Home Blog Page 3063

ಪೈಪ್ ಲೈನ್ ಒಡೆದು ನೀರು ಪೋಲು: ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನದ್ದೇ ಗೋಳು!

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದು ನಿತ್ಯ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಡಿಬಿಒಟಿ ಮೂಲಕ ದಿನದ 24×7 ತುಂಗಭದ್ರಾ ನದಿ ನೀರು ಪೂರೈಸಲಾಗುತ್ತಿದೆ. ಆದರೆ, ಕಳೆದ ಎರಡು ತಿಂಗಳಿಂದ ನಗರದ ಮುಂಡರಗಿ ರಸ್ತೆಯಲ್ಲಿರುವ ಹೊಸ ಎಲ್ಐಸಿ ಕಚೇರಿ ಹತ್ತಿರ ಪೈಪ್ ಲೈನ್ ಒಡೆದು ಕೃತಕ ನದಿ ಹರಿದಂತೆ ಹರಿದು ಚರಂಡಿ ಸೇರುತ್ತಿದೆ‌. ಬೆಳಗ್ಗೆ ಒಂದು ಹನಿ ನೀರು ಆಚೆ ಬರುವುದಿಲ್ಲ. ಆದರೆ, ರಾತ್ರಿ ಹತ್ತು ಗಂಟೆ ಮೇಲಾದರೆ ಸಾಕು ರಭಸದಿಂದ ನೀರು ಹರಿಯುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.

ನಗರದ ಜನರಿಗೆ ತಲುಪಬೇಕಾದ ನೀರು ಮಧ್ಯದಲ್ಲೇ ಹಾಳಾಗುತ್ತಿದೆ. ರಸ್ತೆ ಮೇಲೆಲ್ಲಾ ಹರಿದು ಎಲ್ಐಸಿ ಪಕ್ಕದಲ್ಲಿರುವ ಜಮೀನಿನಲ್ಲಿ ಸಂಗ್ರಹವಾಗುತ್ತಿದೆ. ಇದರಿಂದ ನೀರು ನಿಂತು ಭೂಮಿ ಜವಳುಗಟ್ಟಿದಂತಾಗಿದೆ. ನಿತ್ಯ ನೀರು ಹರಿದು ಪೋಲಾಗುತ್ತಿರುವ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಗೊತ್ತಿದ್ದರೂ ಸುಮ್ಮನೆ ಕುಳಿತುಕೊಂಡಿದ್ದಾರೆ. ಅಲ್ಲದೇ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೇಸಿಗೆ ಆರಂಭಕ್ಕೂ ಮುನ್ನವೇ ಅವಳಿ ನಗರದಲ್ಲಿ 10-15 ದಿನಕೊಮ್ಮೆ ನೀರು ಪೂರೈಸಲಾಗುತ್ತಿದೆ. ನೀರಿಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ ತಲೆಕೆಡಸಿಕೊಳ್ಳುತ್ತಿಲ್ಲ ಎಂದು
ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಕಿಡಿಕಾರಿದರು.

ಮಾರಕಾಸ್ತ್ರಗಳಿಂದ ಇರಿದು ಯುವಕನ ಕೊಲೆ

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ ಮಾಡಿರುವ ಘಟನೆ ತಾಲೂಕಿನ ಸಿಂದಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಯುವಕನನ್ನು 28 ವರ್ಷದ ವೀರೇಶ್ ಬೀಮಳ್ಳಿ ಎಂದು ಗುರುತಿಸಲಾಗಿದೆ.

ವೀರೇಶ್, ಕಲಬುರಗಿ ನಗರದ ದುಬೈ ಕಾಲೋನಿ ನಿವಾಸಿಯಾಗಿದ್ದು, ನಗರದ ಸೂಪರ್ ಮಾರ್ಕೆಟ್ ನಲ್ಲಿನ ಬಾಂಡೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ‌. ಬುಧವಾರ ಮುಂಜಾನೆ ಪ್ರತಿದಿನದಂತೆ ವೀರೇಶ್ ತನ್ನ ಕೆಲಸಕ್ಕೆ ಹೋಗಿದ್ದ. ಈ ವೇಳೆ ಆತ ಕೆಲಸ ಮಾಡುವ ಅಂಗಡಿಗೆ ಮೂವರು ಬಂದು ಆತನನ್ನು ಕರೆದುಕೊಂಡು ಹೋಗಿದ್ದರು.

ಮೃತದೇಹ ಪತ್ತೆಯಾಗಿರುವ ಸ್ಥಳ

ಬುಧವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ವೀರೇಶನ ಬಗ್ಗೆ ಚೌಕ್ ಠಾಣೆ ಪೊಲೀಸರಿಗೆ ವೀರೇಶನ ಹೆತ್ತವರು ಮಾಹಿತಿ ನೀಡಿದ್ದರು. ಗುರುವಾರ ಸಂಜೆ ವೀರೇಶ್ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ವೀರಬಲ್ಲಾಳ ವೀರೇಶನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಗುಂಡಿಯಲ್ಲಿ ಶವ ಹಾಕಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸಚಿವ ರಮೇಶ್ ಜಾರಕಿಹೊಳಿಗೆ ಬಿಜೆಪಿ ಮುಖಂಡರಿಂದ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬುಧವಾರ ಬೆಂಗಳೂರಿನಲ್ಲಿ ಗದಗ ಜಿಲ್ಲೆಯ ಬಿಜೆಪಿ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಇದೇ ವೇಳೆ ಬಿಜಾಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈನ್ ಪಾರ್ಕ್‌ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ, ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೋಮು, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಶಾಂತ ನಾಯ್ಕರ್, ಅನಿಲ್ ಅಬ್ಬಿಗೇರಿ, ಭದ್ರೇಶ್ ಕುಸ್ಲಾಪುರ ಉಪಸ್ಥಿತರಿದ್ದರು.

ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ: ತಂಗಡಗಿ

-ಬಿಜೆಪಿಯಲ್ಲಿರೋದು ಕಾಂಗ್ರೆಸ್-ಜೆಡಿಎಸ್‌ನ ಬೀಜಗಳು

ವಿಜಯಸಾಕ್ಷಿ ಸುದ್ದಿ, ಕಾರಟಗಿ: ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ ಅಲ್ಲಿ ಇರೋದೆಲ್ಲಾ ಕಾಂಗ್ರೆಸ್, ಜೆಡಿಎಸ್ ಬೀಜಗಳು. ನಮ್ಮವರನ್ನೇ ಎತ್ತುಕೊಂಡು ಹೋಗಿ ತಮ್ಮ ಪಕ್ಷದವರು ಅನ್ನುತ್ತಾರೆ ಎಂದು
ಡಿಸಿಸಿ ಅದ್ಯಕ್ಷ ಮಾಜಿ ಸಚಿವ ಶಿವರಾಜ್ ತಂಗಡಗಿ ಕಾರಟಗಿಯಲ್ಲಿ ವಿವಾದಾಸ್ಪದ ಹೇಳಿಕೆ ನೀಡಿದರು.

ಟ್ರಾಕ್ಟರ್ ರ‌್ಯಾಲಿಗೆ ಸಂಬಂದಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ತಂಗಡಗಿ, ಕನಕಗಿರಿ ಕ್ಷೇತ್ರಕ್ಕೆ ಶಾಸಕ ಬಸವರಾಜ್ ದಡೆಸುಗೂರು ಕೊಡುಗೆ ಎಂದರೆ ಎಂಎಸ್ ಐಎಲ್ ಲಿಕ್ಕರ್ ಶಾಪ್ ಗಳು, ನಾನು ತಂದ ಯೋಜನೆಗಳನ್ನೇ ತಮ್ಮವು ಎನ್ನುತ್ತಿದ್ದಾರೆ, ನಾನು ಯಾವತ್ತೂ ಸ್ವಜಾತಿಯ ಅಧಿಕಾರಿಗಳನ್ನು ತರಲಿಲ್ಲ ಆದರೆ ಬಸವರಾಜ್ ದಡೆಸೂಗೂರ್ ಆ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಗಳ ಮುಕ್ತಾಯದ ನಂತರ ದೆಹಲಿಯ ಬಾರ್ಡರ್ ಗೆ ಹೋಗುತ್ತೇನೆ ರೈತರ ಹೋರಾಟದ ಜೊತೆ ನಿಲ್ಲುತ್ತೇನೆ.
ಕಾರಟಗಿಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಟ್ರಾಕ್ಟರ್ ರ‌್ಯಾಲಿ ಇಡೀ ರಾಜ್ಯದಲ್ಲಿಯೇ ಮಾದರಿಯಾಗಬೇಕು. ದಿ.೧೫ ರಂದು ಬೃಹತ್ ಟ್ರಾಕ್ಟರ್ ರ‌್ಯಾಲಿಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ರೆಡ್ಡಿ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

ಸೆಂಟ್ರಲ್ ಬ್ಯಾಂಕ್ ನಲ್ಲಿ ಹೊತ್ತಿದ ಬೆಂಕಿ: ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

0

ವಿಜಯಸಾಕ್ಷಿ ಸುದ್ದಿ, ಗದಗ
ನಗರದ ರೋಟರಿ ಸರ್ಕಲ್ ಹತ್ತಿರವಿರುವ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದರ ಪರಿಣಾಮವಾಗಿ ವಿದ್ಯುತ್ ಬೋರ್ಡ್ ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪೀಠೋಪಕರಣಕ್ಕೆ ಹತ್ತಿದ್ದ ಬೆಂಕಿ ನಂದಿಸುವ ಮೂಲಕ ಭಾರಿ
ಅನಾಹುತವೊಂದನ್ನು ತಪ್ಪಿಸಿದ್ದಾರೆ.

ದಕ್ಷಿಣ ಭಾರತದಲ್ಲಿಯೇ ಮೊದಲ ವಿದ್ಯುನ್ಮಾನ ಮತಯಂತ್ರ (ಇವಿಎಂ) ಉಗ್ರಾಣ ಗದಗದಲ್ಲಿ ನಿರ್ಮಾಣ: ಇಂದು ಲೋಕಾರ್ಪಣೆ

ವಿಜಯಸಾಕ್ಷಿ ಸುದ್ದಿ, ಗದಗ

ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಹಾಗೂ ಪ್ರಬಲ ವ್ಯವಸ್ಥೆ ಹೊಂದಿರುವ ರಾಷ್ಟ್ರದಲ್ಲಿ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿ ಪ್ರಜೆಗಳೇ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಸದಾವಕಾಶ ನಮ್ಮ ದೇಶದಲ್ಲಿ ಜಾರಿಯಲ್ಲಿದೆ. ಪ್ರಜೆಗಳ ನಿರ್ಧಾರಗಳನ್ನು ಗೌಪ್ಯತೆಯಿಂದ ಮರಳಿ ಜನತೆಯ ಮುಂದಿಡುವ ಮಹತ್ಕಾರ್ಯ ನಿಭಾಯಿಸುತ್ತಿರುವ ಚುನಾವಣಾ ಆಯೋಗ, ಇದಕ್ಕಾಗಿ ಬಳಕೆ ಮಾಡುವ ವಸ್ತುಗಳ ವಿಶೇಷ ರಕ್ಷಣೆಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ನಿರ್ಮಿಸಿದ ಕೀರ್ತಿ ಗದಗ ಜಿಲ್ಲೆಗೆ ಸಲ್ಲುತ್ತಿದೆ.

ಭಾರತ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಸೇರಿದಂತೆ ಚುನಾವಣಾ ಸಲಕರಣೆಗಳ ರಕ್ಷಣೆ ಮತ್ತು ಸುರಕ್ಷತೆಗಾಗಿ 2.65 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತದ ಹಿಂಭಾಗದಲ್ಲಿ ನಿರ್ಮಿಸಿರುವ ಸುಸಜ್ಜಿತ ಕಟ್ಟಡ ಉದ್ಘಾಟನೆಯನ್ನು ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ ಕುಮಾರ ಅವರು ನೆರವೇರಿಸಲಿದ್ದಾರೆ.

ನೂತನ ಇವಿಎಂ ಹಾಗೂ ವೋಟರ್ ವೆರೀಫಯಬಲ್ ಪೇಪರ್ ಅಡಿಟ್ ಟ್ರಯಲ್ (ವಿವಿಪಿಎಟಿ) ಉಗ್ರಾಣದಲ್ಲಿ ಚುನಾವಣಾ ಆಯೋಗದ ನಿಯಮ ಹಾಗೂ ಮಾರ್ಗಸೂಚಿಗಳನ್ವಯ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗಾಗಿ 4 ಪ್ರತ್ಯೇಕ ಬೃಹತ್ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಇವುಗಳಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ ಗಳನ್ನು ಆಯಾ ವಿಧಾನಸಭಾ ವ್ಯಾಪ್ತಿ ಅನುಸಾರ ಸಂಗ್ರಹಿಸಿಡಲು ಅತ್ಯಾಧುನಿಕ ಮತ್ತು ಮತಗಟ್ಟೆಗಳ ಆಧಾರದಲ್ಲಿ ಸಂಗ್ರಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

ನೂತನವಾಗಿ ನಿರ್ಮಾಣವಾಗಿರುವ ಕಟ್ಟಡದಲ್ಲಿ ನಾಲ್ಕು ವಿಧಾನಸಭಾ ಕೋಣೆಗಳಿಗೆ ಸಂಪರ್ಕ ಕಲ್ಪಿಸುವ ರೀತಿಯಲ್ಲಿ ಪಡಸಾಲೆಯ(ಹಾಲ್) ವಿನ್ಯಾಸ ಮಾಡಿದೆ. ಇದರಲ್ಲಿ ಮೊದಲ ಹಂತದ ತಪಾಸಣೆ ಪ್ರತಿ ಚುನಾವಣೆಯ ಪೂರ್ವದಲ್ಲಿ ಇವಿಎಂ ಮಶೀನ್ ನಿರ್ವಹಣೆ ಹೊತ್ತಿರುವ ಸಂಸ್ಥೆಯಿಂದ ಫಸ್ಟ್‌ ಲೆವೆಲ್ ಚೆಕ್ ನಡೆಸಲು ಸ್ಥಳ ನಿಗದಿ ಮಾಡಲಾಗಿದ್ದು, ಬಳಿಕ ಆಯಾ ವಿಧಾನಸಭಾ ಕ್ಷೇತ್ರದ ಕೋಣೆಗಳಲ್ಲಿ ಸಂಗ್ರಹಿಸುವ ಮತ್ತು ಹೊರಗಡೆ ತೆಗೆಯುವ ವ್ಯವಸ್ಥೆ ಅಳವಡಿಸಲಾಗಿದೆ.

ಕಟ್ಟಡದ ವಿಶೇಷತೆ

ಕಟ್ಟಡವು ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದ್ದು, 24*7 ಪೊಲೀಸ್ ಚೌಕಿ, ಕಟ್ಟಡದ ಸುತ್ತಲೂ ಸಿಸಿ ಟಿವಿ ಅಳವಡಿಕೆ, ವೀಕ್ಷಣೆ, ಅಗ್ನಿ, ಹೊಗೆ ಪತ್ತೆ ಯಂತ್ರ, ಹೊಗೆ ಕಾಣಿಸಿಕೊಂಡ ತಕ್ಷಣವೇ ಸೈರನ್, ವಿದ್ಯುತ್ ಶಾರ್ಟ್, ಸರ್ಕ್ಯೂಟ್ ಹಾಗೂ ಬೆಂಕಿಯಿಂದ ಆಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಲಾಗಿದೆ. ಇಲ್ಲಿ ಸಂಗ್ರಹಿಸುವ ಚುನಾವಣಾ ಸಂಬಂಧಿ ಸಾಮಾಗ್ರಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭದ್ರವಾಗಲಿವೆ.

ಚುನಾವಣಾ ಆಯೋಗ ವಿದ್ಯುನ್ಮಾನ ಮತ ಯಂತ್ರಗಳು ಸೇರಿದಂತೆ ಚುನಾವಣೆಗೆ ಬೇಕಾಗುವ ವಸ್ತುಗಳನ್ನು ಜಗತ್ತಿಗೆ ಮಾದರಿಯಾಗುವ ನಿಟ್ಟಿನಲ್ಲಿ ಮಹತ್ತರವಾದ ಹೆಜ್ಜೆ ಇಟ್ಟಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್ ಉಗ್ರಾಣಗಳನ್ನು ನಿರ್ಮಿಸಿ ಚುನಾವಣೆಗಳನ್ನು ಎಷ್ಟು ಪಾರದರ್ಶಕ ಮತ್ತು ಪಾವಿತ್ರ್ಯತೆಯಿಂದ ನಡೆಸಲಾಗುತ್ತದೆ ಅದೇ ಮಾದರಿಯಲ್ಲಿ ಅವುಗಳ ಸಂಗ್ರಹಕ್ಕೂ ಆದ್ಯತೆ ನೀಡಿರುವುದು ಗಮನಾರ್ಹ.

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ: ಕಗ್ಗತ್ತಲಲ್ಲೇ ತಾ.ಪಂ.ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಎಚ್.ಕೆ.ಪಾಟೀಲ್

ವಿಜಯಸಾಕ್ಷಿ ಸುದ್ದಿ, ಗದಗ

ಕಳೆದ ಒಂದು ವಾರದಿಂದ ನಗರಸಭೆ ಕಚೇರಿಯಲ್ಲಿ ವಿದ್ಯುತ್ ಇಲ್ಲವೆಂಬ ಗುಮಾನಿ ಎದ್ದಿತ್ತು. ಅದಕ್ಕೆ ಬುಧವಾರದಂದು (ಫೆ.10) ನಡೆದ ತಾಲೂಕು ಪಂಚಾಯತಿ ಪ್ರಗತಿ ಪರಿಶೀಲನಾ ಸಭೆ ಸಾಕ್ಷಿಯಾಯಿತು.

ಸುಮಾರು ಎರಡು ಮೂರು ಗಂಟೆಗಳ ಕಾಲ ಸ್ವತಃ ಶಾಸಕ ಎಚ್.ಕೆ.ಪಾಟೀಲ್ ಅವರೇ ಕತ್ತಲಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬುಧವಾರ ಗದಗ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆಯು ಗದಗ-ಬೆಟಗೇರಿ ನಗರಸಭೆಯ ಸಭಾಭವನದಲ್ಲಿ ನಡೆಯಿತು.

ಪದೇ ಪದೇ ವಿದ್ಯುತ್ ಕಡಿತದಿಂದಗಾಗಿ ಶಾಸಕ ಎಚ್.ಕೆ.ಪಾಟೀಲ ಅವರು ಸಮಸ್ಯೆ ಎದುರಿಸಿದರು.
ಕತ್ತಲಿಲ್ಲಿಯೇ ಕುಳಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನು, ಅಧಿಕಾರಿಗಳಂತು ಶಾಸಕರಿಗೆ ಕತ್ತಲು ಕೋಣೆಯಲ್ಲಿಯೇ ನಿಂತುಕೊಂಡು ಮಾಹಿತಿ ನೀಡುತ್ತಿದ್ದರು. ಅದರಂತೆ, ತಾಪಂ ಸದಸ್ಯರು ಕಗ್ರಾಸ ಕತ್ತಲಲ್ಲಿ ಕುಳಿತುಕೊಂಡಿದ್ದರು. ನಗರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು.

ಕೊನೆಗೆ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಸಭೆ ಪೂರ್ಣಗೊಳ್ಳುವ ಆಸುಪಾಸಿನಲ್ಲಿ ಸಭಾಭವನದಲ್ಲಿ ವಿದ್ಯುತ್ ದೀಪಗಳನ್ನು ಹಚ್ಚಿದರು.

ಚಿಕ್ಕನರಗುಂದ ಗ್ರಾ.ಪಂ.ನಲ್ಲಿ ಸಾಮಾಜಿಕ ಪರಿಶೋಧನಾ ಸಭೆ

ವಿಜಯಸಾಕ್ಷಿ ಸುದ್ದಿ, ನರಗುಂದ

ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2020-2021ನೇ ಸಾಲಿನ 2ನೇ ಹಂತದ ಮತ್ತು 14ನೇ ಹಣಕಾಸು ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡಲ್ ಅಧಿಕಾರಿ ಸ್ನೇಹಾ ಕೊಪ್ಪದ ಹಾಗೂ ಪಿಡಿಒ ಶೈನಜಾ ಮುಜಾವರ ಕಾರ್ಯಕ್ರಮ ನಡೆಸಿ ಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಬಾಪುಗೌಡ ಹಿರೇಗೌಡ್ರ, ಲಕ್ಷ್ಮಣ ಕಂಬಳಿ, ಶರಣಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರವ್ವ ಮುದಿಗೌಡ್ರ, ಶೋಭಾ ಕೋಣಣ್ಣವರ, ಶ್ರುತಿ ಬ್ಯಾಳಿ, ನಿರ್ಮಲಾ ತಳವಾರ, ಶಂಕ್ರವ್ವ ಚಲವಾದಿ, ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ ತೋರಗಲ್, ಸವಿತಾ ರಾಯರೆಡ್ಡಿ, ಭಾರತಿ ಪಾಟೀಲ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿಯಿಂದ ಆನಂದ ಸಿಂಗ್ ಕೈ ಬಿಡಿ: ಶಾಸಕ ಸೋಮಶೇಖರ ರೆಡ್ಡಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಯಿಂದ ಸಚಿವ ಆನಂದ್ ಸಿಂಗ್ ಅವರನ್ನು ಕೈ ಬಿಡಿ, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವೆ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ವಿಭಜನೆಯಿಂದ ನೋವಾಗಿದೆ. ಸರ್ಕಾರ ಪಕ್ಷ ನಿಷ್ಠೆಯನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕಿದೆ ಎಂದು ದೂರಿದರು.

ಆಂಧ್ರ ಗಡಿಯಿಂದ ಬಳ್ಳಾರಿ ಕೇವಲ 10 ಕಿಲೋಮೀಟರ್ ದೂರದಲ್ಲಿದೆ. ಬೆಳಗಾವಿ ಜಿಲ್ಲೆಯ ರೀತಿಯಲ್ಲಿ ಇನ್ನೊಂದು ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಪ್ರಯತ್ನದ ಭಾಗವಾಗಿ ವಿಭಜನೆ ನಡೆದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಚಿವ ಆನಂದ ಸಿಂಗ್ ಕೇಳಿದ್ದನ್ನೆಲ್ಲ ಮುಖ್ಯಮಂತ್ರಿ ಕೊಡುತ್ತಿದ್ದಾರೆ. ಜಿಲ್ಲೆಯನ್ನು ಹೋಳು ಮಾಡಿದ ಉಸ್ತುವಾರಿ ಸಚಿವ ನಮಗೆ ಬೇಡವೇ ಬೇಡ ಎಂದು ಪ್ರತಿಪಾದಿಸಿದರು.

ವರದಿ.ಡಾ.ಅಬ್ದುಲ್ ರಜಾಕ್

ನೂತನ ಸಭಾಪತಿ ಹೊರಟ್ಟಿಗೆ ನದಾಫ್ ಮಹಾಮಂಡಳ ಅಭಿನಂದನೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳು ನೂತನವಾಗಿ ವಿಧಾನ ಪರಿಷತ್ತಿನ ಸಭಾಪತಿಯಾಗಿ ಆಯ್ಕೆಯಾಗಿರುವ ಶ್ರೀ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

ಇದೆ ವೇಳೆ ಪಿಂಜಾರ ನದಾಫ ಸಮುದಾಯದ ಎಲ್ಲ ಯುವಕರು ಸೇರಿ ಸಮುದಾಯದಕ್ಕೆ ಒಂದು ಒಳ್ಳೆಯ ಕೊಡುಗೆ ನೀಡಿ ಎಂದು ನೂತನ ಸಭಾಪತಿ ಸಲಹೆ ನೀಡಿದರು.

ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ, ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್, G.N.ತೋಟದ, ಜಿಲ್ಲಾ ಅಧ್ಯಕ್ಷ ಬಾಬಾ ಕಲ್ಮಲಾ, ಮಹಮ್ಮದ್ ಅಲಿ ಸೇರಿದಂತೆ ಇತರರು ಇದ್ದರು

error: Content is protected !!