ನೀರು ಬಿಡಲು ವಾಟರ್ ಮ್ಯಾನ್‌ಗೆ ತಿಳಿಸಿದ್ದೇನೆ. ಸಂಪೂರ್ಣ ಸರಿಯಾದ ನೀರಿನ ವ್ಯವಸ್ಥೆ ಮಾಡುತ್ತೇವೆ.

  • ಜ್ಯೋತಿ ಮಹಾಂತಯ್ಯ ಸಿಂಧೋಗಿಮಠ
    ಗ್ರಾ.ಪಂ. ಅಧ್ಯಕ್ಷೆ, ಕವಲೂರು

ಎಂಟು ದಿನವಾಯಿತು
ಸರಿಯಾಗಿ ನೀರು ಬರುವುದಿಲ್ಲ. ಈಗ ೮ ದಿನವಾಯಿತು. ನೀರು ಬಂದಿಲ್ಲ. ಬಾಣಂತಿ ಮನೆಯವರು ನೀರು ಬಾರದೆ ಹಳ್ಳಕ್ಕೆ ಬಟ್ಟೆ ತೆಗೆದುಕೊಂಡು ಹೋಗಿದ್ದಾರೆ. ಕೊರೊನಾಗಿಂತ ನೀರಿನ ಸಮಸ್ಯೆ ನಮ್ಮನ್ನು ಬಹಳವಾಗಿ ಕಾಡುತ್ತಿದೆ.

  • ದೇವಮ್ಮ, ಗುಡಗೇರಿ ಗ್ರಾಮಸ್ಥೆ

ಕೊರೊನಾ ವೇಗಕ್ಕೆ ಬ್ರೇಕ್ ಹಾಕಲು ರಾಷ್ಟ್ರೀಯ ನೀತಿ ರೂಪಿಸುವಂತೆ ಸೋನಿಯಾ ಗಾಂಧಿ ಸಲಹೆ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಮಹಾಮಾರಿ ದೇಶದಲ್ಲಿ ತನ್ನ ಕಬಂಧಬಾಹು ಚಾಚುತ್ತಿದೆ. ಜನ ಭಯದಲ್ಲಿ ಬದುಕು ಕಳೆಯುವಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಿವಿ ಮಾತು ಹೇಳಿದ್ದಾರೆ.

ಈ ಕುರಿತು ವೀಡಿಯೋ ಮೂಲಕ ಮಾತನಾಡಿರುವ ಅವರು, ಸದ್ಯದ ಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ತಮ್ಮ ಕರ್ತವ್ಯಗಳನ್ನು ವ್ಯವಸ್ಥಿತವಾಗಿ ಹಾಗೂ ಪ್ರಾಮಾಣಿಕವಾಗಿ ಪಾಲಿಸಬೇಕಿದೆ. ಸೋಂಕು ಹರಡುವಿಕೆಯನ್ನು ತಪ್ಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ನೀತಿ ರಚಿಸಬೇಕಾದ ಅನಿವಾರ್ಯತೆ ತುಂಬಾ ಇದೆ. ಅಲ್ಲದೇ, ಈ ಕೆಟ್ಟ ಸಂದರ್ಭದಲ್ಲಿ ರಾಜಕೀಯ ಒಮ್ಮತ ಸಾಧಿಸುವ ಅವಶ್ಯಕತೆ ಕೂಡ ಇದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕೊರೊನಾ ಲಸಿಕೆಯನ್ನು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತವಾಗಿ ನೀಡಬೇಕು. ಅಲ್ಲದೇ, ಇದನ್ನು ನೀಡುವ ವೇಗವನ್ನು ಇನ್ನಷ್ಟು ಹೆಚ್ಚಿಸಬೇಕು. ಹೆಚ್ಚುವರಿ ಉತ್ಪಾದನಾ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಯಾವಾಗಲೂ ಕೇಂದ್ರದೊಂದಿಗೆ ಇರುತ್ತದೆ. ಸದ್ಯದ ಸಂದರ್ಭದಲ್ಲಿ ಬಡ ಕುಟುಂಬಗಳು ಸಾಕಷ್ಟು ಕಷ್ಟದ ದಿನಗಳನ್ನು ಎದುರಿಸುತ್ತಿವೆ. ಹೀಗಾಗಿ ಅಂತಹ ಬಡ ಕುಟುಂಬಗಳಿಗೆ ರೂ. 6 ಸಾವಿರ ಹಣವನ್ನು ಅವರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಏ. 30ರಂದು ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಬರೋಬ್ಬರಿ 3,523 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗುತ್ತಿದೆ. ಜನ ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ. ಹೀಗಾಗಿ ಆಡಳಿತ ಪಕ್ಷಗಳಿಗೆ ಪ್ರತಿ ಪಕ್ಷಗಳು ಕಿವಿ ಮಾತು ಹೇಳಿ ಎಚ್ಚರಿಸುತ್ತಿವೆ.

ಕೊರೊನಾ; ಸ್ನೇಹಿತರಿಗೆ ಬೆಡ್ ಕೊಡಿಸಲು 13 ಗಂಟೆ ಪರದಾಡಿದ ನಟಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಹಾಮಾರಿಯಿಂದಾಗಿ ಜನ ತತ್ತರಿಸುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಆಕ್ಸಿಜನ್ ಕೊರತೆ ತಾಂಡವಾಡುತ್ತಿದೆ. ಹೀಗಾಗಿ ನಟಿ ಶೃತಿ ಹರಿಹರನ್ ಅವರು ಕೂಡ ಇಂತಹ ತೊಂದರೆ ಅನುಭವಿಸಿ, ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಸ್ನೇಹಿತರೊಬ್ಬರಿಗೆ ಬೆಡ್ ಕೊಡಿಸಲು ಶೃತಿ ಬರೋಬ್ಬರಿ 13 ಗಂಟೆಗಳ ಕಾಲ ಪರದಾಡಿದ್ದಾರೆ. ಈ ಕುರಿತು ಅವರೇ ಅವರ ಸಂಕಷ್ಟವನ್ನು ಹಂಚಿಕೊಂಡಿದ್ದಾರೆ. 

ಈ ಕುರಿತು ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಸ್ನೇಹಿತರೊಬ್ಬರು ಕೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಐಸಿಯುನಲ್ಲಿ ಬೆಡ್ ಕೊಡಿಸಲು ಸಾಕಷ್ಟು ಕಷ್ಟ ಪಡಬೇಕಾಯಿತು. ಬರೋಬ್ಬರಿ 13 ಗಂಟೆಗಳ ಕಾಲ ಬೆಡ್ ಗಾಗಿ ಪರದಾಡಬೇಕಾಯಿತು. ಆದರೆ, ಸರಿಯಾದ ಸಮಯಕ್ಕೆ ಬೆಡ್ ಸಿಗದ ಕಾರಣಕ್ಕೆ ಅವರು ಅವರು ನಿಧನರಾದರು ಎಂದು ನೋವು ತೋಡಿಕೊಂಡಿದ್ದಾರೆ. 

ಇತ್ತೀಚೆಗೆ ನಟ ಜಗ್ಗೆಶ್ ಅವರು ಕೂಡ ತಮ್ಮ ಸಹೋದರನಿಗೆ ಬೆಡ್ ಕೊಡಿಸುವುದಕ್ಕಾಗಿ ಸಾಕಷ್ಟು ಪರದಾಡಿದ್ದರು. ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಕೊರೊನಾಗೆ ನಿರ್ಮಾಪಕ ಹಾಗೂ ನಟಿ ಮಾಲಾಶ್ರೀ ಅವರ ಪತಿ ಕೋಟಿ ರಾಮು ಅವರು ಸಹ ಸಾವನ್ನಪ್ಪಿದ್ದಾರೆ. ಹೀಗಾಗಿ ಪರಿಸ್ಥಿತಿ ತುಂಬಾ ಭೀಕರವಾಗಿದೆ.

ಸತತ ಸೋಲಿಗೆ ಕಂಗೆಟ್ಟ ಹೈದರಾಬಾದ್; ಡೇವಿಡ್ ವಾರ್ನರ್ ಗೆ ನಾಯಕತ್ವದಿಂದ ಕೊಕ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಆರಂಭದಿಂದಲೂ ಕಳಪೆ ಪ್ರದರ್ಶನ ತೋರುತ್ತಿದೆ. ಹೀಗಾಗಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ.

ಸತತ ಸೋಲಿಗೆ ಕಂಗೆಟ್ಟ ತಂಡ, ನಾಯಕತ್ವ ಬದಲಾವಣೆ ಮಾಡಿದೆ. ಸೋಲಿನ ಹೊಣೆ ಹೊರಿಸಿ ನಾಯಕ ಡೇವಿಡ್ ವಾರ್ನರ್ ಅವರನ್ನು ಕೆಳಗಿಳಿಸಲಾಗಿದೆ. ಈ ಕುರಿತು ಅಧಿಕೃತವಾಗಿಯೇ ತಂಡ ಘೋಷಿಸಿದೆ.
ಹೀಗಾಗಿ ಭಾನುವಾರ ನಡೆಯಲಿರುವ ಹೈದರಾಬಾದ್ ತಂಡದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಬದಲಾಗಿ ಕೇನ್ ವಿಲಿಯಮ್ಸನ್ ತಂಡದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಅಲ್ಲದೇ, ಈ ಐಪಿಎಲ್ ನ ಮುಂಬರುವ ಎಲ್ಲ ಪಂದ್ಯಗಳಲ್ಲಿಯೂ ಕೇನ್ ವಿಲಿಯಮ್ಸನ್ ನಾಯಕರಾಗಿ ಇರಲಿದ್ದಾರೆ ಎಂದು ತಂಡ ಪ್ರಕಟಣೆ ಮೂಲಕ ತಿಳಿಸಿದೆ.

ಭಾನುವಾರ(ಮೇ. 2)ದಂದು ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಅಲ್ಲದೇ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿದೇಶಿ ಆಟಗಾರರ ಸಂಯೋಜನೆಯಲ್ಲಿಯೂ ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ತಂಡ ಹೇಳಿದೆ.

ಹೈದರಾಬಾದ್ ತಂಡದ ನಾಯಕನಾಗಿ ಡೇವಿಡ್ ವಾರ್ನರ್ ಅವರು ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅವರ ಕೊಡುಗೆಯನ್ನು ಗೌರವ ಪೂರ್ವಕವಾಗಿ ಪರಿಗಣಿಸಲಾಗುತ್ತಿದೆ. ಮುಂದಿನ ಪಂದ್ಯಗಳನ್ನು ಎದುರಿಸುವ ಸಂದರ್ಭದಲ್ಲಿ ಅಂಗಳದಲ್ಲಿ ಹಾಗೂ ಅಂಗಳದಾಚೆಗಿನ ಯಶಸ್ಸಿಗೆ ಡೇವಿಡ್ ವಾರ್ನರ್ ಅವರಿಂದ ಸಂಪೂರ್ಣ ಸಹಕಾರ ದೊರೆಯುವ ಭರವಸೆಯಿದೆ ಎಂದು ತಂಡದ ಮ್ಯಾನೇಜ್ ಮೆಂಟ್ ತಿಳಿಸಿದೆ.

ಕೇವಲ ಒಂದು ಗಂಟೆಯ ಆಕ್ಸಿಜನ್ ವಿಳಂಬಕ್ಕೆ ಎಷ್ಟು ಜನ ಸೋಂಕಿತರು ಬಲಿಯಾಗಿದ್ದಾರೆ ಗೊತ್ತಾ?

ವಿಜಯಸಾಕ್ಷಿ ಸುದ್ದಿ, ನವದೆಹಲಿ

ದೆಹಲಿಯಲ್ಲಿ ಮತ್ತೆ ಆಮ್ಲಜನಕದ ತೊಂದರೆ ತಲೆ ದೋರಿದೆ. ಒಂದು ಗಂಟೆಯ ಕಾಲ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ವೈದ್ಯರೊಬ್ಬರು ಸೇರಿದಂತೆ 8 ಜನ ಮಹಾಮಾರಿಗೆ ಬಲಿಯಾಗಿರುವ ಘಟನೆ ನಡೆದಿದೆ.
ಈ ಕುರಿತು ದೆಹಲಿಯಲ್ಲಿನ ಬಾತ್ರಾ ಆಸ್ಪತ್ರೆ ಶನಿವಾರ ದೆಹಲಿ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ.

ಬಾತ್ರಾ ಆಸ್ಪತ್ರೆ, ನಮಗೆ ಸಮಯಕ್ಕೆ ಸರಿಯಾಗಿ ಆಮ್ಲಜನಕ ದೊರೆಯಲಿಲ್ಲ. ಮಧ್ಯಾಹ್ನ 12ರ ಹೊತ್ತಿಗೆ ನಮಗೆ ಆಕ್ಸಿಜನ್ ಪೂರೈಕೆಯ ತೊಂದರೆಯಾಯಿತು. ಆದರೆ, ನಮಗೆ ಮರಳಿ ಆಕ್ಸಿಜನ್ ಸಿಕ್ಕಿದ್ದು, ಅಂದೆ ಮಧ್ಯಾಹ್ನ 1.35ಕ್ಕೆ. ಅಷ್ಟರಲ್ಲಿ ನಮ್ಮ ಒಬ್ಬರು ವೈದ್ಯರು ಸೇರಿದಂತೆ 8 ಜನ ರೋಗಿಗಳು ಸಾವನ್ನಪ್ಪಿದ್ದರು ಎಂದು ಹೈಕೋರ್ಟ್ ಗೆ ತಿಳಿಸಿದೆ.

ಆಮ್ಲಜನಕ ಪೂರೈಕೆಯಿಲ್ಲದೆ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಬಾತ್ರಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗುಪ್ತಾ ಹೇಳಿದ್ದಾರೆ.

ಬಾಲಿವುಡ್ ನ ಹಿರಿಯ ನಟ ವಿಕ್ರಂಜಿತ್ ಕೊರೊನಾಕ್ಕೆ ಬಲಿ!

ವಿಜಯಸಾಕ್ಷಿ ಸುದ್ದಿ ಮುಂಬಯಿ
ಬಾಲಿವುಡ್ ನ ಹಿರಿಯ ನಟ ವಿಕ್ರಂಜೀತ್ ಕನ್ವರ್ ಪಾಲ್(52) ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ವಿಕ್ರಂಜೀತ್ ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಾವನ್ನಪ್ಪಿದ್ದಾರೆ ಎಂದು ನಟ ಅಶೋಕ್ ಪಂಡಿತ್ ಮಾಹಿತಿ ಹಂಚಿಕೊಂಡಿದ್ದಾರೆ.
ಓರ್ವ ಸೇನಾಧಿಕಾರಿಯಾಗಿದ್ದ ವಿಕ್ರಂಜಿತ್ ಅವರು, ನಿವೃತ್ತಿಯಾದ ನಂತರ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಆದರೆ, ಬೆಳಿಗ್ಗೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ವಿಕ್ರಂಜಿತ್ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಪೋಷಕ ನಟರಾಗಿ ಅಭಿನಯಿಸುತ್ತಿದ್ದರು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ನಟ ಅಶೋಕ್ ಪಂಡಿತ್, ಸಂತಾಪ ಸೂಚಿಸಿ ಅವರ ಕುಟುಂಬಸ್ಥರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

ಕೊರೋನಾ; ಶುಕ್ರವಾರ ಜಿಲ್ಲೆಯಲ್ಲಿ 122 ಜನರಿಗೆ ಸೋಂಕು

0

ವಿಜಯಸಾಕ್ಷಿ ಸುದ್ದಿ, ಗದಗ

ಏಪ್ರಿಲ್‌ 30 ಶುಕ್ರವಾರ ಜಿಲ್ಲೆಯಲ್ಲಿ ಸತತ ನಾಲ್ಕನೇ ದಿನವೂ ಕೊರೋನಾ ಸೋಂಕು ಶತಕ ದಾಟುತ್ತಾ ಸಾಗಿದೆ. ಇಂದು 122 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಯಥಾಸ್ಥಿತಿ ಮುಂದುವರೆದಿದೆ.

ಇಂದಿನ 122 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12702 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -77, ಮುಂಡರಗಿ-10, ನರಗುಂದ-12, ರೋಣ-05, ಶಿರಹಟ್ಟಿ-10, ಹೊರಜಿಲ್ಲೆಯ-08 ಸೇರಿದಂತೆ 122 ಪ್ರಕರಣಗಳು ದೃಢಪಟ್ಟಿವೆ.

ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 94 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 11838 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 723 ಪ್ರಕರಣಗಳು ಸಕ್ರಿಯವಾಗಿದ್ದು, 599 ಜನರು ಮನೆಯಲ್ಲಿ, 124 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 238 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 342597 ಮಾದರಿಗಳಲ್ಲಿ 329657 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!