ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಲಾಂಗ್, ಕಬ್ಬಿಣ ಸಲಾಕೆ, ಬಡಿಗೆಯಿಂದ ಹೊಡೆದಾಡಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ.
ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕುಮಾರ ಬಾರ್ನಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ನಡುವೆ ಮಾರಾಮಾರಿಯಾಗಿದೆ.
ಮದ್ಯವ್ಯಸನಿ ಗ್ರಾಹಕರು, ಪಾನಮತ್ತಿನಲ್ಲಿ ಟೇಬಲ್ ಬಡೆದಿದ್ದಾರೆ. ಆದರೆ, ಸಪ್ಲಾಯರ್ಗಳು ಬೇಗನೆ ಬಾರದಕ್ಕೆ ಪುನಃ ಜೋರಾಗಿ ಕೂಗಾಡಿದ್ದಾರೆ. ನಂತರ ಬಂದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಆವೇಶದಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ಕಬ್ಬಿಣ ರಾಡ್, ಕಟ್ಟಿಗೆ ಹಾಗೂ ಲಾಂಗ್ನಿಂದ ಹೊಡೆದಾಡಲು ಆರಂಭಿಸಿದ್ದಾರೆ. ಈ ವೇಳೆ ಎರಡು ಗುಂಪಿನವರಿಗೂ ಗಾಯಗಳಾಗಿವೆ.
ವಿಷಯ ತಿಳಿದ ರೋಣ ಪೊಲೀಸರು ಎರಡೂ ಗುಂಪಿನವರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಯಾವುದೇ ಕಾರಣಕ್ಕೂ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ. ಕಳೆದ ವರ್ಷಕ್ಕೂ ಈ ವರ್ಷಕ್ಕೂ ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕೆಂದರು.
ಕೋರ್ಟ್ ಗೆ ಹೋಗೋದು ನನ್ನ ಹಕ್ಕಾಗಿದ್ದು, ಅದನ್ನು ಪ್ರಶ್ನಿಸಲು ಕಾಂಗ್ರೆಸ್ ನವರಿಗೆ ಯಾವುದೇ ಹಕ್ಕಿಲ್ಲ. ಕಾಂಗ್ರೆಸ್ ನಾಯಕರು ನೀತಿ ಸಿದ್ದಾಂತದ ಮೇಲೆ ಹೊರಾಟ ಮಾಡಬೇಕು. ಅವರಿಗೆ ಹೋರಾಟ ಮಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಮೈತ್ರಿ ಸರ್ಕಾರ ಪತನಗೊಂಡ ಕಾರಣಕ್ಕೆ ನಮ್ಮ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆಂದು ಬಿ.ಸಿ.ಪಾಟೀಲ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳಾದ್ದರಿಂದ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೇಂದ್ರದ ನಡೆಯನ್ನು ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡರು.
ಭಾರತೀಯ ಜನತಾ ಪಕ್ಷ ಅಂದರೆ ಅದು ಮುಸ್ಲಿಂ ವಿರೋಧಿ ಪಕ್ಷ ಎಂಬ ಮಾತಿದೆ. ಇದರ ಮಧ್ಯೆ ಬಿಜೆಪಿ ಸಚಿವರೊಬ್ಬರು ಮಸೀದಿಯಿಂದ ಹೊರಬಂದ ಅಜಾನಗೆ ಗೌರವ ಸಲ್ಲಿಸಿದ ಪ್ರಸಂಗ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಕಳೆದ ಶಿವರಾತ್ರಿ ಅಮವಾಸ್ಯೆ ದಿನದಂದು ಮನೆ ಮನೆಗೆ ನಳ ಸಂಪರ್ಕದ ಮೂಲಕ ನೀರು ತಲುಪಿಸುವ ಜಲ ಜೀವನ್ ಮಿಷನ್(ಜೆಜೆಎಂ) ಸೇರಿ ಒಟ್ಟು 1.86 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ ಕಾಮಗಾರಿಗೆ ಚಾಲನೆ ನೀಡಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಯೋಜನೆಯ ಉದ್ದೇಶ, ಕಾಮಗಾರಿಗೆ ಡೆಡ್ ಲೈನ್ ಕುರಿತಂತೆ ಮಾತನಾಡುತ್ತಿದ್ದಾಗ, ಪಕ್ಕದ ಮಸೀದೆಯಿಂದ ಅಜಾನ್ ಕೇಳಿದೆ. ತಕ್ಷಣವೇ ಭಾಷಣ ನಿಲ್ಲಿಸಿ ಗೌರವ ಸಲ್ಲಿಸಿದ್ದಾರೆ. ಸುಮಾರು ಒಂದೂವರೆ ನಿಮಷಗಳ ಕಾಲ್ ನಡೆದ ಅಜಾನ್ ಗೆ ತಮ್ಮ ಭಾಷಣ ಬ್ರೇಕ್ ಹಾಕಿ ಅಜಾನ್ ಮುಗಿಯುತ್ತಿದ್ದಂತೆ ಭಾಷಣ ಆರಂಭಿಸಿದ್ದಾರೆ. ಸಚಿವರ ಈ ನಡೆಗೆ ಗ್ರಾಮಸ್ಥರಾದ ರಾಜು ಪೆಂಡಾರ, ಗಿರೀಶ್ ಮುಕ್ಕಣ್ಣವರ, ಗಣೇಶ ಜಡಿ, ಸಣ್ಣಹೊನಕೇರಪ್ಪ ಕರಿ, ರಿಯಾಜ್ ಡಂಬಳ, ಕಾಶಿಮ್ ಹು ಹರಿವಾಣ, ಹುಸೇನ್ ಬಾಷಾ ಮುಜಾವರ್, ಸಿದ್ಧೀಕ ಪೆಂಡಾರ, ಅಬ್ದುಲ್ ಹಳ್ಳಿ ಸೇರಿದಂತೆ ಇಡೀ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದು, ಜಿಲ್ಲೆಯಲ್ಲಿ ಚರ್ಚೆಗೆ ನಾಂದಿ ಹಾಡಿದೆ.
ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಪಾರ್ಮ್ರ್ ಸುಟ್ಟು ದಿನಗಳೇ ಉರುಳಿದರೂ ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ. ಇದರ ಪರಿಣಾಮವಾಗಿ ಜಮೀನನಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳೆಲ್ಲಾ ನೀರಿಲ್ಲದೇ ಒಣಗುತ್ತಿವೆ.
ತಾಲೂಕಿನ ತೆಗ್ಗಿನ ಭಾವನೂರಿನ ರೈತ ವಿಜಯಗೌಡ್ ಅವರ ಜಮೀನಿನಲ್ಲಿ ಇದ್ದ ವಿದ್ಯುತ್ ಟ್ರಾನ್ಸ್ಪಾರ್ಮ್ರ್ ಸುಟ್ಟಿದೆ. ಇದರಿಂದ ಜಮೀನುಗಳಿಗೆ ಸಮಯಕ್ಕೆ ಸರಿಯಾಗಿ ನೀರು ಹಾಯಿಸಿಲಾಗದೇ ಬೆಳೆ ಬಾಡುತ್ತಿರುವುದನ್ನು ಕಂಡ ಗ್ರಾಮದ ರೈತ ವಿಜಯಗೌಡ ಶಿವನಗೌಡ ಪಾಟೀಲ್ ಎಂಬುವವರು ವಿಡಿಯೋ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದು, ಅದೀಗ ವೈರಲ್ ಆಗಿದೆ.
ವಿಜಯಗೌಡ ಅವರು ತಮ್ಮ ಒಟ್ಟು ಆರು ಎಕರೆ ಜಮೀನಿನಲ್ಲಿ ತೋಟಗಾರಿಕೆ ಬೆಳೆ ಹಾಕಿದ್ದಾರೆ. ಅದರಲ್ಲಿ ಮೂರು ಎಕರೆ ಕ್ಯಾಬಿಜ್, ಎರಡು ಎಕರೆ ಈರುಳ್ಳಿ ಹಾಗೂ ಒಂದು ಎಕರೆ ಜಮೀನಿನಲ್ಲಿ ಬದನೆಕಾಯಿ ಬೆಳೆ ಬೆಳೆದಿದ್ದಾರೆ. ಈಗಾಗಲೇ ಬೆಳೆ ಫಸಲು ಕೊಡುವ ಹಂತಕ್ಕೆ ಬಂದಿವೆ. ಈ ಹೊತ್ತಲ್ಲೇ ಹೀಗಾದರೆ ಕೈ ಬಂದ ತುತ್ತು ಬಾಯಿಗೆ ಬರದಂತಾಗಿ ಆರ್ಥಿಕವಾಗಿ ತುಂಬಾ ಸಂಕಷ್ಟ ಎದುರಿಸಬೇಕಾಗುತ್ತದೆ.
ಈ ಬಗ್ಗೆ ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ, ಅಧಿಕಾರಿಗಳು ಕಚೇರಿಗೆ ಬರುವಂತೆ ಸೂಚಿಸುತ್ತಿದ್ದಾರೆ. ಕಚೇರಿಗೆ ಬಾ ಎನ್ನುತ್ತಿರುವುದರರ್ಥ ಅಧಿಕಾರಿಗಳಿಗೆ ದುಡ್ಡು ಕೊಡಬೇಕು. ಹಣ ಕೊಟ್ಟರೆ ಒಂದೇ ದಿನದಲ್ಲಿ ವಿದ್ಯುತ್ ಟಿಸಿ ಹಾಕುತ್ತಾರೆ. ಇಲ್ಲದಿದ್ದರೆ ಇತ್ತ ಬೇಗ ಸುಳಿಯುವುದಿಲ್ಲ. ಈ ಹಿಂದೆಯೂ ಸಾಕಷ್ಟು ಬಾರಿ ಹೆಸ್ಕಾಂ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಟಿಸಿ ಹಾಕಿಸಿಕೊಂಡಿದ್ದೇವೆ ಎಂದು ಆರೋಪಿಸಿದರು.
ಸದ್ಯ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದೇವೆ. ಸಾಲ ಮಾಡಿ ಕೊಟ್ಟಾದರೂ ವಿದ್ಯುತ್ ಟ್ರಾನ್ಸ್ಫಾರ್ಮ್ರ್ ಹಾಕಿಸಿಕೊಳ್ಳಬೇಕು ಎಂದರೇ ಮೊದಲೇ ಸಾಕಷ್ಟು ಸಾಲ ಇದೆ. ಇದರಿಂದ ತುಂಬಾ ಸಮಸ್ಯೆಯಾಗುತ್ತಿದೆ. ಒಂದು ವೇಳೆ ಶೀಘ್ರವೇ ವಿದ್ಯುತ್ ಟಿಸಿ ಹಾಕದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಕುಳಿತುಕೊಳ್ಳಲಾಗುವುದು ಎಂದು ವಿಜಯಗೌಡ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೇಂದ್ರ ಮೃಗಾಲಯ ಪ್ರಾಧಿಕಾರವು ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಜೋಡಿ ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಎರಡು ಗಂಡು ಸಿಂಹಗಳು ಗದಗ ತಾಲೂಕಿನ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ಗುರುವಾರ ತಡರಾತ್ರಿ ಆಗಮಿಸಿವೆ.
ಸಿಂಹಗಳಿಗಾಗಿ ಪ್ರಾಣಿ ಸಂಗ್ರಹಾಲಯದಲ್ಲಿ ನೈಸರ್ಗಿಕ ಆವಾಸ ಸ್ಥಾನದ ಮಾದರಿಯಲ್ಲೇ ವಿಶೇಷ ಪಂಜರ ಸಿದ್ದಪಡಿಸಲಾಗಿದೆ. ಸಿಂಹಗಳು ಸ್ವಚ್ಛಂದವಾಗಿ ವಿಹರಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಲಾಗಿದೆ. ಇದಕ್ಕಾಗಿ 1,000 ಚ.ಮೀ. ಸ್ಥಳ ಮೀಸಲಿಡಲಾಗಿದೆ. ಇದರಲ್ಲಿ ಕಲ್ಲಿನ ಬಂಡೆಗಳು, ನೀರಿನ ಹೊಂಡ, ಗಿಡ-ಮರಗಳಿರುವಂತೆ ವಿನ್ಯಾಸಗೊಳಿಸಲಾಗಿದೆ.
ಸಿಂಹಗಳೆರಡು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲೇ ಹುಟ್ಟಿ ಬೆಳೆದಿದ್ದರೂ ಬಯಲು ಸೀಮೆಯ ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಸಿಂಹಗಳನ್ನು ೧೫-೩೦ ದಿನಗಳವರೆಗೆ ನಿಗಾದಲ್ಲಿಟ್ಟು, ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ಬಳಿಕ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು.
ಬಿಂಕದಕಟ್ಟಿ ಸಂಗ್ರಹಾಲಯದಲ್ಲಿ ಕತ್ತೆ ಕಿರುಬ ವೀಕ್ಷಿಸಲು ಗಾಜಿನ ಪರದೆಯ ವ್ಯವಸ್ಥೆ ಮಾಡಿದ್ದು, ಅದರಂತೆ ಸಿಂಹಗಳನ್ನು ವೀಕ್ಷಿಸಲು 39 ಎಂಎಂ ಗಾಜಿನ ಪರದೆ ವ್ಯವಸ್ಥೆ ಮಾಡಲಾಗಿದೆ. ಈ ಗಾಜುಗಳನ್ನು ಚಂಡಿಗಢದಿಂದ ತರಿಸಿಕೊಳ್ಳಲಾಗುತ್ತಿದೆ.
ಉತ್ತರ ಕರ್ನಾಟಕದಲ್ಲೇ ಬಿಂಕದಕಟ್ಟಿ ಮೃಗಾಲಯವು ಎರಡು ವರ್ಷಗಳ ಹಿಂದಷ್ಟೇ ಜೋಡಿ ಹುಲಿಗಳನ್ನು ಹೊಂದಿರುವ ಖ್ಯಾತಿ ಪಡೆದಿತ್ತು. ಇದೀಗ ಜೋಡಿ ಸಿಂಹಗಳು ಆಗಮಿಸುವ ಮೂಲಕ ಮೃಗಾಲಯದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.
ಎರಡು ದಿನಗಳ ಹಿಂದಷ್ಟೇ ಮಹಿಳೆಯ ತಲೆಯ ಮೇಲೆ ಹರಿದಿದ್ದ ಚಿಗರಿ ಬಸ್ ಇಂದು ಮತ್ತೊಂದು ಅಪಘಾತಕ್ಕೆ ಕಾರಣವಾಗಿದೆ. ಇಂದು ಚಿಗರಿ ಬಸ್ಸೊಂದು ಬೈಕ್ ಸವಾರ ನ ಮೇಲೆ ಎರಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸದಾ ಒಂದಿಲ್ಲ ಒಂದು ಅಪಘಾಕ್ಕೆ ಹೆಸರಾಗಿರುವ ಇಲ್ಲಿನ ಬಿ ಆರ್ ಟಿ ಎಸ್ ಚಿಗರಿ ಬಸ್ ಸಂಚಾರದ ನಿರ್ಭಂದಿತ ರಸ್ತೆಯಲ್ಲಿ ಸಂಚರಿಸದಿದ್ದರು ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವ ಮುನ್ನ ನೂರು ಬಾರಿ ಯೋಚಿಸಿ ನಡೆದರೂ ಕೂಡ “ನಜರ್ ಹಟಿ ದುರ್ಘಟನಾ ಘಟಿ” ಎಂಬುವಂತಾಗಿದೆ.
ಬೈಕ್ ಸವಾರ ಹಾಗೂ ಚಿಗರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಅಮರನಗರ ನಿವಾಸಿ ಮಹೇಶ್ ಹೊಸಮನಿ (೩೦) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆದರೆ ಬಿ ಆರ್ ಟಿ ಎಸ್ ಚಿಗರಿ ಬಸ್ ಸಂಚಾರ ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ನಡೆದಿದೆ.
ಬ್ರೇಕ್ ಫೇಲ್ ಆಗಿ ಅಪಘಾತಕ್ಕಿಡಾಗುತ್ತಿದ್ದ ಕೆಎಸ್ ಆರ್ಟಿಸಿ ಬಸ ನ್ನು ಚಾಲಕ ಸಿದ್ದಪ್ಪ ಗುದ್ದಿನ ಅವರು ತಮ್ಮ ಸಮಯ ಪ್ರಜ್ಞೆಯಿಂದ ದಿಬ್ಬಕ್ಕೆ ಹತ್ತಿಸಿ ನಿಲ್ಲಿಸಿದ್ದಾರೆ.
ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿದ್ದನ್ನು ಮನಗಂಡ ಚಾಲಕ ಸಿದ್ದಪ್ಪ ಕ್ಷಣಮಾತ್ರದಲ್ಲಿ ಎಚ್ಚೆತ್ತುಕೊಂಡು ರಸ್ತೆಗೆ ಹೊಂದಿಕೊಂಡ ಗುಡ್ಡಕ್ಕೆ ಬಸ್ ಏರಿಸಿ ಪ್ರಯಾಣಿಕರ ಪ್ರಾಣ ರಕ್ಷಣೆ ಮಾಡಿದ್ದಾರೆ.
ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಬಸ್ ನಿಯಂತ್ರಣ ಮಾಡಿದ ಚಾಲಕ ಸಿದ್ದಪ್ಪ ಅವರ ಧೈರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಷಪೂರಿತ ಆಹಾರ ಸೇವಿಸಿದ್ದ 14 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಮ್ಸ್ ಕಾಲೇಜಿನ ಶಾರದಾ ಕ್ಯಾಂಟೀನ್ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಈಗಾಗಲೇ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ತೀವ್ರವಾಗಿ ಅಸ್ವಸ್ಥಗೊಂಡಿರುವ 11 ಜನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ರಾತ್ರಿ ಕಾಲೇಜಿನಲ್ಲಿರುವ ಶಾರದಾ ಕ್ಯಾಂಟಿನ್ನಲ್ಲಿ ಅನ್ನ ಸಾಂಬಾರ ಸೇವಿಸಿದ್ದು, ಈ ವೇಳೆ ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ, ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ವಾಂತಿ ಬೇದಿಯಂತಹ ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಜಿಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ನಡೆದ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಬೈಲಪತ್ತಾರ್ ಸಮುದಾಯದ ವತಿಯಿಂದ ನಗರಕ್ಕೆ ಭೇಟಿ ನೀಡಿದ್ದ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.
ನಗರದ ಬಂಬೂಬಜಾರ್ ವಿಠ್ಠಲ ಮಂದಿರಲ್ಲಿ ನಡೆದ ಕಾರ್ಯಕ್ರಮದಲ್ಲಿ, ದಾವಣಗೆರೆ ಜಿಲ್ಲಾ ಬೈಲ್ ಪತ್ತಾರ್ ಸಂಘದ ಅಧ್ಯಕ್ಷ ಅಪ್ಪಣ್ಣ ಬೈಲ್ ಪತ್ತಾರ್, ಗೌರವಾಧ್ಯಕ್ಷ ನಿಂಗಪ್ಪ, ಉಪಾಧ್ಯಕ್ಷ ಮಾರುತಿ, ಕಾರ್ಯದರ್ಶಿ ರಾಜು, ಪರಮೇಶ್ ಸೇರಿದಂತೆ ಇತರೆ ಪದಾಧಿಕಾರಿಗಳು, ನಿಗಮಕ್ಕೆ ಶೀಘ್ರವಾಗಿ ಸಮುದಾಯದ ಸದಸ್ಯರನ್ನು ನೇಮಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಿಗಮದ ನಿರ್ದೇಶಕ ಲಕ್ಷ್ಮಣ ಶಿಕಾರಿಪುರ, ಬೈಲಪತ್ತಾರ್ ಸಂಘದ ರಾಜ್ಯಾಧ್ಯಕ್ಷ ಪ್ರಕಾಶ್ ಬೈಲಪತ್ತಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಮಾರ್ಚ್ 11 ರಂದು ಬಹ್ರೇನ್ ನಲ್ಲಿ ನಡೆದ ಎಂಎಂಎ (ಮಿಕ್ಸಡ್ ಮಾರ್ಷಲ್ ಆರ್ಟ್ಸ್) ಫೈಟ್ ನಲ್ಲಿ ಬೆಂಗಳೂರಿನ ಫೈಟರ್ ಮೊಹಮ್ಮದ ಫರಾದ್ ಪಾಕಿಸ್ತಾನಿ ಫೈಟರ್ ಉಲೂಮಿ ಕರೀಮ್ ಅವರನ್ನು ನಾಕ್ಔಟ್ ಮಾಡಿ ಗೆಲವು ಸಾಧಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ದೇಶದ ಪತಾಕೆಯನ್ನು ಹಾರಿಸಿದ ಬೆಂಗಳೂರಿನ ಫೈಟರ್ ಗೆ ಇಂದು ಕರ್ನಾಟಕ ಸ್ಟೇಟ್ ಫುಟ್ಬಾಲ್ ಅಸೋಸಿಯೇಷನ್, ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ಜಂಟಿಯಾಗಿ ಇಂದು ಸನ್ಮಾನಿಸಿದವು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಫೈಟರ್ ಮೊಹಮ್ಮದ ಫರಾದ್*, ಎಂಎಂಎ ಇತ್ತೀಚೆಗೆ ಜಗತ್ತಿನಾದ್ಯಂತ ಬಹಳಷ್ಟು ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದೆ. ಈ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಹಳಷ್ಟು ದೈಹಿಕ ಶ್ರಮ ಹಾಗೂ ಶಕ್ತಿಯ ಅಗತ್ಯವಿದೆ. ನಿಜವಾದ ಫೈಟ್ ನಲ್ಲಿ ಅದರಲ್ಲೂ ನಮ್ಮ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಿ ಫೈಟರನ್ನು ನಾಕ್ಔಟ್ ಮಾಡಿ ಗೆಲವು ಸಾಧಿಸಿದ್ದು ಬಹಳ ಸಂತಸ ತಂದಿದೆ. ನನ್ನ ಗೆಲುವನ್ನು ಗುರುತಿಸಿ ಕರ್ನಾಟಕ ಸ್ಟೇಟ್ ಫುಟ್ಬಾಲ್ ಅಸೋಸಿಯೇಷನ್, ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ನನ್ನ ಊರಿನಲ್ಲಿ ಸನ್ಮಾನಿಸುತ್ತಿರುವುದು ಬಹಳ ಖುಷಿಯ ವಿಷಯವಾಗಿದೆ ಎಂದರು.
ಕರ್ನಾಟಕ ಸ್ಟೇಟ್ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರ ಹಾಗೂ ಶಾಸಕ ಎನ್ ಎ ಹ್ಯಾರಿಸ್ ಮಾತನಾಡಿ, ದೈಹಿಕ ಶಕ್ತಿಯನ್ನು ಬೇಡುವ ಕ್ರೀಡೆ ಮಿಕ್ಸಡ್ ಮಾರ್ಷಲ್ ಆರ್ಟ್ಸ್, ಇಂತಹ ಕ್ರೀಡೆಯಲ್ಲಿ ನಮ್ಮ ನಗರದ ಹುಡುಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಬಹಳ ಹೆಮ್ಮೆಯ ಸಂಗತಿ. ಇಂತಹ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕಾಗಿರುವುದು ನಮ್ಮ ಅದ್ಯ ಕರ್ತವ್ಯ. ಈ ಹಿನ್ನಲೆಯಲ್ಲಿ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಸನ್ಮಾನ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಬೇಕಾದ ಪ್ರೋತ್ಸಾಹ ನೀಡುವುದಕ್ಕೂ ಸಿದ್ದರಿದ್ದೇವೆ. ಮೊಹಮ್ಮದ್ ಫರಾದ್ ಸಾಧನೆ ಇನ್ನು ಹಲವರಿಗೆ ಸ್ಪೂರ್ತಿಯಾಗಲಿ ಹಾಗೂ ಹೆಚ್ಚು ಹೆಚ್ಚು ಯುವ ಜನಾಂಗ ಇಂತಹ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.
ನಲಪಾಡ್ ಅಕಾಡೆಮಿಯ ನಿರ್ದೇಶಕ ಓಮರ್ ನಲಪಾಡ್ ಹ್ಯಾರಿಸ್, ಆಲ್ ಇಂಡಿಯಾ ಎಂಎಂಎ ಫೆಡರೇಷನ್ ನ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತಿ ನೀಡಿದ ಅಬ್ದುಲ್ ಮುನೀರ್, ಆಲ್ ಇಂಡಿಯಾ ಎಂಎಂಎ ಫೆಡರೇಷನ್ ನ ಅಧ್ಯಕ್ಷ ಆದಿತ್ಯ, ಬೌರಿಂಗ್ ಇನ್ಸಿಟ್ಯೂಟ್ ನ ಅಧ್ಯಕ್ಷರಾದ ರೂಪ್ ಗೋಲ್ಖಾನಿ ಉಪಸ್ಥಿತರಿದ್ದರು.