Home Blog Page 3054

ಯುಗಾದಿ ನಿಮಿತ್ತ ನೈರುತ್ಯ ರೈಲ್ವೆಯಿಂದ 18 ವಿಶೇಷ ರೈಲುಗಳ ಓಡಾಟ

ವಿಜಯಸಾಕ್ಷಿ ಸುದ್ದಿ ಗದಗ
ಯುಗಾದಿ ಹಬ್ಬದ ಅಂಗವಾಗಿ ನೈರುತ್ಯ ರೈಲ್ವೆ ವಿಭಾಗ ಒಟ್ಟು 18 ವಿಶೇಷ ರೈಲ್ವೆ ಗಳ ಓಡಾಟವನ್ನು ಪ್ರಕಟಿಸಿದೆ.

ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದಾಗಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದುಕೊಂಡಿದ್ದ ಮೊಬೈಲ್ ಗಳನ್ನು ಮರಳಿಸಿದ ಗದಗ ಪೊಲೀಸರು

0

ವಿಜಯಸಾಕ್ಷಿ ಸುದ್ದಿ, ಗದಗ
ಅಜಾಗರೂಕತೆಯಿಂದ ಮೊಬೈಲ್ ಫೋನ್ ಗಳನ್ನು ಕಳೆದುಕೊಂಡಿದ್ದವರಿಗೆ, ಗದಗ ನಗರ ಠಾಣೆ ಪೊಲೀಸರು ಅವರ ಫೋನ್ ಗಳನ್ನು ಹುಡುಕಿ ಮರಳಿಸಿದ್ದಾರೆ.
ಗದಗ ಶಹರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಅಂದಾಜು 3 ಲಕ್ಷ 25 ಸಾವಿರ ಮೌಲ್ಯದ, ಒಟ್ಟು 23 ವಿವಿಧ ಕಂಪನಿಗಳ ಮೊಬೈಲ್ ಗಳನ್ನು ಶ್ರಮ ವಹಿಸಿ ಪತ್ತೆ ಹಚ್ಚಿ ಮಾಲಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರದಿದ್ದಾರೆ.

ತಮ್ಮ‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮೊಬೈಲ್ ಕಳವು ಮತ್ತು ಕಳೆದುಕೊಂಡಿದ್ದ ಪ್ರಕರಣಗಳ ಬೆನ್ನತ್ತಿದ ಪೊಲೀಸರು, ಇಂದು ಅವುಗಳ ಮಾಲೀಕರಿಗೆ ಕಳೆದುಕೊಂಡಿದ್ದ ಮೊಬೈಲ್ ಗಳನ್ನು ಮರಳಿಸಿದ್ದಾರೆ.
ಗದಗ ಉಪ-ವಿಭಾಗದ ಡಿವೈಎಸ್ಪಿ ಶಿವಾನಂದ ಅವರ ನೇತೃತ್ವದಲ್ಲಿ, ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ ವಿ ಸಾಲಿಮಠ ಹಾಗೂ ಅಪರಾಧ ವಿಭಾಗದ ಪಿಎಸ್ ಐ ಶ್ರೀಮತಿ ಜಿ ಟಿ ಜಕ್ಕಲಿ ಇವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ವಿ ಎಸ್ ಶೆಟ್ಟಣ್ಣವರ, ಬಿ ಜಿ ಹೊರಕೇರಿ, ಎಸ್ ಎ ಗುಡ್ಡಿಮಠ, ಪಿ ಎಸ್ ಕಲ್ಲೂರ, ಹನುಮಂತ ಯಡಿಯಾಪೂರ, ಐ ಟಿ ರವಳೋಜಿ, ಡಿಪಿಓ ಗದಗ ಎಆರ್ ಎಸ್ಐ ಗುರು ಬೂದಿಹಾಳ ಇವರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಗರ ಠಾಣೆ ಪೊಲೀಸರ ಈ ಕಾರ್ಯಕ್ಕೆ ಮೊಬೈಲ್ ಗಳನ್ನು ಮರಳಿ ಪಡೆದವರೂ ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎರಡನೇ ದಿನವೂ ಮುಂದುವರಿದ ಮುಷ್ಕರ; ಬಸ್ ನಿಲ್ದಾಣದಲ್ಲಿ ರೋಗಿ ಪರದಾಟ

0

ವಿಜಯಸಾಕ್ಷಿ ಸುದ್ದಿ, ಗದಗ

ಆರನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡಾ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಹೋರಾಟ ನಡೆಸುತ್ತಿದ್ದಾರೆ.

ಬೆಳಿಗ್ಗೆಯಿಂದ ಯಾವೊಂದು ಸರ್ಕಾರಿ ಬಸ್ ಗಳು ರಸ್ತೆಗಿಳಿದಿಲ್ಲ. ಬಸ್ ಗಳಿಲ್ಲದೇ ನಗರದ ಬಸ್ ನಿಲ್ದಾಣಗಳು ಬಣಗುಡುತ್ತಿವೆ. ಪ್ರಯಾಣಿಕರು, ರೋಗಿಗಳು ಊರಿಗೆ ಹೋಗಲು ಪರದಾಡುತ್ತಿದ್ದಾರೆ.

ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಗೆ ಚಿಕಿತ್ಸೆಗಾಗಿ ತೆರಳಿದ್ದ ಕೊಪ್ಪಳ ಮೂಲದ ಮಂಜುನಾಥ್ ಎಂಬ ವ್ಯಕ್ತಿ ಇಂದು ಬೆಳಿಗ್ಗೆ ಕ್ರೂಸರ್ ಮೂಲಕ ಗದುಗಿಗೆ ಬಂದಿದ್ದಾನೆ. ಆದರೆ, ಮುಂದೆ ಕೊಪ್ಪಳ ಜಿಲ್ಲೆಯ ಕುಷ್ಟಗಿಗೆ ಹೋಗಲು ಬಸ್ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾನೆ.

ತಲೆ ನೋವು ಹಾಗೂ ಜ್ವರದಿಂದ ಬಳಲುತ್ತಿರುವ ಮಂಜುನಾಥ್ ಕಳೆದ ಎರಡ್ಮೂರು ಗಂಟೆಯಿಂದ ಬಸ್ ಗಾಗಿ ಕಾಯ್ದು ಬಳಿಕ ಆಟೋ ಮೂಲಕ ಹಳೆ ಬಸ್ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಖಾಸಗಿ ಬಸ್ ಮೂಲಕ ಕೊಪ್ಪಳಕ್ಕೆ ತೆರಳಿದ.

ಸಾರಿಗೆ ಮುಷ್ಕರವೂ..!
ಯಾರಿಗೆ ನಷ್ಟವೂ..!!

ವಿಜಯಸಾಕ್ಷಿ ವಿಶೇಷ

ಒಂದು ಕಾಲದಲ್ಲಿ ‘ಭಾರತ್ ಬಂದ್’ ಎಂದರೆ ಜನಸಾಮಾನ್ಯರು ಬೆಚ್ಚಿ ಬೀಳುತ್ತಿದ್ದರು. ಒಂದು ದಿನದ ಬಂದ್‌ಗೇ ಸರಕಾರ ಹೆದರಿ ಕಂಗಾಲಾಗಿ ಬಿಡುತ್ತಿತ್ತು. ಬಂದ್‌ನಿಂದಾಗಿ ನಾಶ ನಷ್ಟಗಳಾದರೆ ಅದರ ದುಷ್ಪರಿಣಾಮವನ್ನು ಶ್ರೀಸಾಮಾನ್ಯನು ಅನುಭವಿಸಬೇಕಾಗುತ್ತದೆ. ಆತನ ಕೆಂಗಣ್ಣು ಸರಕಾರದ ಮೇಲೆ ಬೀಳುತ್ತದೆ. ಒಂದು ರೀತಿಯಲ್ಲಿ, ಜನಸಾಮಾನ್ಯರ ಬದುಕನ್ನು ಒತ್ತೆಯಿರಿಸಿಕೊಂಡು ಈ ಬಂದ್‌ಗಳು ನಡೆಯುತ್ತಿದ್ದವು. ಸರಕಾರವನ್ನು ಬೆದರಿಸಲು ಕಾರ್ಮಿಕ, ರೈತ ಸಂಘಟನೆಗಳು ಪ್ರಯೋಗಿಸುವ ಕಟ್ಟಕಡೆಯ ಅಸ್ತ್ರವಾಗಿತ್ತು ಈ ಬಂದ್. ಆದರೆ ಈಗ ಪರಿಸ್ಥಿತಿ ತಿರುವು ಮುರುವಾಗಿದೆ. ಜನಸಾಮಾನ್ಯರು ಒಂದೊಮ್ಮೆ ಪ್ರತಿಭಟನಾರ್ಥವಾಗಿ ನಡೆಸುತ್ತಿದ್ದ ಬಂದ್‌ನ್ನು ಸರಕಾರವೇ ಜನರ ಮೇಲೆ ಪ್ರಯೋಗಿಸುತ್ತಿದೆ. ಜೊತೆಗೆ ಈ ಬಂದ್‌ಗೆ ‘ಲಾಕ್‌ಡೌನ್’ ಎನ್ನುವ ಸುಂದರ ನಾಮಕರಣವನ್ನೂ ಮಾಡಿದೆ.

ಈ ಹಿಂದೆಲ್ಲ ಒಂದೆರಡು ದಿನ ಬಂದ್‌ಗಳು ನಡೆಯುತ್ತಿದ್ದರೆ, ಮೋದಿ ಸರಕಾರದ ನೇತೃತ್ವದಲ್ಲಿ ಎರಡು ತಿಂಗಳು ಭಾರತ ‘ಬಂದ್’ ಆಚರಿಸಿತು. ಲಾಕ್‌ಡೌನ್‌ನಿಂದ ದೇಶಕ್ಕಾಗಿರುವ ನಾಶ, ನಷ್ಟ, ಜನಸಾಮಾನ್ಯರ ಸಂಕಟಗಳು ಸರಕಾರವನ್ನು ಯಾವ ರೀತಿಯಲ್ಲೂ ತಾಕುತ್ತಿಲ್ಲ. ಲಾಕ್‌ಡೌನ್ ಎನ್ನುವುದು ಜನಸಾಮಾನ್ಯರಿಗಾಗಿ ನೀಡುತ್ತಿರುವ ಕೊಡುಗೆಯೇನೋ ಎನ್ನುವ ರೀತಿಯಲ್ಲಿ ಪದೇ ಪದೇ ‘ಲಾಕ್‌ಡೌನ್’ ಹೇರುವ ಬೆದರಿಕೆಯನ್ನು ಸರಕಾರವೇ ಒಡ್ಡುತ್ತಿದೆ. ಇಂತಹ ಸಂದರ್ಭದಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ‘ಬಂದ್’ ಘೋಷಿಸಿದರೆ ಅದನ್ನು ಸರಕಾರ ಗಂಭೀರವಾಗಿ ಸ್ವೀಕರಿಸುತ್ತದೆಯೆ?. ಈ ಹಿಂದೆ ಎರಡು ಬಾರಿ ರೈತ ಸಂಘಟನೆಗಳು ಭಾರತ್ ಬಂದ್ ನಡೆಸಿದಾಗಲೂ ಇದೇ ನಡೆಯಿತು. ಈಗಾಗಲೇ ದೇಶ ಅಘೋಷಿತ ಬಂದ್ ಆಚರಿಸುತ್ತಿರುವುದರಿಂದ ರೈತ ಸಂಘಗಳ ಅಧಿಕೃತ ಬಂದ್‌ಗಳನ್ನು ಯಾರೂ ಗಮನಿಸಲೇ ಇಲ್ಲ. ಇವೆಲ್ಲದರ ನಡುವೆ, ಗಾಯಗಳ ಮೇಲೆ ಬರೆ ಎಳೆಯುವಂತೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಲಾಕ್‌ಡೌನ್‌ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಮಧ್ಯಮವರ್ಗ, ಈ ಸಾರಿಗೆ ಮುಷ್ಕರದಿಂದಾಗಿ ಮತ್ತೆ ಹೊಸ ಬಗೆಯ ಲಾಕ್‌ಡೌನ್‌ಗೆ ಸಿಲುಕಿಕೊಂಡಂತಾಗಿದೆ. ಮುಷ್ಕರದ ಪರಿಣಾಮವಾಗಿ ರಾಜ್ಯದೆಲ್ಲೆಡೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ರೈಲು ಮತ್ತು ಖಾಸಗಿ ವಾಹನಗಳಲ್ಲಿ ಹೆಚ್ಚಿದ ಒತ್ತಡ ಸುರಕ್ಷಿತ ಅಂತರವನ್ನು ನಗೆಪಾಟಲಿಗೀಡು ಮಾಡಿದೆ. ಕೊರೋನಾ ಕುರಿತ ಸರಕಾರದ ಎಲ್ಲಾ ಮುಂಜಾಗ್ರತೆಗಳನ್ನು ಈ ಮುಷ್ಕರ ವಿಫಲಗೊಳಿಸಿದೆ.

ಮುಷ್ಕರದ ಬಗ್ಗೆ ಸರಕಾರ ತಳೆದಿರುವ ಬಿಗಿ ನಿಲುವನ್ನು ಗಮನಿಸಿದರೆ ಈ ಸ್ಥಿತಿ ಇನ್ನೂ ಎರಡು-ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಗಳು ಕಾಣುತ್ತಿವೆ. ಸಾರಿಗೆ ನೌಕರರ ಬಹುತೇಕ ಬೇಡಿಕೆಗಳನ್ನು ಸರಕಾರ ಪರಿಗಣಿಸಿದೆಯಾದರೂ, ಅತಿ ಮುಖ್ಯ ಬೇಡಿಕೆಯಾಗಿರುವ ಆರನೇ ವೇತನ ಆಯೋಗದ ಶಿಫಾರಸು ಅನ್ವಯ ಅವರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು ಎನ್ನುವುದು ಇನ್ನೂ ನೆನಗುದಿಯಲ್ಲಿದೆ. ಸದ್ಯಕ್ಕಂತೂ ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸರಕಾರದ ಬಳಿಯೂ ಸಕಾರಣಗಳಿವೆ. ರಾಜ್ಯ ಮಾತ್ರವಲ್ಲ, ಇಡೀ ದೇಶವೇ ಕೊರೋನನಂತರ ಆರ್ಥಿಕವಾಗಿ ಕುಸಿದು ಕೂತಿದೆ. ಪೆಟ್ರೋಲ್ ಬೆಲೆಯೇರಿಕೆ ಜನಸಾಮಾನ್ಯರ ಬದುಕನ್ನು ಮೂರಾಬಟ್ಟೆಯಾಗಿಸಿದೆ. ರಾಜ್ಯದ ಸ್ಥಿತಿ ಇನ್ನಷ್ಟು ದಯನೀಯವಾಗಿದೆ. ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್‌ಟಿ ಪರಿಹಾರವನ್ನು ನೀಡಲು ಕೇಂದ್ರ ಸತಾಯಿಸುತ್ತಿದೆ. ನೀಡಬೇಕಾದ ಅನುದಾನಗಳನ್ನೂ ಬಾಕಿ ಉಳಿಸಿದೆ.

ಕೇಂದ್ರಕ್ಕೆ ಒತ್ತಡ ಹೇರಿ, ರಾಜ್ಯದ ಜನರ ತೆರಿಗೆ ಹಣವನ್ನು ವಸೂಲಿ ಮಾಡಿಕೊಂಡು ಬರುವ ವ್ಯಕ್ತಿತ್ವ ಇರುವ ಒಬ್ಬನೇ ಒಬ್ಬ ಸಂಸದ ರಾಜ್ಯದಲ್ಲಿ ಇಲ್ಲ. ರಾಜ್ಯ ಬೊಕ್ಕಸ ಅಕ್ಷರಶಃ ಖಾಲಿಯಾಗಿದೆ. ಇಂತಹ ಸಂದರ್ಭದಲ್ಲಿ ಸಹಸ್ರಾರು ಕೋಟಿ ರೂಪಾಯಿ ಅಗತ್ಯಬೀಳುವ, ಬೇಡಿಕೆಯೊಂದನ್ನು ಮುಂದಿಟ್ಟು ಸಾರಿಗೆ ಕಾರ್ಮಿಕರು ಮುಷ್ಕರ ನಡೆಸುವುದು ಎಷ್ಟು ಸರಿ ಎಂಬ ಪ್ರಶ್ನೆಯೂ ತಲೆಯೆತ್ತುತ್ತದೆ. ಆದರೆ ಇಂತಹದೊಂದು ಬೇಡಿಕೆ ತಲೆಯೆತ್ತಲು ಪರೋಕ್ಷ ಕಾರಣ ನಮ್ಮ ಸರಕಾರವೇ ಆಗಿದೆ. ತನ್ನ ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರಕಾರ, ಮಗದೊಂದೆಡೆ ತನ್ನ ರಾಜಕೀಯ ದುರುದ್ದೇಶಗಳಿಗಾಗಿ ಜನರ ತೆರಿಗೆಯ ಹಣವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗ ಪಡಿಸುತ್ತಿದೆ. ಯಾವುದೇ ಬೇಡಿಕೆಯಿಲ್ಲದೇ ಇದ್ದರೂ ಬ್ರಾಹ್ಮಣ, ಒಕ್ಕಲಿಗ ಮತ್ತು ಲಿಂಗಾಯತ ಜಾತಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ, ಮಂಡಳಿಗಳನ್ನು ರಚಿಸಿ ಅವುಗಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿತು. ಈ ಹಣ ಎಲ್ಲಿಂತ ಬಂತು? ಎಂದು ಸಾರಿಗೆ ಕಾರ್ಮಿಕರು ಕೇಳುತ್ತಿದ್ದಾರೆ. ಈ ಮೂರು ಜಾತಿಗಳು ಯಾವುದೇ ದುರ್ಬಲ ಸಮುದಾಯಕ್ಕೆ ಸೇರಿಲ್ಲ.

ರಾಜಕೀಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿ ಸಮರ್ಥವಾಗಿ ಪ್ರಾತಿನಿಧ್ಯಗಳನ್ನು ಈ ಜಾತಿಗಳು ಹೊಂದಿವೆ. ಹೀಗಿದ್ದರೂ, ಇವರಿಗಾಗಿ ಪ್ರತ್ಯೇಕ ನಿಗಮ, ಮಂಡಳಿ, ಪ್ರಾಧಿಕಾರವನ್ನು ರಚಿಸುವುದಕ್ಕೆ ಇರುವ ಕಾರಣಗಳೇನು? ಸಾರಿಗೆ ನೌಕರರ ಬೇಡಿಕೆ ಈಡೇರಿಸಿದ್ದೇ ಆಗಿದ್ದರೆ, ಆ ಸಂಸ್ಥೆಯೊಳಗಿರುವ ಎಲ್ಲ ಜಾತಿ, ಧರ್ಮಗಳ ಜನರಿಗೂ ಸವಲತ್ತು ಹಂಚಿ ಹೋಗುತ್ತಿತ್ತು. ಬೀದಿಯಲ್ಲಿ ಅತ್ತು ಕರೆಯುವ ಮಕ್ಕಳನ್ನು ಬೀದಿಯಲ್ಲೇ ಬಿಟ್ಟು, ಸುಖದ ಸುಪ್ಪತ್ತಿಗೆಯ ತೊಟ್ಟಿಲಲ್ಲಿ ನಿದ್ರಿಸುತ್ತಿರುವ ಮಕ್ಕಳನ್ನು ಎಚ್ಚರಿಸಿ ಅವುಗಳಿಗೆ ಹಾಲುಣಿಸುವ ಸರಕಾರದ ನೀತಿಗಳೇ ಕಾರ್ಮಿಕರನ್ನು ಕೆರಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ.

ಸರಕಾರ ಮೊತ್ತ ಮೊದಲು ರಾಜಕೀಯ ದುರುದ್ದೇಶಗಳನ್ನು ಇಟ್ಟುಕೊಂಡು ಸ್ಥಾಪಿಸಿರುವ ಜಾತಿ ಅಭಿವೃದ್ಧಿಗಾಗಿ ರಚಿಸಿದ ನಿಗಮ, ಮಂಡಳಿಗಳನ್ನು ಹಿಂಪಡೆದು, ಅದಕ್ಕಾಗಿ ಮೀಸಲಿಟ್ಟ ಹಣವನ್ನು ಈ ಕಾರ್ಮಿಕರಿಗಾಗಿ ಉಪಯೋಗಿಸಬಹುದಾಗಿದೆ. ಇದೇ ಸಂದರ್ಭದಲ್ಲಿ ‘ಗೋಶಾಲೆಗಳು’ ಎಂಬ ಅನುಪಯುಕ್ತ ಯೋಜನೆಗಾಗಿ ರಾಜ್ಯ ಸರಕಾರ ಪ್ರತಿ ವರ್ಷ ಕೋಟ್ಯಂತರ ರೂಪಾಯಿಯನ್ನು ವ್ಯಯಿಸುತ್ತಿವೆ. ಉದ್ಯಮ ನಡೆಸುವುದು ಸರಕಾರದ ಕೆಲಸವಲ್ಲ ಎಂದು ಪ್ರಧಾನಿ ಒಂದೆಡೆ ಹೇಳಿದ್ದಾರೆ. ಹಾಗಾದರೆ, ಅನುಪಯುಕ್ತ ಗೋವುಗಳನ್ನು ಸಾಕುವುದು ಸರಕಾರದ ಕೆಲಸವೇ ಎಂದು ರೈತರು ಕೇಳುತ್ತಿದ್ದಾರೆ.

ಈ ಗೋಶಾಲೆಗಳು ರಚನೆಯಾಗುವ ಮೊದಲು ಗೋವುಗಳ ಮಾರಾಟದ ಹಕ್ಕುಗಳನ್ನು ರೈತರೇ ಹೊಂದಿದ್ದರು. ಅದರಿಂದ ಅವರಿಗೆ ಆರ್ಥಿಕವಾಗಿಯೂ ಲಾಭವಾಗುತ್ತಿತ್ತು. ಜೊತೆಗೆ ಸರಕಾರಕ್ಕೂ ಅವನ್ನು ಸಾಕುವ ಹೊಣೆಗಾರಿಕೆಗಳು ಇರಲಿಲ್ಲ. ಇದೀಗ ಸರಕಾರ ಗೋವು ಮಾರಾಟದ ಮೇಲೆ ನಿಯಂತ್ರಣ ಹೇರುವ ಮೂಲಕ, ಅನಗತ್ಯವಾಗಿ ಅನುಪಯುಕ್ತ ಗೋವುಗಳ ಹೊಣೆಯನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದಾಗಿ ರೈತರ ಆದಾಯವನ್ನು ಸರಕಾರ ಕಿತ್ತುಕೊಂಡಿದೆ. ಇನ್ನೊಂದೆಡೆ, ಜನ ಸಾಮಾನ್ಯರ ತೆರಿಗೆಯನ್ನು ಈ ಗೋಶಾಲೆಗಳೆಂಬ ಪ್ರಹಸನಕ್ಕೆ ಚೆಲ್ಲುತ್ತಿದೆ. ಆದರೆ ಇದರಿಂದ ಸರಕಾರಕ್ಕೆ ಯಾವುದೇ ಆದಾಯ ಬರುತ್ತಿಲ್ಲ. ಗೋಶಾಲೆಗಳಿಗಾಗಿ ಬಿಡುಗಡೆ ಮಾಡಿರುವ ಹಣವನ್ನು ಕಪಟ ಸ್ವಾಮೀಜಿಗಳು, ನಕಲಿ ಗೋರಕ್ಷಕರು ತಮ್ಮದಾಗಿಸಿಕೊಳ್ಳುತ್ತಿದ್ದಾರೆ.

ಇಂತಹ ಎಲ್ಲ ಗೋಶಾಲೆಗಳನ್ನು ಕಿತ್ತು ಹಾಕಿ, ಅವುಗಳಿಗಾಗಿ ಮೀಸಲಿಟ್ಟ ಹಣವನ್ನು ತಮ್ಮ ಹಕ್ಕುಗಳನ್ನು ಕೇಳುತ್ತಿರುವ ಕಾರ್ಮಿಕರಿಗಾಗಿ ವ್ಯಯಿಸುವ ಅವಕಾಶ ಸರಕಾರಕ್ಕಿದೆ. ಇದೇ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳೂ ಜನಸಾಮಾನ್ಯರ ಮೇಲೆ ಮುಷ್ಕರ ಬೀರುತ್ತಿರುವ ಪರಿಣಾಮವನ್ನು ಗಮನಿಸಬೇಕಾಗಿದೆ. ಸಾರಿಗೆ ಮುಷ್ಕರದ ಲಾಭವನ್ನು ಖಾಸಗಿ ಬಸ್ ಮಾಲಕರು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನೂ ಗಮನಿಸಬೇಕು. ಈಗಾಗಲೇ ಸರಕಾರ ಎಲ್ಲವನ್ನು ಖಾಸಗಿಯವರಿಗೆ ಒಪ್ಪಿಸಿ ಕೈತೊಳೆದುಕೊಳ್ಳಲು ಯತ್ನಿಸುತ್ತಿರುವಾಗ, ಕೊರೋನಾದಂತಹ ಸಂಕಟದ ಕಾಲದಲ್ಲಿ ಸಾರಿಗೆ ನೌಕರರ ಬಿಗಿ ನಿಲುವು ಅವರಿಗೇ ತಿರುಗುಬಾಣವಾಗಬಹುದು. ಮುಷ್ಕರಕ್ಕೆ ಜನರ ಸಹಕಾರವೂ ಅತ್ಯಗತ್ಯ. ಜನರ ಅನುಕಂಪವನ್ನು ಕಳೆದುಕೊಂಡ ಹೋರಾಟಗಳು ವಿಫಲವಾದದ್ದೇ ಹೆಚ್ಚು. ಆದುದರಿಂದ, ಹೋರಾಟವನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೇ ಈ ಸಂಕಟ ಕಾಲದಲ್ಲಿ ಸರಕಾರ ಮತ್ತು ಕಾರ್ಮಿಕ ಸಂಘಟನೆಗಳು ಕೊಡುಕೊಳ್ಳುವಿಕೆಯ ಮೂಲಕ ಸಮಸ್ಯೆಯನ್ನು ಇತ್ಯರ್ಥ ಮಾಡಿಕೊಳ್ಳಬೇಕಾಗಿದೆ..!

ಕೆ.ಶಿವು.ಲಕ್ಕಣ್ಣವರ

ಸ್ಟೈಲಿಶ್‌ ಸ್ಟಾರ್‌ ಅಭಿಮಾನಿಗಳಿಗೆ ಇಂದು ಡಬಲ್‌ ಧಮಾಕಾ…

ವಿಜಯಸಾಕ್ಷಿ ಸಿನಿಮಾ ವಿಶೇಷ
ಏಪ್ರಿಲ್‌ 8ರಂದು ಅಲ್ಲು ಅರ್ಜುನ್‌ ಬರ್ತ್‌ಡೇ. ಇದೆ ವೇಳೆ ಸ್ಯಾಂಡಲ್‌ವುಡ್‌, ಟಾಲಿವುಡ್‌, ಕಾಲಿವುಡ್‌ ಸೇರಿದಂತೆ ಸಿನಿ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಪ್ಯಾನ್‌ ಇಂಡಿಯಾ ಮೂವಿ ʻಪುಷ್ಪʼ ಟೀಸರ್‌ ರಿಲೀಸ್‌ ಆಗಿದೆ.
ಮೈತ್ರಿ ಮೂವೀಸ್‌ ಬ್ಯಾನರ್‌ನಲ್ಲಿ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌, ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು ಸುಕುಮಾರ್‌ ನಿರ್ದೇಶನದ ʻಪುಷ್ಪʼ ಸಿನಿಮಾ 2021 ರ ಆಗಸ್ಟ್‌ 13 ರಂದು ಕನ್ನಡ, ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ದಕ್ಷಿಣದ ಪ್ರತಿಭಾವಂತ ನಟರಾದ ಫಹದ್‌ ಫಸಲ್‌, ಧನಂಜಯ ಸಹ ಅಭಿನಯಿಸಿದ್ದಾರೆ.
ಅಲ್ಲು ಅರ್ಜುನ್‌ ಮತ್ತು ಸುಕುಮಾರ್‌ ಕಾಂಬಿನೇಶನ್‌ನಲ್ಲಿ ಬಂದಿದ್ದ ಆರ್ಯ, ಆರ್ಯ-2 ಚಿತ್ರಗಳು ಸೂಪರ್‌ ಹಿಟ್‌ ಆಗಿದ್ದವು. ಇದೀಗ ಇದೇ ಕಾಂಬಿನೇಶನ್‌ನಲ್ಲಿ ವಿಭಿನ್ನ ಕಥಾಹಂದರದ ಜೊತೆ ಬರ್ತಿರೋ ʻಪುಷ್ಪʼ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

ವಿದ್ಯಾರ್ಥಿಗಳಿಗೆ, ನೌಕರರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿ; ಡಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ

ಸಾರಿಗೆ ಸಂಸ್ಥೆಯ ವಾಹನ ಚಾಲಕರು ಹಾಗೂ ಸಿಬ್ಬಂದಿಗಳು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ಕಚೇರಿ ಕೆಲಸಗಳಿಗೆ ಬರುವಂತಹ ನೌಕರರಿಗೆ ಸೂಕ್ತ ಸಮಯದಲ್ಲಿ ಖಾಸಗಿ ವಾಹನ ಬಳಸಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಾರಿಗೆ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರಿಗೆ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಗಿಯುವವರೆಗೆ ತಾತ್ಕಾಲಿಕವಾಗಿ ಖಾಸಗಿ ಟ್ಯಾಕ್ಸಿ, ಕ್ಯಾಬ್ ವಾಹನಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಪ್ರಯಾಣಿಸಲು ಅನುವು ಮಾಡಿಕೊಡಬೇಕು.

ಸಂದರ್ಭೋಚಿತವಾಗಿ ಸಾರ್ವಜನಿಕರಿಗೆ ಹಾಗೂ ವಯೋವೃದ್ಧರಿಗೆ ಪ್ರಯಾಣಿಸಲು ಅಡಚಣೆಯಾಗದಂತೆ ನಿರ್ದಿಷ್ಟಪಡಿಸಿದ ಮಾರ್ಗಗಳಲ್ಲಿ ಖಾಸಗಿ ವಾಹನಗಳು ಸಂಚರಿಸುವಂತೆ ನೋಡಿಕೊಳ್ಳಲು ತಿಳಿಸಿದರು.

ಗರ್ಭಿಣಿಯರು ಹಾಗೂ ವೃದ್ಧರು ಮತ್ತು ಅನಾರೋಗ್ಯ ಪೀಡಿತರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಲ್ಲಿ ಅವರನ್ನು ಗುರುತಿಸಿ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಬೇಕು. ಹಾಗೂ ಮೂಲಭೂತ ಸೌಕರ್ಯಗಳು ದೊರೆಯುವಂತೆ ಅಧಿಕಾರಿಗಳು ಹಾಗೂ ಪೊಲೀಸ ಇಲಾಖೆ ನಿಗಾ ವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಅದೇ ರೀತಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು. ಖಾಸಗಿ ವಾಹನಗಳ ಕಾರ್ಯಾಚರಣೆ ನಡೆಸುವುದನ್ನೇ ಬಂಡವಾಳ ಮಾಡಿಕೊಂಡು ವಿನಾಕಾರಣ ಸಾರ್ವಜನಿಕರಿಂದ ಹೆಚ್ಚಿನ ದರ ವಸೂಲು ಮಾಡುವುದರ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಹಾಗೂ ಜನಸಾಮಾನ್ಯರಿಗೆ ಕನಿಷ್ಟ ದರದಲ್ಲಿ ಸಾರಿಗೆ ಸೌಲಭ್ಯವನ್ನು ಖಾಸಗಿ ವಾಹನಗಳು ಒದಗಿಸಬೇಕೆಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಳಿ ಮಾತನಾಡಿ, ಜಿಲ್ಲೆಯಲ್ಲಿ 100 ರಿಂದ 50 ಆಟೋ ರಿಕ್ಷಾ, 200-250 ಮಾಕ್ಸಿ ಕ್ಯಾಬ್ ಹಾಗೂ 100 ಮೋಟಾರ್ ಕ್ಯಾಬ್‌ಗಳು ವಾಹನಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದ್ಯತೆಯನುಸಾರ ಸಾರ್ವಜನಿಕರಿಗೆ ಸೇವೆ ಒದಗಿಸಲು ಖಾಸಗಿ ವಾಹನಗಳ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ವಾ.ಕ.ರ.ಸಾ.ಸಂಸ್ಥೆ ಗದಗ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಎಸ್. ಹಿರೇಮಠ ಮಾತನಾಡಿ, ನೌಕರರು ನಡೆಸುತ್ತಿರುವ ಮುಷ್ಕರವನ್ನು ಕೈಬಿಟ್ಟು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಮನವಿ ಮಾಡಲಾಗಿದೆ. ಮುಷ್ಕರದಲ್ಲಿ ಭಾಗವಹಿಸದೇ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಸೂಕ್ತ ಪೋಲೀಸ್ ಬಂದೋಬಸ್ತಿಯನ್ನು ಒದಗಿಸಲಾಗುವುದೆಂದು ತಿಳಿಸಿದೆ.

ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ವಾಹನಗಳು ಬಂದು ಸಾರ್ವಜನಿಕರಿಗೆ ಸೇವೆ ಒದಗಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯಕ್ಕನುಸಾರ ಖಾಸಗಿ ವಾಹನಗಳು ಕಾರ್ಯಾಚರಣೆ ನಡೆಸುವ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಲು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್, ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ವಾ. ಕ. ರಾ. ಸ. ಸಾ. ಸಂಸ್ಥೆ ಅಧಿಕಾರಿಗಳು ಇದ್ದರು.

ಕಮಲಾ ಹೆಮ್ಮಿಗೆಯವರ ಹೊಸತಾದ ಸ್ತ್ರೀ‌ ಪ್ರಪಂಚ ವೇ ಆಗಿದೆ ಈ‌ ‘ಮಾಯಾಕನ್ನಡಿ’ ಎಂಬ ಕಥೆಗಳ ಸಂಕಲನ..!

ವಿಜಯಸಾಕ್ಷಿ ವಿಶೇಷ

ಸಾಹಿತ್ಯದ ವಿವಿಧ ಪ್ರಕಾರಗಳಿಗೆ ತಮನ್ನು ಒಡ್ಡಿಕೊಂಡಿರುವ ಲೇಖಕಿ ಕಮಲಾ ಹಮ್ಮಿಗೆಯವರು ಇದುವರೆಗೆ ಒಂಬತ್ತು ಅನುವಾದಿತ ಕೃತಿಗಳನ್ನು ಕೊಟ್ಟಿದ್ದಾರೆ. ನಾನಾ ಕಾರಣದಿಂದ ಕೇರಳದಲ್ಲಿ ನೆಲೆಸಿದ್ದರಿಂದ ಇವರು ಮಲೆಯಾಳೀ ಸ್ತ್ರೀ ಸಂಕಥನಗಳಿಗೆ ಕೈಹಚ್ಚಿದರು. ‘ಚಿರು ಕಥ’ ಎಂದು ಕರೆಸಿಕೊಳುವ ಸಣ್ಣ ಕಥೆಗಳ ಪ್ರಖರತೆ ಮನಗೊಂಡು ಅತ್ತಿ ಹಣ್ಣಿನಂಥ ಹೆಣ್ಣಿನ ಬದುಕನ್ನು — ಅಂದರೆ ಮೇಲೆ ಆಕರ್ಷಕವಾಗಿದ್ದು ಒಳಗೆ ಅರೆಕೊರೆಯಿದ್ದರೂ — ಬಿಚ್ಚಿಡುವ ಕಥೆಗಳನ್ನಾಧರಸಿಕೊಂಡು ಒಟ್ಟಾರೆ ಕೇರಳ ಕಾಂತೆಯರ ನಿಟ್ಟುಸಿರು, ಕೋಪಗಳನ್ನು ಕನ್ನಡಕ್ಕೆ ತರುವಲ್ಲಿ ಸಾಫಲ್ಯ ಕಂಡಿದ್ದಾರೆ ಕಮಲಾ ಹೆಮ್ಮಿಗೆ…

‘ಮಾಯಾಕನ್ನಡಿ’ ಕೇರಳ ಕಾಂತಾ ಸಮ್ಮಿತದ ಮುಂದುವರಿದ ಭಾಗವೆನ್ನೆಡ್ಡಿಯಿಲ್ಲ. ಸ್ವಾತಂತ್ರೋತ್ತರ ಭಾರತ, ಸುಶಿಕ್ಷಿತ ಸ್ತ್ರೀಯರ ಬವಣೆಗಳು, ಸಮಾಜದ ದ್ವಂದ್ವ ನೀತಿಗಳನ್ನು ಪ್ರಶ್ನಿಸುವ ಗುಣ‌ ಇವೆಲ್ಲವನ್ನೂ ಇಲ್ಲಿಯ 16 ಕಥೆಗಳಲ್ಲಿ ಕಾಣಬಹುದು. 19 ನೆಯ ಶತಮಾನದಲ್ಲೇ ಭ್ರಮನಿರಸನ (ಗಾಂದೀಜಿಯೋತ್ತರ ದಿನಗಳು)ವಾದ ಚಿತ್ರ ಇಲ್ಲಿ ನೋಡಲು ಸಿಗುವುದು.

ಪೊಲೀಸ್ ವ್ಯವಸ್ಥೆ ವಿರುದ್ಧ ಕಮಲಾದಾಸ್ (ಸುರೈಯ್ಯಾ) ಎತ್ತಿದ ಧ್ವನಿ ‘ಕಲ್ಲ್ಯಾಣಿ’ಯಲ್ಲಿದ್ದರೆ ‘ವತ್ಸಲಾ’ರ ಕಥೆಗಳಲ್ಲಿ ಹೆಣ್ಣಿನ ಸೂಕ್ಷ್ಮ ಸಂವೇದನೆ ಹಾಗೂ ಮಾತೃ ಹೃದಯಗಳ ಚಿತ್ರಣವಿದೆ. ‘ಚರಿತ್ರೆ ಮರುಕಳಿಸಲಿಲ್ಲ’ ದಲ್ಲಿ ‘ರಾಜಲಕ್ಷ್ಮಿ’ಯವರು ಅಳಿಯ ಸಂತಾನ ಕಟ್ಟು (ಮಾತೃ ಮೂಲ ಕುಟುಂಬ) ಕುರಿತು ವಿಡಂಬಿಸಿದ್ದಾರೆ. ‘ಕನ್ಯ’ ‘ಸಲಿಂಗ ಪಶು’ ಕಥೆಗಳಲ್ಲಿ ಇಂದೂ ಮೇನೊನ್ ಹೆಣ್ಣಿನದೇ ವಿಶಿಷ್ಟಾನುಭಗಳನ್ನು ದಟ್ಟವಾಗಿ ಮುಂದಿಟ್ಟಿದ್ದಾರೆ.

ಇ.ಪಿ.ಸುಷ್ಮಾರ ‘ಮಗಳು’ ಧೋರಣೆ ಕಲಾತ್ಮಕತೆ ಎರಡೂ ದ್ರವ್ಯತೆಯಿಂದ ಪರಿಪಕ್ವವಾದ ಕಥೆ. ನಿಜವಾಗಿ ಇದು ಕವಿತೆ!
ಮೂರು ತಲೆಮಾರಿನ ಲೇಖಕರ ಪ್ರಾತಿನಿಧಿಕ ಕಥಾ ಸಂಕಲನ. ಹೀಗೆ ನಮ್ಮೆದುರು ಸುರುಳಿ ಬಿಚ್ಚುತ್ತದೆ.

ಕಮಲಾ ಹೆಮ್ಮಿಗೆಯವರು ಉದ್ದೇಶ ಪೂರ್ವಕವಾಗಿ ‘ಜನಪದ ಕಥೆ’ಯೊಂದನ್ನು ಸೇರಿಸಿ ಕೃತಿಗೆ ಮೆರಗು ನೀಡಿದ್ದಾರೆ. ಒಂದು ಹರೆಯದ ಹುಡಿಗಿಗೆ ರಸಹಗಳಲ್ಲಿರುವು ಹಾಗೂ ಯಾತನೆಗಳಲ್ಲಿ‌ ಯಾವುದು‌ ತೀವ್ರ ಎಂಬ ‘ಯಕ್ಷ ಪ್ರಶ್ನೆ’ ಹಾಕುವ ಸಮಾಜದ ಕ್ರೌರ್ಯವನ್ನು ಕಣ್ಣಿಗೆ ಕಟ್ಟಿ ಕೊಟ್ಟಿದ್ದಾರೆ. (ಒಟ್ಟು ಸಂಕಲನದ ‘ಆಶಯ’ವನ್ನಿದು ಪ್ರಕಟಿಸುತ್ತದೆ).

ಇನ್ನು ಮುಖಪುಟ ಹಾಗೂ ಶೀರ್ಷಿಕೆ ಸಂಬಂಧಿಸಿದ ‘ಮಾಯಾಕನ್ನಡಿ’ ಸೊಗಸೇ ಬೇರೆ. ಇಲ್ಲಿ ಕಳ್ಳನೊಬ್ಬನಿಗೆ ಗುಜರಿಯಲ್ಳಿ ಕನ್ನಡಿಯೊಂದು ಸಿಗುತ್ತದೆ. ಅ ಯುವಕ ಮನೆಗೆ ತಂದು ಮುಖ ನೋಡಿಕೊಳ್ಳಲು ಸಹಜವಾಗಿ ಬಯಸಿದರೆ, ಅಲ್ಲಿ ಸೈತಾನನ‌ ಬದಲು ಕ್ರಿಸ್ತನ ಮುಖ ಕಾಣುವುದು!
ನಂತರದ ಕ್ಷಣಗಳಲ್ಲಾತ ಒಳ್ಳೊಳ್ಳೆ ಕಾರ್ಯಗಳನ್ನು ಎಸಗುವನು.

ಕಥೆಯ ಅಂತ್ಯದಲ್ಲಿ ಕನ್ನಡಿಯಲ್ಲಿ ಸೈತಾನನ ಮೊಗವೇ ಕಾಣುವುದು ಬದುಕಿನ ವ್ಯಂಗ್ಯ! ಹಿರಿಯ ಲೇಖಕಿ ‘ಗ್ರೇಸಿ’ಯವರ ಕಥೆ ಇದು. ಫ್ಯಾಂಟಸಿ ಚಿತ್ರಣವಿದೆ. ಹೀಗೆ ಬದುಕಿನ ನಿಸ್ಸಾರತೆ, ಸ್ವಾರಸ್ಯ ಎರಡನ್ನೂ ಕುರಿತ ಕಥೆಗಳು ವಾಚಕರಿಗೆ ಸಂಕಲನ ನೀಡುತ್ತದೆ. ಸ್ತ್ರೀ-ದೃಷ್ಟಿಕೋನ ಇಲ್ಲಿ ಮುಖ್ಯ.
ಕಮಲಾ ಹೆಮ್ಮಿಗೆಯವರು ತುಂಬಾ ಸರಳ ಭಾಷೆಯಲ್ಲಿ ಅಲ್ಲಿಯ ಪರಿಸರ, ನಾಣ್ನುಡಿ, ಮುಂತಾದವುನ್ನು ಸಾರ ಕೆಡದಂತೆ ಒಪ್ಪಳಿಯದಂತೆ ಕನ್ನಡಕ್ಕೆ ತಂದಿದ್ದಾರೆ.

ಉತ್ತರ ಕರ್ನಾಟಕದ (ಉದಾ: ಶಿಕಾವತು) ಹವಣಾದ ಶಬ್ದಗಳೂ ಬಳಕೆಗೊಂಡಿವೆ. ಸಂಕೀರ್ಣವಾದ ವಾಕ್ಯಗಳು ಎಲ್ಲೂ ಇಲ್ಲ.
‘ಪ್ಯಾಸಿ’ವೂ ಒಂದು ಶೃತಿಯಾಗಿ ಸಂಕಲನದುದ್ದಕ್ಕೂ ಇರುವ ಅನುಭವ!
ಇಂಥ ಸ್ತ್ರೀ ‘ಅಸ್ಮಿತೆ’, ಸಂವೇದನೆ, ಕನ್ನಡಕ್ಕೆ ಅತ್ಯವಶ್ಯವಾಗಿತ್ತು. ಅದನ್ನು ಕಮಲಾ ಹೆಮ್ಮಿಗೆಯವರು ಸಮರ್ಥವಾಗಿ ಒದಗಿಸಿದ್ದಾರೆ.

‘ಕೇರಳ ಕಾಂತಾ ಸಮ್ಮಿತ’ದ ಕಥೆಗಳು ಅಘಾತ ತರುವಂತಿದ್ದವು. ಇಲ್ಲಿ ಮಾತ್ರ ‘ಪ್ರಶಾಂತ ಸಮುದ್ರ. ಎರಡೂ ಕಮಲಾ ಹೆಮ್ಮಿಗೆಯವರ ಕೌಶಲ್ಯಕ್ಕೆ ಸಾಕ್ಷಿಯೇ..!
ಮುಖಪುಟ, ಹಿಂಬದಿ ‘ಸಮುದ್ರ ದೇವತೆ’ ಬೆನ್ನುಡಿ ಅರ್ಥಪೂರ್ಣ. ‘ಬ್ಲರ್ಬ್’ ಬರೆದ ಪ್ರಭು.ಅಜಾನೂರು, ಅನುವಾದಕರ ಸರಳ, ಸಂಪನ್ನ ವ್ಯಕಿತ್ವವನ್ನು‌ ಸರಿಯಾಗಿ ಗುರುತಿಸಿದ್ದಾರೆ.

ಇಷ್ಟು ಹೇಳಿ ಈ ಕಮಲಾ ಹೆಮ್ಮಿಗೆಯವರ ಅನುವಾದಿತ ನೂತನ ಕಥೆಗಳ ಬಗೆಗೆ ಸಾಕುಮಾಡುತ್ತೇನೆ.
ಕೆ.ಶಿವು.ಲಕ್ಕಣ್ಣವರ

ಪುಸ್ತಕ ಪ್ರತಿ ಬೇಕಾದವರಿಗೆ ಒಂದು ಸಲಹೆ–

ಸಂಪರ್ಕಿಸಬೇಕಾದ ಮೊಬೈಲ್ ನಂಬರ್ ಕೆಳಗಿನಂತೆ ಇದೆ.–
‘ಕಣ್ವ ಪ್ರಕಾಶನ’ ಬೆಂಗಳೂರು
ಮೊಬೈಲ್ ನಂಬರ್– 9845052481

ಪ್ರಯಾಣಿಕರಿಗೆ ತಟ್ಟಿದ ಮುಷ್ಕರ ಬಿಸಿ; 150 ಖಾಸಗಿ ಬಸ್ ಗಳ ವ್ಯವಸ್ಥೆ

0

ವಿಜಯಸಾಕ್ಷಿ ಸುದ್ದಿ,ಗದಗ

ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ
ಗದಗ ಜಿಲ್ಲಾಕೇಂದ್ರದಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಪ್ರಯಾಣಿಕರು ತೆರಳಲು ಮಿನಿ ಬಸ್’ಗಳ ವ್ಯವಸ್ಥೆ‌ ಕಲ್ಪಿಸಲು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮುಂದಾಗಿದ್ದಾರೆ.

ಸರ್ಕಾರಿ ಬಸ್ ದರದಲ್ಲೇ ಖಾಸಗಿ ಬಸ್’ಗಳ ಸೇವೆ ಒದಗಿಸಲು ಸಂಸ್ಥೆ ‌ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ಬಾಲಚಂದ್ರ ತೊದಲಬಾಗಿ ಅವರು ಮಿನಿ ಬಸ್’ಗಳ ಪರಿಶೀಲನೆ ನಡೆಸಿದರು. ಅಲ್ಲದೇ, ಈಗಾಗಲೇ ಜಿಲ್ಲೆಯಾದ್ಯಂತ ಖಾಸಗಿ ಬಸ್’ಗಳು ಸಂಚಾರ ಆರಂಭಿಸಿವೆ.

ಬಸ್’ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಆರ್ ಟಿಒ ಅಧಿಕಾರಿಗಳ ನೇತೃತ್ವದಲ್ಲಿ ಖಾಸಗಿ ಶಾಲೆ ಬಸ್ ಸೇರಿದಂತೆ ಒಟ್ಟು 150 ಖಾಸಗಿ ಬಸ್’ಗಳ ಓಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರ; ಬಸ್ ಗಳಿಲ್ಲದೇ ಪರದಾಡಿದ ಗರ್ಭಿಣಿ ಮಹಿಳೆ!

0

ವಿಜಯಸಾಕ್ಷಿ ಸುದ್ದಿ, ಗದಗ

ಆರನೇ ವೇತನ ಜಾರಿ ಅಥವಾ ಸಮನಾಂತರ ವೇತನ ನೀಡುವಂತೆ ಆಗ್ರಹಿಸಿ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್’ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಬೆಳಿಗ್ಗೆಯಿಂದಲೇ ಗದಗ ಕೇಂದ್ರೀಯ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ಬಸ್’ಗಳು, ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ. ಇನ್ನು ಬಸ್ ಇಲ್ಲದ್ದಕ್ಕೆ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ.

ಬೆಂಗಳೂರಿನಿಂದ ಗದಗ ನಗರಕ್ಕೆ ಬಂದಿದ್ದ ಗರ್ಭಿಣಿ ಮಹಿಳೆ, ಚಿಕ್ಕಮಗು ಹಾಗೂ ಓರ್ವ ಯುವತಿ ಅಣ್ಣಿಗೇರಿಗೆ ಹೋಗಲು ಬಸ್ ಸಂಚಾರವಿಲ್ಲದೇ ಪರದಾಡಿದರು.
ಬಳಿಕ ಬಸ್ ಇಲ್ಲದ್ದಕ್ಕೆ ಮತ್ತು ಖಾಸಗಿ ವಾಹನಗಳಿಗೆ ದುಪ್ಪಟ್ಟು ಹಣ ಕೊಡಲಾಗದೇ ಒಂದೇ ಬೈಕ್’ನಲ್ಲಿ ಮಗು ಸಹಿತ ನಾಲ್ಕು ಜನ ಪ್ರಯಾಣಿಸಿದ ಪ್ರಸಂಗ ನಡೆಯಿತು.

ಬಸ್ ಬಂದಿದ್ದರೂ ಕಾಲೇಜುಗಳು ಪ್ರಾರಂಭ ಇವೆ. ಹೀಗಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲಾಗದೇ ಗೋಳಾಡಿದರು.
ಜಿಮ್ಸ್ ನರ್ಸಿಂಗ್ ಕಾಲೇಜ್ ಗೆ ಹೋಗಲು ಬಸ್ ಇಲ್ಲದೇ ವಿದ್ಯಾರ್ಥಿಗಳು ಪರದಾಟ ನಡೆಸಿದರು. ವಿದ್ಯಾರ್ಥಿಗಳಿಗಾದರೂ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದ ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದರು. ಕೆಲ ಆಟೋ ಚಾಲಕರು ಹೆಚ್ಚಿನ ಹಣ ವಸೂಲಿ ಕಾರಣ‌ದಿಂದಾಗಿ ಕಾಲೇಜ್’ಗೆ ಹೋಗಲಾಗದೇ ವಾಪಸ್ ಹಾಸ್ಟೆಲ್’ಗೆ ತೆರಳಿದರು.

ನಿನ್ನೆ ರಾತ್ರಿ ತಮ್ಮೂರಿಗೆ ಹೋಗಲು ವಸತಿ ಬಸ್ ಬರದಿದ್ದಕ್ಕೆ ಕೆಲವು ಪ್ರಯಾಣಿಕರು ನಿಲ್ದಾಣದಲ್ಲೇ ಮಲಗಿಕೊಂಡು ದಿನ ಕಳೆದು ಬೆಳಿಗ್ಗೆ ಖಾಸಗಿ ವಾಹನ ಹಿಡಿದು ತಮ್ಮೂರಿಗೆ ತೆರಳುತ್ತಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಅಧಿಕಾರಿಗಳ ಎಡವಟ್ಟು!

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಸಾರಿಗೆ ನೌಕರರ ಮುಷ್ಕರ ವಿಫಲಗೊಳಿಸುವ ಆತುರದಲ್ಲಿ ಅಧಿಕಾರಿಗಳು ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ!

ಸಾರಿಗೆ ನೌಕರರು ಗೈರಾಗಿದ್ದರಿಂದ ಲಭ್ಯ ಇರುವ ಬಸ್‌ಗಳ ಜೊತೆಗೆ ಖಾಸಗಿ ವಾಹನಗಳನ್ನು ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಲ್ಲಿಸಲು ಪರವಾನಗಿ ನೀಡಿದ್ದರು.

ಪರವಾನಗಿ ನೀಡುವ ಭರದಲ್ಲಿ ಯಲ್ಲೋ ಬೋರ್ಡ್ ವಾಹನಗಳ ಜೊತೆಗೆ ವೈಟ್ ಬೋರ್ಡ್ ವಾಹನಗಳನ್ನು ಅಧಿಕಾರಿಗಳ ಮುಂದೆಯೇ ನಿಲ್ಲಿಸಲಾಯಿತು.

ಅಧಿಕಾರಿಗಳು ಸಹ ಮುಷ್ಕರ ಹತ್ತಿಕ್ಕುವ ಭರದಲ್ಲಿ ವೈಟ್ ಬೋರ್ಡ್ ವಾಹನಗಳಿಗೆ ಹಸಿರು ನಿಶಾನೆ ತೋರಿದರು.

error: Content is protected !!