Home Blog Page 3065

ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್; ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿದೆ.

ಇದೇ ತಿಂಗಳ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ, ಕೊರೊನಾ ಹಾವಳಿಯಿಂದ ಮುಂದೂಡಲಾಗಿದೆ. ಈ ಕುರಿತು ಅಧಕೃತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ಕೂಡ ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ಪ್ರಾರಂಭಿಸುವ 20 ದಿನಗಳೊಳಗಿ ದಿನಾಂಕ ಪ್ರಕಟಿಸುತ್ತೇವೆ. ವಿದ್ಯಾರ್ಥಿಗಳು ಯಾವ ಕಾರಣಕ್ಕೂ ವಿಚಲಿತರಾಗದೆ ಅಭ್ಯಾಸ ಮುಂದುವರಿಸಬೇಕು ಎಂದು ಹೇಳಿದ್ದಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೆ ಮುನ್ನ ಬ್ರಿಡ್ಜ್ ಕೋರ್ಸ್ ನಡೆಸಲಾಗುತ್ತದೆ. ಇದರೊಂದಿಗೆ ಇಲಾಖೆಯ ಯೂಟ್ಯೂಬ್ ಚಾನಲ್ ಮೂಲಕ ಬ್ರಿಡ್ಜ್ ಕೋರ್ಸ್ ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪರೀಕ್ಷೆ ಮುಂದೂಡಿದ ಕಾರಣದಿಂದ ವಿದ್ಯಾರ್ಥಿಗಳೊಡನೆ ಸತತ ಸಂಪರ್ಕದಲ್ಲಿದ್ದು, ಉಪನ್ಯಾಸಕರು ವರ್ಕ್ ಫ್ರಮ್ ಹೋಮ್ ಮಾಡಬೇಕೆಂದು ಸಚಿವರು ಸೂಚಿಸಿದ್ದಾರೆ.

ಲಾಕ್ ಡೌನ್ ಮಾಡುವುದೊಂದೆ ಪರಿಹಾರ ಎಂದ ರಾಹುಲ್ ಗಾಂಧಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊರೊನಾ ತಡೆಗಟ್ಟಲು ಲಾಕ್ ಡೌನ್ ಒಂದೇ ಪರಿಹಾರ ಎಂದು ಹೇಳಿದ್ದಾರೆ.

ಈ ಹಿಂದೆ ಲಾಕ್ ಡೌನ್ ನಿಂದ ದೇಶದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಆದರೆ, ಸದ್ಯ ಕೊರೊನಾ ವಿರುದ್ಧ ಹೋರಾಡಲು ಲಾಕ್‍ ಡೌನ್ ಮಾಡುವುದೇ ಸೂಕ್ತ ಎಂದು ಹೇಳಿಕೆ ನೀಡಿದ್ದಾರೆ.

ಸದ್ಯ ದೇಶದಲ್ಲಿನ ಕೊರೊನಾ ಹಾವಳಿ ಗಮನಿಸಿದರೆ ಲಾಕ್ ಡೌನ್ ಒಂದೇ ಅಸ್ತ್ರವಾಗಿ ಕಾಣುತ್ತಿದೆ. ನ್ಯಾಯ ಯೋಜನೆಗಳ ಜೊತೆಗೆ ಲಾಕ್ ಡೌನ್ ಜಾರಿ ಮಾಡಬೇಕಿದೆ. ಸರ್ಕಾರದ ನಿಷ್ಕ್ರೀಯತೆಯಿಂದ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ದೆಶದಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗಿದ್ದರಿಂದಾಗಿ ಕೇಂದ್ರ ಸರ್ಕಾರ ಈ ಹಿಂದೆ ಲಾಕ್ ಡೌನ್ ಜಾರಿಗೊಳಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್, ಯೋಜಿತವಲ್ಲದ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ವಲಸಿಗರು ಸಂಕಷ್ಟ ಅನುಭವಿಸಿದ್ದಾರೆ ಎಂದು ವಾಗ್ದಾಳಿ ನಡೆಸಿತ್ತು. ಸದ್ಯ ದೇಶದಲ್ಲಿ ಪ್ರತಿ ದಿನ ಮೂರರಿಂದ ನಾಲ್ಕು ಲಕ್ಷದ ಆಸುಪಾಸಿನಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಲಾಕ್ ಡೌನ್ ಒಂದೇ ಸದ್ಯದ ಅಸ್ತ್ರ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಎರಡು ತಿಂಗಳು ಉಚಿತ ಪಡಿತರ, ಆಟೋ – ಟ್ಯಾಕ್ಸಿ ಚಾಲಕರಿಗೆ ಸಹಾಯ ಧನ ಘೋಷಣೆ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ದೆಹಲಿಯಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ಉಚಿತ ಪಡಿತರ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ, ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. 5 ಸಾವಿರ ನಗದು ಸಹಾಯ ಧನ ನೀಡಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಸದ್ಯ ದೆಹಲಿಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೆ ತರಲಾಗಿದೆ. ಅಲ್ಲದೇ, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೂ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಜನರ ನೆರವಿಗೆ ಧಾವಿಸಿದೆ. ದೆಹಲಿಯಲ್ಲಿ 72 ಲಕ್ಷ ಪಡಿತರ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತವಾಗಿ ರೇಷನ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಅಲ್ಲದೇ, ಎಲ್ಲ ಆಟೋ, ಟ್ಯಾಕ್ಸಿ ಚಾಲಕರಿಗೆ ರೂ. 5 ಸಾವಿರ ಆರ್ಥಿಕ ಸಹಾಯ ದೊರೆಯುತ್ತಿದೆ. ಈ ಸಹಾಯ ಸುಮಾರು 1.5 ಲಕ್ಷ ಜನರಿಗೆ ಸಿಗಲಿದೆ. ಹಿಂದಿನ ವಾರವೂ ದೆಹಲಿ ಸರ್ಕಾರ ಕಾರ್ಮಿಕ ವರ್ಗಕ್ಕೆ ನೆರವು ನೀಡಿದ್ದರು.

ಈ ವಿಷಯವಾಗಿ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ಬಡವರಿಗೆ ಎರಡು ತಿಂಗಳ ಪಡಿತರ ನೀಡುತ್ತಿರುವುದರಿಂದ ಅಷ್ಟು ದಿನ ಲಾಕ್ ಡೌನ್ ಮಾಡುತ್ತೇವೆ ಎಂದಲ್ಲ. ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಸಡಿಲಿಕೆ ಮಾಡುತ್ತೇವೆ. ಸದ್ಯದಲ್ಲಿಯೇ ಲಾಕ್ ಡೌನ್ ತೆರವುಗೊಳ್ಳಲಿದೆ. ಕೊರೊನಾ ವಿಷಯದಲ್ಲಿ ದೆಹಲಿ ಸಂಕಷ್ಟದಲ್ಲಿದೆ. ಆರ್ಥಿಕವಾಗಿ ಸದೃಢರಾಗಿರುವ ಸಶಕ್ತರು ಸಹಾಯಕ್ಕೆ ಮುಂದಾಗಬೇಕು ಎಂದು ಹೇಳಿದ್ದಾರೆ.

ಕೊರೊನಾ ಹಾವಳಿ; ಐಪಿಎಲ್ ಪಂದ್ಯಾವಳಿಗೆ ಬ್ರೇಕ್

ವಿಜಯಸಾಕ್ಷಿ ಸುದ್ದಿ, ಮುಂಬಯಿ

ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿಯನ್ನು ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸದ್ಯ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಅಲ್ಲದೇ, ದಿನದಿಂದ ದಿನಕ್ಕೆ ಆಟಗಾರರಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿದೆ. ವಿವಿಧ ತಂಡಗಳ ಆಟಗಾರರು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ನಿನ್ನೆ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಬೆಂಗಳೂರು ತಂಡದ ಪಂದ್ಯವನ್ನು ಕೂಡ ಕೊರೊನಾ ಆಹುತಿ ಮಾಡಿಕೊಂಡಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರು ತಂಡದ ನಡುವೆ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಇಂದು ಹೈದ್ರಾಬಾದ್ ತಂಡ ಹಾಗೂ ಮುಂಬಯಿ ತಂಡದ ನಡುವೆ ಪಂದ್ಯಗಳು ನಡೆಯಬೇಕಿತ್ತು. ಆದರೆ, ಬಿಸಿಸಿಐ ಪಂದ್ಯವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದೆ.

ಐಪಿಎಲ್ ಬೆಟ್ಟಿಂಗ್; ಪಟ್ಟಣ ಪಂಚಾಯತಿ ಸದಸ್ಯ ಪರಾರಿ, ಮೂವರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಬೆಟ್ಟಿಂಗ್ ಭೂತ ಯಾರನ್ನು ಬಿಟ್ಟಿಲ್ಲ. ಬೆಟ್ಟಿಂಗ್ ಅನ್ನೋ ಮಾಫಿಯಾ ಎಲ್ಲರನ್ನು ತನ್ನ ಕಬಂಧಬಾಹುದಲ್ಲಿ ಇಟ್ಟುಕೊಂಡಿದೆ.

ಅದರಲ್ಲೂ ಈ ಐಪಿಎಲ್ 20-20 ಮ್ಯಾಚ್ ಎಲ್ಲರನ್ನೂ ಅಪೋಶನ್ ತಗೊಂಡಿದೆ.

ಧಿಡರನೇ ಶ್ರೀಮಂತ ರಾಗಬೇಕು ಅನ್ನೋ ಹುಚ್ಚೋ ಅಥವಾ ಅದೊಂದು ಫ್ಯಾಷನ್ ಆಗಿದೆಯೋ ಗೊತ್ತಿಲ್ಲ.

ಇಂತಹ ಹುಚ್ಚಗೆ ಬಿದ್ದ ಪಟ್ಟಣ ಪಂಚಾಯತಿ ಸದಸ್ಯನೊಬ್ಬ ಬೆಟ್ಟಿಂಗ್ ನಲ್ಲಿ ತೊಡಗಿ ಪೊಲೀಸರ ದಾಳಿಯಿಂದ ಸ್ವಲ್ಪದರಲ್ಲೆಯೇ ಪಾರಾಗಿದ್ದಾನೆ.

ಹೌದು ಭಾನುವಾರ ನಡೆದ ದೆಹಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಒಂದಕ್ಕೆ ಎರಡು ಪಟ್ಟು ನೀಡುವದಾಗಿ ಮುಳಗುಂದ ಪಟ್ಟಣದ ಶ್ರೀ ಬಾಲಲೀಲಾ ಕಲ್ಯಾಣ ಮಂಟಪದ ಮುಂದೆ ನಿಂತು ಪಟ್ಟಣ ಪಂಚಾಯತಿ ಸದಸ್ಯ ಬಸವರಾಜ್ ಶಿವನೆಪ್ಪ ಹಾರೋಗೇರಿ, ಶರಣಪ್ಪ ನೀಲಪ್ಪ ಮಳ್ಳಿ, ಪ್ರದೀಪ್ ಬಸವರಾಜ್ ಭಜಂತ್ರಿ, ನಜೀರ್ ಅಹ್ಮದ್ ಅಬ್ದುಲ್ ಕರೀಮ್ ಸಾಬ್ ಡಾಲಾಯತ್ ಎಂಬುವವರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು.

ಖಚಿತ ಮಾಹಿತಿ ಪಡೆದ ಮುಳಗುಂದ ಠಾಣೆಯ ಪಿಎಸ್ಐ ಸಚಿನ್ ಅಲಮೇಲಕರ್ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದರು. ದಾಳಿ ಕಾಲಕ್ಕೆ ಪಟ್ಟಣ ಪಂಚಾಯತಿ ಸದಸ್ಯ ಬಸವರಾಜ್ ಶಿವನೆಪ್ಪ ಹಾರೋಗೇರಿ ಪರಾರಿಯಾಗಿದ್ದು, ಉಳಿದ ಮೂವರು ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಬಂಧಿತರಿಂದ ಮೂರು ಮೊಬೈಲ್ ಹಾಗೂ 10 ಸಾವಿರಕ್ಕೂ ಹೆಚ್ಚು ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರೋನಾ; ಸೋಮವಾರ 191 ಜನರಿಗೆ ಸೋಂಕು, ಒಬ್ಬರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಮೇ 03 ಸೋಮವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ತನ್ನ ‌ಅಟ್ಟಹಾಸ ಮೆರೆದಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಸಾವಿಗಿಡಾಗಿದ್ದು, ದೃಢಪಟ್ಟಿದೆ.

ಮೃತಪಟ್ಟವರು ಬಳ್ಳಾರಿ ಜಿಲ್ಲೆಯ ಹಂಪಸಾಗರದ 51 ವರ್ಷದ ಪುರುಷ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ನ್ಯುಮೋನಿಯಾ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಏಪ್ರಿಲ್ 30 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯಲ್ಲಿ ಸೋಂಕು ದಿನದಿನಕ್ಕೆ ಹೆಚ್ಚಾಗುತ್ತಿದ್ದು, ಅದರಲ್ಲೂ ಗದಗ‌ ನಗರ ಹಾಗೂ ತಾಲೂಕಿನಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬರುತ್ತಿದ್ದಾರೆ. ಎರಡನೇ ಅಲೆ ಸದ್ದಿಲ್ಲದೇ ಪ್ರಸರಿಸುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಇಂದಿನ 191 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13216 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -145 , ಮುಂಡರಗಿ-12, ನರಗುಂದ-10, ರೋಣ-09, ಶಿರಹಟ್ಟಿ-07 ಹೊರಜಿಲ್ಲೆಯ-08 ಸೇರಿದಂತೆ 191 ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಸಾವಿನ ಒಂದು ಪ್ರಕರಣದಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
142 ಜನರು ಸೋಂಕಿಗೆ ಬಲಿಯಾದಂತಾಗಿದೆ.

ಇಂದು 145 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12238 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 836 ಪ್ರಕರಣಗಳು ಸಕ್ರಿಯವಾಗಿದ್ದು, 540 ಜನರು ಮನೆಯಲ್ಲಿ, 296 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 187 ಜನರ ವರದಿ ಬರಲು ಬಾಕಿ ಇದೆ.

ಪರೀಕ್ಷೆಗಾಗಿ ಸಂಗ್ರಹಿಸಿದ 347478 ಮಾದರಿಗಳಲ್ಲಿ 334076 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೋವಿಡ್ ನಿರ್ವಹಣೆಯಲ್ಲಿ ವಿಶ್ವಕ್ಕೆ ಮಾದರಿಯಾಗಿದ್ದ ಶೈಲಜಾ ಟೀಚರ್ ರಿಂದ ಮತ್ತೊಂದು ದಾಖಲೆ

ವಿಜಯಸಾಕ್ಷಿ ಸುದ್ದಿ, ತಿರುವನಂತಪುರಂ

ಕೋವಿಡ್ ನಿರ್ವಹಣೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕೇರಳ ಸಚಿವೆ ಶೈಲಜಾ ಅವರು ಈಗ ಮತ್ತೊಂದು ದಾಖಲೆ ಬರೆದಿದ್ದಾರೆ.
ಕೇರಳ ರಾಜ್ಯವು ಈ ಹಿಂದೆ ಕೋವಿಡ್ ನಿಯಂತ್ರಣ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಉತ್ತಮವಾಗಿ ನಿರ್ವಹಣೆ ಮಾಡಿ, ಜನರ ಪ್ರಾಣ ಉಳಿಸಿದ್ದ ಅಲ್ಲಿನ ಆರೋಗ್ಯ ಸಚಿವೆ ಕೆ.ಶೈಲಜಾ ಅವರನ್ನು ಸಾಕಷ್ಟು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಕೂಡ ಹುಡುಕಿಕೊಂಡು ಬಂದಿದ್ದವು. ಅಲ್ಲದೇ, ಅವರ ಕಾರ್ಯ ವೈಖರಿ ಎಲ್ಲೆಡೆ ಪ್ರಶಂಸನೀಯವಾಗಿತ್ತು.
ಸದ್ಯ ಈ ವಿಧಾನಸಭಾ ಚುನಾವಣೆಯಲ್ಲಿಯೂ ಅತಿ ಹೆಚ್ಚಿನ ಮತಗಳ ಅಂತರದಿಂದ ಶೈಲಜಾ ಅವರು ಗೆದ್ದು ಬೀಗಿದ್ದಾರೆ.

ಕಣ್ಣೂರು ಜಿಲ್ಲೆಯ ಮಟ್ಟನ್ನೂರು ಕ್ಷೇತ್ರದಲ್ಲಿ ಶೈಲಜಾ ಟೀಚರ್ ಎಂದೇ ಖ್ಯಾತರಾಗಿರುವ ಕೆ. ಕೆ. ಶೈಲಜಾ 60,963 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದಾರೆ.
ಕೇರಳದ 140 ವಿಧಾನಸಭಾ ಕ್ಷೇತ್ರಗಳಲ್ಲಿಯೇ ಇಷ್ಟೊಂದು ಅಂತರದಲ್ಲಿ ಯಾವೊಬ್ಬ ಅಭ್ಯರ್ಥಿಯೂ ಗೆಲುವು ಸಾಧಿಸಿಲ್ಲ. 64 ವರ್ಷದ ಶೈಲಜಾ ಅವರು ಕೇರಳ ವಿಧಾನಸಭೆ ಚುನಾವಣೆಯಲ್ಲಿ ಎಲ್‌ ಡಿಎಫ್‌ ನ ಸ್ಟಾರ್ ಕ್ಯಾಂಪೇನರ್ ಆಗಿದ್ದರು.

23 ವರ್ಷಗಳ ಕಾಲ ಶಾಲಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ ಅವರು, 2004ರಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು.
ಶೈಲಜಾ ಅವರು ಸಿಪಿಐ(ಎಂ)ನ ಯುವ ಘಟಕವಾದ ಡಿವೈಎಫ್‌ ಐನ ನಿವೃತ್ತ ಸದಸ್ಯರಾಗಿದ್ದಾರೆ. 2016ರಲ್ಲಿ ಮೊದಲ ಬಾರಿಗೆ ಚುನಾವಣೆ ಗೆದ್ದ ಅವರು ಸಚಿವರಾಗಿದ್ದರು.

18 ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ!

ವಿಜಯಸಾಕ್ಷಿ ಸುದ್ದಿ, ನವದೆಹಲಿ

2 ರಾಜ್ಯಗಳಲ್ಲಿ ಅಧಿಕಾರ ಉಳಿಸಿಕೊಳ್ಳುವುದರ ಮೂಲಕ ಬಿಜೆಪಿ ತನ್ನ ಆಡಳಿತದಲ್ಲಿರುವ ರಾಜ್ಯಗಳ ಸಂಖ್ಯೆಗಳನ್ನು ಹೆಚ್ಚಿಸಿದೆ. ಈ ಮೂಲಕ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಬಿಜೆಪಿ ಸ್ವಂತ ಬಲ ಮತ್ತು ಮಿತ್ರ ಪಕ್ಷಗಳ ಜೊತೆ ಸೇರಿ ಒಟ್ಟು 17 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಆದರೆ, ಈ ಚುನಾವಣೆಯಲ್ಲಿ ಆಸ್ಸಾಂ ಉಳಿಸಿಕೊಳ್ಳುವುದರೊಂದಿಗೆ ಪುದುಚೇರಿಯನ್ನೂ ಕಮಲ ಪಡೆ ಗೆದ್ದು ಬೀಗಿದೆ. ಆದರೆ, ಪಂಚ ರಾಜ್ಯಗಳ ಪೈಕಿ ಬಿಜೆಪಿಯು ಪಶ್ಚಿಮ ಬಂಗಾಳದ ಮೇಲೆ ಹೆಚ್ಚಿನ ಕಣ್ಣು ನೆಟ್ಟಿತ್ತು. ಆದರೆ, ಮಮತಾ ಬ್ಯಾನರ್ಜಿ ಅವರ ಹೋರಾಟಕ್ಕೆ ಇದಕ್ಕೆ ಆಸ್ಪದ ನೀಡಲಿಲ್ಲ. ಆದರೆ, ಬಿಜೆಪಿ ಅಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ತಮಿಳುನಾಡಿನಲ್ಲಿ ಕೂಡ ಬಿಜೆಪಿಯ ನಿರೀಕ್ಷೆ ಸುಳ್ಳಾಗಿದೆ. ಎಐಎಡಿಎಂಕೆ ಜೊತೆ ಈ ಬಾರಿ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಆದರೆ, ಎಐಎಡಿಎಂಕೆ ಪಕ್ಷವು ಡಿಎಂಕೆ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಒಂದು ಸ್ಥಾನ ಹೆಚ್ಚಿಸಿಕೊಂಡಿರುವ ಬಿಜೆಪಿ 18 ರಾಜ್ಯಗಳಲ್ಲಿ ತನ್ನ ದರ್ಬಾರ್ ನಡೆಸುತ್ತಿದೆ.

ಬಿಜೆಪಿಯು ಸದ್ಯ ಅಸ್ಸಾಂ, ಅರುಣಾಚಲ ಪ್ರದೇಶ, ಬಿಹಾರ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪುದುಚೇರಿ, ಕರ್ನಾಟಕ, ಮಧ್ಯಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ, ಉತ್ತರ ಪ್ರದೇಶ, ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ದರ್ಬಾರ್ ನಡೆಸುತ್ತಿದೆ.

ಅಣ್ಣಮಲೈ, ನಟ ಕಮಲ್ ಹಾಸನ್ ರಾಜಕೀಯ ಜೀವನ ಏನಾಯಿತು?

ವಿಜಯಸಾಕ್ಷಿ ಸುದ್ದಿ, ಚೆನ್ನೈ

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ತಮಿಳುನಾಡು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.
ತಮಿಳುನಾಡಿನ ಅರವಕುರುಚ್ಚಿಯಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ, ಅವರು ನಿರಾಸೆ ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಡಿಎಂಕೆಯ ಎಲಾ ಇಳಂಗೊ ಅವರು ಜಯಗಳಿಸಿದ್ದಾರೆ. ಎಲಾ ಇಳಂಗೊ ಅವರು 34,832 ಮತಗಳನ್ನು ಪಡೆದಿದ್ದರೆ, ಅಣ್ಣಾಮಲೈ 29,596 ಮತ ಗಳಿಸಿ ಸೋಲು ಒಪ್ಪಿಕೊಂಡಿದ್ದಾರೆ.

ಅಲ್ಲದೇ, ತಮಿಳುನಾಡು ರಾಜಕಾರಣದಲ್ಲಿಯೇ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ಅವರು ಕೂಡ ಕೂದಲೆಳೆ ಅಂತರದಲ್ಲಿ ಸೋತು ಸುಣ್ಣವಾಗಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಟ ಕಮಲ್ ಹಾಸನ್ ಸ್ಪರ್ಧಿಸಿದ್ದರು. ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸನ್ ವಿರುದ್ಧ ಕೇವಲ 1,500ಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಆರಂಭದಲ್ಲಿ 2000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದ ಕಮಲ್ ಹಾಸನ್, ಆನಂತರ ಸೋಲು ಕಂಡಿದ್ದಾರೆ.

ಬಿಜೆಪಿಯಲ್ಲಿ ಸಾಬೀತಾಯಿತು ಮತ್ತೊಬ್ಬ ಮಾಸ್ಟರ್ ಮೈಂಡ್ ಸಾಮರ್ಥ್ಯ…..ಬಸವಕಲ್ಯಾಣದ ಗೆಲುವಲ್ಲಿ ಸೋಮಣ್ಣ ಪ್ಲಾನ್ ಸಕ್ಸಸ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ರಾಜ್ಯ ರಾಜಕೀಯದ ಇತಿಹಾಸದಲ್ಲಿ ಈವರೆಗೂ ಸಾಕಷ್ಟು ಚುನಾವಣೆಗಳು – ಉಪ ಚುನಾವಣೆಗಳು ನಡೆದಿವೆ. ಘಟಾನುಘಟಿ ನಾಯಕರು ಈ ಚುನಾವಣೆಗಳ ಜವಾಬ್ದಾರಿಗಳನ್ನು ಹೊತ್ತು ಸೋಲು ಮತ್ತು ಗೆಲುವು ಎರಡನ್ನೂ ಅನುಭವಿಸಿದ್ದಾರೆ. ಆದ್ರೆ ರಾಜ್ಯದ ಆ ಒಬ್ಬ ಜನ ನಾಯಕ ಮಾತ್ರ ಸೋಲಿಗಿಂತಲೂ ಹೆಚ್ಚು ಗೆಲುವುಗಳನ್ನೇ ಕಂಡಿದ್ದಾರೆ. ಆ ನಾಯಕ ಬೇರ್ಯಾರು ಅಲ್ಲ ರಾಜ್ಯದ ವಸತಿ ಸಚಿವ ವಿ.ಸೋಮಣ್ಣ.

ವಿ.ಸೋಮಣ್ಣ ರಾಜ್ಯ ಕಂಡ ಸರಳ ರಾಜಕಾರಣಿಗಳಲ್ಲಿ ಒಬ್ಬರು. ಅನವಶ್ಯಕ ಅಬ್ಬರವಿಲ್ಲದೇ ಕಾಯಕವೇ ಕೈಲಾಸವೆಂಬಂತೆ ತಮಗೆ ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಮುಗಿಸುವ ಜನನಾಯಕರು. ಅದರಲ್ಲೂ ಚುನಾವಣೆ – ಉಪಚುನಾವಣಗಳ ವಿಷಯಕ್ಕೆ ಬಂದರೆ ವಿ.ಸೋಮಣ್ಣ ಅವರ ತಂತ್ರಗಾರಿಕೆಯೇ ಬೇರೆ. ಅವರು ಎಲೆಕ್ಷನ್ ಜವಾಬ್ದಾರಿ ವಹಿಸಿಕೊಂಡರು ಅಂದ್ರೆ ಅಲ್ಲಿ ಪಕ್ಷಕ್ಕೆ ಗೆಲುವು ಕಟ್ಟಿಟ್ಟಬುತ್ತಿ.

ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಚಾಣಕ್ಯನಂತೆ ಎದುರಾಳಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು.

ವಿ ಸೋಮಣ್ಣ ಜವಾಬ್ದಾರಿ ವಹಿಸಿಕೊಂಡಿದ್ದ ಬಸವಕಲ್ಯಾಣದಲ್ಲಿ ಬಿಜೆಪಿ ಜಯ ಸಾಧಿಸಿದೆ. ಇದು ಮಾತ್ರವಲ್ಲದೇ ಸೋಮಣ್ಣ ಹಿಂದೆ ಹಲವು ಚುನಾವಣೆಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಅಲ್ಲೂ ಕೂಡ ಯಶ ಕಂಡಿದ್ದರು. ರಾಜ್ಯ ಬಿಜೆಪಿಯ ಶಿಸ್ತಿನ ಸಿಪಾಯಿ ವಿ.ಸೋಮಣ್ಣ ಈ ರೀತಿ ಚುನಾವಣಾ ಉಸ್ತುವಾರಿ ವಹಿಸಿಕೊಂಡು ಪಕ್ಷಕ್ಕೆ ಗೆಲುವು ತಂದುಕೊಟ್ಟಿರುವುದು ಮೊದಲೇನಲ್ಲ.

ತುಮಕೂರು ಲೋಕಸಭಾ ಎಲೆಕ್ಷನ್ 2019-

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ವಿರುದ್ಧ ಜಿ.ಎಸ್. ಬಸವರಾಜ್ ಗೆಲುವು ಸಾಧಿಸಿದ್ದರು. ಆಗ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣ ಅವರು.

  • ಚಿಂಚೋಳಿ ಬೈ ಎಲೆಕ್ಷನ್ –2019 -ಅವಿನಾಶ್ ಜಾಧವ್ ಗೆದ್ದಾಗಲೂ ಉಸ್ತುವಾರಿ ವಹಿಸಿಕೊಂಡಿದ್ದು ಸಚಿವ ವಿ. ಸೋಮಣ್ಣನವರು.
  • ದೇವದುರ್ಗ ಬೈ ಎಲೆಕ್ಷನ್ – 2016 – ಶಿವನಗೌಡ ನಾಯಕ ಜಯ ಗಳಿಸಿದ್ದರು. ಆಗಲೂ ಉಪ ಚುನಾವಣೆಯ ಜವಾಬ್ದಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣನವರು.
  • ಚನ್ನಪಟ್ಟಣ ಬೈ ಎಲೆಕ್ಷನ್ – 2011- ಸಿ.ಪಿ. ಯೋಗಿಶ್ವರ್ ಗೆಲುವು ಸಾಧಿಸಿದ್ದರು. ಆಗಲೂ ವಿ. ಸೋಮಣ್ಣನವರು ಉಪ ಚುನಾವಣೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.
  • ಕಡೂರು ಬೈ ಎಲೆಕ್ಷನ್ – 2010 – ಡಾ. ವೈ.ಸಿ. ವಿಶ್ವನಾಥ್ ಗೆಲುವು ಸಾಧಿಸಿದ್ದರು. ಉಪ ಚುನಾವಣೆಯ ಪೂರ್ತಿ ಜವಾಬ್ದಾರಿ ವಹಿಸಿಕೊಂಡಿದ್ದು ವಿ. ಸೋಮಣ್ಣನವರು.
  • ಕೊಪ್ಪಳ ಬೈ ಎಲೆಕ್ಷನ್ – 2011 – ಕೆ.ಎಸ್. ಅಮರಪ್ಪ ಅವರಿಗೆ ಜಯ. ಉಸ್ತುವಾರಿ ವಹಿಸಿಕೊಂಡಿದ್ದು ಚಾಣಕ್ಷ ನಾಯಕ ವಿ. ಸೋಮಣ್ಣನವರು.
  • ಬೆಂಗಳೂರು ದಕ್ಷಿಣ ಲೋಕಸಭಾ – 2009, 2014, 2018- 2009, 2014ರಲ್ಲಿ ಅನಂತ್ ಕುಮಾರ್ ಮತ್ತು 2018ರಲ್ಲಿ ತೇಜಸ್ವಿ ಸೂರ್ಯ ಅವರ ಗೆಲುವಿನಲ್ಲೂ ವಿ. ಸೋಮಣ್ಣನವರು ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲಾ ಚುನಾವಣೆಗಳಲ್ಲೂ ವಿ. ಸೋಮಣ್ಣನವರು ಮುಂಚೂಣಿಯಲ್ಲಿದ್ದರು.

-ತುಮಕೂರು ಲೋಕಸಭಾ ಎಲೆಕ್ಷನ್ – 2009ರಲ್ಲೂ ವಿ. ಸೋಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.

  • 2015ರ ಬಿಬಿಎಂಪಿ ಚುನಾವಣೆಯಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದ 11 ಸ್ಥಾನಗಳನ್ನು ಗೆಲ್ಲುವಲ್ಲಿ ವಿ. ಸೋಮಣ್ಣನವರ ಪಾತ್ರ ಮಹತ್ವದ್ದಾಗಿತ್ತು.
    2010 ಬಿಬಿಎಂಪಿ ಚುನಾವಣೆಯಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 16 ಸ್ಥಾನಗಳನ್ನು ಗೆದ್ದಿದ್ದು ಕೂಡ ವಿ. ಸೋಮಣ್ಣನನವರ ವರ್ಚಸ್ಸಿನಿಂದಲೇ.

  • 2019 ಬಿಬಿಎಂಪಿ ಕಾವೇರಿಪುರ ಬೈ ಎಲೆಕ್ಷನ್ ನಲ್ಲಿ ಪಲ್ಲವಿ ಚಿನ್ನಪ್ಪ ಅವರ ಗೆಲುವಿನಲ್ಲೂ ವಿ. ಸೋಮಣ್ಣನವರು ಪ್ರಮುಖ ಪಾತ್ರ ವಹಿಸಿದ್ದರು.
    ಒಟ್ಟಿನಲ್ಲಿ ವಿ. ಸೋಮಣ್ಣನವರು ತಮಗೆ ಸಿಕ್ಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ರಾಜಕೀಯ ನೈಪುಣ್ಯತೆ ಅವರಲ್ಲಿದೆ. ಹೀಗಾಗಿ ಚುನಾವಣಾ ಉಸ್ತುವಾರಿ ಅಖಾಡದಲ್ಲಿ ಸೋಮಣ್ಣನವರು ಸೋಲಿಲ್ಲದ ಸರದಾರನೇ ಸರಿ. ಪಕ್ಷ ತನ್ನ ಮೇಲೆ ವಿಶ್ವಾಸವಿಟ್ಟಾಗ ಅದನ್ನು ಸಮರ್ಪಕವಾಗಿ ನಿಭಾಯಿಸುವ ಚಾಕಚಕ್ಯತೆ ಕೂಡ ಅವರಲ್ಲಿದೆ.
  • ತಳಮಟ್ಟದ ಕಾರ್ಯಕರ್ತರ ಬೆಂಬಲ, ನಂಬಿಕೆ ಮತ್ತು ಸ್ಥಳೀಯ ನಾಯಕರ ವಿಶ್ವಾಸ ಗಳಿಸಿಕೊಂಡು ಹೋಗುವ ಜನ ನಾಯಕ ವಿ. ಸೋಮಣ್ಣ. ಒಟ್ಟಿನಲ್ಲಿ ವಿ. ಸೋಮಣ್ಣನವರು ತಮಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿಯೇ ನಿಭಾಯಿಸಿಕೊಂಡು ಸೈ ಎನಿಸಿಕೊಂಡಿದ್ದಾರೆ.
error: Content is protected !!